Rain News : ಜಲಪಾತದಲ್ಲಿ ಕಾಲು ಜಾರಿದ ಯುವಕನ ಶವ ಇನ್ನೂ ಪತ್ತೆ ಇಲ್ಲ; ಹುಡುಕಲು ಹೋದ ಸಾಹಸಿಗೂ ಡೇಂಜರ್ Vistara News

ಉಡುಪಿ

Rain News : ಜಲಪಾತದಲ್ಲಿ ಕಾಲು ಜಾರಿದ ಯುವಕನ ಶವ ಇನ್ನೂ ಪತ್ತೆ ಇಲ್ಲ; ಹುಡುಕಲು ಹೋದ ಸಾಹಸಿಗೂ ಡೇಂಜರ್

Rain News : ಕೊಲ್ಲೂರು ಸಮೀಪದ ಅರಶಿನ ಗುಂಡಿಯಲ್ಲಿ ಜಲಪಾತಕ್ಕೆ ಬಿದ್ದ ಯುವಕ ಶರತ್‌ ಕುಮಾರ್‌ ಶವ ಪತ್ತೆಗೆ ಹೋದ ಸಮಾಜಸೇವಕರೊಬ್ಬರು ತಾವೂ ಅಪಾಯಕ್ಕೆ ಸಿಲುಕಿದ್ದಾರೆ.

VISTARANEWS.COM


on

Arashina gundi Falls
ಅರಶಿನ ಗುಂಡಿ ಫಾಲ್ಸ್‌ನ ಅಪಾಯಕಾರಿ ಜಾಗದಲ್ಲಿ ಕುಸಿದುಬಿದ್ದ ಈಶ್ವರ ಮಲ್ಪೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು (Kolluru incident) ಬಳಿಯಿರುವ ಅರಶಿನಗುಂಡಿ ಜಲಪಾತ (Arashina gundi Falls) ನೋಡಲು ಹೋಗಿ ಕಾಲು ಜಾರಿ ಬಿದ್ದು ನೀರುಪಾಲಾದ ಭದ್ರಾವತಿ ಮೂಲದ ಶರತ್ ಕುಮಾರ್ (23) ಎಂಬ ಯುವಕನ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಈ ನಡುವೆ, ಮಳೆಯ ಅಬ್ಬರದ ಮಧ್ಯೆಯೂ (Rain News) ಯುವಕನ ಮೃತದೇಹ ಪತ್ತೆ ಮಾಡುವ ಉತ್ಸಾಹದಿಂದ ಹೋದ ಸಾಮಾಜಿಕ ಕಾರ್ಯಕರ್ತರೊಬ್ಬರು (Social worker) ತಾವೇ ಅಪಾಯಕ್ಕೆ ಸಿಲುಕುವ ಸೂಚನೆ ಕಂಡು ಮರಳಿ ಬಂದಿದ್ದಾರೆ.

ಭದ್ರಾವತಿ ಮೂಲದ ಶರತ್ ಕುಮಾರ್ (23) ಅವರು ಸ್ನೇಹಿತರ ಜತೆ ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದರು. ಇಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ್ದ ಆತ ಭೋರ್ಗರೆಯುತ್ತಿದ್ದ ಜಲಪಾತದ ಎದುರು ಕಲ್ಲಿನ ಅಂಚಿನಲ್ಲಿ ನಿಂತಿದ್ದ. ಈ ವೇಳೆ ಸಣ್ಣಗೆ ಕಾಲು ಜಾರಿದ್ದು ಯುವಕ ಅಲ್ಲಿಂದಲೇ ಜಾರಿ ನೀರಿಗೆ ಬಿದ್ದು ಕೊಚ್ಚಿ ಹೋಗಿದ್ದ. ಯುವಕನ ಮೃತದೇಹದ ಪತ್ತೆಗೆ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುತ್ತಿದೆ. ಘಟನಾ ಸ್ಥಳಕ್ಕೆ ಕೊಲ್ಲೂರು ಪಿಎಸ್ಐ ಜಯಲಕ್ಷ್ಮಿ ಹಾಗೂ ಸಿಬ್ಬಂದಿ ಕೂಡಾ ಸಹಕಾರ ನೀಡುತ್ತಿದ್ದಾರೆ.

ಶರತ್‌ ಕುಮಾರ್‌ ಉರುಳಿ ಬಿದ್ದಿದ್ದು ಹೀಗೆ

ಇದೊಂದು ಅತ್ಯಂತ ದುರ್ಗಮ ಜಲಪಾತವಾಗಿದ್ದು, ಮಳೆಯಿಂದಾಗಿ ಧುಮ್ಮಿಕ್ಕಿ ಹರಿಯುತ್ತಿದೆ. ಮೇಲಿನಿಂದ ಬೀಳುವ ನೀರು ಅತ್ಯಂತ ಕಿರಿದಾದ ಕಲ್ಲುಗಳ ಬಂಡೆಗಳ ನಡುವೆ ಇಳಿದುಹೋಗುತ್ತಿದೆ. ಕಲ್ಲುಗಳ ನಡುವೆ ವೇಗವಾಗಿ ತೆವಳಿಕೊಂಡು ಜಿಗಿದುಕೊಂಡು ನೀರು ಹಾರುತ್ತದೆ. ಇದರಿಂದಾಗಿ ಶರತ್‌ ಕುಮಾರ್‌ ಅವರ ಶವವನ್ನು ಎಲ್ಲಿ ಹುಡುಕುವುದು ಎಂದು ತಿಳಿಯದೆ ಅಗ್ನಿ ಶಾಮಕ ದಳ ಕೂಡಾ ಕೈಚೆಲ್ಲುವ ಹಂತಕ್ಕೆ ಬಂದಿದೆ.

ಪ್ರಯತ್ನಕ್ಕೆ ಇಳಿದ ಆಪತ್ಬಾಂಧವ ಈಶ್ವರ ಮಲ್ಪೆ

ಜಲಪಾತದಲ್ಲಿ ಕೊಚ್ಚಿಹೋದ ಯುವಕನನ್ನು ಪತ್ತೆ ಹಚ್ಚುವುದು ಹೇಗೆ ಎಂದು ತಿಳಿಯದೆ ಅಗ್ನಿಶಾಮಕ ದಳ ಕಂಗಾಲಾಗಿದ್ದ ಹೊತ್ತಿನಲ್ಲಿ ಉಡುಪಿಯ ಸಾಹಸಿಯೊಬ್ಬರು ತಾವೊಂದು ಪ್ರಯತ್ನ ಮಾಡಿದರೆ ಹೇಗೆ ಎಂದು ಹೊರಟಿದ್ದರೆ ಆಪತ್ಬಾಂಧವ ಎಂದೇ ಹೆಸರಾದ ಈಶ್ವರ ಮಲ್ಪೆ.

ಈ ಹಿಂದೆಯೂ ಕೆಲವೊಂದು ಅಪಾಯಕಾರಿ ಸನ್ನಿವೇಶಗಳಲ್ಲಿ ಧೈರ್ಯದಿಂದ ಮುನ್ನುಗ್ಗಿ ಕಾರ್ಯಾಚರಣೆ ನಡೆಸಿದ್ದ ಈಶ್ವರ ಮಲ್ಪೆ ಅವರು ಈ ಬಾರಿಯೂ ಮುಂದಾಗಿದ್ದಾರೆ. ಹೀಗಾಗಿಯೇ ಹಗ್ಗ ಮತ್ತಿತರ ಸಲಕರಣೆಗಳೊಂದಿಗೆ ಗೆಳೆಯರೊಂದಿಗೆ ಮಳೆಯ ನಡುವೆಯೇ ಅಲ್ಲಿಗೆ ತೆರಳಿದ್ದರು.

ಅವರು ಶರತ್‌ ಎಲ್ಲಿ ಬಿದ್ದಿರಬಹುದು? ಶವ ಎಲ್ಲಿ ಸಿಕ್ಕಿ ಹಾಕಿಕೊಂಡಿರಬಹುದು ಎಂದು ಯೋಚಿಸಿ ಒಂದು ಕಡೆ ಕಡಿದಾದ ಜಾಗದಲ್ಲಿ ಇಳಿದು ಹುಡುಕಾಟಕ್ಕೆ ಇಳಿದರು. ಅಲ್ಲಿ ಅವರು ಒಂದು ಕಡೆ ನೀರ ನಡುವಿನಿಂದ ಕೆಳಗಿನಿಂದ ಮೇಲೆ ಕಲ್ಲಿಗೆ ಕೈ ಇಟ್ಟು ಜಿಗಿದು ಹತ್ತಲು ಮುಂದಾದರು.

ಈ ವೇಳೆ ಅವರು ಕೈ ಜಾರಿ ಕಾಲೂ ಜಾರಿ ಕೆಳಗೆ ನೀರಿಗೆ ಬಿದ್ದಿದ್ದಾರೆ. ಆಗ ಅವರ ಗೆಳೆಯರು ಯಾವ ಕಾರಣಕ್ಕೂ ಈ ಸಾಹಸ ಬೇಡ ಮರಳಿ ಬನ್ನಿ ಎಂದು ಒತ್ತಡ ಹೇರಿ ಮೇಲೆ ಕರೆದುಕೊಂಡುಬಂದಿದ್ದಾರೆ. ಹೀಗಾಗಿ ಅವರು ಕೂಡಾ ಶರತ್‌ ಕುಮಾರ್‌ ಸುಳಿವು ಸಿಕ್ಕದೆ ಮರಳಿಬಂದಿದ್ದಾರೆ.

ಈಶ್ವರ ಮಲ್ಪೆ ಅವರು ಕೆಳಗೆ ಬಿದ್ದ ವಿಡಿಯೊ ಇಲ್ಲಿದೆ

ಜಲಪಾತ ನೋಡಲು ಹೋಗುವಾಗ ಎಚ್ಚರ

  1. ಮಲೆನಾಡು ಹಾಗೂ ಪಶ್ಚಿಮ ಘಟ್ಟಗಳ ಎಲ್ಲ ಕಡೆ ಭಾರೀ ಮಳೆಯಾಗುತ್ತಿದೆ. ಹೀಗಾಗಿ ನದಿಗಳು ಹಾಗೂ ಜಲಪಾತಗಳು ತುಂಬಿ ಹರಿಯುತ್ತಿವೆ.
  2. ಜಲಪಾತಗಳ ಬಳಿಗೆ ತೆರಳಬೇಕಿದ್ದರೆ ಎಚ್ಚರಿಕೆಯಿಂದಿರಿ.
  3. ಸೆಲ್ಫಿ ತೆಗೆದುಕೊಳ್ಳುವುದು, ಜಲಪಾತದ ತೀರ ಸಮೀಪಕ್ಕೆ ಹೋಗುವುದು, ನೀರು ಬಿದ್ದು ಜಾರುತ್ತಿರುವ ಕಡೆಗಳಲ್ಲಿ ಕಾಲಿಡುವುದು ಮುಂತಾದ ಹುಚ್ಚಾಟಗಳು ಬೇಡ ಎಂದು ಪೊಲೀಸ್‌ ಇಲಾಖೆ ಹಾಗೂ ಅರಖ್ಯ ಇಲಾಖೆ ಎಚ್ಚರಿಸಿದೆ.

ಇದನ್ನೂ ಓದಿ: Rain News : ಬೀದರ್‌ನಲ್ಲೂ ಭಾರಿ ಮಳೆ; ಉಕ್ಕಿಹರಿದ ಹಳ್ಳದಲ್ಲಿ ಕೊಚ್ಚಿ ಹೋದ ಯುವಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉಡುಪಿ

Karnataka Weather : ಮಳೆಯೊಂದಿಗೆ 30 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ

Rain News : ಇನ್ನೆರಡು ದಿನಗಳು ಹಗುರ ಮಳೆಯೊಂದಿಗೆ ಥಂಡಿ ಗಾಳಿಯು ಬೀಸಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

women enjoying in rain
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ಡಿ. 4-5ರಂದು ಮಳೆಯ ಸಿಂಚನವಾಗಲಿದ್ದು, ಪ್ರತಿ ಗಂಟೆಗೆ 30 ಕಿ.ಮೀ ವೇಗದಲ್ಲಿ ನೆಲಗಾಳಿಯು ಬೀಸಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಿಚುಂಗ್ ಚಂಡಮಾರುತದ ಪರಿಣಾಮದಿಂದಾಗಿ ತಮಿಳುನಾಡಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಭಾಗದ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ (karnataka Weather Forecast) ಸಾಧ್ಯತೆ ಇದೆ.

ಮುಂದಿನ 24 ಗಂಟೆಗಳಲ್ಲಿ ಮಿಚುಂಗ್ ಸೈಕ್ಲೋನ್ ತೀವ್ರಗೊಳ್ಳುವ ನಿರೀಕ್ಷೆ ಇದ್ದು, ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಮಳೆಯಾಗಲಿದೆ.

ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ರಾಯಚೂರಲ್ಲಿ ಮಳೆಯಾಗುವ ನಿರೀಕ್ಷೆ ಇದ್ದು, ಉಳಿದೆಡೆ ಒಣ ಹವೆ ಇರಲಿದೆ. ಕರಾವಳಿಯಲ್ಲಿ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ ಇರಲಿದ್ದು, ಉತ್ತರ ಕನ್ನಡದಲ್ಲಿ ಶುಷ್ಕ ವಾತಾವರಣ ಇರಲಿದೆ.

ಇದನ್ನೂ ಓದಿ: Cocktail finger ring : ಬ್ರೈಡಲ್‌ ಜ್ಯುವೆಲರಿ ಫ್ಯಾಷನ್‌ನಲ್ಲಿ ಎಥ್ನಿಕ್‌ ಕಾಕ್‌ಟೈಲ್‌ ಉಂಗುರಗಳ ಕಲರವ

ಕನಿಷ್ಠ ತಾಪಮಾನ ಏರಿಕೆ

ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರುವುದರಿಂದ ಮುಂದಿನ 48 ಗಂಟೆಯಲ್ಲಿ ಕನಿಷ್ಠ ಉಷ್ಣಾಂಶವು ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದಾಗಿ ಕೆಲವೆಡೆ ಚಳಿಯು ಮೈ ನಡುಗಿಸಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 27 ಡಿ.ಸೆ -18 ಡಿ.ಸೆ
ಮಂಗಳೂರು: 36 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 18 ಡಿ.ಸೆ
ಗದಗ: 33 ಡಿ.ಸೆ – 18ಡಿ.ಸೆ
ಹೊನ್ನಾವರ: 36 ಡಿ.ಸೆ- 23 ಡಿ.ಸೆ
ಕಲಬುರಗಿ: 34 ಡಿ.ಸೆ – 20 ಡಿ.ಸೆ
ಬೆಳಗಾವಿ: 32 ಡಿ.ಸೆ – 18 ಡಿ.ಸೆ
ಕಾರವಾರ: 36 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉಡುಪಿ

Karnataka weather : ಸೈಕ್ಲೋನ್‌ ಎಫೆಕ್ಟ್‌; ನಾಳೆ ಮಳೆ ಜತೆಗೆ ಥಂಡಿ ಗಾಳಿ

Karnataka Weather Forecast : ಮಿಚುಂಗ್‌ ಸೈಕ್ಲೋನ್‌ ಎಫೆಕ್ಟ್‌ನಿಂದಾಗಿ ಮುಂದಿನ 24 ಗಂಟೆಯಲ್ಲಿ ಥಂಡಿ ಗಾಳಿ ಬೀಸಲಿದ್ದು, ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Rain alert
Koo

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಿಚುಂಗ್ ಚಂಡಮಾರುತದ ಪರಿಣಾಮದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಭಾಗದಲ್ಲಿ ಮೋಡ ಕವಿದ ವಾತಾವರಣ (karnataka weather Forecast) ಇರಲಿದೆ. ಮುಂದಿನ 24 ಗಂಟೆಗಳಲ್ಲಿ ಮಿಚುಂಗ್ ಸೈಕ್ಲೋನ್ ತೀವ್ರಗೊಳ್ಳುವ ನಿರೀಕ್ಷೆ ಇದ್ದು ಮಳೆಯಾಗುವ (Rain News) ನಿರೀಕ್ಷೆ ಇದೆ.

ತಮಿಳುನಾಡಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಭಾಗದ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರಲ್ಲಿ ಹಗುರ ಮಳೆಯಾಗಲಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಚದುರಿದಂತೆ ಮಳೆಯಾಗಲಿದೆ.

ಮೇಲ್ಮೈ ಗಾಳಿಯೊಂದಿಗೆ ಮಳೆ ಸಾಥ್‌

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 25 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಳೆ ನಡುವೆಯೂ ತಾಪಮಾನ ಎಚ್ಚರಿಕೆ

ಮುಂದಿನ 48 ಗಂಟೆಯಲ್ಲಿ ಕನಿಷ್ಠ ಉಷ್ಣಾಂಶವು ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ಶನಿವಾರ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಕಡಿಮೆ ಉಷ್ಣಾಂಶ 16.0 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉಡುಪಿ

Karnataka Weather: ಟಿ-20 ಕ್ರಿಕೆಟ್‌ ಪಂದ್ಯದಲ್ಲಿ ಮಳೆಯಾಟ!

Rain News : ರಾಜ್ಯದ ಹಲವೆಡೆ ಸೂರ್ಯ ಮರೆಯಾಗಿ ಮಳೆಯ ಸಿಂಚನವಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಒಣ ಹವೆ (Dry weather) ಇರಲಿದೆ.

VISTARANEWS.COM


on

By

Rain disrupted for two more days
Koo

ಬೆಂಗಳೂರು: ಕರಾವಳಿ, ದಕ್ಷಿಣ ಒಳನಾಡು ಹಾಗೂ ಮಲೆನಾಡಲ್ಲಿ (Rain News) ಹಗುರದಿಂದ ಸಾಧಾರಣ ಮಳೆಯಾಗುವ (Karnataka Weather Forecast) ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಶುಷ್ಕ ವಾತಾವರಣ ಇರಲಿದೆ. ಇತ್ತ ಬೆಂಗಳೂರಲ್ಲಿ ಮಳೆ ಸೂಚನೆ ಇದ್ದು ಟಿ-20 ಕ್ರಿಕೆಟ್‌ ಪಂದ್ಯಕ್ಕೆ ಮಳೆಯಡ್ಡಿಯಾಗುವ ಸಾಧ್ಯತೆ ಇದೆ.

ಮೈಸೂರು ಟು ಮಂಡ್ಯ ಮಳೆ

ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಇದನ್ನೂ ಓದಿ: Velvet Lehenga Fashion: ವಿಂಟರ್‌ ವೆಡ್ಡಿಂಗ್‌ ಫ್ಯಾಷನ್‌ನಲ್ಲಿ ವೆಲ್ವೆಟ್‌ ಲೆಹೆಂಗಾ ಜಾದೂ

ಸಣ್ಣ ಪ್ರಮಾಣದಲ್ಲಿ ವರ್ಷಧಾರೆ

ಮಲೆನಾಡಿನ ಹಾಸನ ಮತ್ತು ಕೊಡಗಿನಲ್ಲಿ ಹಗುರದಿಂದ ಕೂಡಿದ ಮಳೆ ಇರಲಿದ್ದು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಸಣ್ಣದಾಗಿ ಮಳೆ ಸುರಿಯಲಿದೆ. ಉತ್ತರ ಕನ್ನಡದಲ್ಲೂ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.

ಬೆಂಗಳೂರಲ್ಲಿ ಕ್ರಿಕೆಟ್‌ಗೆ ಮಳೆ ಅಡ್ಡಿ

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ಮಳೆಯಾಗುವ ಸಾಧ್ಯತೆ ಇದೆ. ಭಾರತ -ಶ್ರೀಲಂಕಾ ಟಿ-20 ಪಂದ್ಯವಿದ್ದು, ಮಳೆಯು ಅಡ್ಡಿಯಾಗುವ ಆತಂಕ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 28 ಡಿ.ಸೆ -18 ಡಿ.ಸೆ
ಮಂಗಳೂರು: 36 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 18 ಡಿ.ಸೆ
ಗದಗ: 33 ಡಿ.ಸೆ – 18ಡಿ.ಸೆ
ಹೊನ್ನಾವರ: 36 ಡಿ.ಸೆ- 24 ಡಿ.ಸೆ
ಕಲಬುರಗಿ: 34 ಡಿ.ಸೆ – 20 ಡಿ.ಸೆ
ಬೆಳಗಾವಿ: 32 ಡಿ.ಸೆ – 18 ಡಿ.ಸೆ
ಕಾರವಾರ: 36 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉಡುಪಿ

Karnataka Weather : ದಿನ ಪೂರ್ತಿ ಮರೆಯಾಗುವ ಸೂರ್ಯ; ಸಂಜೆಗೆ ಮಳೆಯ ಸಿಂಚನ

Rain News : ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ (Karnataka Weather Forecast) ಸೂಚನೆ ಇದ್ದರೆ, ಉತ್ತರ ಒಳನಾಡಿನಲ್ಲಿ ಒಣ ಹವೆ (Dry weather) ಇರಲಿದೆ.

VISTARANEWS.COM


on

By

Rain alert karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮಂಕಾಗಿದ್ದ ಮಳೆಯು ಕರಾವಳಿಯಲ್ಲಿ ಮತ್ತೆ ಸಕ್ರಿಯಗೊಳ್ಳುತ್ತಿದೆ. ಉತ್ತರ ಒಳನಾಡಿನಲ್ಲಿ ಮಳೆಯು (Rain News) ಮಾಯವಾಗಿದ್ದು, ಒಣ ಹವೆ ಇರಲಿದೆ. ದಕ್ಷಿಣ ಒಳನಾಡು ಹಾಗೂ ಮಲೆನಾಡಲ್ಲಿ ಮಳೆಯು (Karnataka Weather Forecast) ಮುಂದುವರಿಯಲಿದೆ. ಡಿ.3-4ರಂದು ರಾಜ್ಯದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಮಲೆನಾಡಿನ ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗಲಿದ್ದು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಸಣ್ಣದಾಗಿ ಮಳೆ ಸುರಿಯಲಿದೆ. ಉತ್ತರ ಕನ್ನಡದಲ್ಲೂ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.

ಇದನ್ನೂ ಓದಿ: Star winter Fashion: ಸೀಸನ್‌ಗೆ ತಕ್ಕಂತೆ ಬದಲಾಯ್ತು ನಟಿ ಶಾನ್ವಿ ಶ್ರೀವಾತ್ಸವ್ ವಿಂಟರ್‌ ಫ್ಯಾಷನ್‌

ಬೆಂಗಳೂರಲ್ಲಿ ಘಳಿಗೆಗೊಂದು ವಾತಾವರಣ

ಮುಂದಿನ 24 ಗಂಟೆಯಲ್ಲಿ ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಮ್ಮೆ ಸೂರ್ಯ ದರ್ಶನ ನೀಡಲಿದ್ದಾನೆ. ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಇರಲಿದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಬೆಳಗಾವಿಯಲ್ಲಿ ಮಳೆಯ ಸಿಂಚನ

ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ. ಬೆಳಗಾವಿಯ ಗೋಕಾಕ್‌ನಲ್ಲಿ 3 ಸೆಂ.ಮೀ ಹಾಗೂ ಚಿಕ್ಕೋಡಿ, ಸಂಕೇಶ್ವರ, ಹಾಗೂ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಕಡಿಮೆ ಉಷ್ಣಾಂಶ 15.2 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading
Advertisement
lokayukta raid in channakeshava
ಕರ್ನಾಟಕ3 mins ago

Lokayukta Raid: ರಾಜ್ಯದೆಲ್ಲೆಡೆ ಲೋಕಾಯುಕ್ತ ದಾಳಿ, ಅಧಿಕಾರಿಗಳಿಗೆ ಶಾಕ್‌, ಬೆಸ್ಕಾಂ ಇಇ ಮನೆಯಲ್ಲಿ ಕೋಟಿ ಕೋಟಿ ಪತ್ತೆ

David Warner
ಕ್ರಿಕೆಟ್12 mins ago

David Warner: ಮೋಸಗಾರನಿಗೆ ವಿದಾಯ ಪಂದ್ಯದ ಅಗತ್ಯವಿಲ್ಲ; ಮಿಚೆಲ್​ ಜಾನ್ಸನ್

sadghuru with students
ಅಂಕಣ56 mins ago

Prerane Column : ವಿದ್ಯಾಭ್ಯಾಸ ಎಂದರೆ ದುಡ್ಡು ಮಾಡುವ ದಂಧೆಯ ಅಡಿಪಾಯವೇ?

ಕರ್ನಾಟಕ1 hour ago

ವಿಜಯಪುರ ಗೋದಾಮು ದುರಂತ: ಮೃತರ ಸಂಖ್ಯೆ 7ಕ್ಕೆ, ಇನ್ನೂ ನಾಲ್ಕು ಶವ ಸಿಕ್ಕಿಲ್ಲ

cm siddaramaih respect captain pranjal
ಕರ್ನಾಟಕ2 hours ago

CM Siddaramaiah: ಹುತಾತ್ಮ ಯೋಧ ಪ್ರಾಂಜಲ್‌ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 50 ಲಕ್ಷ ರೂ. ಪರಿಹಾರ

Canara Bank Ammembala Subbarao Pai
ಅಂಕಣ2 hours ago

Raja Marga Column: ಹಿಡಿಯಕ್ಕಿ ಸಂಗ್ರಹಿಸಿ ಕೆನರಾ ಬ್ಯಾಂಕ್ ಕಟ್ಟಿದ ಅಮ್ಮೆಂಬಳ ಸುಬ್ಬರಾವ್ ಪೈ

CBSE Board Exam 2024 and many more changes proposed implemented in this year
ದೇಶ2 hours ago

ಸಿಬಿಎಸ್‌ಇ ಬೋರ್ಡ್‌ ಎಕ್ಸಾಂಗೆ ಘೋಷಿಸಿದ ಪ್ರಮುಖ ಬದಲಾವಣೆಗಳೇನು?

Saurav Gangly
ಕ್ರಿಕೆಟ್2 hours ago

Virat Kohli : ಕೊಹ್ಲಿಯನ್ನು ನಾಯಕತ್ವದಿಂದ ಇಳಿಸಿದ್ದಕ್ಕೆ ಕಾರಣ ತಿಳಿಸಿದ ಸೌರವ್​ ಗಂಗೂಲಿ

Physical Education Teacher
ಉದ್ಯೋಗ2 hours ago

Teachers Recruitment : ಪ್ರಾಥಮಿಕ ಶಾಲೆಯಲ್ಲಿ 2120 ದೈಹಿಕ ಶಿಕ್ಷಕರ ಹುದ್ದೆ ಭರ್ತಿಗೆ ತೀರ್ಮಾನ

sufi
ಅಂಕಣ2 hours ago

ನನ್ನ ದೇಶ ನನ್ನ ದನಿ ಅಂಕಣ: ಸಯ್ಯಿದ್ ರಿಜ್ವಿ ಸ್ವತಃ ಹೇಳಿದ ಸೂಫಿಗಳ ನಿಜ ಕಥನ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ4 hours ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ1 day ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ2 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ2 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ3 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ4 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ4 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ5 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ5 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

ಟ್ರೆಂಡಿಂಗ್‌