Site icon Vistara News

ಕಾವೇರಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ

ಕಾವೇರಿ

ಮಂಡ್ಯ: ಕಾವೇರಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಪ್ರವಾಸಿಗನನ್ನು ಶ್ರೀರಂಗಪಟ್ಟಣ ತಾಲೂಕಿನ ಪ್ರವಾಸಿ ತಾಣವಾದ ಬಲಮುರಿಯಲ್ಲಿ ರಕ್ಷಣೆ ಮಾಡಲಾಗಿದೆ.‌

ಭಾನುವಾರ ಕೆಆರ್‌ಎಸ್ ಡ್ಯಾಂನಿಂದ 25 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗಿತ್ತು. ಇದರ ಪರಿಣಾಮ ನದಿಯಲ್ಲಿ ರಭಸವಾಗಿ ನೀರು ಹರಿಯುತ್ತಿತ್ತು. ಈ ವೇಳೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನನ್ನು ಸ್ಥಳೀಯ ಯುವಕ ಪ್ರಶಾಂತ್ ಹಾಗೂ‌ ಸ್ನೇಹಿತರು ಹಗ್ಗದ ಸಹಾಯದಿಂದ ರಕ್ಷಣೆ ಮಾಡಿದ್ದಾರೆ.

ಕೊಚ್ಚಿ ಹೋಗುತ್ತಿದ್ದ ಪ್ರವಾಸಿಗನನ್ನು ಪ್ರಾಣದ ಹಂಗು ತೊರೆದು ರಕ್ಷಣೆ ಮಾಡಿರುವ ಯುವಕರ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ, ಯುವಕ ಯಾರು? ಯಾವ ಊರಿನವನು ಎಂಬ ಬಗ್ಗೆ ವಿವರ ಲಭ್ಯವಾಗಿಲ್ಲ.

ಇದನ್ನೂ ಓದಿ | ದೇಶಾದ್ಯಂತ ಮಳೆಯ ಆರ್ಭಟ: ಗುಜರಾತ್‌ ತತ್ತರ, ಮಹಾರಾಷ್ಟ್ರದಲ್ಲಿ 9ಮಂದಿ ಸಾವು

Exit mobile version