Site icon Vistara News

Rain News | ಕೆರೆಕೋಡಿಯಲ್ಲಿ ಕೊಚ್ಚಿಹೋಗಿದ್ದ ಯುವಕ ಶವವಾಗಿ ಪತ್ತೆ

Rain News

ರಾಮನಗರ: ಜಿಲ್ಲೆಯಲ್ಲಿ ರಣಮಳೆಗೆ (Rain News) ಮತ್ತೊಬ್ಬರು ಸಾವಿಗೀಡಾಗಿದ್ದಾರೆ. ಚನ್ನಪಟ್ಟಣ ತಾಲೂಕಿನ‌ ಹರಿಸಂದ್ರ ಗ್ರಾಮದ ಕೆರೆ ಕೋಡಿಯಲ್ಲಿ ಸಿಜೇಂದ್ರ (21) ಎಂಬ ಯುವಕ ಕೊಚ್ಚಿ ಹೋಗಿದ್ದ. ನಾಪತ್ತೆಯಾಗಿದ್ದ ಯುವಕ ಮಂಗಳವಾರ ಶವವಾಗಿ ಪತ್ತೆಯಾಗಿದ್ದಾನೆ.

ಪೇಂಟರ್‌ ಆಗಿ ಕೆಲಸ ಮಾಡುತ್ತಿದ್ದ ತಿಮ್ಮಸಂದ್ರ ಗ್ರಾಮದ ಯುವಕ ಸಿಜೇಂದ್ರ ಸೋಮವಾರ ಕೆರೆ ಕೋಡಿಯಲ್ಲಿ ಕೊಚ್ಚಿಹೋಗಿದ್ದ. ಪೊಲೀಸರು ಹಾಗೂ ಸ್ಥಳೀಯರು ತೀವ್ರ ಶೋಧ ನಡೆಸಿದ್ದರು. ಆದರೆ, ಬಿದ್ದಿದ್ದ ಸ್ಥಳದಿಂದ 300 ಮೀಟರ್‌ ದೂರದಲ್ಲಿ ಯುವಕ ಮೃತದೇಹ ಪತ್ತೆಯಾಗಿದೆ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | ಚಾಲಕನ ನಿಯಂತ್ರಣ ತಪ್ಪಿ ತುಂಗಭದ್ರಾ ಕಾಲುವೆಗೆ ಉರುಳಿದ ಕಾರು, ಇಬ್ಬರು ಮೃತ್ಯು

Exit mobile version