Ramanath Rai: ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ರಮಾನಾಥ ರೈ; ಕೊಟ್ಟ ಮಾತಿನಂತೆ ನಡೆದ ಮಾಜಿ ಸಚಿವ - Vistara News

ಕರ್ನಾಟಕ

Ramanath Rai: ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ರಮಾನಾಥ ರೈ; ಕೊಟ್ಟ ಮಾತಿನಂತೆ ನಡೆದ ಮಾಜಿ ಸಚಿವ

Karnataka Election 2023: ಮಾಜಿ ಸಚಿವ, ಕಾಂಗ್ರೆಸ್‌ ಹಿರಿಯ ನಾಯಕ ರಮಾನಾಥ ರೈ ಅವರು ಚುನಾವಣಾ ರಾಜಕೀಯ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ಆದರೆ, ತಾವು ರಾಜಕಾರಣದಲ್ಲಿ ಸಕ್ರಿಯರಾಗಿ ಇರುವುದಾಗಿ ಹೇಳಿಕೊಂಡಿದ್ದಾರೆ. ಕಾರ್ಯಕರ್ತರು ಯಾರೂ ಎದೆಗುಂದದಂತೆ ಕಿವಿ ಮಾತು ಹೇಳಿದ್ದಾರೆ.

VISTARANEWS.COM


on

Ramanath Rai announces retirement from electoral politics
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ಈ ಬಾರಿ ನಡೆದ ವಿಧಾನಸಭಾ ಚುನಾವಣೆ (Karnataka Election 2023) ಪ್ರಚಾರದ ವೇಳೆ ಇದೇ ನನ್ನ ಕೊನೇ ಚುನಾವಣೆಯಾಗಿದ್ದು, ದಯಮಾಡಿ ನನ್ನನ್ನು ಗೆಲ್ಲಿಸಿ ಎಂದು ಕೇಳಿಕೊಂಡಿದ್ದ ರಮಾನಾಥ್‌ ರೈ (Ramanath Rai) ಕೊನೆಗೂ ಸೋಲು ಕಂಡಿದ್ದರು. ಇದೀಗ ದಿಢೀರ್‌ ಸುದ್ದಿಗೋಷ್ಠಿ ನಡೆಸುವ ಮೂಲಕ ಅವರು, ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಆದರೆ, ಸಕ್ರಿಯ ರಾಜಕಾರಣದಲ್ಲಿರುವ ಭರವಸೆಯನ್ನು ನೀಡಿದ್ದಾರೆ.

ಮಂಗಳೂರಿನಲ್ಲಿ ಮಾಜಿ ಸಚಿವ ರಮಾನಾಥ್ ರೈ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ನಾನು ಇದೇ ನನ್ನ ಕಡೆಯ ಚುನಾವಣಾ ಸ್ಪರ್ಧೆ ಎಂದು ಹೇಳಿಕೆ ನೀಡಿದ್ದೆ. ಈಗ ಅದರಂತೆ ನಡೆದುಕೊಳ್ಳುತ್ತಿದ್ದೇನೆ. ಆದರೆ, ಚುನಾವಣಾ ರಾಜಕೀಯದಿಂದ ದೂರವಿದ್ದರೂ ಪಕ್ಷದ ಕಾರ್ಯಕ್ರಮದಲ್ಲಿ ಮುಂಚೂಣಿಯಲ್ಲಿರುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: PM Narendra Modi: ರೋಜ್‌ಗಾರ್‌ ಮೇಳದಲ್ಲಿ ಮೋದಿ ಭಾಷಣ; ನಿದ್ದೆಗೆ ಜಾರಿದ ತೇಜಸ್ವಿ ಸೂರ್ಯ!

ಕಾರ್ಯಕರ್ತರು ಎದೆಗುಂದಬಾರದು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ. ಗೆದ್ದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಕಾಂಗ್ರೆಸ್ ಮೇಲೆ ವಿಶ್ವಾಸವನ್ನಿಟ್ಟು ಜನ ಮತ ನೀಡಿದ್ದಾರೆ. ಜಿಲ್ಲೆಯಲ್ಲಿ ಸೋತರೂ ರಾಜ್ಯದಲ್ಲಿ ಸರ್ಕಾರ ನಮ್ಮದೇ ಇದೆ. ಜಿಲ್ಲೆಯಲ್ಲಿ ಕಾರ್ಯಕರ್ತರು ಎದೆಗುಂದಬಾರದು ಎಂದು ಕರೆ ಕೊಟ್ಟರು.

ಇನ್ನು ಬಿಜೆಪಿ ಅಧಿಕಾರಕ್ಕೆ ಬರಲ್ಲ

ಬಿಜೆಪಿ ರಾಜ್ಯದಲ್ಲಿ ಸ್ಪಷ್ಟ ಬಹುಮತವನ್ನು ಯಾವತ್ತೂ ಪಡೆದಿಲ್ಲ. ಜನಸಂಘ ಇರುವಾಗಲೂ ಬಾಹ್ಯ ಬೆಂಬಲದಿಂದಲೇ ರಾಜಕೀಯ ಮಾಡಿದ್ದರು. ಜಿಲ್ಲೆಯಲ್ಲಿ ಸೋತರೂ, ಗೆದ್ದರೂ ಪಕ್ಷವನ್ನು ಪ್ರಬಲವಾಗಿ ಕಟ್ಟಿದ್ದೇವೆ. ರಾಜ್ಯದ ಜನ ಯಾವತ್ತೂ ಬಿಜೆಪಿಗೆ ಬೆಂಬಲ ನೀಡಿಲ್ಲ. ಇದು ಬಸವಣ್ಣ ಹುಟ್ಟಿದ ನಾಡು, ಇಲ್ಲಿ ಜಾತ್ಯತೀತ ನಿಲುವಿನ ಜನರಿಗೆ ನಾಗರಿಕರು ಮಣೆ ಹಾಕುತ್ತಾರೆ. ಭವಿಷ್ಯದಲ್ಲಿ ಬಿಜೆಪಿ ಖಂಡಿತಾ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: PM Rozgar Mela: ಗ್ರೂಪ್‌ ಸಿ, ಡಿ ಹುದ್ದೆಗಳ ಸಂದರ್ಶನ ತೆಗೆದು ಹಾಕಿ ಭ್ರಷ್ಟಾಚಾರಕ್ಕೆ ಅಂತ್ಯ ಹಾಡಿದ್ದೇವೆ: ನರೇಂದ್ರ ಮೋದಿ

ಮುಂದಿನ ವರ್ಷ ನಡೆಯುಲಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ರಾಜ್ಯದಲ್ಲಿ ಅತ್ಯಧಿಕ ಸ್ಥಾನವನ್ನು ಗಳಿಸಲಿದೆ. ಇದರಲ್ಲಿ ಸಂಶಯ ಬೇಡ ಎಂದು ಹೇಳಿದ ಮಾಜಿ ಸಚಿವ ರಮಾನಾಥ ರೈ, ಮುಖ್ಯಮಂತ್ರಿಯಾದಿಯಾಗಿ ಸಚಿವ ಸಂಪುಟ ಪ್ರಮಾಣವಚನ ಸ್ವೀಕಾರವಾದ ತಕ್ಷಣ ಗ್ಯಾರಂಟಿ ಕಾರ್ಯಕ್ರಮ ಅನುಷ್ಠಾನಕ್ಕೆ ಬರಲಿದೆ. ಕಾಂಗ್ರೆಸ್‌ನ ಯೋಜನೆಗಳು ದಕ್ಷಿಣ ಕನ್ನಡ ಜಿಲ್ಲೆಗೆ ಹೆಚ್ಚು ಪ್ರಯೋಜನ ತಂದಿದೆ ಎಂದು ಅಭಿಪ್ರಾಯಪಟ್ಟರು.

ಐದು ಗ್ಯಾರಂಟಿಗಳ ಬಗ್ಗೆ ಪರಮೇಶ್ವರ್‌ ಹೇಳಿದ್ದೇನು?; ಇಲ್ಲಿದೆ ನೋಡಿ ವಿಡಿಯೊ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

Lok Sabha Election 2024

‌CM Siddaramaiah: ಸಿಎಂ ಸಿದ್ದರಾಮಯ್ಯ ಬಳಿ ಗನ್‌ ತಂದಿದ್ದ ಕೇಸ್;‌ ನಾಲ್ವರು ಪೊಲೀಸರು ಸಸ್ಪೆಂಡ್

‌CM Siddaramaiah: ಮುಖ್ಯಮಂತ್ರಿ ಬಳಿ ಹಾರ ಹಾಕಲು ಬಂದ ವ್ಯಕ್ತಿಯು ಗನ್ ಶೋ ಮಾಡಿದ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಭದ್ರತಾ ವೈಫಲ್ಯ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸರನ್ನು ಅಮಾನತು ಮಾಡಿ ಆದೇಶಿಸಲಾಗಿದೆ. ಇನ್ಸ್‌ಪೆಕ್ಟರ್‌ ಅವರನ್ನು ಬಿಟ್ಟು ಕೆಳ ಹಂತದ ಅಧಿಕಾರಿಗಳು, ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಪಿಎಸೈ ಮೆಹಬೂಬ್ ಹುಡ್ಡದಲ್ಲಿ, ಪೊಲೀಸ್ ಕಾನ್ಸ್‌ಟೇಬಲ್ ಮಂಜು ನಾಯಕ್, ಪೊಲೀಸ್ ಕಾನ್ಸ್‌ಟೇಬಲ್ ಸಚಿನ್ ಹಾಗೂ ಒಬ್ಬರು ಎಎಸ್‌ಐ ಅಮಾನತುಗೊಂಡಿದ್ದಾರೆ.

VISTARANEWS.COM


on

Case of bringing gun to CM Siddaramaiah Four policemen suspended
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಬೆಂಗಳೂರಿನಲ್ಲಿ ಲೋಕಸಭೆ ಚುನಾವಣೆ (Lok Sabha Election 2024) ಪ್ರಚಾರದಲ್ಲಿ ನಿರತರಾಗಿದ್ದ ವೇಳೆ ವ್ಯಕ್ತಿಯೊಬ್ಬ ಪಿಸ್ತೂಲ್‌ (Gun) ಸೊಂಟಕ್ಕೆ ಸಿಕ್ಕಿಸಿಕೊಂಡು ಹೋಗಿ, ಸಿಎಂ ಸೇರಿದಂತೆ ಮುಖಂಡರಿಗೆ ಹಾರ ಹಾಕಿದ ಪ್ರಕರಣದಲ್ಲಿ ಭದ್ರತಾ ವೈಫಲ್ಯ ಕಂಡುಬಂದಿದ್ದರಿಂದ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಮುಖ್ಯಮಂತ್ರಿ ಬಳಿ ಹಾರ ಹಾಕಲು ಬಂದ ವ್ಯಕ್ತಿಯು ಗನ್ ಶೋ ಮಾಡಿದ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಭದ್ರತಾ ವೈಫಲ್ಯ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸರನ್ನು ಅಮಾನತು ಮಾಡಿ ಆದೇಶಿಸಲಾಗಿದೆ. ಇನ್ಸ್‌ಪೆಕ್ಟರ್‌ ಅವರನ್ನು ಬಿಟ್ಟು ಕೆಳ ಹಂತದ ಅಧಿಕಾರಿಗಳು, ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಪಿಎಸೈ ಮೆಹಬೂಬ್ ಹುಡ್ಡದಲ್ಲಿ, ಪೊಲೀಸ್ ಕಾನ್ಸ್‌ಟೇಬಲ್ ಮಂಜು ನಾಯಕ್, ಪೊಲೀಸ್ ಕಾನ್ಸ್‌ಟೇಬಲ್ ಸಚಿನ್ ಹಾಗೂ ಒಬ್ಬರು ಎಎಸ್‌ಐ ಅಮಾನತುಗೊಂಡಿದ್ದಾರೆ.

ಏನಿದು ಕೇಸ್‌?

ಏಪ್ರಿಲ್‌ 8ರಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಸೌಮ್ಯಾ ರೆಡ್ಡಿ ಪರ ಸಿಎಂ ಸಿದ್ದರಾಮಯ್ಯ ರೋಡ್‌ ಶೋ ನಡೆಸುತ್ತಿದ್ದರು. ಈ ವೇಳೆ ಸಿದ್ದಾಪುರದ ಕಾಂಗ್ರೆಸ್ ಕಾರ್ಯಕರ್ತ ರಿಯಾಜ್ ಎಂಬಾತ ಸಿಎಂ ಬಳಿ ಬಂದು ಬೃಹತ್‌ ಹಾವನ್ನು ಹಾಕಿದ್ದಾಗ. ಆ ವೇಳೆ ರಿಯಾಜ್‌ ತನ್ನ ಸೊಂಟದಲ್ಲಿ ಇಟ್ಟುಕೊಂಡಿದ್ದ ರಿವಾಲ್ವರ್‌ ಸಾರ್ವಜನಿಕವಾಗಿ ಪ್ರದರ್ಶನಗೊಂಡಿತು. ಇದು ಮಾಧ್ಯಮಗಳಲ್ಲೂ ಬಿತ್ತರವಾಯಿತು. ಈ ಸಂಬಂಧ ಈಗ ತನಿಖೆ ನಡೆದಿದೆ. 5 ವರ್ಷದ ಹಿಂದೆ ರಿಯಾಜ್ ಮೇಲೆ ಕೊಲೆ ಯತ್ನ ಆಗಿತ್ತು. ಹೀಗಾಗಿ ಆತ ಲೈಸೆನ್ಸ್‌ ಪಡೆದುಕೊಂಡಿದ್ದರು.

ರಿಯಾಜ್‌ ಗನ್‌ ಮುಟ್ಟುಗೋಲು

ಎಲೆಕ್ಷನ್ ಸಮಯದಲ್ಲಿ ಗನ್ ಸರೆಂಡರ್‌ ಮಾಡಿರದ ರಿಯಾಜ್‌, ತಮಗೆ ಜೀವಭಯವಿದೆ ಎಂದು ಅರ್ಜಿ ನೀಡಿ ಅನುಮತಿಯನ್ನು ಪಡೆದುಕೊಂಡಿದ್ದರು. ಆದರೆ, ಸಿಎಂ ಸಿದ್ದರಾಮಯ್ಯ ಅವರ ಬಳಿ ಹೋಗುವಾಗ ಗನ್ ತೆಗೆದುಕೊಂಡು ಹೋಗಬಾರದಿತ್ತು. Z ಸೆಕ್ಯುರಿಟಿ ಭದ್ರತೆ ಸಿಎಂಗೆ ಇದೆ. ಹೀಗಾಗಿ ಸಿಎಂ ಬಳಿ ಬರುವವರನ್ನು ತಪಾಸಣೆ ನಡೆಸಿ ಹತ್ತಿರ ಬಿಡಬೇಕಿತ್ತು. ಗನ್ ಅನ್ನು ರಿಯಾಜ್‌ ಸಾರ್ವಜನಿಕವಾಗಿ ಪ್ರದರ್ಶನ ಮಾಡಿದ್ದಾರೆ. ಹೀಗಾಗಿ ರಿಯಾಜ್ ಗನ್ ಮುಟ್ಟುಗೋಲು ಹಾಕಿಕೊಳ್ಳುವಂತೆ ದಕ್ಷಿಣ ವಿಭಾಗ ಡಿಸಿಪಿಗೆ ಸೂಚನೆ ನೀಡಿದ್ದರು.

ಇದನ್ನೂ ಓದಿ:

2019ರಲ್ಲಿ ರಿಯಾಜ್‌ ಮೇಲೆ ಹಲ್ಲೆ ನಡೆದಿತ್ತು

2019ರಲ್ಲಿ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈತನ ಮೇಲೆ ಎಸ್‌ಡಿಪಿಐ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಹೀಗಾಗಿ ಜೀವ ಬೆದರಿಕೆ ಇದೆ ಎಂಬ ಕಾರಣ ನೀಡಿ, ಗನ್ ಇಟ್ಟುಕೊಳ್ಳಲು ಲೈಸೆನ್ಸ್‌ಗೆ ಅರ್ಜಿ ಹಾಕಿದ್ದ.‌ ದಕ್ಷಿಣ ವಿಭಾಗ ಡಿಸಿಪಿ ಅರ್ಜಿ ಪರಿಶೀಲಿಸಿ ಗನ್ ಇಟ್ಟುಕೊಳ್ಳಲು ಅನುಮತಿ ನೀಡಿದ್ದರು. ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡುತ್ತಿದ್ದ ಸೈಯದ್ ರಿಯಾಜ್‌ ಮೇಲೆ ಅಟ್ಯಾಕ್ ನಡೆದಿತ್ತು. ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಹೀಗಾಗಿ ರಿಯಾಜ್‌ ಗನ್‌ ಪಡೆದುಕೊಂಡಿದ್ದ.

Continue Reading

Lok Sabha Election 2024

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Modi in Karnataka: ಮೈಸೂರಿನ ಬೃಹತ್‌ ಸಮಾವೇಶ ಹಾಗೂ ಮಂಗಳೂರಿನ ರೋಡ್‌ ಶೋ ಯಶಸ್ಸಿನ ನಂತರ ಪುನಃ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ. ಈ ವೇಳೆ ರಾಜ್ಯದಲ್ಲಿ ಹಲವು ಅಪರಾಧ ಪ್ರಕರಣಗಳು ಮೇಲಿಂದ ಮೇಲೆ ನಡೆಯುತ್ತಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಯಾವ ವಿಷಯವನ್ನು ಪ್ರಸ್ತಾಪ ಮಾಡಲಿದ್ದಾರೆ? ಮತದಾರರನ್ನು ಹೇಗೆ ಮೋಡಿ ಮಾಡಲಿದ್ದಾರೆ ಎಂದು ಜನರು ಕಾಯುತ್ತಿದ್ದಾರೆ. ಇಲ್ಲಿದೆ ಲೈವ್‌ ವಿಡಿಯೊ.

VISTARANEWS.COM


on

Modi in Karnataka Here live video of Modi rally in Chikkaballapur
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ಚುನಾವಣೆ ಘೋಷಣೆಯಾಗಿ ಈಗಾಗಲೇ ರಾಜ್ಯಕ್ಕೆ ಎರಡು ಬಾರಿ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಂದು (ಶನಿವಾರ – ಏಪ್ರಿಲ್ 20) ಮೂರನೇ ಬಾರಿಗೆ ಕರ್ನಾಟಕಕ್ಕೆ (Modi in Karnataka) ಆಗಮಿಸಿದ್ದಾರೆ. ಈಗ ಮಧ್ಯಾಹ್ನ 3 ಗಂಟೆಯಿಂದ ಚಿಕ್ಕಬಳ್ಳಾಪುರದಲ್ಲಿ ಬೃಹತ್‌ ಸಮಾವೇಶದಲ್ಲಿ ಮಾತನಾಡಲಿರುವ ಮೋದಿ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್‌ ಹಾಗೂ ಕೋಲಾರ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಮಲ್ಲೇಶ್‌ ಬಾಬು ಪರವಾಗಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ.

ಮೈಸೂರಿನ ಬೃಹತ್‌ ಸಮಾವೇಶ ಹಾಗೂ ಮಂಗಳೂರಿನ ರೋಡ್‌ ಶೋ ಯಶಸ್ಸಿನ ನಂತರ ಪುನಃ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ. ಈ ವೇಳೆ ರಾಜ್ಯದಲ್ಲಿ ಹಲವು ಅಪರಾಧ ಪ್ರಕರಣಗಳು ಮೇಲಿಂದ ಮೇಲೆ ನಡೆಯುತ್ತಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಯಾವ ವಿಷಯವನ್ನು ಪ್ರಸ್ತಾಪ ಮಾಡಲಿದ್ದಾರೆ? ಮತದಾರರನ್ನು ಹೇಗೆ ಮೋಡಿ ಮಾಡಲಿದ್ದಾರೆ ಎಂದು ಜನರು ಕಾಯುತ್ತಿದ್ದಾರೆ.

ಚಿಕ್ಕಬಳ್ಳಾಪುರಕ್ಕೆ ಪ್ರಧಾನಿ ನರೇಂದ್ರ ಮೋದಿ; LIVE ವಿಡಿಯೊ ಮುಖಾಂತರ ನೇರವಾಗಿ ವೀಕ್ಷಿಸಿ

ಚಿಕ್ಕಬಳ್ಳಾಪುರದಲ್ಲಿ ಮೋದಿ ಹವಾ!

ಚಿಕ್ಕಬಳ್ಳಾಪುರ ನಗರದಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ಪಕ್ಕದ ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಪರವೂ ಮತಯಾಚನೆ ಮಾಡಲಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರವೂ ಸೇರುವುದರಿಂದ ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ.

ಬೆಂಗಳೂರಲ್ಲಿ ಬೃಹತ್‌ ರ‍್ಯಾಲಿ

ಶನಿವಾರ ಸಂಜೆ 5.30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಪ್ರಚಾರ ರ‍್ಯಾಲಿಯನ್ನು ಆಯೋಜನೆ ಮಾಡಲಾಗಿದೆ. ಇಲ್ಲಿ ಬೆಂಗಳೂರು ಉತ್ತರ, ದಕ್ಷಿಣ ಹಾಗೂ ಕೇಂದ್ರ ಲೋಕಸಭಾ ಕ್ಷೇತ್ರಗಳು ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನೊಳಗೊಂಡಂತೆ ನರೇಂದ್ರ ಮೋದಿ ಮಾತನಾಡಲಿದ್ದಾರೆ.

ಬೆಂಗಳೂರು ಗ್ರಾಮಾಂತರಕ್ಕೆ ಸಿಗುವುದೇ ಮೋದಿ ಬೂಸ್ಟ್‌!

ಈ ಬಾರಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನಾಗಿ ಡಾ. ಸಿ.ಎನ್.‌ ಮಂಜುನಾಥ್‌ ಅವರನ್ನು ಕಣಕ್ಕಿಳಿಸಲಾಗಿದೆ. ಇದರಿಂದ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಎನ್‌ಡಿಎ ಅಭ್ಯರ್ಥಿಗಳ ನಡುವೆ ಟಫ್‌ ಫೈಟ್‌ ಏರ್ಪಟ್ಟಿದೆ. ಕಾರಣ ಇಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮತಗಳು ಕ್ರೋಡೀಕರಣಗೊಂಡರೆ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್‌ ಅವರ ಗೆಲುವಿನ ಹಾದಿ ಅಷ್ಟು ಸುಲಭವಿಲ್ಲ. ಈ ಹಿನ್ನೆಲೆಯಲ್ಲಿ ಡಿಕೆ ಬ್ರದರ್ಸ್‌ ರಾತ್ರಿ – ಹಗಲು ಎನ್ನುವಂತೆ ಪ್ರಚಾರದಲ್ಲಿ ನಿರತರಾಗಿದ್ದಾರೆ. ಅಲ್ಲದೆ, ಕ್ಷೇತ್ರದ ಗೆಲುವಿಗೆ ನಾನಾ ಕಸರತ್ತುಗಳನ್ನು, ರಣತಂತ್ರಗಳನ್ನು ಹೆಣೆಯುತ್ತಾ ಬರುತ್ತಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಸಹ ಬರಲಿದ್ದು, ಅವರು ಪಕ್ಷದ ಅಭ್ಯರ್ಥಿಯಾದ ಡಾ. ಸಿ.ಎನ್.‌ ಮಂಜುನಾಥ್‌ ಪರ ಏನು ಹೇಳಲಿದ್ದಾರೆ? ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಸಂಸದ ಡಿ.ಕೆ. ಸುರೇಶ್‌ ವಿರುದ್ಧ ಯಾವ ಬಾಂಬ್‌ ಎಸೆಯಲಿದ್ದಾರೆ? ಇದು ಮತದಾರರ ಮೇಲೆ ಬೀರುವ ಪರಿಣಾಮ ಏನು ಎಂಬಿತ್ಯಾದಿ ಲೆಕ್ಕಾಚಾರಗಳನ್ನು ಹಾಕಲಾಗುತ್ತಿದೆ.

ಇದನ್ನೂ ಓದಿ: CET 2024 exam: ಸಿಇಟಿಯಲ್ಲಿ 50 ಔಟ್ ಆಫ್ ಸಿಲೆಬಸ್ ಪ್ರಶ್ನೆ; ಮರು ಪರೀಕ್ಷೆ ಅಥವಾ ಗ್ರೇಸ್‌ ಮಾರ್ಕ್ಸ್‌? ಇಂದು ನಿರ್ಧಾರ

ಮೈಸೂರು ಸಮಾವೇಶದಲ್ಲಿ ಗುಡುಗಿದ್ದ ಮೋದಿ!

ಮೈಸೂರಿನಲ್ಲಿ ನಡೆದಿದ್ದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ಪಕ್ಷದ ಭ್ರಷ್ಟಾಚಾರದ ಬಗ್ಗೆ ಉಲ್ಲೇಖಿಸಿದ್ದರು. ಅಲ್ಲದೆ, ಹಿಂದುತ್ವದ ವಿರುದ್ಧ ಆ ಪಕ್ಷ ಹಾಗೂ ಮಿತ್ರ ಪಕ್ಷಗಳು ಕೆಲಸ ಮಾಡುತ್ತಿವೆ ಎಂದು ದೂರಿದ್ದರು. ಇನ್ನು ದೇಶದ ಎಲ್ಲ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಇಲ್ಲಿನ ಕಾಂಗ್ರೆಸ್‌ ಸರ್ಕಾರವು ಎಟಿಎಂ ಆಗಿದ್ದು, ನೂರಾರು ಕೋಟಿ ರೂಪಾಯಿ ಸಂದಾಯವಾಗಿದೆ ಎಂದು ಗಂಭೀರ ಆರೋಪವನ್ನು ಮಾಡಿದ್ದರು.

Continue Reading

Lok Sabha Election 2024

Modi in Karnataka: ಇಂದು ಕರ್ನಾಟಕಕ್ಕೆ ಮೋದಿ; ಪ್ರಧಾನಿಗೆ 11 ಪ್ರಶ್ನೆ ಕೇಳಿದ ಸಿಎಂ ಸಿದ್ದರಾಮಯ್ಯ

Modi in Karnataka: ಭಾರತೀಯ ಜನತಾ ಪಕ್ಷ ಕಾದು ಕಾದು ಅಳೆದು ತೂಗಿ ಕೊನೆಗೂ ಲೋಕಸಭಾ ಚುನಾವಣೆಯ ಪ್ರಣಾಳಿಕೆ ಪತ್ರವನ್ನು ಬಿಡುಗಡೆ ಮಾಡಿದೆ. ಅದರೊಳಗೇನಿದೆ ಎಂದು ಇಣುಕಿದರೆ ದೊಡ್ಡ ಚೆಂಬು ಕಾಣುತ್ತಿದೆ. ನರೇಂದ್ರ ಮೋದಿ ಮತ್ತು ಅವರ ಪಕ್ಷಕ್ಕೆ ದಮ್ಮು ಮತ್ತು ತಾಕತ್ ಇದ್ದರೆ ಹಿಂದಿನ ಎರಡು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಎಷ್ಟು ಭರವಸೆಗಳನ್ನು ಈಡೇರಿಸಿದ್ದೀರಿ? ಎನ್ನುವ ಲೆಕ್ಕವನ್ನು ಮತದಾರರ ಮುಂದಿಡಬೇಕು ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Modi in Karnataka today Cm Siddaramaiah asks 11 questions to PM Modi
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಇಂದು (ಶನಿವಾರ – ಏಪ್ರಿಲ್‌ 20) ಪ್ರಧಾನಿ ನರೇಂದ್ರ ಮೋದಿ (Modi in Karnataka) ಅವರು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಮೋದಿಗೆ 11 ಪ್ರಶ್ನೆಗಳನ್ನು ಕೇಳಿದ್ದಾರೆ. ಈ ವೇಳೆ ಕರ್ನಾಟಕಕ್ಕೆ ಚೆಂಬು ಕೊಡಲಾಗಿದೆ ಎಂಬ ವಿಷಯವನ್ನು ಸಿಎಂ ಸಿದ್ದರಾಮಯ್ಯ ಮತ್ತೆ ಪ್ರಸ್ತಾಪ ಮಾಡಿದ್ದಾರೆ.

ದಾಖಲೆ, ಅಂಕಿ‌ ಸಂಖ್ಯೆಗಳ ಸಹಿತ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆಗಳನ್ನು ಕೇಳಿದ್ದಾರೆ. ಅಲ್ಲದೆ, ಈ ಎಲ್ಲದಕ್ಕೂ ಇಂದು ಚಿಕ್ಕಬಳ್ಳಾಪುರದಲ್ಲಿ ನಡೆಯುವ ಸಮಾವೇಶದಲ್ಲಿ ಉತ್ತರವನ್ನು ಕೊಡಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಭಾರತೀಯ ಜನತಾ ಪಕ್ಷ ಕಾದು ಕಾದು ಅಳೆದು ತೂಗಿ ಕೊನೆಗೂ ಲೋಕಸಭಾ ಚುನಾವಣೆಯ ಪ್ರಣಾಳಿಕೆ ಪತ್ರವನ್ನು ಬಿಡುಗಡೆ ಮಾಡಿದೆ. ಅದರೊಳಗೇನಿದೆ ಎಂದು ಇಣುಕಿದರೆ ದೊಡ್ಡ ಚೆಂಬು ಕಾಣುತ್ತಿದೆ. ನರೇಂದ್ರ ಮೋದಿ ಮತ್ತು ಅವರ ಪಕ್ಷಕ್ಕೆ ದಮ್ಮು ಮತ್ತು ತಾಕತ್ ಇದ್ದರೆ ಹಿಂದಿನ ಎರಡು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಎಷ್ಟು ಭರವಸೆಗಳನ್ನು ಈಡೇರಿಸಿದ್ದೀರಿ? ಎನ್ನುವ ಲೆಕ್ಕವನ್ನು ಮತದಾರರ ಮುಂದಿಡಬೇಕು ಎಂದು ಕೇಳಿದ್ದಾರೆ.

ನಾನು ನುಡಿದಂತೆ ನಡೆದವನು. ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿ ನಮ್ಮ ಪಕ್ಷದ ಪ್ರಣಾಳಿಕೆಯನ್ನು ಮುಂದಿಟ್ಟುಕೊಂಡು ಮಾಡಿದ ಕೆಲಸದ ಲೆಕ್ಕವನ್ನು ಜನರ ಮುಂದೆ ಇಟ್ಟಿದ್ದೆ. ಈ ಬಾರಿಯೂ ಈ ಕೆಲಸ ಮುಂದುವರಿಸುತ್ತಿದ್ದೇನೆ. ಈ ಕಾರಣಕ್ಕೆ ನರೇಂದ್ರ ಮೋದಿಯವರಲ್ಲಿ ಲೆಕ್ಕ ಕೇಳುವ ನೈತಿಕ ಅಧಿಕಾರ ನನಗಿದೆ ಎಂದು ತಿಳಿದುಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Modi in Karnataka: ರಾಜ್ಯದಲ್ಲಿಂದು ಮೋದಿ ಮೋಡಿ; ಚಿಕ್ಕಬಳ್ಳಾಪುರದಲ್ಲಿ ಬೃಹತ್‌ ಸಮಾವೇಶ, ಬೆಂಗಳೂರಲ್ಲಿ ರೋಡ್‌ ಶೋ

ಮೋದಿಗೆ ಸಿಎಂ ಸಿದ್ದರಾಮಯ್ಯ ಕೇಳಿದ 11 ಪ್ರಶ್ನೆಗಳು

  1. ನರೇಂದ್ರ ಮೋದಿಯವರೇ, ಪ್ರಧಾನಮಂತ್ರಿ “ಸೂರ್ಯ ಘರ್ ಮುಫ್ತ್ ಬಿಜಲಿ” ಯೋಜನೆಯ ಮೂಲಕ ಬಡ ಕುಟುಂಬಗಳಿಗೆ ಉಚಿತ ವಿದ್ಯುತ್ ಪೂರೈಸುತ್ತೇವೆ ಎನ್ನುವುದು ಪ್ರಣಾಳಿಕೆಯಲ್ಲಿನ ಭರವಸೆ.
    ವಾಸ್ತವ ಸಂಗತಿ ಏನೆಂದರೆ ಈ ಯೋಜನೆಯನ್ನು ಕಳೆದ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಇದು ಸಂಪೂರ್ಣ ಉಚಿತ ಅಲ್ಲ. 1 ಕಿಲೋ ವ್ಯಾಟ್‌ ಉತ್ಪಾದಿಸುವ ರೂಫ್‌ಟಾಪ್‌ ಸೋಲಾರ್‌ ಪ್ಯಾನೆಲ್‌ಗೆ 50,000 ರೂ. ವೆಚ್ಚವಾಗುತ್ತದೆ. ಇದರಲ್ಲಿ 40% ಹಣವನ್ನು ಖರೀದಿಸುವ ಕುಟುಂಬವೇ ಭರಿಸಬೇಕಾಗುತ್ತದೆ. ಬ್ಯಾಂಕ್‌ಗಳಿಂದ ಸಾಲ ಕೊಡಿಸಲಾಗುತ್ತಿದೆ. ಅಂದರೆ ಸೋಲಾರ್ ಪ್ಯಾನೆಲ್‌ ಅಳವಡಿಸುವ ವೆಚ್ಚದ ಹೊರೆ ಬಡ ಕುಟುಂಬದ ಮೇಲೆ ಹೊರಿಸಲಾಗಿದೆ. ಇದು ಯಾವ ಸೀಮೆಯ ಉಚಿತ ಹೇಳಿ?
  2. ದೆಹಲಿಯ ಮಾದರಿಯಲ್ಲಿಯೇ ಪ್ರತಿಯೊಂದು ರಾಜ್ಯದಲ್ಲಿಯೂ ಏಮ್ಸ್ ( ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ) ಮಾದರಿಯಲ್ಲಿ ವೈದ್ಯಕೀಯ ಕೇಂದ್ರ ಸ್ಥಾಪಿಸುವುದಾಗಿ 2014ರ ಪ್ರಣಾಳಿಕೆಯಲ್ಲಿನ ಭರವಸೆ.
    ವಾಸ್ತವ ಸಂಗತಿ ಏನೆಂದರೆ ದೇಶದಲ್ಲಿ ಇರುವುದೇ 19 ಏಮ್ಸ್‌ಗಳು. ಈವರೆಗೆ ಕರ್ನಾಟಕದಲ್ಲಿ ಒಂದೇ ಒಂದು ಏಮ್ಸ್ ಸ್ಥಾಪನೆಯಾಗಿಲ್ಲ. ಹೊಸ ಏಮ್ಸ್‌ಗಳು ಕೂಡಾ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ದೂರಿದೆ. ಸ್ವತಃ ಮೋದಿ ದರ್ಬಾಂಗ್, ಮದುರೈಗಳಲ್ಲಿ ಏಮ್ಸ್‌ ಸ್ಥಾಪನೆಯಾಗಿವೆ ಎಂದರು. ಆದರೆ, ಮಾಧ್ಯಮದ ವರದಿಗಳು ಇದು ಸುಳ್ಳು ಎಂದು ಹೇಳುತ್ತಿವೆ.
  3. 70 ವರ್ಷ ಮೇಲ್ಪಟ್ಟವರಿಗೂ ಆಯುಷ್ಮಾನ್‌ ಸೇವೆ ವಿಸ್ತರಿಸಲಾಗುವುದು ಎನ್ನುವುದು ಪ್ರಣಾಳಿಕೆಯಲ್ಲಿನ ಭರವಸೆ.
    ವಾಸ್ತವ ಸಂಗತಿ ಎಂದರೆ ಆಯುಷ್ಮಾನ್‌ ಯೋಜನೆಯ ಆರೋಗ್ಯ ವಿಮೆಯಲ್ಲಿ ಅಕ್ರಮ ನಡೆದಿರುವುದನ್ನು ಸಿಎಜಿಯೇ ವರದಿ ಮಾಡಿದೆ. 8.2 ಲಕ್ಷ ರೋಗಿಗಳು ಆಧಾರ್, ಬಯೋಮೆಟ್ರಿಕ್‌ ದಾಖಲೆಗಳಿಲ್ಲದೆ ಎರಡಕ್ಕಿಂತ ಹೆಚ್ಚು ಬಾರಿ ಚಿಕಿತ್ಸೆ ಪಡೆದಿದ್ದನ್ನು ವರದಿ ಗುರುತಿಸಿತ್ತು. ನಕಲಿ ವಿಮೆಗಳಿಗೆ ರೂ.1,697 ಕೋಟಿ ವರೆಗೆ ಸರ್ಕಾರದಿಂದ ಹಣ ನೀಡಲಾಗಿದೆ!
  4. ಮೂರು ಕೋಟಿ ಲಖ್‌ಪತಿ ದೀದಿಗಳನ್ನು ಮಾಡಲಾಗುವುದು. ಈಗಾಗಲೇ 1 ಕೋಟಿ ಮಹಿಳೆಯರನ್ನು ಲಖ್‌ಪತಿ ದೀದಿಗಳನ್ನಾಗಿ ಮಾಡಿದ್ದು, ಮೂರು ಕೋಟಿ ಗ್ರಾಮೀಣ ಮಹಿಳೆಯರನ್ನು ಲಖ್‌ಪತಿ ದೀದಿಗಳನ್ನಾಗಿ ಸಬಲೀಕರಿಸಲಾಗುವುದು ಎನ್ನುವುದು ಪ್ರಣಾಳಿಕೆಯ ಇನ್ನೊಂದು ಭರವಸೆ.
    ವಾಸ್ತವ ಸಂಗತಿ ಎಂದರೆ ಸ್ವಸಹಾಯ ಗುಂಪುಗಳಲ್ಲಿರುವ ಮಹಿಳೆಯರಿಗೆ ನೀಡಲಾಗಿದೆ ಎಂದು ಹೇಳಲಾದ ಈ ನೆರವನ್ನು ಪಡೆದ ಒಬ್ಬರೇ ಒಬ್ಬ ಕರ್ನಾಟಕದ ಮಹಿಳೆಯ ಕುರಿತು ಮಾಹಿತಿ ಲಭ್ಯವಾಗಿಲ್ಲ.
  5. ನಮ್ಮ ಮಹಿಳೆಯರು ಕ್ರೀಡೆಯಲ್ಲಿ ದೇಶಕ್ಕೆ ಗೌರವ ತಂದಿದ್ದಾರೆ. ಮಹಿಳಾ ಕೇಂದ್ರಿತ ಕ್ರೀಡಾ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಕ್ರೀಡೆಯಲ್ಲಿ ಮಹಿಳೆಯ ಪಾಲ್ಗೊಳ್ಳುವಿಕೆಯನ್ನು ಪ್ರೋತ್ಸಾಹಿಸಲಾಗುವುದು ಎನ್ನುವುದು ಪ್ರಣಾಳಿಕೆಯಲ್ಲಿನ ಭರವಸೆ.
    ವಾಸ್ತವ ಸಂಗತಿ ಎಂದರೆ, ಕುಸ್ತಿ ಫೆಡರೇಷನ್‌ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಸಿಂಗ್‌ ವಿರುದ್ಧ ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ಲೈಂಗಿಕ ಶೋಷಣೆಯ ಆರೋಪ ಮಾಡಿದಾಗ, ಸರ್ಕಾರ ಯಾವುದೇ ಕ್ರಮಕೈಗೊಳ್ಳಲಿಲ್ಲ. ವರ್ಷಗಳ ಶ್ರಮದ ಫಲವಾದ ಪದಕವನ್ನು ಗಂಗಾ ನದಿಗೆ ಅರ್ಪಿಸಲು ಮುಂದಾಗುವಷ್ಟು ನೊಂದಿದ್ದ ಯುವತಿಯರಿಗೆ ಸರ್ಕಾರ ಸಾಂತ್ವನ ಹೇಳಲಿಲ್ಲ.
  6. ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿಯಲ್ಲಿ ರೈತರಿಗೆ ವಾರ್ಷಿಕ 6,000 ರೂ. ಸಹಾಯಧನವನ್ನು ನೀಡುತ್ತಿದ್ದು, ರೈತರಿಗೆ ಆರ್ಥಿಕ ಬೆಂಬಲ ನೀಡುವುದಕ್ಕೆ ಬದ್ಧರಾಗಿದ್ದೇವೆ ಎನ್ನುವುದು ಪ್ರಣಾಳಿಕೆಯಲ್ಲಿನ ಭರವಸೆ.
    ವಾಸ್ತವ ಸಂಗತಿ ಎಂದರೆ ಕಳೆದ ಐದು ವರ್ಷಗಳಲ್ಲಿ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಲ್ಲಿ 11 ಕೋಟಿ ರೈತರಿಗೆ ಸಹಾಯಧನ ನೀಡಲಾಗಿದೆ ಎಂದು ಸರ್ಕಾರಿ ದಾಖಲೆಗಳು ಹೇಳುತ್ತವೆ. ಆದರೆ, ಕೃಷಿ ಸಚಿವರೇ ರಾಜ್ಯಸಭೆಯಲ್ಲಿ 4 ಲಕ್ಷ ಅನರ್ಹ ರೈತರಿಗೆ ರೂ. 3,000 ಕೋಟಿ ಸಹಾಯಧನ ವಿತರಣೆಯಾಗಿದ್ದು, ಮರಳಿ ವಸೂಲಿ ಮಾಡಲಾಗುತ್ತಿದೆ ಎಂದು ಹೇಳಿದ್ದರು. ದೇಶದಲ್ಲಿ 55% ಭೂ ರಹಿತ ರೈತರಿದ್ದು, ಅವರು ಈ ಯೋಜನೆಯ ವ್ಯಾಪ್ತಿಗೆ ಬರುವುದಿಲ್ಲ ಎನ್ನುವುದು ಮತ್ತೊಂದು ದುರಂತ!
  7. ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆಯನ್ನು ತಂತ್ರಜ್ಞಾನದ ಬಳಕೆಯ ಮೂಲಕ ಮತ್ತಷ್ಟು ಬಲಪಡಿಸಿ ನಿಖರ ಪರಿಶೀಲನೆ ನಡೆಸಿ ಪರಿಹಾರದ ಹಣವನ್ನು ವೇಗವಾಗಿ ಪಾವತಿಸಲಾಗುವುದು ಎನ್ನುವುದು ಪ್ರಣಾಳಿಕೆಯಲ್ಲಿನ ಭರವಸೆ.
    ವಾಸ್ತವ ಸಂಗತಿ ಎಂದರೆ ಹಿಂದಿನ ಅವಧಿಯಲ್ಲಿ 5 ವರ್ಷಗಳಲ್ಲಿ ಈ ಯೋಜನೆಯಿಂದ ರೈತರಿಗೆ ಆದ ಲಾಭಕ್ಕಿಂತ ವಿಮಾ ಕಂಪನಿಗಳಿಗೆ ಆದ ಲಾಭವೇ ಹೆಚ್ಚು. ಕೃಷಿ ಸಚಿವ ತೋಮರ್ ಅವರು ರಾಜ್ಯಸಭೆಯಲ್ಲಿ ಉತ್ತರಿಸಿರುವಂತೆ, 2016-17ರಿಂದ 2021-22ರ ಅವಧಿಯಲ್ಲಿ ರೈತರು ರೂ. 1.59 ಲಕ್ಷ ಕೋಟಿ ಪ್ರೀಮಿಯಂ ಹಣ ಪಾವತಿಸಿದ್ದರು. ಈ ಪೈಕಿ ವಿಮಾ ಕಂಪನಿಗಳು ರೂ. 1.19 ಲಕ್ಷ ಕೋಟಿ ಹಣವನ್ನು ರೈತರಿಗೆ ಪಾವತಿಸಿದ್ದವು. ಅಂದರೆ ರೂ.40,000 ಕೋಟಿಗಳಷ್ಟು ಲಾಭಗಳಿಸಿದ್ದವು ಎಂದು ಅಂಕಿ ಅಂಶ ಹಂಚಿಕೊಂಡಿದ್ದರು.
  8. ರಾಷ್ಟ್ರೀಯ ಕನಿಷ್ಠ ವೇತನವನ್ನು ಕಾಲದಿಂದ ಕಾಲಕ್ಕೆ ಪರಿಷ್ಕರಣೆ ಮಾಡಲಾಗುವುದು ಎನ್ನುವುದು ಪ್ರಣಾಳಿಕೆಯಲ್ಲಿನ ಭರವಸೆ.
    ವಾಸ್ತವ ಸಂಗತಿ ಎಂದರೆ ಹತ್ತು ವರ್ಷಗಳ ಅವಧಿಯಲ್ಲಿ ಬಿಜೆಪಿ ಸರ್ಕಾರ ಕನಿಷ್ಠ ವೇತನವನ್ನು ಹೆಚ್ಚಿಸಿದ್ದು ಕೇವಲ 41 ರೂಪಾಯಿಗಳು ಮಾತ್ರ. 2004ರಿಂದ 2014ರ ಅವಧಿಯಲ್ಲಿ ಯುಪಿಎ ಸರ್ಕಾರ ಕನಿಷ್ಠ ವೇತನದ ಮಿತಿಯನ್ನು ರೂ.66 ರಿಂದ ರೂ.137ಕ್ಕೆ ಹೆಚ್ಚಿಸಿತ್ತು. ಬಿಜೆಪಿ ಈ ಮಿತಿಯನ್ನು 2017ರಲ್ಲಿ ರೂ.176 ಕ್ಕೆ ಏರಿಸಿತು. ಮುಂದುವರೆದು 2019ರಲ್ಲಿ ರೂ. 178ಕ್ಕೆ ಹೆಚ್ಚಿಸಿತು. ಆ ನಂತರದ ಐದು ವರ್ಷಗಳಲ್ಲಿ ಒಂದೇ ಒಂದು ರೂಪಾಯಿಯನ್ನೂ ಏರಿಕೆ ಮಾಡಲಿಲ್ಲ.
  9. ಭಯೋತ್ಪಾದನೆಯನ್ನು ಸಹಿಸುವುದಿಲ್ಲ. 2016ರ ಸರ್ಜಿಕಲ್ ದಾಳಿ ಮತ್ತು 2019ರ ಉಗ್ರರ ಮೇಲಿನ ದಾಳಿ ಭಯೋತ್ಪಾದನೆ ನಿಯಂತ್ರಣದ ನಿಟ್ಟಿನಲ್ಲಿ ನಡೆದ ಪ್ರಯತ್ನಗಳಿಗೆ ಉದಾಹರಣೆಗಳು. ಎಲ್ಲ ರೀತಿ ಉಗ್ರವಾದದಿಂದ ಭಾರತವನ್ನು ರಕ್ಷಿಸುವುದಕ್ಕೆ ನಾವು ಬದ್ಧರಾಗಿದ್ದೇವೆ ಎನ್ನುವುದು ಪ್ರಣಾಳಿಕೆಯಲ್ಲಿನ ಭರವಸೆ.
    ವಾಸ್ತವ ಸಂಗತಿ ಎಂದರೆ ಕಾಶ್ಮೀರದ ಉರಿ ಕಣಿವೆಯಲ್ಲಿ 2016ರಲ್ಲಿ ನಡೆದ ದಾಳಿಯ ರೀತಿಯ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾದವು. 2019ರಲ್ಲಿ ನಡೆದ ಬಾಲಾಕೋಟ್‌ ಪ್ರಕರಣ ತೀವ್ರವಾದ ವಿವಾದಕ್ಕೆ ಕಾರಣವಾಯಿತು. ಈ ದಾಳಿಗಳ ಹಿಂದೆ ರಾಜಕೀಯ ಉದ್ದೇಶಗಳು ಕೆಲಸ ಮಾಡಿರುವುದು ವಿವಾದಕ್ಕೆ ಕಾರಣವಾಯಿತು. ಪುಲ್ವಾಮಾ ದಾಳಿ ಕುರಿತು ಸತ್ಯಪಾಲ್‌ ಮಲಿಕ್‌ ನೀಡಿದ ಹೇಳಿಕೆಯು ಕೇಂದ್ರ ಸರ್ಕಾರದ ಶಂಕಾಸ್ಪದ ನಡೆಗೆ ಕನ್ನಡಿ ಹಿಡಿಯಿತು. ಇದಲ್ಲದೆ, 2017ರಲ್ಲಿ ಕಾಶ್ಮೀರದಲ್ಲಿ 370ನೇ ವಿಧಿ ಹಿಂಪಡೆದ ನಂತರ ಉಗ್ರರ ಚಟುವಟಿಕೆಗಳು ಕಡಿಮೆಯಾಯಿತು ಎಂದು ಸರ್ಕಾರ ಹೇಳಿಕೊಂಡರೂ ಉಗ್ರರ ದಾಳಿಗಳು ಮುಂದುವರಿದಿವೆ.
  10. ಸಮಾಜಕ್ಕೆ, ವಿಶೇಷವಾಗಿ ಯುವಜನರಿಗೆ ಕಂಟಕವಾಗಿರುವ ಮಾದಕ ವಸ್ತುಗಳನ್ನು ನಿರ್ನಾಮ ಮಾಡುವ ಗುರಿ ಹೊಂದಿದ್ದು, ಸೂಕ್ತ ತಾಂತ್ರಿಕ, ಕಾನೂನಾತ್ಮಕ ಹಾಗೂ ಗುಪ್ತಚರ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಮಾದಕ ವಸ್ತುಗಳ ಜಾಲವನ್ನು ಗುರುತಿಸಲು ಉಪಗ್ರಹ, ಡ್ರೋನ್ ಬಳಸಲಾಗುವುದು ಎನ್ನುವುದು ಪ್ರಣಾಳಿಕೆಯಲ್ಲಿನ ಭರವಸೆ.
    ವಾಸ್ತವ ಸಂಗತಿ ಎಂದರೆ 2021ರ ಸೆಪ್ಟೆಂಬರ್‌ನಲ್ಲಿ ಅದಾನಿ ಮಾಲೀಕತ್ವದ ಮುಂದ್ರಾ ಬಂದರಿನಲ್ಲಿ ರೂ. 21 ಸಾವಿರ ಕೋಟಿ ಮೌಲ್ಯದ ಮಾದಕ ವಸ್ತು ವಶಪಡಿಸಿಕೊಳ್ಳಲಾಯಿತು. 2022ರ ಜುಲೈನಲ್ಲಿ 75 ಕೆಜಿ, 2024ರ ಫೆಬ್ರವರಿಯಲ್ಲಿ 3,300 ಕೆಜಿ ಮಾದಕವಸ್ತು ವಶಪಡಿಸಿಕೊಳ್ಳಲಾಯಿತು. ಇಷ್ಟು ಪ್ರಮಾಣದಲ್ಲಿ ಮಾದಕ ವಸ್ತು ದೇಶದೊಳಗೆ ಎಲ್ಲಿಂದ ಬರುತ್ತಿದೆ? ಇದನ್ನು ತಡೆಯಲು ಯಾಕಾಗುತ್ತಿಲ್ಲ?
  11. ಈಶಾನ್ಯ ರಾಜ್ಯಗಳಲ್ಲಿ ಶಾಂತಿ ಸ್ಥಾಪನೆ ಮಾಡಲಾಗುವುದು. ಅಲ್ಲಿನ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯಿದೆ ತೆರವು ಮಾಡಿ, ಈಶಾನ್ಯ ರಾಜ್ಯಗಳಲ್ಲಿರುವ ಅಂತಾರಾಜ್ಯ ಸಂಘರ್ಷಗಳನ್ನು ಪರಿಹರಿಸುವುದಕ್ಕೆ ಸತತ ಪ್ರಯತ್ನ ಮಾಡುವೆವು ಎನ್ನುವುದು ಪ್ರಣಾಳಿಕೆಯಲ್ಲಿನ ಭರವಸೆ.
    ವಾಸ್ತವ ಸಂಗತಿ ಎಂದರೆ ಮಣಿಪುರದಲ್ಲಿ 8 ತಿಂಗಳ ಕಾಲ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವೆ ಸಂಘರ್ಷ ನಡೆದು 175ಕ್ಕೂ ಹೆಚ್ಚು ಮಂದಿ ಹತ್ಯೆಗೀಡಾದರು, 60 ಸಾವಿರ ಮಂದಿ ನಿರಾಶ್ರಿತರಾದರು. ಈ ಸಂದರ್ಭದಲ್ಲಿ ಜಗತ್ತಿನೆಲ್ಲೆಡೆಯಿಂದ ತೀವ್ರವಾದ ಸ್ಪಂದನೆ ವ್ಯಕ್ತವಾದರೂ, ದೇಶದ ಪ್ರಧಾನಿ ಮಣಿಪುರದ ಬಗ್ಗೆ ಒಂದು ನಿಮಿಷವೂ ಮಾತನಾಡಲಿಲ್ಲ. ಅತ್ತ ಕಡೆ ಮುಖ ಹಾಕಲಿಲ್ಲ.
Continue Reading

ರಾಜಕೀಯ

Neha Murder Case: ನೇಹಾ ಕೊಲೆ ಪ್ರಕರಣ ರಾಜಕೀಯಕ್ಕೆ ಬಳಕೆ; ಕೊಲೆಗಾರನಿಗೆ ಉಗ್ರ ಶಿಕ್ಷೆ ಎಂದ ಸಿದ್ದರಾಮಯ್ಯ

Neha Murder Case: ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಗ್ಗೆ ಪ್ರತಿಪಕ್ಷಗಳ ಆರೋಪದ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎಲ್ಲ ಕಾಲದಲ್ಲಿಯೂ ಕೊಲೆಗಳಾಗಿವೆ. ಹಾಗೆಂದು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದಲ್ಲ. ಕರ್ನಾಟಕದಲ್ಲಿ ಇರುವಷ್ಟು ಶಾಂತಿ ಸುವ್ಯವಸ್ಥೆ ಬೇರೆ ರಾಜ್ಯಗಳಲ್ಲಿಲ್ಲ. ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ ಹಾಗೂ ಖಂಡನೀಯ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ, ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

VISTARANEWS.COM


on

Koo

ಮೈಸೂರು: ಪ್ರತಿಪಕ್ಷಗಳು ನೇಹಾ ಕುಲಕರ್ಣಿ ಅವರ ಕೊಲೆ ಪ್ರಕರಣವನ್ನು (Neha Murder Case) ರಾಜಕೀಯಕ್ಕೆ ಬಳಸುತ್ತಿದ್ದಾರೆ. ಆಕೆಯನ್ನು ಕೊಂದವನಿಗೆ ಉಗ್ರ ಶಿಕ್ಷೆಯನ್ನು ಕೊಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಶನಿವಾರ ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ನೇಹಾ ಕುಲಕರ್ಣಿ ಕೊಲೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಕೊಲೆಗಾರನನ್ನು ಕೂಡಲೇ ಬಂಧಿಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಲ್ಲ. ಸರ್ಕಾರ ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು, ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನ ಮಾಡಲಾಗುವುದು ಎಂದರು.

ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಗ್ಗೆ ಪ್ರತಿಪಕ್ಷಗಳ ಆರೋಪದ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎಲ್ಲ ಕಾಲದಲ್ಲಿಯೂ ಕೊಲೆಗಳಾಗಿವೆ. ಹಾಗೆಂದು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದಲ್ಲ. ಕರ್ನಾಟಕದಲ್ಲಿ ಇರುವಷ್ಟು ಶಾಂತಿ ಸುವ್ಯವಸ್ಥೆ ಬೇರೆ ರಾಜ್ಯಗಳಲ್ಲಿಲ್ಲ. ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ ಹಾಗೂ ಖಂಡನೀಯ ಎಂದು ಹೇಳಿದರು. ಇನ್ನು ರಾಜ್ಯಾದ್ಯಂತ ಪ್ರತಿಭಟನೆಗಳಾಗುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಇದರ ಪರಿಣಾಮ ಸರ್ಕಾರದ ಮೇಲೆ ಆಗುವುದಿಲ್ಲ ಎಂದು ಹೇಳಿದರು.

ದೇಶದಲ್ಲಿ ಅಥವಾ ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ

ರಾಜ್ಯದಲ್ಲಿ ಚುನಾವಣಾ ವಾತಾವರಣ ಉತ್ತಮವಾಗಿದ್ದು ದೇಶದಲ್ಲಿ ಅಥವಾ ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆ ಇಲ್ಲ. ಬಿಜೆಪಿ ಅಭ್ಯರ್ಥಿಗಳು ಮೋದಿ ಹೆಸರಿನಲ್ಲಿ ಮತ ಯಾಚಿಸುತ್ತಿದ್ದಾರೆ. ಮೋದಿಯವರ ಮೇಲೆ ಅವಲಂಬನೆಯಾಗಿದ್ದು, ಜನ ಮೋದಿ ಸರ್ಕಾರದ ವಿರುದ್ಧವಾಗಿದ್ದಾರೆ. ದೇಶದಲ್ಲಿ ಇಂಡಿಯಾ ಪರವಾದ ವಾತಾವರಣವಿದೆ ಎಂದರು.

ಬಿಜೆಪಿ ಸರ್ಕಾರ ಜನರಿಗೆ ಖಾಲಿ ಚೆಂಬು ಕೊಟ್ಟಿದೆ

ಕಾಂಗ್ರೆಸ್‌ನ ಚೆಂಬು ಜಾಹೀರಾತನ್ನು ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದರ ಚಿಹ್ನೆ ಎಂಬ ಬಿಜೆಪಿ ಟೀಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ನಿನ್ನೆ ಕೊಟ್ಟಿರುವ ಜಾಹೀರಾತು ಈ ದೇಶದ ಜನರಿಗೆ ಬಿಜೆಪಿ ಸರ್ಕಾರ ಖಾಲಿ ಚೆಂಬು ಕೊಟ್ಟಿದೆ ಎಂದು ತಿಳಿಸಲು. ದೇಶದ ಜನರಿಗೆ 15 ಲಕ್ಷ ರೂಪಾಯಿ ಕೊಟ್ಟರೇ? 2 ಕೋಟಿ ಉದ್ಯೋಗ ಸೃಷ್ಟಿ ಆಯಿತೇ? ರೈತರ ಆದಾಯ ದುಪ್ಪಟ್ಟು ಆಯಿತೇ? ಅಚ್ಚೇ ದಿನ್ ಬಂದಿದೆಯೇ? ಅದಕ್ಕೆ ಚೆಂಬು ಕೊಟ್ಟಿದ್ದಾರೆ ಎಂದು ಜಾಹೀರಾತು ನೀಡಲಾಗಿದೆ ಎಂದು ಪ್ರತಿಕ್ರಿಯೆ ನೀಡಿದರು.

ನರೇಂದ್ರ ಮೋದಿ ರಾಜ್ಯಕ್ಕೆ ಬರುತ್ತಿದ್ದು, 11 ತಿಂಗಳಲ್ಲಿ ಬೊಕ್ಕಸ ಖಾಲಿಯಾಗಿದೆ ನಮಗೆ ಭಿಕ್ಷೆ ಕೊಡಿ ಎಂಬ ಅರ್ಥದಲ್ಲಿ ಜಾಹೀರಾತು ನೀಡಿದೆ ಎಂದು ಬಿಜೆಪಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಕೊಟ್ಟಿರುವ ಆಶ್ವಾಸನೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ. ದೇಶದ ಜನರಿಗೆ ಖಾಲಿ ಚೆಂಬು ನೀಡಿದ್ದಾರೆ ಎಂದು ಜಾಹೀರಾತು ನೀಡಿದ್ದೇವೆ. ಅವರು ಏನಾದರೂ ಹೇಳಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬೊಕ್ಕಸ ಖಾಲಿಯಾಗಿಲ್ಲ. ಎಲ್ಲ ಗ್ಯಾರಂಟಿಗಳನ್ನು ಜಾರಿ ಮಾಡಿ ಅಭಿವೃದ್ಧಿ ಕೆಲಸವನ್ನೂ ಮಾಡಿದ್ದೇವೆ ಎಂದರು.

ಭಯವಿರುವುದರಿಂದ ಬಿಜೆಪಿ ಜತೆಗೆ ಜೆಡಿಎಸ್ ಮೈತ್ರಿ

ಏಣಿ ಹತ್ತಿಸಿ ನಂತರ ಸರ್ವನಾಶ ಮಾಡುತ್ತಾರೆ ಎಂಬ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಎಚ್‌.ಡಿ. ಕುಮಾರಸ್ವಾಮಿ ಅವರು ಕೋಮುವಾದಿಗಳಾಗಿದ್ದು, ಜನತಾ ದಳ (ಎಸ್) ಪಕ್ಷವನ್ನು ರದ್ದು ಮಾಡಬೇಕು. ನನಗೆ ಅವರ ಬಗ್ಗೆ ಭಯವಿದ್ದರೆ ಇವರಿಬ್ಬರ ವಿರುದ್ಧ ಹೋರಾಟ ಮಾಡುತ್ತಿರಲಿಲ್ಲ. ಅವರಿಗೆ ಭಯವಿರುವುದರಿಂದ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: CET 2024 exam: ಸಿಇಟಿಯಲ್ಲಿ 50 ಔಟ್ ಆಫ್ ಸಿಲೆಬಸ್ ಪ್ರಶ್ನೆ; ಮರು ಪರೀಕ್ಷೆ ಅಥವಾ ಗ್ರೇಸ್‌ ಮಾರ್ಕ್ಸ್‌? ಇಂದು ನಿರ್ಧಾರ

ಏನಿದು ಪ್ರಕರಣ?

ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್‌, ಕಾರ್ಪೋರೇಟರ್‌ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದಿದ್ದಾನೆ. ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲಿ ಕೊಲೆ ನಡೆದಿದೆ. ನೇಹಾ ಹಿರೇಮಠ ಕೊಲೆಯಾದ ಯುವತಿ. ನೇಹಾ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳಾಗಿದ್ದಾಳೆ.

ಪ್ರೀತಿಸಲು ನಿರಾಕರಿಸಿದ್ದಕ್ಕೆ ಕೊಲೆ

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ವೇಳೆ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ. ಯುವತಿಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದಾನೆ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದು, ನೇಹಾಳಿಗೆ ತೀವ್ರ ರಕ್ತಸ್ರಾವವಾಗಿದೆ. ಸ್ಥಳೀಯರು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

Continue Reading
Advertisement
Case of bringing gun to CM Siddaramaiah Four policemen suspended
Lok Sabha Election 20245 mins ago

‌CM Siddaramaiah: ಸಿಎಂ ಸಿದ್ದರಾಮಯ್ಯ ಬಳಿ ಗನ್‌ ತಂದಿದ್ದ ಕೇಸ್;‌ ನಾಲ್ವರು ಪೊಲೀಸರು ಸಸ್ಪೆಂಡ್

Elon Musk
ವಿದೇಶ13 mins ago

Elon Musk: ಮೋದಿ ಭೇಟಿಗಾಗಿ ಈ ತಿಂಗಳು ಭಾರತಕ್ಕೆ ಬರಲ್ಲ ಎಲಾನ್‌ ಮಸ್ಕ್;‌ ಕೊಟ್ಟ ಕಾರಣ ಇದು

IPL 2024
ಕ್ರೀಡೆ23 mins ago

IPL 2024 : ಡಿಆರ್​ಎಸ್ ಅಕ್ರಮ; ಟಿಮ್ ಡೇವಿಡ್, ಕೀರನ್ ಪೊಲಾರ್ಡ್​ಗೆ ದಂಡ

KKR vs RCB
ಕ್ರಿಕೆಟ್36 mins ago

KKR vs RCB: ತವರಿನ ಸೋಲಿಗೆ ಸೇಡು ತೀರಿಸೀತೇ ಆರ್​ಸಿಬಿ?

Surabhi Jain
ಪ್ರಮುಖ ಸುದ್ದಿ60 mins ago

Surabhi Jain : 30 ವರ್ಷಕ್ಕೆ ಮೃತಪಟ್ಟ ಫ್ಯಾಷನ್ ಐಕಾನ್​ ಸುರಭಿ ಜೈನ್

RCB vs KKR
ಕ್ರೀಡೆ2 hours ago

RCB vS KKR: ಗ್ರೀನ್​ ಜೆರ್ಸಿಯಲ್ಲಿ ಆರ್​ಸಿಬಿ ಅದೃಷ್ಟ ಹೇಗಿದೆ; ಎಷ್ಟು ಗೆಲುವು ಎಷ್ಟು ಸೋಲು?

Modi in Karnataka Here live video of Modi rally in Chikkaballapur
Lok Sabha Election 20242 hours ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Modi in Karnataka today Cm Siddaramaiah asks 11 questions to PM Modi
Lok Sabha Election 20242 hours ago

Modi in Karnataka: ಇಂದು ಕರ್ನಾಟಕಕ್ಕೆ ಮೋದಿ; ಪ್ರಧಾನಿಗೆ 11 ಪ್ರಶ್ನೆ ಕೇಳಿದ ಸಿಎಂ ಸಿದ್ದರಾಮಯ್ಯ

Uttarakaanda Movie bande kaaka rangayana Raghu
ಸ್ಯಾಂಡಲ್ ವುಡ್2 hours ago

Uttarakaanda Movie: ‘ಬಂಡೆ ಕಾಕಾ’ ನಾಗಿ ‘ಉತ್ತರಕಾಂಡ’ದಲ್ಲಿ ಕಾಣಿಸಿಕೊಳ್ಳಲಿದ್ದಾರೆ ರಂಗಾಯಣ ರಘು

India Economy
ಪ್ರಮುಖ ಸುದ್ದಿ2 hours ago

Indian Economy : ಭಾರತದ ಆರ್ಥಿಕತೆ ಚೀನಾಕ್ಕಿಂತ ವೇಗವಾಗಿ ಬೆಳೆಯುತ್ತಿದೆ ಎಂದ ಐಎಮ್​ಎಫ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka Here live video of Modi rally in Chikkaballapur
Lok Sabha Election 20242 hours ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ3 hours ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ4 hours ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ11 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ1 day ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ1 day ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

ಟ್ರೆಂಡಿಂಗ್‌