Site icon Vistara News

ಕೊಡಗಿನಲ್ಲಿ ಮುಂದುವರಿದ ವರುಣನ ಅಬ್ಬರ, ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆಯ ನಿರೀಕ್ಷೆ

coorg rain

ಮಡಿಕೇರಿ: ಕೊಡಗಿನಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಇಂದು ಮುಂಜಾನೆ 8:30 ರವರೆಗೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಕೊಡಗಿನ ಬ್ರಹ್ಮಗಿರಿ ತಪ್ಪಲು ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ

ಕಾವೇರಿ ನದಿ ನೀರಿನ ಮಟ್ಟ ಗಣನೀಯ ಏರಿಕೆಯಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ನಾಪೋಕ್ಲು- ಭಾಗಮಂಡಲ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಹೀಗಾಗಿ ನಾಪೋಕ್ಲು- ಭಾಗಮಂಡಲ ಸಂಪರ್ಕ ಕಡಿತವಾಗಿದೆ. ಭಾಗಮಂಡಲ- ಮಡಿಕೇರಿ ರಸ್ತೆ ಮೇಲೆ ಸುಮಾರು 2 ಅಡಿಗಳಷ್ಟು ನೀರು ಹರಿಯುತ್ತಿದೆ.

ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ವ್ಯಾಪಕ ಮಳೆಯ ಪರಿಣಾಮ ರಾಜ್ಯದ ನಾನಾ ಕಡೆಗಳಲ್ಲಿ ತೀವ್ರ ಬೆಳೆ ಹಾನಿ ಸಂಭವಿಸಿದೆ. ಕೇರಳ ಮತ್ತು ತಮಿಳುನಾಡಿನಲ್ಲಿ ಕೂಡ ಬಿಡುವಿಲ್ಲದಂತೆ ಮಳೆ ಸುರಿಯುತ್ತಿದೆ.

Exit mobile version