Site icon Vistara News

Karnataka Election: ಗುರುವಾರ ಬೆಳಗ್ಗೆ ಕಾಂಗ್ರೆಸ್‌ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ: ರಣದೀಪ್‌ ಸುರ್ಜೇವಾಲಾ

Karnataka Election 2023 Rs 62,000 crore spending per year for Congress guarantee schemes

ಬೆಂಗಳೂರು: ಕಾಂಗ್ರೆಸ್‌ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಏ.6ರಂದು ಬೆಳಗ್ಗೆ 11 ಗಂಟೆಯೊಳಗೆ ಬಿಡುಗಡೆ ಮಾಡಲಾಗುವುದು (Karnataka Election) ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸುರ್ಜೇವಾಲಾ ತಿಳಿಸಿದ್ದಾರೆ.

ನವ ದೆಹಲಿಯಲ್ಲಿ ಬುಧವಾರ ಸಂಜೆ ಏರ್ಪಡಿಸಿದ್ದ ಕಾಂಗ್ರೆಸ್‌ ಸ್ಕ್ರೀನಿಂಗ್‌ ಕಮಿಟಿ ಸಭೆ ಬಳಿಕ ಮಾತನಾಡಿರುವ ಅವರು, ಕರ್ನಾಟಕದಲ್ಲಿ ಜನರು ನಡೆಸಿದ ಪರೀಕ್ಷೆಯಲ್ಲಿ ಬಿಜೆಪಿ ಫೇಲ್‌ ಆಗಿದೆ. ಬಿಜೆಪಿಯ ಈಗಿನ ಸ್ಥಿತಿ ದಯನೀಯವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಹಾಗೂ ಜೆ.ಪಿ.ನಡ್ಡಾ ಅವರು ನಡೆಸಿದ ರ‍್ಯಾಲಿಗಳಲ್ಲಿ ಜನರು ಸೇರಲಿಲ್ಲ. ಅದರಿಂದ ಅವರಿಗೆ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಪ್ರಚಾರಕ್ಕೆ ಚಿತ್ರ ನಟರ ಬೆಂಬಲ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಐಟಿ, ಇಡಿ ತನಿಖಾ ಸಂಸ್ಥೆಗಳ ಮೂಲಕ ಆಡಳಿತ ಪಕ್ಷಕ್ಕೆ ಬೆಂಬಲ ನೀಡಲು ಚಿತ್ರನಟರ ಮೇಲೆ ಒತ್ತಡ ಹಾಕಲಾಗುತ್ತಿದೆ. ಆದರೆ, ಕರ್ನಾಟಕ ಚುನಾವಣೆ ಗಂಭೀರವಾದ ವಿಷಯ. ಇದು ಸಿನಿಮಾ ಅಲ್ಲ, ಮನರಂಜನೆಯಲ್ಲ. ಇದು ಸುಮಾರು 6.5 ಕೋಟಿ ಜನರ ಬದುಕಿಗೆ ಸಂಬಂಧಪಟ್ಟದ್ದಾಗಿದೆ ಎಂದು ಹೇಳಿದರು.

Exit mobile version