Actor Darshan: ದರ್ಶನ್‌ಗೆ ಮತ್ತೆ ಪರಪ್ಪನ ಅಗ್ರಹಾರವೇ ಗತಿ; ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ - Vistara News

ಕರ್ನಾಟಕ

Actor Darshan: ದರ್ಶನ್‌ಗೆ ಮತ್ತೆ ಪರಪ್ಪನ ಅಗ್ರಹಾರವೇ ಗತಿ; ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

Actor Darshan: ಪೊಲೀಸ್‌ ಕಸ್ಟಡಿ ಬಳಿಕ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್‌ ಸೇರಿ ಹಲವು ಆರೋಪಿಗಳ ಅವಧಿಯು ಮುಕ್ತಾಯಗೊಂಡ ಕಾರಣ ವಿಡಿಯೊ ಕಾನ್ಫರೆನ್ಸ್‌ ಮೂಲಕ ಜಡ್ಜ್‌ ಎದುರು ಆರೋಪಿಗಳನ್ನು ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಜುಲೈ 18ರವರೆಗೆ ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ ಹೊರಡಿಸಿದರು. ಇದರಿಂದಾಗಿ ದರ್ಶನ್‌ ಹಾಗೂ ಗ್ಯಾಂಗ್‌ಗೆ ಹಿನ್ನಡೆಯಾದಂತಾಗಿದೆ.

VISTARANEWS.COM


on

Actor Darshan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ಬಂಧಿತನಾಗಿರುವ ನಟ ದರ್ಶನ್‌ಗೆ (Actor Darshan) ಮತ್ತೆ ಪರಪ್ಪನ ಅಗ್ರಹಾರವೇ ಗತಿಯಾಗಿದೆ. ನಟ ದರ್ಶನ್‌ ಸೇರಿ ಹಲವು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18ರವರೆಗೆ ವಿಸ್ತರಣೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಆರ್ಥಿಕ ಅಪರಾಧಗಳ ಕೋರ್ಟ್‌ ನ್ಯಾಯಾಧೀಶರು ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಪೊಲೀಸ್‌ ಕಸ್ಟಡಿ ಬಳಿಕ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್‌ ಸೇರಿ ಹಲವು ಆರೋಪಿಗಳ ಅವಧಿಯು ಮುಕ್ತಾಯಗೊಂಡ ಕಾರಣ ವಿಡಿಯೊ ಕಾನ್ಫರೆನ್ಸ್‌ ಮೂಲಕ ಜಡ್ಜ್‌ ಎದುರು ಆರೋಪಿಗಳನ್ನು ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಜುಲೈ 18ರವರೆಗೆ ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ ಹೊರಡಿಸಿದರು. ಇದರಿಂದಾಗಿ ದರ್ಶನ್‌ ಹಾಗೂ ಗ್ಯಾಂಗ್‌ಗೆ ಹಿನ್ನಡೆಯಾದಂತಾಗಿದೆ.

Actor Darshan Will Attend The Court Hearing From Online

ದರ್ಶನ್‌ ಪತ್ನಿ ನಾನು ಎಂದ ವಿಜಯಲಕ್ಷ್ಮೀ

ನಟ ದರ್ಶನ್ (Actor Darshan) ಹಾಗೂ ಪವಿತ್ರ ಗೌಡ (Pavitra Gowda) ಸಂಬಂಧದ ಕುರಿತು ಕಮಿಷನರ್‌ ಬಿ. ದಯಾನಂದ್‌ (Police commissioner B Dayanand) ಅವರು ನೀಡಿರುವ ಉಲ್ಲೇಖದ ಬಗ್ಗೆ ದರ್ಶನ್‌ ಪತ್ನಿ ವಿಜಯಲಕ್ಷ್ಮಿ (Vijayalakshmi) ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ʼಪವಿತ್ರ ಗೌಡ ಅವರು ದರ್ಶನ್‌ ಪತ್ನಿ ಅಲ್ಲ, ದರ್ಶನ್‌ ಪತ್ನಿ ನಾನುʼ ಎಂದು ಸ್ಪಷ್ಟಪಡಿಸಿದ್ದಾರೆ.

ದರ್ಶನ್ ಹಾಗೂ ಇತರೆ ಆರೋಪಿಗಳ ಬಂಧನದ ಬಗ್ಗೆ ನಗರ ಪೊಲೀಸ್ ಆಯುಕ್ತ ಬಿ.‌ದಯಾನಂದ್ ಸುದ್ದಿಗೋಷ್ಠಿ ಮಾಡಿದ್ದರು. ಆ ವೇಳೆ,‌‌ ʼದರ್ಶನ್ ಪತ್ನಿ ಪವಿತ್ರ ಗೌಡಗೆ ರೇಣುಕಾ ಸ್ವಾಮಿ ‌ಅಶ್ಲೀಲ‌ ಸಂದೇಶ ಕಳಿಸಿದ್ದʼ ಎಂದು ಉಲ್ಲೇಖ ಮಾಡಿದ್ದರು. ಆ ಸುದ್ದಿ ಎಲ್ಲಾ ಮಾಧ್ಯಮಗಳಲ್ಲಿ, ‌ಪತ್ರಿಕೆಗಳಲ್ಲಿ‌ ಪ್ರಸಾರವಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ‌ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ.

“ನೀವು ಸುದ್ದಿಗೋಷ್ಠಿಯಲ್ಲಿ ದರ್ಶನ್ ಪತ್ನಿ ಪವಿತ್ರ ಗೌಡ ಎಂದು ಹೇಳಿಕೆ‌ ನೀಡಿದ್ದೀರಿ. ದರ್ಶನ್‌ಗೆ ನಾನು ಕಾನೂನುಬದ್ಧವಾಗಿ ವಿವಾಹವಾದ ಏಕೈಕ ಪತ್ನಿ. ನಮ್ಮ ವಿವಾಹವು 19.05.2003ರಂದು ಧರ್ಮಸ್ಥಳದಲ್ಲಿ ಅದ್ಧೂರಿಯಾಗಿ ನೆರವೇರಿತು. ಪವಿತ್ರ ಗೌಡ ನನ್ನ ಪತಿ ದರ್ಶನ್ ಸ್ನೇಹಿತೆ ನಿಜ. ಆದರೆ ಅವರು ದರ್ಶನ್ ಅವರ ಹೆಂಡತಿಯಲ್ಲ ಎಂದು ದಯವಿಟ್ಟು ಗಮನಿಸಿ” ಎಂದು ವಿಜಯಲಕ್ಷ್ಮಿ ಬರೆದಿದ್ದಾರೆ.

ಇದನ್ನೂ ಓದಿ: Actor Darshan: ಪವಿತ್ರಾ ಗೌಡ ಮತ್ತು ದರ್ಶನ್‌ ಸಂಬಂಧ ಅದಲ್ಲ: ಕಮಿಷನರ್‌ಗೆ ಪತ್ರ ಬರೆದ ವಿಜಯಲಕ್ಷ್ಮಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

KAS: ಕೆಎಎಸ್‌ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್;‌ ನೇಮಕಾತಿಗೆ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ, ಇಲ್ಲಿದೆ ಮಾಹಿತಿ

KAS: 2024ರ ಜುಲೈ 6ರಿಂದ ಜುಲೈ 21ರವರೆಗೆ 2017-18ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗವು ಅವಕಾಶ ನೀಡಿದೆ. ಈ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್‌ 25ರಂದು ನಡೆಸಲು ಕೂಡ ಕರ್ನಾಟಕ ಲೋಕಸೇವಾ ಆಯೋಗವು ತೀರ್ಮಾನಿಸಿದೆ.

VISTARANEWS.COM


on

KAS
Koo

ಬೆಂಗಳೂರು: 2017-18ನೇ ಸಾಲಿನಲ್ಲಿ ಗೆಜೆಟೆಡ್‌ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ (KAS) ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗವು (Karnataka Public Service Commission) ಸಿಹಿ ಸುದ್ದಿ ನೀಡಿದೆ. ಹೌದು, 2017-18ರಲ್ಲಿ ಕೆಎಎಸ್‌ ನೇಮಕಾತಿಗೆ ಅರ್ಜಿ ಸಲ್ಲಿಸಿದವರಿಗೆ 2023-24ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ ನೇಮಕಾತಿಗೆ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ ಕಲ್ಪಿಸಲಾಗಿದ್ದು, ಇದರಿಂದ ಸಾವಿರಾರು ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸಬಹುದಾಗಿದೆ.

2024ರ ಜುಲೈ 6ರಿಂದ ಜುಲೈ 21ರವರೆಗೆ 2017-18ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗವು ಅವಕಾಶ ನೀಡಿದೆ. ಈ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್‌ 25ರಂದು ನಡೆಸಲು ಕೂಡ ಕರ್ನಾಟಕ ಲೋಕಸೇವಾ ಆಯೋಗವು ತೀರ್ಮಾನಿಸಿದೆ. ಕೆಎಎಸ್‌ ಸೇರಿ ಇತರ ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ಜುಲೈ 21ರಂದು ನಡೆಸಲಾಗುವುದು ಎಂದು ಈಗಾಗಲೇ ಕೆಪಿಎಸ್‌ಸಿ ತಿಳಿಸಿತ್ತು. ಅಭ್ಯರ್ಥಿಗಳ ಮನವಿ ಮೇರೆಗೆ ಪರೀಕ್ಷಾ ದಿನಾಂಕ ಮುಂದೂಡಲಾಗಿತ್ತು.

ಕೆಪಿಎಸ್‌ಸಿ ಅಧಿಸೂಚನೆ

2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್‌) ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳು 26-02-2024 ರಂದು ಹೊರಡಿಸಿರುವ ಅಧಿಸೂಚನೆಯ ಹುದ್ದೆಗಳಿಗೆ / ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಕೆಪಿಎಸ್‌ಸಿ 15 ದಿನಗಳ ಕಾಲಾವಕಾಶ ನೀಡಬೇಕೆಂದು ಸರ್ಕಾರ ಸೂಚನೆ ನೀಡಿತ್ತು. ಅದರಂತೆ ಈಗ ಕೆಪಿಎಸ್‌ಸಿಯು ಅರ್ಜಿ ಸಲ್ಲಿಸಲು ಅವಕಾಶ ನೀಡುವ ಜತೆಗೆ ಪೂರ್ವಭಾವಿ ಪರೀಕ್ಷೆಯ ದಿನಾಂಕವನ್ನು ಘೋಷಿಸಿದೆ.

ವಿಶೇಷ ಸೂಚನೆ

2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿಗೆ ಅರ್ಜಿ ಸಲ್ಲಿಸಿದವರಿಗೆ ಕೆಪಿಎಸ್‌ಸಿಯು ವಿಶೇಷ ಸೂಚನೆ ನೀಡಿದೆ. ಅಭ್ಯರ್ಥಿಗಳು ಈಗಾಗಲೇ ಕೆಪಿಎಸ್‌ಸಿ ಉದ್ಯೋಗ ಸಾಫ್ಟ್‌ವೇರ್‌ನಲ್ಲಿ ಒಟಿಆರ್‌ ಅನ್ನು ರಚಿಸಿದ್ದರೆ ಅವರು ನೇರವಾಗಿ ವೆಬ್‌ಸೈಟ್‌ಗೆ (https://kpsconline.karnataka.gov.in) ಭೇಟಿ ನೀಡಿ, ಲಾಗ್‌ಇನ್‌ ಆಗುವ ಮೂಲಕ ಅರ್ಜಿ ಸಲ್ಲಿಸಬಹುದು. ಒಟಿಆರ್‌ ರಚಿಸದವರು ವೆಬ್‌ಸೈಟ್‌ಗೆ ಭೇಟಿ ನೀಡಿ, ಮೊದಲು ಒಟಿಆರ್‌ ರಚಿಸಿ, ನಂತರ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಿದೆ.

ಇದನ್ನೂ ಓದಿ: Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Continue Reading

ಪ್ರಮುಖ ಸುದ್ದಿ

Dr HS Shetty : ದಾನಗಳಿಗಾಗಿಯೇ ವರ್ಷದಲ್ಲಿ 7 ಕೋಟಿ ರೂ. ವಿನಿಯೋಗ

Dr HS Shetty : ದುಡಿಮೆಯ ಒಂದು ಭಾಗವನ್ನು ಸಮಾಜಕ್ಕೆ ನೀಡಬೇಕು ಎನ್ನುವ ಉದ್ದೇಶವನ್ನು ಇಟ್ಟುಕೊಂಡು ಇಂತಹ ಕಾರ್ಯಕ್ರಮವನ್ನು ರೂಪಿಸಿದ್ದೇವೆ. ನಾವು ಇದುವರೆಗೆ ಯಾರಿಂದಲೂ ಒಂದು ರೂಪಾಯಿ ಚಂದಾ ಸ್ವೀಕರಿಸಿಲ್ಲ. ಶಾಲಾ ಕಟ್ಟಡ ನಿರ್ಮಾಣ, ವಿದ್ಯಾರ್ಥಿಗಳಿಗೆ ಅಗತ್ಯ ಪರಿಕರಗಳ ವಿತರಣೆ, ಶಿಕ್ಷಕರ ನೇಮಕ ಸೇರಿದಂತೆ ಶೈಕ್ಷಣಿಕ ವಲಯದ ಅಗತ್ಯಗಳನ್ನು ಪೂರೈಸುವ ಕೆಲಸ ಮಾಡುತಿದ್ದೇವೆ ಎಂದು ನುಡಿದರು.

VISTARANEWS.COM


on

Dr HS Shetty: Rs 7 crore spent on charity; Businessman Dr. HS Shetty
Koo

ಕುಂದಾಪುರ: ಕಳೆದ ಒಂದು ವರ್ಷದಲ್ಲಿ ದಾನ, ಧರ್ಮಗಳಿಗಾಗಿ 7 ಕೋಟಿ ರೂಪಾಯಿ ವಿನಿಯೋಗ ಮಾಡಲಾಗಿದ್ದು, ನಾವು ಬೆಳೆದು ಬಂದ ಸಮಾಜಕ್ಕೆ ನೆರವಾಗುವುದು ನಮ್ಮ ಉದ್ದೇಶ ಎಂದು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್​​ನ ಅಧ್ಯಕ್ಷರಾದ ಡಾ. ಹೆಚ್.ಎಸ್.ಶೆಟ್ಟಿ (Dr HS Shetty) ಹೇಳಿದ್ದಾರೆ. ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ನೋಂದಾಯಿತ) ಬೆಂಗಳೂರು ವತಿಯಿಂದ ಉಡುಪಿ ಜಿಲ್ಲೆಯ 350 ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಉಚಿತ 41,000 ಜೊತೆ ಶಾಲಾ ಸಮವಸ್ತ್ರಗಳ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬೈಂದೂರಿನ ಸಮೃದ್ಧ ಜನಸೇವಾ ಚಾರಿಟೆಬಲ್ ಟ್ರಸ್ಟ್‌ ಮತ್ತು ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಕಾರದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಸಮವಸ್ತ್ರಗಳ ವಿತರಣೆ ಹಾಗೂ ಹೆಗ್ಗುಂಜೆ ರಾಜೀವ್ ಶೆಟ್ಟಿ ವಿದ್ಯಾ ಪೋಷಕ್ ಪ್ರಶಸ್ತಿಯನ್ನು ಹಿರಿಯ ಶಿಕ್ಷಕರು ಹಾಗೂ ಯಕ್ಷಗಾನ ಪ್ರಸಂಗಕರ್ತರಾದ ಕಂದಾವರ ರಘುರಾಮ್ ಶೆಟ್ಟಿ ಅವರಿಗೆ ಪ್ರದಾನ ಮಾಡಿದ ಬಳಿಕ ಅವರು ಮಾತನಾಡಿ, ನಮ್ಮ ದುಡಿಮೆಯಲ್ಲಿ ನಮಗೆ ಬೇಕಾದಷ್ಟು ಬಳಸಿಕೊಂಡು ಉಳಿದದನ್ನು ಸಮಾಜಕ್ಕೆ ವಿನಿಯೋಗ ಮಾಡುವುದೇ ಜೀವನ. ನಾನು ನನ್ನ ಜೀವನದಲ್ಲಿ ದುಡಿದ ಹಣದಲ್ಲಿಯೇ ಸಮಾಜ ಮುಖಿ ಕಾರ್ಯ ಮಾಡುತ್ತಿದ್ದೇನೆ ಎಂದು ಹೇಳಿದರು.

ದುಡಿಮೆಯ ಒಂದು ಭಾಗವನ್ನು ಸಮಾಜಕ್ಕೆ ನೀಡಬೇಕು ಎನ್ನುವ ಉದ್ದೇಶವನ್ನು ಇಟ್ಟುಕೊಂಡು ಇಂತಹ ಕಾರ್ಯಕ್ರಮವನ್ನು ರೂಪಿಸಿದ್ದೇವೆ. ನಾವು ಇದುವರೆಗೆ ಯಾರಿಂದಲೂ ಒಂದು ರೂಪಾಯಿ ಚಂದಾ ಸ್ವೀಕರಿಸಿಲ್ಲ. ಶಾಲಾ ಕಟ್ಟಡ ನಿರ್ಮಾಣ, ವಿದ್ಯಾರ್ಥಿಗಳಿಗೆ ಅಗತ್ಯ ಪರಿಕರಗಳ ವಿತರಣೆ, ಶಿಕ್ಷಕರ ನೇಮಕ ಸೇರಿದಂತೆ ಶೈಕ್ಷಣಿಕ ವಲಯದ ಅಗತ್ಯಗಳನ್ನು ಪೂರೈಸುವ ಕೆಲಸ ಮಾಡುತಿದ್ದೇವೆ ಎಂದು ನುಡಿದರು.

ಇದನ್ನೂ ಓದಿ: Tumkur News: ರೈತರು ಮೊಬೈಲ್ ಆ್ಯಪ್ ಮೂಲಕ ಬೆಳೆ ವಿವರ ದಾಖಲಿಸಬೇಕು

ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬೈಂದೂರು ನನಗೆ ಈ ಹಿಂದುನಿಂದಲೂ ಚಿರಪರಿಚಿತ ಸ್ಥಳ. ನಾನು ವಿದ್ಯಾರ್ಥಿ ನಾಯಕನಾಗಿದ್ದ ದೆಸೆಯಿಂದಲೇ ಬೈಂದೂರಿನೊಂದಿಗೆ ನಿಕಟ ಸಂಪರ್ಕ ಇರಿಸಿಕೊಂಡಿದ್ದೆ.. ಇಂದು ಬೈಂದೂರಿನಲ್ಲಿ ಡಾಕ್ಟರ್ ಎಚ್ಎಸ್ ಶೆಟ್ಟಿ ಅವರ ಸಮಾಜಮುಖಿ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವುದು ನನಗೆ ಸಂತಸ ತಂದಿದೆ. ನಿಜವಾದ ದೇಶಪ್ರೇಮಿ ಯಾರು ಎಂದರೆ ಶೈಕ್ಷಣಿಕವಾಗಿ ಸಹಾಯ ನೀಡುತ್ತಿರುವ ಡಾಕ್ಟರ್ ಎಚ್ಎಸ್ ಶೆಟ್ಟಿ ಅವರು ಎಂದು ಕೊಂಡಾಡಿದರು.

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶ್‌ಪಾಲ್ ಸುವರ್ಣ, ಸಮೃದ್ಧ ಜನಸೇವಾ ಚಾರಿಟೆಬಲ್ ಟ್ರಸ್ಟ್‌ ಅಧ್ಯಕ್ಷ ಬಿ.ಎಸ್.ಸುರೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಪ್ರಶಸ್ತಿ ಪ್ರಧಾನ

ಕಾರ್ಯಕ್ರಮದಲ್ಲಿ ‘ಹೆಗ್ಗು೦ಜೆ ರಾಜೀವ ಶೆಟ್ಟಿ ವಿದ್ಯಾ ಪೋಷಕ್‌ ಪ್ರಶಸ್ತಿ’ ಪ್ರಧಾನ ಸಮಾರಂಭ ನಡೆಯಿತು. ಹಿರಿಯ ಶಿಕ್ಷಕರು ಹಾಗೂ ಯಕ್ಷಗಾನ ಪ್ರಸಂಗಕರ್ತರಾದ ಕಂದಾವರ ರಘುರಾಮ ಶೆಟ್ಟಿ ಅವರಿಗೆ ಈ ಬಾರಿ ಪ್ರಶಸ್ತಿ ಪ್ರದಾನವಾಯಿತು.

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್​​​ನ ಅಧ್ಯಕ್ಷರಾದ ಎಚ್​. ಎಸ್. ಶೆಟ್ಟಿ ,ಉಪಾಧ್ಯಕ್ಷರಾದ ಹಾಲಾಡಿ ನಾಗರಾಜ ಶೆಟ್ಟಿ, ಕಾರ್ಯದರ್ಶಿ ಡಾ. ಸುಮನಾ ಶೆಟ್ಟಿ ಈ ಸಮಾಜಸೇವೆಯ ಬೆನ್ನೆಲುಬಾಗಿ ನಿಂತಿದ್ದಾರೆ. ಮೈಸೂರು ಮರ್ಕಂಟೈಲ್ ಕಂಪನಿ ಲಿಮಿಟೆಡ್ ಬೆಂಗಳೂರು, ಮೈಸೂರು ಗ್ರೀನ್ ಕಂಪನಿ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಮೈಸೂರು ಸೈನ್ಸ್ & ಟಿಕ್ನಾಲಜಿ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಕಾರ್ಯಕ್ರಮದ ಪೋಷಕ ಸಂಸ್ಥೆಗಳಾಗಿವೆ.

ಸಮಾಜ ಸೇವೆಯ ರೂವಾರಿ ಡಾ.ಎಚ್​​ ಎಸ್​ ಶೆಟ್ಟಿ

ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಹಾಲಾಡಿಯಲ್ಲಿ ಜನಿಸಿದ ಡಾ.ಎಚ್‌.ಎಸ್‌.ಶೆಟ್ಟಿ ಅವರು ಹೋಟೆಲ್‌ ಉದ್ಯಮಿಯಾಗಿ ಹೆಸರು ಮಾಡಿದ್ದಾರೆ. ಜತೆಗೆ ಬಟ್ಟೆ ಮತ್ತು ಖಾದ್ಯ ತೈಲ ವಹಿವಾಟು, ಕೃಷಿ ಸಂಬಂಧಿ ಉತ್ಪನ್ನಗಳ ಮಾರಾಟ, ವಿದ್ಯುತ್‌ ಉತ್ಪಾದನೆ ಹೀಗೆ ಹಲವು ಕ್ಷೇತ್ರಗಳಲ್ಲಿ ಯಶಸ್ವೀ ಉದ್ಯಮಿ ಎನಿಸಿಕೊಂಡಿದ್ದಾರೆ.
ಮೈಸೂರು ಮರ್ಕೆಂಟೈಲ್‌ ಕಂಪನಿ ಲಿಮಿಟೆಡ್‌ ಸ್ಥಾಪಿಸಿ, ಕೃಷಿ ಉತ್ಪನ್ನಗಳನ್ನು ರಫ್ತು ಮಾಡುತ್ತ ರೈತರಿಗೆ ನೆರವಾಗುತ್ತಿರುವ ಇವರಿಗೆ ಆರು ಬಾರಿ ಬೆಸ್ಟ್‌ ಎಕ್ಸ್‌ಪೋರ್ಟ್‌ ಅವಾರ್ಡ್‌ ಲಭಿಸಿದೆ. ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್‌ ಟ್ರಸ್ಟ್‌ ಸ್ಥಾಪಿಸಿ, ಸರ್ಕಾರಿ ಶಾಲೆ ಮತ್ತು ಆಸ್ಪತ್ರೆಗಳ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿದ್ದಾರೆ. ಡಾ. ಎಚ್‌.ಎಸ್‌. ಶೆಟ್ಟಿ (Dr HS Shetty) ಅವರಿಗೆ ಇತ್ತೀಚೆಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 23ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿತ್ತು.

Continue Reading

ಕರ್ನಾಟಕ

Kannada New Movie: ಖ್ಯಾತ ಗಾಯಕಿ ಕೆ.ಎಸ್.ಚಿತ್ರಾ ಕಂಠಸಿರಿಯಲ್ಲಿ ವಸಿಷ್ಠ ಸಿಂಹ ಅಭಿನಯದ ‘ವಿಐಪಿ’ ಚಿತ್ರದ ಹಾಡು

Kannada New Movie: ವಸಿಷ್ಠ ಸಿಂಹ ನಾಯಕರಾಗಿ ನಟಿಸುತ್ತಿರುವ “ವಿಐಪಿ” ಚಿತ್ರಕ್ಕಾಗಿ ಡಾ.ವಿ. ನಾಗೇಂದ್ರಪ್ರಸಾದ್ ಬರೆದಿರುವ ತಾಯಿ-ಮಗನ ಬಾಂಧವ್ಯ ಸಾರುವ “ಬಾರೋ ಕಂದ” ಎಂಬ ಹಾಡನ್ನು ಖ್ಯಾತ ಗಾಯಕಿ ಕೆ.ಎಸ್.ಚಿತ್ರಾ ಇತ್ತೀಚಿಗೆ ಚೆನ್ನೈನಲ್ಲಿ ಕೆ.ಎಸ್.ಚಿತ್ರಾ ಅದ್ಭುತವಾಗಿ ಹಾಡಿದ್ದಾರೆ.‌ ಹರ್ಷವರ್ಧನ್ ರಾಜ್ ಸಂಗೀತ ಸಂಯೋಜಿಸಿದ್ದಾರೆ.

VISTARANEWS.COM


on

Vasishtha Simha starrer VIP Kannada movie
Koo

ಬೆಂಗಳೂರು: ತಮ್ಮ ಅದ್ಭುತ ಗಾಯನದಿಂದ ಜನಪ್ರಿಯರಾಗಿರುವ ಗಾಯಕಿ ಕೆ.ಎಸ್.ಚಿತ್ರಾ, ಬಹಳ ದಿನಗಳ ನಂತರ ಕನ್ನಡ ಚಿತ್ರವೊಂದರ ಹಾಡಿಗೆ ಧ್ವನಿಯಾಗಿದ್ದಾರೆ. ವಸಿಷ್ಠ ಸಿಂಹ ನಾಯಕರಾಗಿ ನಟಿಸುತ್ತಿರುವ “ವಿಐಪಿ” ಚಿತ್ರಕ್ಕಾಗಿ (Kannada New Movie) ಡಾ.ವಿ. ನಾಗೇಂದ್ರಪ್ರಸಾದ್ ಬರೆದಿರುವ ತಾಯಿ-ಮಗನ ಬಾಂಧವ್ಯ ಸಾರುವ “ಬಾರೋ ಕಂದ” ಎಂಬ ಹಾಡನ್ನು ಇತ್ತೀಚಿಗೆ ಚೆನ್ನೈನಲ್ಲಿ ಕೆ.ಎಸ್. ಚಿತ್ರಾ ಅವರು ಹಾಡಿದ್ದಾರೆ. ಹರ್ಷವರ್ಧನ್ ರಾಜ್ ಸಂಗೀತ ಸಂಯೋಜಿಸಿದ್ದಾರೆ.

ದೇಶಕಂಡ ಜನಪ್ರಿಯ ಗಾಯಕಿ ಚಿತ್ರ ಅವರು ನಮ್ಮ ಚಿತ್ರದ ಹಾಡನ್ನು ಹಾಡಿದ್ದು ತುಂಬಾ ಸಂತೋಷವಾಗಿದೆ. “ಬಾರೋ ಕಂದ” ಹಾಡನ್ನು ಚಿತ್ರಾ ಅವರು ಅದ್ಭುತವಾಗಿ ಹಾಡಿದ್ದಾರೆ.‌ ಹಾಡು ಹಾಡಿದ ನಂತರ ಸಂಗೀತ ನಿರ್ದೇಶಕ ಹರ್ಷವರ್ಧನ್ ರಾಜ್ ಅವರ ಬಳಿ ನಾನು ಹಾಡಿರುವುದು ನಿಮಗೆ ಇಷ್ಟವಾಯಿತಾ? ಇಲ್ಲವಾದ್ದಲ್ಲಿ ಇನ್ನೊಮ್ಮೆ ಹಾಡುತ್ತೇನೆ ಎಂದರು. ಅಂತಹ ದೊಡ್ಡ ಗಾಯಕಿಯಾದರೂ ಅವರಲ್ಲಿರುವ ಸರಳತೆ ಎಲ್ಲರಿಗೂ ಮಾದರಿ ಎಂದು ತಿಳಿಸಿರುವ ಕಾರ್ಯಕಾರಿ ನಿರ್ಮಾಪಕ ಅಫ್ಜಲ್, ಬೆಂಗಳೂರು ಸುತ್ತಮುತ್ತ “ವಿಐಪಿ” ಚಿತ್ರಕ್ಕೆ ಚಿತ್ರೀಕರಣ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

ಈಗಾಗಲೇ ವಸಿಷ್ಠ ಸಿಂಹ ಅವರ ಫಸ್ಟ್ ಲುಕ್ ಪೋಸ್ಟರ್‌ನಿಂದ “ವಿಐಪಿ” ಚಿತ್ರ ಎಲ್ಲೆಡೆ ಜನಪ್ರಿಯವಾಗಿದೆ. ಆಕ್ಷನ್ ಥ್ರಿಲ್ಲರ್ ಜಾನರ್‌ನ ಈ ಚಿತ್ರದಲ್ಲಿ ಅದ್ಭುತ ಸಾಹಸ ಸನ್ನಿವೇಶಗಳಿದೆ. ವಸಿಷ್ಠ ಸಿಂಹ ಅವರ ಈವರೆಗಿನ ಪಾತ್ರಗಳಿಗಿಂತ ನಮ್ಮ ಚಿತ್ರದ ಪಾತ್ರ ವಿಭಿನ್ನವಾಗಿರುತ್ತದೆ ಎಂದು ನಿರ್ದೇಶಕ ಬ್ರಹ್ಮ ತಿಳಿಸಿದ್ದಾರೆ.

ಕಲಾ ಸೃಷ್ಟಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್.ಎಸ್. ಮೋಹನ್ ಕುಮಾರ್ ಹಾಗೂ ಆರ್. ಅಚ್ಯುತ್ ರಾವ್ ಅವರ ನಿರ್ಮಾಣದಲ್ಲಿ ಈ ಚಿತ್ರ ಅದ್ದೂರಿಯಾಗಿ ಮೂಡಿ ಬರುತ್ತಿದೆ. ಬ್ರಹ್ಮ ಈ ಚಿತ್ರದ ನಿರ್ದೇಶಕರು.

ಮೇಕಿಂಗ್‌ನಿಂದ ಸದ್ದು ಮಾಡುತ್ತಿರುವ “ವಿಐಪಿ” ಚಿತ್ರದಲ್ಲಿ ವಸಿಷ್ಠ ಸಿಂಹ ಅವರಿಗೆ ನಾಯಕಿಯಾಗಿ ತೇಜಸ್ವಿನಿ ಶರ್ಮ ಅಭಿನಯಿಸುತ್ತಿದ್ದಾರೆ. ಸುನೀಲ್ ಪುರಾಣಿಕ್, ಬಲ ರಾಜವಾಡಿ , ಅಫ್ಜಲ್ , ಸ್ಪರ್ಶ ರೇಖಾ, ಸುಚೇಂದ್ರ ಪ್ರಸಾದ್ , ಹನುಮಂತೇಗೌಡ, ರಾಮ್ ಕಶ್ಯಪ್, ರಣವೀರ್, ಸನತ್, ಶ್ರೀದತ್ತ ಮುಂತಾದವರು ಅಭಿನಯಿಸುತ್ತಿದ್ದಾರೆ.

ಇದನ್ನೂ ಓದಿ: Tumkur News: ರೈತರು ಮೊಬೈಲ್ ಆ್ಯಪ್ ಮೂಲಕ ಬೆಳೆ ವಿವರ ದಾಖಲಿಸಬೇಕು

ರಾಜೀವ್ ಗಣೇಸನ್ ಛಾಯಾಗ್ರಹಣ, ಹರ್ಷವರ್ಧನ್ ರಾಜ್ ಸಂಗೀತ ನಿರ್ದೇಶನ ಹಾಗೂ ಸತೀಶ್ ಚಂದ್ರಯ್ಯ ಸಂಕಲನ ಈ ಚಿತ್ರಕ್ಕಿದೆ.

Continue Reading

ಪ್ರಮುಖ ಸುದ್ದಿ

Dengue cases in Karnataka: ರಾಜ್ಯದಲ್ಲಿಂದು 175 ಡೆಂಗ್ಯೂ ಕೇಸ್‌ಗಳು ಪತ್ತೆ; ಸಕ್ರಿಯ ಪ್ರಕರಣಗಳ ಸಂಖ್ಯೆ 352ಕ್ಕೆ ಏರಿಕೆ!

Dengue cases in Karnataka: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 753 ಮಂದಿಗೆ ಡೆಂಗ್ಯೂ ಟೆಸ್ಟ್‌ ನಡೆಸಿದ್ದು, ಈ ಪೈಕಿ 175 ಮಂದಿಗೆ ಸೋಂಕು ದೃಢವಾಗಿದೆ.

VISTARANEWS.COM


on

Dengue cases in Karnataka
Koo

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 175 ಡೆಂಗ್ಯೂ ಕೇಸ್‌ಗಳು ಪತ್ತೆಯಾಗಿವೆ. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲೇ 115 ಹೊಸ ಕೇಸ್‌ಗಳು ವರದಿಯಾಗಿದ್ದು, ಒಟ್ಟಾರೆ ರಾಜ್ಯದಲ್ಲಿ (Dengue cases in Karnataka) 352 ಸಕ್ರಿಯ ಡೆಂಗ್ಯೂ ಪ್ರಕರಣಗಳು ಇವೆ. ಡೆಂಗ್ಯೂ ಸೋಂಕಿನಿಂದ ಜನವರಿಯಿಂದ ಈವರೆಗೆ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 753 ಮಂದಿಗೆ ಡೆಂಗ್ಯೂ ಟೆಸ್ಟ್‌ ನಡೆಸಿದ್ದು, ಈ ಪೈಕಿ 175 ಮಂದಿಗೆ ಸೋಂಕು ದೃಢವಾಗಿದೆ. ಜಿಲ್ಲಾವಾರು ನೋಡುವುದಾದರೆ ಬೆಂಗಳೂರಿನಲ್ಲಿ 115, ಬೆಂಗಳೂರು ಗ್ರಾಮಾಂತರ 2, ವಿಜಯಪುರ 9, ಗದಗ 8, ಉತ್ತರ ಕನ್ನಡ 1, ಬಳ್ಳಾರಿ 1, ಮಂಡ್ಯ 26, ಉಡುಪಿ 2, ಕೊಡಗು ಜಿಲ್ಲೆಯಲ್ಲಿ 11 ಪ್ರಕರಣ ಪತ್ತೆಯಾಗಿವೆ. ಸದ್ಯ ಇರುವ 325 ಸಕ್ರಿಯ ಪ್ರಕರಣಗಳ ಪೈಕಿ 45 ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜನವರಿಯಿಂದ ಈವರೆಗೆ ರಾಜ್ಯದಲ್ಲಿ ಒಟ್ಟು 7,006 ಡೆಂಗ್ಯೂ ಕೇಸ್‌ಗಳು ವರದಿಯಾಗಿದ್ದು, ಒಟ್ಟು 6 ಮಂದಿ ಮೃತಪಟ್ಟಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿಯೇ 1,908 ಸೋಂಕು ಪ್ರಕರಣಗಳು ದಾಖಲಾಗಿವೆ.

ಶಿರಸಿಯಲ್ಲಿ ಶಂಕಿತ ಡೆಂಗ್ಯೂ ಜ್ವರದಿಂದ ವಿದ್ಯಾರ್ಥಿನಿ ಸಾವು

ಕಾರವಾರ: ಶಂಕಿತ ಡೆಂಗ್ಯೂ ಜ್ವರದಿಂದ (Dengue fever) ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಶಿರಸಿಯ ಕಸ್ತೂರಬಾ ನಗರದ ಸುಹಾನಾ ಮಹ್ಮದ್ ಶಫಿ (12) ಮೃತ ದುರ್ದೈವಿ. ಡೆಂಗ್ಯೂ ಲಕ್ಷಣಗಳು ಕಂಡುಬಂದಿದ್ದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಜ್ವರಕ್ಕೆ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದಳು. ಚಿಕಿತ್ಸೆ ಫಲಿಸದ ಹಿನ್ನೆಲೆಯಲ್ಲಿ ಬಾಲಕಿ ಕೊನೆಯುಸಿರೆಳೆದಿದ್ದಾಳೆ.

ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿರಸಿ ನಗರದ ಮಹಾಲಕ್ಷ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಇದುವರೆಗೆ 122 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಅಬ್ಬರ

ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಅಬ್ಬರಿಸುತ್ತಿದೆ. ಇದುವರೆಗೆ ಜಿಲ್ಲೆಯಲ್ಲಿ 122 ಮಂದಿಗೆ ಡೆಂಗ್ಯೂ ದೃಢವಾಗಿದ್ದು, 1692 ಡೆಂಗ್ಯೂ ಶಂಕಿತರನ್ನು ಪತ್ತೆ ಹಚ್ಚಲಾಗಿದೆ. 1499 ಮಂದಿ ಡೆಂಗ್ಯೂ ಶಂಕಿತರಿಗೆ ಪರೀಕ್ಷೆ ನಡೆಸಲಾಗಿದೆ.

ಜಿಲ್ಲೆಯ ಅಂಕೋಲಾ, ಹೊನ್ನಾವರ ತಾಲೂಕುಗಳಲ್ಲಿ 30ಕ್ಕೂ ಅಧಿಕ ಡೆಂಗ್ಯೂ ಸೋಂಕಿತರು ಪತ್ತೆಯಾಗಿದ್ದಾರೆ. ಹೀಗಾಗಿ ಡೆಂಗ್ಯೂ ಕುರಿತು ಮನೆ ಮನೆಗೆ ತೆರಳಿ ಆಶಾಕಾರ್ಯಕರ್ತೆಯರು ಜಾಗೃತಿ ಮೂಡಿಸುತ್ತಿದ್ದಾರೆ. ನೀರು ಖಾಲಿ‌ ಮಾಡಲು ಸಾಧ್ಯವಾದ ಸ್ಥಳಗಳಲ್ಲಿ ಲಾರ್ವಾ ನಾಶಕ ಔಷಧ ಸಿಂಪಡಣೆಗೆ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ | Dengue fever: ಹಾವೇರಿಯಲ್ಲಿ ಶಂಕಿತ ಡೆಂಗ್ಯೂಗೆ 9 ವರ್ಷದ ಮಗು ಬಲಿ

ಆರೋಗ್ಯ ಇಲಾಖೆಯಿಂದಲೂ ಜಾಗೃತಿ‌ ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿದ್ದು, ವಾರಕ್ಕೊಮ್ಮೆ ಮನೆ ಮನೆಗೆ ಭೇಟಿ ನೀಡಿ ಆಶಾಕಾರ್ಯಕರ್ತೆಯರಿಂದ ಮಾಹಿತಿ ಸಂಗ್ರಹ ಕಾರ್ಯ ನಡೆಯುತ್ತಿದೆ. ಜ್ವರ ಬಂದಾಗ ನಿರ್ಲಕ್ಷ್ಯ ತೋರದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಸೂಚನೆ ನೀಡಲಾಗುತ್ತಿದೆ ಎಂದು ಕಾರವಾರ ತಾಲೂಕು ಆರೋಗ್ಯಾಧಿಕಾರಿ ಡಾ.ರಮೇಶ ರಾವ್ ಮಾಹಿತಿ ನೀಡಿದ್ದಾರೆ.

Continue Reading
Advertisement
Dina Bhavishya
ಭವಿಷ್ಯ54 mins ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಸಿಗಲಿದೆ ಶುಭ ಸುದ್ದಿ

Champions Trophy 2025:
ಪ್ರಮುಖ ಸುದ್ದಿ6 hours ago

Champions Trophy 2025 : ಭಾರತ ತಂಡ ಪಾಕಿಸ್ತಾನಕ್ಕೆ ಬರಲೇಬೇಕು ಹಠ ಹಿಡಿದು ಕುಳಿತಿರುವ ಪಿಸಿಬಿ

Rain News
ದೇಶ6 hours ago

Rain News: ವರುಣನ ಆರ್ಭಟ; ಮಳೆ ಸಂಬಂಧಿ ಅವಘಡಗಳಿಗೆ 24 ಗಂಟೆಯಲ್ಲಿ 13 ಜನ ಬಲಿ

KAS
ಕರ್ನಾಟಕ7 hours ago

KAS: ಕೆಎಎಸ್‌ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್;‌ ನೇಮಕಾತಿಗೆ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ, ಇಲ್ಲಿದೆ ಮಾಹಿತಿ

Mid Day Meal
ದೇಶ7 hours ago

Mid Day Meal: ಮಕ್ಕಳ ಬಿಸಿಯೂಟದಲ್ಲೂ ಕಳ್ಳಾಟ, ವಿದ್ಯಾರ್ಥಿಗಳಿಗೆ ಸಿಗೋದು ಬರೀ ಅನ್ನ-ಅರಿಶಿಣ; Video ಇದೆ

Dr HS Shetty: Rs 7 crore spent on charity; Businessman Dr. HS Shetty
ಪ್ರಮುಖ ಸುದ್ದಿ8 hours ago

Dr HS Shetty : ದಾನಗಳಿಗಾಗಿಯೇ ವರ್ಷದಲ್ಲಿ 7 ಕೋಟಿ ರೂ. ವಿನಿಯೋಗ

Vasishtha Simha starrer VIP Kannada movie
ಕರ್ನಾಟಕ8 hours ago

Kannada New Movie: ಖ್ಯಾತ ಗಾಯಕಿ ಕೆ.ಎಸ್.ಚಿತ್ರಾ ಕಂಠಸಿರಿಯಲ್ಲಿ ವಸಿಷ್ಠ ಸಿಂಹ ಅಭಿನಯದ ‘ವಿಐಪಿ’ ಚಿತ್ರದ ಹಾಡು

Asia Cup 2024
ಪ್ರಮುಖ ಸುದ್ದಿ8 hours ago

Asia Cup 2024 : ಮಹಿಳಾ ಏಷ್ಯಾಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

Viral Video
Latest8 hours ago

Viral Video: ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಪ್ರಾಂಶುಪಾಲರನ್ನು ಕುರ್ಚಿ ಸಹಿತ ಹೊರಗೆಳೆದ ಸಿಬ್ಬಂದಿ

Kashmir Encounter
ದೇಶ8 hours ago

Kashmir Encounter: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ನಾಲ್ವರು ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ11 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ14 hours ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ15 hours ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು17 hours ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ19 hours ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ23 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ1 day ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ2 days ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ2 days ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ2 days ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

ಟ್ರೆಂಡಿಂಗ್‌