Rain News: ಚಿತ್ತಾಪುರದಲ್ಲಿ ಸಿಡಿಲು ಬಡಿದು ಇಬ್ಬರ ದುರ್ಮರಣ; ಹೊತ್ತಿ ಉರಿದ ತೆಂಗಿನ ಮರ - Vistara News

ಕರ್ನಾಟಕ

Rain News: ಚಿತ್ತಾಪುರದಲ್ಲಿ ಸಿಡಿಲು ಬಡಿದು ಇಬ್ಬರ ದುರ್ಮರಣ; ಹೊತ್ತಿ ಉರಿದ ತೆಂಗಿನ ಮರ

Rain News: ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ಮಳೆ ಸುರಿಯುತ್ತಿದ್ದಾಗ ಮರದಡಿ ನಿಂತಿದ್ದ ಇಬ್ಬರಿಗೆ ಸಿಡಿಲು ಬಡಿದಿದೆ.

VISTARANEWS.COM


on

Rain News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಕಲಬುರಗಿ: ಜಿಲ್ಲೆ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ಸಿಡಿಲು ಬಡಿದು (Lightning strike) ಇಬ್ಬರು ಮೃತಪಟ್ಟಿದ್ದಾರೆ. ವಾಡಿ ಪಟ್ಟಣದ ರೈಲ್ವೆ ಕಾಲೋನಿಯ ಏಕನಾಥ್ ವಾಘಮೂಡೆ (55), ಸತೀಶ್ ಶಳಕೆ (40) ಮೃತರು. ಜಮೀನಿನಿಂದ ಮನೆಗೆ ಹೋಗುತ್ತಿದ್ದಾಗ ಗುಡುಗು ಸಿಡಿಲು ಸಹಿತ ಮಳೆ (Rain News) ಆರಂಭವಾಗಿದೆ. ಈ ವೇಳೆ ರಕ್ಷಣೆಗಾಗಿ ಮರದಡಿ ನಿಂತಿದ್ದಾಗ ಸಿಡಿಲು ಬಡಿದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅರ್ಧ ಗಂಟೆಗೂ ಹೆಚ್ಚುಕಾಲ ಹೊತ್ತಿ ಉರಿದ ತೆಂಗಿನ ಮರ

ರಾಯಚೂರು: ಶಕ್ತಿನಗರದ ದತ್ತಾತ್ರೇಯ ದೇವಸ್ಥಾನದ ಆವರಣದದಲ್ಲಿ ಸಿಡಿಲು ಬಡಿದಿ ತೆಂಗಿನ ಮರ ಹೊತ್ತಿ ಉರಿದಿದೆ. ತೆಂಗಿನ ಮರಕ್ಕೆ ನೇರವಾಗಿ ಸಿಡಿಲು ಬಡಿದ ಕಾರಣ ಮಳೆಯ ನಡುವೆಯೂ ಅರ್ಧ ಗಂಟೆಗೂ ಹೆಚ್ಚುಕಾಲ ತೆಂಗಿನ ಮರ ಹೊತ್ತಿ ಉರಿಯಿತು.

ಕೆರೆಯಂತಾದ ಬಡಾವಣೆ

ಯಾದಗಿರಿ: ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಹಿನ್ನೆಲೆ ಯಾದಗಿರಿ ನಗರದ ಹೊಸಹಳ್ಳಿ ಕ್ರಾಸ್ ಬಳಿಯ ಬಡಾವಣೆಯೊಂದು ಕೆರೆಯಂತಾಗಿದೆ. ಮಳೆ‌ ನಿಂತ ಮೇಲೂ ಮನೆಯಿಂದ ಹೊರ ಬರಲಾಗದೆ ನಿವಾಸಿಗಳ ಪರದಾಡುತ್ತಿದ್ದಾರೆ. ಸತತ ಮೂರು ಗಂಟೆಗಳ ಕಾಲ ಸುರಿದ ಮಳೆಯಿಂದ ರಸ್ತೆ ಮೇಲೂ ನೀರು ಆವರಿಸಿಕೊಂಡಿದ್ದರಿಂದ ವಾಹನ ಸವಾರರ ಪರದಾಡುತ್ತಿದ್ದಾರೆ.

ರಸ್ತೆ ಮೇಲೆ ಉರುಳಿ ಬಿದ್ದ ಬೃಹತ್ ಮರ

ರಾಯಚೂರು: ಬಿರುಗಾಳಿ ಸಹಿತ ಮಳೆಗೆ ರಸ್ತೆಗೆ ಬೃಹತ್ ಮರ ಉರುಳಿ ಬಿದ್ದ ಘಟನೆ ರಾಯಚೂರು ನಗರದ ಆರ್.ಬಿ. ರಸ್ತೆಯಲ್ಲಿ ನಡೆದಿದೆ. ರಸ್ತೆ ಬದಿ ಇದ್ದ ತಳ್ಳುವ ಗಾಡಿ ಮೇಲೆ ಮರ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೃಹತ್ ಮರದ ಜತೆ ಕೆಲ ವಿದ್ಯುತ್ ಕಂಬಗಳು ನೆಲಕಚ್ಚಿವೆ. ರಸ್ತೆಗೆ ಮರ ಉರುಳಿ ಬಿದ್ದಿದ್ದರಿಂದ ಸಂಚಾರ ಅಸ್ತವ್ಯಸ್ತವಾಗಿದೆ.

ಇದನ್ನೂ ಓದಿ | Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಮೊಬೈಲ್ ಟವರ್ ರಾಡ್ ಕಳಚಿ ಬಿದ್ದು ವಿದ್ಯಾರ್ಥಿನಿಗೆ ಗಾಯ

ಕಲಬುರಗಿ: ಮೊಬೈಲ್ ಟವರ್ ರಾಡ್ ಕಳಚಿ ಬಿದ್ದು ವಿದ್ಯಾರ್ಥಿನಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ನಡೆದಿದೆ. ಸುಮಾ ಗಾಯಗೊಂಡ ಯುವತಿ. ಈಕೆಯನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾಡ್ಲಾಪುರ ಗ್ರಾಮದ ಮನೆಯ ಮುಂದೆ ನಿಂತಿದ್ದಾಗ, 180 ಅಡಿ ಎತ್ತರದ ಬಿಎಸ್‌ಎನ್‌ಎಲ್ ಟವರ್‌ನ ರಾಡ್‌ ಕಳಚಿ ಬಿದ್ದಿದ್ದರಿಂದ ವಿದ್ಯಾರ್ಥಿನಿ ಗಾಯಗೊಂಡಿದ್ದಾಳೆ. ಕಳೆದ ಹಲವು ವರ್ಷಗಳಿಂದ ಕಾರ್ಯ ಸ್ಥಗಿತಗೊಂಡಿರುವ ಟವರ್‌ನ ರಾಡುಗಳು ಸಡಿಲಗೊಂಡಿದ್ದು ನೇತಾಡುತ್ತಿವೆ. ಸಣ್ಣ ಗಾಳಿಗೂ ಸಹ ಯಾವುದೇ ಕ್ಷಣದಲ್ಲಿ ರಾಡ್‌ಗಳು ಬಿದ್ದು ಜನರ ಪ್ರಾಣಕ್ಕೆ ಕುತ್ತು ತರುವ ಸಾಧ್ಯತೆ ಇದೆ.

ಇದನ್ನೂ ಓದಿ | Monsoon 2024: ಮೇ 31 ರಿಂದ ಕರ್ನಾಟಕದಲ್ಲಿ ಶುರುವಾಗುತ್ತಾ ಮುಂಗಾರು ಮಳೆ ದರ್ಬಾರ್‌!

ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ನ ಹಳೇ ಟವರ್ ತೆರವು ಮಾಡಿ ಎಂದು ಸ್ಥಳೀಯರು ಹಲವು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಹೀಗಾಗಿ ಗಾಳಿ ಮಳೆ ಸಮಯದಲ್ಲಿ ಜನರು ಟವರ್‌ ಬಳಿ ಆತಂಕದಿಂದ ಓಡಾಡುವಂತಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿದ NIA ನ್ಯಾಯಾಲಯ

VISTARANEWS.COM


on

ಮಂಗಳೂರು ನಗರವನ್ನು ಬೆಚ್ಚಿಬೀಳಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ಗೆ ಬೆಂಗಳೂರಿನ ಎನ್‌ಐಎ (NIA) ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಈ ಸ್ಫೋಟ ಸಂಭವಿಸಿತ್ತು. ಆರೋಪಿ ಶಾರಿಕ್ ಸ್ಫೋಟಕ ತುಂಬಿದ್ದ ಕುಕ್ಕರ್ ಅನ್ನು ಸಾಗಿಸುತ್ತಿದ್ದಾಗಲೇ ಅದು ಆಕಸ್ಮಿಕವಾಗಿ ಸ್ಫೋಟಗೊಂಡಿದ್ದರಿಂದ, ನಗರದಲ್ಲಿ ಸಂಭವಿಸಬಹುದಾಗಿದ್ದ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿತ್ತು. ಈ ಘಟನೆಯಲ್ಲಿ ಶಾರಿಕ್ ಮತ್ತು ಆಟೋ ಚಾಲಕ ಇಬ್ಬರೂ ಗಾಯಗೊಂಡಿದ್ದರು.

ದೇಶದ ಭದ್ರತೆಗೆ ಧಕ್ಕೆ ತರುವ ಮತ್ತು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುವ ಉದ್ದೇಶದಿಂದ ಈ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಲಾಗಿತ್ತು. ಪ್ರಕರಣದ ಗಾಂಭೀರ್ಯವನ್ನು ಪರಿಗಣಿಸಿ ಕೇಂದ್ರ ಸರ್ಕಾರವು ಇದರ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಿತ್ತು. ತನಿಖೆಯ ವೇಳೆ ಶಾರಿಕ್ ನಿಷೇಧಿತ ಉಗ್ರಗಾಮಿ ಸಂಘಟನೆಗಳಿಂದ ಪ್ರೇರಿತನಾಗಿದ್ದದ್ದು ಮತ್ತು ಡಾರ್ಕ್ ವೆಬ್ ಮೂಲಕ ವಿದೇಶಿ ಹ್ಯಾಂಡ್ಲರ್‌ಗಳ ಸಂಪರ್ಕದಲ್ಲಿದ್ದು ಬಾಂಬ್ ತಯಾರಿಕಾ ತರಬೇತಿ ಪಡೆದಿದ್ದ ಎಂಬ ಆಘಾತಕಾರಿ ಸತ್ಯಗಳು ಹೊರಬಂದಿದ್ದವು.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು, ಎನ್‌ಐಎ ಸಲ್ಲಿಸಿದ್ದ ಸಾಕ್ಷ್ಯಧಾರಗಳನ್ನು ಪುರಸ್ಕರಿಸಿ ಶಾರಿಕ್ ದೋಷಿ ಎಂದು ತೀರ್ಪು ನೀಡಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಸೇರಿದಂತೆ ವಿವಿಧ ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ಆತನಿಗೆ ಶಿಕ್ಷೆ ಪ್ರಕಟಿಸಲಾಗಿದೆ. ಈ ತೀರ್ಪು ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗುವವರಿಗೆ ಕಠಿಣ ಸಂದೇಶ ರವಾನಿಸಿದ್ದು, ಸಂತ್ರಸ್ತ ಆಟೋ ಚಾಲಕ ಮತ್ತು ಸಾರ್ವಜನಿಕರಿಗೆ ನ್ಯಾಯ ಸಿಕ್ಕಂತಾಗಿದೆ.

Continue Reading

Latest

ಹರಿಹರ ಪೀಠದಲ್ಲಿ ಲೆಕ್ಕ ಸಮರ: ವಚನಾನಂದ ಶ್ರೀ, ಟ್ರಸ್ಟಿಗಳ ನಡುವೆ ಆರೋಪ-ಪ್ರತ್ಯಾರೋಪ.

VISTARANEWS.COM


on

ಹರಿಹರದ ಪಂಚಮಸಾಲಿ ಮಠದಲ್ಲಿ ದಶಕಗಳಿಂದ ಇದ್ದ ಭಿನ್ನಾಭಿಪ್ರಾಯ ಈಗ ಬಹಿರಂಗ ಸಂಘರ್ಷಕ್ಕೆ ತಿರುಗಿದೆ. ಮಠದ ಆಸ್ತಿ, ಭಕ್ತರ ದೇಣಿಗೆ ಮತ್ತು ಸರ್ಕಾರದ ಅನುದಾನದ ಲೆಕ್ಕಾಚಾರದ ವಿಚಾರವಾಗಿ ವಚನಾನಂದ ಸ್ವಾಮೀಜಿ ಹಾಗೂ ಮಠದ ಟ್ರಸ್ಟಿಗಳ ನಡುವೆ ತೀವ್ರ ಜಟಾಪಟಿ ಆರಂಭವಾಗಿದೆ. ಸೋಮವಾರ ಮಠದ ಆವರಣದಲ್ಲಿ ಉಭಯ ಬಣಗಳ ಬೆಂಬಲಿಗರು ಮುಖಾಮುಖಿಯಾಗಿದ್ದರಿಂದ ಪರಿಸ್ಥಿತಿ ಉದ್ವಿಗ್ನಗೊಂಡು, ಪೊಲೀಸರು ಬಿಗಿ ಬಂದೋಬಸ್ತ್ ಮಾಡುವಂತಾಯಿತು.

ಈ ವಿವಾದದ ಕೇಂದ್ರಬಿಂದು ಸರ್ಕಾರದ 10 ಕೋಟಿ ರೂಪಾಯಿ ಅನುದಾನ. ಮಠದಲ್ಲಿ ವಸತಿಗೃಹ ಮತ್ತು ಹಾಸ್ಟೆಲ್ ನಿರ್ಮಾಣಕ್ಕಾಗಿ ಬಂದಿದ್ದ ಈ ಹಣದಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ವಚನಾನಂದ ಶ್ರೀಗಳು ಆರೋಪಿಸಿದ್ದಾರೆ. ಟ್ರಸ್ಟಿಗಳು ನಕಲಿ ಸಹಿ ಮಾಡಿ ಹಣ ಬಿಡುಗಡೆ ಮಾಡಿಸಿಕೊಂಡಿದ್ದಾರೆ, ಆದರೆ ಕಟ್ಟಡಗಳೇ ನಿರ್ಮಾಣವಾಗಿಲ್ಲ ಎಂಬುದು ಶ್ರೀಗಳ ವಾದ. ಇದಕ್ಕೆ ಪ್ರತಿಯಾಗಿ ಟ್ರಸ್ಟಿಗಳು, “ನಾವು ಯಾವುದೇ ತಪ್ಪು ಮಾಡಿಲ್ಲ, ಎಲ್ಲವೂ ಪಾರದರ್ಶಕವಾಗಿದೆ” ಎಂದು ಹೇಳುತ್ತಾ 2008 ರಿಂದ 2026ರವರೆಗಿನ ಲೆಕ್ಕಪತ್ರದ ದಾಖಲೆಗಳೊಂದಿಗೆ ಮಠಕ್ಕೆ ಆಗಮಿಸಿ ಶ್ರೀಗಳ ವಿರುದ್ಧವೇ ಹರಿಹಾಯ್ದಿದ್ದಾರೆ.

ಮಠದ ಆವರಣದಲ್ಲಿ ನಡೆದ ಈ ಹೈಡ್ರಾಮಾದಲ್ಲಿ ಟ್ರಸ್ಟಿಗಳು ಶ್ರೀಗಳ ಉಚ್ಚಾಟನೆಗೆ ಪಟ್ಟು ಹಿಡಿದರೆ, ಶ್ರೀಗಳು ಮಾತ್ರ ತಾವು ಮಠ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ಮಠದಲ್ಲಿ ನಡೆದಿರುವ ಲೂಟಿಯ ಬಗ್ಗೆ ಪೂರ್ಣ ತನಿಖೆಯಾಗಲಿ” ಎಂದು ಸ್ವಾಮೀಜಿ ಪಟ್ಟು ಹಿಡಿದು ಕುಳಿತಿದ್ದಾರೆ. ಭಕ್ತರ ಆಸ್ತಿಯಾಗಿರುವ ಮಠದಲ್ಲಿ ಈ ರೀತಿ ಲೆಕ್ಕದ ವಿಚಾರವಾಗಿ ಹಗ್ಗಜಗ್ಗಾಟ ನಡೆಯುತ್ತಿರುವುದು ಈಗ ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ

Continue Reading

Latest

ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ ಸಾಧ್ಯತೆ: ಮೇ 1ರಿಂದ ಬದಲಾಗಲಿವೆ ಎಲ್‌ಪಿಜಿ ನಿಯಮಗಳು

VISTARANEWS.COM


on

ದೇಶದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಗಳು ಶೀಘ್ರದಲ್ಲೇ ಏರಿಕೆಯಾಗುವ ಸಾಧ್ಯತೆಯಿದೆ. ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಮೇ 1ರಂದು ತೈಲ ಕಂಪನಿಗಳು ಹೊಸ ದರಗಳನ್ನು ಪ್ರಕಟಿಸಲಿವೆ. ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ನಂತರ ಪೆಟ್ರೋಲ್, ಡೀಸೆಲ್ ಜೊತೆಗೆ ಗ್ಯಾಸ್ ಬೆಲೆಯೂ ಗಗನಕ್ಕೇರುವ ಮುನ್ಸೂಚನೆ ಸಿಕ್ಕಿದೆ. ಈ ಬೆಲೆ ಏರಿಕೆಯು ಸಾಮಾನ್ಯ ಜನರ ಮನೆ ಬಜೆಟ್ ಮೇಲೆ ನೇರ ಪರಿಣಾಮ ಬೀರಲಿದೆ.

ಬೆಲೆ ಏರಿಕೆಯ ಜೊತೆಗೆ ಸರ್ಕಾರವು ಹೊಸ ಎಲ್‌ಪಿಜಿ ಸಂಪರ್ಕ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಈಗ ಇರುವ ಗ್ರಾಹಕರಿಗೆ ಸಮರ್ಪಕವಾಗಿ ಗ್ಯಾಸ್ ಪೂರೈಸಲು ಪೆಟ್ರೋಲಿಯಂ ಸಚಿವಾಲಯ ಈ ನಿರ್ಧಾರ ಕೈಗೊಂಡಿದೆ. ಅಲ್ಲದೆ, ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿಯೂ ಮಹತ್ವದ ಬದಲಾವಣೆ ಮಾಡಲಾಗಿದ್ದು, ಇನ್ನು ಮುಂದೆ ನಗರ ಪ್ರದೇಶದಲ್ಲಿ 25 ದಿನ ಮತ್ತು ಗ್ರಾಮೀಣ ಪ್ರದೇಶದಲ್ಲಿ 45 ದಿನಗಳ ಅಂತರವಿದ್ದರೆ ಮಾತ್ರ ಮರು ಬುಕಿಂಗ್ (Refilling) ಮಾಡಲು ಸಾಧ್ಯವಾಗುತ್ತದೆ. ಇದರಿಂದಾಗಿ ಬೇಕಾಬಿಟ್ಟಿ ಗ್ಯಾಸ್ ಬುಕ್ ಮಾಡುವುದಕ್ಕೆ ಬ್ರೇಕ್ ಬೀಳಲಿದೆ.

ಗ್ಯಾಸ್ ವಿತರಣೆಯಲ್ಲಿ ಪಾರದರ್ಶಕತೆ ತರಲು ‘ಒಟಿಪಿ’ (OTP) ಆಧಾರಿತ ವಿತರಣಾ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ. ಗ್ರಾಹಕರು ಸಿಲಿಂಡರ್ ಪಡೆಯುವಾಗ ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಬರುವ ಕೋಡ್ ನೀಡಿದ ನಂತರವೇ ವಿತರಣೆ ಮಾಡಲಾಗುತ್ತದೆ. ಪೂರೈಕೆಯ ಕೊರತೆಯಿಂದಾಗಿ ಈಗಾಗಲೇ ಬೆಂಗಳೂರಿನಂತಹ ನಗರಗಳ ಹೋಟೆಲ್‌ಗಳಲ್ಲಿ ಗ್ಯಾಸ್ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆಯಿಂದ ಇರುವುದು ಒಳಿತು.

Continue Reading

Latest

ಮೇನಲ್ಲಿ ನಡೆಯಲಿದೆ ಪ್ಯಾನ್-ಐಐಟಿ ಬೆಂಗಳೂರು ಸಮ್ಮಿಟ್-2026

VISTARANEWS.COM


on

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಪ್ಯಾನ್ ಐಐಟಿ ಅಲ್ಯೂಮ್ನಿ ಇಂಡಿಯಾ ಅಸೋಸಿಯೇಷನ್ ಜಂಟಿಯಾಗಿ ಮೇ 16ರಂದು ನಗರದಲ್ಲಿ “ಪ್ಯಾನ್-ಐಐಟಿ ಬೆಂಗಳೂರು ಸಮಿಟ್ 2026” ಆಯೋಜಿಸಿವೆ.
“ತಂತ್ರಜ್ಞಾನದಲ್ಲಿನ ಸ್ವಾಯತ್ತತೆ” ಎಂಬ ವಿಷಯದಡಿ ಈ ಸಮ್ಮಿಟ್ ನಡೆಯಲಿದೆ ಎಂದು ಇ-ಆಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕರ್ನಾಟಕ, ವಿಶೇಷವಾಗಿ ಬೆಂಗಳೂರು, ಇಂದು ಭಾರತದ ತಂತ್ರಜ್ಞಾನ ಮಹತ್ವಾಕಾಂಕ್ಷೆಯ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ದೇಶದ ಪ್ರಮುಖ ಜಿಡಿಪಿ ಕೊಡುಗೆ ನೀಡುವ ನಗರಗಳಲ್ಲಿ ಬೆಂಗಳೂರು ಒಂದಾಗಿದೆ, ವೆಂಚರ್ ಕ್ಯಾಪಿಟಲ್ ಹೂಡಿಕೆಗಳ ಪ್ರಮುಖ ಕೇಂದ್ರವಾಗಿಯೂ ಗುರುತಿಸಿಕೊಂಡಿದೆ.
ಸ್ಟಾರ್ಟ್‌ಅಪ್‌ಗಳ ನಿಧಿ ಸಂಗ್ರಹ ಹಾಗೂ ನವೀನ ಚಟುವಟಿಕೆಗಳಲ್ಲಿ ಮಹತ್ತರ ಪಾತ್ರವಹಿಸಿದ್ದು, ಸಾವಿರಾರು ಇಂಜಿನಿಯರಿಂಗ್ ಕಾಲೇಜುಗಳು ಹಾಗೂ ವಿಶ್ವದ ಅತಿ ದೊಡ್ಡ ಪ್ರತಿಭಾ ಸಂಪನ್ಮೂಲಗಳಲ್ಲಿ ಒಂದನ್ನು ಹೊಂದಿರುವುದರಿಂದ ಬೆಂಗಳೂರು “ಪೂರ್ವದ ಸಿಲಿಕಾನ್ ವ್ಯಾಲಿ” ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಅವರು ಹೇಳಿದರು.
ಸಾರ್ವಜನಿಕ ವಲಯ ಮತ್ತು ತಾಂತ್ರಿಕ ಕಂಪನಿಗಳ ಮೂಲಕ ಏರೋಸ್ಪೇಸ್, ರಕ್ಷಣಾ ಹಾಗೂ ಮೂಲ ಇಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಕರ್ನಾಟಕ ಬಲವಾದ ನೆಲೆ ನಿರ್ಮಿಸಿತು. ಬಳಿಕ ಇನ್ಫೋಸಿಸ್, ಟಿಸಿಎಸ್, ಎಚ್‌ಸಿಎಲ್ ಮತ್ತು ವಿಪ್ರೋ ಮುಂತಾದ ಐಟಿ ದಿಗ್ಗಜಗಳ ಉದಯದೊಂದಿಗೆ ಭಾರತವನ್ನು ಜಾಗತಿಕ ತಂತ್ರಜ್ಞಾನ ನಕ್ಷೆಯಲ್ಲಿ ಸ್ಥಾಪಿಸುವಲ್ಲಿ ಮಹತ್ವದ ಪಾತ್ರವಹಿಸಿದೆ ಎಂದು ಅವರು ವಿವರಿಸಿದರು.
ಪ್ರಸ್ತುತ ಭಾರತ ಡೀಪ್ ಟೆಕ್, ಕೃತಕ ಬುದ್ಧಿಮತ್ತೆ ಮತ್ತು ವೈಜ್ಞಾನಿಕ ನವೀನತೆಯ ಹಂತಕ್ಕೆ ಸಾಗುತ್ತಿದೆ. ಈ ಹಂತದಲ್ಲಿ ಅಕಾಡೆಮಿಯಾ, ಕೈಗಾರಿಕೆ ಮತ್ತು ಸರ್ಕಾರಗಳ ನಡುವಿನ ಗಟ್ಟಿಯಾದ ಸಹಕಾರ ಅತ್ಯಾವಶ್ಯ. ತಂತ್ರಜ್ಞಾನ ಸ್ವಾಯತ್ತತೆ ಸಾಧಿಸಲು ಇದು ಪ್ರಮುಖ ಹಂತವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ಯಾನ್-ಐಐಟಿ ಬೆಂಗಳೂರು ಸಮಿಟ್ 2026 ರೂಪುಗೊಂಡಿದೆ ಎಂದು ತಿಳಿಸಿದರು.
ಪ್ಯಾನ್ ಐಐಟಿ ಅಧ್ಯಕ್ಷರಾದ ಶ್ರೀ ಪ್ರಭಾತ್ ಕುಮಾರ್ (ಐ.ಆರ್.ಎಸ್) ಅವರು ಮಾತನಾಡಿ, ಸಮ್ಮಿಟ್‌ನಲ್ಲಿ ಉನ್ನತ ಮಟ್ಟದ ಪ್ಲೀನರಿ ಸೆಷನ್‌ಗಳು, ಆಳವಾದ ಪ್ಯಾನೆಲ್ ಚರ್ಚೆಗಳು ಹಾಗೂ ಎಐ, ರಕ್ಷಣಾ, ಸೆಮಿಕಂಡಕ್ಟರ್, ಇಂಧನ, ಮೊಬೈಲಿಟಿ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಸಮಾಂತರ ಚರ್ಚೆಗಳು ನಡೆಯಲಿವೆ ಎಂದರು.
23 ಐಐಟಿಗಳ 5 ಲಕ್ಷಕ್ಕೂ ಹೆಚ್ಚು ಅಲ್ಯೂಮ್ನಿಗಳ ಸಂಯುಕ್ತ ಚಿಂತನೆಯ ಫಲವಾಗಿರುವ ಈ ಸಮ್ಮಿಟ್, ಜಾಗತಿಕ ಮಟ್ಟದಲ್ಲಿ ತಂತ್ರಜ್ಞಾನ, ವ್ಯವಹಾರ ಮತ್ತು ನೀತಿ ರೂಪಣೆಯಲ್ಲಿ ಸಕ್ರಿಯ ಸಮುದಾಯವನ್ನು ಒಂದೇ ವೇದಿಕೆಗೆ ತರಲಿದೆ. ನವೀನತೆ, ಉದ್ಯಮಶೀಲತೆ ಮತ್ತು ರಾಷ್ಟ್ರ ನಿರ್ಮಾಣದ ಮುಂದಿನ ಹಂತವನ್ನು ಉತ್ತೇಜಿಸುವ ದಿಕ್ಕಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ತಿಳಿಸಿದರು.

Continue Reading
Advertisement
Latest3 hours ago

ಇತಿಹಾಸ ಬರೆಯಲು ಸಜ್ಜಾದ ರನ್ ಮಷೀನ್: ಐಪಿಎಲ್ ಕ್ರಿಕೆಟ್‌ನಲ್ಲಿ ಕೊಹ್ಲಿ ಹೊಸ ರೆಕಾರ್ಡ್‌

Latest3 hours ago

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿದ NIA ನ್ಯಾಯಾಲಯ

Latest4 hours ago

ಪಾಕಿಸ್ತಾನಕ್ಕೆ ಮತ್ತೊಂದು ಆರ್ಥಿಕ ಪೆಟ್ಟು: 3.5 ಬಿಲಿಯನ್ ಡಾಲರ್ ಸಾಲ ಮರುಪಾವತಿಗೆ ಯುಎಇ ಸೂಚನೆ

ಸಿನಿಮಾ4 hours ago

ಎಲೆಕ್ಷನ್ ಮುಗಿದರೂ ಮುಗಿಯದ ದಳಪತಿ ಆಸ್ತಿ ಸಂಘರ್ಷ: ಹೆಂಡತಿಗೆ ಕೊಟ್ಟ 12 ಕೋಟಿ ಸಾಲದ ರಹಸ್ಯವೇನು?

Latest5 hours ago

ಹರಿಹರ ಪೀಠದಲ್ಲಿ ಲೆಕ್ಕ ಸಮರ: ವಚನಾನಂದ ಶ್ರೀ, ಟ್ರಸ್ಟಿಗಳ ನಡುವೆ ಆರೋಪ-ಪ್ರತ್ಯಾರೋಪ.

Latest6 hours ago

RCB v/s GT ಪಂದ್ಯದ ವೇಳೆ ಭದ್ರತಾ ವೈಫಲ್ಯ: 240 ಸಿಸಿಟಿವಿಗಳನ್ನು ನಿಷ್ಕ್ರಿಯಗೊಳಿಸಿದ್ದೇಕೆ? ಹೊರಬಿತ್ತು ಶಾಕಿಂಗ್‌ ಸತ್ಯ!

Latest6 hours ago

ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ ಸಾಧ್ಯತೆ: ಮೇ 1ರಿಂದ ಬದಲಾಗಲಿವೆ ಎಲ್‌ಪಿಜಿ ನಿಯಮಗಳು

Latest8 hours ago

ಮೇನಲ್ಲಿ ನಡೆಯಲಿದೆ ಪ್ಯಾನ್-ಐಐಟಿ ಬೆಂಗಳೂರು ಸಮ್ಮಿಟ್-2026

ಕರ್ನಾಟಕ9 hours ago

ಡಿಕೆಶಿ ಪದೇ ಪದೇ ದೆಹಲಿಗೆ ಹೋಗುತ್ತಿರುವುದೇಕೆ? ಸತೀಶ್ ಜಾರಕಿಹೊಳಿ ನೀಡಿದ ಆ ಗೊಂದಲದ ಹೇಳಿಕೆಯಲ್ಲಿದೆಯೇ ದೊಡ್ಡ ಸುಳಿವು

Latest10 hours ago

ಇರಾನ್‌ನಿಂದ ಹೊಸ ಶಾಂತಿ ಸಂಧಾನ: ಹಾರ್ಮುಜ್ ಜಲಸಂಧಿ ಮುಕ್ತಗೊಳಿಸಲು ಅಮೆರಿಕಕ್ಕೆ ಷರತ್ತುಬದ್ಧ ಪ್ರಸ್ತಾವನೆ ಸಲ್ಲಿಕೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌