Rail Roko protest | ಹಾರವಾಡ, ಮಿರ್ಜಾನ್‌, ಚಿತ್ರಾಪುರದಲ್ಲಿ ನಿಲುಗಡೆ‌ಗೆ ಒತ್ತಾಯಿಸಿ ರೈಲು ತಡೆದು ಪ್ರತಿಭಟನೆ - Vistara News

ಉತ್ತರ ಕನ್ನಡ

Rail Roko protest | ಹಾರವಾಡ, ಮಿರ್ಜಾನ್‌, ಚಿತ್ರಾಪುರದಲ್ಲಿ ನಿಲುಗಡೆ‌ಗೆ ಒತ್ತಾಯಿಸಿ ರೈಲು ತಡೆದು ಪ್ರತಿಭಟನೆ

Rail Roko protest | ಮೆಮು ರೈಲನ್ನು ಪ್ಯಾಸೆಂಜರ್ ರೈಲಾಗಿ ಓಡಿಸಬೇಕು ಎಂಬುದು ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈಲು ತಡೆದು ಪ್ರತಿಭಟನೆ ನಡೆಸಲಾಯಿತು.

VISTARANEWS.COM


on

Rail Roko protests MEMU Rail ankola
ಮೆಮು ರೈಲನ್ನು ಎಕ್ಸ್‌ಪ್ರೆಸ್‌ ರೈಲನ್ನಾಗಿ ಮೇಲ್ದರ್ಜೆಗೇರಿಸಿರುವುದನ್ನು ವಿರೋಧಿಸಿ ರೈಲು ಹಳಿಯ ಮೇಲೆ ಮಲಗಿ ಪ್ರತಿಭಟಿಸಿದ ಪ್ರತಿಭಟನಾಕಾರರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ರೈಲು ನಿಲುಗಡೆ‌ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈಲು ತಡೆದು ಪ್ರತಿಭಟನೆ (Rail Roko protest) ನಡೆಸಿದ ಘಟನೆ ಅಂಕೋಲಾ ತಾಲೂಕಿನ ಹಾರವಾಡದಲ್ಲಿ ನಡೆದಿದೆ.

ಮಾಜಿ ಶಾಸಕ ಸತೀಶ್ ಸೈಲ್ ಹಾಗೂ ಜನಶಕ್ತಿ ವೇದಿಕೆಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪದ್ಮಶ್ರೀ ಪುರಸ್ಕೃತರಾದ ಸುಕ್ರಿ ಗೌಡ ಹಾಗೂ ತುಳಸಿ ಗೌಡ ಸೇರಿದಂತೆ ಐವತ್ತಕ್ಕೂ ಅಧಿಕ ಜನರು ಭಾಗವಹಿಸಿದ್ದರು. ಮಂಗಳೂರಿನಿಂದ ಮಡಗಾಂವ್‌ಗೆ ತೆರಳುವ ಮೆಮು ರೈಲನ್ನು ಎಕ್ಸ್‌ಪ್ರೆಸ್‌ ರೈಲನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. ಇದನ್ನು ವಿರೋಧಿಸಿ ರೈಲು ಹಳಿಯ ಮೇಲೆ ಮಲಗಿ, ಪ್ಯಾಸೆಂಜರ್ ರೈಲು ತಡೆದು ಪ್ರತಿಭಟಿಸುವ ಮೂಲಕ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ | ನಾ ನಾಯಕಿ | ಸೋನಿಯಾ ಗಾಂಧಿಯವರ ಕನಸು ನನಸಾಗಿಸುತ್ತೇವೆ: ಸಮಾವೇಶದಲ್ಲಿ ಕಾಂಗ್ರೆಸ್‌ ಪ್ರತಿಜ್ಞೆ

ಮೆಮು ರೈಲನ್ನು ಮೇಲ್ದರ್ಜೆಗೇರಿಸಿರುವುದರಿಂದ ಅಂಕೋಲಾ ತಾಲೂಕಿನ ಹಾರವಾಡ, ಕುಮಟಾದ ಮಿರ್ಜಾನ್ ಹಾಗೂ ಭಟ್ಕಳ ತಾಲೂಕಿನ ಚಿತ್ರಾಪುರ ರೈಲು ನಿಲ್ದಾಣಗಳಲ್ಲಿ ರೈಲಿನ ನಿಲುಗಡೆಯನ್ನು ಸ್ಥಗಿತಗೊಳಿಸಲಾಗಿದೆ.‌ ಪರಿಣಾಮ ಸ್ಥಳೀಯರು ವಿವಿಧೆಡೆ ಕೆಲ ಕಾರ್ಯಗಳಿಗೆ ತೆರಳಲು ಅಡ್ಡಿಯಾಗಿದ್ದು, ಈ ಹಿಂದಿನಂತೆ ಮೆಮು ರೈಲನ್ನು ಪ್ಯಾಸೆಂಜರ್ ರೈಲಾಗಿ ಓಡಿಸುವಂತೆ ಪ್ರತಿಭಟಿಸಿ, ರೈಲ್ವೆ ಪ್ರಾದೇಶಿಕ ವ್ಯವಸ್ಥಾಪಕ ಬಿ.ಬಿ.ನಿಕ್ಕಂ ಅವರಿಗೆ ಮನವಿ ಸಲ್ಲಿಸಲಾಯಿತು.

10 ದಿನದೊಳಗೆ ಪ್ರತಿಭಟನಾಕಾರರ ಮನವಿ ಈಡೇರಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದು, ಈ ಬಳಿಕ ಪ್ರತಿಭಟನೆ ಸ್ಥಗಿತಗೊಳಿಸಲಾಯಿತು. ಸಾಂಕೇತಿಕವಾಗಿ ರೈಲ್ ರೋಕೋ ಪ್ರತಿಭಟನೆ ನಡೆಸಿದ್ದು‌, ಮುಂಜಾಗ್ರತಾ ಕ್ರಮವಾಗಿ ರೈಲು ನಿಲ್ದಾಣದ ಬಳಿ ‌ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಇದನ್ನೂ ಓದಿ | Supreme Court Collegium | ಜಡ್ಜ್ ನೇಮಕದಲ್ಲಿ ಸರ್ಕಾರದ ಪ್ರತಿನಿಧಿ ಇರಬೇಕು: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಪತ್ರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Rain News: ಭಾರಿ ಮಳೆಗೆ ಮನೆ ಗೋಡೆ ಕುಸಿದು ನಾಲ್ವರು ಸಾವು

Rain News: ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರ ಎಂಬಲ್ಲಿ ದುರ್ಘಟನೆ ನಡೆದಿದ್ದು, ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಮನೆಯ ಗೋಡೆ ಕುಸಿದಿದೆ. ಇದು ಪಕ್ಕದ ಯಾಸಿರ್ ಎಂಬವರ ಮನೆಯ ಗೋಡೆಗೆ ಬಿದ್ದು ಭಾರೀ ಅವಘಡ ಸಂಭವಿಸಿತು.

VISTARANEWS.COM


on

rain news wall collapse 4 death
Koo

ಮಂಗಳೂರು: ಭಾರಿ ಮಳೆಯ (Rain news) ಪರಿಣಾಮ ಮನೆಯ ಗೋಡೆ ಕುಸಿದು (Wall collapse) ಬಿದ್ದು ನಾಲ್ವರು‌ ದುರ್ಮರಣ (four death) ಹೊಂದಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ (Ullala) ನಡೆದಿದೆ.

ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರ ಎಂಬಲ್ಲಿ ದುರ್ಘಟನೆ ನಡೆದಿದ್ದು, ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಮನೆಯ ಗೋಡೆ ಕುಸಿದಿದೆ. ಇದು ಪಕ್ಕದ ಯಾಸಿರ್ ಎಂಬವರ ಮನೆಯ ಗೋಡೆಗೆ ಬಿದ್ದು ಭಾರೀ ಅವಘಡ ಸಂಭವಿಸಿತು. ಮನೆಯೊಳಗಿದ್ದ ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಸಾವಿಗೀಡಾದರು.

ರಾತ್ರಿ ಸುರಿದ ಭಾರೀ ಮಳೆಗೆ ಈ ದುರಂತ ಸಂಭವಿಸಿದೆ. ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಾಲ್ವರ ಮೃತದೇಹವನ್ನೂ ಸ್ಥಳೀಯರು ಹೊರತೆಗೆದಿದ್ದಾರೆ.

ಅನಂತಕುಮಾರ್‌ ಹೆಗಡೆ ಮನೆಯಲ್ಲಿ ಬೆಂಕಿ ಆಕಸ್ಮಿಕ

ಕಾರವಾರ: ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ (Anantkumar Hegde) ಮನೆಯಲ್ಲಿ ಬೆಂಕಿ ಆಕಸ್ಮಿಕ (Fire mishop) ಸಂಭವಿಸಿದೆ. ಇದು ಶಾರ್ಟ್‌ ಸರ್ಕ್ಯೂಟ್‌ನಿಂದ (Short Circuit) ಆಗಿದೆ ಎಂದು ತಿಳಿದುಬಂದಿದೆ.

ಶಿರಸಿಯ ಕೆಎಚ್‌ಬಿ ಕಾಲೋನಿಯಲ್ಲಿ ಇರುವ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯ ಮೇಲ್ಭಾಗದ ಜಿಮ್ ಮಾಡುವ ಕೊಠಡಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಸೃಷ್ಟಿಯಾದ ಪರಿಣಾಮ ಜಿಮ್ ಮಾಡುವ ಯಂತ್ರಗಳಿಗೆ ಅಲ್ಪ ಹಾನಿಯಾಗಿದೆ. ಇದನ್ನು ಹೊರತುಪಡಿಸಿದರೆ ಹೊಗೆಯಿಂದ ಗೋಡೆಗಳಿಗೆ ಹಾನಿಯಾಗಿದ್ದು ಅಂದಾಜು 50 ಸಾವಿರದಷ್ಟು ಹಾನಿಯಾಗಿರಬಹುದು ಎಂದು ಅಂದಾಜಿಸಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದು ಯಾವುದೇ ದೊಡ್ಡ ಹಾನಿಯಾಗಿಲ್ಲ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸುನೀಲ್ ಅವರು ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಪ್ರವಾಸಿಗರಿಗೆ ಬಾಸುಂಡೆ ಬರುವಂತೆ ಥಳಿಸಿದ ಗೋವಾ ಅರಣ್ಯ ಇಲಾಖೆ ಸಿಬ್ಬಂದಿ

ಬೆಳಗಾವಿ: ಕರ್ನಾಟಕದ ಪ್ರವಾಸಿಗರನ್ನು (Karnataka Tourists) ಗೋವಾದ ಅರಣ್ಯ ಇಲಾಖೆ (Goa Forest department) ಸಿಬ್ಬಂದಿ ಮನಬಂದಂತೆ ಥಳಿಸಿದ (Assault Case) ಘಟನೆ ಗೋವಾ ಗಡಿಯಲ್ಲಿರುವ ಸೂರಲ್ ಜಲಪಾತದ (Sural Falls) ಬಳಿ ನಡೆದಿದೆ. ಜಲಪಾತ ವೀಕ್ಷಣೆಗೆ ಹೋಗಿದ್ದ ಕನ್ನಡದ ಪ್ರವಾಸಿಗರಿಗೆ ಮೈಮೇಲೆ ಬಾಸುಂಡೆ ಬರುವ ಹಾಗೆ ಥಳಿಸಿ, ಅವರಿಂದ ಹಣ ಕಿತ್ತುಕೊಂಡು ವಿಕೃತಿ ಮೆರೆದಿದ್ದಾರೆ.

ಬೆಳಗಾವಿ ಮತ್ತು ಗೋವಾ ಗಡಿಯಲ್ಲಿರುವ ಖಾನಾಪೂರ ತಾಲೂಕಿನ ಕಣಕುಂಬಿ ಬಳಿಯ ಸೂರಲ್ ಜಲಪಾತ ಬಳಿ ಇದು ನಡೆದಿದೆ. ಮಳೆಗಾಲ ಆರಂಭ ಆಗುತ್ತಿದ್ದಂತೆ ಕರ್ನಾಟಕದಿಂದ ಅತಿಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿಗೆ ತೆರಳುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಗೋವಾ ಅರಣ್ಯ ಇಲಾಖೆ ಸಿಬ್ಬಂದಿ ಪ್ರವಾಸಿಗರಿಂದ ಹೆಚ್ಚಿನ ಹಣ ವಸೂಲಿ ಮಾಡುವುದಲ್ಲದೆ, ಪ್ರಶ್ನಿಸಿದರೆ ಮೈಮೇಲೆ ಏರಿ ಬರುತ್ತಾರೆ.

ನಿರಂತರವಾಗಿ ಪ್ರವಾಸಿಗರಿಂದ ಒಂದಿಲ್ಲೊಂದು ಕಾರಣ ಹೇಳಿ ಹಣ ಕಿತ್ತುಕೊಳ್ಳುತ್ತಿರುವ ಆರೋಪ ಇವರ ಮೇಲಿದೆ. ಸೂರಲ್ ಜಲಪಾತದ ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳಿಂದ ಹಣ ವಸೂಲಿ ಆರೋಪ ಮೊದಲಿನಿಂದಲೂ ಇದೆ. ಹುಕ್ಕೇರಿ ತಾಲೂಕಿನ ಸಂಕೇಶ್ವರದ ಐವರು ಯುವಕರ ತಂಡವನ್ನು ಇವರು ತಡೆದು ಥಳಿಸಿದ್ದಾರೆ. ಬೆನ್ನು, ಕಾಲು ಕೈಗೆ ಬಾಸುಂಡೆ ಬರುವ ಹಾಗೆ ಥಳಿಸಿ ವಿಕೃತಿ ತೋರಿದ್ದಾರೆ.

ಹಲ್ಲೆ ಮಾಡಿದ್ದಲ್ಲದೇ ಪರ್ಸ್‌ನಲ್ಲಿದ್ದ ಹಣವನ್ನೂ ಕಿತ್ತುಕೊಂಡಿದ್ದಾರೆ. 1 ಸಾವಿರ ಫೋನ್ ಪೇ ಮಾಡಿಸಿಕೊಂಡಿದ್ದು ಸೇರಿ ಒಟ್ಟು 9 ಸಾವಿರ ರೂಪಾಯಿ ಹಣ ಕಿತ್ತುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ದೌರ್ಜನ್ಯವನ್ನು ಸಾವಿರಾರು ಪ್ರವಾಸಿಗರು ಅನುಭವಿಸುತ್ತಿದ್ದು, ಯಾರೂ ದೂರು ನೀಡುತ್ತಿಲ್ಲ ಎಂದು ಹಲ್ಲೆಗೊಳಗಾದವರು ಅಲವತ್ತುಕೊಂಡಿದ್ದಾರೆ. ಗೋವಾ ಅರಣ್ಯ ಇಲಾಖೆಯ ಅಧಿಕಾರಿಗಳು ಇವರ ದೂರನ್ನು ಕೇಳಿಸಿಕೊಂಡಿಲ್ಲ.

ಇದನ್ನೂ ಓದಿ: Contaminated Water : ಬೆಳಗಾವಿ, ಕೋಲಾರದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಸಾವು

Continue Reading

ಕರ್ನಾಟಕ

Karnataka Weather: ಇಂದು ಹಾಸನ, ಕೊಡಗು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

Karnataka Weather: ಕರ್ನಾಟಕ ಕರಾವಳಿಯ ಉದ್ದಕ್ಕೂ ಬುಧವಾರ ವೇಗವಾಗಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಹಾಗೂ ಮನರಂಜನೆಗಾಗಿ ಸಮುದ್ರಕ್ಕೆ ಇಳಿಯುವವರಿಗೆ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ಕರಾವಳಿ ಜಿಲ್ಲೆಗಳು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಜೂನ್‌ 26ರಂದು ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ (Karnataka Weather) ನೀಡಿದೆ

ಇನ್ನು ರಾಜ್ಯದ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ.

ಅದೇ ರೀತಿ ಜೂನ್‌ 27ರಂದು ಕೂಡ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಕೊಡಗು ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಸಿನ ಮಳೆ ಬೀಳಲಿದೆ.

ಮೀನುಗಾರರಿಗೆ ಎಚ್ಚರಿಕೆ

ಕರ್ನಾಟಕ ಕರಾವಳಿಯ ಉದ್ದಕ್ಕೂ ಬುಧವಾರ ಗಂಟೆಗೆ 35 ಕಿ.ಮೀನಿಂದ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಕನ್ನಡದಲ್ಲಿ ಮುಲ್ಕಿಯಿಂದ ಮಂಗಳೂರಿನವರೆಗೆ, ಅಲೆಗಳು ರಾತ್ರಿ 11.30ರವರೆಗೆ 3.3ರಿಂದ 3.6 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಉಂಟಾಗುವ ಮುನ್ಸೂಚನೆ ನೀಡಲಾಗಿದೆ. ಸಾಗರ ಕಾರ್ಯಾಚರಣೆ ಮತ್ತು ಹತ್ತಿರದ ದಡದ ಮನರಂಜನೆ ಮಾಡುವಾಗ ಜಾಗರೂಕರಾಗಿರಿ ಎಂದು ಸಲಹೆ ನೀಡಲಾಗಿದೆ.

ಉಡುಪಿಯಲ್ಲಿ ಹೈ ವೇವ್ ಎಚ್ಚರಿಕೆ: ಬೈಂದೂರಿನಿಂದ ಕಾಪುವರೆಗಿನ ಉಡುಪಿ, ಕರ್ನಾಟಕ ಕರಾವಳಿಯಲ್ಲಿ, ರಾತ್ರಿ 11.30ರ ವರೆಗೆ 3.4ರಿಂದ 3.8 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ಸಣ್ಣ ಹಡಗುಗಳು ಸಂಚರಿಸದಂತೆ, ಸಮೀಪ ದಡದ ಮನರಂಜನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಮತ್ತು ಸವೆತ/ಅಲೆಗಳ ಉಲ್ಬಣವು ಸಾಧ್ಯತೆ ಎಂದು ಸಲಹೆ ನೀಡಲಾಗಿದೆ.

ಉತ್ತರ ಕನ್ನಡ, ಕರ್ನಾಟಕ ಕರಾವಳಿಯಲ್ಲಿ ಮಾಜಾಳಿಯಿಂದ ಭಟ್ಕಳದವರೆಗೆ ರಾತ್ರಿ 11.30ರವರೆಗೆ 3.5 ರಿಂದ 4.0 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ಸಣ್ಣ ಹಡಗುಗಳು ಸಂಚರಿಸದಂತೆ, ಸಮೀಪ ದಡದ ಮನರಂಜನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಮತ್ತು ಸವೆತ/ಅಲೆಗಳ ಉಲ್ಬಣ ಸಾಧ್ಯತೆ ಎಂದು ಸಲಹೆ ನೀಡಲಾಗಿದೆ.

ಇದನ್ನೂ ಓದಿ | Monsoon Hair care: ಮಳೆಗಾಲದಲ್ಲಿ ಕೂದಲಿನ ಆರೈಕೆಗೆ ಈ ಸಲಹೆ ಪಾಲಿಸಿ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಲಘು ಮಳೆಯಾಗುವ ಸಾಧ್ಯತೆ ಹೆಚ್ಚು. ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗಿರುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ‘C ಮತ್ತು 21 ° C ಆಗಿರಬಹುದು.

Continue Reading

ಕರ್ನಾಟಕ

Karnataka Weather: ನಾಳೆ ಶಿವಮೊಗ್ಗ, ಚಿಕ್ಕಮಗಳೂರು ಸೇರಿ ವಿವಿಧೆಡೆ ಭಾರಿ ಮಳೆ; ಕರಾವಳಿಯಲ್ಲಿ ಮೀನುಗಾರರಿಗೆ ಎಚ್ಚರಿಕೆ!

Karnataka Weather: ಕರ್ನಾಟಕ ಕರಾವಳಿಯ ಉದ್ದಕ್ಕೂ ಬುಧವಾರ ಗಂಟೆಗೆ 35 ಕಿ.ಮೀನಿಂದ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಹಾಗೂ ಮನರಂಜನಾ ಚಟುವಟಿಕೆ ನಡೆಸುವವರಿಗೆ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಜೂನ್‌ 26ರಂದು ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಪ್ರತ್ಯೇಕ ಕಡೆ ನಿರಂತರ ಗಾಳಿ (45-55 kmph) ಸಹಿತ ಭಾರಿ ಮಳೆ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ (Karnataka Weather) ನೀಡಿದೆ.

ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ,
ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯ ವೇಗ (45-55 kmph) ಇರುವ ಸಾಧ್ಯತೆಯಿದೆ.

ಇನ್ನು ಜೂನ್‌ 27ರಂದು ಕೂಡ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಕೊಡಗು ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಸಿನ ಮಳೆ ಸುರಿಯಲಿದೆ.

ಮೀನುಗಾರರಿಗೆ ಎಚ್ಚರಿಕೆ

ಕರ್ನಾಟಕ ಕರಾವಳಿಯ ಉದ್ದಕ್ಕೂ ಬುಧವಾರ ಗಂಟೆಗೆ 35 ಕಿ.ಮೀನಿಂದ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಕನ್ನಡದಲ್ಲಿ ಮುಲ್ಕಿಯಿಂದ ಮಂಗಳೂರಿನವರೆಗೆ, ಅಲೆಗಳು ರಾತ್ರಿ 11.30ರವರೆಗೆ 3.3ರಿಂದ 3.6 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಉಂಟಾಗುವ ಮುನ್ಸೂಚನೆ ನೀಡಲಾಗಿದೆ. ಸಾಗರ ಕಾರ್ಯಾಚರಣೆ ಮತ್ತು ಹತ್ತಿರದ ದಡದ ಮನರಂಜನೆ ಮಾಡುವಾಗ ಜಾಗರೂಕರಾಗಿರಿ ಎಂದು ಸಲಹೆ ನೀಡಲಾಗಿದೆ.

ಉಡುಪಿಯಲ್ಲಿ ಹೈ ವೇವ್ ಎಚ್ಚರಿಕೆ: ಬೈಂದೂರಿನಿಂದ ಕಾಪುವರೆಗಿನ ಉಡುಪಿ, ಕರ್ನಾಟಕ ಕರಾವಳಿಯಲ್ಲಿ, ರಾತ್ರಿ 11.30ರ ವರೆಗೆ 3.4ರಿಂದ 3.8 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ಸಣ್ಣ ಹಡಗುಗಳು ಸಂಚರಿಸದಂತೆ, ಸಮೀಪ ದಡದ ಮನರಂಜನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಮತ್ತು ಸವೆತ/ಅಲೆಗಳ ಉಲ್ಬಣವು ಸಾಧ್ಯತೆ ಎಂದು ಸಲಹೆ ನೀಡಲಾಗಿದೆ.

ಉತ್ತರ ಕನ್ನಡ, ಕರ್ನಾಟಕ ಕರಾವಳಿಯಲ್ಲಿ ಮಾಜಾಳಿಯಿಂದ ಭಟ್ಕಳದವರೆಗೆ ರಾತ್ರಿ 11.30ರವರೆಗೆ 3.5 ರಿಂದ 4.0 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ಸಣ್ಣ ಹಡಗುಗಳು ಸಂಚರಿಸದಂತೆ, ಸಮೀಪ ದಡದ ಮನರಂಜನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಮತ್ತು ಸವೆತ/ಅಲೆಗಳ ಉಲ್ಬಣ ಸಾಧ್ಯತೆ ಎಂದು ಸಲಹೆ ನೀಡಲಾಗಿದೆ.

ಇದನ್ನೂ ಓದಿ | Monsoon Hair care: ಮಳೆಗಾಲದಲ್ಲಿ ಕೂದಲಿನ ಆರೈಕೆಗೆ ಈ ಸಲಹೆ ಪಾಲಿಸಿ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಲಘು ಮಳೆಯಾಗುವ ಸಾಧ್ಯತೆ ಹೆಚ್ಚು. ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗಿರುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ‘C ಮತ್ತು 21 ° C ಆಗಿರಬಹುದು.

Continue Reading

ಉತ್ತರ ಕನ್ನಡ

Anantkumar Hegde: ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಮನೆಯಲ್ಲಿ ಬೆಂಕಿ ಆಕಸ್ಮಿಕ

Anantkumar Hegde: ಶಿರಸಿಯ ಕೆಎಚ್‌ಬಿ ಕಾಲೋನಿಯಲ್ಲಿ ಇರುವ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯ ಮೇಲ್ಭಾಗದ ಜಿಮ್ ಮಾಡುವ ಕೊಠಡಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಸೃಷ್ಟಿಯಾದ ಪರಿಣಾಮ ಜಿಮ್ ಮಾಡುವ ಯಂತ್ರಗಳಿಗೆ ಅಲ್ಪ ಹಾನಿಯಾಗಿದೆ.

VISTARANEWS.COM


on

Anantkumar Hegde home fire
Koo

ಕಾರವಾರ: ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ (Anantkumar Hegde) ಮನೆಯಲ್ಲಿ ಬೆಂಕಿ ಆಕಸ್ಮಿಕ (Fire mishop) ಸಂಭವಿಸಿದೆ. ಇದು ಶಾರ್ಟ್‌ ಸರ್ಕ್ಯೂಟ್‌ನಿಂದ (Short Circuit) ಆಗಿದೆ ಎಂದು ತಿಳಿದುಬಂದಿದೆ.

ಶಿರಸಿಯ ಕೆಎಚ್‌ಬಿ ಕಾಲೋನಿಯಲ್ಲಿ ಇರುವ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯ ಮೇಲ್ಭಾಗದ ಜಿಮ್ ಮಾಡುವ ಕೊಠಡಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಸೃಷ್ಟಿಯಾದ ಪರಿಣಾಮ ಜಿಮ್ ಮಾಡುವ ಯಂತ್ರಗಳಿಗೆ ಅಲ್ಪ ಹಾನಿಯಾಗಿದೆ. ಇದನ್ನು ಹೊರತುಪಡಿಸಿದರೆ ಹೊಗೆಯಿಂದ ಗೋಡೆಗಳಿಗೆ ಹಾನಿಯಾಗಿದ್ದು ಅಂದಾಜು 50 ಸಾವಿರದಷ್ಟು ಹಾನಿಯಾಗಿರಬಹುದು ಎಂದು ಅಂದಾಜಿಸಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದು ಯಾವುದೇ ದೊಡ್ಡ ಹಾನಿಯಾಗಿಲ್ಲ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸುನೀಲ್ ಅವರು ಮಾಹಿತಿ ನೀಡಿದ್ದಾರೆ.

ಸರಗಳ್ಳನ ಕಾಲಿಗೆ ತುಮಕೂರು ಪೊಲೀಸ್‌ ಗುಂಡೇಟು

ತುಮಕೂರು: ತುಮಕೂರಿನಲ್ಲಿ ಪೊಲೀಸ್ ತುಪಾಕಿ (Tumkur Shoot out) ಸದ್ದು ಮಾಡಿದೆ. ನಿರಂತರವಾಗಿ ಸರಗಳ್ಳತನ ಮಾಡುತ್ತಿದ್ದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆಂಧ್ರದ ಹಿಂದೂಪುರ ಮೂಲದ ರಿಜ್ವಾನ್ ಎಂಬಾತನಿಗೆ ಗುಂಡೇಟು ಬಿದ್ದಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಈಜೀಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ.

ಆರೋಪಿ ರಿಜ್ವಾನ್‌ ಒಟ್ಟು 15ಕ್ಕೂ ಹೆಚ್ಚು ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ. ಕಳೆದ ಒಂದು ವಾರದ ಹಿಂದೆ ಎ1 ಆರೋಪಿ ಚಿನ್ನಾ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಸೋಮವಾರ (ಜೂ.24) ಖಚಿತ ಮಾಹಿತಿ ಮೇರೆಗೆ ಎ2 ಆರೋಪಿ ರಿಜ್ವಾನ್‌ನನ್ನು ಬಂಧಿಸಲು ಪೊಲೀಸರು ತೆರಳಿದ್ದರು.

ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪ, ಸಿಪಿಐ ಹನುನಂತರಾಯಪ್ಪ, ಪಿಎಸ್‌ಐ ಶ್ರೀನಿವಾಸ್, ದಾದಪೀರ್, ಹಾಗೂ ಪೊಲೀಸ್ ಸಿಬ್ಬಂದಿ ರಮೇಶ್ ತಂಡ ತೆರಳಿತ್ತು. ಹೊಸಪೇಟೆಯಿಂದ ಪೊಲೀಸ್ ಜೀಪ್‌ನಲ್ಲಿ ಮಧುಗಿರಿಗೆ ಕರೆತರುತ್ತಿದ್ದಾಗ, ಬಹಿರ್ದೆಸೆಗೆ ಹೋಗುವುದಾಗಿ ಈಜಿಹಳ್ಳಿ ಕ್ರಾಸ್ ಬಳಿ ಇಳಿದಿದ್ದ. ಈ ವೇಳೆ ಪೊಲೀಸ್ ಪೇದೆ ರಮೇಶ್ ಮೇಲೆ ರಿಹ್ವಾನ್‌ ಬಿಯರ್ ಬಾಟಲ್‌ ಎಸೆದು ಹಲ್ಲೆ ನಡೆಸಿ, ಪರಾರಿ ಆಗಲು ಯತ್ನಿಸಿದ್ದ. ಪೊಲೀಸರು ಶರಣಾಗುವಂತೆ ಮೂರು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ನಂತರ ಪೊಲೀಸರ ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿ ಕರೆ ತಂದಿದ್ದಾರೆ.

tumkur Shoot out
ಗಾಯಾಳು ಪೊಲೀಸ್‌ ಪೇದೆ ರಮೇಶ್‌

ಬಿಯರ್‌ ಬಾಟೆಲ್‌ನಿಂದ ಹಲ್ಲೆಗೊಳಗಾದ ಪೊಲೀಸ್ ಸಿಬ್ಬಂದಿ ರಮೇಶ್‌ಗೆ ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ರಿಜ್ವಾನ್‌ಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇನ್ನೂ ರಿಜ್ವಾನ್‌ ಮೇಲೆ ಮಧುಗಿರಿ 3, ಮಿಡಗೇಶಿ 4, ಬಡವನಹಳ್ಳಿ 2, ಕೊರಟಗೆರೆ 1, ಕೊಡಿಗೇನಹಳ್ಳಿ 2 ಹಾಗೂ ಮಡಕಶಿರಾ 1, ಪಟ್ಟನಾಯಕನಹಳ್ಳಿ 2, ಗೌರಿಬಿದನೂರು 1 ಸೇರಿದಂತೆ ಹಲವು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ದೂರು ದಾಖಲಾಗಿವೆ. ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.

ಇದನ್ನೂ ಓದಿ: Contaminated Water : ಬೆಳಗಾವಿ, ಕೋಲಾರದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಸಾವು

Continue Reading
Advertisement
Inzamam Ul Haq
ಕ್ರೀಡೆ4 mins ago

Inzamam Ul Haq: ಭಾರತ ತಂಡದ ವಿರುದ್ಧ ಬಾಲ್ ಟ್ಯಾಂಪರಿಂಗ್ ಆರೋಪ ಮಾಡಿದ ಪಾಕ್​ ಮಾಜಿ ನಾಯಕ

rain news wall collapse 4 death
ಕ್ರೈಂ5 mins ago

Rain News: ಭಾರಿ ಮಳೆಗೆ ಮನೆ ಗೋಡೆ ಕುಸಿದು ನಾಲ್ವರು ಸಾವು

Sanjith Hegde Nange Allava song Out
ಸ್ಯಾಂಡಲ್ ವುಡ್28 mins ago

Sanjith Hegde: ಸಂಜನಾ ದಾಸ್‌ಗೆ ʻನೀ ನಂಗೆ ಅಲ್ಲವಾʼ ಎಂದ ಸಂಜಿತ್ ಹೆಗಡೆ!

suraj revanna case 12
ಕ್ರೈಂ37 mins ago

Suraj Revanna Case: ಅಮಾವಾಸ್ಯೆ ದಿನ ಸೂರಜ್‌ ಬಳೆ ತೊಡ್ತಾನೆ, ಸೀರೆ ಉಡ್ತಾನೆ! ಬಯಲು ಮಾಡಿದ ಸಂತ್ರಸ್ತ

Lok Sabha Speaker Election
ದೇಶ39 mins ago

Lok Sabha Speaker Election: ಲೋಕಸಭೆ ಸ್ಪೀಕರ್ ಚುನಾವಣೆ ಇಂದು; ಆಡಳಿತ ಪಕ್ಷ-ಪ್ರತಿಪಕ್ಷ ಬಲಾಬಲ ಹೀಗಿದೆ

Albania vs Spain
ಕ್ರೀಡೆ40 mins ago

Albania vs Spain: ಯುರೋ ಕಪ್​ನಲ್ಲಿ ನಾಕೌಟ್‌ ಹಂತಕ್ಕೇರಿದ ಸ್ಪೇನ್‌

Parliament Session 2024
ದೇಶ46 mins ago

Parliament Session 2024: ಇಂದು ಐತಿಹಾಸಿಕ ಲೋಕಸಭಾ ಸ್ಪೀಕರ್‌ ಚುನಾವಣೆ; ಕ್ಷಣ ಕ್ಷಣದ ಮಾಹಿತಿಗಾಗಿ Live ನೋಡಿ

Pavithra Gowda Cried After In Jail darshan case
ಕ್ರೈಂ53 mins ago

Pavithra Gowda: ನನ್ನನ್ನು ನೋಡಲು ಯಾರೂ ಬರೋದಿಲ್ಲ ಎಂದು ಪವಿತ್ರಾ ಕಣ್ಣೀರು; ʻದಚ್ಚುʼ ನಿರಾಳ!

Sunita Williams
ವಿದೇಶ1 hour ago

Sunita Williams: ತಾಂತ್ರಿಕ ಸಮಸ್ಯೆ- ಎರಡು ವಾರಗಳಿಂದ ಬಾಹ್ಯಾಕಾಶದಲ್ಲೇ ಸಿಲುಕಿದ ಸುನೀತಾ ವಿಲಿಯಮ್ಸ್‌

IND vs ENG
ಕ್ರೀಡೆ1 hour ago

IND vs ENG: ಭಾರತ-ಇಂಗ್ಲೆಂಡ್​ ಸೆಮಿ ಕಾದಾಟಕ್ಕೆ ಮೀಸಲು ದಿನ ಇಲ್ಲ; ಪಂದ್ಯ ರದ್ದಾದರೆ ಯಾರಾಗಲಿದ್ದಾರೆ ವಿಜೇತರು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌