Assault Case : ಹುಡುಗಿ ವಿಷ್ಯಕ್ಕೆ ನಡುರಸ್ತೆಯಲ್ಲಿ ಲಾಂಗ್‌ ಝಳಪಿಸಿದ ಯುವಕರು - Vistara News

ರಾಮನಗರ

Assault Case : ಹುಡುಗಿ ವಿಷ್ಯಕ್ಕೆ ನಡುರಸ್ತೆಯಲ್ಲಿ ಲಾಂಗ್‌ ಝಳಪಿಸಿದ ಯುವಕರು

Assault Case : ಯುವಕರಿಬ್ಬರು ಒಬ್ಬಳನ್ನೇ ಪ್ರೀತಿ ಮಾಡುತ್ತಿದ್ದು, ಅದರಲ್ಲೊಬ್ಬ ಯುವತಿಗೆ ಮಸೇಜ್‌ ಮಾಡಿದ್ದಕ್ಕೆ ಸಿಟ್ಟಾಗಿ ನಡುರಸ್ತೆಯಲ್ಲಿ ಲಾಂಗ್‌ ಹಿಡಿದು ಕಿತ್ತಾಡಿಕೊಂಡಿದ್ದಾರೆ.

VISTARANEWS.COM


on

assault case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮನಗರ: ರಾಮನಗರ ಪಟ್ಟಣದ ಐಜೂರು ಸರ್ಕಲ್‌ನಲ್ಲಿಯೇ ಯುವಕರು ಲಾಂಗ್ ಹಿಡಿದು (Assault Case) ಝಳಪಿಸಿದ್ದಾರೆ. ಇಬ್ಬರು ಯುವಕರ ಮೇಲೆ ನಾಲ್ವರಿಂದ ಅಟ್ಯಾಕ್ ನಡೆದಿದೆ. ಬೈಕ್‌ನಲ್ಲಿ ಬಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಅಪ್ರಾಪ್ತರು ಭಾಗಿಯಾಗಿದ್ದಾರೆ.

ಯುವತಿಗೆ ಮೆಸೇಜ್ ಮಾಡಿದ್ದಕ್ಕೆ ಹುಡುಗರ ನಡುವೆ ಜಗಳ ಶುರುವಾಗಿದೆ ಎನ್ನಲಾಗಿದೆ. ಯುವಕರಿಬ್ಬರು ಒಬ್ಬಳನ್ನೇ ಪ್ರೀತಿ ಮಾಡುತ್ತಿದ್ದರು ಎನ್ನಲಾಗಿದೆ. ಹೀಗಾಗಿ ನನ್ನ ಹುಡುಗಿಗೆ ಹೇಗೆ ಮೆಸೇಜ್ ಮಾಡುತ್ತೀಯಾ ಎಂದು ಎದುರಾಳಿ ಯುವಕನೊಬ್ಬ ಲಾಂಗು ಬೀಸಿ ಹಲ್ಲೆ ನಡೆಸಿದ್ದಾನೆ.

assault case
assault case

ಇದೇ ಆಗಸ್ಟ್‌ 18ರಂದು ಗಲಾಟೆ ನಡೆದಿದ್ದು, ಯುವಕರ ಮಾರಾಮಾರಿ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇತ್ತ ಯುವಕರು ಮಚ್ಚು-ಲಾಂಗು ಹಿಡಿದು ಕಿತ್ತಾಡುತ್ತಿರುವುದು ಕಂಡೊಡನೆ ಸ್ಥಳೀಯರು ಬಿಡಿಸಲು ಯತ್ನಿಸಿದ್ದಾರೆ.

ಇದನ್ನೂ ಓದಿ: Hasin Jahan: ‘ಹೆಣ್ಣು ಎಂದರೆ ನಿಮಗೆ ಮಜಾ​ ಮಾಡೋ ವಸ್ತು’; ಗಂಗೂಲಿ ವಿರುದ್ಧ ಹರಿಹಾಯ್ದ ಶಮಿ ಮಾಜಿ ಪತ್ನಿ

ಬೆಂಗಳೂರಿನಲ್ಲಿ ರೌಡಿಶೀಟರ್ ಮೇಲೆ ಮಾರಣಾಂತಿಕ ಹಲ್ಲೆ

ಇತ್ತ ಬೆಂಗಳೂರಿನಲ್ಲಿ ಹತ್ತಕ್ಕೂ ಹೆಚ್ಚು ಜನರು ಮಚ್ಚು, ಲಾಂಗ್‌ಗಳಿಂದ ರೌಡಿಶೀಟರ್‌ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಮಂಜುನಾಥ್ @ ಹೂ ಮಂಜ ಎಂಬಾತನ ಮೇಲೆ ಹಲ್ಲೆ ನಡೆದಿದೆ. ಬೆಂಗಳೂರಿನ ಯಲಹಂಕ ನ್ಯೂಟೌನ್ ಬಳಿ ನಡೆದ ಘಟನೆ ನಡೆದಿದೆ.

ಹಾಡುಹಗಲೇ ಮಚ್ಚು ಲಾಂಗ್‌ಗಳಿಂದ ಹಲ್ಲೆ ನಡೆಸಿ ಎದುರಾಳಿ ಗ್ಯಾಂಗ್‌ ಪರಾರಿ ಆಗಿದೆ. ದುಷ್ಕರ್ಮಿಗಳು ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆಗೆ ಯತ್ನಿಸಿದ್ದಾರೆ. ನೆಲಕ್ಕುರುಳಿದವನು ಸಾವನ್ನಪ್ಪಿದ್ದಾನೆ ಎಂದು ತಿಳಿದು ಆರೋಪಿಗಳು ಎಸ್ಕೇಪ್ ಆಗಿದ್ದರು. ಆದರೆ ಸ್ಥಳೀಯರು ತಕ್ಷಣ ರೌಡಿಶೀಟರ್ ಹೂ ಮಂಜನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ನಿನ್ನೆಯಷ್ಟೆ ಕೊಡಿಗೇಹಳ್ಳಿಯಲ್ಲಿ ವಿಜಯ್ ಎಂಬ ರೌಡಿ ಮೇಲೆ ಕೊಲೆ ಯತ್ನ ನಡೆದಿತ್ತು. ಸದ್ಯ ಯಲಹಂಕ ನ್ಯೂಟೌನ್‌ನಲ್ಲಿ ರೌಡಿ ಕೊಲೆಗೆ ಯತ್ನ ಮಾಡಲಾಗಿದೆ. ಯಲಹಂಕ ನ್ಯೂಟೌನ್ ಪೊಲೀಸರಿಂದ ಆರೋಪಿಗಳಿಗಾಗಿ ಶೋಧ ಕಾರ್ಯನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕರಾವಳಿಯಲ್ಲಿ ರಭಸವಾಗಿ ಬೀಸಲಿದೆ ಗಾಳಿ; ಸಾಧಾರಣ ಮಳೆ ಸಾಧ್ಯತೆ

Karnataka Weather Forecast : ಕರಾವಳಿಯ ಸಮುದ್ರ ತೀರದಲ್ಲಿ ಗಾಳಿ ವೇಗ ಹೆಚ್ಚಾಗಿರಲಿದ್ದು, ಮಲೆನಾಡು ಹಾಗೂ ಒಳನಾಡಿನಲ್ಲಿ ಹಗುರದಿಂದ ಸಾಧಾರಣ (Rain News) ಮಳೆಯಾಗಲಿದೆ.

VISTARANEWS.COM


on

By

karnataka weather forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ರಾಮನಗರ, ಕೋಲಾರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ,ಚಾಮರಾಜನಗರದಲ್ಲಿ ಹಗುರದಿಂದ ಮಳೆಯಾಗಲಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯನಗರ, ರಾಯಚೂರು ಮತ್ತು ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಶುಷ್ಕ ಹವಾಮಾನವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 31 , ಕನಿಷ್ಠ ಉಷ್ಣಾಂಶ 22 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Weather: ಅಲೆಗಳ ಅಬ್ಬರಕ್ಕೆ ಅಂಕೋಲಾದಲ್ಲಿ ಕೊಚ್ಚಿ ಹೋದ ಮನೆ; ಭಾರಿ ಮಳೆಗೆ ಚಾರ್ಮಾಡಿಯಲ್ಲಿ ಧರೆಗುರುಳಿದ ಬಂಡೆಗಳು

ಯೆಲ್ಲೋ ಅಲರ್ಟ್‌

ಗುಡಗು ಸಹಿತ ಭಾರಿ ಮಳೆಯಾಗಲಿದ್ದು, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಬೆಳಗಾವಿ, ವಿಜಯಪುರ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಆಗಸ್ಟ್‌ 24ರಂದು ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather: ಅಲೆಗಳ ಅಬ್ಬರಕ್ಕೆ ಅಂಕೋಲಾದಲ್ಲಿ ಕೊಚ್ಚಿ ಹೋದ ಮನೆ; ಭಾರಿ ಮಳೆಗೆ ಚಾರ್ಮಾಡಿಯಲ್ಲಿ ಧರೆಗುರುಳಿದ ಬಂಡೆಗಳು

Karnataka Weather Forecast: ಕರಾವಳಿಯಲ್ಲಿ ಅಲೆಗಳ ಅಬ್ಬರ ಜೋರಾಗಿದ್ದರೆ, ಇತ್ತ ಮಲೆನಾಡಿನಲ್ಲಿ ಭಾರಿ ಮಳೆಗೆ (Rain News) ಚಾರ್ಮಾಡಿ ಘಾಟ್‌ನಲ್ಲಿ ಬಂಡೆ ಕಲ್ಲುಗಳು ಧರೆಗುರುಳಿವೆ. ವಿಜಯಪುರ, ವಿಜಯನಗರದಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ.

VISTARANEWS.COM


on

By

Karnataka weather Forecast
Koo

ಕಾರವಾರ: ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಅಲೆಗಳ ಅಬ್ಬರ (Karnataka Weather Forecast) ಜೋರಾಗಿದೆ. ಭಾರೀ ಅಲೆಗಳ ಅಬ್ಬರಕ್ಕೆ (Rain News) ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಹಾರವಾಡದ ತರಂಗಮೇಟ ಪ್ರದೇಶದಲ್ಲಿ ಮನೆಯೊಂದು ಕೊಚ್ಚಿಹೋಗಿದೆ. ಮೀನುಗಾರ ಅಶೋಕ್ ಹರಿಕಂತ್ರ ಎಂಬುವವರ ಮನೆ ಸಮುದ್ರಪಾಲಾಗಿದೆ.

ತರಂಗಮೇಟ ತೀರದ ಸುಮಾರು 200 ಮೀಟರ್ ವ್ಯಾಪ್ತಿಯಲ್ಲಿ ಅಲೆಗಳ ಅಬ್ಬರಕ್ಕೆ ಕಳೆದ ಮೂರು ತಿಂಗಳಿಂದ ಕಡಲಕೊರೆತ ಉಂಟಾಗಿತ್ತು. ಕುಟುಂಬಸ್ಥರು ಎರಡು ತಿಂಗಳ ಹಿಂದೆಯೇ ಮನೆ ಬಿಟ್ಟು ಬೇರೆಡೆ ಉಳಿದುಕೊಂಡಿದ್ದರು. ಇಂದು ಗುರುವಾರ ಅಲೆಗಳ ಅಬ್ಬರಕ್ಕೆ ಮನೆ, ತೆಂಗಿನಮರ ನೀರುಪಾಲಾಗಿದೆ. ಮನೆ, ತೆಂಗಿನಮರ ಕೊಚ್ಚಿಹೋಗುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ತರಂಗಮೇಟ ಕಡಲತೀರಕ್ಕೆ ಹೊಂದಿಕೊಂಡು 30ಕ್ಕೂ ಅಧಿಕ ಮೀನುಗಾರರ ಮನೆಗಳು ಇವೆ. ಕಡಲತೀರಕ್ಕೆ ಅಲೆತಡೆಗೋಡೆ ನಿರ್ಮಿಸುವಂತೆ ಮನವಿ ಮಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಚಾರ್ಮಾಡಿ ಘಾಟ್‌ನ ತಪ್ಪಲಿನಲ್ಲಿ ಭಾರಿ ಮಳೆಯಾಗಿದೆ. ಧಾರಾಕಾರ ಮಳೆಗೆ ಚಾರ್ಮಾಡಿಯಲ್ಲಿ ಬಂಡೆಗಳು ಧರೆಗುರುಳಿವೆ. ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್‌ನ 8 ಮತ್ತು 9ನೇ ತಿರುವಿನಲ್ಲಿ ಘಟನೆ ನಡೆದಿದೆ.

ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ರಸ್ತೆಯಲ್ಲೇ ನೀರು ತುಂಬಿ ಹರಿಯುತ್ತಿದೆ. ಮಳೆ ನೀರಿನ ಜತೆ ರಸ್ತೆಗೆ ಕಲ್ಲುಗಳು ತೇಲಿ ಬಂದಿದೆ. ಗುಡ್ಡ ಕುಸಿದು ರಸ್ತೆ ಮೇಲೆ ಬಂಡೆ ಕಲ್ಲುಗಳು ಉರುಳಿವೆ. ಸ್ಥಳಕ್ಕೆ ಚಾರ್ಮಾಡಿ ಘಾಟಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಹನ‌ ಸಂಚಾರ ಎಂದಿನಂತೆ ಇದ್ದು, ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ.

ಇನ್ನೂ ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಗ್ರಾಮಸ್ಥರ ಕಣ್ಣೆದುರೆ ಮನೆಗೆ ಸಿಡಿಲು ಬಡಿದು, ಮನೆ ಚಾವಣಿ ಸಂಪೂರ್ಣ ಹಾನಿಯಾಗಿ, ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲ್ಲೂಕಿನ ಮಾಳಿಗನಾಡು ಗ್ರಾಮದಲ್ಲಿ ಘಟನೆ ನಡೆದಿದೆ.

ಗ್ರಾಮದ ಸೀತು ಎಂಬುವವರ ಮನೆಗೆ ಸಂಪೂರ್ಣ ಹಾನಿಯಾಗಿದೆ. ಮನೆಯ ಸದಸ್ಯರು ತೋಟದ ಕೆಲಸಕ್ಕೆ ಹೋಗಿದ್ದರಿಂದ ಅವಘಡ ಸಂಭವಿಸಿದಾಗ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಮನೆಯ ಹೆಂಚುಗಳು, ಬಾಗಿಲು ಕಿಟಕಿ ಸುಟ್ಟ ಸ್ಥಿತಿ ತಲುಪಿದೆ.

ಇದನ್ನೂ ಓದಿ: Belgavi News : ಪರಿಹಾರ ನೀಡಲು ವಿಳಂಬ; ಬೆಳಗಾವಿ ಎಸಿ ಕಚೇರಿಯ ಕಂಪ್ಯೂಟರ್, ಪ್ರಿಂಟರ್ ಹೊತ್ತೊಯ್ದ ರೈತರು!

ವಿಜಯಪುರದಲ್ಲಿ ಉಕ್ಕಿ ಹರಿಯುತ್ತಿರುವ ಹಳ್ಳ

ಇತ್ತ ರೋಣಿಹಾಳ ಹಳ್ಳ ಉಕ್ಕಿ ಹರಿಯುತ್ತಿದ್ದು, ಜನರು ಹಳ್ಳದಲ್ಲೆ ಓಡಾಡುತ್ತಿದ್ದಾರೆ. ನಿನ್ನೆ ಬುಧವಾರ ತಡರಾತ್ರಿ ಸುರಿದ ಮಳೆಗೆ ವಿಜಯಪುರ ಜಿಲ್ಲೆಯ ಕೋಲ್ಹಾರ ತಾಲೂಕಿನ ರೋಣಿಹಾಳ. ಗರಸಂಗಿ, ಆಸಂಗಿ ಹಳ್ಳಗಳು ಉಕ್ಕಿ ಹರಿದಿದೆ. ಅಪಾಯದ ನಡುವೆಯೂ ಗ್ರಾಮಸ್ಥರು ಜೀವದ ಹಂಗು ತೊರೆದು ಹಳ್ಳ ದಾಟಲು ಯತ್ನಿಸುತ್ತಿದ್ದಾರೆ. ವಿಜಯಪುರ ತಾಲೂಕಿನ ಲೋಗಾಂವಿ ಗ್ರಾಮದಲ್ಲಿ ದ್ರಾಕ್ಷಿ ಬೆಳೆಗೆ ಹಾನಿಯಾಗಿದೆ. ರಾಜು ಹುನ್ನೂರ್ ಎಂಬುವವರಿಗೆ ಸೇರಿದ ದ್ರಾಕ್ಷಿ ಬೆಳೆ ಭಾರಿ ಮಳೆಗೆ ಬೆಳೆಯ ಕಂಬಗಳು ಹಾಗೂ ದ್ರಾಕ್ಷಿ ಬೆಳೆ ನೆಲಕ್ಕುರುಳಿವೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ ದ್ರಾಕ್ಷಿ ಹಾನಿಯಾಗಿದ್ದು, ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ರೈತರ ಮನವಿ ಮಾಡಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ ತಡ ರಾತ್ರಿ ಭರ್ಜರಿ ಮಳೆಗೆ ಬಹುತೇಕ ಕಡೆ ರಸ್ತೆಗಳು ಜಲಾವೃತಗೊಂಡಿದ್ದವು. ದಾವಣಗೆರೆ ನಗರ ಹಾಗೂ ಹೊನ್ನಾಳಿ ಪಟ್ಟಣ ಸೇರಿದಂತೆ ಜಿಲ್ಲೆಯ ವಿವಿಧ ಕಡೆ ಸುರಿದ ಮಳೆಯಿಂದಾಗಿ ಜಮೀನಿಗೆ ನೀರು ನುಗ್ಗಿದೆ. ವಿಜಯನಗರ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ರೈತರ ಜಮೀನಿ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಭಾರಿ ಮಳೆಗೆ ಬೈಲುವದ್ದಿಗೆರೆ ಗ್ರಾಮದ ಕೆರೆ ಕೋಡಿ ಬಿದ್ದಿದೆ. ಕೆರೆ ಕೋಡಿ ಬಿದ್ದು ಗುಲಾಬಿ ತೋಟ, ಮೆಣಸಿನಕಾಯಿ ತೋಟ, ಹತ್ತಿ, ಹಾಗೂ ಮೆಕ್ಕೆಜೋಳ ಬೆಳೆದಿದ್ದ ಜಮೀನಿಗೆ ನೀರು ನುಗ್ಗಿದೆ. ಹತ್ತಾರು ಸಾವಿರ ಖರ್ಚು ಮಾಡಿದ್ದ ಬೆಳೆ ಮಳೆಗೆ ಮುಕ್ಕಾಲು ಭಾಗ ಹಾನಿಯಾಗಿದೆ. ಬೆಳೆ ಹಾನಿಯಾಗಿದ್ದಕ್ಕೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂದು ಗುಲಾಬಿ ಬೆಳೆಗಾರ ಕಂಗಾಲಾಗಿದ್ದಾರೆ. ಪರಿಹಾರಕ್ಕಾಗಿ ಹತ್ತಿ, ಮೆಣಸಿನಕಾಯಿ, ಮೆಕ್ಕೆಜೋಳ ಬೆಳೆದ ರೈತರಿಂದ ಆಗ್ರಹಿಸಿದ್ದಾರೆ.

ಬಿರುಗಾಳಿಗೆ ವಾಲಿದ ಸಿಗ್ನಲ್ ಕಂಬ!

ಬಿರುಗಾಳಿಗೆ ಸಿಗ್ನಲ್‌ ಕಂಬ ವಾಲಿದ ಘಟನೆ ಗದಗ ನಗರದ ಮುಳಗುಂದ ನಾಕಾದ ಸಿಗ್ನಲ್‌ನಲ್ಲಿ ಘಟನೆ ನಡೆದಿದೆ. ವಾಹನಗಳ ಓಡಾಡುವ ಸಂದರ್ಭದಲ್ಲಿ ಕಂಬ ವಾಲಿದ್ದು, ಸವಾರರು ಕಕ್ಕಾಬಿಕ್ಕಿಯಾದರು. ತಕ್ಷಣ ಅಲರ್ಟ್ ಟ್ರಾಫಿಕ್ ಪೊಲೀಸರು ಬ್ಯಾರಿಕೆಡ್ ಹಾಕಿ ಪರ್ಯಾಯ ಸಂಚಾರಕ್ಕೆ ವ್ಯವಸ್ಥೆ ಮಾಡಿದರು. ಸ್ಥಳಕ್ಕೆ ಟ್ರಾಫಿಕ್ ಪಿಎಸ್ಐ ಶಕುಂತಲಾ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಾಳೆಗೂ ಇರಲಿದೆ ಮಳೆ ಅಬ್ಬರ

ನಾಳೆ ಶುಕ್ರವಾರ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಗುಡುಗು ಸಹಿತ ಮಳೆಯಾಗಲಿದೆ. ಕೆಲವೊಮ್ಮೆ ನಿರಂತರ ಗಾಳಿಯ ವೇಗ 40-50 ಕಿ.ಮೀ ಬೀಸುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : 23 ಜಿಲ್ಲೆಗಳಲ್ಲಿ ವಿಪರೀತ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಸುಮಾರು 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ (Yellow Alert) ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಬುಧವಾರ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಪ್ರತ್ಯೇಕವಾಗಿ ಚದುರಿದಂತೆ ಭಾರಿ ಮಳೆಯಾಗಲಿದೆ (Heavy Rain News) ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ರಾಮನಗರ, ಕೋಲಾರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ,ಚಾಮರಾಜನಗರದಲ್ಲೂ ಮಳೆಯಾಗಲಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯನಗರ, ರಾಯಚೂರು ಮತ್ತು ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿಯ ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Assault Case : ಬೆಂಗಳೂರಿನಲ್ಲಿ ಯುವಕನಿಗೆ ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತಿಸಿದ ಮಂಗಳಮುಖಿಯರು!

ಬೆಂಗಳೂರಿನಲ್ಲಿ ಸಾಧಾರಣ ಮಳೆ

ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ ಸೇರಿದಂತೆ ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು ಶಿವಮೊಗ್ಗ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಮನಗರ

Toyota Kirloskar Motor: ರಾಮನಗರ ಜಿಲ್ಲೆಯಲ್ಲಿ 3 ಹೊಸ ನೀರು ಶುದ್ಧೀಕರಣ ಘಟಕ ಸ್ಥಾಪಿಸಿದ ಟಿಕೆಎಂ

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor) ಸಂಸ್ಥೆಯು ಇಂದು ರಾಮನಗರ ಜಿಲ್ಲೆಯ ಬೆಣ್ಣೆಹಳ್ಳಿ, ಡಿಯಾಲಕರೇನಹಳ್ಳಿ ಮತ್ತು ಚನ್ನೆಮರೇಗೌಡನದೊಡ್ಡಿಯಲ್ಲಿ ಮೂರು ಹೊಸ ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಿದೆ. ಈ ನೀರು ಶುದ್ಧೀಕರಣ ಘಟಕಗಳು 15 ಹಳ್ಳಿಗಳ ಸುಮಾರು 21,000 ಗ್ರಾಮಸ್ಥರಿಗೆ ಪ್ರಯೋಜನ ಒದಗಿಸುತ್ತವೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Toyota Kirloskar Motor
Koo

ರಾಮನಗರ: ಸ್ಥಳೀಯ ಜನ ಸಮುದಾಯಗಳ ಆರೋಗ್ಯ ಮತ್ತು ಜೀವನ ಗುಣಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಸಂಸ್ಥೆಯು (Toyota Kirloskar Motor) ಇಂದು ರಾಮನಗರ ಜಿಲ್ಲೆಯ ಬೆಣ್ಣೆಹಳ್ಳಿ, ಡಿಯಾಲಕರೇನಹಳ್ಳಿ ಮತ್ತು ಚನ್ನೆಮರೇಗೌಡನದೊಡ್ಡಿಯಲ್ಲಿ ಮೂರು ಹೊಸ ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಿದೆ. ಈ ನೀರು ಶುದ್ಧೀಕರಣ ಘಟಕಗಳು 15 ಹಳ್ಳಿಗಳ ಸುಮಾರು 21,000 ಗ್ರಾಮಸ್ಥರಿಗೆ ಪ್ರಯೋಜನ ಒದಗಿಸುತ್ತವೆ.

ಪ್ರತೀ ನೀರಿನ ಶುದ್ಧೀಕರಣ ಘಟಕವು ಗಂಟೆಗೆ 1,000 ಲೀಟರ್ ಶುದ್ಧೀಕರಿಸುವ ಸಾಮರ್ಥ್ಯವನ್ನು ಹೊಂದಿದೆ. ಕಾರ್ಬನ್ ಫಿಲ್ಟರ್‌ಗಳು, ಮಲ್ಟಿಮೀಡಿಯಾ ಫಿಲ್ಟರೇಷನ್, 5 ಮೈಕ್ರಾನ್ಸ್, ರಿವರ್ಸ್ ಓಸ್ಮಾಸಿಸ್ (ಆರ್‌ಓ) ಮತ್ತು ಯುವಿ ಫಿಲ್ಟರೇಷನ್ ಎಂಬ ಆರು ಹಂತದ ಶುದ್ಧೀಕರಣ ಪ್ರಕ್ರಿಯೆಯ ಮೂಲಕ ನೀರನ್ನು ಶುದ್ಧೀಕರಿಸಲಾಗುತ್ತಿದ್ದು, ಅತ್ಯುತ್ತಮ ಗುಣಮಟ್ಟದ ನೀರನ್ನು ಒದಗಿಸಲಾಗುತ್ತದೆ. ಅತ್ಯಾಧುನಿಕ ಫಿಲ್ಟರೇಷನ್ ಪ್ರಕ್ರಿಯೆ ಮೂಲಕ ಕಾರ್ಯನಿರ್ವಹಿಸುವ ಈ ಘಟಕಗಳು ನವೀಕರಿಸಲಾಗುವ ಇಂಧನ (ಸೌರ ಶಕ್ತಿ) ದ ಮೂಲಕ ಕಾರ್ಯ ನಿರ್ವಹಿಸುತ್ತವೆ. ಈ ಮೂಲಕ ಸುಸ್ಥಿರತೆಗೆ ಕೊಡುಗೆ ನೀಡುತ್ತವೆ. ಈ ಘಟಕಗಳು 15 ವರ್ಷಗಳ ಕಾಲ ಗ್ರಾಮ ಪಂಚಾಯಿತಿಗಳು ಮತ್ತು ನಿರ್ವಹಣಾ ಏಜೆನ್ಸಿಯ ಮೂಲಕ ನಿರ್ವಹಿಸಲ್ಪಡುತ್ತವೆ.

ಇದನ್ನೂ ಓದಿ: KEA: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ; ಅರ್ಜಿ ಅಂಗೀಕೃತವಾಗಿರದಿದ್ದರೆ ದಾಖಲೆ ಸಲ್ಲಿಸಲು ಆ.26 ಕೊನೆಯ ದಿನ

ಶುದ್ಧೀಕರಣ ಘಟಕಗಳ ಸ್ಥಾಪನೆಯ ಯೋಜನೆ ಆರಂಭಿಸಿದಾಗಿನಿಂದ ಇದುವರೆಗೆ ಟಿಕೆಎಂ ಸಂಸ್ಥೆಯು ಭಾರತದಾದ್ಯಂತ ಒಟ್ಟು 51 ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಿದೆ. ಇದರಿಂದ 312 ಹಳ್ಳಿಗಳ 350000ಕ್ಕೂ ಹೆಚ್ಚು ಜನ ಶುದ್ಧ ಮತ್ತು ಸುರಕ್ಷಿತ ನೀರಿನ ಪ್ರಯೋಜನವನ್ನು ಪಡೆದಿದ್ದಾರೆ.

ಈ ಕುರಿತು ಮಾತನಾಡಿದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್‌ನ ಎಸ್‌ವಿಪಿ ಮತ್ತು ಮುಖ್ಯ ಸಂವಹನ ಅಧಿಕಾರಿ ಸುದೀಪ್ ದಳವಿ, “ಜನ ಸಮುದಾಯಕ್ಕೆ ವಾಹನಗಳನ್ನು ಉತ್ಪಾದನೆ ಮಾಡುವುದರ ಹೊರತಾಗಿ ಹೆಚ್ಚಿನ ನೆರವು ಒದಗಿಸಲು ಟೊಯೋಟಾ ಕಿರ್ಲೋಸ್ಕರ್ ಮೋಟಾರ್‌ ಬದ್ಧವಾಗಿದೆ. ಈ ನಿಟ್ಟಿನಲ್ಲಿ ನಮ್ಮ ಸುತ್ತಮುತ್ತಲಿನ ಜನರ ಜೀವನ ಗುಣಮಟ್ಟವನ್ನು ಹೆಚ್ಚಿಸುವ ಜವಾಬ್ದಾರಿ ಇದೆ. ಅದಕ್ಕೆ ಪೂರಕವಾಗಿ ರಾಮನಗರ ಜಿಲ್ಲೆಯಲ್ಲಿ ಮೂರು ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಿದ್ದು, ಈ ಕ್ರಮವು ಸ್ಥಳೀಯ ಜನರ ಆರೋಗ್ಯ ಮತ್ತು ಜೀವನದ ಮೇಲೆ ಸಕಾರಾತ್ಮಕ ಪರಿಣಾಮ ಬೀರುವ ನಮ್ಮ ಬದ್ಧತೆಗೆ ಪುರಾವೆಯಾಗಿದೆ. ಶುದ್ಧ ಕುಡಿಯುವ ನೀರು ಪ್ರತಿಯೊಬ್ಬರ ಮೂಲಭೂತ ಹಕ್ಕು. ಈ ಯೋಜನೆಯ ಮೂಲಕ ಈ ಪ್ರದೇಶಗಳ ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲಿದ್ದೇವೆ. ಜನರಿಗೆ ಅವಶ್ಯ ಸೌಲಭ್ಯ ಒದಗಿಸುವುದರ ಜತೆಗೆ ನಾವು ಸುಸ್ಥಿರತೆಯ ಕಡೆಗೆ ಕೂಡ ಗಮನ ಹರಿಸಿದ್ದೇವೆ. ಈ ಮೂಲಕ ಉಜ್ವಲ ಭವಿಷ್ಯವನ್ನು ಸಾಧಿಸಬಹುದು ಎಂದು ನಾವು ನಂಬಿದ್ದೇವೆ” ಎಂದು ಹೇಳಿದರು.

ಸಿಎಸ್ಆರ್ 2001ನೇ ಇಸವಿಯಿಂದಲೂ ಟಿಕೆಎಂ ಸಂಸ್ಥೆಯ ಆದ್ಯ ಕರ್ತವ್ಯಗಳ ಭಾಗವಾಗಿದೆ. ಉತ್ಪಾದನೆ ಹೆಚ್ಚಳ, ಸುಸ್ಥಿರತೆ ಕಡೆಗೆ ಗಮನ ಹರಿಸುವುದರ ಜತೆಗೆ ಟಿಕೆಎಂ ಮತ್ತು ಅದರ ಉದ್ಯೋಗಿಗಳು ಸ್ವಯಂ ಪ್ರೇರಣೆಯಿಂದ ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದ್ದಾರೆ. ಶಿಕ್ಷಣ, ಪರಿಸರ, ಆರೋಗ್ಯ ಮತ್ತು ನೈರ್ಮಲ್ಯ, ರಸ್ತೆ ಸುರಕ್ಷತೆ ಹಾಗೂ ಕೌಶಲ್ಯ ಅಭಿವೃದ್ಧಿ ಎಂಬ ಐದು ವಿಚಾರಗಳನ್ನು ಕೇಂದ್ರವಾಗಿಟ್ಟುಕೊಂಡು ಚಟುವಟಿಕೆಗಳನ್ನು ನಡೆಸಲಾಗಿದೆ. ಇವುಗಳ ಜತೆಗೆ ಸ್ಥಳೀಯರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ಸಲುವಾಗಿ ಸಮುದಾಯ ಆರೋಗ್ಯ ಕೇಂದ್ರವಾದ ಕರ್ನಾಟಕದ ಬಿಡದಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಮ್ಲಜನಕ-ಉತ್ಪಾದನಾ ಘಟಕವನ್ನು ಕೊಡುಗೆ ನೀಡಿದೆ.

ಇದನ್ನೂ ಓದಿ: Kannada New Movie: ಮಧುಸೂದನ್ ಹವಾಲ್ದಾರ್ ನಿರ್ದೇಶನದ ʼಕಾಖಂಡಕಿ ಶ್ರೀ ಮಹಿಪತಿದಾಸರುʼ ಚಿತ್ರದ ಹಾಡುಗಳ ಅನಾವರಣ

ವಿಶೇಷವಾಗಿ ಶಾಲಾಧರಿತ ಆರೋಗ್ಯ ಮತ್ತು ನೈರ್ಮಲ್ಯ ಯೋಜನೆಗಳಾದ ಎಬಿಸಿಡಿ (ಎ ಬಿಹೇವಿಯರಲ್ ಚೇಂಜ್ ಡೆಮಾನ್‌ಸ್ಟ್ರೇಷನ್), ನೀರಿನ ಶುದ್ಧೀಕರಣ ಘಟಕಗಳ ಸ್ಥಾಪನೆ ಮತ್ತು ಟೊಯೋಟಾ ಶಾಲಾ ಆರೋಗ್ಯ ಕಾರ್ಯಕ್ರಮಗಳು ಆರೋಗ್ಯ ಕ್ಷೇತ್ರದಲ್ಲಿ ಶ್ಲಾಘನೀಯ ಕೆಲಸವನ್ನು ಮಾಡಿವೆ. 2022-23ರ ಆರ್ಥಿಕ ವರ್ಷದಲ್ಲಿ ಈ ಯೋಜನೆಗಳು ಸುಮಾರು 64,000ಕ್ಕೂ ಹೆಚ್ಚಿನ ಜನರ ಬದುಕಲ್ಲಿ ಪ್ರಯೋಜನ ಉಂಟು ಮಾಡಿವೆ. ಟಿಕೆಎಂ ತನ್ನ ಹಲವಾರು ಸಿಎಸ್ಆರ್ ಯೋಜನೆಗಳ ಮೂಲಕ ಇಲ್ಲಿಯವರೆಗೆ ಸುಮಾರು 23 ಲಕ್ಷಕ್ಕೂ ಹೆಚ್ಚು ಜನರ ಬದುಕಲ್ಲಿ ಸಕಾರಾತ್ಮಕ ಪರಿಣಾಮ ಬೀರಿವೆ. ಜನರ ಅಗತ್ಯಕ್ಕೆ ತಕ್ಕಂತೆ, ದೇಶದ ಆದ್ಯತೆಗಳಿಗೆ ಪೂರಕವಾಗಿ ಮತ್ತು ಸಮಾಜಕ್ಕೆ ಅರ್ಥಪೂರ್ಣ ಕೊಡುಗೆ ನೀಡುವ ನಿಟ್ಟಿನಲ್ಲಿ ಟಿಕೆಎಂನ ಯೋಜನೆಗಳನ್ನು ರೂಪಿಸಲಾಗುತ್ತದೆ.

Continue Reading
Advertisement
Yettinahole project
ಬೆಂಗಳೂರು12 mins ago

Yettinahole Project: ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಏತ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿ

Salman Khan
ಸಿನಿಮಾ23 mins ago

Salman Khan: ನಿಮ್ಮ ಚಿತ್ರವನ್ನು ನಾವು ಒಪ್ಪುತ್ತೇವೆ, ಆದರೆ ನಮ್ಮ ಚಿತ್ರವನ್ನು ನೀವು ಒಪ್ಪುವುದಿಲ್ಲವಲ್ಲ? ಚಿರುಗೆ ಸಲ್ಲು ಹೀಗೆ ಹೇಳಿದ್ದೇಕೆ?

Accident case
ಶಿವಮೊಗ್ಗ33 mins ago

Accident Case : ಈಜಲು ಚಂಪಕ ಸರಸು ಕಲ್ಯಾಣಿಗೆ ಜಿಗಿದ ಎಂಜಿನಿಯರ್‌ ಶವವಾಗಿ ಹೊರ ಬಂದ

Shraddha Kapoor- Shreyas Iyer
ಕ್ರೀಡೆ36 mins ago

Shraddha Kapoor- Shreyas Iyer: ಕ್ರಿಕೆಟಿಗ ಅಯ್ಯರ್​ ಜತೆ ಡೇಟಿಂಗ್ ಆರಂಭಿಸಿದ ನಟಿ ಶ್ರದ್ಧಾ ಕಪೂರ್‌; ಫೋಟೊ ವೈರಲ್​

Road Accident
ವಿದೇಶ49 mins ago

ನೇಪಾಳ: ನದಿಗೆ ಉರುಳಿದ ಭಾರತೀಯರು ಸೇರಿ 40 ಮಂದಿ ಪ್ರಯಾಣಿಸುತ್ತಿದ್ದ ಬಸ್‌; 14 ಮಂದಿ ಸಾವು?

Kolkata Doctor Murder Case
ಕ್ರೈಂ1 hour ago

Kolkata Doctor Murder Case: ಮಮತಾ ಬ್ಯಾನರ್ಜಿ ಆಡಳಿತದ ಕರಾಳ ಅಧ್ಯಾಯ ತೆರೆದಿಟ್ಟಿದೆ ಕೋಲ್ಕತಾ ವೈದ್ಯೆ ಕೊಲೆ ಪ್ರಕರಣ

Bwssb water price hike
ಪ್ರಮುಖ ಸುದ್ದಿ1 hour ago

Water Price Hike: ಬೆಂಗಳೂರು ಜಲಮಂಡಳಿಗೆ ₹87 ಕೋಟಿ ಬಾಕಿ ಉಳಿಸಿಕೊಂಡು ಶ್ರೀಸಾಮಾನ್ಯನ ಬೆನ್ನಿಗೆ ಬರೆ ಹಾಕಲು ಮುಂದಾದ ರಾಜ್ಯ ಸರ್ಕಾರ!

Ritika Sajdeh
ಕ್ರೀಡೆ1 hour ago

Ritika Sajdeh: ಜೂನಿಯರ್​ ಹಿಟ್​ಮ್ಯಾನ್​ ನಿರೀಕ್ಷೆಯಲ್ಲಿ ರೋಹಿತ್​; ಪತ್ನಿಯ ಬೇಬಿ ಬಂಪ್‌ ವಿಡಿಯೊ ವೈರಲ್​

Narendra Modi
ವಿದೇಶ1 hour ago

Narendra Modi: ಉಕ್ರೇನ್‌ಗೆ ಬಂದಿಳಿದ ಪ್ರಧಾನಿ ಮೋದಿ; ರಷ್ಯಾ ಜತೆಗಿನ ಸಂಘರ್ಷದ ಚರ್ಚೆ ಸಾಧ್ಯತೆ

assault case
ಬೆಂಗಳೂರು1 hour ago

Assault Case : ಬೀದಿಯಲ್ಲೇ ಲೇಟ್‌ ನೈಟ್‌ ಪಾರ್ಟಿ; ಪ್ರಶ್ನಿಸಿದ್ದಕ್ಕೆ ಯುವಕನಿಂದ ಪೊಲೀಸರಿಗೆ ಅವಾಜ್

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌