Site icon Vistara News

Rain News | ಇನ್ನೂ ಎರಡು ದಿನ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ, ಮೀನುಗಾರರಿಗೆ ಎಚ್ಚರಿಕೆ

doni

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮುಂದಿನ ೨೪ ಗಂಟೆಗಳ ಕಾಲ ಬಹುತೇಕ ಎಲ್ಲ ಕಡೆ ಗುಡುಗು ಮಿಂಚಿನೊಂದಿಗೆ ಮಳೆ ಸುರಿಯಲಿದ್ದರೆ, ನಂತರದ ೨೪ ಗಂಟೆಗಳ ಕಾಲ ಕೆಲವು ಜಿಲ್ಲೆಗಳಿಗೆ ಸೀಮಿತವಾಗಿ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೊಲ್ಲೂರು, ಭಾಗಮಂಡಲದಲ್ಲಿ ಗರಿಷ್ಠ ಮಳೆ
ಭಾನುವಾರವೂ ರಾಜ್ಯಾದ್ಯಂತ ಭಾರಿ ಮಳೆ ಸುರಿದಿದ್ದು ಕೊಲ್ಲೂರು ಮತ್ತು ಭಾಗಮಂಡಲದಲ್ಲಿ ಗರಿಷ್ಠ ಅಂದರೆ ೧೬ ಸೆಂಟಿ ಮೀಟರ್‌ ಮಳೆ ಬಿದ್ದಿದೆ. ಕಮ್ಮರಡಿ, ಕ್ಯಾಸಲ್ ರಾಕ್, ಸಿದ್ದಾಪುರ, ಉಡುಪಿ, ಮೂರ್ನಾಡುಗಳಲ್ಲಿ ತಲಾ 11 ಸೆ.ಮೀ, ನಿಲ್ಕುಂದ, ಜಿಕೋಟ, ಮಂಗಳೂರು ವಿಮಾನ ನಿಲ್ದಾಣ, ಸೋಮವಾರಪೇಟೆಗಳಲ್ಲಿ ತಲಾ 10 ಸೆ.ಮೀ. ಮಳೆ ದಾಖಲಾಗಿದೆ.

ಭಾರಿ ಮಳೆ ಮುನ್ನೆಚ್ಚರಿಕೆ
ಮುಂದಿನ 24 ಘಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಹಾಗು ಉತ್ತರ ಒಳನಾಡಿನ ಬೀದರ್, ಕಲ್ಬುರ್ಗಿ , ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ, ಕಲ್ಬುರ್ಗಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ಶಿವಮೊಗ್ಗ, ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ
ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಘಂಟೆಗೆ 45-55 ಕಿ.ಮೀ. ಇರಲಿದ್ದು, 65 ಕಿ.ಮೀ. ವರೆಗೂ ತಲುಪುವ ಸಾಧ್ಯತೆ ಇದೆ. ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ವಾತಾವರಣ ಹೇಗಿರಲಿದೆ?
ಆಗಸ್ಟ್‌ ೧೧ರ ಬೆಳಗ್ಗೆವರೆಗಿನ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಕೆಲವು ಸಲ ಮಳೆಯಾಗುವ ಸಾಧ್ಯತೆ ಇದ್ದು, ಒಮ್ಮೊಮ್ಮೆ ಭಾರಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಇದನ್ನೂ ಓದಿ | Rain News | ಮಳೆ ಅಬ್ಬರಕ್ಕೆ ಅಪಘಾತ ಸರಮಾಲೆ, ಕೊಟ್ಟಿಗೆಹಾರ ಬಳಿ 48 ಗಂಟೆಯಲ್ಲಿ‌ 10 ಆ್ಯಕ್ಸಿಡೆಂಟ್

Exit mobile version