Site icon Vistara News

Republic day 2023 : ಚುನಾವಣಾ ವರ್ಷದಲ್ಲಿ ಸರ್ಕಾರ, ರಾಜ್ಯದ ಸಾಧನೆ ತೆರೆದಿಟ್ಟ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌

republic day governor

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ, ಏಳು ಸ್ವಾಯತ್ತ ವಿವಿಗಳನ್ನು ಸ್ಥಾಪಿಸಲಾಗಿದೆ. ಏಳು ಎಂಜಿನಿಯರಿಂಗ್‌ ಕಾಲೇಜುಗಳನ್ನು ಐಐಟಿ ಮಾದರಿಯಲ್ಲಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಸ್ವಚ್ಛತಾ ಆಂದೋಲನ, ಜನರಿಗೆ ಒದಗಿಸುವ ಕಂದಾಯ ಸೇವೆಗಳು, ಉದ್ಯೋಗ ಖಾತ್ರಿ ಮತ್ತಿತರ ಯೋಜನೆಗಳಲ್ಲಿ ರಾಜ್ಯ ದೊಡ್ಡ ಮಟ್ಟದ ಸಾಧನೆ ಮಾಡಿದೆ. ಹೀಗೆ ರಾಜ್ಯ ಸರ್ಕಾರ ಮತ್ತು ರಾಜ್ಯದ ಒಟ್ಟಾರೆ ಸಾಧನೆಗಳ ಗಾಥೆಯನ್ನು ತೆರೆದಿಟ್ಟರು ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌. ಅವರು ಬೆಂಗಳೂರಿನ ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ನಡೆದ ೭೪ನೇ ಗಣರಾಜ್ಯೋತ್ಸವ (Republic day 2023) ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡಿ, ಧ್ವಜ ವಂದನೆ ಸ್ವೀಕರಿಸಿ ಮಾತನಾಡಿದರು.

ರಾಜ್ಯಪಾಲರು ತಮ್ಮ ಭಾಷಣದಲ್ಲಿ ಹೇಳಿದ ಪ್ರಮುಖ ವಿಷಯಗಳು

ದೇಶದ ಪ್ರಗತಿಪರ ರಾಜ್ಯಗಳಲ್ಲಿ ಕರ್ನಾಟಕವು ಒಂದಾಗಿದೆ. ರಾಜ್ಯದ ಸರ್ವಾಂಗೀಣ ನಿರಂತರ ಅಭಿವೃದ್ಧಿ ಉದ್ದೇಶದೊಂದಿಗೆ ಮೂಲಭೂತ ಸೇವೆಗಳನ್ನು ಒದಗಿಸಲು ವಿಭಿನ್ನ, ನವೀನ ಮತ್ತು ಸರ್ವರನ್ನು ಒಳಗೊಂಡ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ನಾವು ಅಗ್ರಗಣ್ಯ ಸ್ಥಾನದಲ್ಲಿದ್ದೇವೆ.

14 ಅಮೃತ ಮಹೋತ್ಸವ ಕಾರ್ಯಕ್ರಮ

“ನವಭಾರತಕ್ಕಾಗಿ ನವ ಕರ್ನಾಟಕ” ಎಂಬ ಧಯದೊಂದಿಗೆ “ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮದಡಿಯಲ್ಲಿ ಅಮೃತ್ ಶಾಲೆಗಳ ಯೋಜನೆ, ಅಮೃತ ಆರೋಗ್ಯ ಮೂಲಸೌಕರ್ಯ ಉನ್ನತೀಕರಣ ಯೋಜನೆ, ಅಮೃತ ಕೌಶಲ್ಯ ಅಭಿವೃದ್ಧಿ ತರಬೇತಿ ಯೋಜನೆ, ಅಮೃತ ಸ್ವ-ಸಹಾಯ ಗುಂಪುಗಳ ಯೋಜನೆ, ಅಮೃತ ನವೋದ್ಯಮ ಯೋಜನೆ, ಅಮೃತ ಕ್ರೀಡಾ ದತ್ತು ಯೋಜನೆ ಇತ್ಯಾದಿಗಳನ್ನು ಒಳಗೊಂಡಂತೆ 14 ಅಮೃತ ಮಹೋತ್ಸವ ಕಾರ್ಯಕ್ರಮಗಳನ್ನು ವಿವಿಧ ಹಂತಗಳಲ್ಲಿ ರಾಜ್ಯದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ.

2020-21ರ ಎಸ್‌ಡಿಜಿ ಸೂಚ್ಯಂಕ ವರದಿಯ ಪ್ರಕಾರ ಕರ್ನಾಟಕ ರಾಜ್ಯವು ನಾಲ್ಕನೇ ಸ್ಥಾನದಲ್ಲಿದೆ. ರಾಜ್ಯಾದ್ಯಂತ ಇರುವ ಸಣ್ಣ, ಅತಿ ಸಣ್ಣ, ಮಧ್ಯಮ ದೊಡ್ಡ ಹಿಡುವಳಿದಾರರನ್ನು ಗುರುತಿಸಲು ೨೦೨೨ರ ಅಕ್ಟೋಬರ್‌ ೧ರಿಂದ 11 ನೇ ಕೃಷಿ ಗಣತಿಯ ಕಾರ್ಯವನ್ನು ಪ್ರಾರಂಭಿಸಲಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರೂ. 6478.76 ಕೋಟಿ ವೆಚ್ಚ ಮಾಡಲಾಗಿದ್ದು, 2022ನೇ ವರ್ಷದ ಜನವರಿ ತಿಂಗಳಿನಿಂದ ಡಿಸೆಂಬರ್ ಅಂತ್ಯದವರೆಗೆ ಒಟ್ಟು 13.47 ಕೋಟಿ ಮಾನವ ದಿನಗಳ ಉದ್ಯೋಗ ಸೃಷ್ಟಿ ಮಾಡಿ 29.03 ಲಕ್ಷ ಕುಟುಂಬಗಳ 52.71 ಲಕ್ಷ ಜನರಿಗೆ ಉದ್ಯೋಗ ಒದಗಿಸಲಾಗಿದೆ. ಒಟ್ಟು ರೂ.4110 ಕೋಟಿಗಳ ಕೂಲಿ ಮತ್ತವನ್ನು, ಕೂಲಿಕಾರರ ಖಾತೆಗಳಿಗೆ ನೇರವಾಗಿ ಪಾವತಿಸಲಾಗಿದೆ. ಡಿಸೆಂಬರ್ 2022ರ ಅಂತ್ಯದವರೆಗೆ ರೂ.‌ 2314.34 ಕೋಟಿ ವೆಚ್ಚದಲ್ಲಿ 13.35 ಲಕ್ಷ ಮನೆಗಳಿಗೆ ಸಕ್ರಿಯ ನಲ್ಲಿ ಸಂಪರ್ಕಗಳನ್ನು ಒದಗಿಸಲಾಗಿದೆ.

ಸ್ವಚ್ಛತಾ ಆಂದೋಲನದಲ್ಲಿ ಕರ್ನಾಟಕ ನಂ.೧

ಕೇಂದ್ರ ಸರ್ಕಾರದ ಜಲ ಶಕ್ತಿ ಮಂತ್ರಾಲಯ ಆಯೋಜಿಸಿದ Sujalam 2.0 ಮತ್ತು Swachhata Hi Seva- 2022 ಆಂದೋಲನಗಳ ಅಡಿಯಲ್ಲಿ ಕರ್ನಾಟಕ ರಾಜ್ಯವು ಮೊದಲ ಪ್ರಶಸ್ತಿ ಪಡೆದಿದ್ದು, ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ ಕರ್ನಾಟಕವು ರಾಷ್ಟ್ರದಲ್ಲಿ ಮಹತ್ವಾಕಾಂಕ್ಷಿ ಗ್ರಾಮಗಳ ಘೋಷಣೆಯಲ್ಲಿ 2ನೇ ಸ್ಥಾನವನ್ನು ಗಳಿಸಿದೆ.

2022-23ನೇ ಸಾಲಿಗೆ ಒಟ್ಟು 20.19 ಲಕ್ಷ ರೈತರಿಗೆ ಕೃಷಿ ಸಾಲ ಯೋಜನೆಯಡಿಯಲ್ಲಿ ರೂ.15,066 ಕೋಟಿಗಳನ್ನು ಬೆಳೆ ಸಾಲವನ್ನು ಡಿಸೆಂಬರ್ 2022ರ ಅಂತ್ಯದವರೆಗೆ ನೀಡಲಾಗಿದೆ. ಮಹಿಳಾ ಸ್ವಸಹಾಯ ಗುಂಪುಗಳಿಗೆ ರೂ. 5 ಲಕ್ಷಗಳ ವರೆಗಿನ ಸಾಲವನ್ನು. ಶೂನ್ಯ ಬಡ್ಡಿದರದಲ್ಲಿ ವಿತರಿಸಲಾಗಿದೆ. ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್ ಯೋಜನೆಯಡಿಯಲ್ಲಿ 17-01-2023ರ ಅಂತ್ಯಕ್ಕೆ 32.32 ಲಕ್ಷ ಸದಸ್ಯರನ್ನು ನೋಂದಾಯಿಸಲಾಗಿದೆ.

ಉತ್ತಮ ತೋಟಗಾರಿಕಾ ರಾಜ್ಯ

Agriculture Today magazine ತನ್ನ 13ನೇ ಕೃಷಿ ನಾಯಕತ್ವ, ಸಮಾವೇಶ ಮತ್ತು ಪುಶಸ್ತಿ ಕಾರ್ಯಕ್ರಮ- 2022 ರಲ್ಲಿ ನೋಟಗಾರಿಕೆ ಅಭಿವೃದ್ಧಿ ಮತ್ತು ಉತ್ಪನ್ನಗಳ ಪ್ರೋತ್ಸಾಹಕ್ಕಾಗಿ ಕರ್ನಾಟಕ ರಾಜ್ಯವನ್ನು “ಉತ್ತಮ ತೋಟಗಾರಿಕಾ ರಾಜ್ಯ” ಪ್ರಶಸ್ತಿ ನೀಡಿ ಗೌರವಿಸಿದೆ. ತೋಟಗಾರಿಕಾ ಇಲಾಖೆಯು 4,663 ಹೆಕ್ಟೇರ್ ಪ್ರದೇಶವನ್ನು ಆಧುನಿಕ ಕೃಷಿ ಪದ್ಧತಿಗೆ ಒಳಪಡಿಸಿದೆ. 26.21 ಲಕ್ಷ ಹೆಕ್ಟೇರ್ ಗಳನ್ನು ತೋಟಗಾರಿಕಾ ನೀರಾವರಿಗೆ ಒಳಪಡಿಸಿದ್ದು, ಅದರಲ್ಲಿ 953 ಹೆಕ್ಟೇರ್ ಪ್ರದೇಶವು Green houses | Polyhouses ಗೆ ಒಳಪಡಿಸಿದೆ. ರೈತ ಸಮುದಾಯಕ್ಕೆ 60 ಲಕ್ಷ ಉತ್ಕೃಷ್ಟ ಮೊಳಕೆ ಸಸಿಗಳನ್ನು, 400 ಟನ್ ಜೈವಿಕ ಗೊಬ್ಬರ ಮತ್ತು 23,000 ಲೀ, Arka Microbial Consortium ಅನ್ನು ಒದಗಿಸಲಾಗಿದೆ.

1,57,244 ಮನೆಗಳ ನಿರ್ಮಾಣ

ರಾಜ್ಯ ಸರ್ಕಾರವು ವಿವಿಧ ವಸತಿ ಯೋಜನೆಗಳಡಿಯಲ್ಲಿ 2098.85 ಕೋಟಿ ರೂಗಳ ವೆಚ್ಚದಲ್ಲಿ 1,57,244 ಮನೆಗಳನ್ನು ಪೂರ್ಣಗೊಳಿಸಿದೆ ಮತ್ತು ಒಂದು ಲಕ್ಷ ಬಹುಮಹಡಿ ಯೋಜನೆಯಡಿಯಲ್ಲಿ ಒಟ್ಟು 59,476 ಬಹು ಮಹಡಿ ಮನೆಗಳ ನಿರ್ಮಾಣವನ್ನು ಕೈಗೊಳ್ಳಲಾಗುತ್ತಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ – ಸರ್ವರಿಗೂ ಸೂರು ಯೋಜನೆಯಡಿಯಲ್ಲಿ ರೂ.2804.01 ಕೋಟಿಗಳ ವೆಚ್ಚದಲ್ಲಿ 44,452 ಮನೆಗಳನ್ನು ಪೂರ್ಣಗೊಳಿಸಿದೆ. ನನ್ನ ಸರ್ಕಾರವು ಸರ್ಕಾರಿ ಮಾಲೀಕತ್ವದಲ್ಲಿ ಇರುವ ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುವ 3.36 ಲಕ್ಷ ಕುಟುಂಬಗಳಿಗೆ ಭೂ ಮಾಲೀಕತ್ವದ ಹಕ್ಕುಪತ್ರ ನೀಡುವ ಐತಿಹಾಸಿಕ ನಿರ್ಣಯ ಕೈಗೊಂಡಿದ್ದು, ಇಲ್ಲಿಯವರೆಗೆ ಈ ಕೊಳೆಗೇರಿ ಪ್ರದೇಶಗಳಲ್ಲಿ ಸಮೀಕ್ಷೆ ಕೈಗೊಂಡು ಇದುವರೆಗೂ 1,14,604 ಕುಟುಂಬಗಳಿಗೆ ಹಕ್ಕು ಪತ್ರ ನೀಡಲಾಗಿದೆ.

ಶಿಕ್ಷಣ ಕ್ಷೇತ್ರದಲ್ಲೂ ಮಹಾಕ್ರಾಂತಿ

ಸಮಾಜದ ದುರ್ಬಲ ವರ್ಗದ ಮಕ್ಕಳಿಗೆ ಸಹಾಯ ಮಾಡುವ ಸಲುವಾಗಿ ಸರ್ಕಾರ ಕಳೆದ ವರ್ಷ ರೈತ ವಿದ್ಯಾನಿಧಿ ಯೋಜನೆಯನ್ನು ಪ್ರಾರಂಭಿಸಿದೆ. ಇದುವರೆಗೆ ಒಟ್ಟು ರೂ.483.62 ಕೋಟಿ ರೂ.ಗಳ ವಿದ್ಯಾರ್ಥಿ ವೇತನವನ್ನು ರೈತರ ಮಕ್ಕಳಿಗೆ ವಿತರಿಸಲಾಗಿದೆ. ಹೆಚ್ಚಿನ ಸಂಖ್ಯೆಯ ಫಲಾನುಭವಿಗಳನ್ನು ಒಳಗೊಂಡಿರುವ ಮೀನುಗಾರರು, ನೇಕಾರರು, ಕೃಷಿ ಕಾರ್ಮಿಕರು, ಟ್ಯಾಕ್ಸಿ ಚಾಲಕರು ಮುಂತಾದ ವಿವಿಧ ವರ್ಗಗಳಿಗೆ ಯೋಜನೆಯನ್ನು ವಿಸ್ತರಿಸಲಾಗಿದೆ.

ಸರ್ಕಾರಿ ಶಾಲಾ ಕಾಲೇಜುಗಳಲ್ಲಿ 8101 ಹೆಚ್ಚುವರಿ ತರಗತಿ ಕೊಠಡಿಗಳ ನಿರ್ಮಾಣ ಮತ್ತು 978 ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕಾಗಿ ಅನುದಾನವನ್ನು ನೀಡಲಾಗಿದೆ. ಸರ್ಕಾರವು 4244 ಹೊಸ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಅನುಮೋದನೆ ನೀಡಲಾಗಿದೆ. ಅನುಸೂಚಿತ ಜಾತಿ, ಪಂಗಡಗಳು ಮತ್ತು ಅಲ್ಪಸಂಖ್ಯಾತ ವರ್ಗದ ಉದ್ಯೋಗಸ್ಥ ಮಹಿಳೆಯರಿಗಾಗಿ 6 ನಗರಗಳಲ್ಲಿ 24 ವಸತಿ ನಿಲಯಗಳನ್ನು ಪ್ರಾರಂಭಿಸಲಾಗಿದೆ.

ತಾಯಂದಿರ ಮರಣ ಪ್ರಮಾಣ ಇಳಿಕೆ

ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿ ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣವು 83ರಿಂದ 69ಕ್ಕೆ ಇಳಿದಿದೆ. ನಗರ ಪ್ರದೇಶಗಳಲ್ಲಿ 438 ‘ನಮ್ಮ ಕ್ಲಿನಿಕ್’ಗಳನ್ನು 128 ಮಹಿಳಾ ಸ್ವಾಸ್ಥ್ಯ ಚಿಕಿತ್ಸಾಲಯಗಳು ಮತ್ತು ಪಾಲಿಕ್ಲಿನಿಕ್‌ಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಒಟ್ಟು ರೂ.1000.00 ಕೋಟಿ ವೆಚ್ಚದಲ್ಲಿ 100 ಹೈಲೋಡ್ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 30 ಹಾಸಿಗೆ ಮಾದರಿ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮುಂದಿನ ಎರಡು ವರ್ಷಗಳಲ್ಲಿ ಮೇಲ್ದರ್ಜೆಗೇರಿಸಲಾಗುತ್ತದೆ. ಆಯುಷ್ಮಾನ್ ಭಾರತ್‌ ಪ್ರಧಾನ ಮಂತ್ರಿ ಜನಾರೋಗ್ಯ ಆರೋಗ್ಯ – ಕರ್ನಾಟಕ ಕಾರ್ಡ್‌ಗಳಿಗೆ 1.22 ಕೋಟಿ ಫಲಾನುಭವಿಗಳನ್ನು ನೋಂದಾಯಿಸಲಾಗಿದೆ, ಇದು ಬಿಪಿಎಲ್‌ ಕುಟುಂಬಗಳಿಗೆ ರೂ.5.00 ಲಕ್ಷಗಳವರೆಗಿನ ಉಚಿತ ವೈದ್ಯಕೀಯ ರಕ್ಷಣೆ ನೀಡುತ್ತದೆ.

ಮನೆ ಬಾಗಿಲಿಗೆ ಮಾಸಾಶನ

ಸರ್ಕಾರವು ನಿರಾಶ್ರಿತ ವರ್ಗದ ವ್ಯಕ್ತಿಗಳಿಗೆ ಆರ್ಥಿಕ ಭದ್ರತೆ ನೀಡಲು ವಿವಿಧ ಸಾಮಾಜಿಕ ಭದ್ರತೆ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಇದರಿಂದ ಒಟ್ಟು 75.76 ಲಕ್ಷ ಫಲಾನುಭವಿಗಳು ಮಾಸಿಕ ಪಿಂಚಣಿ ಸೌಲಭ್ಯ ಪಡೆಯುತ್ತಿದ್ದಾರೆ. “ಮನೆ ಬಾಗಿಲಿಗೆ ಮಾಸಾಶನ” ಅಭಿಯಾನದಡಿ 65351 ಫಲಾನುಭವಿಗಳಿಗೆ ಅರ್ಹತೆಯ ಆಧಾರದ ಮೇಲೆ ಪಿಂಚಣಿ ನೀಡಲಾಗಿದೆ.

ನೀತಿ ಆಯೋಗದ India Innovation Index ಕರ್ನಾಟಕ ರಾಜ್ಯಕ್ಕೆ ಪ್ರಥಮ ಶ್ರೇಣಿ ಸೂಚ್ಯಂಕದಂತೆ ನೀಡಲಾಗಿದ್ದು, ಅತ್ಯಂತ ನಾವೀನ್ಯತಾ ಪೂರ್ಣ ರಾಜ್ಯವಾಗಿ ಕರ್ನಾಟಕವು ತನ್ನ ಸ್ಥಾನವನ್ನು ಉಳಿಸಿಕೊಂಡಿದೆ ಎಂದು ತಿಳಿಸಲು ಹರ್ಷಿಸುತ್ತೇನೆ. ಕೇಂದ್ರ ಸರ್ಕಾರದಿಂದ ನೀಡಲಾಗುವ ರಾಜ್ಯಗಳ Startup Ranking ಅಡಿಯಲ್ಲಿ ಕರ್ನಾಟಕ ಕಾರ್ಯನಿರ್ವಹಣೆಯ ರಾಜ್ಯವನ್ನು ಅತ್ಯುತ್ತಮ ಎಂದು ಸಹ ರಾಜ್ಯ ಘೋಷಿಸಲಾಗಿದೆ.

ಉದ್ಯಮ ಕ್ಷೇತ್ರದಲ್ಲೂ ಸಾಧನೆ

ಪರಿಷ್ಕೃತ ಕರ್ನಾಟಕ ಸ್ಮಾರ್ಟ್ ಅಪ್ ನೀತಿ-2022- 27ನ್ನು ಇತ್ತೀಚೆಗೆ ಘೋಷಿಸಲಾಯಿತು. ರಾಜ್ಯದ ಮೊಟ್ಟ ಮೊದಲ ಕರ್ನಾಟಕ ಸಂಶೋಧನೆ ಮತ್ತು ಅಭಿವೃದ್ಧಿ ಕಾರ್ಯನೀತಿ-2022ನ್ನು ಮತ್ತು ಕರ್ನಾಟಕ ದತ್ತಾಂಶ ಕೇಂದ್ರ ನೀತಿ-2022ನ್ನು ಸಹ ಘೋಷಿಸಲಾಗಿದೆ.

ಬಿಸಿನೆಸ್‌ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ Department of Industry and Internal Trade (DPIIT) ಬಿಡುಗಡೆ ಮಾಡಿರುವ ಶ್ರೇಯಾಂಕ ಪಟ್ಟಿಯಲ್ಲಿ ಕರ್ನಾಟಕ “ಶ್ರೇಷ್ಠ ಸಾಧಕ ರಾಜ್ಯ” ವಾಗಿ ಹೊರಹೊಮ್ಮಿದೆ. ಸರಕು ರಫ್ತನಲ್ಲಿ, 2022ರ ಆರ್ಥಿಕಸಾಲಿನಲ್ಲಿ ಭಾರತದ ರಫಿಗೆ ರಾಜ್ಯವು USD 25.87 ಬಿಲಿಯನ್ ಕೊಡುಗೆ ನೀಡಿದೆ ಇದು ಇದುವರೆಗಿನ ಮೊದಲ ನಾಲ್ಕು ರಫ್ತು ಮಾಡುವ ಮೊತ್ತವಾಗಿದೆ ಅತ್ಯಧಿಕ ರಾಜ್ಯಗಳಲ್ಲಿ ರಾಜ್ಯವು ಒಂದಾಗಿರುವುದರಿಂದ ಇದು ಮಹತ್ವದ ಮೈಲಿಗಲ್ಲು ಆಗಿರುತ್ತದೆ.

ಕರ್ನಾಟಕ 2022, ಕರ್ನಾಟಕ ಜಾಗತಿಕ ಹೂಡಿಕೆದಾರರ ಸಮಾವೇಶ – ಸರ್ಕಾರದ ಜಾಗತಿಕ ನವೆಂಬರ್, 2022 ರವರೆಗೆ ಆಯೋಜಿಸಲಾಗಿತ್ತು. ಇದರಿಂದ ಒಟ್ಟು ರೂ. 9,81,784 ಕೋಟಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲಾಗಿದೆ.

ಎಲೆಕ್ಟ್ರಿಕ್‌ ವಾಹನ ಬಳಕೆಗೆ ಪ್ರೋತ್ಸಾಹ

ಕರ್ನಾಟಕ ಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ 2022-27ನ್ನು ಪ್ರಕಟಿಸಲಾಗಿದೆ. ರಾಜ್ಯದಲ್ಲಿ ಎಲೆಕ್ನಿಕ್‌ ವಾಹನಗಳ (ಇವಿ) ಉತ್ಪಾದನೆಯ ಮೇಲೆ ಹೆಚ್ಚಿನ ಗಮನಹರಿಸುವುದರೊಂದಿಗೆ, ಸರ್ಕಾರವು ಕರ್ನಾಟಕ ಎಲೆಕ್ಟ್ರಿಕ್ ವೆಹಿಕಲ್ ಮತ್ತು ಎನರ್ಜಿ ಸ್ಟೋರೇಜ್ ನೀತಿ, 2017ನ್ನು ತಿದ್ದುಪಡಿ ಮಾಡಿದೆ ಮತ್ತು ಹೂಡಿಕೆದಾರರ ನಿರೀಕ್ಷೆಗಳಿಗೆ ಅನುಗುಣವಾಗಿ ಮತ್ತು ಕರ್ನಾಟಕದಲ್ಲಿ ಇವಿ ಬಳಕೆಯನ್ನು ಹೆಚ್ಚಿಸಲು ಪ್ರೋತ್ಸಾಹಕಗಳನ್ನು ಉನ್ನತೀಕರಿಸಿದೆ.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ೨೦೨೩ರ ಜೂನ್‌ ೧ರಿಂದ ಆಗಸ್ಟ್‌ ೧ರವರೆಗೆ ಯಶಸ್ವಿಯಾಗಿ ನೆರವೇರಿಸಲಾಯಿತು.

ರಾಜ್ಯದ 67 ಜನ ಸಾಧಕರಿಗೆ ‘ರಾಜ್ಯೋತ್ಸವ ಪ್ರಶಸ್ತಿ-2022’ ಹಾಗೂ ಸಾಮಾಜಿಕವಾಗಿ ಉತ್ತಮ ಸೇವೆಗೈದ 10 ಸಂಘ-ಸಂಸ್ಥೆಗಳಿಗೆ ‘ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿ-2022 ನೀಡಿ ಗೌರವಿಸಲಾಗಿದೆ. 2022ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಕರ್ನಾಟಕ ರತ್ನ’ ಗೌರವ ಪ್ರಶಸ್ತಿಯನ್ನು ದಿ. ಪುನೀತ್ ರಾಜ್‌ಕುಮಾರ್ ರವರಿಗೆ ಮರಣೋತ್ತರವಾಗಿ ಪ್ರದಾನ ಮಾಡಲಾಗಿದೆ .

ಸ್ತ್ರೀ ಸಾಮರ್ಥ್ಯ ಯೋಜನೆಯಡಿ 50,000 ಮಹಿಳಾ ಸ್ವಸಹಾಯ ಸಂಘಗಳಿಗೆ ತಲಾ ರೂ.1.5 ಲಕ್ಷ ಪ್ರಾರಂಭಿಕ ಧನವನ್ನು ನೀಡಲಾಗುತ್ತಿದ್ದು, 5.00 ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಬೆಂಬಲ ನೀಡುವ ಗುರಿಯನ್ನು ಹೊಂದಿದೆ. ಬಾಲ್ಯವಿವಾಹ ತಡೆಗಟ್ಟುವ ಉದ್ದೇಶದಿಂದ ಕೊಪ್ಪಳ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡ “ಸ್ಫೂರ್ತಿ” ಯೋಜನೆಯನ್ನು ಬಾಗಲಕೋಟೆ, ವಿಜಯಪುರ, ರಾಯಚೂರು, ಬೆಳಗಾವಿ ಮತ್ತು ಕಲಬುರಗಿ ಜಿಲ್ಲೆಗಳ 11 ತಾಲೂಕುಗಳಿಗೆ ವಿಸ್ತರಿಸಲಾಗುತ್ತಿದೆ. 12.51 ಕೋಟಿ ರೂ.ಗಳ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆಯ ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳ ಮೂಲಕ ರಾಜ್ಯ ಹೆದ್ದಾರಿಗಳು ಮತ್ತು ಜಿಲ್ಲಾ ರಸ್ತೆಗಳ ಅಭಿವೃದ್ಧಿಯನ್ನು ಕೈಗೊಳ್ಳುವ ಮೂಲಕ ಸುರಕ್ಷಿತ ಮತ್ತು ವಾಹನಗಳ ಸುಲಭ ಸಂಚಾರವನ್ನು ಒದಗಿಸಲು ಉತ್ತಮ ರಸ್ತೆ ಜಾಲವನ್ನು ಅಭಿವೃದ್ಧಿಪಡಿಸಲು ಸರ್ಕಾರವು ಬದ್ಧವಾಗಿದ್ದು, ರೂ.5140 ಕೋಟಿ ಮೊತ್ತದ ಮಂಜೂರಾತಿಯನ್ನು ನೀಡಲಾಗಿದೆ. ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಜನರಿಗೆ ಸಂಪರ್ಕ ಯೋಜನೆಯಡಿ ಕಲ್ಪಿಸಲು “ಗ್ರಾಮಬಂಧು ಸೇತು” 1411 ಸಂಕಗಳ ಸೇತುವೆ ನಿರ್ಮಾಣವನ್ನು ಕೈಗೊಳ್ಳಲಾಗಿದೆ. 90 ಕೋಟಿ ರೂಗಳ ಮೊತ್ತದ ವೆಚ್ಚದಲ್ಲಿ 135 ಸೇತುವೆಗಳ ನಿರ್ಮಾಣ ಪೂರ್ಣಗೊಂಡಿದೆ. “ರಸ್ತೆ ಸುರಕ್ಷತಾ ಕಾರ್ಯಕ್ರಮ ಯೋಜನೆಯ ಅಡಿಯಲ್ಲಿ ರಸ್ತೆ ಅಪಘಾತಗಳನ್ನು ಕಡಿಮೆ ಮಾಡಲು165 ಕೋಟಿ ರೂಗಳ ಮೊತ್ತದಲ್ಲಿ ರಸ್ತೆ ಸುರಕ್ಷತಾ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ.

ರಾಷ್ಟ್ರೀಯ ಯುವ ನೀತಿ ಪ್ರಕಟ
26ನೇ ರಾಷ್ಟ್ರೀಯ ಯುವಜನೋತ್ಸವವನ್ನು ಹುಬ್ಬಳ್ಳಿ-ಧಾರವಾಡದಲ್ಲಿ 12-01-2023 ರಿಂದ 16-01-2023 ರವರೆಗೆ ಯಶಸ್ವಿಯಾಗಿ ಆಯೋಜಿಸಲಾಗಿದ್ದು, ಭಾರತದ ಮಾನ್ಯ ಪ್ರಧಾನ ಮಂತ್ರಿಗಳು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. 28 ರಾಜ್ಯಗಳು ಮತ್ತು 8 ಕೇಂದ್ರಾಡಳಿತ ಪ್ರದೇಶಗಳಿಂದ ಸುಮಾರು 7500 ಕ್ಕೂ ಹೆಚ್ಚು ಯುವ ಪ್ರತಿನಿಧಿಗಳು ಭಾಗವಹಿಸಿದ್ದರು. “ಯುವ ಅಭಿವೃದ್ಧಿ ಮತ್ತು ಅಭಿವೃದ್ಧಿಗಾಗಿ ಯುವ” ಯುವ ನೀತಿಯನ್ನು ಪ್ರಾರಂಭಿಸಲಾಗಿದೆ. ಸ್ವಾಮಿ ವಿವೇಕಾನಂದ ಯುವಶಕ್ತಿ ಸಂಘ ಕಾರ್ಯಕ್ರಮವನ್ನು ಗ್ರಾಮೀಣ ಪ್ರದೇಶದ ಸೂಕ್ಷ್ಮ ಉದ್ಯಮಗಳನ್ನು ಬೆಂಬಲಿಸಲು ಪ್ರಾರಂಭಿಸಲಾಗಿದೆ. ಸುಮಾರು 5.00 ಲಕ್ಷ ಯುವ ಜನರು ಇದರ ಪ್ರಯೋಜನ ಪಡೆಯುವ ನಿರೀಕ್ಷೆಯಿದೆ.

ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಅಡಿಯಲ್ಲಿನ 19 ವಿವಿಧ ನಿಗಮಗಳಿಗೆ 857.75 ಕೋಟಿ ರೂ. ಗಳ ಹೆಚ್ಚುವರಿ ಅನುದಾನವನ್ನು ಹಂಚಿಕೆ ಮಾಡಲಾಗಿದೆ. ಇದು ಹೆಚ್ಚಿನ ಯುವಜನತೆಗೆ ಅವರ ಶಿಕ್ಷಣ ಮತ್ತು ಉದ್ಯೋಗದಲ್ಲಿ ಸಹಾಯ ಮಾಡುತ್ತದೆ.

ಅಮೃತ ಜ್ಯೋತಿ ಯೋಜನೆಯಡಿ ಬಿಪಿಎಲ್ ಕಾರ್ಡ್ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ ದಿನಾಂಕ:01-05-2022 ರಿಂದ ಅನ್ವಯಿಸುವಂತೆ ಮಾಸಿಕ 75 ಯೂನಿಟ್ ರವರೆಗೆ ಉಚಿತ ವಿದ್ಯುತ್ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಸಣ್ಣ ಮತ್ತು ಮಧ್ಯಮ ಕಾಫಿ ಬೆಳೆಗಾರರ 10 ಹೆಚ್.ಪಿ ವರೆಗಿನ ನೀರಾವರಿ ವಿದ್ಯುತ್ ಪಂಪ್ ಸೆಟ್ ಸ್ಥಾವರಗಳ ವಿದ್ಯುತ್ ಶುಲ್ಕವನ್ನು ಫಲಾನುಭವಿಗಳಿಗೆ DBT ವ್ಯವಸ್ಥೆಯಡಿ ಮರುಪಾವತಿಸಲಾಗುತ್ತಿದೆ.

ರಾಜ್ಯಪಾಲರಿಗೆ ವಂದನೆ ಸಲ್ಲಿಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

2021-22ನೇ ಸಾಲಿನಲ್ಲಿ ರಾಜ್ಯದ ರೈತರಿಂದ 2.1 ಲಕ್ಷ ಮೆಟ್ರಿಕ್ ಟನ್ ಭತ್ತ, 4.4 ಲಕ್ಷ ಮೆಟ್ರಿಕ್ ಟನ್ ರಾಗಿ ಮತ್ತು 1 ಲಕ್ಷ ಮೆಟ್ರಿಕ್ ಟನ್ ಬಿಳಿ ಜೋಳವನ್ನು ಕನಿಷ್ಠ ಬೆಂಬಲ ಯೋಜನೆಯಡಿ ಖರೀದಿಸಲಾಗಿದೆ. ಈ ಆಹಾರ ಧಾನ್ಯಗಳನ್ನು ಆದ್ಯತಾ ಮತ್ತು ಅಂತ್ಯೋದಯ ಪಡಿತರ ಚೀಟಿಗಳ ಫಲಾನುಭವಿಗಳಿಗೆ ವಿತರಿಸಲಾಗಿದೆ. 2022-23ನೇ ಸಾಲಿನಲ್ಲಿ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿಗಳನ್ನು ಪಡೆದಿರುವ ಅನರ್ಹರನ್ನು ಗುರುತಿಸಿ 2.76 ಲಕ್ಷ ಅನರ್ಹ ಆದ್ಯತಾ ಮತ್ತು ಅಂತ್ಯೋದಯ ಪಡಿತರ ಚೀಟಿಗಳನ್ನು ರದ್ದುಪಡಿಸಿ, 4.31 ಲಕ್ಷ ಹೊಸ ಆದ್ಯತೇತರ ಪಡಿತರ ಚೀಟಿಗಳನ್ನಾಗಿ ಪರಿವರ್ತಿಸಲಾಗಿದೆ.

ರಾಜ್ಯದಲ್ಲಿ ನೀರಿನ ಲಭ್ಯತೆಯನ್ನು ಸುಧಾರಿಸುವ ಉದ್ದೇಶದಿಂದ ಸಣ್ಣ ನೀರಾವರಿ ಇಲಾಖೆಯು ಹಲವಾರು ಕಾಮಗಾರಿಗಳನ್ನು ಅನುಷ್ಠಾನಗೊಳಿಸುತ್ತಿದೆ. ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ 97 ಟ್ಯಾಂಕ್‌ಗಳನ್ನು ವೃಷಭಾವತಿ ಕಣಿವೆಯ ದ್ವಿತೀಯ ಸಂಸ್ಕರಿಸಿದ ನೀರನ್ನು ಬಳಸಿ, ತುಂಬಿಸುವ ಕಾಮಗಾರಿ ಸೇರಿದೆ ಹಾಗೂ ಘಟಪ್ರಭಾ ನದಿಯಿಂದ ಏತ ನೀರಾವರಿ ಮೂಲಕ ನೀರನ್ನು ಐದು ಬ್ಯಾರೇಜ್‌ಗಳಲ್ಲಿ ತುಂಬಿಸುವ ಕಾಮಗಾರಿಗೆ ಮಂಜೂರಾತಿ ನೀಡಲಾಗಿದೆ.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದ ದೇಶದ ಮೊದಲ ರಾಜ್ಯ ಕರ್ನಾಟಕ. ರಾಜ್ಯದಲ್ಲಿ ಚಾಮರಾಜನಗರ, ಕೊಡಗು, ಬೀದರ್, ಹಾವೇರಿ, ಕೊಪ್ಪಳ ಬಾಗಲಕೋಟೆ ಮತ್ತು ಹಾಸನ ಸೇರಿದಂತೆ ಏಳು ಹೊಸ ಸ್ವಾಯತ್ತ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವ ಪ್ರಕ್ರಿಯೆಯಲ್ಲಿದ್ದೇವೆ. ಐಐಟಿ ಮಾದರಿಯಲ್ಲಿ ಏಳು ಎಂಜಿನಿಯರಿಂಗ್ ಕಾಲೇಜುಗಳನ್ನು ಕರ್ನಾಟಕ ಇನ್‌ಸ್ಟಿಟ್ಯೂಟ್ ಮೇಲ್ದರ್ಜೆಗೇರಿಸಲು ಕ್ರಮಕೈಗೊಳ್ಳಲಾಗಿದೆ. ಟೆಕ್ನಾಲಜಿಯಾಗಿ ಕರ್ನಾಟಕ ಸರ್ಕಾರವು ಐತಿಹಾಸಿಕ ನಿರ್ಣಯವನ್ನು ಕೈಗೊಂಡು, ರಾಜ್ಯ ಸೇವೆಗಳ ನೇಮಕಾತಿ ಮತ್ತು ಪದೋನ್ನತಿಗಾಗಿ ಇದ್ದ ಮೀಸಲಾತಿಯನ್ನು ಪರಿಶಿಷ್ಟ ಜಾತಿಗೆ ಶೇಕಡ 15 ರಿಂದ 17 ಕ್ಕೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇಕಡ 3 ರಿಂದ 7ಕ್ಕೆ ಹೆಚ್ಚಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿರುವ ಎಲ್ಲಾ ಅಭಿವೃದ್ಧಿ ನಿಗಮಗಳ ಸ್ವಯಂ ಉದ್ಯೋಗ ಮತ್ತು ಇತರೆ ಕಾರ್ಯಕ್ರಮಗಳಲ್ಲಿನ ಗುರಿಯಲ್ಲಿ ಎಸ್.ಸಿ / ಎಸ್.ಟಿ ಮಹಿಳೆಯರಿಗೆ .25 ರಷ್ಯನ್ನು ಕಾಯ್ದಿರಿಸಲು ಕ್ರಮವಹಿಸಲಾಗುತ್ತಿದೆ. ಪುಸಕ್ತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ 1.89 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗಿದೆ. ಎಲ್ಲಾ ಸಮುದಾಯಗಳ ವಿದ್ಯಾರ್ಥಿಗಳಿಗೆ ಉತ್ತಮ ವಾತಾವರಣ ನಿರ್ಮಿಸಲು, ರಾಜ್ಯದ ಎಲ್ಲಾ ಐದು ಶೈಕ್ಷಣಿಕ ವಲಯಗಳಲ್ಲಿ ತಲಾ 1,000 ವಿದ್ಯಾರ್ಥಿಗಳ ಸಾಮರ್ಥ್ಯದ ಪಂಡಿತ್‌ ದೀನದಯಾಳ್ ಉಪಾಧ್ಯಾಯ ಸೌಹಾರ್ದ ವಸತಿ ನಿಲಯಗಳನ್ನು ನಿರ್ಮಿಸಲಾಗುತ್ತಿದೆ. ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 100 ಅಂಬೇಡ್ಕರ್ ವಸತಿ ನಿಲಯಗಳು ಮತ್ತು ಹಿಂದುಳಿದ ವರ್ಗಗಳಿಗೆ 50 ಕನಕದಾಸ ವಸತಿ ನಿಲಯಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಬಡ ಎಸ್‌ಸಿ/ಎಸ್‌ಟಿ ಕುಟುಂಬಗಳಿಗೆ ಭೂಮಿ ಒದಗಿಸುವ “ಭೂ ಒಡೆತನ” ಯೋಜನೆಯ ಘ0 ಕ ವೆಚ್ಚವನ್ನು ಪ್ರತಿ ಎಕರೆಗೆ 15.00 ಲಕ್ಷ ರೂ.ಗಳಿಂದ 20.00 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ.

ಪ.ಜಾ / ಪ.ಪಂಗಡದವರಿಗೆ ಸ್ವಯಂ ಉದ್ಯೋಗ ಯೋಜನೆಯಡಿ ಸಹಾಯಧನವನ್ನು ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಪ.ಜಾ / ಪ.ಪಂಗಡದವರಿಗೆ ವಿವಿಧ ವಸತಿ ಯೋಜನೆಗಳಡಿ ನೀಡಲಾಗುತ್ತಿದ್ದ ಸಹಾಯಧನವನ್ನು 2.00 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಪೌರಕಾರ್ಮಿಕರ ಬಹುಕಾಲದ ಬೇಡಿಕೆಯಂತೆ ನಗರ ಸ್ಥಳೀಯ ಸಂಸ್ಥೆಗಳ ನೇರ ವೇತನದಲ್ಲಿರುವ 11,133ಕ್ಕೂ ಹೆಚ್ಚು ಪೌರ ಕಾರ್ಮಿಕರನ್ನು ಪೌರಾಡಳಿತ ಸೇವೆಗೆ ಒಳಪಡಿಸಲಾಗುತ್ತಿದೆ.

ಸೇವಾ ಸಿಂಧು ಯೋಜನೆಗೆ ಪ್ರಧಾನ ಮಂತ್ರಿ ಪ್ರಶಸ್ತಿ

ಗ್ರಾಮೀಣ ಭಾಗದ ನಾಗರಿಕರಿಗೆ ತಮ್ಮ ಗ್ರಾಮದಲ್ಲಿಯೇ ಎಲ್ಲಾ ಇಲಾಖೆಗಳ ವಿವಿಧ ಸೇವೆಗಳನ್ನು ಒಂದೇ ಸೂರಿನಡಿ ನೀಡುವ ಉದ್ದೇಶದಿಂದ ಸರ್ಕಾರವು “ಗ್ರಾಮ್ ಒನ್ ಪ್ರಾಜೆಕ್ಟ್ ಅಡಿಯಲ್ಲಿ, 31 ಜಿಲ್ಲೆಗಳಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 80 ಇಲಾಖೆಗಳ 850 ಸರ್ಕಾರಿ ಸೇವೆಗಳನ್ನು ನಾಗರಿಕರಿಗೆ ಒದಗಿಸುತ್ತಿರುವ ಸೇವಾ ಸಿಂಧು ಯೋಜನೆಗೆ ಪ್ರಧಾನ ಮಂತ್ರಿ ಪ್ರಶಸ್ತಿ ನೀಡಲಾಗಿದೆ.

FRUITS (Farmers Registration and Unified Beneficiary Information system) – (e-Saala) ಯೋಜನೆಯು ಕೃಷಿ ಸಾಲ ನೀಡುವ ಪ್ರಕ್ರಿಯೆಯನ್ನು ಸರಳಗೊಳಿಸಿರುವುದನ್ನು ಗುರುತಿಸಲಾಗಿದೆ ಮತ್ತು ಇತರ ರಾಜ್ಯಗಳಲ್ಲಿ FRUITS ವ್ಯವಸ್ಥೆಯ ಅನುಷ್ಠಾನಕ್ಕಾಗಿ ಶಿಫಾರಸ್ಸು ಮಾಡಲಾಗಿದೆ. 2022 ರಲ್ಲಿ ನಡೆದ ಇ-ಆಡಳಿತದ ರಾಷ್ಟ್ರೀಯ ಸಮ್ಮೇಳನದಲ್ಲಿ ಕುಟುಂಬ ಯೋಜನೆಯನ್ನು ಗುರುತಿಸಿ ರಜತ ಪದಕವನ್ನು ನೀಡಲಾಗಿದೆ.

ಗೌರವಯುತ ಮತ್ತು ವಿಕಸಿತ ಭಾರತದ ನಿರ್ಮಾಣದ ಮುಂದಿನ 25 ವರ್ಷಗಳ ಅಮೃತ ಕಾಲವು ನಮ್ಮ ದೇಶವನ್ನು ಪ್ರಪಂಚದ ಕೀರೀಟ ಪ್ರಾಯವನ್ನಾಗಿಸುವ ಕರ್ತವ್ಯ ಕಾಲವಾಗಿದೆ. ನೀವೆಲ್ಲರೂ ಸಾರ್ವಜನಿಕ ಜೀವನದಲ್ಲಿ, ಸಕ್ರಿಯ ಪಾತ್ರವನ್ನು ನಿಭಾಯಿಸುವುದಲ್ಲದೆ, ರಾಷ್ಟ್ರದ ಪ್ರಗತಿಗೆ ಎಲ್ಲರೂ ತಮ್ಮ ಕೊಡುಗೆಯನ್ನು ನೀಡಲು ಪ್ರೇರೇಪಣೆ ನೀಡಲಿದೆ.

ಇದನ್ನೂ ಓದಿ | Republic day 2023 : ಚಾಮರಾಜಪೇಟೆ ಮೈದಾನದಲ್ಲಿ ನಡೆಯಿತು ಗಣರಾಜ್ಯೋತ್ಸವ, ಇನ್ನು ಎಲ್ಲ ಹಬ್ಬವೂ ನಡೀತದೆ ಅಂದ್ರು ಪಿ.ಸಿ. ಮೋಹನ್‌

Exit mobile version