Site icon Vistara News

ಕನಕಪುರದಲ್ಲಿ ಅಂಗಡಿ ಮಳಿಗೆಗೆ ಡಿಕ್ಕಿಯಾದ ಗೂಡ್ಸ್‌ ವಾಹನ: ಬಾಲಕ ಸಾವು

kanakapura accident

ರಾಮನಗರ: ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಂಗಡಿ ಮಳಿಗೆಗೆ ಡಿಕ್ಕಿ‌ ಹೊಡೆದ ಪರಿಣಾಮ, ಬಾಲಕನೊಬ್ಬ ಮೃತಪಟ್ಟ ಘಟನೆ ಕನಕಪುರ ತಾಲೂಕಿನಲ್ಲಿ ನಡೆದಿದೆ.

ಕನಕಪುರ ತಾಲೂಕಿನ ಹಾರೋಹಳ್ಳಿ ಸಮೀಪದ ರಾಚೇನಮಡು ಗ್ರಾಮದಲ್ಲಿ ಘಟನೆ ನಡೆದಿದೆ. ಅಂಗಡಿ ಮುಂದೆ ನಿಂತಿದ್ದ ಬಾಲಕ ರಾಚೇನಮಡು ಗ್ರಾಮದ ಜೀವನ್ (13) ಮೃತಪಟ್ಟಿದ್ದಾನೆ.

ತಲಟ್ಟಪುರದಿಂದ ಕಗ್ಗಲೀಪುರ ಕಡೆಗೆ ಕಬ್ಬಿಣ ತುಂಬಿಕೊಂಡು 407 ಗೂಡ್ಸ್ ವಾಹನ ಸಾಗುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ. ಗೂಡ್ಸ್ ವಾಹನದ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಪಘಾತಕ್ಕೊಳಗಾದ ವಾಹನ

ಇದನ್ನೂ ಓದಿ | Accident case | ನರಗುಂದ ಬಳಿ ಬಸ್-ಕಾರು ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರ ಸಾವು, ಮತ್ತಿಬ್ಬರು ಗಂಭೀರ

Exit mobile version