Site icon Vistara News

Pavithra Gowda: ಕೊಲೆ ಕೇಸ್;‌ ದರ್ಶನ್‌ ಬಂಧನ ಬೆನ್ನಲ್ಲೇ ಗೆಳತಿ ಪವಿತ್ರಾ ಗೌಡ ಕೂಡ ಪೊಲೀಸ್‌ ವಶಕ್ಕೆ!

Pavithra Gowda

Renukaswamy Murder Case: Actress Pavithra Gowda Arrested In Bengaluru Along With Actor Darshan

ಬೆಂಗಳೂರು: ರೇಣುಕಾಸ್ವಾಮಿ ಎಂಬ ಯುವಕನನ್ನು ಕೊಲೆ ಮಾಡಿದ ಆರೋಪದಲ್ಲಿ ಸ್ಯಾಂಡಲ್‌ವುಡ್‌ ಖ್ಯಾತ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Actor Darshan) ಅವರನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ ನಟ ದರ್ಶನ್‌ ಅವರ ಗೆಳತಿಯೂ ಆದ ನಟಿ (Pavithra Gowda) ಅವರನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ರೇಣುಕಾಸ್ವಾಮಿ ಹತ್ಯೆಯ ಹಿಂದೆ ಒಳಸಂಚು ರೂಪಿಸಿದ ಆರೋಪದಲ್ಲಿ ಬೆಂಗಳೂರಿನ ಅನ್ನಪೂರ್ಣೇಶ್ವರ ನಗರ ಠಾಣೆಯ ಪೊಲೀಸರು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈಗಾಗಲೇ ನಟ ದರ್ಶನ್‌ ಅವರನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿಯೇ ರೇಣುಕಾಸ್ವಾಮಿ ಎಂಬ ಯುವಕನನ್ನು ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹಾಗಾಗಿ, ಕೊಲೆಯ ಹಿಂದೆ ಪವಿತ್ರಾ ಗೌಡ ಅವರ ಕೈವಾಡ ಏನಿದೆ? ಇವರು ಮಾಡಿದ ಒಳಸಂಚು ಏನಿದೆ ಎಂಬುದರ ಕುರಿತು ಹೆಚ್ಚಿನ ತನಿಖೆ ನಡೆಸಲು ಪೊಲೀಸರು ನಟಿಯನ್ನು ವಶಪಡಿಸಿಕೊಂಡಿಸಿದ್ದಾರೆ ಎಂದು ತಿಳಿದುಬಂದಿದೆ.

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಸುಮ್ಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ಜೂನ್‌ 9ರ ಭಾನುವಾರ ರಾಜಕಾಲುವೆ ಬಳಿ ಶವ ಪತ್ತೆಯಾಗಿತ್ತು. ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಇದಾದ ನಂತರ ಪೊಲೀಸರು ತನಿಖೆ ನಡೆಸಿದ್ದರು.

ದರ್ಶನ್‌ ಕೈವಾಡವೇನು?

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಮತ್ತೊಂದಿಷ್ಟು ಮೂಲಗಳ ಪ್ರಕಾರ, ರೇಣುಕಾಸ್ವಾಮಿ ಮೇಲೆ ದರ್ಶನ್‌ ಅವರೇ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇದಾದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ರೇಣುಕಾಸ್ವಾಮಿ ಮೃತಪಟ್ಟಿದ್ದರು. ನಂತರ ಶವವನ್ನು ಚರಂಡಿ ಬಳಿ ಎಸೆಯಲಾಗಿತ್ತು ಎನ್ನಲಾಗಿದೆ.

ಪ್ರಕರಣ ಭೇದಿಸಿದ್ದು ಹೇಗೆ?

ಅಪರಿಚಿತ ಶವವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ತನಿಖೆ ಆರಂಭಿಸಿದ್ದರು. ಇದರ ಮಧ್ಯೆಯೇ, ಗಿರಿನಗರದ ಮೂವರು ಆರೋಪಿಗಳು ತಾವೇ ಕೊಲೆ ಮಾಡಿದ್ದಾಗಿ ಪೊಲೀಸರಿಗೆ ಶರಣಾಗಿದ್ದರು. ಹಣಕಾಸು ವಿಚಾರವಾಗಿ ಕೊಲೆ ಮಾಡಿರುವುದಾಗಿ ಅವರು ಒಪ್ಪಿಕೊಂಡಿದ್ದರು. ಅನುಮಾನಗೊಂಡ ಪೊಲೀಸರು ಹೆಚ್ಚಿನ ತನಿಖೆ ನಡೆಸಿದಾಗ, ನಟ ದರ್ಶನ್‌ ಕೈವಾಡ ಇರುವುದು ಬಯಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳೇ ದರ್ಶನ್‌ ಹೆಸರು ಹೇಳಿದ ಕಾರಣ ನಟನನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Actor Darshan: ಹತ ರೇಣುಕಾಸ್ವಾಮಿ ಯಾರು? ಕೊಲೆ ಹಿಂದೆ ದರ್ಶನ್‌ ಕೈವಾಡವೇನು? ಇಲ್ಲಿದೆ ಶಾಕಿಂಗ್‌ ಮಾಹಿತಿ

Exit mobile version