Kichcha Sudeep : ರವಿಚಂದ್ರನ್‌ ಖಡಕ್‌ ವಾರ್ನಿಂಗ್;‌ ಧರಣಿಯಿಂದ ಎದ್ದೇಬಿಟ್ಟರು ಕುಮಾರ್! Vistara News

South Cinema

Kichcha Sudeep : ರವಿಚಂದ್ರನ್‌ ಖಡಕ್‌ ವಾರ್ನಿಂಗ್;‌ ಧರಣಿಯಿಂದ ಎದ್ದೇಬಿಟ್ಟರು ಕುಮಾರ್!

Kichcha Sudeep : ಕಿಚ್ಚ ಸುದೀಪ್‌ ಹಾಗೂ ನಿರ್ಮಾಪಕ ಎಂ.ಎನ್.‌ ಕುಮಾರ್‌ ನಡುವಿನ ಜಗಳ ಸಂಬಂಧ ಈಗ ಕ್ರೇಜಿಸ್ಟಾರ್‌ ರವಿಚಂದ್ರನ್‌ ಎಂಟಿಯಾಗಿದ್ದಾರೆ. ಅವರು ಮಾತಿಗೆ ಬೆಲೆ ಕೊಟ್ಟು ಈಗ ಕುಮಾರ್‌ ಧರಣಿಯನ್ನು ಕೈಬಿಟ್ಟಿದ್ದಾರೆ. ಈ ನಡುವೆ ಬುಧವಾರ ನಟ ಶಿವರಾಜಕುಮಾರ್‌ ಅವರ ಮಧ್ಯಸ್ಥಿಕೆಗಾಗಿ ಭೇಟಿ ಮಾಡಲು ನಿರ್ಮಾಪಕರು ನಿರ್ಧಾರ ಮಾಡಿದ್ದಾರೆ.

VISTARANEWS.COM


on

kichcha sudeep Ravichandran MN Kumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಒಳಗೊಳಗೇ ಇದ್ದ ಸ್ಯಾಂಡಲ್‌ವುಡ್‌ ಜಗಳ ಬೀದಿಗೆ ಬಂದಿದ್ದಲ್ಲದೆ, ಕೋರ್ಟ್‌ ಮೆಟ್ಟಿಲೇರಿದೆ. ನಟ ಕಿಚ್ಚ ಸುದೀಪ್‌ (Kichcha Sudeep) ಹಾಗೂ ನಿರ್ಮಾಪಕ ಎಂ.ಎನ್.‌ ಕುಮಾರ್‌ ನಡುವಿನ ಸಂಘರ್ಷ ತಾರಕಕ್ಕೇರಿದೆ. ಮಧ್ಯಸ್ಥಿಕೆ ಮೇಲೆ ನಂಬಿಕೆ ಇದೆ ಮಾತುಕತೆಯಲ್ಲಿ ಬಗೆಹರಿಸಿಕೊಳ್ಳೋಣ ಎಂದು ಹೇಳುತ್ತಿದ್ದ ಕುಮಾರ್‌ ಸೋಮವಾರ ಫಿಲ್ಮ್‌ ಛೇಂಬರ್‌ ಎದುರು ಧರಣಿ ಕುಳಿತಿದ್ದರು. ಅವರ ಬೆನ್ನಿಗೆ ನಿರ್ಮಾಪಕರು ಗಟ್ಟಿಯಾಗಿ ನಿಂತಿದ್ದಾರೆ. ಇದೇ ವೇಳೆ ಕ್ರೇಜಿಸ್ಟಾರ್‌ ರವಿಚಂದ್ರನ್‌ (Crazy Star Ravichandran) ಎಂಟ್ರಿ ಕೊಟ್ಟಿದ್ದು, ನಿರ್ಮಾಪಕ ಕುಮಾರ್‌ಗೆ ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ಒಂದು ಗಂಟೆ ಮಾತುಕತೆ ಬಳಿಕ ಧರಣಿಯನ್ನು ವಾಪಸ್‌ ಪಡೆಯಲಾಗಿದ್ದು, ಈಗ ಸಮಸ್ಯೆಯ ಚಂಡು ಸೆಂಚುರಿ ಸ್ಟಾರ್‌ ಶಿವರಾಜಕುಮಾರ್‌ (Century Star Shivarajkumar) ಅಂಗಳಕ್ಕೆ ತಲುಪುವ ಎಲ್ಲ ಸಾಧ್ಯತೆಗಳೂ ಇವೆ.

ಎರಡು ದಿನಗಳಿಂದ ಫಿಲ್ಮ್‌ ಛೇಂಬರ್‌ ಎದುರು ಧರಣಿ ನಡೆಸುತ್ತಿದ್ದ ಎಂ.ಎನ್‌. ಕುಮಾರ್‌ ಅವರಿಗೆ ಮಂಗಳವಾರ ಸಾರಾ ಗೋವಿಂದ್‌ ಸೇರಿದಂತೆ 20ಕ್ಕೂ ಹೆಚ್ಚು ಮಂದಿ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಎಲ್ಲರೂ ಸಹ ಸುದೀಪ್‌ ಈ ವಿಷಯದಲ್ಲಿ ಕೋರ್ಟ್‌ಗೆ ಹೋಗಿದ್ದು ಸರಿಯಲ್ಲ. ಎಲ್ಲರೂ ಕುಳಿತು ಮಾತನಾಡಿಕೊಳ್ಳಬೇಕಿತ್ತು. ಈ ರೀತಿಯ ನಿರ್ಧಾರ ಒಳ್ಳೆಯದಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಈ ವಿಷಯವಾಗಿ ಮತ್ತೊಬ್ಬ ನಿರ್ಮಾಪಕರಾದ ರಮೇಶ್‌ ಯಾದವ್‌ ಮಾತನಾಡಿ, ಸುದೀಪ್‌ ಅವರು ತಮಗೆ ಬಾಕಿ ಹಣವನ್ನು ನೀಡಬೇಕಾಗಿತ್ತು. ಆ ಹಣವನ್ನು ತಾವು ನಿರ್ಮಾಪಕ ಎಂ.ಎನ್.‌ ಕುಮಾರ್‌ ಅವರ ಬಳಿ 2009ರಲ್ಲಿ ಪಡೆದಿದ್ದೇನೆ. ಆಗ ನಾನು ಅವರಿಗೆ ಹಣ ಪಡೆದ ಬಗ್ಗೆ ಪತ್ರದ ಮೂಲಕ ದೃಢೀಕರಣವನ್ನೂ ಬರೆದುಕೊಟ್ಟಿದ್ದೆ. ಸುದೀಪ್‌ ಅವರಿಗೆ ಮುಂಗಡವಾಗಿ ನೀಡಿದ್ದ ಸಂಪೂರ್ಣ ಹಣವನ್ನು ಎಂ.ಎನ್.‌ ಕುಮಾರ್‌ ಅವರಿಂದ ಪಡೆದುಕೊಂಡಿದ್ದೇನೆ. ಹೀಗಾಗಿ ಇನ್ನು ಸುದೀಪ್‌ ಅವರಿಗಾಗಲಿ, ಕುಮಾರ್‌ ಅವರಿಗಾಗಲೀ, ಸುದೀಪ್‌ ನಟನೆಯ ವಿಷಯವಾಗಲಿ ನನಗೆ ಸಂಬಂಧ ಇರುವುದಿಲ್ಲ ಎಂಬುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಅವರು ದಾಖಲೆಯನ್ನೂ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: Salaar Movie : ಅಮೆರಿಕದಲ್ಲಿ ದಾಖಲೆ ಬರೆಯಲಿದೆ ಪ್ರಭಾಸ್‌ನ ಸಲಾರ್‌; ಶುರುವಾಗಿದೆ 1979 ಲೆಕ್ಕಾಚಾರ!

ಸುದೀಪ್‌ ಮೇಲೆ ನಿರ್ಮಾಪಕರು ಕೆಂಡ; ಇಲ್ಲಿದೆ ನೋಡಿ ವಿಡಿಯೊ

ನಿರ್ಮಾಪಕರಾದ ರಮೇಶ್‌ ಯಾದವ್‌ ಬಿಡುಗಡೆ ಮಾಡಿದ ಪತ್ರವು ರಮೇಶ್‌ ಯಾದವ್‌ ಮೂವೀಸ್‌ ಎಂಬ ಲೆಟರ್‌ಹೆಡ್‌ನಲ್ಲಿದ್ದು, 10-07-2009ರ ದಿನಾಂಕವು ಪತ್ರದಲ್ಲಿ ನಮೂದಾಗಿದೆ. ಆದರೆ, ಈ ಪತ್ರದ ಬಗ್ಗೆಯಾಗಲಿ, ಅವರ ಹೇಳಿಕೆ ಬಗ್ಗೆ ಆಗಲಿ ಸುದೀಪ್‌ ಇನ್ನೂ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

ಸಾರಾ ಗೋವಿಂದ್‌ – ಯೋಗಿ ದ್ವಾರಕೀಶ್‌ ಸಾಥ್‌

ಎರಡನೇ ದಿನವೂ ಧರಣಿ‌ ಮುಂದುವರಿಸಿದ್ದ ಕುಮಾರ್ ಮತ್ತುವರ ತಂಡಕ್ಕೆ ಸುಮಾರು ಇಪ್ಪತ್ತಕ್ಕೂ ಹೆಚ್ಚು ನಿರ್ಮಾಪಕರು ಸಾಥ್ ನೀಡಿದರು. ಅದರಲ್ಲೂ ಹಿರಿಯ ನಿರ್ಮಾಪಕ ಹಾಗೂ ಫಿಲ್ಮ್ ಚೇಂಬರ್‌ನ ಮಾಜಿ ಅಧ್ಯಕ್ಷ ಸಾರಾ ಗೋವಿಂದ್ ಹಾಗೂ ದ್ವಾರಕೀಶ್ ಪುತ್ರ ಯೋಗಿ ದ್ವಾರಕೀಶ್ ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿದ ಸಾರಾ ಗೋವಿಂದ್, ಚಿತ್ರರಂಗ ನಮ್ಮ‌ ಕುಟುಂಬ ಇದ್ದಂತೆ. ರನ್ನ ಸಿನಿಮಾದ ಹಣದ ವಿಚಾರವಾಗಿ ನಾನೇ ಇಬ್ಬರನ್ನೂ ಕರೆಸಿ ಮಾತನಾಡಿದ್ದೆ. ಸುದೀಪ್ ಅವರು ಎರಡು ಕೋಟಿ ಮೂವತೈದು ಲಕ್ಷ ರೂಪಾಯಿ ಕೊಟ್ಟಿದ್ದಕ್ಕೆ ನಾನೇ ಸಾಕ್ಷಿ. ಇಂತಹ ಸಮಸ್ಯೆಗಳ ಬಂದಾಗ ಸಂಧಾನ ಸಮಿತಿಯನ್ನು ನೋಡಬೇಕು. ದೊಡ್ಡಣ್ಣ, ಕೆ.ವಿ. ಚಂದ್ರಶೇಖರ್, ಮುನಿರತ್ನ ಎಲ್ಲರೂ ಇದ್ದಾರೆ. ಈಗಲೂ ಕಾಲ‌ ಮಿಂಚಿಲ್ಲ. ಸುದೀಪ್ ಅವರು ಕೇಸ್ ವಾಪಸ್ ಪಡೆದು ಸಂಧಾನ ಸಮಿತಿಯ ಮೂಲಕವೇ ಬಗೆಹರಿಸಿಕೊಳ್ಳಲಿ ಎಂದು ಕಿವಿಮಾತು ಹೇಳಿದ್ದಾರೆ.

ರವಿಚಂದ್ರನ್‌ ಹೇಳಿದ್ದೇನು? ಇಲ್ಲಿದೆ ನೋಡಿ ವಿಡಿಯೊ

ರವಿಚಂದ್ರನ್‌ ಭೇಟಿಯಾದ ನಿರ್ಮಾಪಕರ ತಂಡ

ಈ ವಿದ್ಯಮಾನಗಳ ನಡುವೆಯೇ ಸುಮಾರು 15ಕ್ಕೂ ಹೆಚ್ಚು ನಿರ್ಮಾಪಕರು ಹಿರಿಯ ನಟ ಕ್ರೇಜಿಸ್ಟಾರ್ ರವಿಚಂದ್ರನ್ ಅವರನ್ನು ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ಭೇಟಿ ಮಾಡಿದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿ ಮಾತನಾಡಿದರು. ಈ ವೇಳೆ ಮಾತನಾಡಿದ ರವಿಚಂದ್ರನ್‌, ಈ ಘಟನೆಯಿಂದ ಸುದೀಪ್‌ಗೆ ನೋವಾಗಿರುವುದು ನಿಜ. ನಾನು ಯೋಚನೆ ಮಾಡಬೇಕು. ನಾನು ಬರೀ ಮಾತನ್ನು ನಂಬಲ್ಲ. ದಾಖಲೆ ನೋಡಿದ ನಂತರ ಸುದೀಪ್ ಬಳಿ ಮಾತನಾಡಬೇಕೋ ಬೇಡವೋ ಎಂಬುದನ್ನು ಯೋಚನೆ ಮಾಡುತ್ತೇನೆ ಎಂದು ಹೇಳಿದರು.

ರವಿಚಂದ್ರನ್‌ ನೀಡಿದ ವಾರ್ನಿಂಗ್‌ ಇದು!

ಗಂಡ ಹೆಂಡ್ತಿ ಜಗಳ ಇದ್ದಂಗೆ ಇದು. ಬೀದಿಗೆ ಬಂದಿದೆ ಏನು ಮಾಡೋಕೆ ಆಗಲ್ಲ. ಇಷ್ಟು ದಿನ ತಪ್ಪಿಸಿಕೊಂಡು ಓಡಾಡುತ್ತಿದ್ದೆ. ಈ ವಿಷಯದ ಬಗ್ಗೆ ರಿಯಾಕ್ಟ್ ಮಾಡುವುದು ಬೇಡ ಅಂತ ಸುಮ್ಮನಿದ್ದೆ. ಆದರೆ, ಈಗ ನನ್ನ ಮಗನ ಮೇಲೆ ಆರೋಪ ಬಂದಿದೆ. ಅಷ್ಟು ಸುಲಭವಾಗಿ ಬಿಟ್ಟುಕೊಡಲ್ಲ ನಾನು. ಆ ಕುಮಾರ್ ಬರಲಿ ಎಂದು ರವಿಚಂದ್ರನ್‌ ಗುಡುಗಿದ್ದಾರೆ.

ಕುಮಾರ್‌ ಮಾತಿನಿಂದ ಸುದೀಪ್‌ಗೆ ಹರ್ಟ್‌ ಆಗಿ ಕೋರ್ಟ್ ಮೆಟ್ಟಿಲೇರಿದ್ದಾರೆ. ದಿನ ಬೆಳಗ್ಗೆ ಆದರೆ ಇದೇ ಶುರುವಾಗಿದೆ. ದಾಖಲೆಯನ್ನು ನಾಳೆ ಕೊಡುತ್ತೇನೆ ಎಂದರೆ ಹೇಗೆ? ದಾಖಲೆ ಮುಂದಿಟ್ಟು ಮಾತನಾಡಬೇಕು. ಮನಸ್ಥಿತಿ ಮತ್ತು ಪರಿಸ್ಥಿತಿ ಎರಡನ್ನೂ ಬ್ಯಾಲೆನ್ಸ್ ಮಾಡಬೇಕು. ನೀವು ನೋಡಿ ಮಾತನಾಡಿ ಅಂತ ಬಂದು ಹೇಳಿದ್ದಾರೆ. ಫಸ್ಟ್ ಪರಿಸ್ಥಿತಿಯನ್ನು ಕೂಲ್ ಮಾಡೋಣ. ತೊಂದರೆ ಏನಂತ ಗೊತ್ತಿಲ್ಲದೇ ಸಪೋರ್ಟ್ ಮಾಡೋಕೆ ಆಗಲ್ಲ. ನಾನು 30ವರ್ಷಗಳ ಹಿಂದೆ ಒಂದು ಪುಸ್ತಕ ಮಾಡಿಕೊಟ್ಟಿದ್ದೆ. ಹೇಗೆ ಅಸೋಸಿಯೇಷನ್ ಮಾಡಬೇಕು ಅಂತ. ಅದನ್ನು ಯಾರೂ ಫಾಲೋ ಮಾಡಿಲ್ಲ. ಈಗ ಅನುಭವಿಸುತ್ತಿದ್ದಾರೆ. ನಾನು ಆರೋಪ ಮಾಡಿಲ್ಲ ಮನವಿ ಮಾಡಿದೆ ಅಂತ ಕುಮಾರ್ ಹೇಳುತ್ತಾರೆ. ಆದರೆ, ಸುದೀಪ್‌ಗೆ ಬೇಜಾರು ಆಗಿದೆ. ಜತೆಗೆ ಕುಳಿತು ಊಟ ಮಾಡಿದವರು ಈಗ ಬೆರಳು ತೋರಿಸಿ ಮಾತನಾಡುತ್ತಿದ್ದಾರೆ. ಇದು ಹರ್ಟ್ ಆಗಲ್ಲವೇ? ಎರಡು ಕಡೆ ಸಹನೆ ಮೀರಿದೆ ಎಂದು ರವಿಚಂದ್ರನ್‌ ಹೇಳಿದ್ದಾರೆ.

ಕುಮಾರ್ ಧರಣಿ ಮಾ‌ಡುತ್ತಿದ್ದು, ಮೊದಲು ಅಲ್ಲಿಂದ ಏಳಲಿ. ಸುದೀಪ್‌ನ ನಾನು ಕರಿಸೋದಿಲ್ಲ. ನಾನೇ ಹೋಗಿ ಮಾತನಾಡುತ್ತೇನೆ. ಅದೂ ನನಗೆ ಮಾತನಾಡಬೇಕು ಎಂದು ಅನ್ನಿಸಿದರಷ್ಟೆ. ಸುದೀಪ್‌ ಸರಿ ಅನ್ನಿಸಿದರೆ ಮಾತ್ರ ಹೋಗಿ ಮಾತನಾಡುತ್ತೇನೆ. ಕುಮಾರ್‌ದು ತಪ್ಪು ಅಂದರೆ ಡೈರೆಕ್ಟ್ ಆಗಿ ಬೈತೀನಿ ಎಂದು ರವಿಚಂದ್ರನ್‌ ಹೇಳಿದ್ದಾರೆ.

ಇದನ್ನೂ ಓದಿ: Kichcha Sudeep : ಕೇಳಿದ ತಕ್ಷಣ ಹಣ ಕೋಡೋಕೆ ಸುದೀಪ್‌ ಚಿಕ್ಕ ಹುಡುಗ ಅಲ್ಲ!

ಶಿವಣ್ಣ ಹೆಡ್‌ ಆಫ್‌ ದಿ ಡಿಪಾರ್ಟ್‌ಮೆಂಟ್

ಚಿತ್ರರಂಗದಲ್ಲಿ ಏನೇ ಗೊಂದಲಗಳಿದ್ದರೂ ರಾಜಕುಮಾರ್ ಫ್ಯಾಮಿಲಿ ಬಗೆಹರಿಸುತ್ತದೆ. ಈಗ ಇದಕ್ಕೆಲ್ಲ ಶಿವಣ್ಣ ಹೆಡ್ ಆಫ್ ದಿ ಡಿಪಾರ್ಟ್ಮೆಂಟ್. ನಿರ್ಮಾಪಕರು ಶಿವಣ್ಣ ಅವರನ್ನು ಭೇಟಿ ಮಾಡಿ ಮಾತಾಡಲಿ. ಆದರೆ, ಕುಮಾರ್ ಧರಣಿಯಿಂದ ಎದ್ದೇಳಬೇಕು ಅಷ್ಟೇ ಎಂದು ರವಿಚಂದ್ರನ್ ಹೇಳಿದ್ದರು. ಬಳಿಕ ಮಾತುಕತೆ ಆಡಿದ ಮೇಲೆ ಕುಮಾರ್‌ ಧರಣಿಯನ್ನು ಕೈಬಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವರಾಜಕುಮಾರ್‌ ಅವರನ್ನು ಬುಧವಾರ ಭೇಟಿ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ. ಶಿವಣ್ಣ ಈ ವೇಳೆ ಯಾವ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂಬುದರ ಮೇಲೆ ಇಡೀ ಬೆಳವಣಿಗೆ ನಿಂತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

South Cinema

Prashanth Neel: ʼಸಲಾರ್‌ʼ ಬಿಗ್‌ ಅಪ್‌ಡೇಟ್‌; ಕಥೆಯ ಗುಟ್ಟು ಬಿಟ್ಟುಕೊಟ್ಟ ಪ್ರಶಾಂತ್‌ ನೀಲ್‌!

Prashanth Neel: ಬಹು ನಿರೀಕ್ಷಿತ ʼಸಲಾರ್‌ʼ ಚಿತ್ರದ ಕಥೆಯ ಗುಟ್ಟನ್ನು ನಿರ್ದೇಶಕ ಪ್ರಶಾಂತ್‌ ನೀಲ್‌ ಬಿಚ್ಚಿಟ್ಟಿದ್ದಾರೆ.

VISTARANEWS.COM


on

neel
Koo

ಮುಂಬೈ: ಕೆಜಿಎಫ್‌ (KGF) ಸರಣಿ ಚಿತ್ರಗಳ ಮೂಲಕ ಇಡೀ ದೇಶದ ಚಿತ್ರರಂಗವೇ ಸ್ಯಾಂಡಲ್‌ವುಡ್‌ನತ್ತ ತಿರುಗಿ ನೋಡುವಂತೆ ಮಾಡಿದವರು ಪ್ರಶಾಂತ್‌ ನೀಲ್‌ (Prashanth Neel). ಇದೀಗ ಅವರು ‘ಸಲಾರ್‌’ (Salaar) ಚಿತ್ರದ ಮೂಲಕ ಮತ್ತೊಮ್ಮೆ ಮ್ಯಾಜಿಕ್‌ ಮಾಡಲು ಮುಂದಾಗುತ್ತಿದ್ದಾರೆ. ಟಾಲಿವುಡ್‌ ಸೂಪರ್‌ ಸ್ಟಾರ್‌ ಪ್ರಭಾಸ್‌ (Prabhas) ಅಭಿನಯದ ‘ಸಲಾರ್‌’ ಚಿತ್ರ ಎರಡು ಭಾಗಗಳಲ್ಲಿ ತೆರೆಗೆ ಬರಲಿದೆ. ‘ಸಲಾರ್: ಭಾಗ 1’ ಡಿಸೆಂಬರ್‌ 22ರಂದು ಬಿಡುಗಡೆಯಾಗಲಿದ್ದು, ಈ ಸಂದರ್ಭದಲ್ಲಿ ನಿರ್ದೇಶಕ ಪ್ರಶಾಂತ್‌ ನೀಲ್‌ ಚಿತ್ರದ ಬಗ್ಗೆ ಕೆಲವು ಆಸಕ್ತಿಕರ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ʼʼಸಲಾರ್‌ʼ ಚಿತ್ರದ ಕಥೆ ದೀರ್ಘವಾಗಿದೆ. ಈ ಕಥೆಯನ್ನು ಹೇಳಲು ಎರಡು ಭಾಗ ಬೇಕೇ ಬೇಕು ಎಂದು ಮೊದಲೇ ನಿರ್ಧರಿಸಿದ್ದೆ. ಆದರೆ ʼಕೆಜಿಎಫ್‌ʼ ಆರಂಭಿಸುವಾಗ ಎರಡು ಪಾರ್ಟ್‌ಗಳಲ್ಲಿ ತೆರೆಗೆ ತರುವ ಉದ್ದೇಶವಿರಲಿಲ್ಲ. ಆದರೆ ʼಸಲಾರ್‌ʼ ವಿಚಾರದಲ್ಲಿ ಎರಡು ಭಾಗ ಎನ್ನುವುದು ಪೂರ್ವ ನಿರ್ಧರಿತವಾಗಿತ್ತುʼʼ ಎಂದು ಅವರು ಹೇಳಿದ್ದಾರೆ.

ʼಕೆಜಿಎಫ್ʼ-ʼಸಲಾರ್‌ʼ ಬೇರೆ ಬೇರೆ

“ಸಲಾರ್‌ನಿಂದ ಪ್ರೇಕ್ಷಕರು ಮತ್ತೊಂದು ʼಕೆಜಿಎಫ್ʼ ಅನ್ನು ನಿರೀಕ್ಷಿಸಬಾರದು. ಯಾಕೆಂದರೆ ʼಸಲಾರ್ʼ ತನ್ನದೇ ಆದ ಜಗತ್ತು, ಅದಕ್ಕೆ ತನ್ನದೇ ಆದ ಭಾವನೆ ಮತ್ತು ಪಾತ್ರಗಳಿವೆ. ʼಸಲಾರ್ʼ ಹೇಳುವ ಬೇರೆಯದೇ ಕಥೆಗಾಗಿ ಜನರು ಅದನ್ನು ನೋಡುತ್ತಾರೆ ಎಂದು ಭಾವಿಸುತ್ತೇನೆ. ʼಸಲಾರ್‌ʼನ ಮೊದಲ ದೃಶ್ಯದಿಂದಲೇ ನಾವು ಬೇರೆಯದೇ ಪ್ರಪಂಚಕ್ಕೆ ಕೊಂಡೊಯ್ಯಲಿದ್ದೇವೆ. ಭಾರತದಲ್ಲಿ ಕಥೆ ಹೇಳಲಿರುವ ಅತ್ಯುತ್ತಮ ಮಾಧ್ಯಮ ಚಲನಚಿತ್ರವಾಗಿರುವುದರಿಂದ ಅದನ್ನು ʼಸಲಾರ್‌ʼ ಮೂಲಕ ಜನರಿಗೆ ಪರಿಣಾಮಕಾರಿಯಾಗಿ ತಲುಪಿಸಲಿದ್ದೇನೆ ಎನ್ನುವ ನಿರೀಕ್ಷೆ ಇದೆʼʼ ಎಂದು ಪ್ರಶಾಂತ್‌ ತಿಳಿಸಿದ್ದಾರೆ.

6 ಗಂಟೆಗಳ ಸಿನಿಮಾ!

ʼʼಸಲಾರ್‌ʼನ ಕಥೆಯನ್ನು ಸುಮಾರು 6 ಗಂಟೆಗಳ ಚಲನಚಿತ್ರವನ್ನಾಗಿಸಬಹುದು. ಅದಕ್ಕಾಗಿ ಎರಡು ಪಾರ್ಟ್‌ ಮಾಡಿದ್ದೇನೆ ಎಂದು ಹೇಳಿರುವ ಪ್ರಶಾಂತ್‌ ನೀಲ್‌ ಇನ್ನೊಂದು ಅಚ್ಚರಿಯ ಸಂಗತಿಯನ್ನೂ ರಿವೀಲ್‌ ಮಾಡಿದ್ದಾರೆ. ʼಕೆಜಿಎಫ್‌ʼಗಿಂತ ಮೊದಲೇ ʼಸಲಾರ್‌ʼ ಕಥೆ ಬರೆದಿದ್ದರಂತೆ. ʼʼಸಲಾರ್‌ʼ ಮೊದಲ ಪಾರ್ಟ್‌ನಲ್ಲಿ ಅರ್ಧ ಕಥೆ ಹೇಳುತ್ತೇವೆ. ಉಳಿದರ್ಧ ಕಥೆ ಎರಡನೇ ಪಾರ್ಟ್‌ನಲ್ಲಿ ಬರಲಿದೆʼʼ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: Salaar Movie: ಯೂಟ್ಯೂಬ್‌ನಿಂದ ʻಉಗ್ರಂʼ ಮಾಯ; ರಿಮೇಕ್‌ ಆಯ್ತಾ ʻಸಲಾರ್‌ʼ?

ಕಥೆ ಏನು?

ʼʼಇದು ಸ್ನೇಹಿತರಿಬ್ಬರು ಶತ್ರುಗಳಾಗುವ ಕಥೆಯನ್ನು ಒಳಗೊಂಡಿದೆ. ಸ್ನೇಹವೇ ʼಸಲಾರ್‌ʼನ ಪ್ರಮುಖ ಭಾವನೆ. ಡಿಸೆಂಬರ್‌ 1ರಂದು ಟ್ರೈಲರ್‌ ಬಿಡುಗಡೆಯಾಗಲಿದ್ದು, ಇದರಲ್ಲಿ ʼಸಲಾರ್‌ʼ ಪ್ರಪಂಚದ ಚಿಕ್ಕ ಪರಿಚಯ ನಿಮಗಾಗಲಿದೆʼʼ ಎಂದು ಹೇಳಿ ಪ್ರಶಾಂತ್‌ ಕುತೂಹಲ ಹುಟ್ಟು ಹಾಕಿದ್ದಾರೆ.

ʼಕೆಜಿಎಫ್‌ʼ ಸರಣಿ ಚಿತ್ರಗಳನ್ನು ನಿರ್ಮಿಸಿದ್ದ ಫಿಲ್ಮ್ಸ್‌ ನ ವಿಜಯ್‌ ಕಿರಂಗದೂರು ಈ ಚಿತ್ರಕ್ಕೂ ಬಂಡವಾಳ ಹೂಡಿದ್ದಾರೆ. ತೆಲುಗು ಮಾತ್ರವಲ್ಲದೆ ಕನ್ನಡ, ತಮಿಳು, ಹಿಂದಿ ಮತ್ತು ಮಲಯಾಳಂನಲ್ಲೂ ಈ ಚಿತ್ರ ತೆರೆಕಾಣಲಿದೆ. ಮೊದಲ ಬಾರಿ ಪ್ರಭಾಸ್‌ ಮತ್ತು ಪ್ರಶಾಂತ್‌ ನೀಲ್‌ ಒಂದಾಗುತ್ತಿದ್ದು, ಸಿನಿಮಾದ ಇತರ ಮುಖ್ಯ ಪಾತ್ರಗಳಲ್ಲಿ ಪೃಥ್ವಿರಾಜ್‌ ಸುಕುಮಾರನ್‌, ಶ್ರುತಿ ಹಾಸನ್‌, ಜಗಪತಿ ಬಾಬು ಮತ್ತಿತರರು ಕಾಣಿಸಿಕೊಂಡಿದ್ದಾರೆ. ಸದ್ಯ ಪೋಸ್ಟರ್‌ ಮೂಲಕವೇ ನಿರೀಕ್ಷೆ ಹುಟ್ಟು ಹಾಕಿರುವ ಈ ಚಿತ್ರದ ಬಿಡುಗಡೆಗಾಗಿ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

Continue Reading

South Cinema

Aadujeevitham Movie: ವಲಸೆ ಕಥೆ ಹೊತ್ತ ಆಡುಜೀವಿತಂ ರಿಲೀಸ್‌ ಡೇಟ್‌ ನ. 30ಕ್ಕೆ ಅನೌನ್ಸ್‌

Aadujeevitham Movie : ವಲಸೆ ಕಥೆಯನ್ನು ಹೊತ್ತಿರುವ ಆಡುಜೀವಿತಂ ಸಿನಿಮಾ ಭಾರಿ ನಿರೀಕ್ಷೆಯನ್ನು ಹುಟ್ಟಿಸಿದೆ. ನಿರ್ದೇಶಕ ಬ್ಲೆಸ್ಸಿ, ನಟ ಪ್ರಥ್ವಿರಾಜ್‌ ಸುಕುಮಾರನ್‌ ಅವರ ಕಾಂಬಿನೇಷನ್‌ನ ಚಿತ್ರ ಇದು.

VISTARANEWS.COM


on

Aadujeevitham film
Koo

ಬೆಂಗಳೂರು: ರಾಷ್ಟ್ರ ಪ್ರಶಸ್ತಿ ವಿಜೇತ (National award winning) ನಿರ್ದೇಶಕ ಬ್ಲೆಸ್ಸಿ (Director blessy) ಸಾರಥ್ಯದ ಪೃಥ್ವಿರಾಜ್ ಸುಕುಮಾರನ್‌ (Prithviraj Sukumaran) ಮತ್ತು ಅಮಲಾ ಪಾಲ್ (Amala Paul) ನಟನೆಯ ವಿಭಿನ್ನ ಮತ್ತು ಬಹು ನಿರೀಕ್ಷೆಯ ಚಿತ್ರ ಆಡು ಜೀವಿತಂ (Aadujeevitham Movie) ರಿಲೀಸ್‌ ಡೇಟ್‌ ಅನೌನ್ಸ್‌ ಆಗೋ ಕಾಲ ಸನ್ನಿಹಿತವಾಗಿದೆ. ಎ.ಆರ್‌.ರಹಮಾನ್‌ (AR Rehman) ಸಂಗೀತ ಸಂಯೋಜನೆಯ ಆಡು ಜೀವಿತಂ ಚಿತ್ರದ ಬಿಡುಗಡೆ ದಿನಾಂಕ (Release Date)ವನ್ನು ನವೆಂಬರ್‌ 30ರಂದು ಚಿತ್ರ ತಂಡ ಪ್ರಕಟಿಸಲಿದೆ.

ಆಡು ಜೀವಿತಂ ಚಿತ್ರದ ಕಥೆ ವಲಸಿಗರ ಸಮಸ್ಯೆ ಸುತ್ತ ಸುತ್ತುತ್ತದೆ. ದುಡಿಮೆಗಾಗಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಪಟ್ಟಂತ ಕಷ್ಟಗಳು ಆತನ ಪಾಸ್‌ಪೋರ್ಟ್‌ ಕಸಿದು ಆತನಿಗೆ ಕೊಟ್ಟಂತಹ ಹಿಂಸೆಗಳು, ಆ ಬಿಸಿಲಿನ ಮರುಭೂಮಿಯಲ್ಲಿ ಆತ ಅನುಭವಿಸಿದ ಸಂಕಷ್ಟಗಳ ಕಥನವೇ ಈ ಆಡು ಜೀವಿತಂ.

ಈ ಸಿನಿಮಾಕ್ಕಾಗಿ ನಿರ್ದೇಶಕ ಬ್ಲೆಸ್ಸಿ ಅವರು ತುಂಬಾ ಅಧ್ಯಯನ ಮಾಡಿದ್ದಾರೆ. ಈ ಕಥೆ ಅವರನ್ನು ಕಳೆದ 15 ವರ್ಷಗಳಿಂದ ಕೊರೆಯುತ್ತಿತ್ತಂತೆ. ಅಂತೆಯೇ ಅವರ ಕನಸಿನಲ್ಲಿ ಬಂದ ಚಿತ್ರದಂತೆ ತಮ್ಮನ್ನು ಮಾರ್ಪಾಡು ಮಾಡಿಕೊಂಡು ಹೊಸ ವ್ಯಕ್ತಿಯ ರೂಪದಲ್ಲಿ ಹೊಸ ಲುಕ್‌ನಲ್ಲಿ ಬಂದಿದ್ದಾರೆ ನಟ ಪೃಥ್ವಿರಾಜ್ ಸುಕುಮಾರನ್.

ಈ ಚಿತ್ರಕ್ಕಾಗಿ ಇಡೀ ಚಿತ್ರತಂಡ ಹಗಲು ರಾತ್ರಿ ಎನ್ನದೆ ದುಡಿದಿದೆ. ಚಿತ್ರದ ಔಟ್ಪುಟ್ ಗಾಗಿ ಸಾಕಷ್ಟು ಪ್ರಯೋಗಗಳನ್ನು ಮಾಡಿದೆ. ಹೀಗೆ ಅತ್ಯಂತ ಜತನದಿಂದ ತಯಾರಿಸಿರುವ ಚಿತ್ರ ಯಾವಾಗ ಬಿಡುಗಡೆಯಾಗಲಿದೆ ಎನ್ನುವ ಕುತೂಹಲ ಎಲ್ಲ ಕಡೆಯಲ್ಲಿದೆ. ಅದನ್ನು ತಣಿಸುವುದಕ್ಕಾಗಿ ಚಿತ್ರ ತಂಡ ನವೆಂಬರ್‌ 30ರಂದು ರಿಲೀಸ್‌ ಡೇಟ್‌ ಪ್ರಕಟಿಸಲಿದೆ.

ಇದನ್ನೂ ಓದಿ : BBK SEASON 10: ಕನ್ನಡ ಪತ್ರವನ್ನು ಓದಿದ ಮೈಕಲ್‌; ದಂಗಾದ ಸ್ಪರ್ಧಿಗಳು

ಏನಿದೆ ಆಡುಜೀವಿತಂ ಸಿನಿಮಾ ಕಥೆ?

ಹಣ ಸಂಪಾದಿಸಲು ಸೌದಿ ಅರೇಬಿಯಾಕ್ಕೆ ಹೋದ ಭಾರತೀಯ ವಲಸೆ ಕಾರ್ಮಿಕ ನಜೀಬ್ ಮುಹಮ್ಮದ್ ನ ನಿಜ ಜೀವನದ ಘಟನೆ ಇದು ಎಂದು ನಿರ್ದೇಶಕರು ಹೇಳಿಕೊಂಡಿದ್ದಾರೆ. ವಿಧಿಯ ವೈಚಿತ್ರ್ಯದಿಂದಾಗಿ ನಜೀಬ್‌ ಗುಲಾಮನ ಬದುಕನ್ನು ಬದುಕಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಅವನು ಮರುಭೂಮಿಯ ಮಧ್ಯದಲ್ಲಿ ಮೇಕೆಗಳನ್ನು ಮೇಯಿಸಬೇಕಾಗುತ್ತದೆ. ಆಡು ಜೀವಿತಂ ಅಂದರೆ ಆಡಿನ ಬದುಕು ಅಂಥ ಅರ್ಥ. ಇಂಗ್ಲಿಷ್‌ನಲ್ಲಿ ಇದರ ಟೈಟಲ್‌ GOAT LIFE ಎಂದಿದೆ.

ಪರ್ಷಿಯನ್ ಕೊಲ್ಲಿ ರಾಷ್ಟ್ರಗಳಲ್ಲಿ ಕೆಲಸ ಮಾಡಿ ಮನೆಗೆ ಕಳುಹಿಸುವಷ್ಟು ಹಣ ಸಂಪಾದಿಸುವುದು ನಜೀಬ್ ಅವರ ಕನಸಾಗಿತ್ತು. ಆದರೆ, ಸೌದಿ ಮರುಭೂಮಿಯ ಮಧ್ಯದಲ್ಲಿ ಆಡುಗಳನ್ನು ಮೇಯಿಸುವ ಗುಲಾಮಗಿರಿಯ ಕೆಲಸಕ್ಕೆ ಒಡ್ಡಿಕೊಳ್ಳಬೇಕಾದ ಅನಿವಾರ್ಯತೆ ಏನು ಬಂತು? ಅವನು ಕೊನೆಗೂ ತನ್ನನ್ನು ತಾನು ಹೇಗೆ ಬಂಧಮುಕ್ತಗೊಳಿಸಿಕೊಳ್ಳುತ್ತಾನೆ ಎನ್ನುವುದೊಂದು ದೊಡ್ಡ ಹೋರಾಟದ ಕಥೆ. ಅವನು ಸೆರೆಮನೆ ಸೇರಿ, ಅಲ್ಲಿಂದ ತಪ್ಪಿಸಿಕೊಳ್ಳುವ ಸಾಹಸ ಈ ಚಿತ್ರದಲ್ಲಿ ಇರಲಿದೆ ಎನ್ನಲಾಗಿದೆ.

Continue Reading

South Cinema

Rishab Shetty: ವಿಶೇಷ ಜ್ಯೂರಿ ಅವಾರ್ಡ್ ತಮ್ಮ ನೆಚ್ಚಿನ ನಟನಿಗೆ ಅರ್ಪಿಸಿದ ರಿಷಬ್‌ ಶೆಟ್ಟಿ, ಯಾರವರು?

Rishab Shetty: ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ʼಸಿಲ್ವರ್ ಪಿಕಾಕ್​ ಅವಾರ್ಡ್’​​ ಪಡೆದ ರಿಷಬ್‌ ಶೆಟ್ಟಿ ಈ ಪ್ರಶಸ್ತಿಯನ್ನು ಹಿರಿಯ ನಟ ಶಂಕರ್‌ ನಾಗ್‌ ಅವರಿಗೆ ಅರ್ಪಿಸಿದ್ದಾರೆ.

VISTARANEWS.COM


on

rishab letter
Koo

ಬೆಂಗಳೂರು: ಕಳೆದ ವರ್ಷ ತೆರೆಕಂಡು ದೇಶಾದ್ಯಂತ ಸಂಚಲನ ಮೂಡಿಸಿದ್ದ ಚಿತ್ರ ‘ಕಾಂತಾರ’ (Kantara). ರಿಷಬ್‌ ಶೆಟ್ಟಿ (Rishab Shetty) ಈ ಚಿತ್ರವನ್ನು ನಿರ್ದೇಶಿಸಿ, ನಾಯಕನಾಗಿ ಕಾಣಿಸಿಕೊಂಡಿದ್ದರು. ಕೇವಲ 16 ಕೋಟಿ ರೂ. ಬಜೆಟ್‌ನಲ್ಲಿ ತಯಾರಾಗಿದ್ದ ಈ ಚಿತ್ರ ಬರೋಬ್ಬರಿ 400 ಕೋಟಿ ರೂ. ಗಳಿಸಿತ್ತು. ಈ ಎಲ್ಲ ಹೆಗ್ಗಳಿಕೆ ನಡುವೆ ‘ಕಾಂತಾರ’ ಮುಡಿಗೆ ಇನ್ನೊಂದು ಗರಿ ಸಿಕ್ಕಿದೆ. ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ದೈವಿಕ ಕತೆಯನ್ನು ಹೊಂದಿರುವ ʼಕಾಂತಾರʼ ಸಿನಿಮಾ ಚೊಚ್ಚಲ ಆವೃತ್ತಿಯ ʼಸಿಲ್ವರ್ ಪಿಕಾಕ್​ ಅವಾರ್ಡ್’​​ ತನ್ನದಾಗಿಸಿಕೊಂಡಿದೆ. ರಿಷಬ್‌ ಶೆಟ್ಟಿ ಅವರಿಗೆ ವಿಶೇಷ ಜ್ಯೂರಿ ಅವಾರ್ಡ್ (Special Jury Award) ಲಭಿಸಿದ್ದು, ಅದನ್ನು ಅವರು ಹಿರಿಯ ನಟ ಶಂಕರ್‌ ನಾಗ್‌ (Shankar Nag) ಅವರಿಗೆ ಅರ್ಪಿಸಿದ್ದಾರೆ.

ಸೋಷಿಯಲ್‌ ಮೀಡಿಯಾದಲ್ಲಿ ಪತ್ರವೊಂದನ್ನು ಹಂಚಿಕೊಂಡಿರುವ ರಿಷಬ್‌ ಶೆಟ್ಟಿ ಈ ಪ್ರಶಸ್ತಿಯನ್ನು ಶಂಕರ್‌ ನಾಗ್‌ ಅವರಿಗೆ ಅರ್ಪಿಸಿದ್ದಾರೆ. ʼ54ನೇ ಗೋವಾ ಇಂಟರ್‌ ನ್ಯಾಷನಲ್‌ ಫಿಲ್ಮ್‌ ಫೆಸ್ಟಿವಲ್‌ ಆಫ್‌ ಇಂಡಿಯಾ ಸ್ಪೆಷಲ್‌ ಜ್ಯೂರಿ ಅವಾರ್ಡ್‌ ಹೊರಕಿದ್ದು ಎಂದೂ ಮರೆಯಾಗದ ಕ್ಷಣಗಳಲ್ಲಿ ಉಳಿದುಕೊಳ್ಳುತ್ತದೆ ಎಂದು ರಿಷಬ್‌ ಪತ್ರ ಆರಂಭಿಸಿದ್ದಾರೆ.

1979ರಲ್ಲಿ ನನ್ನ ಸ್ಫೂರ್ತಿಯಾದ ಶಂಕರ್‌ ನಾಗ್‌ ಸರ್‌ ಅವರಿಗೆ ʼಒಂದಾನೊಂದು ಕಾಲದಲ್ಲಿʼ ಚಿತ್ರಕ್ಕೆ ಅತ್ಯುತ್ತಮ ನಟ ಎಂಬ ಪ್ರಶಸ್ತಿ ಇದೇ ಚಿತ್ರೋತ್ಸವದಲ್ಲಿ ದೊರಕಿದ್ದು, ಅವರು ತೋರಿಸಿರುವ ದಾರಿಯಲ್ಲಿ ನಡೆಯಲು ಪ್ರಯತ್ನಿಸುತ್ತಿರುವ ನನಗೆ ಇಂದು ಈ ಅವಾರ್ಡ್‌ ದೊರೆತಿದ್ದು ಅತ್ಯಂತ ಸಂತಸ ನೀಡಿದೆ ಎಂದು ರಿಷಬ್‌ ಬರೆದಿದ್ದಾರೆ.

ಮುಂದುವರಿದು, ʼಕಾಂತಾರʼವನ್ನು ನೋಡಿ ಬೆಂಬಲಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಕನ್ನಡಿಗರು, ಇದೀಗ ʼಕಾಂತಾರ ಅಧ್ಯಾಯ 1ʼಕ್ಕೂ ನೀಡುತ್ತಿರುವ ಅಭೂತಪೂರ್ವ ಪ್ರಶಂಸೆ ಮತ್ತು ಬೆಂಬಲ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ.
ಮತ್ತೊಮ್ಮೆ ಉತ್ತಮ ಚಿತ್ರವನ್ನು ನೀಡಲು ಶ್ರಮಿಸುತ್ತೇನೆ. ಈ ನನ್ನ ಎಲ್ಲ ಪ್ರಯತ್ನ ಹಾಗೂ ಯಶಸ್ಸಿಗೆ ಕಾರಣವಾದ ಪ್ರೀತಿಯ ಕನ್ನಡಿಗರಿಗೆ ನಾನು ಸದಾ ಅಭಾರಿ. ಈ ಪ್ರಶಸ್ತಿಯನ್ನು ನಾನು ಶಂಕರ್‌ ನಾಗ್‌ ಅವರಿಗೆ ಅರ್ಪಿಸುತ್ತೇನೆʼ ಎಂದು ರಿಷಬ್‌ ಶೆಟ್ಟಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kantara Movie: ಯೂಟ್ಯೂಬ್​ನಲ್ಲಿ ದಾಖಲೆ ಬರೆದ ‘ಕಾಂತಾರ ಚಾಪ್ಟರ್ 1’ ಫಸ್ಟ್ ಲುಕ್ ಟೀಸರ್; ವೀವ್ಸ್ ಎಷ್ಟು?

ಪ್ರಿಕ್ವೆಲ್‌ಗೆ ಮುಹೂರ್ತ

ಸದ್ಯ ರಿಷಬ್‌ ಶೆಟ್ಟಿ ‘ಕಾಂತಾರ ಚಾಪ್ಟರ್ 1’ ಕೈಗೆತ್ತಿಕೊಂಡಿದ್ದಾರೆ. ಇದು ಕಾಂತಾರ ಚಿತ್ರದ ಪ್ರಿಕ್ವೆಲ್‌. ಅಂದರೆ ʼಕಾಂತಾರʼದ ಕಥೆ ನಡೆಯುವುದಕ್ಕೂ ಮೊದಲು ಏನಾಗಿತ್ತು ಎನ್ನುವುದನ್ನು ರಿಷಬ್‌ ಶೆಟ್ಟಿ ಅಧ್ಯಾಯ 1ರಲ್ಲಿ ಹೇಳಲಿದ್ದಾರೆ. ನವೆಂಬರ್‌ 27ರಂದು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ಈ ಚಿತ್ರದ ಮುಹೂರ್ತ ನೆರವೇರಿದೆ. ಜತೆಗೆ ಅಂದೇ ಫಸ್ಟ್ ಲುಕ್ ಟೀಸರ್ ರಿಲೀಸ್‌ ಆಗಿ ದಾಖಲೆಯ ಪ್ರಮಾಣದಲ್ಲಿ ವೀಕ್ಷಣೆ ಕಂಡಿದೆ. ಏಳು ಭಾಷೆಗಳಲ್ಲಿ ರಿಲೀಸ್ ಆಗಿರುವ ಈ ಟೀಸರ್ 24 ಗಂಟೆಗಳಲ್ಲಿ ಬರೋಬ್ಬರಿ 12 ಮಿಲಿಯನ್ (1.2 ಕೋಟಿ) ಬಾರಿ ವೀಕ್ಷಣೆ ಕಂಡು ಹಲವು ದಾಖಲೆಗಳನ್ನು ಸರಿಗಟ್ಟಿದೆ. ರಿಷಬ್ ಶೆಟ್ಟಿ ಒಂದು ಕೈಯಲ್ಲಿ ತ್ರಿಶೂಲ, ಮತ್ತೊಂದು ಕೈಯಲ್ಲಿ ಖಡ್ಗ ಹಿಡಿದಿರುವ ಈ ಪೋಸ್ಟರ್ ಸೋಶಿಯಲ್ ಮೀಡಿಯಾದಲ್ಲೂ ವೈರಲ್ ಆಗಿದೆ. ಅಲ್ಲದೆ ವಿಶ್ವದ ಅತಿ ದೊಡ್ಡ ಸರ್ಚ್ ಎಂಜಿನ್​ ಗೂಗಲ್​ ಕೂಡ ‘ಕಾಂತಾರ ಚಾಪ್ಟರ್ 1’ರ ಫಸ್ಟ್​ ಲುಕ್ ಬಗ್ಗೆ ಪ್ರತಿಕ್ರಿಯೆ ಕೊಟ್ಟಿದ್ದು, ʼವಾಹ್​ʼ ಎಂದು ಉದ್ಗಾರ ತೆಗೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

Continue Reading

South Cinema

Actress Leelavathi: ಲೀಲಾವತಿ ಕನಸಿನ ಪಶು ಆಸ್ಪತ್ರೆ ಉದ್ಘಾಟಿಸಿದ ಡಿಕೆಶಿ, ಆದರೆ ನಟಿ ಪ್ರಜ್ಞಾಶೂನ್ಯ

Actress Leelavathi : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಗಮಿಸಿ ಲೀಲಾವತಿ ಅವರ ಆರೋಗ್ಯವನ್ನು ವಿಚಾರಿಸಿದರು. ಬಳಿಕ, ಲೀಲಾವತಿ ಅವರ ಸ್ವಗ್ರಾಮದಲ್ಲಿ ನಿರ್ಮಿಸಿರುವ ಪಶು ಆಸ್ಪತ್ರೆಯನ್ನು ಡಿ.ಕೆ. ಶಿವಕುಮಾರ್‌ ಉದ್ಘಾಟಿಸಿದರು. ಈ ವೇಳೆ ವಿಧಾನ ಪರಿಷತ್ ಸದಸ್ಯ ರವಿ, ನೆಲಮಂಗಲ ಶಾಸಕ ಶ್ರೀನಿವಾಸ್ ಜತೆಗಿದ್ದರು.

VISTARANEWS.COM


on

DK Shivakumar Inaugurate of veterinary hospital
ಗೋವುಗಳಿಗೆ ಪೂಜೆ ಮಾಡುವ ಮೂಲಕ ಲೀಲಾವತಿ ಕಟ್ಟಿಸಿದ ಪಶು ಆಸ್ಪತ್ರೆಯನ್ನು ಉದ್ಘಾಟಿಸಿದ‌ ಡಿಸಿಎಂ ಡಿ.ಕೆ. ಶಿವಕುಮಾರ್
Koo

ಬೆಂಗಳೂರು: ಹಿರಿಯ ನಟಿ ಲೀಲಾವತಿ (Actress Leelavathi) ಅವರು ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಅವರ ಸೋಲದೇವನಹಳ್ಳಿಯ ನಿವಾಸಕ್ಕೆ ನಟ ಶಿವರಾಜಕುಮಾರ್‌ ಮತ್ತು ಗೀತಾ ದಂಪತಿ (Shivarajkumar and Geetha) ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ (DCM DK Shivakumar) ಮಂಗಳವಾರ (ನ. 28) ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದರು. ಇದೇ ವೇಳೆ ಲೀಲಾವತಿ ಅವರ ಸ್ವಗ್ರಾಮದಲ್ಲಿ ನಿರ್ಮಿಸಿರುವ ಪಶು ಆಸ್ಪತ್ರೆಯನ್ನು ಡಿ.ಕೆ. ಶಿವಕುಮಾರ್‌ ಉದ್ಘಾಟಿಸಿದರು. ಇದು ಲೀಲಾವತಿ ಅವರ ಕನಸಿನ ಆಸ್ಪತ್ರೆಯಾಗಿತ್ತು. ಆದರೆ ತೀವ್ರ ಅನಾರೋಗ್ಯದಿಂದ ಬಹುತೇಕ ಪ್ರಜ್ಞಾಶೂನ್ಯರಾಗಿರುವ ಲೀಲಾವತಿ ಅವರಿಗೆ ಈ ಆಸ್ಪತ್ರೆ ಉದ್ಘಾಟನೆಯ ಅರಿವು ಆಗದೇ ಹೋಗಿರುವುದು ಭಾವುಕ ಸಂಗತಿ.

ಶಿವರಾಜಕುಮಾರ್‌ ಮತ್ತು ಗೀತಾ ದಂಪತಿ ಅವರು ಬಂದು ಆರೋಗ್ಯವನ್ನು ವಿಚಾರಿಸಿದ್ದಾರೆ. ಈ ವೇಳೆ ಲೀಲಾವತಿ ಅವರು ಶಿವರಾಜಕುಮಾರ್‌ ಅವರ ಧ್ವನಿಯನ್ನು ಕಂಡು ಹಿಡಿದು ಮಾತನಾಡಿಸಿದ್ದಾರೆ. ಅಲ್ಲದೆ, ಇವರ ಭೇಟಿಯಿಂದ ಖುಷಿ ಪಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ವಿನೋದ್ ರಾಜ್ ಅವರಿಗೆ ಶಿವರಾಜಕುಮಾರ್ ಧೈರ್ಯ ತುಂಬಿದ್ದಾರೆ.

Shivarajkumar and DK shivakumar enquire Actress Leelavathi health and Inauguration of veterinary hospital

ಬಳಿಕ ಮಾತನಾಡಿದ ಶಿವರಾಜಕುಮಾರ್‌, ಲೀಲಮ್ಮ ನನ್ನ ವಾಯ್ಸ್ ಅನ್ನು ಕಂಡು ಹಿಡಿದರು. ಈ ವಯಸ್ಸಲ್ಲಿ ತಾಳೋ ಶಕ್ತಿ ಇದೆಯಲ್ಲವಾ? ಅದು ನಿಜಕ್ಕೂ ಗ್ರೇಟ್.‌ ಯುಗಪುರುಷರು ಅಂತಾರೆ. ಲೀಲಾವತಿ ಅವರು ಒಳ್ಳೇ ಮನಸ್ಸು ಇರುವವರು. ಅಂದಿನಿಂದ ನನಗೆ ಅವರ ಮೇಲೆ ಅದೇ ಪ್ರೀತಿ ಇದೆ. ಚಿಕ್ಕ ವಯಸ್ಸಿನಿಂದಲೂ ಅದೇ ಆತ್ಮೀಯತೆ ಇದೆ. ನನಗೂ ವಿನೋದ್ ನೋಡಿದಾಗೆಲ್ಲ ತಾಯಿ ನೋಡಿದ ಹಾಗೆ ಹಾಗುತ್ತದೆ. ದೇವರ ಆಶೀರ್ವಾದ ಇದೆ. ಅವರು ಚೆನ್ನಾಗಿರುತ್ತಾರೆ ಎಂದು ಹೇಳಿದರು.

Shivarajkumar and DK shivakumar enquire Actress Leelavathi health and Inauguration of veterinary hospital

ಆರೋಗ್ಯ ವಿಚಾರಿಸಿದ ಡಿ.ಕೆ. ಶಿವಕುಮಾರ್

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಗಮಿಸಿ ಲೀಲಾವತಿ ಅವರ ಆರೋಗ್ಯವನ್ನು ವಿಚಾರಿಸಿದರು. ಬಳಿಕ, ಲೀಲಾವತಿ ಅವರ ಸ್ವಗ್ರಾಮದಲ್ಲಿ ನಿರ್ಮಿಸಿರುವ ಪಶು ಆಸ್ಪತ್ರೆಯನ್ನು ಡಿ.ಕೆ. ಶಿವಕುಮಾರ್‌ ಉದ್ಘಾಟಿಸಿದರು. ಈ ವೇಳೆ ವಿಧಾನ ಪರಿಷತ್ ಸದಸ್ಯ ರವಿ, ನೆಲಮಂಗಲ ಶಾಸಕ ಶ್ರೀನಿವಾಸ್ ಜತೆಗಿದ್ದರು.

DK Shivakumar Inaugurate of veterinary hospital

ಲೀಲಾವತಿ ಅವರ ಕನಸಿನ ಕೂಸಾಗಿದ್ದ ಪಶು ಆಸ್ಪತ್ರೆಗೆ ಹಸುವಿನ ಪೂಜೆ ಮಾಡುವ ಮೂಲಕ ಡಿ.ಕೆ.‌ ಶಿವಕುಮಾರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್‌, ಒಂದು ವಾರದ ಹಿಂದೆ ನಟಿ ಲೀಲಾವತಿ, ವಿನೋದ್ ರಾಜ್ ನಮ್ಮ ಮನೆಗೆ ಬಂದು ಪಶು ಆಸ್ಪತ್ರೆ ಉದ್ಘಾಟನೆಗೆ ಕರೆದಿದ್ದರು. ಈ ಪಶು ಆಸ್ಪತ್ರೆ ಮೂಲಕ ದೊಡ್ಡ ಸಂದೇಶ ನೀಡಿದ್ದಾರೆ. ಅವರು ಅಂತಹ ಶ್ರೀಮಂತರಲ್ಲ. ಅಂಥದ್ದರಲ್ಲಿ ಪ್ರಾಣಿಗಳಿಗೆ ಸಹಾಯ ಮಾಡಲು ಹೊರಟಿದ್ದಾರೆ. ಇದು ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು.

DK Shivakumar Inaugurate of veterinary hospital

ಬೆಂಗಳೂರಿಗೆ ಹತ್ತಿರದ ಸ್ಥಳದಲ್ಲಿ ಪಶು ವೈದ್ಯ ಆಸ್ಪತ್ರೆಯನ್ನು ಕಟ್ಟಿದ್ದಾರೆ. ನಮ್ಮ ಸ್ಥಳೀಯ ಶಾಸಕರೂ ಸಹಕಾರ ನೀಡಿದ್ದಾರೆ. ದೊಡ್ಡವರು ದೊಡ್ಡ ಕೆಲಸ ಮಾಡ್ತಾರೆ. ಚಿತ್ರರಂಗದಲ್ಲಿ ಹೆಸರು ಮಾಡಿದ್ದಾರೆ. ಉಸಿರಿದ್ದರೂ, ಇಲ್ಲದಿದ್ದರೂ ಹೆಸರು ಶಾಶ್ವತವಾಗಿರಲಿದೆ. ಪವಿತ್ರವಾದ ಕೆಲಸ ಮಾಡಲೇಬೇಕು ಎಂದು ಬಂದಿದ್ದೇನೆ. ಶುಭವಾಗಲಿ ಎಂದು ಹಾರೈಸುವೆ. ಕಲಾವಿದರಿಗೆ ಪಿಂಚಣಿ ಕೊಡಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ಜತೆಗೆ ಚರ್ಚೆ ಮಾಡುತ್ತೇನೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಇದನ್ನೂ ಓದಿ: DK Shivakumar : ಕೋರ್ಟ್‌ಗೆ ಹೋಗಲು ಎಲ್ಲರಿಗೂ ಹಕ್ಕಿದೆ: ಯತ್ನಾಳ್‌ಗೆ ಸಿದ್ದರಾಮಯ್ಯ ತಿರುಗೇಟು

ವಿನೋದ್ ರಾಜ್ ನಮ್ಮ ಸಹೋದರ ಇದ್ದಹಾಗೆ. ಅವರ ಪರವಾಗಿ ಸರ್ಕಾರ ಇದೆ. ಬರೀ ಡಿ.ಕೆ. ಶಿವಕುಮಾರ್ ಇಲ್ಲಿಗೆ ಬಂದಿಲ್ಲ. ಇಡೀ ಸರ್ಕಾರ ಬಂದಿದೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು. ಈಚೆಗೆ ನಟ ದರ್ಶನ್‌, ಅರ್ಜುನ್ ಸರ್ಜಾ ಅವರು ಭೇಟಿ ನೀಡಿ ನಟಿ ಲೀಲಾವತಿ ಅವರ ಆರೋಗ್ಯವನ್ನು ವಿಚಾರಿಸಿದ್ದರು.

Continue Reading
Advertisement
Supreme Court Says than actions must be taken against hate speeches
ಕೋರ್ಟ್4 mins ago

Hate Speeches: ದ್ವೇಷ ಭಾಷಣಗಳ ವಿರುದ್ಧ ಕ್ರಮ ಜರುಗಿಸಲೇಬೇಕು! ಸರ್ಕಾರಗಳಿಗೆ ಸುಪ್ರೀಂ ತಾಕೀತು

Fashion Show
ದೇಶ41 mins ago

Fashion Show : ಏಕತೆಗೆ ಧಕ್ಕೆ; ಫ್ಯಾಶನ್​ ಶೋದಲ್ಲಿ ಬುರ್ಖಾ ಹಾಕಿದ್ದಕ್ಕೆ ಮುಸ್ಲಿಂ ನಾಯಕನ ಆಕ್ಷೇಪ!

kalpamrutha cold pressed oil production unit inaugurated
ಕರ್ನಾಟಕ41 mins ago

ಕಲ್ಪಾಮೃತ ಶುದ್ಧ ಗಾಣದ ಎಣ್ಣೆ ಉತ್ಪಾದನಾ ಘಟಕಕ್ಕೆ ಚಾಲನೆ

Gadaga accident two bike riders dead
ಕರ್ನಾಟಕ42 mins ago

Road Accident : ಸೋದರನ ನಿಶ್ಚಿತಾರ್ಥ ಮುಗಿಸಿ ಹೊರಟ ಇಬ್ಬರು ಅಪಘಾತದಲ್ಲಿ ಮೃತ್ಯು

Anju who went to Pakistan for to marry her lover, returns to India
ದೇಶ44 mins ago

Anju Love Story: ಪಾಕ್‌ಗೆ ಹೋಗಿ ಪ್ರಿಯಕರನ ಮದ್ವೆಯಾಗಿದ್ದ ಅಂಜು ಭಾರತಕ್ಕೆ ವಾಪಸ್!

vijaypura accident
ಕರ್ನಾಟಕ57 mins ago

Road Accident : ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

Task force committee meeting at Kottur
ವಿಜಯನಗರ1 hour ago

Vijayanagara News: ಮೂಲ ಸೌಕರ್ಯಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಿ: ಶಾಸಕ ನೇಮಿರಾಜ ನಾಯ್ಕ

Pooja Gandhi and Vijay Ghorpade
ಕರ್ನಾಟಕ1 hour ago

Pooja Gandhi: ಮಳೆ ಹುಡುಗಿಗೆ ಮಂತ್ರ ಮಾಂಗಲ್ಯ; ಹೊಸ ಬಾಳಿಗೆ ಕಾಲಿಟ್ಟ ಪೂಜಾ ಗಾಂಧಿ

Bombay High court orders to son to vacate his mother flat
ಕೋರ್ಟ್1 hour ago

ಆರೈಕೆ ಮಾಡದ ಮಗನಿಗೆ ತಾಯಿಯ ಫ್ಲ್ಯಾಟ್ ಖಾಲಿ ಮಾಡಲು ಬಾಂಬೆ ಹೈಕೋರ್ಟ್ ಆದೇಶ

TV Mohandas Pai Priyank Kharge
ಕರ್ನಾಟಕ2 hours ago

Mohandas Pai : ಐಟಿ ಸಿಟಿ ಗರಿ ಉದುರೀತು ಎಂದ ಮೋಹನ್‌ ದಾಸ್‌ ಪೈ, ಪ್ರಿಯಾಂಕ್‌ ತಿರುಗೇಟು

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ4 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ6 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Dina Bhavishya
ಪ್ರಮುಖ ಸುದ್ದಿ17 hours ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ2 days ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನ ಗಡುವು ಕೊಟ್ಟ ಸಿಎಂ; ಕುಳಿತಲ್ಲೇ ಸಿದ್ದು ಊಟ!

Cm Siddaramaiah in Janatha Darshan
ಕರ್ನಾಟಕ2 days ago

Janatha Darshan : ಜಿಲ್ಲಾ ಮಟ್ಟದ ಸಮಸ್ಯೆ ಬೆಂಗಳೂರಿಗೆ ಬಂದರೆ ಸಹಿಸಲ್ಲ; ಸಿಎಂ ಖಡಕ್‌ ಎಚ್ಚರಿಕೆ

CM Janatha Darshana solved mysore citizens problem
ಕರ್ನಾಟಕ2 days ago

Janatha Darshan : ಮಾಲೀಕನ ಮನೆ ಹರಾಜು; ಲೀಸ್‌ ದುಡ್ಡಿಗೆ ಯಾರು ಗ್ಯಾರಂಟಿ? ಕಂಗೆಟ್ಟ ಕುಟುಂಬಕ್ಕೆ ಸಿಎಂ ರಕ್ಷಣೆ!

Shivajingar School building collapses The children escaped unhurt
ಕರ್ನಾಟಕ2 days ago

Building collapse : ಏಕಾಏಕಿ ಕುಸಿದು ಬಿದ್ದ ಶಾಲಾ ಕಟ್ಟಡ; ಪ್ರಾಣಾಪಾಯದಿಂದ ಚಿಣ್ಣರು ಪಾರು

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಿಎಂಗೆ ದೂರು ನೀಡಬೇಕೇ? ಜನತಾ ದರ್ಶನಕ್ಕೆ ಹೋಗಬೇಕಿಲ್ಲ; ಈ ನಂಬರ್‌ಗೆ ಕರೆ ಮಾಡಿ!

read your daily horoscope predictions for november 27 2023
ಪ್ರಮುಖ ಸುದ್ದಿ3 days ago

Dina Bhavishya: ನಿಮ್ಮನ್ನು ಉರುಳಿಸಲು ಪಿತೂರಿ ಮಾಡ್ತಾರೆ ಹುಷಾರ್‌!

Danger Influenza People are suffering from the flu
ಆರೋಗ್ಯ3 days ago

Viral fever: ಡೆಡ್ಲಿ ಚೀನಾ ವೈರಸ್‌; ಮಕ್ಕಳಿಗೆ ಇದರಿಂದ ಅಪಾಯ ಇದೆಯಾ?

ಟ್ರೆಂಡಿಂಗ್‌