Road Accident : ಇನ್ನೋವಾ ಕಾರಿಗೆ ಬಸ್‌ ಡಿಕ್ಕಿ; ಇಬ್ಬರು ಸಾವು, ಐವರು ಗಂಭೀರ - Vistara News

ರಾಯಚೂರು

Road Accident : ಇನ್ನೋವಾ ಕಾರಿಗೆ ಬಸ್‌ ಡಿಕ್ಕಿ; ಇಬ್ಬರು ಸಾವು, ಐವರು ಗಂಭೀರ

Road Accident : ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಂಭೀರಗೊಂಡಿದ್ದಾರೆ.

VISTARANEWS.COM


on

Bus collides with Innova car Two dead five critical
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯಚೂರು: ರಾಯಚೂರಿನ ಕಸಬೆ ಕ್ಯಾಂಪ್ ಬಳಿ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದೆ. ಖಾಸಗಿ ಬಸ್ ಹಾಗೂ ಇನ್ನೋವಾ ಕಾರ್ ನಡುವೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರಿನ ಮುಂಭಾಗದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮಾರಿಯಾ ಗೀತಾ (38) ಹಾಗೂ ಅಮಲ್ ಪಾಲ್ ಮೇರಿ (64) ಮೃತ ದುರ್ದೈವಿ.

ಖಾಸಗಿ ಬಸ್‌ ಹೈದ್ರಾಬಾದ್‌ನಿಂದ ಸಿಂಧನೂರು ಮಾರ್ಗವಾಗಿ ಹೊರಟಿತ್ತು. ಗದಗನಿಂದ ರಾಯಚೂರು ಮಾರ್ಗವಾಗಿ ಇನ್ನೋವಾ ಕಾರಿನಲ್ಲಿ ಏಳು ಮಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ ಎರಡು ವಾಹನಗಳು ವೇಗವಾಗಿ ಇದ್ದ ಕಾರಣ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಉಳಿದ ಐವರು ಗಂಭೀರ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಬಸ್‌ನಲ್ಲಿದ್ದ ಪ್ರಯಾಣಿಕರು ಸಣ್ಣ-ಪುಟ್ಟ ಗಾಯದಿಂದ ಪಾರಾಗಿದ್ದಾರೆ. ರಾಯಚೂರು ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಬಸ್‌ ಹಾಗೂ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: Murder Case : ಕಡೂರು ಕೊಲೆ ಕೇಸ್‌; ಒಂದೇ ತಟ್ಟೆಯಲ್ಲಿ ಅನ್ನ ತಿಂದು ಮುಹೂರ್ತ ಇಟ್ಟ ಸ್ನೇಹಿತರು

ನೀರಿನ ಟ್ಯಾಂಕರ್‌ ಕದ್ದ ಕಳ್ಳರು

ಹುಬ್ಬಳ್ಳಿಯ ಅದರಗುಂಚಿ ಗ್ರಾಮದಲ್ಲಿ ಮನೆಮುಂದೆ ನಿಲ್ಲಿಸಿದ್ದ ನೀರಿನ ಟ್ಯಾಂಕರ್‌ ಅನ್ನೇ ಕಳ್ಳರು ಕದ್ದಿದ್ದಾರೆ. ರೈತ ಶಿವಲಿಂಗಪ್ಪ ರೇವಣಕರ ಎಂಬುವವರಿಗೆ ಸೇರಿದ ವಾಹನ ಇದಾಗಿದೆ. ಕಳ್ಳತನ ಮಾಡಿಕೊಂಡು ಹೋಗುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶಿವಲಿಂಗಪ್ಪ ಜಮೀನಿಗೆ ನೀರು ಹಾಯಿಸಲು‌ ನೀರಿ‌ನ ಟ್ಯಾಂಕರ್ ಮಾಡಿಸಿದ್ದರು. ರಾತ್ರಿ ಟ್ರ್ಯಾಕ್ಟರ್‌ನಿಂದ ಟ್ಯಾಂಕರ್ ಬೇರ್ಪಡಿಸಿ ಕಳ್ಳತನ ಮಾಡಿದ್ದಾರೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕೋಲಾರದಲ್ಲಿ ಅಬ್ಬರಿಸಿದ ವರುಣ; ಒಳನಾಡಿನಲ್ಲಿ ತಾಪಮಾನ ಇಳಿಕೆ

Karnataka Weather Forecast : ರಾಜ್ಯದ ಹಲವೆಡೆ ಮಳೆಯು (Rain News) ಅಬ್ಬರಿಸುತ್ತಿದೆ. ಕೋಲಾರದಲ್ಲಿ ಮಳೆಗೆ ಬೆಳೆ ಹಾನಿಯಾದರೆ, ಬೆಂಗಳೂರಲ್ಲಿ ದಿಢೀರ್‌ ವರ್ಷಾಧಾರೆಗೆ ವಾಹನ ಸವಾರರು ಪರದಾಡಬೇಕಾಯಿತು. ಮುಂದಿನ 48 ಗಂಟೆಯಲ್ಲಿ ಮಳೆಯು ಅಬ್ಬರಿಸಿದರೆ, ತಾಪಮಾನ ಇಳಿಕೆಯಾಗಲಿದೆ.

VISTARANEWS.COM


on

By

Karnataka Weather Forecast
Koo

ಕೋಲಾರ/ಬೆಂಗಳೂರು: ಭಾನುವಾರ ಕೋಲಾರ ಜಿಲ್ಲೆಯ ಹಲವು ಕಡೆ ಗುಡುಗು ಸಹಿತ (rain News) ಮಳೆಯಾಗಿದೆ. ಮಧ್ಯಾಹ್ನ 3 ಗಂಟೆಗೆ ಶುರುವಾದ ಮಳೆಗೆ (Karnataka Weather Forecast) ಜನಜೀವನ ಅಸ್ತವ್ಯಸ್ತಗೊಂಡಿತ್ತು. ಬಿಟ್ಟುಬಿಡದೆ ಸುರಿದ ಮಳೆಗೆ ಕೃಷಿ ಚಟುವಟಿಕೆಗಳು ಸ್ಥಗಿತವಾಗಿದ್ದವು. ಮುಳಬಾಗಲು, ಕೋಲಾರದಲ್ಲಿ ಅತಿ ಹೆಚ್ಚು ಮಳೆಯಿಂದಾಗಿ ತೋಟದ ಬೆಳೆಗಳಿಗೆ ಹಾನಿಯಾಗಿತ್ತು. ಮಳೆಯಿಂದ ಮಾವು, ಟೊಮೊಟೊ ಬೆಳೆಗಾರರಿಗೆ ಸಂಕಷ್ಟ ಎದುರಾಯಿತು.

ಇತ್ತ ರಾಜಧಾನಿ ಬೆಂಗಳೂರಿನಲ್ಲೂ ಮಳೆಯಾಗಿದೆ. ಬನಶಂಕರಿ, ಕುಮಾರಸ್ವಾಮಿ ಲೇಔಟ್, ಎಳಚೇನಹಳ್ಳಿ, ಉತ್ತರಹಳ್ಳಿ, ಪದ್ಮನಾಭ ನಗರ ಸುತ್ತಮುತ್ತ ಮಳೆಯಾಗಿದ್ದರಿಂದ ವಾಹನ ಸವಾರರಿಗೆ ಅನಾನುಕೂಲ ಉಂಟಾಯಿತು. ದಿಢೀರ್‌ ಮಳೆಗೆ ಜನರು ಬಸ್‌ ನಿಲ್ದಾಣ, ಅಂಗಡಿಗಳನ್ನು ಆಶ್ರಯಿಸಿದರು.

ಇನ್ನೂ ಶನಿವಾರ ದಕ್ಷಿಣ ಒಳನಾಡು ಹಾಗೂ ಕರಾವಳಿ, ಉತ್ತರ ಒಳನಾಡಿನ ಹಲವೆಡೆ ಮಳೆಯಾಗಿರುವ ವರದಿ ಆಗಿದೆ. ಮಂಡ್ಯದ ಹೊನಕೆರೆಯಲ್ಲಿ 8 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ ಗರಿಷ್ಟ ಉಷ್ಣಾಂಶ 40.3 ಡಿ.ಸೆ ದಾಖಲಾಗಿದೆ.

ಇದನ್ನೂ ಓದಿ: Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

ಬೆಂಗಳೂರು ಸೇರಿ ದಕ್ಷಿಣ ಒಳನಾಡು ಆವರಿಸಿದ ಮುಂಗಾರು

ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಕರ್ನಾಟಕದ ಬಹುತೇಕ ಭಾಗವನ್ನು ಮುಂಗಾರು ಆವರಿಸಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಗದಗ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯೊಂದಿಗೆ ಗುಡುಗು ಸಹಿತ ಗಾಳಿಯು 30-40 ಕಿ.ಮೀ ವೇಗದಲ್ಲಿ ಬೀಸಲಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಸೇರಿದಂತೆ ದಾವಣಗೆರೆ, ಕೊಡಗು, ಕೋಲಾರ ಸೇರಿದಂತೆ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಉಳಿದಂತೆ ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ , ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

ತಾಪಮಾನದ ಮುನ್ಸೂಚನೆ

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌ನಿಂದ ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ.

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು ನಗರ ಮತ್ತು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿ.ಸೆ ಇರಬಹುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಯಚೂರು

Raichur Lok Sabha Constituency: ರಾಯಚೂರಿನಲ್ಲಿ ನಾಯಕರ ನಡುವಿನ ಕಾಳಗದಲ್ಲಿ ಯಾರು ರಾಜ?

Raichur Lok Sabha Constituency: ಪರಿಶಿಷ್ಟ ಪಂಗಡ ಸಮುದಾಯಕ್ಕೆ ಮೀಸಲಾಗಿರುವ ಕ್ಷೇತ್ರದಲ್ಲಿ ಸತತ ಎರಡನೇ ಬಾರಿಗೆ ರಾಜಾ ಅಮರೇಶ್ವರ್‌ ನಾಯಕ್‌ ಅವರು ಅದೃಷ್ಟ ಪರೀಕ್ಷೆಗೆ ಇಳಿದಿದ್ದರೆ, ನಿವೃತ್ತ ಐಎಎಸ್‌ ಅಧಿಕಾರಿ ಜಿ. ಕುಮಾರ್‌ ನಾಯಕ್‌ ಅವರು ಖಾತೆ ತೆರೆಯುವ ಉತ್ಸಾಹದಲ್ಲಿದ್ದಾರೆ. ರಾಜಾ ಅಮರೇಶ್ವರ ನಾಯಕ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ನಾಮದ ಬಲ ಇದ್ದರೆ, ಕುಮಾರ್‌ ನಾಯಕ್‌ ಪರ ಯುವಕರ ಒಲವಿದೆ ಎನ್ನಲಾಗುತ್ತಿದೆ.

VISTARANEWS.COM


on

Raichur Lok Sabha Constituency
Koo

ರಾಯಚೂರು: ಭತ್ತದ ಜಿಲ್ಲೆಯಾದ ರಾಯಚೂರಿನಲ್ಲಿ ಲೋಕಸಭೆ ಚುನಾವಣೆ (Raichur Lok Sabha Constituency) ಸಮರವು ಮಹತ್ವ ಪಡೆದಿದ್ದು, ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ್‌ (Raja Amareshwara Naik) ಹಾಗೂ ಕಾಂಗ್ರೆಸ್‌ನ ಜಿ. ಕುಮಾರ್‌ ನಾಯಕ್‌ (G Kumar Nayak) ಮಧ್ಯೆ ತೀವ್ರ ಪೈಪೋಟಿ ನಡೆದಿದೆ. ಪರಿಶಿಷ್ಟ ಪಂಗಡ ಸಮುದಾಯಕ್ಕೆ ಮೀಸಲಾಗಿರುವ ಕ್ಷೇತ್ರದಲ್ಲಿ ಸತತ ಎರಡನೇ ಬಾರಿಗೆ ರಾಜಾ ಅಮರೇಶ್ವರ್‌ ನಾಯಕ್‌ ಅವರು ಅದೃಷ್ಟ ಪರೀಕ್ಷೆಗೆ ಇಳಿದಿದ್ದರೆ, ನಿವೃತ್ತ ಐಎಎಸ್‌ ಅಧಿಕಾರಿ ಜಿ. ಕುಮಾರ್‌ ನಾಯಕ್‌ ಅವರು ಖಾತೆ ತೆರೆಯುವ ಉತ್ಸಾಹದಲ್ಲಿದ್ದಾರೆ.

ರಾಜಾ ಅಮರೇಶ್ವರ ನಾಯಕ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ನಾಮದ ಬಲವಿದೆ. ಹಲವು ಅಭಿವೃದ್ಧಿ ಕಾಮಗಾರಿಗಳ ಬಲ ಇದ್ದರೂ, ಮೂಲ ಸೌಕರ್ಯ ಒದಗಿಸುವ ವಿಚಾರದಲ್ಲಿ ಸಂಸದ ಹಿಂದೆ ಬಿದ್ದಂತೆ ಕಾಣಿಸುತ್ತಿದೆ. ರೈತರ ಆಕ್ರೋಶವೂ ಅವರ ವಿರುದ್ಧ ಇದೆ. ಆದರೆ, ಲೋಕಸಭೆ ಚುನಾವಣೆಯಲ್ಲಿ ಮತದಾರರು ರಾಷ್ಟ್ರ ಮಟ್ಟದ ಚಿಂತನೆಯೊಂದಿಗೆ ವೋಟು ಹಾಕುವುದರಿಂದ ಅಮರೇಶ್ವರ ನಾಯಕ್‌ ಅವರಿಗೆ ವರದಾನವಾಗುವ ಸಾಧ್ಯತೆ ಇದೆ.

ರಾಜಾ ಅಮರೇಶ್ವರ ನಾಯಕ್

ಇನ್ನು, 1990ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿದ್ದ ಜಿ. ಕುಮಾರ್‌ ನಾಯಕ್‌ ಅವರು ನಿವೃತ್ತಿ ಹೊಂದಿದ್ದು, ಈಗ ರಾಜಕೀಯದಲ್ಲಿ ಎರಡನೇ ಇನ್ನಿಂಗ್ಸ್‌ ಆರಂಭಿಸುವ ತವಕದಲ್ಲಿದ್ದಾರೆ. 1999ರಿಂದ 2002 ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಕುಮಾರ್‌ ನಾಯಕ್‌ ಅವರಿಗೆ ಜಿಲ್ಲೆಯ ಜತೆ ಒಡನಾಟವಿದೆ. ಐಎಎಸ್‌ ಅಧಿಕಾರಿಯಾಗಿದ್ದರು ಎಂಬ ಸಾಫ್ಟ್‌ ಕಾರ್ನರ್‌, ಯುವಕರ ಬೆಂಬಲವು ಅವರ ಜತೆಗಿದೆ. ಹಾಗಾಗಿ, ಕ್ಷೇತ್ರದಲ್ಲಿ ರಾಜಾ ಅಮರೇಶ್ವರ ನಾಯಕ್‌ ಹಾಗೂ ಕುಮಾರ್‌ ನಾಯಕ್‌ ಮಧ್ಯೆ ಪೈಪೋಟಿ ಅಂತೂ ಇದೆ. ‌

ಜಿ ಕುಮಾರ್‌ ನಾಯಕ್

2019, 2014ರಲ್ಲಿ ಏನಾಗಿತ್ತು?

2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ರಾಜಾ ಅಮರೇಶ್ವರ್‌ ನಾಯಕ್‌ ಅವರು ಕಾಂಗ್ರೆಸ್‌ನ ಬಿ.ವಿ. ನಾಯಕ್‌ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದರು. ರಾಜಾ ಅಮರೇಶ್ವರ್‌ ನಾಯಕ್‌ ಅವರು 1.17 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಬಿ.ವಿ. ನಾಯಕ್‌ ಅವರು ಬಿಜೆಪಿಯ ಶಿವನಗೌಡ ನಾಯಕ್‌ ವಿರುದ್ಧ ಕೇವಲ 1,499 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. 2019ರಲ್ಲಿ ರಾಜಾ ಅಮರೇಶ್ವರ್‌ ನಾಯಕ್‌ ಅವರಿಗೆ ಮೋದಿ ಅಲೆಯು ವರದಾನವಾಗಿತ್ತು.

ಮತದಾರರ ಸಂಖ್ಯೆ

ಪುರುಷರು9.55 ಲಕ್ಷ
ಮಹಿಳೆಯರು9.71 ಲಕ್ಷ
ಲಿಂಗತ್ವ ಅಲ್ಪಸಂಖ್ಯಾತರು367
ಒಟ್ಟು19.28 ಲಕ್ಷ

1957ರಿಂದ 2019ರ ಅವಧಿಯಲ್ಲಿ ರಾಯಚೂರು ಲೋಕಸಭೆ ಕ್ಷೇತ್ರದಲ್ಲಿ 17 ಬಾರಿ ಚುನಾವಣೆ ನಡೆದಿದೆ. 17ರಲ್ಲಿ 13 ಬಾರಿ ಕಾಂಗ್ರೆಸ್‌ ಗೆಲುವು ಸಾಧಿಸಿದರೆ, ಎರಡು ಬಾರಿ ಬಿಜೆಪಿ, ಒಮ್ಮೆ ಸ್ವತಂತ್ರ ಪಕ್ಷ ಹಾಗೂ ಒಮ್ಮೆ ಜೆಡಿಎಸ್‌ ಅಭ್ಯರ್ಥಿಯು ಗೆಲುವು ಸಾಧಿಸಿದ್ದಾರೆ.

ರಾಯಚೂರು ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಯಾದಗಿರಿಯ ಮೂರು, ರಾಯಚೂರು ಜಿಲ್ಲೆಯ ಐದು ವಿಧಾನಸಭೆ ಕ್ಷೇತ್ರಗಳು ಬರುತ್ತವೆ. ಐದರಲ್ಲಿ ಕಾಂಗ್ರೆಸ್‌, ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಒಂದು ಕ್ಷೇತ್ರದಲ್ಲಿ ಜೆಡಿಎಸ್‌ ಶಾಸಕರಿದ್ದಾರೆ. ರಾಯಚೂರು ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್‌ ಪ್ರಭಾವವೂ ಇರುವುದು ಮೈತ್ರಿ ಪಕ್ಷವಾದ ಬಿಜೆಪಿಗೆ ಹೆಚ್ಚಿನ ಅನುಕೂಲ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Bidar Lok Sabha Constituency: ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಹಳೇ ಬೇರು Vs ಹೊಸ ಚಿಗುರು; ಖೂಬಾ, ಖಂಡ್ರೆ ಕದನದಲ್ಲಿ ಜಯ ಯಾರಿಗೆ?

Continue Reading

ಮಳೆ

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Karnataka rain : ವಾರದವರೆಗೂ ಬಿಡುವು ನೀಡಿದ್ದ ವರುಣ ನಿನ್ನೆ ಶನಿವಾರದಿಂದ ಮತ್ತೆ ಅಬ್ಬರಿಸಲು ಶುರು ಮಾಡಿದ್ದಾನೆ. ಭಾನುವಾರ ಸಂಜೆ ವೇಳೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ (Rain news) ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ಗಾಳಿ ಬೀಸುವ (Karnataka Rain) ಸಾಧ್ಯತೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಾಗೂ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ತುಮಕೂರು, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಾಮರಾಜನಗರ ಸಾಧಾರಣ ಮಳೆಯಾದರೆ, ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಯಾದಗಿರಿ, ಬೆಳಗಾವಿ, ಧಾರವಾಡ, ಗದಗದಲ್ಲಿ, ವಿಜಯನಗರ ಮತ್ತು ಹಾವೇರಿಯ ಬಹುತೇಕ ಕಡೆಗಳಲ್ಲಿ ಮಳೆಯು ಅಬ್ಬರಿಸಲಿದೆ.

ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲೂ ಗುಡುಗು ಸಹಿತ ಸಾಧಾರಣ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.

ರಾಜಧಾನಿಯಲ್ಲಿ ಅಬ್ಬರದ ಮಳೆ

ಬೆಂಗಳೂರಿನಲ್ಲಿ ಭಾನುವಾರ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚನೆ ಇದೆ. ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಿಸಿಲಿನಿಂದ ಕಂಗೆಟ್ಟ ಸಿಟಿ ಮಂದಿಗೆ ರಾತ್ರಿ ಪೂರ್ತಿ ಸುರಿದ ಮಳೆಯಿಂದಾಗಿ ವಾತಾವರಣವೂ ಕೂಲ್‌ ಆಗಿದೆ.

ಇದನ್ನೂ ಓದಿ: Weather Updates:ಇಡೀ ರಾತ್ರಿ ಭಾರೀ ಮಳೆ; ಮುಂಗಾರು ಆರಂಭದಲ್ಲೇ ಬೆಂಗಳೂರು ಅಸ್ತವ್ಯಸ್ತ

ಮೈಸೂರಿನಲ್ಲಿ ಗಾಳಿ-ಮಳೆಗೆ ನೆಲಕ್ಕುರುಳಿದ ಬಾಳೆ ಬೆಳೆ

ಮೈಸೂರಿನಲ್ಲಿ ವಿವಿಧೆಡೆ ಭಾರಿ ಮಳೆ ಗಾಳಿಗೆ ಬಾಳೆ ಬೆಳೆ ನೆಲಕ್ಕುರುಳಿದೆ. ಮಳೆ, ಗಾಳಿಯು ಕೈಯಿಗೆ ಬಂದ ತುತ್ತು ಬಾಯಿಗೆ ಇಲ್ಲದಂತೆ ಮಾಡಿದೆ. ಶನಿವಾರ ಸುರಿದ ಮಳೆ ಹಾಗೂ ಗಾಳಿಗೆ ಅವಾಂತರವೇ ಸೃಷ್ಟಿಯಾಗಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಚಿಕ್ಕಹೊಮ್ಮ, ದೊಡ್ಡ ಹೊಮ್ಮ ಸೇರಿದಂತೆ ಹಲವೆಡೆ ಗಾಳಿ ಮಳೆಗೆ ಹತ್ತಾರು ಎಕರೆ ಬಾಳೆ ನಾಶವಾಗಿದೆ. ಚಿಕ್ಕಹೊಮ್ಮ ಗ್ರಾಮದ ನಾಗೇಂದ್ರ ಎಂಬುವವರ ಜಮೀನಲ್ಲಿ ಎರಡು ಸಾವಿರ ಬಾಳಿ ಗಿಡ ನೆಲಕ್ಕುರುಳಿದ್ದು ಇದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಸೂಕ್ತ ಪರಿಹಾರಕ್ಕೆ ರೈತರು ಆಗ್ರಹಿಸಿದ್ದಾರೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹನಗೋಡು ವ್ಯಾಪ್ತಿಯಲ್ಲಿ ಮಳೆಗೆ ಅಪಾರ ಪ್ರಮಾಣದ ತಂಬಾಕು ಹಾಗೂ ಶುಂಠಿ ಬೆಳೆ ನಾಶವಾಗಿದೆ. ಪೆಂಜಹಳ್ಳಿ, ಹರಳಹಳ್ಳಿ, ಕಿರಂಗೂರು, ಹಿಂಡಗೂಡ್ಲು ಸುತ್ತ ಮುತ್ತ ಸಾಕಷ್ಟು ಮಳೆ ಅವಾಂತರವೇ ಸೃಷ್ಟಿಯಾಗಿತ್ತು. ತಂಬಾಕು ಸಸಿ ನಾಟಿ ಮಾಡಿ ಗೊಬ್ಬರ ಹಾಕಿದ್ದ ಜಮೀನಿನಲ್ಲಿ ಮಳೆಯ ನೀರು ನಿಂತು ಬೆಳೆ ಹಾನಿಯಾಗಿತ್ತು. ಹರಳಹಳ್ಳಿ ಮಾದಳ್ಳಿಕಟ್ಟೆ, ಹುಲಿಕೆರೆ, ಆದ್ವಾಳಕೆರೆ, ಸೇರಿದಂತೆ ಬಹುತೇಕ ಕೆರೆಕಟ್ಟೆಗಳು ಭರ್ತಿಯಾಗಿವೆ.

ಕೆಜಿಎಫ್‌ನಲ್ಲಿ ಭರ್ಜರಿ ಮಳೆ

ಕೋಲಾರ ಜಿಲ್ಲೆಯ ವಿವಿಧಡೆ ತಡರಾತ್ರಿ ಗುಡುಗು ಸಿಡಿಲ ಧಾರಾಕಾರ ಮಳೆಯಾಗಿದೆ. ಕೆಜಿಎಫ್‌ನಲ್ಲಿ 6.4 ಸೆಂ.ಮೀ ಅತಿ ಹೆಚ್ಚು ಮಳೆಯಾಗಿದೆ. ಬಂಗಾರಪೇಟೆ, ಮಾಲೂರು, ಕೋಲಾರ ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಕೆಜಿಎಫ್‌ನ ಬೆಮಲ್ ಬಡಾವಣೆಯಲ್ಲಿ ಭಾರಿ ಮಳೆಗೆ ಬೃಹತ್ ಮರವೊಂದು ನೆಲಕ್ಕುರಲಿದೆ. ತಡರಾತ್ರಿ ರಸ್ತೆಗೆ ಮರ ಉರುಳಿದ ಪರಿಣಾಮ ಕೆಲಕಾಲ ಸಂಚಾರವು ಅಸ್ತವ್ಯಸ್ತಗೊಂಡಿತ್ತು.

ಚಲಿಸುತ್ತಿದ್ದ ಬೈಕ್‌ ಮೇಲೆ ಬಿದ್ದ ಮರ, ಸವಾರ ಗಂಭೀರ

ಇನ್ನೂ ವಿಜಯನಗರದ ನಿವಾಸಿ ಬೈಕ್‌ನಲ್ಲಿ ಬರುವಾಗ ಗಾಳಿ ಮಳೆಗೆ ಮರ ಬಿದ್ದಿದೆ. ಪರಿಣಾಮ ಬೈಕ್ ಸವಾರ ಇಮ್ಯುನಿಯಲ್ ಎಂಬಾತ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಜಿಎಫ್ ನ ಮಾರಿಕೊಪ್ಪ ಮತ್ತು ಆಂಧ್ರದ ಕುಪ್ಪಂ ರಾಮಕುಪ್ಪಂ ಬಂಗಾರಪೇಟೆ ಮಾಲೂರು ಕಡೆ ಬಿರುಸಿನ ಮಳೆಯಾಗಿದೆ .ಹಳ್ಳ ಕೊಳ್ಳಗಳು ತುಂಬಿ ನೀರು ಹರಿದಿದೆ. ಇನ್ನು ಎರಡು ದಿನಗಳ ಕಾಲ ಕೋಲಾರ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.

ವಿಜಯಪುರದಲ್ಲಿ ಗಾಳಿ ರಭಸ

ವಿಜಯಪುರ ಜಿಲ್ಲೆಯ ಹೂವಿನ ಹಿಪ್ಪರಗಿ ಭಾಗದಲ್ಲಿ ಭಾರಿ ಮಳೆ ಸುರಿದಿದೆ. ಭೀಕರ ಬರಗಾಲದಿಂದ ಕಂಗೆಟ್ಟಿದ್ದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಮಳೆಯಿಂದಾಗಿ ರೈತರ ಮೊಗದಲ್ಲಿ ಸಂತಸ ಮೂಡಿದೆ. ರಭಸವಾಗಿ ಸುರಿದ ಮಳೆಯಿಂದಾಗಿ ಕೆರೆ ಹಾಗೂ ರಸ್ತೆಗಳು ತುಂಬಿ ಹರಿದಿದ್ದವು. ಭಾರಿ ಗಾಳಿ ಸಮೇತವಾಗಿ ಸತತ ಮೂರು ಗಂಟೆ ಸುರಿದ ಮಳೆಗೆ ಮರಗಳು‌ ಹಾಗೂ ವಿದ್ಯುತ್ ಕಂಬ ನೆಲಕ್ಕೆ ಬಿದ್ದಿದ್ದವು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮೇಲ್ಮೈ ಸುಳಿಗಾಳಿ ಎಫೆಕ್ಟ್‌; ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

Rain News : ರಾಜ್ಯಾದ್ಯಂತ ಗುಡುಗು ಸಹಿತ ಮಧ್ಯಮ ಮಳೆಯಾಗಲಿದ್ದು, ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ಗಾಳಿ ಬೀಸುವ (Karnataka weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ವ್ಯಾಪಕ ಲಘುದಿಂದ ಸಾಧಾರಣ ಮಳೆ ಸಾಧ್ಯತೆ ಇದೆ. ತುಮಕೂರು, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಾಮರಾಜನಗರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಯಾದಗಿರಿ, ಬೆಳಗಾವಿ, ಧಾರವಾಡ, ಗದಗದಲ್ಲಿ ಸಾಧಾರಣ ಮಳೆಯಾಗಲಿದೆ. ವಿಜಯನಗರ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: World Milk Day: ಹಾಲಿಗೊಂದು ದಿನವೇ ಬೇಕೆಂದಿಲ್ಲ, ವರ್ಷವಿಡೀ ಆಚರಿಸಬಹುದು!

ಬೇಸಿಗೆಯ ತಾಪಕ್ಕೆ ಮೂಗಿನಲ್ಲಿ ರಕ್ತಸ್ರಾವವೇ? ತಡೆಯಲು ಇಲ್ಲಿವೆ ಸರಳ ಉಪಾಯ

ಚಳಿಗಾಲದಲ್ಲಿ ಮಾತ್ರವಲ್ಲ, ಬೇಸಿಗೆಯಲ್ಲೂ ಮೂಗಿನಲ್ಲಿ ರಕ್ತಸ್ರಾವ ಆಗುವುದು ಸಾಮಾನ್ಯ. ಆದರೆ ಹಾಗೇಕಾಗುತ್ತದೆ? ಹಾಗೆ ಆಗದಂತೆ ತಡೆಯುವುದಕ್ಕೆ ಸಾಧ್ಯವಿಲ್ಲವೇ- ಈ ಎಲ್ಲ ಮಾಹಿತಿಗಳ ಜೊತೆಗೆ ಅದನ್ನು ತಡೆಯುವ ಸರಳ (Nosebleeds In Summer) ಉಪಾಯಗಳು ಇಲ್ಲಿವೆ. ಬೇಸಿಗೆಯಲ್ಲಿ ಕಾಡುವ ಹಲವು ರೀತಿಯ ಆರೋಗ್ಯ ಸಮಸ್ಯೆಗಳ ಪೈಕಿ ಮೂಗಿನಲ್ಲಿ ರಕ್ತ ಸೋರುವುದೂ ಒಂದು. ಅತಿ ಬಿಸಿಯಾದ ಮತ್ತು ಶುಷ್ಕ ವಾತಾವರಣವಿದ್ದಾಗ ಈ ಸಮಸ್ಯೆ ಕಾಡುವುದು ಹೆಚ್ಚು. ಅತಿಯಾದ ಚಳಿಯ ಜೊತೆಗಿನ ಒಣ ಹವೆ ಇದ್ದರೂ ಈ ತೊಂದರೆ ಕಾಡಬಹುದು. ಆದರೆ ಹೆಚ್ಚಿನ ಜನ ಬೇಸಿಗೆಯಲ್ಲಿ ಈ ಸಮಸ್ಯೆಯನ್ನು ಎದುರಿಸುತ್ತಾರೆ. ಅಲ್ಪಸ್ವಲ್ಪ ರಕ್ತ ಸೋರುತ್ತಿದ್ದರೆ ಇದನ್ನು ತಡೆಯುವುದಕ್ಕೆ ಕೆಲವು ಮನೆಮದ್ದುಗಳು ಸಹಾಯ ಮಾಡಬಹುದು. ಆದರೆ ಮೂಗಿನಲ್ಲಿ ಹೆಚ್ಚು ರಕ್ತಸ್ರಾವ ಆಗುತ್ತಿದ್ದರೆ ವೈದ್ಯರನ್ನು ಕಾಣಬೇಕಾದೀತು. ಮೂಗಿನಲ್ಲಿ ರಕ್ತ ಸೋರುವುದಕ್ಕೆ ಕಾರಣಗಳನ್ನು ಮೊದಲು ಅರ್ಥ ಮಾಡಿಕೊಳ್ಳೋಣ. ಒಣಗಿದ ಬಿಸಿ ಹವೆಯಿಂದಾಗಿ ಮೂಗಿನ ಒಳ ಭಾಗದಲ್ಲಿರುವ ಸೂಕ್ಷ್ಮ ರಕ್ತನಾಳಗಳು ಒಡೆದಾಗ ಉಂಟಾಗುವ ಸಮಸ್ಯೆಯಿದು. ಕೆಲವೊಮ್ಮೆ ಸೋಂಕಿನಿಂದಲೂ ಈ ಸಮಸ್ಯೆ ಕಾಣಬಹುದು. ಅತಿಯಾಗಿ ರಕ್ತಸ್ರಾವ ಆಗುತ್ತಿದ್ದರೆ, ಬೇರೆಯದೇ ಸಮಸ್ಯೆಯನ್ನಿದು ಸೂಚಿಸಬಹುದು. ಆದರೆ ಬೇಸಿಗೆಯ ಕಾರಣದಿಂದಲೇ ಮೂಗಿನಲ್ಲಿ ರಕ್ತ ಸೋರುತ್ತಿದ್ದರೆ, ಕೆಲವು ಮನೆಮದ್ದುಗಳು ಇದಕ್ಕೆ ಉಪಶಮನ ನೀಡುತ್ತವೆ.

drink Water night

ನೀರು ಕುಡಿಯಿರಿ

ಇದಕ್ಕಿರುವ ಅತ್ಯಂತ ಸರಳವಾದ ಮದ್ದೆಂದರೆ ನೀರು ಕುಡಿಯುವುದು. ಹೆಚ್ಚಿನ ನೀರು ದೇಹ ಸೇರಿದಂತೆ ಕೋಶಗಳಲ್ಲಿರುವ ಶುಷ್ಕತೆ ಕಡಿಮೆಯಾಗುತ್ತದೆ. ಇದರಿಂದ ಮೂಗಿನಲ್ಲಿರುವ ಮ್ಯೂಕಸ್‌ ಕೋಶಗಳು ಸಹ ತಮ್ಮ ತೇವವನ್ನು ಕಾಪಿಟ್ಟುಕೊಳ್ಳುವುದಕ್ಕೆ ಸಹಾಯವಾಗುತ್ತದೆ. ಅಂದರೆ, ಒಣ ಹವೆಯ ಪ್ರತಿಕೂಲ ಪರಿಣಾಮ ಬೀರದಂತೆ ತಡೆಯುವುದಕ್ಕೆ ಇದು ಸುಲಭದ ಉಪಾಯ.

ಹ್ಯುಮಿಡಿಫಯರ್‌

ಬೇಸಿಗೆಯ ನೆವದಿಂದ ಎಷ್ಟೋ ಬಾರಿ ಅತಿಯಾಗಿ ಫ್ಯಾನ್‌ ಅಥವಾ ಎಸಿ ಬಳಸುತ್ತೇವೆ. ಇದರಿಂದ ಮನೆಯ ಅಥವಾ ಕಚೇರಿಯ ವಾತಾವರಣದಲ್ಲಿ ಶುಷ್ಕತೆ ಹೆಚ್ಚಾಗುತ್ತದೆ. ನೈಸರ್ಗಿಕವಾದ ಬಿಸಿ ಗಾಳಿಯ ಜೊತೆಗೆ ಇದೂ ಸಹ ಸಮಸ್ಯೆಗಳನ್ನು ಹೆಚ್ಚಿಸಬಹುದು. ಹಾಗಾಗಿ ವಾತಾವರಣದ ತೇವಾಂಶವನ್ನು ಹೆಚ್ಚಿಸುವಂಥ ಹ್ಯುಮಿಡಿಫಯರ್‌ ಬಳಸುವುದು ಇನ್ನೊಂದು ಮಾರ್ಗ. ಇದರಿಂದ ಮೂಗಿನ ಅಂಗಾಂಶಗಳು ಹಾನಿಗೊಳ್ಳುವುದನ್ನು ತಡೆಯಬಹುದು.

Moisturizer

ಮಾಯಿಶ್ಚರೈಸರ್‌ ಬಳಕೆ

ಮೂಗಿನ ಒಳ ಭಾಗ ಒಣಗಿ ಬಿರಿಯದಂತೆ ತಡೆಯಲು ಮಾಯಿಶ್ಚರೈಸರ್‌ ಬಳಕೆ ಮಾಡುವುದು ಉಪಯುಕ್ತ. ಇದಕ್ಕಾಗಿ ಇರುವ ಜೆಲ್‌ ಇಲ್ಲವೇ ಸ್ಟ್ರೇ ಬಳಸಬಹುದು. ಸಾಲೈನ್‌ ಸ್ಪ್ರೇ ಬಳಕೆಯೂ ಉಪಯುಕ್ತವಾದೀತು. ಇವನ್ನೆಲ್ಲ ಹೊಸದಾಗಿ ಖರೀದಿಸಿ ತರುವಷ್ಟು ವ್ಯವಧಾನ ಇಲ್ಲದಿದ್ದರೆ, ಸರಳವಾಗಿ ಕೊಬ್ಬರಿ ಎಣ್ಣೆಯನ್ನು ಮೂಗಿನ ಒಳಭಾಗದ ಅಂಗಾಂಶಗಳಿಗೆ ಹೆಚ್ಚಿ. ಇದು ಪರಿಣಾಮಕಾರಿಯಾಗಿ ತೇವವನ್ನು ಹಿಡಿದಿಡುತ್ತದೆ.

ಮುಚ್ಚಿಕೊಳ್ಳಿ

ತೀವ್ರ ತಾಪದ ಹೊತ್ತಿನಲ್ಲಿ ಮನೆಯಿಂದ ಹೊರಗೆ ಹೋಗುವಾಗ ಮುಖಕ್ಕೆ ಮಾಸ್ಕ್‌ ಹಾಕುವುದು ಸಹಾಯಕ. ಇದರಿಂದ ಒಣ ಹವೆಯನ್ನು ಉಸಿರಾಡುವುದು ಸ್ವಲ್ಪ ಮಟ್ಟಿಗಾದರೂ ತಪ್ಪಿಸಬಹುದು. ತಿಳಿ ಬಣ್ಣದ ದೊಡ್ಡ ಹ್ಯಾಟ್‌ ಧರಿಸುವುದರಿಂದ ಮುಖದ ಮೇಲೆ ಬಿಸಿಲು ನೇರವಾಗಿ ಬೀಳದಂತೆ ಮಾಡಬಹುದು. ಈ ಕ್ರಮಗಳೆಲ್ಲ ಸಣ್ಣವೇ ಆದರೂ, ಒಟ್ಟಾರೆಯಾಗಿ ಸಮಸ್ಯೆಯನ್ನು ದೂರ ಮಾಡುವಲ್ಲಿ ನೆರವಾಗುತ್ತವೆ.

ಇದನ್ನೂ ಓದಿ: Mango For Diabetes: ಮಧುಮೇಹಿಗಳೂ ಮಾವಿನಹಣ್ಣಿನ ರುಚಿ ಸವಿಯಬಹುದೇ? ಇಲ್ಲಿದೆ ಉತ್ತರ!

ಮಾಡಬೇಡಿ

ಮೂಗನ್ನು ಶುಚಿಗೊಳಿಸುವ ನೆವದಲ್ಲಿ ನಾಸಿಕದ ಮೇಲೆ ಯಾವುದೇ ರೀತಿಯಲ್ಲೂ ತೀರಾ ಒತ್ತಡ ಹಾಕಬೇಡಿ. ಈಗಾಗಲೇ ಮೂಗಿನಲ್ಲಿ ರಕ್ತ ಸೋರುತ್ತಿದ್ದರಂತೂ ಈ ಬಗ್ಗೆ ಹೆಚ್ಚಿನ ಎಚ್ಚರ ವಹಿಸಿ. ಮೂಗಿನ ಮೇಲೆ ಒತ್ತಡ ಹಾಕಿದರೆ ಬಿರಿದ ಕೋಶಗಳು ದುರಸ್ತಿಯಾಗುವುದು ನಿಧಾನವಾಗುತ್ತದೆ ಅಥವಾ ಇನ್ನಷ್ಟು ಬಿರಿದು ಸಮಸ್ಯೆಯನ್ನೇ ಸೃಷ್ಟಿಸುತ್ತವೆ. ಅಲರ್ಜಿಗಳನ್ನು ಹತ್ತಿಕ್ಕಿ. ದಿನವಿಡೀ ಜೋರಾಗಿ ಸೀನುತ್ತಲೇ ಇದ್ದರೆ, ಮೂಗು ಸೋರುವಾಗ ರಕ್ತಸ್ರಾವ ಆಗುವುದು ಖಚಿತ.

Winter transitions to summer

ಆಹಾರ

ಆರೋಗ್ಯಕರವಾದ ಆಹಾರವನ್ನು ಕಡ್ಡಾಯವಾಗಿ ಪಾಲಿಸಿ. ಸೆಕೆಯ ನೆವವೊಡ್ಡಿ ಅತಿಯಾದ ತಣ್ಣಗಿನ ಪೇಯಗಳನ್ನು ಕುಡಿಯುವುದು, ಐಸ್‌ಕ್ರೀಮ್‌ ಮೆಲ್ಲುವುದು- ಇವೆಲ್ಲ ಮೂಗಿನ ಸಮಸ್ಯೆಗಳನ್ನು ಹೆಚ್ಚಿಸಬಹುದು; ಗಂಟಲಿನ ಸೋಂಕಿಗೆ, ಶೀತ-ನೆಗಡಿಗೆ ಕಾರಣವಾಗಬಹುದು. ವಿಟಮಿನ್‌ ಸಿ ಹೆಚ್ಚಿರುವ ಆಹಾರವನ್ನು ವಿಫುಲವಾಗಿ ಸೇವಿಸುವ ಮೂಲಕ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Amul Milk
ದೇಶ4 hours ago

Amul Milk: ಗ್ರಾಹಕರಿಗೆ ಬಿಗ್‌ ಶಾಕ್‌; ಹಾಲಿನ ಬೆಲೆ ಲೀಟರ್‌ಗೆ 2 ರೂ. ಹೆಚ್ಚಳ

Odisha Assembly Election
ದೇಶ6 hours ago

Odisha Assembly Election: ಒಡಿಶಾ ವಿಧಾನಸಭಾ ಚುನಾವಣೆ; ಬಿಜೆಡಿ-ಬಿಜೆಪಿ ನಡುವೆ ತೀವ್ರ ಹಣಾಹಣಿ: ಹಳೆ ದೋಸ್ತಿಗೆ ಠಕ್ಕರ್‌ ಕೊಡುತ್ತಾ ಕಮಲ ಪಡೆ?

Mysore lok sabha constituency
ಪ್ರಮುಖ ಸುದ್ದಿ6 hours ago

Mysore lok sabha Constituency : ಕಿಂಗ್​​ ವರ್ಸಸ್​ ಆರ್ಡಿನರಿ ಸಿಟಿಜನ್​ ಫೈಟ್​​ನಲ್ಲಿ ಗೆಲುವು ಯಾರಿಗೆ?

Haveri Lok Sabha Constituency
ಹಾವೇರಿ7 hours ago

Haveri Lok Sabha Constituency: ಹಾವೇರಿಯಲ್ಲಿ ಅನುಭವಿ vs ಉತ್ಸಾಹಿ; ಯಾರಿಗೆ ಜಯದ ಮಾಲೆ?

Hyderabad City : Hyderabad no longer joint capital of Andhra Pradesh, Telangana from today
ಪ್ರಮುಖ ಸುದ್ದಿ7 hours ago

Hyderabad City : ಹೈದರಾಬಾದ್​ ಇನ್ನು ತೆಲಂಗಾಣಕ್ಕಷ್ಟೇ ರಾಜಧಾನಿ; ಏನಿದು ವಿಂಗಡಣೆ?

Loksabha Election 2024
Lok Sabha Election 20247 hours ago

Lok Sabha Election 2024: ಮತ ಎಣಿಕೆಗೆ 1 ದಿನವಷ್ಟೇ ಬಾಕಿ; ಚುನಾವಣಾ ಆಯೋಗದ ಕದ ತಟ್ಟಿದ ಎನ್‌ಡಿಎ, ʼಇಂಡಿಯಾʼ ಮೈತ್ರಿಕೂಟ

Chikballapur lok sabha constituency
ಪ್ರಮುಖ ಸುದ್ದಿ7 hours ago

Chikballapur lok sabha constituency : ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಗೆ ಇನ್ನಷ್ಟು ಬಲ ತರುವರೇ ಸುಧಾಕರ್​?

Bangalore Rain
ಕರ್ನಾಟಕ8 hours ago

Bangalore Rain: ಬೆಂಗಳೂರಲ್ಲಿ ವರುಣನ ಅಬ್ಬರ; ಅಂಡರ್ ಪಾಸ್‌ನಲ್ಲಿ ಸಿಲುಕಿದ ಬಸ್‌, 20 ಪ್ರಯಾಣಿಕರ ರಕ್ಷಣೆ

Kannada New Movie
ಸಿನಿಮಾ8 hours ago

Kannada New Movie: ಎಸ್. ನಾರಾಯಣ್ ನಿರ್ದೇಶನದ ಹೊಸ ಚಿತ್ರದಲ್ಲಿ ಒಂದಾದ ದುನಿಯಾ ವಿಜಯ್, ಶ್ರೇಯಸ್ ಮಂಜು

Koppal Lok Sabha Constituency
ಕೊಪ್ಪಳ8 hours ago

Koppal Lok Sabha Constituency: ಮಾಜಿ ಶಾಸಕರ ಪುತ್ರರ ನಡುವಿನ ಸ್ಪರ್ಧೆಯಲ್ಲಿ ಯಾರಾಗುವರು ಸಂಸದ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ18 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 day ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌