Self Harming: ನಿದ್ದೆ ಮಾತ್ರೆ ಸೇವಿಸಿ ಮಹಿಳೆ ಆತ್ಮಹತ್ಯೆ; ಪೊಲೀಸರ ಕಿರುಕುಳಕ್ಕೆ ಬಲಿಯಾಯ್ತಾ ಜೀವ? - Vistara News

ಕ್ರೈಂ

Self Harming: ನಿದ್ದೆ ಮಾತ್ರೆ ಸೇವಿಸಿ ಮಹಿಳೆ ಆತ್ಮಹತ್ಯೆ; ಪೊಲೀಸರ ಕಿರುಕುಳಕ್ಕೆ ಬಲಿಯಾಯ್ತಾ ಜೀವ?

Self Harming: ಚನ್ನಪಟ್ಟಣದಲ್ಲಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸರ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ.

VISTARANEWS.COM


on

Madhuri From channapatna
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮನಗರ: ಗಲಾಟೆ ವಿಚಾರ ದೂರು ನೀಡಲು ಹೋದಾಗ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳದೆ ಅವಮಾನಿಸಿ ಕಳುಹಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರ ವರ್ತನೆ ಬಗ್ಗೆ ವಿಡಿಯೊ ಮಾಡಿರುವ ಮಹಿಳೆ, ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ.

ಚನ್ನಪಟ್ಟಣದ ಕೋಟೆ ನಿವಾಸಿ ಮಾಧುರಿ (31) ಮೃತ ಮಹಿಳೆ. ಕಳೆದ ಗುರುವಾರ ರೈಲ್ವೆ ನಿಲ್ದಾಣ ಬಳಿ ಮೃತ ಮಹಿಳೆ ಹಾಗೂ ಜ್ಯೋತಿ ಎಂಬಾಕೆ ನಡುವೆ ದುಡ್ಡಿನ ವಿಚಾರಕ್ಕೆ ಗಲಾಟೆ ನಡೆದಿದೆ. ನಂತರ ಪೊಲೀಸ್ ಠಾಣೆಗೆ ದೂರು ನೀಡಲು ಮಾಧುರಿ ಹೋಗಿದ್ದಳು. ಆದರೆ, ಈ ಹಿಂದೆ ಆಕೆ ಮೇಲೆ ಹಲವು ವಂಚನೆ ಕೇಸ್ ದಾಖಲಾದ ಹಿನ್ನೆಲೆಯಲ್ಲಿ ಪೊಲೀಸರು ದೂರು ಸ್ವೀಕರಿಸಿಲ್ಲ ಎನ್ನಲಾಗಿದೆ.

ಇದನ್ನೂ ಓದಿ | Fraud Case : ಚೀಟಿ ಕಟ್ಟಿಸಿಕೊಂಡು ಕೋಟಿಗಟ್ಟಲೆ ಚೀಟಿಂಗ್ ಮಾಡಿದ ಖತರ್ನಾಕ್‌ ಫ್ಯಾಮಿಲಿ

ನ್ಯಾಯ ಕೇಳಲು ಹೋದರೆ ಪೊಲೀಸರು ಅವಮಾನ ಮಾಡಿ ಕಳುಹಿಸಿದ್ದಾರೆ ಎಂದು ವಿಡಿಯೊದಲ್ಲಿ ಹೇಳಿರುವ ಮಹಿಳೆ, ನಂತರ ನಿದ್ದೆ ಮಾತ್ರೆ ಸೇವಿಸಿದ್ದಾಳೆ. ನಂತರ ಆಕೆಯನ್ನು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ.

ಗಲಾಟೆ ವೇಳೆ ಜ್ಯೋತಿ ಎಂಬಾಕೆ ಫೋನ್‌ ಕಸಿದುಕೊಂಡು ಹೋಗಿದ್ದಳು. ಆ ಬಗ್ಗೆ ಪೊಲೀಸರಿಗೆ ಹೇಳಲು ಹೋಗಿದ್ದರೆ ಪೊಲೀಸರು ನನ್ನ ಮೇಲೆ 10 ಕೇಸ್‌ ಇವೆ ದೌರ್ಜನ್ಯ ಮಾಡಿದ್ದಾರೆ. ಫೋನ್‌ ಕೊಡಲು ನಿರಾಕರಿಸಿದ ಪೊಲೀಸರು ಹಣಕ್ಕೂ ಬೇಡಿಕೆ ಇಟ್ಟಿದ್ದಾರೆ ಎಂದು ಮೃತ ಮಹಿಳೆ ಆರೋಪಿಸಿದ್ದಾರೆ.

ಚನ್ನಪಟ್ಟಣ ಟೌನ್ ಇನ್ಸ್‌ಪೆಕ್ಟರ್ ಶೋಭಾ ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ಮಹಿಳೆ ಕಿರುಕುಳ ಆರೋಪ ಮಾಡಿದ್ದು, ತನಗೆ ರಾಮನಗರ ಎಸ್‌ಪಿ ಅವರು ನ್ಯಾಯ ಕೊಡಿಸಬೇಕು ಎಂದು ಸಾವಿಗೆ ಮುನ್ನ ಕೇಳಿಕೊಂಡಿದ್ದಾಳೆ.

ಗ್ಯಾಸ್ ಲಾರಿ-ಓಮ್ನಿ ನಡುವೆ ಅಪಘಾತ; ಸ್ಥಳದಲ್ಲೇ ಚಾಲಕ ಸಾವು

ಚಿತ್ರದುರ್ಗ: ಗ್ಯಾಸ್ ಲಾರಿ ಮತ್ತು ಓಮ್ನಿ ನಡುವೆ ಅಪಘಾತವಾಗಿ ಸ್ಥಳದಲ್ಲೇ ಓಮ್ನಿ ಕಾರು ಚಾಲಕ ಮೃತಪಟ್ಟಿರುವ ಘಟನೆ ಹೊಳಲ್ಕೆರೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಓಮ್ನಿ ಕಾರು ಚಾಲಕ ರಾಮಗಿರಿ ಕಾರ್ಯಕ್ರಮಕ್ಕೆ ಹೋಗಿ ಬರುವಾಗ ಲಾರಿ ಡಿಕ್ಕಿಯಾಗಿದ್ದರಿಂದ ಅಪಘಾತ ನಡೆದಿದೆ. ಮೃತ ವ್ಯಕ್ತಿ ಚಿತ್ರದುರ್ಗದ ತಮಟುಕಲ್ಲಿನ ನಿವಾಸಿ ಎಂದು ತಿಳಿದು ಬಂದಿದ್ದು, ಸ್ಥಳಕ್ಕೆ ಹೊಳಲ್ಕೆರೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Road Accident : ತಿರುವಿನಲ್ಲಿದ್ದ ಜವರಾಯ; ಸ್ಪೀಡಾಗಿ ಬಂದು ಫೆನ್ಸಿಂಗ್ ಕಂಬಕ್ಕೆ ಡಿಕ್ಕಿ, ಬೈಕ್‌ ಸವಾರ ಸಾವು

Road Accident : ಪ್ರತ್ಯೇಕ ಕಡೆಗಳಲ್ಲಿ ರಸ್ತೆ ಅಪಘಾತಗಳು ವರದಿ ಆಗಿವೆ. ಆನೇಕಲ್‌ನಲ್ಲಿ ಬೈಕ್‌ ಸವಾರನೊಬ್ಬ ಅತಿವೇಗ ಚಾಲನೆಗೆ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಬೆಂಗಳೂರಲ್ಲಿ ಇಬ್ಬರು ಪಾದಚಾರಿಗಳು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

VISTARANEWS.COM


on

By

Road Accident in Anekal
Koo

ಆನೇಕಲ್: ನಿಯಂತ್ರಣ ತಪ್ಪಿ ಫೆನ್ಸಿಂಗ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ (Road Accident ) ಮೃತಪಟ್ಟಿದ್ದಾರೆ. ಆನೇಕಲ್‌ನ ಕಗ್ಗಲೀಪುರ ರಸ್ತೆಯ ಬ್ಯಾಲಮರನದೊಡ್ಡಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಶಾನಭೋಗನಹಳ್ಳಿ ನಿವಾಸಿ ರಾಮಚಂದ್ರ (22) ಮೃತ ದುರ್ದೈವಿ.

ಸೋಮವಾರ ರಾತ್ರಿ ಬೈಕ್‌ನಲ್ಲಿ ಬರುವಾಗ ತಿರುವಿನಲ್ಲಿ ಅತಿ ವೇಗವಾಗಿ ಬಂದಿದ್ದೆ ಅವಘಡಕ್ಕೆ ಕಾರಣ ಎನ್ನಲಾಗಿದೆ. ವೇಗವಾಗಿ ಬರುತ್ತಿದ್ದಾಗ ಬೈಕ್‌ನ ನಿಯಂತ್ರಣ ತಪ್ಪಿ ಫೆನ್ಸಿಂಗ್ ಕಂಬಕ್ಕೆ ಡಿಕ್ಕಿಯಾಗಿದೆ. ಫೆನ್ಸಿಂಗ್ ಕಂಬ ಮತ್ತು ಮುಳ್ಳಿನ ತಂತಿ ಬೇಲಿ ತಗುಲಿ ರಾಮಚಂದ್ರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಕುಡಿದ ಮತ್ತಿನಲ್ಲಿ ಬೈಕ್‌ ಚಲಾಯಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Road Accident

ಇದನ್ನೂ ಓದಿ: Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

ಕಾರು ಡಿಕ್ಕಿ ಪಾದಚಾರಿ ಮಹಿಳೆ ಸಾವು

ಬೆಂಗಳೂರಿನ ಮಾರತ್ ಹಳ್ಳಿ ಸಮೀಪದ ಬೋರ್ ವೆಲ್ ಜಂಕ್ಷನ್ ಬಳಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ತಲೆಗೆ ಗಂಭೀರ ಗಾಯಗೊಂಡ ಪಾದಚಾರಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಎಚ್ಎಎಲ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಕಾರು ಚಾಲಕನ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.

ಕೆಎಸ್ಆರ್‌ಟಿಸಿ ಬಸ್ ಹರಿದು ಪಾದಚಾರಿ ಸಾವು

ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದ ಟರ್ಮಿನಲ್ 3 ಬಳಿ ಕೆಎಸ್‌ಆರ್‌ಟಿಸಿ ಬಸ್‌ ಹರಿದು ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ. ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ಮೃತ ವ್ಯಕ್ತಿಯು 25 ವರ್ಷದ ಆಸುಪಾಸಿನಲ್ಲಿದ್ದು, ಹೆಸರು ಪತ್ತೆಯಾಗಿಲ್ಲ. ಉಪ್ಪಾರಪೇಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Human trafficking Case: ದೇಶಾದ್ಯಂತ NIA ರೇಡ್‌; ಮಾನವ ಕಳ್ಳಸಾಗಣೆ ಜಾಲ ಬಯಲು

Human trafficking Case:ಮಹಾರಾಷ್ಟ್ರ, ಉತ್ತರ ಪ್ರದೇಶ, ಬಿಹಾರ, ಗುಜರಾತ್, ದೆಹಲಿ, ಹರಿಯಾಣ, ಪಂಜಾಬ್ ಮತ್ತು ಚಂಡೀಗಢಯ ಒಟ್ಟು 15 ಸ್ಥಳಗಳಲ್ಲಿ ದಾಳಿ ನಡೆಸಿದ ಎನ್‌ಐಎ ಐವರನ್ನು ಬಂಧಿಸಿದೆ ಬಂಧಿತ ಆರೋಪಿಗಳನ್ನು ವಡೋದರದ ಮನೀಶ್ ಹಿಂಗು, ಗೋಪಾಲ್‌ಗಂಜ್‌ನ ಪಹ್ಲಾದ್ ಸಿಂಗ್, ನೈಋತ್ಯ ದೆಹಲಿಯ ನಬಿಯಾಲಂ ರೇ, ಗುರುಗ್ರಾಮದ ಬಲ್ವಂತ್ ಕಟಾರಿಯಾ ಮತ್ತು ಚಂಡೀಗಢದ ಸರ್ತಾಜ್ ಸಿಂಗ್ ಎಂದು ಗುರುತಿಸಲಾಗಿದೆ. ಇನ್ನು ಎನ್‌ಐಎ ರಾಜ್ಯ ಪೊಲೀಸ್‌ ಮತ್ತು ಕೇಂದ್ರೀಯ ಗುಪ್ತಚರ ಇಲಾಖೆ ಜೊತೆಗೂಡಿ ಈ ರೇಡ್‌ ನಡೆಸಿದೆ.

VISTARANEWS.COM


on

Human trafficking
Koo

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ದಾಳಿ ನಡೆಸಿದ್ದು, ಭಾರೀ ಮಾನವ ಕಳ್ಳಸಾಗಣೆ(Human trafficking Case) ಜಾಲವನ್ನು ಬೇಧಿಸಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಐವರನ್ನು ಅರೆಸ್ಟ್‌ ಮಾಡಿದ್ದಾರೆ. ಈ ಆರೋಪಿಗಳು ಕೆಲಸ ಕೊಡಿಸುವುದಾಗಿ ನಂಬಿಸಿ ಭಾರತೀಯ ಯುವಕರನ್ನು ವಿದೇಶಕ್ಕೆ ಕಳ್ಳಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ.

15 ಸ್ಥಳಗಳಲ್ಲಿ ಶೋಧ ಕಾರ್ಯ

ಮಹಾರಾಷ್ಟ್ರ, ಉತ್ತರ ಪ್ರದೇಶ, ಬಿಹಾರ, ಗುಜರಾತ್, ದೆಹಲಿ, ಹರಿಯಾಣ, ಪಂಜಾಬ್ ಮತ್ತು ಚಂಡೀಗಢಯ ಒಟ್ಟು 15 ಸ್ಥಳಗಳಲ್ಲಿ ದಾಳಿ ನಡೆಸಿದ ಎನ್‌ಐಎ ಐವರನ್ನು ಬಂಧಿಸಿದೆ ಬಂಧಿತ ಆರೋಪಿಗಳನ್ನು ವಡೋದರದ ಮನೀಶ್ ಹಿಂಗು, ಗೋಪಾಲ್‌ಗಂಜ್‌ನ ಪಹ್ಲಾದ್ ಸಿಂಗ್, ನೈಋತ್ಯ ದೆಹಲಿಯ ನಬಿಯಾಲಂ ರೇ, ಗುರುಗ್ರಾಮದ ಬಲ್ವಂತ್ ಕಟಾರಿಯಾ ಮತ್ತು ಚಂಡೀಗಢದ ಸರ್ತಾಜ್ ಸಿಂಗ್ ಎಂದು ಗುರುತಿಸಲಾಗಿದೆ. ಇನ್ನು ಎನ್‌ಐಎ ರಾಜ್ಯ ಪೊಲೀಸ್‌ ಮತ್ತು ಕೇಂದ್ರೀಯ ಗುಪ್ತಚರ ಇಲಾಖೆ ಜೊತೆಗೂಡಿ ಈ ರೇಡ್‌ ನಡೆಸಿದೆ. ಇನ್ನು ಘಟನೆಗೆ ಸಂಬಂಧಿಸಿದಂತೆ ವಿವಿಧ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಂಟು FIR ದಾಖಲಾಗಿವೆ

ಎನ್‌ಐಎ ತನಿಖೆಯಿಂದ ಆರೋಪಿಗಳು ಕಾನೂನುಬದ್ಧ ಉದ್ಯೋಗದ ಸುಳ್ಳು ಭರವಸೆಯ ಮೇಲೆ ಭಾರತೀಯ ಯುವಕರನ್ನು ವಿದೇಶಿ ದೇಶಗಳಿಗೆ ಆಮಿಷವೊಡ್ಡುವ ಮತ್ತು ಕಳ್ಳಸಾಗಣೆ ಮಾಡುವ ಸಂಘಟಿತ ಕಳ್ಳಸಾಗಣೆ ಸಿಂಡಿಕೇಟ್‌ನಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. “ಯುವಕರು ಲಾವೋಸ್, ಗೋಲ್ಡನ್ ಟ್ರಯಾಂಗಲ್ ಸ್ಪೆಷಲ್ ಎಕನಾಮಿಕ್ ಝೋನ್ (SEZ), ಮತ್ತು ಕಾಂಬೋಡಿಯಾದ ಇತರ ಸ್ಥಳಗಳಲ್ಲಿ ನಕಲಿ ಕಾಲ್ ಸೆಂಟರ್‌ಗಳಲ್ಲಿ ಕೆಲಸ ಮಾಡಲು ಬಲವಂತ ಮಾಡಲಾಗುತ್ತದೆ. ಈ ಕಾಲ್‌ ಸೆಂಟರ್‌ ಮುಖ್ಯವಾಗಿ ವಿದೇಶಿ ಪ್ರಜೆಗಳಿಂದ ನಿಯಂತ್ರಿಸಲ್ಪಡುತ್ತದೆ ಎಂದು ಎನ್‌ಐಎ ಹೇಳಿದೆ.

ಕೆಲವು ವಾರಗಳ ಹಿಂದೆ ಕೇರಳದಲ್ಲೂ ಇಂತಹದ್ದೇ ಒಂದು ಜಾಲವನ್ನು ಸಿಬಿಐ ಬಯಲಿಗೆಳೆದಿತ್ತು. ಯುದ್ಧ ಪೀಡಿತ ರಷ್ಯಾ ಮತ್ತು ಉಕ್ರೇನ್‌(Russia-Ukraine War)ಗೆ ಮಾನವ ಕಳ್ಳಸಾಗಾಟ(Human trafficking) ಮಾಡುತ್ತಿದ್ದ ಕೇರಳದ ತಿರುವನಂತಪುರಂ ಮೂಲದ ಇಬ್ಬರನ್ನು ಕೇಂದ್ರೀಯ ತನಿಖಾ ಸಂಸ್ಥೆ(CBI) ಬಂಧಿಸಿತ್ತು. ಟ್ರಾವೆಲ್‌ ಏಜೆಂಟ್‌ಗಳ ಮೋಸದಾಟಕ್ಕೆ ಬಲಿಯಾಗಿ ವಿದೇಶಕ್ಕೆ ಹೋಗಿ ಯುವಕರು ಸಂಕಷ್ಟ ಎದುರಿಸುತ್ತಿರುವ ಘಟನೆಗಳು ಆಗಾಗ ಬೆಳಕಿಗೆ ಬರುತ್ತಿರುತ್ತವೆ. ಟ್ರಾವೆಲ್‌ ಏಕೆಂಟ್‌ಗಳ ಮೇಲೆ ಕಣ್ಣಿಟ್ಟ ಸಿಬಿಐಗೆ ಈ ದಂಧೆ ಬೆಳಕಿಗೆ ಬಂದಿತ್ತು.

ಈ ಟ್ರಾವೆಲ್‌ ಏಜೆಂಟ್‌ಗಳು ರಷ್ಯಾದಲ್ಲಿ ಕೆಲಸ ಕೊಡಿಸುವುದಾಗ ಭಾರತೀಯ ಯುವಕರನ್ನು ನಂಬಿಸಿ, ಅಲ್ಲಿಗೆ ಕಳುಹಿಸಿ ಅವರ ಪಾಸ್‌ಪೋರ್ಟ್‌ಗಳನ್ನು ಕಿತ್ತುಕೊಂಡು ಯುದ್ಧ ಪೀಡಿತ ಪ್ರದೇಶಕ್ಕೆ ಕಳಿಸುತ್ತಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ 17 ವಿಸಾ ಕಂಪನಿಗಳು ಹಾಗೂ ಅದರ ಮಾಲಕರು, ಏಜೆಂಟ್‌ಗಳ ವಿರುದ್ಧ ಸಿಬಿಐ ಎಫ್‌ಐಆರ್‌ ದಾಖಲಿದೆ. ಅವರ ವಿರುದ್ಧ ಸಂಚು, ವಂಚನೆ ಮತ್ತು ಮಾನವ ಕಳ್ಳಸಾಗಣೆ ಪ್ರಕರಣಗಳನ್ನು ದಾಖಲಿಸಲಾಗಿದೆ.

ಏಜೆಂಟ್‌ಗಳ ಮೂಲಕ ಭಾರತೀಯ ಯುವಕರನ್ನು ರಷ್ಯಾ ಸೇನೆ, ಭದ್ರತಾ ಸಿಬ್ಬಂದಿ ಅಥವಾ ಇತರೆ ಕ್ಷೇತ್ರಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ರಷ್ಯಾಗೆ ಕಳುಹಿಸಿಕೊಡಲಾಗುತ್ತದೆ. ಸಂತ್ರಸ್ತರಿಂದ ಇದಕ್ಕಾಗಿ ಏಜೆಂಟ್‌ಗಳು ಸ್ವಲ್ಪ ಹಣವನ್ನೂ ಪಡೆಯುತ್ತಾರೆ. ಅಲ್ಲಿ ಕಾಲಿಟ್ಟೊಡನೇ ಅವರ ಪಾಸ್‌ಪೋರ್ಟ್‌ ಕಿತ್ತುಕೊಂಡು ರಷ್ಯಾ ಸೇನೆಗೆ ಒತ್ತಾಯಪೂರ್ವಕವಾಗಿ ಸೇರಿಸಲಾಗುತ್ತದೆ. ಅಲ್ಲಿ ಅವರಿಗೆ ಯುದ್ಧ ತರಬೇತಿ ನೀಡಿ ಅಲ್ಲಿಂದ ಅವರನ್ನು ಯುದ್ಧ ಪೀಡಿತ ಪ್ರದೇಶಗಳಿಗೆ ಕಳಿಸುತ್ತಾರೆ.

ಇದನ್ನೂ ಓದಿ:Deepfake Case: ವಿದ್ಯಾರ್ಥಿನಿಯ ಡೀಪ್‌ ಫೇಕ್‌ ಫೋಟೋ ಸೃಷ್ಟಿ ಮಾಡಿದ ಅದೇ ಶಾಲೆಯ 2 ಹುಡುಗರು ಡಿಬಾರ್

Continue Reading

ತುಮಕೂರು

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Murder Case : ತುಮಕೂರಿನಲ್ಲಿ ಭೀಕರ ಹತ್ಯೆಯೊಂದು (Tumkur Murder) ನಡೆದಿದೆ. ಪತಿಯೊಬ್ಬ ಪತ್ನಿಯ ಕತ್ತು ಹಾಗೂ ದೇಹದ ಅಂಗಾಂಗಗಳನ್ನು ಕತ್ತರಿಸಿ ಬಿಸಾಡಿದ್ದಾನೆ. ಈತನ ಕ್ರೌರ್ಯತೆಗೆ ಜನರು ಬೆಚ್ಚಿ ಬಿದ್ದಿದ್ದಾರೆ.

VISTARANEWS.COM


on

By

tumkur murder
ಕೊಲೆ ಸುದ್ದಿ ಕೇಳಿ ಮನೆ ಮುಂದೆ ಜಮಾಯಿಸಿದ ಜನರು
Koo

ತುಮಕೂರು : ಪತಿಯಿಂದಲೇ ಪತ್ನಿಯ ಭೀಕರ (Murder Case) ಕೊಲೆಯಾಗಿದೆ. ಪತ್ನಿಯ ಕತ್ತು ಹಾಗೂ ದೇಹದ ಅಂಗಾಂಗಗಳನ್ನು ಪಾಪಿ ಪತಿ ಕತ್ತರಿಸಿದ್ದಾನೆ. ಪುಷ್ಪ (32) ಹತ್ಯೆಯಾದ ದುರ್ದೈವಿ. ತುಮಕೂರಿನ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಪಟ್ಟಣದ ಹೊಸಪೇಟೆಯಲ್ಲಿ (Tumkur Murder) ಈ ದುರ್ಘಟನೆ ನಡೆದಿದೆ.

ಹುಲಿಯೂರುದುರ್ಗ ಬಳಿಯ ಸುಗ್ಗನಹಳ್ಳಿ ನಿವಾಸಿಯಾದ ಶಿವರಾಮ್ ಕೊಲೆಗಾರನಾಗಿದ್ದಾನೆ. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಪುಷ್ಪಾಳನ್ನು ಶಿವರಾಮ್‌ ಮದುವೆಯಾಗಿದ್ದ. ಹುಲಿಯೂರುದುರ್ಗ ಪಟ್ಟಣದಲ್ಲಿ ಪತ್ನಿ ಹಾಗೂ 8 ವರ್ಷದ ಮಗುವಿನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದ.

ಮರದ ಸಾಮಿಲ್ ಒಂದರಲ್ಲಿ ಹೆಲ್ಪರ್ ಆಗಿ ಕೆಲಸ ಮಾಡುತ್ತಿದ್ದ ಶಿವರಾಮ್, ಕ್ಷುಲ್ಲಕ ಕಾರಣಕ್ಕೆ ಪತ್ನಿ ಪುಷ್ಪಾ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ನಿನ್ನೆ ಸೋಮವಾರ ರಾತ್ರಿಯೂ (ಮೇ 27) ಗಲಾಟೆಯಾಗಿದ್ದು, ಅದು ವಿಕೋಪಕ್ಕೆ ತಿರುಗಿದೆ. ಬಳಿಕ ಕೋಪದ ಕೈಗೆ ಬುದ್ಧಿ ಕೊಟ್ಟ ಶಿವರಾಮ್‌ ಅಡುಗೆ ಮನೆಯಲ್ಲಿದ್ದ ಪತ್ನಿಯ ಕತ್ತು ಹಾಗೂ ದೇಹದ ಅಂಗಾಂಗ ಕತ್ತರಿಸಿ ಕೊಲೆ ಮಾಡಿದ್ದಾನೆ. ಶಿವರಾಮ್‌ ತನ್ನ ಮಗುವಿನ ಎದುರಿಗೆ ಕ್ರೌರ್ಯತೆಯನ್ನು ತೋರಿದ್ದಾನೆ.

ಪುಷ್ಫಾಳ ಕೂಗಾಟ ಕೇಳಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಹುಲಿಯೂರುದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತುಂಡು ತುಂಡಾಗಿ ಬಿದ್ದಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಘಟನೆ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಗೈದ ಪತಿ ಶಿವರಾಮ್‌ನನ್ನು ಬಂಧಿಸಿ ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ.

ಇದನ್ನೂ ಓದಿ: Deepfake Case: ವಿದ್ಯಾರ್ಥಿನಿಯ ಡೀಪ್‌ ಫೇಕ್‌ ಫೋಟೋ ಸೃಷ್ಟಿ ಮಾಡಿದ ಅದೇ ಶಾಲೆಯ 2 ಹುಡುಗರು ಡಿಬಾರ್

ಎಮ್ಮೆ ಮಾರಿ ಬಂದ ಕಾಸಿನಿಂದ ಕುಡಿತಕ್ಕೆ ಖರ್ಚು; ಕೇಳಿದ್ದಕ್ಕೆ ಹೆಂಡತಿಯ ಕೊಂದು ನೇಣು ಹಾಕಿಕೊಂಡ

ಬೆಳಗಾವಿ: ಇದ್ದ ಒಂದು ಎಮ್ಮೆಯನ್ನೂ ಮಾರಿ ಅದರಿಂದ ಬಂದ ಕಾಸನ್ನು ಕುಡಿತಕ್ಕೆ ಖರ್ಚು ಮಾಡಿದ ಭಂಡ ಗಂಡನನ್ನು ಆಕ್ಷೇಪಿಸಿದ್ದಕ್ಕೆ ಹೆಂಡತಿಯನ್ನು ಕೊಂದು (Murder Case) ತಾನೂ ನೇಣಿಗೆ (Self harming) ಶರಣಾಗಿದ್ದಾನೆ. ಈ ಘಟನೆ ಬೆಳಗಾವಿ (Belagavi news) ಜಿಲ್ಲೆ ಮೂಡಲಗಿ ತಾಲೂಕಿನ ಪುಲಗಡ್ಡಿ ಎಂಬ ಗ್ರಾಮದಲ್ಲಿ ನಡೆದಿದೆ.

ಅಣ್ಣಪ್ಪ ನಂದಿ, ಯಲ್ಲವ್ವ ನಂದಿ (41) ದುರಂತ ಅಂತ್ಯ ಕಂಡ ಗಂಡ ಹೆಂಡತಿ. ತನ್ನಲ್ಲಿದ್ದ ಎಮ್ಮೆಯನ್ನು‌ ಮಾರಿ ಬಂದ ಹಣದಿಂದ ಅಣ್ಣಪ್ಪ ಕಂಠಪೂರ್ತಿ ಕುಡಿದು ಬಂದಿದ್ದ. ನಿನ್ನೆ ಸೋಮವಾರ ಸಂಜೆ ವೇಳೆ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಪತ್ನಿ ಯಲ್ಲವ್ವ ನಂದಿ, ಗಂಡನ ಈ ನಡತೆಯನ್ನು ಆಕ್ಷೇಪಿಸಿದ್ದಳು.

ಇದರಿಂದ ಜಗಳ ಹುಟ್ಟಿಕೊಂಡಿದೆ. ಹೆಂಡತಿಯ ಮೇಲೆ‌ ಮೊದಲೇ ಸಂಶಯ ಪಡುತ್ತಿದ್ದ ಪಾಪಿ ಅಣ್ಣಪ್ಪ, ಹೆಂಡತಿ ಪ್ರಶ್ನೆ ಮಾಡುತ್ತಿದ್ದಂತೆ ಆಕೆಯನ್ನು ಕೊಂದು ಹಾಕಿದ್ದಾನೆ, ನಂತರ ಮನೆಗೆ ಬಂದು ಮನೆಯ ಹೊರ ಭಾಗದ ತಗಡಿನ ಶೆಡ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕುಲಗೋಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Deepfake Case: ವಿದ್ಯಾರ್ಥಿನಿಯ ಡೀಪ್‌ ಫೇಕ್‌ ಫೋಟೋ ಸೃಷ್ಟಿ ಮಾಡಿದ ಅದೇ ಶಾಲೆಯ 2 ಹುಡುಗರು ಡಿಬಾರ್

Deep Fake Case: ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಶಾಲಾ ಪ್ರಿನ್ಸಿಪಾಲರು ಅಮಾನತು ಮಾಡಿದ್ದಾರೆ. ಡೀಪ್ ಫೇಕ್ ತಂತ್ರಜ್ಞಾನ ಬಳಸಿ ತಮ್ಮ ಶಾಲೆಯ ವಿದ್ಯಾರ್ಥಿನಿಯೊಬ್ಬರ ಅರೆನಗ್ನ ಫೋಟೋ ಸೃಷ್ಟಿಸಿ ಅದನ್ನು ವಿದ್ಯಾರ್ಥಿಗಳೇ ಇರುವ ಇನ್‌ಸ್ಟಗ್ರಾಂ ಗ್ರೂಪ್‌ ಒಂದರಲ್ಲಿ ಹಂಚಿಕೊಂಡು ವೈರಲ್‌ ಮಾಡಿದ ಆರೋಪ ಇವರ ಮೇಲಿದೆ.

VISTARANEWS.COM


on

deep fake case
Koo

ಬೆಂಗಳೂರು: ಖಾಸಗಿ ಶಾಲೆಯ (private school) ವಿದ್ಯಾರ್ಥಿನಿಯೊಬ್ಬರ ಫೋಟೋವನ್ನು ಡೀಪ್‌ ಫೇಕ್‌ ಮೂಲಕ ನಗ್ನವಾಗಿ ಕ್ರಿಯೇಟ್‌ ಮಾಡಿ (student Deepfake Photo case) ಇನ್‌ಸ್ಟಾಗ್ರಾಂನಲ್ಲಿ (Instagram) ಹಂಚಿಕೊಂಡ ಪ್ರಕರಣದಲ್ಲಿ, ಅದೇ ಶಾಲೆಯ 2 ವಿದ್ಯಾರ್ಥಿಗಳನ್ನು ಅಮಾನತು (debar) ಮಾಡಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಶಾಲಾ ಪ್ರಿನ್ಸಿಪಾಲರು ಅಮಾನತು ಮಾಡಿದ್ದಾರೆ. ಡೀಪ್ ಫೇಕ್ ತಂತ್ರಜ್ಞಾನ ಬಳಸಿ ತಮ್ಮ ಶಾಲೆಯ ವಿದ್ಯಾರ್ಥಿನಿಯೊಬ್ಬರ ಅರೆನಗ್ನ ಫೋಟೋ ಸೃಷ್ಟಿಸಿ ಅದನ್ನು ವಿದ್ಯಾರ್ಥಿಗಳೇ ಇರುವ ಇನ್‌ಸ್ಟಗ್ರಾಂ ಗ್ರೂಪ್‌ ಒಂದರಲ್ಲಿ ಹಂಚಿಕೊಂಡು ವೈರಲ್‌ ಮಾಡಿದ ಆರೋಪ ಇವರ ಮೇಲಿದೆ.

ಮೇ 24ರಂದು 9ನೇ ತರಗತಿಯ ವಿದ್ಯಾರ್ಥಿನಿಯರ ಫೋಟೋ ಇನ್‌ಸ್ಟಾಗ್ರಾಂನಲ್ಲಿ ವೈರಲ್ ಆಗಿತ್ತು. ಇದರಿಂದ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಬೆಚ್ಚಿ ಬಿದ್ದಿದ್ದರು. ವಿದ್ಯಾರ್ಥಿನಿಯರು ಶಾಕ್‌ಗೆ ಒಳಗಾಗಿ, ಖಿನ್ನತೆಗೆ ಜಾರುವ ಪರಿಸ್ಥಿತಿ ತಲುಪಿದ್ದರು. ಆತಂಕಿತಗೊಂಡ ವಿದ್ಯಾರ್ಥಿನಿಯ ಪೋಷಕರು ಸೈಬರ್ ಸೆಲ್‌ಗೆ ದೂರು ನೀಡಿದ್ದರು.

ಪ್ರಕರಣವನ್ನು ಶಾಲೆ ಆಡಳಿತ ಮಂಡಳಿ ಹಾಗೂ ಸೈಬರ್‌ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಪ್ರಕರಣದಲ್ಲಿ ಇಬ್ಬರು ವಿದ್ಯಾರ್ಥಿಗಳು ಈ ಕೃತ್ಯವನ್ನು ತಾವೇ ಎಸಗಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಅರೆನಗ್ನ ಫೋಟೋಗೆ ಹಲವು ಮಂದಿ ವಿಕೃತವಾದ, ಆತಂಕಪಡಿಸುವಂಥ ಕಾಮೆಂಟ್‌ಗಳನ್ನೂ ಹಾಕಿದ್ದಾರೆ. ಇವರನ್ನೂ ಹುಡುಕಿ ತನಿಖೆಗೆ ಒಳಪಡಿಸಲಾಗುತ್ತದೆ ಎಂದು ಸೈಬರ್‌ ಪೊಲೀಸರು ತಿಳಿಸಿದ್ದಾರೆ. ಈ ವಿದ್ಯಾರ್ಥಿಗಳಿಗೆ ಡೀಪ್‌ ಫೇಕ್‌ ತಂತ್ರಜ್ಞಾನ ನೀಡಿದವರು ಯಾರು, ಈ ಬಗೆಯ ಫೋಟೋ ಸೃಷ್ಟಿಸಲು ತರಬೇತಿ ನೀಡಿದವರು ಯಾರು, ಇವರಿಗೆ ಇರಬಹುದಾದ ಹೊರಗಿನ ಬೆಂಬಲ ಇತ್ಯಾದಿಗಳ ಬಗ್ಗೆಯೂ ಗಮನ ಹರಿಸಲಾಗುತ್ತಿದೆ.‌

ಸಿಬಿಐ ಅಧಿಕಾರಿಗಳೆಂದು ಹೇಳಿಕೊಂಡು ವೈದ್ಯರಿಗೆ ಲಕ್ಷಗಟ್ಟಲೆ ರೂಪಾಯಿ ವಂಚನೆ

ಕಲಬುರಗಿ: ಸಿಬಿಐ ಅಧಿಕಾರಿಗಳ (CBI Officers) ಹೆಸರಿನಲ್ಲಿ ಸಂಪರ್ಕಿಸಿ ಪ್ರತಿಷ್ಠಿತ ಆಸ್ಪತ್ರೆಯ ವೈದ್ಯರೊಬ್ಬರಿಂದ 76 ಲಕ್ಷ ರೂ.ಗಳಷ್ಟು ಹಣವನ್ನು ವಂಚಿಸಿದ (Cyber Crime) ಘಟನೆ ನಡೆದಿದೆ. ಕಲಬುರಗಿಯ (Kalaburagi news) ಪ್ರತಿಷ್ಠಿತ ವೈದ್ಯ ಪಿ. ಎಸ್ ಶಂಕರ್ ಎಂಬವರು ಹೀಗೆ ವಂಚನೆಗೆ (Fraud Case) ಒಳಗಾಗಿ 76 ಲಕ್ಷ ರೂ. ಕಳೆದುಕೊಂಡಿದ್ದಾರೆ.

ಡಾ. ಪಿ‌.ಎಸ್ ಶಂಕರ್ ಅವರು ಕಲಬುರಗಿ ನಗರದ ಕೆಬಿಎನ್ ಆಸ್ಪತ್ರೆಯಲ್ಲಿ ಎಮಿರೆಟ್ಸ್ ಆಫೀಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮೇ 14ರಂದು ವೈದ್ಯರಿಗೆ ವಿಜಯ್ ಕುಮಾರ್ ಚೌಬೆ ಎಂಬಾತ ಕರೆ ಮಾಡಿದ್ದು, ತಾನು ಮುಂಬಯಿ ಕ್ರೈಂ ಬ್ರಾಂಚ್ ಆಫೀಸರ್ ಎಂದು ಪರಿಚಯ ಮಾಡಿಕೊಂಡಿದ್ದಾನೆ. ಮುಂಬಯಿಯಲ್ಲಿ ನಿಮ್ಮ ವಿರುದ್ಧ ಮನಿ ಲಾಂಡ್ರಿಂಗ್ ಕೇಸ್ ಆಗಿದೆ ಎಂದು ಬೆದರಿಸಿದ್ದಾನೆ.

ಮನಿ ಲಾಂಡ್ರಿಂಗ್ (Money Laundering) ಕೇಸ್ ಸಂಬಂಧ ನಿಮ್ಮನ್ನು ವಿಚಾರಣೆ ಮಾಡಬೇಕಾಗಿದೆ. ನಿಮ್ಮ ಹೆಸರಲ್ಲಿ ಎಲ್ಲೆಲ್ಲಿ ಬ್ಯಾಂಕ್ ಅಕೌಂಟ್ ಇದೆ, ಯಾವ್ಯಾವ ಬ್ಯಾಂಕ್‌ನಲ್ಲಿ ಎಷ್ಟು ಹಣ ಇದೆ ಎಂದು ಮಾಹಿತಿ ನೀಡಿ ಎಂದು ಬೆದರಿಸಿ ಮಾಹಿತಿ ಪಡೆದಿದ್ದಾನೆ. ಈ ವಿಚಾರ ಹೊರಗಡೆ ಎಲ್ಲೂ ಹೇಳದಂತೆ ಹಾಗೂ ತಾವಿರುವ ಸ್ಥಳ ಬಿಟ್ಟು ಹೋಗದಂತೆ ಸೂಚನೆ ನೀಡಿದ್ದಾನೆ. ಬಳಿಕ, ನಿಮ್ಮ ವಿರುದ್ಧ ಸುಪ್ರೀಂ ಕೋರ್ಟ್ ಆರೆಸ್ಟ್ ವಾರೆಂಟ್ ಜಾರಿ ಮಾಡಿದೆ, ಸಿಬಿಐನವರು ನಿಮ್ಮನ್ನು ಆರೆಸ್ಟ್ ಮಾಡಬಹುದು ಎಂದು ಹೆದರಿಸಿದ್ದಾನೆ.

ನಿಮಗೆ ತೊಂದರೆ ಆಗಬಾರದು ಅಂದರೆ ಸಿಬಿಐ ಹಿರಿಯ ಅಧಿಕಾರಿಗಳಿಗೆ ಪ್ರಿಯಾರಿಟಿ ಎನ್‌ಕ್ವೈಯರಿ ಮಾಡುವಂತೆ ಮನವಿ ಮಾಡಿಕೊಳ್ಳಬೇಕು ಎಂದಿದ್ದಾನೆ. ಅದರಂತೆ ಸಿಬಿಐ ಅಧಿಕಾರಿಗಳಿಗೆ ಪತ್ರ ಬರೆಯಲು ಮುಂದಾದ ವೈದ್ಯ ಶಂಕರ್‌ಗೆ, ಸಿಬಿಐ ಅಧಿಕಾರಿ ಆಕಾಶ್ ಪುಲ್ಹರಿ ಎಂಬ ಹೆಸರಿನವನನ್ನು ಪರಿಚಯಿಸಿದ್ದಾನೆ. ಪುಲ್ಹರಿಗೆ ಪತ್ರ ಬರೆದು ವೈದ್ಯರು ಮನವಿ ಮಾಡಿಕೊಂಡಿದ್ದಾರೆ. ಸ್ಕೈಪ್ ಆಪ್ ಮೂಲಕ ವೈದ್ಯರನ್ನು ಸಂಪರ್ಕಿಸಿದ ಆಕಾಶ್ ಪುಲ್ಹರಿ, ಬಳಿಕ ವೈದ್ಯರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಕೇಸ್ ದಾಖಲಾಗಿರುವುದಾಗಿ ನಂಬಿಸಿದ್ದಾನೆ.

ನಂತರ ವೈದ್ಯರ ಅಕೌಂಟ್‌ನಲ್ಲಿರುವ ಹಣದ ಬಗ್ಗೆ ಮಾಹಿತಿ ಪಡೆದು, ತಕ್ಷಣ ತನ್ನ ಅಕೌಂಟ್‌ಗೆ ಹಣ ಟ್ರಾನ್ಸ್‌ಫರ್ ಮಾಡಿಸಿಕೊಂಡಿದ್ದಾನೆ. ಹಣ ಕಳೆದುಕೊಂಡ ಬಳಿಕ ವೈದ್ಯರಿಗೆ ತಾವು ಮೋಸ ಹೋಗಿರುವ ಕುರಿತು ಜ್ಞಾನೋದಯವಾಗಿದೆ. ಈ ಬಗ್ಗೆ ದೂರು ದಾಖಲು ಮಾಡಿದ್ದಾರೆ. ಕಲಬುರಗಿಯ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಪೊಲೀಸರು ನಕಲಿ ಸಿಬಿಐ ಅಧಿಕಾರಿಗಳ ಕುರಿತು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Deep fake Scam : ಸೆಲೆಬ್ರಿಟಿಗಳ ಬಳಿಕ ಈಗ ಬೆಂಗಳೂರು ಶಾಲಾ ವಿದ್ಯಾರ್ಥಿನಿಯರಿಗೆ ಡೀಪ್‌ಫೇಕ್‌ ಕಾಟ; ನಗ್ನ ಫೋಟೋ ವೈರಲ್

Continue Reading
Advertisement
Road Accident in Anekal
ಕ್ರೈಂ17 mins ago

Road Accident : ತಿರುವಿನಲ್ಲಿದ್ದ ಜವರಾಯ; ಸ್ಪೀಡಾಗಿ ಬಂದು ಫೆನ್ಸಿಂಗ್ ಕಂಬಕ್ಕೆ ಡಿಕ್ಕಿ, ಬೈಕ್‌ ಸವಾರ ಸಾವು

T20 World Cup 2024
ಕ್ರೀಡೆ17 mins ago

T20 World Cup 2024: ಟಿ20 ವಿಶ್ವಕಪ್​ ಇತಿಹಾಸದಲ್ಲಿ ಎಂದೂ ಮರೆಯದ ಸ್ಮರಣೀಯ ಸನ್ನಿವೇಶಗಳಿವು

Human trafficking
ದೇಶ26 mins ago

Human trafficking Case: ದೇಶಾದ್ಯಂತ NIA ರೇಡ್‌; ಮಾನವ ಕಳ್ಳಸಾಗಣೆ ಜಾಲ ಬಯಲು

Stone Quarry Collapses
ದೇಶ31 mins ago

Stone Quarry Collapses: ಕಲ್ಲಿನ ಗಣಿ ಕುಸಿದು 10 ಮಂದಿ ಜೀವಂತ ಸಮಾಧಿ; ರಕ್ಷಣಾ ಕಾರ್ಯಾಚರಣೆಗೆ ಭೀಕರ ಮಳೆ ಅಡ್ಡಿ

tumkur murder
ತುಮಕೂರು45 mins ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

deep fake case
ಕ್ರೈಂ1 hour ago

Deepfake Case: ವಿದ್ಯಾರ್ಥಿನಿಯ ಡೀಪ್‌ ಫೇಕ್‌ ಫೋಟೋ ಸೃಷ್ಟಿ ಮಾಡಿದ ಅದೇ ಶಾಲೆಯ 2 ಹುಡುಗರು ಡಿಬಾರ್

Rashmika Mandanna
South Cinema1 hour ago

Rashmika Mandanna: ವಿಜಯ್‌ ದೇವರಕೊಂಡ ಹೆಸರು ಕೇಳುತ್ತಲೇ ನಾಚಿ ನೀರಾದ ರಶ್ಮಿಕಾ; ಸದ್ಯದಲ್ಲೇ ಗುಡ್‌ನ್ಯೂಸ್‌?

T20 World Cup 2024
ಕ್ರೀಡೆ1 hour ago

T20 World Cup 2024: ಟಿ20 ವಿಶ್ವ ಕಪ್​ನಲ್ಲಿ ಟೀಮ್​ ಇಂಡಿಯಾದ ಮುಂದಿರುವ ಸವಾಲುಗಳೇನು?

murder case belagavi news
ಕ್ರೈಂ2 hours ago

Murder Case: ಎಮ್ಮೆ ಮಾರಿ ಬಂದ ಕಾಸಿನಿಂದ ಕುಡಿದ; ಆಕ್ಷೇಪಿಸಿದ ಹೆಂಡತಿಯ ಕೊಂದು ನೇಣು ಹಾಕಿಕೊಂಡ

Pune Porsche Accident
ದೇಶ2 hours ago

Pune Porsche Accident: ಆರೋಪಿಯ ರಕ್ತದ ಮಾದರಿ ಬದಲಿಸಲು 3 ಲಕ್ಷ ರೂ. ಲಂಚ ಪಡೆದಿದ್ದ ವೈದ್ಯರು; ಆಸ್ಪತ್ರೆ ಜವಾನ ಅರೆಸ್ಟ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ18 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು7 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 week ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌