Site icon Vistara News

Woman murder : ಸಂಶಯ ಪಿಶಾಚಿ ಪತಿಯ ಕ್ರೌರ್ಯಕ್ಕೆ ಬಲಿಯಾದ ಪತ್ನಿ

woman murder

ರಾಯಚೂರು: ಪತ್ನಿಯ ಶೀಲ ಶಂಕಿಸಿ ಪತಿ ಆಕೆಯನ್ನು ಕೊಲೆ ಮಾಡಿದ ಘಟನೆ (murder case) ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದಲ್ಲಿ ನಡೆದಿದೆ.

ಶಿಲ್ಪಾ (27) ಪತಿಯಿಂದ ಕೊಲೆಯಾದ ಮಹಿಳೆ. ಮೃತ ಶಿಲ್ಪಾಳನ್ನು ಕೊಲೆಗೈದ ಪತಿ ಸಿದ್ದು ಎಂಬಾತ. ನಿನ್ನೆ ರಾತ್ರಿ ಈತ ಪತ್ನಿಯ ನಡತೆ ಶಂಕಿಸಿ ಗಲಾಟೆ ಮಾಡಿದ್ದಾನೆ. ನಂತರ ಶಿಲ್ಪಾಗೆ ಚಾಕುವಿನಿಂದ ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ಶಿಲ್ಪಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆರೋಪಿ ಸಿದ್ದುವನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸಿಂಧನೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇರಿದು ಯುವಕನ ಕೊಲೆ

ಕಲಬುರಗಿ: ಮಾರಕಾಸ್ತ್ರಗಳಿಂದ ಇರಿದು ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ (Murder Case) ಮಾಡಲಾಗಿದೆ. ಕಲಬುರಗಿ ನಗರದ ಆಜಾದಪುರ್ ರಸ್ತೆಯಲ್ಲಿ ಘಟನೆ ನಡೆದಿದೆ. ಉಮೇರ್ (23) ಕೊಲೆಯಾದ ಯುವಕ. ಉಮೇರ್, ಕಲಬುರಗಿ ನಗರದ ಬಿಲಾಲಾಬಾದ್ ಕಾಲೋನಿ ನಿವಾಸಿ.

ಕಳೆದ ರಾತ್ರಿ ಹನ್ನೊಂದು ಮೂವತ್ತರ ಸಮಯದಲ್ಲಿ ಹಲ್ಲೆ ನಡೆದಿದೆ. ಚಾಕುವಿನಿಂದ ದೇಹದ ವಿವಿಧೆಡೆ ಸಿಕ್ಕಸಿಕ್ಕಂತೆ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಉಮೇರ್‌ನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದ‌ರು. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಉಮೇರ್ ಮೃತಪಟ್ಟಿದ್ದಾನೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆಸಲಾಗಿರುವ ಶಂಕೆಯಿದ್ದು, ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಹಸೆಮಣೆ ಏರಬೇಕಿದ್ದ ಯುವಕನ ಕೊಲೆ; ಈತ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯ ಪತಿ ಕೊಲೆಗಾರ!

Exit mobile version