Site icon Vistara News

Rain News : ಮಳೆ ನೀರಿನಿಂದ ಭರ್ತಿಯಾಗಿದ್ದ ತಗ್ಗು ಗುಂಡಿಗೆ ಬಿದ್ದು ಬಾಲಕರಿಬ್ಬರ ದುರ್ಮರಣ

boys dead in kalaburagi

ಕಲಬುರಗಿ: ತಗ್ಗು ಗುಂಡಿಯಲ್ಲಿ‌ ನಿಂತಿದ್ದ ಮಳೆ‌ ನೀರಲ್ಲಿ (Rain News) ಬಿದ್ದು ಬಾಲಕರಿಬ್ಬರು ದುರ್ಮರಣ ಹೊಂದಿದ್ದಾರೆ. ಅಭಿ (11), ಅಜಯ್ (12) ಮೃತ ದುರ್ದೈವಿಗಳು. ಕಲಬುರಗಿ (Kalaburagi News) ‌ನಗರದ ದುಬೈ ಕಾಲೋನಿಯ ಕಲಬುರಗಿ ‌ಕಲ್ಯಾಣ ಮಂಟಪದ ಬಳಿ ಈ ದುರ್ಘಟನೆ ನಡೆದಿದೆ.

ಅಭಿ ಹಾಗೂ ಅಜಯ್‌ ಮೃತ ದುರ್ದೈವಿಗಳು

ಮಂಟಪದ ಬಳಿ ಓವರ್‌ಹೆಡ್ ನೀರಿನ ಟ್ಯಾಂಕ್ ನಿರ್ಮಿಸಲಾಗುತ್ತಿತ್ತು. ಇದಕ್ಕಾಗಿ ನೀರಿನ ಟ್ಯಾಂಕ್ ಸುತ್ತಮುತ್ತ 15 ಅಡಿ ಗುಂಡಿ ತೋಡಲಾಗಿತ್ತು. ಸತತ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ತಗ್ಗುಗುಂಡಿ ಸಂಪೂರ್ಣ ಭರ್ತಿಯಾಗಿತ್ತು. ಇದರ ಅರಿವು ಇರದ ಅಭಿ ಹಾಗೂ ಅಜಯ್‌ ಗುಂಡಿ ಬಳಿ ಬಂದಿದ್ದಾರೆ. ಈ ವೇಳೆ ಕಾಲು ಜಾರಿ ಗುಂಡಿಗೆ ಬಿದ್ದಿರಬಹುದೆಂದು ಅಂದಾಜಿಸಲಾಗಿದೆ.

ಶನಿವಾರ ಮಧ್ಯಾಹ್ನದಿಂದಲೇ ಈ ಇಬ್ಬರು ಬಾಲಕರು ನಾಪತ್ತೆ ಆಗಿದ್ದರು. ಪೋಷಕರು ರಾತ್ರಿಯಿಡಿ ಹುಡುಕಾಡಿದರೂ ಬಾಲಕರ ಸುಳಿವು ಮಾತ್ರ ಸಿಕ್ಕಿರಲಿಲ್ಲ. ಆದರೆ ಭಾನುವಾರ ಬೆಳಗ್ಗೆ ಗುಂಡಿಯಲ್ಲಿ ಓರ್ವ ಬಾಲಕನ ಮೃತದೇಹವು ಪತ್ತೆ ಆಗಿದ್ದು ವಿಚಾರ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಚೌಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮತ್ತೊಬ್ಬನ ಬಾಲಕನ ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version