Site icon Vistara News

Rain News | ಕಾಫಿನಾಡಿನಲ್ಲಿ ಮಳೆ; ಜಪಾವತಿ ನದಿ ಅಬ್ಬರಕ್ಕೆ ಕೊಚ್ಚಿ ಹೋದ ಕಾಫಿ, ಅಡಕೆ ತೋಟ

Rain News

ಚಿಕ್ಕಮಗಳೂರು/ಹುಬ್ಬಳ್ಳಿ: ಮಲೆನಾಡು ಭಾಗದಲ್ಲಿ ಮಳೆಯ (Rain News) ಆರ್ಭಟ ಮುಂದುವರಿದಿದೆ. ಮೂಡಿಗೆರೆ ತಾಲೂಕಿನ ಹೆಗ್ಗರವಳ್ಳಿಯಲ್ಲಿ ಜಪಾವತಿ ನದಿ ಅಬ್ಬರಕ್ಕೆ ಸುಮಾರು ಒಂದು ಎಕರೆ ಕಾಫಿ, ಅಡಕೆ ತೋಟ ಕೊಚ್ಚಿಹೋಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಹೆಗ್ಗರವಳ್ಳಿ ಗ್ರಾಮದ ಸುಪ್ರಿಮ್ ಎಂಬುವವರ ತೋಟ ನಾಶವಾಗಿದೆ. ತೋಟದ ಸ್ಥಿತಿ ಕಂಡು ಸುಪ್ರಿಮ್ ಕುಟುಂಬ ಕಂಗಾಲಾಗಿದ್ದು, ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಜನಜೀವನ ಅಸ್ತವ್ಯಸ್ತ
ಹುಬ್ಬಳ್ಳಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಗಣೇಶ ನಗರದಲ್ಲಿ ಚರಂಡಿ ನೀರು ರಸ್ತೆಗೆ ನುಗ್ಗಿದ್ದರಿಂದ ರಸ್ತೆ ಕೆಸರು ಗದ್ದೆಯಂತಾಗಿದ್ದು, ಓಡಾಡಲು ಜನ ಪರಡಾಡುತ್ತಿದ್ದಾರೆ. ಸಮರ್ಪಕ ರಸ್ತೆ ಮಾಡುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳನ್ನು ಸ್ಥಳೀಯರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ | Rain News | ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಘಟಪ್ರಭಾ; 69 ಗ್ರಾಮಗಳಿಗೆ ಜಲದಿಗ್ಬಂಧನ ಆತಂಕ!

Exit mobile version