Recruitment Delay: ನೇಮಕಾತಿ ವಿಳಂಬ; ದಯಾಮರಣ ಕೋರಿ ರಾಜ್ಯಪಾಲರಿಗೆ ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳ ಪತ್ರ! - Vistara News

ಕರ್ನಾಟಕ

Recruitment Delay: ನೇಮಕಾತಿ ವಿಳಂಬ; ದಯಾಮರಣ ಕೋರಿ ರಾಜ್ಯಪಾಲರಿಗೆ ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳ ಪತ್ರ!

Recruitment Delay: 1208 ಸಹಾಯಕ ಪಾಧ್ಯಾಪಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಕಾಲೇಜು ಶಿಕ್ಷಣ ಇಲಾಖೆ ಎರಡು ಬಾರಿ ತಾತ್ಕಾಲಿಕ ಪಟ್ಟಿ ಪ್ರಕಟಿಸಿದೆ. ಮೂರು ವರ್ಷ ಕಳೆದರೂ ಸ್ಥಳ ನಿಯುಕ್ತಿಗೊಳಿಸಿ ಆದೇಶ ಪತ್ರ ನೀಡದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಬೇಸತ್ತಿದ್ದಾರೆ. ಇದೇ ಕೆಲಸವನ್ನು ನಂಬಿ ಕುಳಿತಿರುವ ಅಭ್ಯರ್ಥಿಗಳು, ಬೇರೆ ಕೆಲಸಕ್ಕೂ ಹೋಗಲಾದೇ ಸಂಕಷ್ಟಕ್ಕೆ ಸಿಲುಕಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮೂರು ವರ್ಷ ಕಳೆದರೂ ರಾಜ್ಯ ಸರ್ಕಾರ ನೇಮಕಾತಿ ಆದೇಶ ಪತ್ರ ಕೊಡದ ಹಿನ್ನೆಲೆಯಲ್ಲಿ ಬೇಸತ್ತ ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳು, ದಯಾಮರಣಕ್ಕೆ ಅನುಮತಿ ನೀಡುವಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಮನವಿ ಮಾಡಿದ್ದಾರೆ. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಸಿಎಂ, ಡಿಸಿಎಂ, ಉನ್ನತ ಶಿಕ್ಷಣ ಸಚಿವರ ಹೆಸರನ್ನು ಟ್ಯಾಗ್‌ ಮಾಡಿ ನೇಮಕಾತಿ ಆದೇಶ ಪತ್ರ ಶೀಘ್ರ ನೀಡಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತಿದ್ದಾರೆ.

ದಯಾಮರಣ ಕೋರಿ ಅಭ್ಯರ್ಥಿಯೊಬ್ಬರು ರಾಜ್ಯಪಾಲರಿಗೆ ಬರೆದಿರುವ ಪತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. 2021ರಲ್ಲಿ ಆಯ್ಕೆಯಾದ 1208 ಸಹಾಯಕ ಪಾಧ್ಯಾಪಕ ಅಭ್ಯರ್ಥಿಗಳಿಗೆ ಮೂರು ವರ್ಷ ಕಳೆದರೂ ನೇಮಕಾತಿ ಆದೇಶ ಪತ್ರ ಸಿಕ್ಕಿಲ್ಲ. ಹೀಗಾಗಿ ಮಾನಸಿಕವಾಗಿ ‌ಕುಗ್ಗಿ ಹೋಗಿರುವ ಅಭ್ಯರ್ಥಿಯೊಬ್ಬರು, ರಾಜ್ಯಪಾಲರಿಗೆ ಪತ್ರ ಬರೆದು ದಯಾಮರಣ ಕೋರಿದ್ದಾರೆ.

ಪತ್ರದಲ್ಲಿ ಏನಿದೆ?

2021ರ ಸೆ.30ರಂದು ಆರಂಭವಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ಅಂತಿಮ ಆಯ್ಕೆಪಟ್ಟಿಯು 2023ರ ನ.4ರಂದು ವಿಶೇಷ ರಾಜ್ಯಪತ್ರದಲ್ಲಿ ಅಧಿಕೃತವಾಗಿ ಪ್ರಕಟವಾಗಿತ್ತು. ನೇಮಕಾತಿ ಪ್ರಕ್ರಿಯೆ ಆರಂಭವಾಗಿ ಈಗಾಗಲೇ ಮೂರು ವರ್ಷಗಳಾಗಿದ್ದು, ನೇಮಕಾತಿ ಆದೇಶದ ವಿಳಂಬದಿಂದಾಗಿ ಮತ್ತು ಸ್ಥಳನಿಯುಕ್ತಿ ಸಿಗದ ಕಾರಣವಾಗಿ ಮಾನಸಿಕವಾಗಿ ಕುಗ್ಗಿಹೋಗಿದ್ದು, ಪ್ರತಿಕ್ಷಣವೂ ಮಾನಸಿಕ ಹಿಂಸೆಯನ್ನು ಅನುಭವಿಸುತ್ತಿದ್ದೇನೆ. ಜತೆಗೆ ಯಾವುದೇ ಉದ್ಯೋಗವಿಲ್ಲದೆ, ನಾನು ಮತ್ತು ನನ್ನ ಕುಟುಂಬವು ಜೀವನ ಸಾಗಿಸುವುದು ದುಸ್ತರವಾಗಿದೆ.

ಇದನ್ನೂ ಓದಿ | KSRTC Ticket Price Hike: ಸಾರಿಗೆ ಬಸ್‌ ಪ್ರಯಾಣಿಕರಿಗೆ ಶಾಕ್‌; ಟಿಕೆಟ್ ದರ ಏರಿಕೆ ಸುಳಿವು ನೀಡಿದ KSRTC ಅಧ್ಯಕ್ಷ!

ಎಲ್ಲಾ ಪದವಿಗಳನ್ನು ಹೊಂದಿದ್ದರೂ ಸರ್ಕಾರದಿಂದ ಆದೇಶ ಪ್ರತಿ ಸಿಗದಿರುವುದು ಮತ್ತಷ್ಟು ಅತಂತ್ರಗೊಳಿಸಿದೆ. ಕಷ್ಟಪಟ್ಟು ಓದಿ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಆಯ್ಕೆಯಾಗಿ, ಅರ್ಹನಾದರೂ ಸರ್ಕಾರದ ವಿಳಂಬ ಧೋರಣೆಯಿಂದ ಬೇಸತ್ತು ಹೋಗಿದ್ದೇನೆ. ಆತ್ಮಹತ್ಯೆ ಮಾಡಿಕೊಂಡು ಮನೆಯವರಿಗೆ, ಸಂಬಂಧಿಕರಿಗೆ, ನಂಬಿಕೊಂಡವರಿಗೆ ಅವಮಾನ ಮಾಡುವ ಬದಲು ಮತ್ತು ಸರ್ಕಾರದ ವತಿಯಿಂದ ದಿನಂಪ್ರತಿ ಒಂದೊಂದು ಕಾರಣವನ್ನು ಕೇಳುತ್ತಾ ಕೊರಗಿ ಉಸಿರುಬಿಡುವುದಕ್ಕಿಂತ ಮೊದಲು ದಾಯಾಳುಗಳಾದ ತಾವುಗಳು ದಯಾಮರಣವನ್ನು ಕರುಣಿಸಬೇಕೆಂದು ಕೋರುತ್ತೇನೆ ಎಂದು ಅಭ್ಯರ್ಥಿ ಮನವಿ ಮಾಡಿದ್ದಾರೆ.

ನೇಮಕಾತಿ ಆದೇಶ ಪತ್ರ ಶೀಘ್ರ ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಿರುವ ಅಭ್ಯರ್ಥಿಗಳು, ನಿರುದ್ಯೋಗಿಗಳಿಗೆ ಉದ್ಯೋಗ ಕೊಡಿ ಎಂದು ಕೇಂದ್ರ ಸರ್ಕಾರವನ್ನು ಕೇಳುವ ನೀವು, ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿದ್ದರೂ ನೇಮಕಾತಿ ಆದೇಶ ಪತ್ರ ನೀಡಲು ವಿಳಂಬ ಮಾಡುತ್ತಿರುವುದು ಯಾಕೆ?, ದಯವಿಟ್ಟು ನೇಮಕಾತಿ ಪತ್ರ ನೀಡಿ, ಇಲ್ಲವೇ ದಯಾಮರಣಕ್ಕೆ ಅವಕಾಶ ಕೊಡಿ ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Pani Puri Machine: ಬೆಂಗಳೂರಿಗೆ ಬಂದಿದೆ ಪಾನಿಪುರಿ ನೀಡುವ ಮೆಷಿನ್! ಇದು ಹೇಗಿದೆ ನೋಡಿ

Pani Puri Machine: ಮಳೆ ಇರಲಿ, ಸೆಕೆ ಇರಲಿ ಪಾನಿಪುರಿ ಅಂಗಡಿ ನೋಡಿದಾಕ್ಷಣ ಕಾಲು ಅಲ್ಲಿಯೇ ನಿಂತು ಬಿಡುತ್ತದೆ. ಹೌದು ಅದರ ರುಚಿಯೇ ಅಂಥಹದ್ದು. ಬೆಂಗಳೂರಿನ ಎಚ್ಎಸ್ಆರ್ ಲೇಔಟ್‌ನ ಸ್ವಯಂಚಾಲಿತ ಪಾನಿಪುರಿ ಮಾರಾಟ ಯಂತ್ರ ಕಂಡುಬಂದಿದೆ. “ಡಬ್ಲ್ಯುಟಿಎಫ್ – ವಾಟ್ ದಿ ಫ್ಲೇವರ್ಸ್” ಎಂದು ಹೆಸರಿಸಲಾದ ಈ ಯಂತ್ರದ ಪಾನಿಪುರಿ ಎಲ್ಲರ ಗಮನ ಸೆಳೆದಿದೆ. ಇದರಿಂದ ನಿಮಗಿಷ್ಟವಾದ ಫ್ಲೇವರ್ಸ್‍ನಲ್ಲಿ ಪಾನಿಪುರಿಯನ್ನು ಸವಿಯಬಹುದು. ಈ ಸ್ವಯಂಚಾಲಿತ ಪಾನಿಪುರಿ ಮೆಷಿನ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

VISTARANEWS.COM


on

Pani Puri Machine
Koo

ಬೆಂಗಳೂರು : ಪಾನಿಪುರಿ ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಎಲ್ಲರೂ ಶಾಪಿಂಗ್‌ಗೆಂದು ಹೊರಗೆ ಹೊರಟರೆ ಬೀದಿ ಬದಿಯಲ್ಲಿ ಪಾನೀಪುರಿ ಮಾರುತ್ತಿದ್ದರೆ ಅದನ್ನು ತಿನ್ನದೇ ಮುಂದೆ ಹೋಗಲು ಇಷ್ಟವಾಗುವುದಿಲ್ಲ. ಪತಿ ತಮ್ಮ ಪತ್ನಿಯನ್ನು ಓಲೈಸಲು, ಪೋಷಕರು ತಮ್ಮ ಮಕ್ಕಳಿಗೆ ಖುಷಿ ಪಡಿಸಲು ಹಾಗೂ ಯುವಕರು ತಮ್ಮ ಪ್ರೇಯಸಿಯ ಪ್ರೀತಿಯನ್ನು ಗಳಿಸಲು ಒಂದು ಪ್ಲೇಟ್ ಪಾನೀಪುರಿ ಕೊಡಿಸುವುದಂತು ಖಂಡಿತ. ಇದೀಗ ಪಾನಿಪುರಿ ಪ್ರಿಯರಿಗೆ ಖುಷಿ ವಿಚಾರ. ಅದೇನೆಂದರೆ ಈಗ ಪಾನಿಪುರಿ ( Pani Puri Machine) ವಿತರಿಸುವ ಮೆಷಿನ್ ಬಂದಿದೆಯಂತೆ. ಅದರಿಂದ ನಿಮಗಿಷ್ಟವಾದ ಫ್ಲೇವರ್ಸ್‍ನಲ್ಲಿ ಪಾನಿಪುರಿಯನ್ನು ಸವಿಯಬಹುದು. ಈ ಸ್ವಯಂಚಾಲಿತ ಪಾನಿಪುರಿ ಮೆಷಿನ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Pani Puri Machine

ಹೌದು. ಬೆಂಗಳೂರಿನ ಎಚ್ಎಸ್ಆರ್ ಲೇಔಟ್‍ನಲ್ಲಿ ಸ್ವಯಂಚಾಲಿತ ಪಾನಿಪುರಿ ಮಾರಾಟ ಯಂತ್ರ ಕಂಡುಬಂದಿದೆ. “ಡಬ್ಲ್ಯುಟಿಎಫ್ – ವಾಟ್ ದಿ ಫ್ಲೇವರ್ಸ್” ಎಂದು ಹೆಸರಿಸಲಾದ ಈ ಯಂತ್ರದ ಪಾನಿಪುರಿ ಎಲ್ಲರ ಗಮನ ಸೆಳೆದಿದೆ. ಬೆನೆಡಿಕ್ಟ್ ಎಂಬ ಬಳಕೆದಾರರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಈ ಮೆಷಿನ್‌ನ ಪೋಟೊವನ್ನು ಪೋಸ್ಟ್ ಮಾಡಿದ್ದಾರೆ. ಈ ಯಂತ್ರವು ಗ್ರಾಹಕರಿಗೆ ಆಯ್ಕೆ ಮಾಡಲು ವಿವಿಧ ಪರಿಮಳಯುಕ್ತ ಪಾನೀಯವನ್ನು ವಿತರಿಸುವ ಅನೇಕ ನಲ್ಲಿಗಳನ್ನು ಹೊಂದಿದೆ. ಬೆಂಗಳೂರಿನಲ್ಲಿ ಸಂಜೆಯ ವೇಳೆ ಫುಡ್ ಕೌಂಟರ್‌ಗಳಲ್ಲಿ ಕಿಕ್ಕಿರಿದ ಜನಸಂದಣಿಯಿಂದ ತುಂಬಿರುವ ಸ್ಥಳಗಳಲ್ಲಿ ಇಂತಹ ಮೆಷಿನ್ ಬಂದಿದ್ದು ಬಹಳ ಅನುಕೂಲಕರವಾಗಿದೆ ಎಂದೇ ಹೇಳಬಹುದು.

ಆದರೆ ಈ ಸ್ವಯಂಚಾಲಿತ ಪಾನಿಪುರಿ ಮಾರಾಟ ಯಂತ್ರದ ಬಗ್ಗೆ ಆನ್‍ಲೈನ್‍ನಲ್ಲಿ ಅನೇಕ ಚರ್ಚೆಗಳು ಹುಟ್ಟಿಕೊಂಡಿವೆ. ಅನೇಕರು ಈ ಯಂತ್ರ ಬೆಂಗಳೂರಿಗೆ ಮಾತ್ರವೇ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರರು “ಇದು ಕೊನೆಯಲ್ಲಿ ಸುಕ್ಕಾ ಪುರಿಯನ್ನು ನೀಡುತ್ತದೆಯೇ?” ಎಂದು ತಮಾಷೆಯ ಪ್ರಶ್ನೆ ಕೇಳಿದ್ದಾರೆ.
ಕರ್ನಾಟಕದಲ್ಲಿ ಬೀದಿ ಆಹಾರದ ಗುಣಮಟ್ಟದ ಬಗ್ಗೆ ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ: ಅಂಬಾನಿ ಮದುವೆ ಸಮಾರಂಭದೊಳಗೆ ನುಸುಳಿದ್ದ ಇಬ್ಬರು ʼನಕಲಿ ಅತಿಥಿʼಗಳ ಬಂಧನ!

ಈ ಆಹಾರದಿಂದ ಅನೇಕ ಕಾಯಿಲೆಗಳು ಹರಡುತ್ತದೆ ಮತ್ತು ಇಲ್ಲಿ ಸ್ವಚ್ಛತೆ ಕಡಿಮೆ ಎಂದು ಹೇಳಲಾಗಿದೆ. ಅಲ್ಲದೇ ಆಹಾರ ಸುರಕ್ಷತಾ ಅಧಿಕಾರಿಗಳ ಇತ್ತೀಚಿನ ಆಹಾರ ತಪಾಸಣೆಗಳಲ್ಲಿ ಸಂಗ್ರಹಿಸಿದ ಮಾದರಿಗಳಲ್ಲಿ ಕೃತಕ ಬಣ್ಣಗಳು ಮತ್ತು ಕ್ಯಾನ್ಸರ್ ಕಾರಕಗಳ ಉಪಸ್ಥಿತಿಯನ್ನು ಬಹಿರಂಗಪಡಿಸಿವೆ, ಇದು ಪಾನಿಪುರಿ ಮಳಿಗೆಗಳ ಸುರಕ್ಷತೆ ಮತ್ತು ನೈರ್ಮಲ್ಯದ ಬಗ್ಗೆ ಕಳವಳವನ್ನು ಹೆಚ್ಚಿಸಿದೆ ಎನ್ನಲಾಗಿದೆ.

Continue Reading

ಪ್ರಮುಖ ಸುದ್ದಿ

Rain News: ಮಳೆಯ ಅಬ್ಬರಕ್ಕೆ ಧಡಾರ್‌ ಎಂದು ನೆಲಕಚ್ಚಿದ ಕೊಟ್ಟಿಗೆಹಾರ ಬಸ್‌ ನಿಲ್ದಾಣ!

VISTARANEWS.COM


on

rain news kottigehara bus stand collapse
Koo

ಚಿಕ್ಕಮಗಳೂರು: ಮಲೆನಾಡಿನಲ್ಲಿ (Western Ghats) ಧಾರಾಕಾರ ಮಳೆ (Rain News) ಹಾವಳಿ ಎಬ್ಬಿಸುತ್ತಿದೆ. ನಿನ್ನೆ ಸುರಿದ ಭಾರಿ ಮಳೆಗೆ ಮೂಡಿಗೆರೆ (Mudigere) ತಾಲೂಕಿನ ಕೊಟ್ಟಿಗೆಹಾರ ಬಸ್ ನಿಲ್ದಾಣ (Kottigehara Bus Stand) ಧರೆಗುರುಳಿದೆ. ನೋಡ ನೋಡುತ್ತಿದ್ದಂತೆ ಇಡೀ ಬಸ್ ನಿಲ್ದಾಣವೇ (bus stand collapse) ಧ್ವಂಸವಾಗಿದೆ.

ಕೊಟ್ಟಿಗೆಹಾರದ ಬಸ್ ನಿಲ್ದಾಣದಲ್ಲಿ ಭಾರಿ ಅವಘಡ ಸಂಭವಿಸಿದ್ದು, ಬಸ್ ನಿಲ್ದಾಣದ ಸುತ್ತಮುತ್ತ ಗೋಡೆಗಳು ನಾಶವಾಗಿವೆ. ಭಾರಿ ಮಳೆ ಹಿನ್ನಲೆ ಕೊಟ್ಟಿಗೆಹಾರದಲ್ಲಿ ವಿದ್ಯುತ್ ಸಂಪರ್ಕವೂ ಸ್ಥಗಿತವಾಗಿದ್ದು, ಕತ್ತಲೆಯಲ್ಲಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡಿದರು. ಗೋಡೆಗಳು ಬಿದ್ದ ಶಬ್ದಕ್ಕೆ ಸ್ಥಳೀಯರು ಬೆಚ್ಚಿಬಿದ್ದರು.

ಶೃಂಗೇರಿಯಲ್ಲಿ ಮುಳುಗಡೆ

ಭಾರಿ ಮಳೆಯಿಂದಾಗಿ ತುಂಗಾ ನದಿ ಅಪಾಯದ ಮಟ್ಟ ಮೀರಿದ್ದು, ಶೃಂಗೇರಿ ಪಟ್ಟಣದ ಗಾಂಧಿ ಮೈದಾನಕ್ಕೆ ನೀರು ನುಗ್ಗಿದೆ. ನದಿ ತಟದಲ್ಲಿದ್ದ ಅಂಗಡಿ ಮುಂಗಟ್ಟು, ಪಾರ್ಕಿಂಗ್ ಜಾಗ ಮುಳುಗಡೆಯಾಗಿವೆ. ಪಟ್ಟಣದ ಯಾತ್ರಿ ನಿವಾಸದ ವರೆಗೂ ನದಿಯ ನೀರು ನುಗ್ಗಿದೆ. ನದಿ ಪಕ್ಕದ ಪ್ಯಾರಲಲ್ ರಸ್ತೆಯೂ ಸಂಪೂರ್ಣ ಮುಳುಗಡೆಯಾಗಿದ್ದು, ಶೃಂಗೇರಿಯಲ್ಲಿ ನದಿ ಪಾತ್ರದ ನಿವಾಸಿಗಳಿಗೆ ಎಚ್ಚರಿಕೆ ನೀಡಲಾಗಿದೆ.

ಶಾಲೆಗಳಿಗೆ ರಜೆ

ಚಿಕ್ಕಮಗಳೂರಿನಲ್ಲಿ ಮಳೆ ಅಬ್ಬರ ಹಿನ್ನೆಲೆಯಲ್ಲಿ ಮಲೆನಾಡಿನ ಆರು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಮೂಡಿಗೆರೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ನೀಡಿದ್ದಾರೆ.

ಶಿವಮೊಗ್ಗದಲ್ಲಿ ರೆಡ್‌ ಅಲರ್ಟ್‌

ಶಿವಮೊಗ್ಗ: ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಜೆ ಘೋಷಣೆ ಮಾಡಿದ್ದಾರೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದ್ದು, ಶಿವಮೊಗ್ಗ ಜಿಲ್ಲಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡದಲ್ಲಿ ವೃದ್ಧೆ ರಕ್ಷಣೆ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆ ಅಬ್ಬರದ ಪರಿಣಾಮ, ಜಲಾವೃತಗೊಂಡ ಮನೆಯಲ್ಲಿದ್ದ ರೋಗಿಯನ್ನು ಹೊರತರಲು ಗ್ರಾಮಸ್ಥರು ಹರಸಾಹಸ ಪಡಬೇಕಾಯಿತು. ಕಾರವಾರ ತಾಲೂಕಿ‌ನ ಚೆಂಡಿಯಾ ಗ್ರಾಮದಲ್ಲಿ ಹೆಚ್ಚಿದ ನೀರಿನ ಪ್ರಮಾಣದಿಂದಾಗಿ ಮನೆಗೆ ನೀರು ನುಗ್ಗಿತ್ತು.

ಅಸ್ತಮಾ ರೋಗದಿಂದ ಬಳಲುತ್ತಿದ್ದ ಸ್ವಾತಿ ರತ್ನಾಕರ ನಾಯ್ಕ (67) ಹಾಗೂ ಅವರ ಪತಿ ನೀರು ನುಗ್ಗಿದ ಮನೆಯಲ್ಲೇ ಉಳಿದಿದ್ದರು. ದಂಪತಿಗಳನ್ನು ತಾಲೂಕಾಡಳಿತ ಹಾಗೂ ಸ್ಥಳೀಯರು ಮನವೊಲಿಸಿ ಮನೆಯಿಂದ ಹೊರತಂದರು. ನಾಲ್ಕು ಅಡಿ ನೀರಿನಲ್ಲೇ ರೋಗಿಯನ್ನ ಹೊತ್ತು ತಂದು ಅಂಬ್ಯುಲೆನ್ಸ್ ಮೂಲಕ ಸರ್ಕಾರಿ ಆಸ್ಪತ್ರೆ ಗೆ ರವಾನಿಸಿದರು.

ತುರ್ತು ಕಾರ್ಯಾಚರಣೆ ಕೇಂದ್ರ

ಕಾರವಾರ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಜುಲೈ 18ರ ವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಈ ಅವಧಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಸಮಸ್ಯೆಯಾಗದಂತೆ ಜಿಲ್ಲೆಯ ಸಾರ್ವಜನಿಕರ ರಕ್ಷಣೆಗಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 24×7 ಕಾರ್ಯ ನಿರ್ವಹಿಸುವ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ (Uttara Kannada News) ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿನ ತುರ್ತು ಕಾರ್ಯಾಚರಣೆ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿ ಮಾತನಾಡಿದ ಅವರು, ಜಿಲ್ಲಾಧಿಕಾರಿ ಕಚೇರಿಯಲ್ಲಿ ತೆರೆದಿರುವ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ ಪೊಲೀಸ್, ಅಗ್ನಿಶಾಮಕ, ಹೆಸ್ಕಾಂ, ಅರಣ್ಯ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು, ಸಾರ್ವಜನಿಕರು ಮಳೆಯಿಂದಾಗಿ ಯಾವುದೇ ಅಪಾಯವಾದಲ್ಲಿ ಕೂಡಲೇ ಉಚಿತ ಸಹಾಯವಾಣಿ ಸಂಖ್ಯೆ 1077 ಗೆ ಅಥವಾ ಮೊ.ಸಂ. ಸಂಖ್ಯೆ. 9483511015 ಕರೆ, ವಾಟ್ಸಾಪ್ ಮೂಲಕ ಮಾಹಿತಿ ನೀಡಿದಲ್ಲಿ ತಕ್ಷಣ ನೆರವಿಗೆ ಧಾವಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಮಳೆಯಿಂದಾಗಿ, 2 ಮನೆಗಳು ಸಂಪೂರ್ಣ ನಾಶ, 2 ಮನೆಗಳಿಗೆ ತೀವ್ರ ಹಾನಿ ಮತ್ತು 18 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಕಾರವಾರದಲ್ಲಿ 2, ಕುಮಟಾದಲ್ಲಿ 1 ಹಾಗೂ ಹೊನ್ನಾವರದಲ್ಲಿ 2 ಸೇರಿದಂತೆ ಒಟ್ಟು 5 ಕಾಳಜಿ ಕೇಂದ್ರಗಳನ್ನು ತೆರೆದಿದ್ದು ಒಟ್ಟು 93 ಜನರಿಗೆ ಆಶ್ರಯ ಒದಗಿಸಿ ಅಗತ್ಯ ಉಟೋಪಚಾರ ಮತ್ತು ವೈದ್ಯಕೀಯ ನೆರವು ಒದಗಿಸಲಾಗಿದೆ ಎಂದರು.

ತಗ್ಗು ಪ್ರದೇಶಗಳಲ್ಲಿ ಮತ್ತು ಗುಡ್ಡ ಕುಸಿಯಬಹುದಾದ ಅಪಾಯಕಾರಿ ಪ್ರದೇಶಗಳಲ್ಲಿ ವಾಸಿಸುತ್ತಿರುವ ಸಾರ್ವಜನಿಕರು, ಮುನ್ನೆಚ್ಚರಿಕೆ ಕ್ರಮವಾಗಿ ಸ್ವಯಂ ಪ್ರೇರಿತರಾಗಿ ಕಾಳಜಿ ಕೇಂದ್ರಗಳಿಗೆ ಬಂದು ಆಶ್ರಯ ಪಡೆಯುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: KSRTC Package Tour: ಜೋಗ ಜಲಪಾತ ವೀಕ್ಷಣೆಗೆ ಕೆಎಸ್‌ಆರ್‌ಟಿಸಿ ಪ್ಯಾಕೇಜ್‌ ಟೂರ್‌!

Continue Reading

ಮಳೆ

Karnataka Weather : ಅಬ್ಬರಿಸುತ್ತಿರುವ ಮುಂಗಾರು; ಕರಾವಳಿ, ಮಲೆನಾಡಿನಲ್ಲಿ ಇಂದು ಸಹ ಜೋರು ಮಳೆ

Karnataka Weather Forecast : ಭಾರಿ ಮಳೆಯಾಗುವ (Heavy Rain alert) ಎಚ್ಚರಿಕೆಯನ್ನೂ ನೀಡಲಾಗಿದ್ದು, ಇಂದು ಕರಾವಳಿ, ಮಲೆನಾಡಿಗೆ ರೆಡ್‌ ಅಲರ್ಟ್‌ ಹಾಗೂ ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಮಂಗಳವಾರದಂದು ಕರ್ನಾಟಕದ ಕರಾವಳಿಯಲ್ಲಿ ಭಾರೀ ಮಳೆಯಾಗುವ (Heavy rain Alert) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಇನ್ನೂ ಮಲೆನಾಡು ಸುತ್ತಮುತ್ತ ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು, ಒಳನಾಡಿನದಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಮತ್ತು ಬೀದರ್ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಲ್ಲಿ ಗಾಳಿ ಜತೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಜಿಲ್ಲೆಗಳಿಗೆ ಮುಂದುವರಿದ ಎಚ್ಚರಿಕೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Karnataka Rain : ಚಿಕ್ಕಮಗಳೂರಲ್ಲಿ ಮಳೆಗೆ ಕರೆಂಟ್‌ ಕಟ್‌; ಕೊಡಗು, ದಾವಣಗೆರೆಯ‌ಲ್ಲೂ ಅವಾಂತರ

ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯಾದ್ಯಂತ ಮಳೆಯು (Heavy rain alert) ಅಬ್ಬರಿಸುತ್ತಿದ್ದು, ಮುನ್ನೆಚ್ಚರಿಕಾ ದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ಮಂಗಳವಾರವೂ ರಜೆ ಘೋಷಣೆ (Holiday For schools) ಮಾಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಿಗೆ ರೆಡ್‌ ಅಲರ್ಟ್‌ (Karnataka Weather Forecast) ಘೋಷಣೆ ಮಾಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜು.16ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಶಿವಮೊಗ್ಗದ ಸಾಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ. ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಾಗರ ತಹಶೀಲ್ದಾರ್ ಚಂದ್ರಶೇಖರ್ ನಾಯಕ್ ರಜೆ ಘೋಷಣೆ ಮಾಡಿದ್ದಾರೆ. ಇತ್ತ ಹೊಸನಗರ ತಾಲೂಕಿನ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಮಂಗಳವಾರ ರಜೆ ಘೋಷಣೆ ಮಾಡಿ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ.

ಹಾಸನ ಜಿಲ್ಲೆಯಲ್ಲೂ ನಿರಂತರ ಮಳೆಯಾಗುತ್ತಿದ್ದು, ಸಕಲೇಶಪುರ, ಆಲೂರು, ಬೇಲೂರು, ಹಾಸನ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಅನುಮತಿ ಪಡೆದು, ರಜೆ ಘೋಷಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪಾಂಡು ಆದೇಶ ಹೊರಡಿಸಿದ್ದಾರೆ. ಸರ್ಕಾರಿ,‌ ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು, ಜುಲೈ 20 ರಂದು ಸರಿದೂಗಿಸುಂತೆ ಆದೇಶಿಸಿದ್ದಾರೆ.

ಕೊಡಗಿನಲ್ಲಿ ಮುಂದುವರೆದ ಭಾರಿ ಗಾಳಿ ಮಳೆ ಹಿನ್ನೆಲೆಯಲ್ಲಿ ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜುಗಳಿ ರಜೆ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲೆಯಾದ್ಯಂತ ಮಂಗಳವಾರ ಒಂದು ದಿನ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

KSRTC Package Tour: ಸೋಮನಾಥಪುರ, ತಲಕಾಡು, ಮಧ್ಯರಂಗ, ಭರಚುಕ್ಕಿ, ಗಗನಚುಕ್ಕಿಗೆ ಕೆಎಸ್‌ಆರ್‌ಟಿಸಿ ಪ್ಯಾಕೇಜ್‌ ಟೂರ್‌; ದರವೆಷ್ಟು?

KSRTC Package Tour: ಕೆಎಸ್‌ಆರ್‌ಟಿಸಿಯು ಬೆಂಗಳೂರಿನಿಂದ ವಾರಾಂತ್ಯದ ಪ್ರವಾಸ ಮಾಡುವವರಿಗಾಗಿ ಪ್ಯಾಕೇಜ್‌ ಟೂರ್‌ ಅನ್ನು ಆಯೋಜಿಸಿದೆ. “ಬೆಂಗಳೂರು–ಸೋಮನಾಥಪುರ-ತಲಕಾಡು-ಮಧ್ಯರಂಗ-ಭರಚುಕ್ಕಿ-ಗಗನಚುಕ್ಕಿ” ಮಾರ್ಗವಾಗಿ ಈ ಪ್ಯಾಕೇಜ್‌ ಟೂರ್‌ ಒಳಗೊಂಡಿದೆ.

VISTARANEWS.COM


on

Somanathapura Talakadu Madhyaranga Bharachukki Gaganachukki KSRTC Package Tour from Bengaluru
Koo

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ “ಬೆಂಗಳೂರು–ಸೋಮನಾಥಪುರ-ತಲಕಾಡು-ಮಧ್ಯರಂಗ-ಭರಚುಕ್ಕಿ-ಗಗನಚುಕ್ಕಿ” ಮಾರ್ಗದಲ್ಲಿ ಕರ್ನಾಟಕ ಸರ್ಕಾರಿ ಸಾರಿಗೆಯನ್ನು ವಾರಾಂತ್ಯದ ದಿನಗಳಲ್ಲಿ (ಶನಿವಾರ ಮತ್ತು ಭಾನುವಾರ) ಪ್ಯಾಕೇಜ್ ಟೂರ್‌ (KSRTC Package Tour) ಅನ್ನು ಆಯೋಜಿಸಿದೆ.

ಸೋಮನಾಥಪುರದಿಂದ ಎಲ್ಲೆಲ್ಲಿ ಹೋಗಿ ಬರಬಹುದು?

ಈ ಪ್ಯಾಕೇಜ್‌ ಟೂರ್‌ ಅನ್ನು ಆಯ್ಕೆ ಮಾಡಿಕೊಂಡವರಿಗೆ ಜು.20 ರಂದು ಶನಿವಾರ ಬೆಳಗ್ಗೆ 6.30ಕ್ಕೆ ಬೆಂಗಳೂರಿನಿಂದ ಬಸ್‌ ಹೊರಡಲಿದೆ. ಅಲ್ಲಿಂದ ಮದ್ದೂರಿನಲ್ಲಿ ಉಪಾಹಾರ ಮುಗಿಸಿ ಸೋಮನಾಥಪುರಕ್ಕೆ ಮೊದಲು ಭೇಟಿ ನೀಡಲಾಗುತ್ತದೆ. ಸೋಮನಾಥೇಶ್ವರ ಸ್ವಾಮಿಯ ದರ್ಶನ ಪಡೆದು ಬಳಿಕ ತಲಕಾಡುಗೆ ತೆರಳಿ ಅಲ್ಲಿ ಪಂಚಲಿಂಗಗಳ ದರ್ಶನ ಪಡೆದು ಬಳಿಕ ಊಟದ ವಿರಾಮ ಇರಲಿದೆ. ಮಧ್ಯಾಹ್ನ 3 ಗಂಟೆಗೆ ತಲಕಾಡಿನಿಂದ ಮಧ್ಯರಂಗಕ್ಕೆ ಭೇಟಿ ನೀಡಿ ಅಲ್ಲಿ ರಂಗನಾಥಸ್ವಾಮಿಯ ದರ್ಶನ ಪಡೆದು, ಬಳಿಕ ಭರಚುಕ್ಕಿ ಮತ್ತು ಗಗನಚುಕ್ಕಿಗಳ ವೀಕ್ಷಣೆ ಮಾಡಲಾಗುವುದು. ಅನಂತರ ಗಗನಚುಕ್ಕಿಯಿಂದ ಸಂಜೆ 6.15ಕ್ಕೆ ಬೆಂಗಳೂರಿಗೆ ಬಸ್‌ ಹೊರಡಲಿದ್ದು, 9 ಗಂಟೆಗೆ ಬೆಂಗಳೂರಿಗೆ ತಲುಪಲಿದೆ.

ಇದನ್ನೂ ಓದಿ: Viral Video: ತರಕಾರಿ ಮಾರುವವಳ ಮಗ ಸಿಎ ಪರೀಕ್ಷೆಯಲ್ಲಿ ಪಾಸ್‌; ಹೃದಯಸ್ಪರ್ಶಿ ವಿಡಿಯೊ ಇಲ್ಲಿದೆ

ಪ್ರಯಾಣ ದರ ಎಷ್ಟು?

ಈ ಪ್ಯಾಕೇಜ್‌ ಟೂರ್‌ ಅನ್ನು (ಪ್ರವೇಶ ಶುಲ್ಕ, ಉಪಾಹಾರ, ಮಧ್ಯಾಹ್ನದ/ರಾತ್ರಿ ಊಟವನ್ನು ಹೊರತುಪಡಿಸಿ) ಕಾರ್ಯಾಚರಣೆ ಮಾಡಲಾಗುತ್ತದೆ. ವಯಸ್ಕರಿಗೆ 500 ರೂ. ಮತ್ತು ಮಕ್ಕಳಿಗೆ (6ರಿಂದ 12 ವರ್ಷ) 350 ರೂಪಾಯಿಯನ್ನು ಪ್ರಯಾಣ ದರವನ್ನಾಗಿ ನಿಗದಿ ಮಾಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು- ಜೋಗ ಜಲಪಾತ ವೀಕ್ಷಣೆಗೆ ಕೆಎಸ್‌ಆರ್‌ಟಿಸಿ ಪ್ಯಾಕೇಜ್‌ ಟೂರ್‌; ಇಲ್ಲಿದೆ ಮಾಹಿತಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ “ಬೆಂಗಳೂರು –ಜೋಗ ಜಲಪಾತ” ವಯಾ ಶಿವಮೊಗ್ಗ, ಸಾಗರ ಮಾರ್ಗವಾಗಿ ನಾನ್‌ ಎಸಿ ಸ್ಲೀಪರ್‌ ವಾಹನದೊಂದಿಗೆ ವಾರಾಂತ್ಯದ ದಿನಗಳಲ್ಲಿ (ಶುಕ್ರವಾರ ಮತ್ತು ಶನಿವಾರ) ಪ್ಯಾಕೇಜ್ ಟೂರ್‌ ಅನ್ನು ಆಯೋಜಿಸಿದೆ.

ಜೋಗದ ಜತೆ ಎಲ್ಲೆಲ್ಲಿ ಹೋಗಿ ಬರಬಹುದು?

ಈ ಪ್ಯಾಕೇಜ್‌ ಟೂರ್‌ ಅನ್ನು ಆಯ್ಕೆ ಮಾಡಿಕೊಂಡವರಿಗೆ ಜು.19 ರಂದು ಶುಕ್ರವಾರ ರಾತ್ರಿ 10.30ಕ್ಕೆ ಬೆಂಗಳೂರಿನಿಂದ ಬಸ್‌ ಹೊರಡಲಿದೆ. ಅಲ್ಲಿಂದ ಶನಿವಾರ ಬೆಳಗ್ಗೆ 5.30ಕ್ಕೆ ಸಾಗರಕ್ಕೆ ತಲುಪಲಿದೆ. ಅಲ್ಲಿ ವಿಶ್ರಾಂತಿ ಪಡೆದು, ಉಪಾಹಾರ ಮುಗಿಸಿ ವರದಹಳ್ಳಿಗೆ ಮೊದಲು ಭೇಟಿ ನೀಡಲಾಗುತ್ತದೆ. ಅಲ್ಲಿಂದ ವರದಾಮೂಲ, ಇಕ್ಕೇರಿ, ಕೆಳದಿ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಸಾಗರಕ್ಕೆ ವಾಪಸ್‌ ಕರೆತರಲಾಗುತ್ತದೆ. ಮಧ್ಯಾಹ್ನದ ಊಟಕ್ಕೆ ಸಾಗರದಲ್ಲಿ ವ್ಯವಸ್ಥೆ ಮಾಡಲಾಗುತ್ತದೆ.

ಊಟದ ಬಳಿಕ ಜೋಗಕ್ಕೆ ತೆರಳಲಾಗುವುದು. ಅಲ್ಲಿ ಜಲಪಾತ ವೀಕ್ಷಣೆ ಬಳಿಕ ಸಂಜೆ 7 ಗಂಟೆಗೆ ಮತ್ತೆ ಸಾಗರಕ್ಕೆ ತಂದು ಬಿಡಲಾಗುವುದು. ಅಲ್ಲಿ ಶಾಪಿಂಗ್‌ ಮಾಡಲು ಸಹ ಅವಕಾಶವನ್ನು ನೀಡಲಾಗುತ್ತದೆ. ಆನಂತರ ಊಟ ಮುಗಿಸಿ ರಾತ್ರಿ 10ಕ್ಕೆ ಬೆಂಗಳೂರಿಗೆ ಬಸ್‌ ಹೊರಡಲಿದೆ. ಮರುದಿನ ಬೆಳಗ್ಗೆ 5 ಗಂಟೆಗೆ ಬೆಂಗಳೂರಿಗೆ ತಲುಪಲಿದೆ.

ಇದನ್ನೂ ಓದಿ: IND vs SL: ಶ್ರೀಲಂಕಾ ವಿರುದ್ಧದ ಸರಣಿಗೆ ಮೊಹಮ್ಮದ್ ಶಮಿ ಆಯ್ಕೆ ಸಾಧ್ಯತೆ

ಪ್ರಯಾಣ ದರ ಎಷ್ಟು?

ಈ ಪ್ಯಾಕೇಜ್‌ ಟೂರ್‌ಗೆ ವಯಸ್ಕರಿಗೆ 3,000 ರೂ. ಮತ್ತು ಮಕ್ಕಳಿಗೆ (6ರಿಂದ 12 ವರ್ಷ) 2,800 ರೂಪಾಯಿಯನ್ನು ಪ್ರಯಾಣ ದರವನ್ನಾಗಿ ನಿಗದಿ ಮಾಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading
Advertisement
BJP MLA
ಪ್ರಮುಖ ಸುದ್ದಿ14 mins ago

BJP MLA: ಡಿಗ್ರಿ ಉಪಯೋಗಕ್ಕೆ ಬರಲ್ಲ, ಪಂಕ್ಚರ್‌ ಅಂಗಡಿ ತೆರೆಯಿರಿ; ವಿದ್ಯಾರ್ಥಿಗಳಿಗೆ ಬಿಜೆಪಿ ಶಾಸಕ ಕರೆ!

Pani Puri Machine
Latest17 mins ago

Pani Puri Machine: ಬೆಂಗಳೂರಿಗೆ ಬಂದಿದೆ ಪಾನಿಪುರಿ ನೀಡುವ ಮೆಷಿನ್! ಇದು ಹೇಗಿದೆ ನೋಡಿ

Paris Olympics 2024
ಕ್ರೀಡೆ17 mins ago

Paris Olympics 2024: ಮೊಟ್ಟಮೊದಲ ಒಲಿಂಪಿಕ್ಸ್ ಕ್ರೀಡಾಕೂಟದ 10 ಕುತೂಹಲಕರ ಸಂಗತಿಗಳಿವು

goa ನನ್ನ ದೇಶ ನನ್ನ ದನಿ
ಅಂಕಣ23 mins ago

ನನ್ನ ದೇಶ ನನ್ನ ದನಿ ಅಂಕಣ: ಗೋವಾದಲ್ಲಿ ಹಿಂದೂಗಳ ಮೇಲಿತ್ತು ಜುಟ್ಟಿನ ತೆರಿಗೆ!

rain news kottigehara bus stand collapse
ಪ್ರಮುಖ ಸುದ್ದಿ41 mins ago

Rain News: ಮಳೆಯ ಅಬ್ಬರಕ್ಕೆ ಧಡಾರ್‌ ಎಂದು ನೆಲಕಚ್ಚಿದ ಕೊಟ್ಟಿಗೆಹಾರ ಬಸ್‌ ನಿಲ್ದಾಣ!

Char Dham Yatra 2024
ಪ್ರವಾಸ1 hour ago

Char Dham Yatra 2024: ಚಾರ್‌ಧಾಮ್‌, ಕೇದಾರನಾಥನ ದರ್ಶನ ಮಾಡುವ ಆಸೆ ಇದೆಯೆ? ಈ ಮಹತ್ವದ ಸಂಗತಿಗಳನ್ನು ತಿಳಿದುಕೊಂಡಿರಿ

karnataka weather Forecast
ಮಳೆ1 hour ago

Karnataka Weather : ಅಬ್ಬರಿಸುತ್ತಿರುವ ಮುಂಗಾರು; ಕರಾವಳಿ, ಮಲೆನಾಡಿನಲ್ಲಿ ಇಂದು ಸಹ ಜೋರು ಮಳೆ

Vastu Tips
ಧಾರ್ಮಿಕ1 hour ago

Vastu Tips: ವಾಸ್ತು ಪ್ರಕಾರ ಮಕ್ಕಳ ಅಧ್ಯಯನ ಕೊಠಡಿ ಹೀಗಿರಬೇಕು

Mosquito Repellent Plants
ಆರೋಗ್ಯ2 hours ago

Mosquito Repellent Plants: ನಿಮಗೆ ಗೊತ್ತೆ? ಈ 5 ಬಗೆಯ ಗಿಡಗಳು ಸೊಳ್ಳೆಗಳನ್ನು ಓಡಿಸುತ್ತವೆ!

Somanathapura Talakadu Madhyaranga Bharachukki Gaganachukki KSRTC Package Tour from Bengaluru
ಕರ್ನಾಟಕ2 hours ago

KSRTC Package Tour: ಸೋಮನಾಥಪುರ, ತಲಕಾಡು, ಮಧ್ಯರಂಗ, ಭರಚುಕ್ಕಿ, ಗಗನಚುಕ್ಕಿಗೆ ಕೆಎಸ್‌ಆರ್‌ಟಿಸಿ ಪ್ಯಾಕೇಜ್‌ ಟೂರ್‌; ದರವೆಷ್ಟು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ14 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ21 hours ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ3 days ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

ಟ್ರೆಂಡಿಂಗ್‌