N Ravikumar: ಮಂಚನಬೆಲೆ ಜಲಾಶಯಕ್ಕೆ ಎಂಎಲ್‌ಸಿ ಎನ್. ರವಿಕುಮಾರ್ ಭೇಟಿ - Vistara News

ರಾಜಕೀಯ

N Ravikumar: ಮಂಚನಬೆಲೆ ಜಲಾಶಯಕ್ಕೆ ಎಂಎಲ್‌ಸಿ ಎನ್. ರವಿಕುಮಾರ್ ಭೇಟಿ

N Ravikumar: ಮಂಚನಬೆಲೆ ಜಲಾಶಯದ ನೀರು ಕಲುಷಿತಗೊಂಡ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಗಮನಹರಿಸಬೇಕು ಎಂದು ಎಂಎಲ್‌ಸಿ ಎನ್‌.ರವಿಕುಮಾರ್‌ ಒತ್ತಾಯಿಸಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮನಗರ: ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಮಾಗಡಿ ತಾಲೂಕಿನ ಮಂಚನಬೆಲೆ ಜಲಾಶಯಕ್ಕೆ ಶುಕ್ರವಾರ ಭೇಟಿ ನೀಡಿದ್ದರು.

ಈ ಜಲಾಶಯದಿಂದ ಯಶವಂತಪುರ ಮತ್ತು ಮಾಗಡಿ ಪಟ್ಟಣದ ಸುತ್ತಮುತ್ತಲಿನ 28 ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ಆದರೆ, ಈ ನೀರು ಕುಡಿಯಲು ಯೋಗ್ಯವಾಗಿಲ್ಲ ಎನ್ನುವ ಮಾಹಿತಿಯಿದೆ. ಕಾರ್ಖಾನೆ ಸೇರಿದಂತೆ ಇತರೆ ಮೂಲಗಳಿಂದ ಜಲಾಶಯದ ನೀರು ಕಲುಷಿತಗೊಂಡಿದೆ. ಸರ್ಕಾರ ಈ ಬಗ್ಗೆ ಗಮನಹರಿಸಬೇಕು. ನೀರು ಶುದ್ಧೀಕರಣ ಘಟಕ ಸ್ಥಾಪಿಸಬೇಕು. ಈ ಭಾಗದ ರೈತರಿಗೂ ಕೂಡ ಅನುಕೂಲವಾಗಲು ಸರ್ಕಾರ ಮುಂದಾಗಬೇಕು ಎಂದು ಎನ್. ರವಿಕುಮಾರ್ ಹೇಳಿದರು.

ಬೆಂಗಳೂರು ನಗರದ ಹೃದಯ ಭಾಗಕ್ಕೂ ಈ ಜಲಾಶಯ ಹತ್ತಿರವಿರುವ ಕಾರಣ ಪ್ರವಾಸಿತಾಣವಾಗಲು ಸರ್ಕಾರ ಗಮನಹರಿಸಬೇಕು. ಕೆ.ಆರ್.ಎಸ್ ಜಲಾಶಯ ಮಾದರಿಯಂತೆ ಈ ಜಲಾಶಯವನ್ನು ಅಭಿವೃದ್ಧಿಪಡಿಸಲು ಸರ್ಕಾರ ಮುಂದಾಗಲು ಒತ್ತಾಯಿಸಿ ಈ ಮುಂಬರುವ ಅಧಿವೇಶನದಲ್ಲಿ ಗಮನ ಸೆಳೆಯಲಾಗುವುದು ಎಂದರು.

ಇದನ್ನೂ ಓದಿ | Ram Mandir: ಜ. 22ರಂದು ರಜೆ ಘೋಷಿಸಿ; ರಾಜ್ಯ ಸರ್ಕಾರಕ್ಕೆ ಬಿ.ವೈ.ವಿಜಯೇಂದ್ರ ಆಗ್ರಹ

ರಾಮನಗರದಲ್ಲಿ ರೇಷ್ಮೆಗೂಡಿನ ಮಾರುಕಟ್ಟೆ ವೀಕ್ಷಣೆ

ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್. ರವಿಕುಮಾರ್ ಅವರು
ರಾಮನಗರ ರೇಷ್ಮೆಗೂಡಿನ ಮಾರುಕಟ್ಟೆಗೆ ಶುಕ್ರವಾರ ಭೇಟಿ ನೀಡಿ ವೀಕ್ಷಿಸಿದರು. ಇದು ಏಷ್ಯಾದ ಅತಿದೊಡ್ಡ ರೇಷ್ಮೆ ಗೂಡಿನ ಮಾರುಕಟ್ಟೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ರಾಮನಗರ ಜಿಲ್ಲೆ ರೇಷ್ಮೆ ಉತ್ಪಾದನೆಗೆ ಹೆಸರುವಾಸಿಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

MLC Election Results: ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್‌ ಅಭ್ಯರ್ಥಿ ಡಾ.ಚಂದ್ರಶೇಖರ್ ಪಾಟೀಲ್

MLC Election Results: ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಾ.ಚಂದ್ರಶೇಖರ್ ಪಾಟೀಲ್ ಅವರು ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ವಿರುದ್ಧ 4,651 ಮತಗಳ ಅಂತರದಿಂದ ಜಯಭೇರಿ ಮೊಳಗಿಸಿದ್ದಾರೆ.

VISTARANEWS.COM


on

MLC Election
Koo

ಕಲಬುರಗಿ: ವಿಧಾನ ಪರಿಷತ್‌ಗೆ ಈಶಾನ್ಯ ಪದವೀಧರ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ (North East Graduate Constituency) ಎರಡನೇ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ಡಾ.ಚಂದ್ರಶೇಖರ್ ಪಾಟೀಲ್ ಗೆಲುವು ಕಂಡಿದ್ದಾರೆ. ಇವರು 4,651 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ವಿರುದ್ಧ ಜಯ ಸಾಧಿಸುವ ಮೂಲಕ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದಾರೆ.

ಎರಡನೇ ಪ್ರಾಶಸ್ತ್ಯ ಮತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್ ಗೆಲುವು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಾ.ಚಂದ್ರಶೇಖರ ಪಾಟೀಲ್‌ಗೆ 43,484 ಮತ ಬಂದಿದ್ದರೆ, ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ 38,833 ಮತಗಳು ಗಳಿಸಿದ್ದಾರೆ. ಈ ಮೂಲಕ 4,651 ಮತಗಳ ಅಂತರದಿಂದ ಡಾ.ಚಂದ್ರಶೇಖರ್ ಪಾಟೀಲ್ ಕ್ಷೇತ್ರದಲ್ಲಿ ವಿಜಯಪತಾಕೆ ಹಾರಿಸಿದ್ದಾರೆ. ಒಟ್ಟಾರೆ 1,09,031 ಮತ ಚಲಾವಣೆಯಾಗಿದ್ದು, ಇದರಲ್ಲಿ 96,519 ಮತಗಳು ಪುರಸ್ಕೃತಗೊಂಡಿದ್ದು, 12,513 ಮತಗಳು ತಿರಸ್ಕೃತಗೊಂಡಿವೆ.

ಇದನ್ನೂ ಓದಿ | MLC Election Results: ದಕ್ಷಿಣ ಶಿಕ್ಷಕರ ಕ್ಷೇತ್ರ; ಮೊದಲ ಪ್ರಾಶಸ್ತ್ಯ ಮತದಲ್ಲೇ ಮೈತ್ರಿ ಅಭ್ಯರ್ಥಿ ವಿವೇಕಾನಂದ ಭರ್ಜರಿ ಗೆಲುವು

ಫಲಿತಾಂಶದ ಬಗ್ಗೆ ಕಾಂಗ್ರೆಸ್‌ನ ನೂತನ ಪರಿಷತ್ ಸದಸ್ಯ ಡಾ.ಚಂದ್ರಶೇಖರ್ ಪಾಟೀಲ್ ಮಾತನಾಡಿ, ಇದು ನನ್ನ ಗೆಲುವಲ್ಲಾ, ಏಳು ಜಿಲ್ಲೆಯ ಪದವಿಧರರ ಗೆಲುವು. ನನ್ನ ಗೆಲುವಿಗೆ ಶಿಕ್ಷಕರು, ಪದವೀಧರರು ಕಾರಣ. ಕಲ್ಯಾಣ‌ ಕರ್ನಾಟಕ ಭಾಗದ ನಿರುದ್ಯೋಗ ಸಮಸ್ಯೆ ಬಗೆಹರಿಸಲು ಶ್ರಮಿಸುವೆ. ಹಳೆ ಪಿಂಚಣಿ ಯೋಜನೆ ಜಾರಿಗೆ ತರಲು ಪ್ರಯತ್ನ ಮಾಡುವೆ. ನಾನು ರಾಜಕಾರಣಿ ಮನೆತನದವನು, ಶಿಕ್ಷಣ ಸಂಸ್ಥೆ ನಡೆಸುತ್ತಿದ್ದೇನೆ. ನನಗೂ ಶಿಕ್ಷಕರ ಸಮಸ್ಯೆ ಕಷ್ಟ ಏನು ಅಂತ ಗೊತ್ತಿದೆ. ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇತ್ತು, ಕೆಲಸ‌ ಮಾಡಲು ಸಹಕರಿಸಲಿಲ್ಲ.. ಈಗ ರಾಜ್ಯದಲ್ಲಿ ನಮ್ಮದೇ ಸರ್ಕಾರ ಇದೆ. ಅತಿಥಿ ಉಪನ್ಯಾಸಕರ ಕಾಯಮಾತಿಗೆ ಹಿರಿಯರ ಜತೆ ಮಾತನಾಡುವೆ ಎಂದು ತಿಳಿಸಿದ್ದಾರೆ.

ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಧನಂಜಯ ಸರ್ಜಿಗೆ ಗೆಲುವು; ರಘುಪತಿ ಭಟ್‌ ಬಂಡಾಯ ವಿಫಲ

dhananjaya sarji mlc election

ಮೈಸೂರು: ವಿಧಾನ ಪರಿಷತ್‌ಗೆ (MLC Election Results) ನೈರುತ್ಯ ಪದವೀಧರ ಕ್ಷೇತ್ರದಿಂದ (Graduate constituency) ನಡೆದ ಚುನಾವಣೆಯಲ್ಲಿ ಬಿಜೆಪಿ (BJP) ಅಭ್ಯರ್ಥಿ ಡಾ. ಧನಂಜಯ ಸರ್ಜಿಗೆ ಭರ್ಜರಿ ಗೆಲುವು ದೊರೆತಿದೆ. ಕಾಂಗ್ರೆಸ್ (Congress) ಅಭ್ಯರ್ಥಿ ಆಯನೂರು ಮಂಜುನಾಥ್‌ಗೆ ಹೀನಾಯ ಸೋಲಾಗಿದೆ. ಬಿಜೆಪಿಯಿಂದ ಬಂಡಾಯ ಎದ್ದು ಸ್ಪರ್ಧಿಸಿದ್ದ ಮಾಜಿ ಶಾಸಕ ರಘುಪತಿ ಭಟ್‌ (Raghupathi Bhat) ಅವರ ಉಮೇದುವಾರಿಕೆ ವಿಫಲವಾಗಿದೆ.

ಬಿಜೆಪಿಯ ಧನಂಜಯ ಸರ್ಜಿಗೆ 37,627 ಮತಗಳು ಲಭ್ಯವಾಗಿವೆ. ಕಾಂಗ್ರೆಸ್‌ನ ಆಯನೂರು ಮಂಜುನಾಥ್‌ಗೆ 13,516 ಮತಗಳು ಲಭ್ಯವಾಗಿವೆ. ಕಾಂಗ್ರೆಸ್ ವಿರುದ್ಧ ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿಗೆ 24,111 ಮತಗಳ ಅಂತರದ ಭರ್ಜರಿ ಗೆಲುವು ಪ್ರಾಪ್ತವಾಗಿವೆ. ಈ ಮೂಲಕ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಸತತ ಏಳನೇ ಬಾರಿ ಬಿಜೆಪಿ ಗೆಲುವಿನ ನಗೆ ಬೀರಿದೆ.

ಚಲಾವಣೆಯಾಗಿದ್ದ ಒಟ್ಟು ಮತಗಳು 66497. ಈ ಪೈಕಿ ಸಿಂಧುವಾದ ಮತಗಳು 61382. ಕುಲಗೆಟ್ಟ ಮತಗಳು 5115. ಗೆಲುವಿಗಾಗಿ ನಿಗದಿಪಡಿಸಿದ್ದ ಕೋಟಾ ಮತಗಳು 30,692. ನಿಗದಿಪಡಿಸಿದ್ದ ಕೋಟಾ ಮತಗಳಿಗಿಂತ ಹೆಚ್ಚಿನ ಪ್ರಮಾಣದ ಮೊದಲ ಪ್ರಾಶಸ್ತ್ಯ ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದ್ದಾರೆ ಬಿಜೆಪಿಯ ಧನಂಜಯ ಸರ್ಜಿ.

ಇದನ್ನೂ ಓದಿ | MLC Election Results: ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಜಯಭೇರಿ

ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್‌ಗೆ 7,039 ಮತಗಳು ಲಭ್ಯವಾಗಿವೆ. ಇವರ ಪರವಾಗಿ ಶಿವಮೊಗ್ಗದಿಂದ ಮಾಜಿ ಸಚಿವ ಈಶ್ವರಪ್ಪ ಕೂಡ ಬಂದು ಮತ ಯಾಚಿಸಿದ್ದರು. ಆದರೆ ಬಿಜೆಪಿ ಮತ ಗಳಿಕೆಯಲ್ಲಿ ಯಾವುದೇ ಕನ್ನ ಕೊರೆಯಲು ಇವರು ವಿಫಲರಾಗಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಇವರಿಗೆ ಪಕ್ಷ ಟಿಕೆಟ್‌ ನೀಡಿರಲಿಲ್ಲ. ವಿಧಾನ ಪರಿಷತ್ತಿಗೆ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ರಘುಪತಿ ಭಟ್‌ಗೆ ಅದೂ ಸಿಕ್ಕಿರಲಿಲ್ಲ. ಇದೀಗ ಬಂಡಾಯವೂ ವಿಫಲವಾಗಿದೆ. ಹಿಜಾಬ್‌ ಮುಂತಾದ ಪ್ರಕರಣಗಳಲ್ಲಿ ಆಕ್ರಮಣಕಾರಿ ನಿಲುವು ತಾಳಿದ್ದ ರಘುಪತಿ ಭಟ್‌ ಅವರ ಈ ತೀವ್ರ ನಿಲುವೇ ಅವರನ್ನು ಬಿಜೆಪಿ ಕೈಬಿಡಲು ಕಾರಣವಾಯಿತಾ ಎಂಬ ಮಾತು ಇದೀಗ ಕೇಳಿ ಬರುತ್ತಿದೆ.

Continue Reading

ಕರ್ನಾಟಕ

Valmiki Corporation Scam: ಬಿ. ನಾಗೇಂದ್ರ ನೀಡಿದ ರಾಜೀನಾಮೆ ಅಂಗೀಕಾರ ಮಾಡಿದ ರಾಜ್ಯಪಾಲರು

Valmiki Corporation Scam: ಸಿಎಂ ಸಿದ್ದರಾಮಯ್ಯ ಶಿಫಾರಸಿನ ಮೇರೆಗೆ ಬಿ.ನಾಗೇಂದ್ರ ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅನುಮೋದಿಸಿದ್ದಾರೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ (Valmiki Corporation Scam) ಭ್ರಷ್ಟಾಚಾರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಯುವಜನ ಸೇವಾ, ಕ್ರೀಡಾ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ (B Nagendra) ಗುರುವಾರ ರಾಜೀನಾಮೆ ನೀಡಿದ್ದರು. ಇದೀಗ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕಾರ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಶಿಫಾರಸಿನ ಮೇರೆಗೆ ಬಿ.ನಾಗೇಂದ್ರ ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ರಾಜ್ಯಪಾಲರು ಅನುಮೋದಿಸಿದ್ದಾರೆ.

ಯುವಜನ ಸೇವೆ, ಕ್ರೀಡೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ಅವರು ನೀಡಿರುವ ರಾಜೀನಾಮೆಯನ್ನು ಅಂಗೀಕರಿಸಲು ಸಿಎಂ ಸಿದ್ದರಾಮಯ್ಯ ಅವರು ಶಿಫಾರಸು ಮಾಡಿದ್ದರು. ಹೀಗಾಗಿ ಭಾರತದ ಸಂವಿಧಾನದ 164 (1) ನೇ ವಿಧಿಯಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅವರು, ನಾಗೇಂದ್ರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ಇದನ್ನೂ ಓದಿ | Kangana Ranaut: ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕುಲ್ವಿಂದರ್‌ ಕೌರ್‌ ಅರೆಸ್ಟ್‌

ಸಿಎಂ ಸಿದ್ದರಾಮಯ್ಯಗೆ ಗುರುವಾರ ರಾಜೀನಾಮೆ ಪತ್ರ ಸಲ್ಲಿಸಿದ್ದ ಬಿ.ನಾಗೇಂದ್ರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ (Valmiki Corporation Scam) ಭ್ರಷ್ಟಾಚಾರ ಆರೋಪಗಳು ಕೇಳಿಬಂದಿದ್ದರಿಂದ ಯುವಜನ ಸೇವಾ, ಕ್ರೀಡಾ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ (B Nagendra) ಅಧಿಕೃತವಾಗಿ ರಾಜೀನಾಮೆ ನೀಡಿದ್ದರು. ಸಿಎಂ ಸಿದ್ದರಾಮಯ್ಯ ಅವರನ್ನು ಗುರುವಾರ ರಾತ್ರಿ ಭೇಟಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಇದರಿಂದ ಸಿದ್ದರಾಮಯ್ಯ ಸರ್ಕಾರದಲ್ಲಿ ಮೊದಲ ವಿಕೆಟ್‌ ಪತನವಾದಂತಾಗಿದೆ.

ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಮತ್ತು ಸಚಿವ ಜಮೀರ್ ಅಹಮದ್ ಖಾನ್ ಉಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ನಾಗೇಂದ್ರ ರಾಜೀನಾಮೆ ಪತ್ರ ನೀಡಿದ್ದರು. ರಾಜೀನಾಮೆ ಪತ್ರದಲ್ಲಿ ಒಂದೇ ಸಾಲು ಬರೆದಿರುವುದು ಕಂಡುಬಂದಿದ್ದು, ನನ್ನ ಸ್ವ ಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ನಾಗೇಂದ್ರ ಬರೆದಿದ್ದರು.

ಇದಕ್ಕೂ ಮೊದಲು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ನಾಗೇಂದ್ರ ಅವರು, ರಾಜೀನಾಮೆ ನೀಡುವುದು ನನ್ನ ಸ್ವ ನಿರ್ಧಾರವಾಗಿದೆ. ಇದಕ್ಕಾಗಿ ಯಾರೂ ಒತ್ತಡ ಹಾಕಿಲ್ಲ. ಆತ್ಮ ಸಾಕ್ಷಿಯಾಗಿ ರಾಜೀನಾಮೆ ನೀಡುತ್ತಿದ್ದೇನೆ. ನಾನು ಯಾವ ತಪ್ಪೂ ಮಾಡಿಲ್ಲ, ನಾನು ನಿರ್ದೋಷಿ. ಪ್ರಕರಣದಲ್ಲಿ ತನಿಖೆ ನಡೆದು ಸತ್ಯಾಂಶ ಜನರಿಗೆ ತಿಳಿಯಲಿದೆ ಎಂದು ತಿಳಿಸಿದ್ದರು.

ಕಳೆದ ಹತ್ತು ದಿನಗಳಿಂದ ವಾಲ್ಮೀಕಿ ನಿಗಮ ಅಕ್ರಮದ (Valmiki Corporation Scam) ಬಗ್ಗೆ ಮಾಧ್ಯಮಗಳಲ್ಲಿ ಚರ್ಚೆ ಆಗುತ್ತಿದೆ. ವಿಪಕ್ಷದವರು ಕಾಂಗ್ರೆಸ್ ಪಕ್ಷದ ವಿರುದ್ಧ ಮಾತನಾಡುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ನಿಗಮದ ಅಧಿಕಾರಿ ಕೂಡ ನನ್ನ ಹೆಸರನ್ನು ಎಲ್ಲೂ ಪ್ರಸ್ತಾಪ ಮಾಡಿಲ್ಲ. ನನಗೆ ಯಾರ ಒತ್ತಡಕ್ಕೂ ಮಣಿದಿಲ್ಲ, ನಿಸ್ಪಕ್ಷಪಾತವಾಗಿ ತನಿಖೆ ನಡೆಯಲು ಸಚಿವ ಸ್ಥಾನಕ್ಕೆ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡುತ್ತಿದ್ದೇನೆ. ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರ ತರುವುದು ಬೇಡ ಎಂದು ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ್ದರು.

ಇದನ್ನೂ ಓದಿ | Lok Sabha Election 2024: ಈ 17 ಸಂಸದರು ಎನ್‌ಡಿಎಯಲ್ಲೂ ಇಲ್ಲ, ಇಂಡಿ ಕೂಟದಲ್ಲೂ ಇಲ್ಲ!

ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರು ರಾಜಭವನ ಚಲೋ ನಡೆಸಿ, ರಾಜ್ಯಪಾಲರಿಗೆ ಗುರುವಾರ ಬೆಳಗ್ಗೆ ಮನವಿ ಪತ್ರಸಲ್ಲಿಸಿದ್ದರು. ನಂತರ ಸಚಿವ ಸ್ವಯಂ ಪ್ರೇರಿತವಾಗಿಯೇ ರಾಜೀನಾಮೆ ನೀಡಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದರು. ನಂತರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಪತ್ರ ಸಲ್ಲಿಸಿದ್ದರು.

Continue Reading

ರಾಜಕೀಯ

Pawan Kalyan: ಪವನ್ ಕಲ್ಯಾಣ್ ಗಾಳಿಯಲ್ಲ ಬಿರುಗಾಳಿ ಎಂದ ಮೋದಿ! ಮೋದಿ ಇರುವವರೆಗೆ ದೇಶ ತಲೆಬಾಗುವುದಿಲ್ಲ ಎಂದ ಪವನ್‌!

ತೆಲುಗು ನಟ, ರಾಜಕಾರಣಿ ಪವನ್ ಕಲ್ಯಾಣ್ (Pawan Kalyan) ಅವರು ತಂಗಾಳಿಯಲ್ಲ, ಬಿರುಗಾಳಿ ಎಂದು ಸಂಸತ್ತಿನಲ್ಲಿ ನಡೆದ ಎನ್ ಡಿಎ ಮೈತ್ರಿಕೂಟದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿರುವುದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ (Viral Video) ಆಗಿದೆ. ನಟ ಪವನ್ ಕಲ್ಯಾಣ್ ಅವರ ಸಾಕಷ್ಟು ಅಭಿಮಾನಿಗಳು ಪ್ರಧಾನಿ ಅವರ ಈ ಮಾತುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

By

Pawan Kalyan
Koo

ನವದೆಹಲಿ: ಸಂಸತ್ತಿನಲ್ಲಿ (Parliament) ಶುಕ್ರವಾರ (Pawan Kalyan) ನಡೆದ ಎನ್ ಡಿ ಎ (NDA) ಮೈತ್ರಿ ಕೂಟದ ಸಭೆಯಲ್ಲಿ ತೆಲುಗು ದೇಶಂ ಪಕ್ಷವು (TDP) ಎನ್ ಡಿ ಎ ಮೈತ್ರಿಕೂಟದ ಭಾಗವಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ (PM Narendra Modi), ಇಲ್ಲಿ ಕುಳಿತಿರುವ ವ್ಯಕ್ತಿ ಗಾಳಿಯಲ್ಲ, ಬಿರುಗಾಳಿ ಎಂದು ತೆಲುಗು ನಟ (Telugu actor), ರಾಜಕಾರಣಿ ಪವನ್ ಕಲ್ಯಾಣ್ ( Pawan Kalyan) ಅವರ ಕುರಿತಾಗಿ ಹಾಸ್ಯ ಚಟಾಕಿ ಹಾರಿಸಿದರು.

ಪವನ್ ಕಲ್ಯಾಣ್ ಕುರಿತು ನರೇಂದ್ರ ಮೋದಿ ಮಾಡಿರುವ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ (social media) ಭಾರಿ ವೈರಲ್ (Viral Video) ಆಗಿದೆ. ನಟ ಪವನ್ ಕಲ್ಯಾಣ್ ಅವರ ಸಾಕಷ್ಟು ಅಭಿಮಾನಿಗಳು ಪ್ರಧಾನಿ ಅವರ ಈ ಮಾತುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕೆಲವು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಕಾಮೆಂಟ್ ಮಾಡಿ, ಪವನ್ ಕಲ್ಯಾಣ್ ಅವರ ಸಿನಿಮಾಗಳ ‘ಮೊದಲ ದಿನದ ಮೊದಲ ಶೋ’ ನೋಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೇಳಿದ್ದಾರೆ.


ಈ ನಡುವೆ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ನರೇಂದ್ರ ಮೋದಿಯವರ ನಾಯಕತ್ವವನ್ನು ಮೆಚ್ಚಿ ಮಾತನಾಡಿದರು.

ನರೇಂದ್ರ ಮೋದಿ ಅವರಿಗೆ ಪಕ್ಷದ ಪರವಾಗಿ ಧನ್ಯವಾದ ಅರ್ಪಿಸಿದ ಪವನ್ ಕಲ್ಯಾಣ್, ನರೇಂದ್ರ ಮೋದಿ ಅವರು 15 ವರ್ಷಗಳ ಕಾಲ ಪ್ರಧಾನಿಯಾಗಿರುತ್ತಾರೆ ಎಂದು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಹೇಳಿದ್ದನ್ನು ನೆನಪಿಸಿಕೊಂಡರು. ಚಂದ್ರಬಾಬೂಜಿ ನಿಮ್ಮ ಭವಿಷ್ಯ ನಿಜವಾಯಿತು ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.


ಅವರು ತಮ್ಮ ಮಾತು ಮುಂದುವರಿಸುತ್ತಾ, ಮೋದಜೀ ನೀವು ನಿಜವಾಗಿಯೂ ರಾಷ್ಟ್ರಕ್ಕೆ ಸ್ಫೂರ್ತಿ ನೀಡಿದ್ದೀರಿ. ನೀವು ದೇಶದ ಪ್ರಧಾನಿಯಾಗಿರುವವರೆಗೆ ನಮ್ಮ ದೇಶವು ಯಾರಿಗೂ ಎಂದಿಗೂ ತಲೆಬಾಗುವುದಿಲ್ಲ. ನಿಮ್ಮ ನಾಯಕತ್ವದಲ್ಲಿ ಪ್ರಬಲವಾದ ಹಿಮಾಲಯವು ಎಂದಿಗೂ ತಲೆಬಾಗುವುದಿಲ್ಲ. ಭಾರತವು ಎಂದಿಗೂ ತಲೆಬಾಗುವುದಿಲ್ಲ ಮತ್ತು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ, ಕಾಮಾಕ್ಯದಿಂದ ದ್ವಾರಕಾದವರೆಗೆ ನಿಮ್ಮ ನಾಯಕತ್ವದಲ್ಲಿ ಕೆಲಸ ಮಾಡಲು ನಾವು ನಿಜವಾಗಿಯೂ ಹೆಮ್ಮೆಪಡುತ್ತೇವೆ ಎಂದರು.

ಇದನ್ನೂ ಓದಿ: Narendra Modi: ಪ್ರಮಾಣವಚನಕ್ಕೂ ಮೊದಲು ಅಡ್ವಾಣಿಯ ಆಶೀರ್ವಾದ ಪಡೆದ ನರೇಂದ್ರ ಮೋದಿ!

ನಿಮ್ಮ ಹಿಂದೆ ನಾವೆಲ್ಲರೂ ಸೇರುತ್ತೇವೆ. ದೇಶ ಸೇವೆ ಮಾಡಲು ನೀವು ನಮ್ಮನ್ನು ಪ್ರೇರೇಪಿಸಿದ ರೀತಿ ಮತ್ತು ನಿಮ್ಮ ನಡೆ- ನುಡಿ, ನೀವು ನಮಗೆ ತೋರಿದ ಅಭಿವೃದ್ಧಿಯ ರೀತಿಯಿಂದ ದೇಶಪ್ರೇಮ ನಮ್ಮಲ್ಲಿ ಮೂಡಿದೆ ಎಂದು ಹೇಳಿದರು.

ನಿಮ್ಮ ಮಾರ್ಗದರ್ಶನ ಮತ್ತು ಬೆಂಬಲದ ಅಡಿಯಲ್ಲಿಈ ಗೆಲುವು ಸಾಧ್ಯವಾಯಿತು. ವಿಧಾನಪರಿಷತ್ ಚುನಾವಣೆಯಲ್ಲಿ ಶೇ.91ರಷ್ಟು ಯಶಸ್ಸು ಸಾಧಿಸಿದ್ದೇವೆ, ನಾವೆಲ್ಲರೂ ನಿಮಗೆ ಆಭಾರಿಯಾಗಿದ್ದೇವೆ ಎಂದು ತಿಳಿಸಿದರು.

ಈ ಸಭೆಯಲ್ಲಿ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ ಸೇರಿದಂತೆ ಅನೇಕ ಬಿಜೆಪಿ ಸಂಸದರು ಉಪಸ್ಥಿತರಿದ್ದರು.

Continue Reading

ದೇಶ

Rahul Gandhi: ರಾಯ್‌ ಬರೇಲಿ V/S ವಯನಾಡ್‌-ರಾಹುಲ್‌ ಆಯ್ಕೆ ಯಾವುದು?

Rahul Gandhi: ರಾಹುಲ್‌ ಗಾಂಧಿಯವರು ಈ ಬಾರಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ ಏಕೈಕ ನಾಯಕರಾಗಿದ್ದಾರೆ. ರಾಹುಲ್‌ ಗಾಂಧಿ ಈ ಬಾರಿ ರಾಯ್‌ ಬರೇಲಿ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ರಾಜಕೀಯ ಮರುಜನ್ಮ ಕೊಟ್ಟ ವಯನಾಡನ್ನು ತ್ಯಜಿಸಲಿದ್ದಾರೆ ಎಂದು ಕೆಲವು ಹೇಳಿದರೆ, ಮತ್ತೆ ಕೆಲವು ವಯನಾಡನ್ನು ಉಳಿಸಿಕೊಳ್ಳಲಿದ್ದಾರೆ ಎಂದು ಹೇಳುತ್ತಿದ್ದಾರೆ.

VISTARANEWS.COM


on

Rahul Gandhi
Koo

ನವದೆಹಲಿ: ಈ ಬಾರಿ ಲೋಕಸಭೆ ಚುನಾವಣೆ(Lok Sabha Election 2024)ಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ(Rahul Gandhi) ಎರಡೂ ಕ್ಷೇತ್ರದಲ್ಲಿ ಕಣಕ್ಕಿಳಿದು ಅದೃಷ್ಟ ಪರೀಕ್ಷೆ ನಡೆಸಿ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ರಾಜಕೀಯ ಮರಜನ್ಮ ಕೊಟ್ಟ ಕೇರಳದ ವಯನಾಡು(Wayanad) ಹಾಗೂ ಗಾಂಧಿ ಕುಟುಂಬದ ಭದ್ರಕೋಟೆ ರಾಯ್‌ ಬರೇಲಿ(Rae Bareli) ಕ್ಷೇತ್ರಗಳಲ್ಲಿ ಬರೋಬ್ಬರಿ 3 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಪ್ರಚಂಡ ಗೆಲುವು ಪಡೆದಿದ್ದಾರೆ. ಎರಡೂ ಕ್ಷೇತ್ರಗಳನ್ನು ಗೆದ್ದಿರುವ ರಾಹುಲ್‌ ಎರಡೂ ಕ್ಷೇತ್ರವನ್ನೂ ಪ್ರತಿನಿಧಿಸುವಂತಿಲ್ಲ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಹಾಗಾದರೆ ಈ ಬಾರಿ ರಾಹುಲ್‌ ಯಾವ ಕ್ಷೇತ್ರವನ್ನು ಉಳಿಸಿಕೊಳ್ಳಬಹುದು?

ರಾಹುಲ್‌ ಗಾಂಧಿಯವರು ಈ ಬಾರಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ ಏಕೈಕ ನಾಯಕರಾಗಿದ್ದಾರೆ. ರಾಹುಲ್‌ ಗಾಂಧಿ ಈ ಬಾರಿ ರಾಯ್‌ ಬರೇಲಿ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ರಾಜಕೀಯ ಮರುಜನ್ಮ ಕೊಟ್ಟ ವಯನಾಡನ್ನು ತ್ಯಜಿಸಲಿದ್ದಾರೆ ಎಂದು ಕೆಲವು ಹೇಳಿದರೆ, ಮತ್ತೆ ಕೆಲವು ವಯನಾಡನ್ನು ಉಳಿಸಿಕೊಳ್ಳಲಿದ್ದಾರೆ ಎಂದು ಹೇಳುತ್ತಿದ್ದಾರೆ.

ವಯನಾಡು ಉಳಿಸಿಕೊಳ್ಳಲು ಕಾರಣವೇನು?

2019ರಲ್ಲೂ ರಾಹುಲ್‌ ಗಾಂಧಿ ಅಮೇಥಿ ಮತ್ತು ವಯನಾಡು ಕ್ಷೇತ್ರಗಳಿಂದ ಸ್ಪರ್ಧಿಸಿದ್ದ. ಆ ಸಂದರ್ಭದಲ್ಲಿ ಅವರು ಅಮೇಥಿಯಲ್ಲಿ ಸೋತಾಗ ವಯನಾಡು ಕ್ಷೇತ್ರ ಅವರನ್ನು ಕೈ ಹಿಡಿದಿತ್ತು. ಹೀಗಾಗಿ ಕ್ಷೇತ್ರದ ಬಗ್ಗೆ ರಾಹುಲ್‌ಗೆ ಭಾವನಾತ್ಮಕ ಸಂಬಂಧ ಇದೆ. ವಯನಾಡು ಜನರು ಕೂಡ ತಮ್ಮ ಭಾಷಿಗನಲ್ಲದಿದ್ದರೂ ರಾಹುಲ್‌ ಗಾಂಧಿಗೆ ಅಭೂತಪೂರ್ವ ಪ್ರೀತಿ ತೋರಿದ್ದಾರೆ. ಹೀಗಾಗಿಯೇ 3,64,422ರಷ್ಟು ಮತಗಳ ಅಂತರದಲ್ಲಿ ಗೆಲುವು ಸಾಧಿಸುವಂತಾಯಿತು. ರಾಹುಲ್‌ ಗಾಂಧಿಗೂ ಅಲ್ಲಿನ ಜನರ ಮೇಲೆ ಅಷ್ಟೇ ಪ್ರೀತಿ ಇದೆ. ಇನ್ನು 2026ರಲ್ಲಿ ಕೇರಳ ಚುನಾವಣೆ ಎದುರಿಸುತ್ತಿದ್ದು, ಒಬ್ಬ ಸಂಸದನಾಗಿ ರಾಹುಲ್‌ ಅಲ್ಲಿ ಮುಂದುವರೆಯುವುದರಿಂದ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಪಕ್ಷಕ್ಕೆ ಬಲತುಂಬಲಿದೆ.

ರಾಯ್‌ ಬರೇಲಿಯ ಕಥೆ ಏನು?

ರಾಯ್ಬರೇಲಿಯಲ್ಲಿ ಸ್ಪರ್ಧಿಸಲು ರಾಹುಲ್ ಗಾಂಧಿ ಅಷ್ಟೊಂದು ಉತ್ಸುಕರಾಗಿರಲಿಲ್ಲ. ಮಿತ್ರ ಅಖಿಲೇಶ್ ಯಾದವ್ ಅವರ ಒತ್ತಾಯದ ಮೇರೆಗೆ ಅವರು ಸ್ಪರ್ಧಿಸಿದ್ದರು. ಅದೂ ಅಲ್ಲದೇ ಈ ಹಿಂದೆ ಅವರ ಅಜ್ಜ ಫಿರೋಜ್, ಅಜ್ಜಿ ಇಂದಿರಾ ಮತ್ತು ತಾಯಿ ಸೋನಿಯಾ ಗಾಂಧಿ ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇನ್ನು ಒಲ್ಲದ ಮನಸ್ಸಿನಲ್ಲಿ ಕಣಕ್ಕಿಳಿದಿದ್ದ ರಾಹುಲ್‌ ನಿರೀಕ್ಷೆಗೂ ಮಿರಿದ ಮಟ್ಟದಲ್ಲಿ ಅಂದರೆ 3,89,341ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಹೀಗಾಗಿ ವಯನಾಡಿನ ಮೇಲೆ ಅತಿ ಹೆಚ್ಚಿನ ಒಲವು ಹೊಂದಿರುವ ರಾಹುಲ್‌ ಒತ್ತಡ, ಒತ್ತಾಯಕ್ಕೆ ಮಣಿದು ರಾಯ್‌ ಬರೇಲಿಯನ್ನೇ ಉಳಿಸಿಕೊಳ್ಳುವ ಸಾಧ್ಯತೆ ಇದೆ.

ಏನಂದ್ರಿದ್ದು ಸೋನಿಯಾ?

ಮೇ.17ರಂದು ರಾಯ್‌ ಬರೇಲಿಯಲ್ಲಿ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ್ದ ಸೋನಿಯಾ, ನಾನು ನನ್ನ ಮಗನನ್ನು ನಿಮ್ಮ ಕೈಗೆ ಒಪ್ಪಿಸುತ್ತಿದ್ದೇನೆ. ರಾಹುಲ್ ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ. ಗಾಂಧಿ ಕುಟುಂಬಕ್ಕೂ ಈ ಮಣ್ಣಿಗೂ ಶತಮಾನಗಳ ನಂಟಿದೆ ಎಂದು ಹೇಳಿದ್ದರು.

ಇದನ್ನೂ ಓದಿ:Chandan Shetty: ತಂಗಿ ತಂಗಿ ಎಂದೇ ಮದುವೆಯಾಗಿದ್ದ ಚಂದನ್‌! ಇವರ ಬಾಳಲ್ಲಿ ವಿಲನ್‌ ಆಗಿದ್ದು ಯಾರು?

Continue Reading
Advertisement
MLC Election
ಕರ್ನಾಟಕ6 mins ago

MLC Election Results: ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್‌ ಅಭ್ಯರ್ಥಿ ಡಾ.ಚಂದ್ರಶೇಖರ್ ಪಾಟೀಲ್

Saree Fashion
ಫ್ಯಾಷನ್8 mins ago

Saree Fashion: ಸೆಲೆಬ್ರೆಟಿ ಲುಕ್‌ಗಾಗಿ ಬಂತು ಬಂಗಾರ ವರ್ಣದ ಸೀರೆಗಳು!

T20 World Cup
ಪ್ರಮುಖ ಸುದ್ದಿ49 mins ago

T20 World Cup : ಪಾಕಿಸ್ತಾನ ತಂಡಕ್ಕೆ ಕರಾಳ ದಿನ; ಮಾಜಿ ಆಟಗಾರರಿಂದ ಟೀಕೆ

World Food Safety Day
ಆರೋಗ್ಯ55 mins ago

World Food Safety Day: ಆಹಾರ ಸುರಕ್ಷತೆಗಾಗಿ ನಾವು ಏನು ಮಾಡಬಹುದು?

NDA Meeting
ದೇಶ1 hour ago

NDA Meeting: ಎನ್‌ಡಿಎ ಸಭೆಯಲ್ಲಿ ಮೋದಿಯ ಪಾದ ಮುಟ್ಟಿ ನಮಸ್ಕರಿಸಲು ಹೋದ ನಿತೀಶ್ ಕುಮಾರ್! ವಿಡಿಯೊ ನೋಡಿ

Viral Video
ವೈರಲ್ ನ್ಯೂಸ್1 hour ago

Viral Video: ಮಕ್ಕಳು ಆಟವಾಡ್ತಿದ್ದ ವಾಟರ್‌ ಪಾರ್ಕ್‌ಗೆ ಏಕಾಏಕಿ ನುಗ್ಗಿದ ಬುಲ್ಡೋಜರ್‌; ಆಮೇಲೆ ನಡೆದಿದ್ದೇ ಬೇರೆ- ವಿಡಿಯೋ ನೋಡಿ

Valmiki Corporation Scam
ಕರ್ನಾಟಕ1 hour ago

Valmiki Corporation Scam: ಬಿ. ನಾಗೇಂದ್ರ ನೀಡಿದ ರಾಜೀನಾಮೆ ಅಂಗೀಕಾರ ಮಾಡಿದ ರಾಜ್ಯಪಾಲರು

Heera Mandi Fashion
ಫ್ಯಾಷನ್1 hour ago

Heera Mandi Fashion: ರೀಕ್ರಿಯೆಟ್‌ ಆಗುತ್ತಿದೆ ಹೀರಾಮಂಡಿ ಲುಕ್‌!

Chandan Shetty divorce main Reason children
ಸ್ಯಾಂಡಲ್ ವುಡ್1 hour ago

Niveditha Gowda: ಮಗು ವಿಚಾರಕ್ಕೆ ಮುನಿಸು; ಒಂದೇ ಕಾರಲ್ಲಿ ಬಂದು ಡಿವೋರ್ಸ್‌ ಅರ್ಜಿ ಸಲ್ಲಿಸಿದ ಚಂದನ್‌-ನಿವೇದಿತಾ!

Pawan Kalyan
ರಾಜಕೀಯ1 hour ago

Pawan Kalyan: ಪವನ್ ಕಲ್ಯಾಣ್ ಗಾಳಿಯಲ್ಲ ಬಿರುಗಾಳಿ ಎಂದ ಮೋದಿ! ಮೋದಿ ಇರುವವರೆಗೆ ದೇಶ ತಲೆಬಾಗುವುದಿಲ್ಲ ಎಂದ ಪವನ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 weeks ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌