Electricity Bill: ಹಿಂಬಾಕಿ ಜತೆಗೆ ಪರಿಷ್ಕೃತ ಶುಲ್ಕ ಸಂಗ್ರಹ; ವಿದ್ಯುತ್‌ ಬಿಲ್‌ ಹೆಚ್ಚಳಕ್ಕೆ ಬೆಸ್ಕಾಂ ಸ್ಪಷ್ಟನೆ - Vistara News

ಕರ್ನಾಟಕ

Electricity Bill: ಹಿಂಬಾಕಿ ಜತೆಗೆ ಪರಿಷ್ಕೃತ ಶುಲ್ಕ ಸಂಗ್ರಹ; ವಿದ್ಯುತ್‌ ಬಿಲ್‌ ಹೆಚ್ಚಳಕ್ಕೆ ಬೆಸ್ಕಾಂ ಸ್ಪಷ್ಟನೆ

Electricity Bill: ಕೆಇಆರ್‌ಸಿ ಆದೇಶದ ಪ್ರಕಾರ 2 ಸ್ಲ್ಯಾಬ್‌ ಜತೆಗೆ ಮೇ ತಿಂಗಳ ವಿದ್ಯುತ್ ಬಿಲ್‌ನಲ್ಲಿ ಪರಿಷ್ಕೃತ ವಿದ್ಯುತ್ ಶುಲ್ಕ ನಮೂದಿಸಲಾಗಿದೆ ಎಂದು ಬೆಸ್ಕಾಂ ಸ್ಪಷ್ಟನೆ ನೀಡಿದೆ.

VISTARANEWS.COM


on

Bescom
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಕಳೆದ ಮೇ 12 ರಂದು ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ 70 ಪೈಸೆ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಜೂನ್ ತಿಂಗಳಲ್ಲಿ ನೀಡುವ ಮೇ ತಿಂಗಳ ವಿದ್ಯುತ್ ಬಳಕೆಯ ಬಿಲ್‌ನಲ್ಲಿ ಪರಿಷ್ಕೃತ ವಿದ್ಯುತ್ ಶುಲ್ಕ (Electricity Bill) ನಮೂದಿಸಲಾಗಿದೆ ಎಂದು ಬೆಸ್ಕಾಂ ತಿಳಿಸಿದೆ.

ವಿದ್ಯುತ್‌ ಬಿಲ್‌ನಲ್ಲಿ ಭಾರಿ ಏರಿಕೆಯನ್ನು ಕಂಡು ಗ್ರಾಹಕರು ಆಕ್ರೋಶ ಹೊರಹಾಕುತ್ತಿರುವ ಹಿನ್ನೆಲೆಯಲ್ಲಿ ಬೆಸ್ಕಾಂ ಸ್ಪಷ್ಟನೆ ನೀಡಿದೆ. ವಿದ್ಯುತ್ ದರ ಪರಿಷ್ಕರಣೆ ಆದೇಶ ಏಪ್ರಿಲ್‌ನಿಂದ ಪೂರ್ವನ್ವಯವಾಗುವುದರಿಂದ ಬಿಲ್‌ನಲ್ಲಿ ಏಪ್ರಿಲ್ ತಿಂಗಳ ಹಿಂಬಾಕಿಯನ್ನೂ ನೀಡಲಾಗಿದೆ. ಹಾಗೆಯೇ ಕೆಇಆರ್‌ಸಿ ಆದೇಶದ ಪ್ರಕಾರ ಎರಡು ಶ್ರೇಣಿಗಳಲ್ಲಿ ವಿದ್ಯುತ್ ಶುಲ್ಕ ಸಂಗ್ರಹಿಸಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದೆ.

ಗ್ರಾಹಕರು ಬಳಸುವ ಮೊದಲ 100 ಯೂನಿಟ್ ವಿದ್ಯುತ್‌ಗೆ ಪ್ರತಿ ಯೂನಿಟ್ ದರ 4.75 ರೂ. ವಿಧಿಸಲಾಗಿದೆ. 100 ಯೂನಿಟ್ ಮೀರಿದರೆ ಬಳಸಿದ ಅಷ್ಟೂ ಯೂನಿಟ್‌ಗೆ ಎರಡನೇ ಶ್ರೇಣಿ ದರ (ಸ್ಲ್ಯಾಬ್‌) ಪ್ರತಿ ಯೂನಿಟ್‌ 7 ರೂ. ಅನ್ವಯವಾಗಲಿದೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ | Free Bus Service : ವಿದ್ಯುತ್‌ ದರ ಏರಿಕೆಯಲ್ಲಿ ಕಾಂಗ್ರೆಸ್ ಸರ್ಕಾರದ ಪಾತ್ರವಿಲ್ಲ : ಸಿಎಂ ಸಿದ್ದರಾಮಯ್ಯ

ಈ ಬಗ್ಗೆ ಪ್ರತಿಕ್ರಿಯಿಸಿರುವ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಅವರು, ಈ ಮೊದಲು ಮೂರು ಶ್ರೇಣಿ ದರಗಳಲ್ಲಿ (Telescopic) ಸಂಗ್ರಹಿಲಾಗುತ್ತಿತ್ತು. (ಮೊದಲ 50 ಯೂನಿಟ್‌ಗೆ 4.15 ರೂ., ನಂತರದ 50 ಯೂನಿಟ್ ಗೆ 5.6 ರೂ ಹಾಗೂ 100 ಯೂನಿಟ್ ಮೀರಿದರೆ 7.15 ರೂ. ಸಂಗ್ರಹಿಸಲಾಗುತ್ತಿತ್ತು) ಇದೀಗ ಎರಡು ಶ್ರೇಣಿ ದರಗಳಲ್ಲಿ (Non-Telescopic) ಸಂಗ್ರಹಿಸಲು ಕೆಇಆರ್‌ಸಿ ಮೇ 12 ರಂದು ಹೊರಡಿಸಿರುವ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ ಎಂದು ಹೇಳಿದ್ದಾರೆ.

ನಿಗದಿತ ಶುಲ್ಕ ಪರಿಷ್ಕರಣೆ

ಕೆಇಆರ್‌ಸಿ ದರ ಪರಿಷ್ಕರಣೆ ಆದೇಶದಲ್ಲಿ ನಿಗದಿತ ಶುಲ್ಕದಲ್ಲಿ 1 ರಿಂದ 50 ಕಿಲೋ ವ್ಯಾಟ್ ವಿದ್ಯುತ್ ಮಂಜೂರಾತಿ ಲೋಡ್‌ಗೆ 110 ರೂ. ಮತ್ತು 50 ಕೆವಿಗೆ ಮೇಲ್ಪಟ್ಟ ವಿದ್ಯುತ್ ಮುಂಜೂರಾತಿ ಲೋಡ್‌ಗೆ 210 ರೂ. ಬರಲಿದೆ.

ಕೆಇಆರ್‌ಸಿ ದರ ಪರಿಷ್ಕರಣೆ ನೀತಿ ಹೇಗೆ?

ಕೆಇಆರ್‌ಸಿ ದರ ನಿಯಂತ್ರಣ ಅಧಿಸೂಚನೆ 2006ರ ಪ್ರಕಾರ ಎಲ್ಲಾ ಎಸ್ಕಾಂಗಳೂ ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ವಿದ್ಯುತ್ ದರ ಪರಿಷ್ಕರಣೆಗೆ ಕೆಇಆರ್‌ಸಿ ಮುಂದೆ ಅರ್ಜಿ ಸಲ್ಲಿಸಬೇಕು. ಅರ್ಜಿಗೆ ಆಕ್ಷೇಪಣೆಗಳನ್ನು ಆಹ್ವಾನಿಸಿ ಎಸ್ಕಾಂಗಳ ಮನವಿಯನ್ನು ಪರಿಗಣಿಸಿ ಕೆಇಆರ್‌ಸಿ ಪ್ರತಿ ವರ್ಷ ಮಾರ್ಚ್ ಅಥವಾ ಏಪ್ರಿಲ್ ತಿಂಗಳಲ್ಲಿ ದರ ಪರಿಷ್ಕರಣೆ ಆದೇಶ ನೀಡುತ್ತದೆ. ಇದು ಕೆಇಆರ್‌ಸಿಯ ಸಾಮಾನ್ಯ ನಡಾವಳಿಯಾಗಿದ್ದು, ಎಸ್ಕಾಂಗಳು ದರ ಪರಿಷ್ಕರಣೆಗೆ ಅರ್ಜಿ ಸಲ್ಲಿಸದಿದ್ದ ಪಕ್ಷದಲ್ಲಿ ಕೆಇಆರ್‌ಸಿ ಸ್ವಯಂಪ್ರೇರಿತವಾಗಿ ವಿದ್ಯುತ್ ದರ ಏರಿಕೆ ಆದೇಶ ನೀಡಲು ಕಾನೂನಿನಲ್ಲಿ ಅವಕಾಶವಿದೆ ಎಂದು ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಈ ವರ್ಷದ ಮಾರ್ಚ್ / ಏಪ್ರಿಲ್‌ನಲ್ಲಿ ಜಾರಿಗೆ ಬರಬೇಕಿದ್ದ ದರ ಪರಿಷ್ಕರಣೆ ಆದೇಶವನ್ನು 2023ರ ಮಾರ್ಚ್ 29ರಂದು ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದ ಹಿನ್ನೆಲೆಯಲ್ಲಿ ಕೆಇಆರ್‌ಸಿ ತಡೆ ಹಿಡಿದಿತ್ತು, ಚುನಾವಣೆ ಮುಗಿದ ತಕ್ಷಣ ಮೇ 12ರಂದು ದರ ಪರಿಷ್ಕರಣೆ ಮಾಡಿ ಏಪ್ರಿಲ್‌ನಿಂದ ಪೂರ್ವಾನ್ವಯವಾಗುವಂತೆ ಜಾರಿಗೊಳಿಸಿ ಕೆಇಆರ್‌ಸಿ ಆದೇಶ ನೀಡಿತ್ತು. 2022ರ ನವೆಂಬರ್ನಲ್ಲಿ ವಿದ್ಯುತ್ ದರ ಪರಿಷ್ಕರಣೆಗೆ ನೀಡಿದ್ದ ಮನವಿಯನ್ನು ಪುರಸ್ಕರಿಸಿ ಏಪ್ರಿಲ್ ತಿಂಗಳಿಂದ ಅನ್ವಯವಾಗುವಂತೆ ಪ್ರತಿ ಯೂನಿಟ್‌ಗೆ 70 ಪೈಸೆಯಷ್ಟು ಹೆಚ್ಚಳ ಮಾಡಿದ ಮೊತ್ತವನ್ನು ಜೂನ್ ತಿಂಗಳಲ್ಲಿ ಸಂಗ್ರಹಿಸಲಾಗುತ್ತಿದೆ ಎಂದು ಬೆಸ್ಕಾಂ ಎಂಡಿ ಹೇಳಿದ್ದಾರೆ.

ಇದನ್ನೂ ಓದಿ | Free Bus Service: ಮಹಿಳೆಯರಿಗೆ ‘ಶಕ್ತಿ’ ನೀಡಿದ ಸಿದ್ದರಾಮಯ್ಯ; ಚಾಲನೆಗೊಂಡ ಮೊದಲ ಗ್ಯಾರಂಟಿ!

ವಿದ್ಯುತ್ ದರ ಪರಿಷ್ಕರಣೆಯನ್ನು 2020ರ ನವೆಂಬರ್ 4ರಂದು ಪ್ರತಿ ಯೂನಿಟ್‌ಗೆ 40 ಪೈಸೆ, 2021ರ ಜೂನ್ 6ರಂದು ಪ್ರತಿ ಯೂನಿಟ್‌ಗೆ 30 ಪೈಸೆ ಹಾಗೂ 2022ರ ಏಪ್ರಿಲ್ 4ರಂದು ಪ್ರತಿ ಯೂನಿಟ್‌ ಗೆ 35 ಪೈಸೆಗಳಷ್ಟು ಹೆಚ್ಚಳ ಮಾಡಿ ಕೆಇಆರ್‌ಸಿ ಆದೇಶ ಹೊರಡಿಸಿತ್ತು ಎಂದು ತಿಳಿಸಿದ್ದಾರೆ.

ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ ಶುಲ್ಕ (FPPCA):

ಕಾಲಕಾಲಕ್ಕೆ ಕೆಇಆರ್‌ಸಿ ಜಾರಿಗೊಳಿಸುವ ವಿದ್ಯುತ್ ದರ ಪರಿಷ್ಕರಣೆಗೂ ಮತ್ತು ಎಸ್ಕಾಂಗಳು ಜನರೇಟರ್‌ಗಳಿಂದ ಖರೀದಿಸುವ ವಿದ್ಯುತ್ ಮೇಲಿನ ಇಂಧನ ವೆಚ್ಚದಲ್ಲಿನ ಬೆಲೆಯಲ್ಲಿ ವ್ಯತ್ಯಾಸ ಉಂಟಾಗುವುದಿರಂದ, ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ ಶುಲ್ಕವನ್ನು ವಿಧಿಸಲು ಕೆಇಆರ್‌ಸಿ ಎಸ್ಕಾಂಗಳಿಗೆ ಅನುಮತಿ ನೀಡುತ್ತದೆ.

ಕೇಂದ್ರ ಸರ್ಕಾರ 2005ರ ವಿದ್ಯುಚ್ಛಕ್ತಿ ನಿಯಮಗಳಿಗೆ 2002ರ ಡಿಸೆಂಬರ್ 29ರಂದು ತಿದ್ದುಪಡಿ ತಂದು ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚವನ್ನು ಸಮಯಕ್ಕೆ ಸರಿಯಾಗಿ ಸಂಗ್ರಹಿಸಲು ಸೂಚಿಸಿತ್ತು. ಈ ತಿದ್ದುಪಡಿ ಅನ್ವಯ ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚವನ್ನು ಪ್ರತಿ ತಿಂಗಳು ಗ್ರಾಹಕರಿಂದ ಸಂಗ್ರಹಿಸಲು ಕೆಇಆರ್‌ಸಿ 2023ರ ಫೆಬ್ರವರಿ 23ರಂದು ಅಧಿಸೂಚನೆ ಹೊರಡಿಸಿತ್ತು. ಹಾಗಾಗಿ ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚವನ್ನು ಬೆಸ್ಕಾಂ ಗ್ರಾಹಕರಿಗೆ ಪ್ರತಿ ಯೂನಿಟ್‌ಗೆ 59 ಪೈಸೆಯಷ್ಟು ವಿಧಿಸಲು ಕೆಇಆರ್‌ಸಿ ಅನುಮತಿ ನೀಡಿದ್ದು, ಈ ಮೊತ್ತವನ್ನು ಜೂನ್ ತಿಂಗಳಲ್ಲಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆ ಎಂದು ಬೆಸ್ಕಾಂ ಎಂಡಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಗಲಕೋಟೆ

Love Propose : I Love You ಮೆಸೇಜ್‌ ಕಳಿಸಿದ ಮುಸ್ಲಿಂ ಯುವಕನಿಗೆ ವಿವಾಹಿತೆಯಿಂದ ಚಪ್ಪಲಿ ಏಟು!

Love Propose : ಹಿಂದು ಮಹಿಳೆಗೆ ಅನ್ಯಕೋಮಿನ ಯುವಕನೊಬ್ಬ ಪ್ರೀತಿಸುವಂತೆ ಪೀಡಿಸುತ್ತಿದ್ದ. ಅದ್ಹೇಗೋ ಮಹಿಳೆಯ ಫೋನ್‌ ನಂಬರ್‌ ಕಲೆಹಾಕಿದ ಆತ ಐ ಲವ್ ಯೂ ಎಂದು ಮೆಸೇಜ್‌ ಹಾಕಿದ್ದ. ಇದರಿಂದ ಸಿಟ್ಟಾದ ಮಹಿಳೆ ಚಪ್ಪಲಿ ಏಟು ಕೊಟ್ಟಿದ್ದಾಳೆ.

VISTARANEWS.COM


on

By

Love Propose
Koo

ಬಾಗಲಕೋಟೆ: ಐ ಲವ್ ಯೂ ಎಂದು (Love Propose) ಮೆಸೇಜ್‌ ಹಾಕಿದ ಮುಸ್ಲಿಂ ಯುವಕನಿಗೆ ಮಹಿಳೆಯೊಬ್ಬರು ಚಪ್ಪಲಿ ಏಟು ಕೊಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ಇಳಕಲ್‌ ನಗರದಲ್ಲಿ ಘಟನೆ ನಡೆದಿದೆ. ಯಾಸಿನ್ ಎಂಬಾತ ನಿವೇದಿತಾ ಎಂಬಾಕೆ ಪ್ರೀತಿಸುವಂತೆ ವಾಟ್ಸ್‌ ಆ್ಯಪ್‌ನಿಂದ ಪ್ರೇಮ ನಿವೇದನೆಯನ್ನು ಮಾಡಿದ್ದ.

ನಿವೇದಿತಾ ಹಾಗೂ ಯಾಸಿನ್ ಇಬ್ಬರೂ ಸಹ ವಿವಾಹಿತರು. ಹೀಗಿದ್ದರೂ ಮದುವೆ ಆಗಿರುವ ಮಹಿಳೆಯ ಹಿಂದೆ ಬಿದ್ದ ಯಾಸಿನ್‌ ಪ್ರೀತಿಸುವಂತೆ ನಿವೇದಿತಾಳಿಗೆ ಮಸೇಜ್‌ ಮೂಲಕ ಹಿಂಸೆ ನೀಡುತ್ತಿದ್ದ. ಯಾಸಿನ್‌ ನಡೆಗೆ ರೋಸಿ ಹೋದ ನಿವೇದಿತಾ ಆತನ ಮನೆ ನುಗ್ಗಿ ಕುತ್ತಿಗೆ ಪಟ್ಟಿ ಹಿಡಿದು ಥಳಿಸಿ, ಚಪ್ಪಲಿ ಏಟು ನೀಡಿದ್ದಾರೆ.

ಇನ್ನೂ ನಿವೇದಿತಾ ಹಾಗೂ ಯಾಸಿನ್ ಇಬ್ಬರೂ ಕಾಂಗ್ರೆಸ್ ‌ಪಕ್ಷದ‌ಲ್ಲಿ ಕಾರ್ಯಕರ್ತರಾಗಿದ್ದು, ಪರಿಚಿತರೇ ಆಗಿದ್ದಾರೆ. ಇತ್ತೀಚೆಗೆ ಯಾಸಿನ್‌ ಪ್ರೀತಿ-ಪ್ರೇಮ ಎಂದು ಹಿಂದೆ ಬಿದ್ದು ಚಾಟಿಂಗ್ ಮಾಡುತ್ತಿದ್ದ. ಇದರಿಂದ ರೊಚ್ಚಿಗೆದ್ದ ನಿವೇದಿತಾ ಯಾಸೀನ್ ಮನೆಗೆ ನುಗ್ಗಿ ಚಪ್ಪಲಿ ಏಟು ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ ಸ್ಥಳೀಯರ ಮಧ್ಯಸ್ಥಿಕೆಯಿಂದ ಚಪ್ಪಲಿ‌ ಏಟಿನ ಪ್ರಸಂಗ ಬಗೆಹರಿದಿದೆ. ಇಲಕಲ್ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Deep fake Scam : ಸೆಲೆಬ್ರಿಟಿಗಳ ಬಳಿಕ ಈಗ ಬೆಂಗಳೂರು ಶಾಲಾ ವಿದ್ಯಾರ್ಥಿನಿಯರಿಗೆ ಡೀಪ್‌ಫೇಕ್‌ ಕಾಟ; ನಗ್ನ ಫೋಟೋ ವೈರಲ್

ಧ್ರುವ ಸರ್ಜಾ ಜತೆಗಿದ್ದ ಜಿಮ್ ಟ್ರೈನರ್ ಮೇಲೆ ಮಚ್ಚಿನಿಂದ‌ ಹಲ್ಲೆ?

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಧ್ರುವ ಸರ್ಜಾ (Dhruva Sarja) ಜತೆಗಿದ್ದ ಜಿಮ್ ಟ್ರೈನರ್ ಪ್ರಶಾಂತ್ ಮೇಲೆ ಅಟ್ಯಾಕ್ ಆಗಿದೆ ಎಂದು ವರದಿಯಾಗಿದೆ. ಭಾನುವಾರ (ಮೇ 26) ರಾತ್ರಿ ಬೆಂಗಳೂರಿನ ಕೆ ಆರ್ ರಸ್ತೆಯಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ. ಸ್ಥಳೀಯ ಹುಡುಗರ ಜತೆ ಗಲಾಟೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಘಟನೆಗೆ ಸಂಬಂಧಿಸಿದಂತೆ ಧ್ರುವ ಸರ್ಜಾ ಅವರು ಸ್ಪಷ್ಟನೆ ಕೊಡಬೇಕಿದೆ. ಸದ್ಯಕ್ಕೆ ಮಚ್ಚಿನಿಂದ‌ ಪ್ರಶಾಂತ್ ಮೇಲೆ ಹಲ್ಲೆ ಆಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವೈಯಕ್ತಿಕ ವಿಚಾರಕ್ಕೆ ಮಾತಿನ ಚಕಮಕಿ ನಡೆದು ಗಲಾಟೆ ಆಗಿದೆ ಎನ್ನಲಾಗಿದೆ. ಸಿಟ್ಟಿನಲ್ಲಿ ಮಚ್ಚಿನಿಂದ ಪ್ರಶಾಂತ್ ಮೇಲೆ ಸ್ಥಳೀಯ ಹುಡುಗರು ಹಲ್ಲೆ ಮಾಡಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಶಾಂತ್‌ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸಿನಿಮಾ ವಿಚಾರಕ್ಕೆ ಬಂದರೆ ಪ್ರೇಮ್‌ ಹಾಗೂ ಧ್ರುವ ಸರ್ಜಾ (Dhruva Sarja) ಈಗಾಗಲೇ ʻಕೆಡಿʼ ಸಿನಿಮಾ (KD movie) ಬಿಡುಗಡೆ ಯಾವಾಗ ಎಂಬುದನ್ನು ರಿವೀಲ್‌ ಮಾಡಿದ್ದಾರೆ. ಡಿಸೆಂಬರ್‌ನಲ್ಲಿ ಕೆಡಿ ಸಿನಿಮಾ ತೆರೆ ಕಾಣುತ್ತಿದೆ. ಚಿತ್ರರಂಗಕ್ಕೆ ಬಂದ 12 ವರ್ಷಗಳಲ್ಲಿ ಧ್ರುವ ಸರ್ಜಾ 4 ಸಿನಿಮಾಗಳಲ್ಲಿ ಮಾತ್ರ ನಟಿಸಿದ್ದಾರೆ ಎನ್ನುವ ಬೇಸರ ಕೆಲವರದ್ದು. ಇದೀಗ ಹೊಸ ಸುದ್ದಿಯೊಂದು ವೈರಲ್‌ ಆಗುತ್ತಿದೆ. ಬಾಲಿವುಡ್‌ಗೆ ಧ್ರುವ ಸರ್ಜಾ ಎಂಟ್ರಿ ಕೊಡುತ್ತಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Dhruva Sarja: ಬಾಲಿವುಡ್‌ ಸಿನಿಮಾಗೆ ಎಂಟ್ರಿ ಕೊಡ್ತಾರಾ ಧ್ರುವ ಸರ್ಜಾ? ಬಿಗ್‌ ಬಜೆಟ್‌ ಚಿತ್ರದಲ್ಲಿ ಸಹೋದರನ ಪಾತ್ರ?

ಬಹುನಿರೀಕ್ಷಿತ ‘ವಾರ್-2’ ಚಿತ್ರದಲ್ಲಿ ಕನ್ನಡದ ನಟ ಬಣ್ಣ ಹಚ್ಚುತ್ತಾರೆ ಎನ್ನಲಾಗುತ್ತಿದೆ. ತೆಲುಗು ಮಾಧ್ಯಮಗಳಲ್ಲಿ ಕೂಡ ಇಂತಹದೊಂದು ಸುದ್ದಿ ಹರಿದಾಡುತ್ತಿದೆ. ಜ್ಯೂ. ಎನ್‌ಟಿಆರ್ ಸಹೋದರನ ಪಾತ್ರದಲ್ಲಿ ಧ್ರುವ ನಟಿಸುತ್ತಾರೆ ಎಂದು ಎಂದು ವರದಿಯಾಗುತ್ತಿದೆ. ಧ್ರುವ ಸರ್ಜಾ ಈ ಚಿತ್ರದಲ್ಲಿ ನಟಿಸುತ್ತಾರೆ, ಆ ಮೂಲಕ ಬಾಲಿವುಡ್‌ಗೆ ಎಂಟ್ರಿ ಕೊಡುತ್ತಾರೆ ಎನ್ನುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ವರದಿಯ ಪ್ರಕಾರ, ಜ್ಯೂನಿಯರ್‌ ಎನ್‌ಟಿಆರ್‌ ವಿಲನ್‌ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬ್ರಹ್ಮಾಸ್ತ್ರ ಸಿನಿಮಾ ಬಳಿಕ ಆದಿತ್ಯ ಚೋಪ್ರಾ ಅವರು ಅಯನ್ ಮುಖರ್ಜಿ ಅವರ ನಿರ್ದೇಶಕ್ಕೆ ಮನಸೋತು, ಈ ಸಿನಿಮಾ ಮಾಡಲು ಅವಕಾಶ ನೀಡಿದ್ದಾರೆ ಎನ್ನಲಾಗಿದೆ.

ಸಿದ್ದಾರ್ಥ್ ಆನಂದ್ ಅವರು ‘ವಾರ್’ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಯಶಸ್ಸು ಕಂಡಿತು. ಈ ಚಿತ್ರದಲ್ಲಿ ಹೃತಿಕ್ ರೋಷನ್ ಹಾಗೂ ಟೈಗರ್ ಶ್ರಾಫ್ ನಟಿಸಿದ್ದರು. ಮೊದಲ ಪಾರ್ಟ್​​ನಲ್ಲಿ ಟೈಗರ್ ಶ್ರಾಫ್ ಪಾತ್ರ ಕೊನೆಗೊಂಡಿದೆ. ಹೀಗಾಗಿ ‘ವಾರ್-2’ ಚಿತ್ರದಲ್ಲಿ ಹೃತಿಕ್ ಮಾಡಿರುವ ಕಬೀರ್ ಪಾತ್ರ ಮುಂದುವರಿಯುತ್ತಿದೆ. ಜ್ಯೂನಿಯರ್‌ ಎನ್‌ಟಿಆರ್‌ ಅವರು ತಮ್ಮ ಮೊದಲ ಬಾಲಿವುಡ್​ ಚಿತ್ರಕ್ಕೆ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿರುವುದು ವಿಶೇಷ. ವಾರ್‌-2 ಪ್ಯಾನ್ ಇಂಡಿಯಾ ಚಲನಚಿತ್ರವಾಗಿದ್ದು, ಉತ್ತರ ಮತ್ತು ದಕ್ಷಿಣ ಭಾಗದ ಸೂಪರ್‌ಸ್ಟಾರ್‌ಗಳನ್ನು ಹೊಂದಿದೆ. ಕಿಯಾರಾ ಆಡ್ವಾಣಿ ಈ ಸಿನಿಮಾ ನಾಯಕಿ. ʼವಾರ್ 2ʼ 2025ರ ಆಗಸ್ಟ್ 14ರಂದು ಬಿಡುಗಡೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

BS Yediyurappa: ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು

BS Yediyurappa: ಉಸಿರಾಟ ಸಮಸ್ಯೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮಹಿಳೆ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ವಿರುದ್ಧ ನೀಡಿದ ದೂರಿನ ಮೇರೆಗೆ ಮಾರ್ಚ್‌ 14ರಂದು ಪೋಕ್ಸೊ ಪ್ರಕರಣ ದಾಖಲಾಗಿತ್ತು.

VISTARANEWS.COM


on

BS Yediyurappa
Koo

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್‌ ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ. ಉಸಿರಾಟದ ತೊಂದರೆಯಿಂದ ಹುಳಿಮಾವು ಬಳಿಯ ನ್ಯಾನೋ‌ ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಮಮತಾ ಮೃತ ಮಹಿಳೆ. ಉಸಿರಾಟ ಸಮಸ್ಯೆ ಸಂಬಂಧ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮಹಿಳೆಯ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಈ ಹಿಂದೆ ಲೈಂಗಿಕ ದೌರ್ಜನ್ಯ ಆಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಎಸ್‌ಐಟಿ ತನಿಖೆಗೆ ವಹಿಸುವಂತೆ ಸಹಕರಿಸಬೇಕು ಎಂದು ಮನವಿ ಮಾಡಲು 2024ರ ಫೆಬ್ರವರಿ 2ರಂದು ಯಡಿಯೂರಪ್ಪನವರ ಮನೆಗೆ ಸಂತ್ರಸ್ತ ಮಗಳ ಜತೆಗೆ ಮಹಿಳೆ ಹೋಗಿದ್ದರು. ಈ ವೇಳೆ ಯಡಿಯೂರಪ್ಪ ಅವರು ತಾಯಿ ಮತ್ತು ಮಗಳ ಜತೆ 9 ನಿಮಿಷಗಳ ಕಾಲ ಮಾತನಾಡಿದ್ದರು ಎನ್ನಲಾಗಿತ್ತು. ಆಗ ಅವರು ಬಾಲಕಿಗೆ ಮತ್ತು ಆಕೆಯ ತಾಯಿಗೆ ಸಾಂತ್ವನ ಹೇಳಿದ್ದರು ಎನ್ನಲಾಗಿತ್ತು. ಆದರೆ ಆ ಬಾಲಕಿಯ ತಾಯಿ ಕೆಲ ದಿನಗಳ ಬಳಿಕ ಯಡಿಯೂರಪ್ಪ ವಿರುದ್ಧವೇ ಆರೋಪ ಮಾಡಿದ್ದರು. ಆದರೆ ಈ ಆರೋಪವನ್ನು ಯಡಿಯೂರಪ್ಪ ಅವರು ಸ್ಪಷ್ಟವಾಗಿ ನಿರಾಕರಿಸಿದ್ದರು. ಈ ಆರೋಪ ದುರುದ್ದೇಶಪೂರಿತ ಎಂದು ಹೇಳಿದ್ದರು. ನಂತರ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು.

ಇದನ್ನೂ ಓದಿ | Road Accident: ಭೀಕರ ರಸ್ತೆ ಅಪಘಾತ; ಕೆಕೆಆರ್‌ಟಿಸಿ ಬಸ್‌ ಅಪ್ಪಳಿಸಿ 3 ಬೈಕ್‌ ಸವಾರರು ಬಲಿ

ಸೆಲೆಬ್ರಿಟಿಗಳ ಬಳಿಕ ಈಗ ಬೆಂಗಳೂರು ಶಾಲಾ ವಿದ್ಯಾರ್ಥಿನಿಯರಿಗೆ ಡೀಪ್‌ಫೇಕ್‌ ಕಾಟ; ನಗ್ನ ಫೋಟೋ ವೈರಲ್

deep fake

ಬೆಂಗಳೂರು: ಡೀಪ್‌ಫೇಕ್‌ ತಂತ್ರಜ್ಞಾನದ (Deep fake Technology) ದುರ್ಬಳಕೆ ಎಂದರೆ ಇದುವರೆಗೆ ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್‌, ಸಚಿನ್‌ ತೆಂಡೂಲ್ಕರ್‌ ಅವರಂತಹ ಸೆಲೆಬ್ರಿಟಿಗಳು, ನಟಿಯರ ತಿರುಚಿದ ವಿಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು ಎಂದಾಗಿತ್ತು. ಆದರೆ, ಡೀಪ್‌ಫೇಕ್‌ ತಂತ್ರಜ್ಞಾನದ ಕಾವು (Deep fake Scam) ಶಾಲಾ ವಿದ್ಯಾರ್ಥಿಯರಿಗೂ ಎದುರಾಗಿದೆ.

ಸೆಲೆಬ್ರಿಟಿಗಳಿಗೆ ಕಾಡುತ್ತಿದ್ದ ಡೀಪ್‌ಫೇಕ್‌ ಕಾಟವು ಇದೀಗ ಶಾಲಾ ವಿದ್ಯಾರ್ಥಿನಿಯರಿಗೆ ಶುರುವಾಗಿದೆ. ಪ್ರತಿಷ್ಠಿತ ಶಾಲೆಯ ವಿದ್ಯಾರ್ಥಿನಿಯರ ಮಾರ್ಫಿಂಗ್ ಫೋಟೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಪೋಷಕರಲ್ಲಿ ಆತಂಕ ಹೆಚ್ಚಿದೆ.

ಖಾಸಗಿ ಶಾಲೆಯೊಂದರ 9ನೇ ತರಗತಿ ವಿದ್ಯಾರ್ಥಿನಿಯ AI ಅಲ್ಲಿ ರಚನೆಯಾದ ನಗ್ನ ಫೋಟೋ ವೈರಲ್ ಆಗಿದೆ. ಮೇ 24 ರಂದು ಬೆಳಕಿಗೆ ಬಂದ ಪ್ರಕರಣವು ಈಗ ಚರ್ಚೆಗೆ ಗ್ರಾಸವಾಗಿದೆ. ಅಂದಹಾಗೆ 50ಕ್ಕೂ ಹೆಚ್ಚು ಶಾಲೆಯ ವಿದ್ಯಾರ್ಥಿಗಳು ಇದ್ದ ಇನ್ಸ್ಟ್ರಾಗ್ರಾಂನಲ್ಲಿ ಗ್ರೂಪ್‌ವೊಂದು ರಚನೆ ಮಾಡಿದ್ದರು. ಆ ಗ್ರೂಪ್‌ನಲ್ಲಿ ಅನಾಮಧೇಯ ವ್ಯಕ್ತಿಯಿಂದ ವಿದ್ಯಾರ್ಥಿನಿಯರ ಮಾರ್ಫಿಂಗ್ ಫೋಟೋಸ್ ವೈರಲ್ ಆಗಿದೆ. ಆ ವ್ಯಕ್ತಿ ಯಾರು ಎಂಬುದರ ಅರಿವು ಕೂಡ ವಿದ್ಯಾರ್ಥಿನಿಯರಿಗೆ ಇಲ್ಲ.

ಇದನ್ನೂ ಓದಿ | physical Abuse : ಮಗನ ಕಾಮಚೇಷ್ಠೆಗೆ ತಾಯಿ ಸಾಥ್‌; ಬೆತ್ತಲೆ ಫೋಟೊ ತೋರಿ ಬೆದರಿಸುತ್ತಿದ್ದ ಕಾಮುಕರಿಬ್ಬರು ಅರೆಸ್ಟ್‌

ಶಾಲಾ ಗ್ರೂಪ್‌ನಲ್ಲಿ ಇದ್ದಾನೆಂದರೆ ಅವನು ಖಂಡಿತ ವಿದ್ಯಾರ್ಥಿ ಆಗಿರಬಹುದೆಂದು ಶಂಕಿಸಲಾಗಿದೆ. ಈ ವಿಚಾರ ತಿಳಿದ ಕೂಡಲೇ ವಿದ್ಯಾರ್ಥಿನಿಯರು ಕುಗ್ಗಿ ಹೋಗಿದ್ದಾರೆ. ಈಗಾಗಲೇ ವಿದ್ಯಾರ್ಥಿನಿಯರ ಪೋಷಕರು ಸೈಬರ್ ಸೆಲ್‌ಗೆ ದೂರು ನೀಡಿದ್ದಾರೆ. ಡೀಪ್‌ಫೇಕ್ ಕಾಟಕ್ಕೆ ವಿದ್ಯಾರ್ಥಿನಿಯರು ಮಾನಸಿಕ ಹಿಂಸೆಗೆ ಒಳಗಾಗಿದ್ದಾರೆ.

Continue Reading

ಬೆಂಗಳೂರು

Deep fake Scam : ಸೆಲೆಬ್ರಿಟಿಗಳ ಬಳಿಕ ಈಗ ಬೆಂಗಳೂರು ಶಾಲಾ ವಿದ್ಯಾರ್ಥಿನಿಯರಿಗೆ ಡೀಪ್‌ಫೇಕ್‌ ಕಾಟ; ನಗ್ನ ಫೋಟೋ ವೈರಲ್

Deep fake Scam : ದೇಶದಲ್ಲಿ ನಟಿಯರ ಡೀಪ್‌ಫೇಕ್‌ ವಿಡಿಯೊಗಳು ವೈರಲ್‌ ಆಗಿರುವುದು ತಂತ್ರಜ್ಞಾನದ ದುರ್ಬಳಕೆ ಕುರಿತು ಆತಂಕ ವ್ಯಕ್ತವಾಗುತ್ತಿದೆ. ಈ ನಡುವೆ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಷ್ಠಿತ ಶಾಲೆಗಳ ವಿದ್ಯಾರ್ಥಿನಿಯರಿಗೆ ಡೀಪ್‌ಫೇಕ್‌ ಕಾಟ ಶುರುವಾಗಿದೆ.

VISTARANEWS.COM


on

By

deep fake
Koo

ಬೆಂಗಳೂರು: ಡೀಪ್‌ಫೇಕ್‌ ತಂತ್ರಜ್ಞಾನದ (Deep fake Technology) ದುರ್ಬಳಕೆ ಎಂದರೆ ಇದುವರೆಗೆ ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್‌, ಸಚಿನ್‌ ತೆಂಡೂಲ್ಕರ್‌ ಅವರಂತಹ ಸೆಲೆಬ್ರಿಟಿಗಳು, ನಟಿಯರ ತಿರುಚಿದ ವಿಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು ಎಂದಾಗಿತ್ತು. ಆದರೆ, ಡೀಪ್‌ಫೇಕ್‌ ತಂತ್ರಜ್ಞಾನದ ಕಾವು (Deep fake Scam) ಶಾಲಾ ವಿದ್ಯಾರ್ಥಿಯರಿಗೂ ಎದುರಾಗಿದೆ.

ಸೆಲೆಬ್ರಿಟಿಗಳಿಗೆ ಕಾಡುತ್ತಿದ್ದ ಡೀಪ್‌ಫೇಕ್‌ ಕಾಟವು ಇದೀಗ ಶಾಲಾ ವಿದ್ಯಾರ್ಥಿನಿಯರಿಗೆ ಶುರುವಾಗಿದೆ. ಪ್ರತಿಷ್ಠಿತ ಶಾಲೆಯ ವಿದ್ಯಾರ್ಥಿನಿಯರ ಮಾರ್ಫಿಂಗ್ ಫೋಟೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಪೋಷಕರಲ್ಲಿ ಆತಂಕ ಹೆಚ್ಚಿದೆ.

ಖಾಸಗಿ ಶಾಲೆಯೊಂದರ 9ನೇ ತರಗತಿ ವಿದ್ಯಾರ್ಥಿನಿಯ AI ಅಲ್ಲಿ ರಚನೆಯಾದ ನಗ್ನ ಫೋಟೋ ವೈರಲ್ ಆಗಿದೆ. ಮೇ 24 ರಂದು ಬೆಳಕಿಗೆ ಬಂದ ಪ್ರಕರಣವು ಈಗ ಚರ್ಚೆಗೆ ಗ್ರಾಸವಾಗಿದೆ. ಅಂದಹಾಗೆ 50ಕ್ಕೂ ಹೆಚ್ಚು ಶಾಲೆಯ ವಿದ್ಯಾರ್ಥಿಗಳು ಇದ್ದ ಇನ್ಸ್ಟ್ರಾಗ್ರಾಂನಲ್ಲಿ ಗ್ರೂಪ್‌ವೊಂದು ರಚನೆ ಮಾಡಿದ್ದರು. ಆ ಗ್ರೂಪ್‌ನಲ್ಲಿ ಅನಾಮಧೇಯ ವ್ಯಕ್ತಿಯಿಂದ ವಿದ್ಯಾರ್ಥಿನಿಯರ ಮಾರ್ಫಿಂಗ್ ಫೋಟೋಸ್ ವೈರಲ್ ಆಗಿದೆ. ಆ ವ್ಯಕ್ತಿ ಯಾರು ಎಂಬುದರ ಅರಿವು ಕೂಡ ವಿದ್ಯಾರ್ಥಿನಿಯರಿಗೆ ಇಲ್ಲ.

ಶಾಲಾ ಗ್ರೂಪ್‌ನಲ್ಲಿ ಇದ್ದಾನೆಂದರೆ ಅವನು ಖಂಡಿತ ವಿದ್ಯಾರ್ಥಿ ಆಗಿರಬಹುದೆಂದು ಶಂಕಿಸಲಾಗಿದೆ. ಈ ವಿಚಾರ ತಿಳಿದ ಕೂಡಲೇ ವಿದ್ಯಾರ್ಥಿನಿಯರು ಕುಗ್ಗಿ ಹೋಗಿದ್ದಾರೆ. ಈಗಾಗಲೇ ವಿದ್ಯಾರ್ಥಿನಿಯರ ಪೋಷಕರು ಸೈಬರ್ ಸೆಲ್‌ಗೆ ದೂರು ನೀಡಿದ್ದಾರೆ. ಡೀಪ್‌ಫೇಕ್ ಕಾಟಕ್ಕೆ ವಿದ್ಯಾರ್ಥಿನಿಯರು ಮಾನಸಿಕ ಹಿಂಸೆಗೆ ಒಳಗಾಗಿದ್ದಾರೆ.

ಇದನ್ನೂ ಓದಿ: Dhruva Sarja:  ಧ್ರುವ ಸರ್ಜಾ ಜತೆಗಿದ್ದ ಜಿಮ್ ಟ್ರೈನರ್ ಮೇಲೆ ಮಚ್ಚಿನಿಂದ‌ ಹಲ್ಲೆ?

ಡೀಪ್‌ಫೇಕ್‌ ಬಳಸಿ ಕಂಪನಿಗೆ 200 ಕೋಟಿ ರೂ. ವಂಚಿಸಿದ ದುಷ್ಟರು! ಹೇಗೆ?

ನವದೆಹಲಿ: ಡೀಪ್‌ಫೇಕ್‌ ತಂತ್ರಜ್ಞಾನದ (Deepfake Technology) ದುರ್ಬಳಕೆ ಎಂದರೆ ಇದುವರೆಗೆ ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್‌, ಸಚಿನ್‌ ತೆಂಡೂಲ್ಕರ್‌ ಅವರಂತಹ ಸೆಲೆಬ್ರಿಟಿಗಳು, ನಟಿಯರ ತಿರುಚಿದ ವಿಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು ಎಂದಾಗಿತ್ತು. ಆದರೆ, ಡೀಪ್‌ಫೇಕ್‌ ತಂತ್ರಜ್ಞಾನವನ್ನೀಗ ನೂರಾರು ಕೋಟಿ ರೂ. ವಂಚಿಸುವ (Deepfake Scam) ಮಟ್ಟಿಗೆ ದುಷ್ಕರ್ಮಿಗಳು ಬಳಸಿಕೊಳ್ಳುತ್ತಿದ್ದಾರೆ. ಹಾಂಕಾಂಗ್‌ನಲ್ಲಿ (Hong Kong) ಬಹುರಾಷ್ಟ್ರೀಯ ಕಂಪನಿಯೊಂದಕ್ಕೆ ಡೀಪ್‌ಫೇಕ್‌ ಮೂಲಕವೇ ಸುಮಾರು 207 ಕೋಟಿ ರೂ. (25 ದಶಲಕ್ಷ ಡಾಲರ್)‌ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಹಾಗೆಯೇ, ಇದು ಜಗತ್ತಿನ ಅತಿದೊಡ್ಡ ಡೀಪ್‌ಫೇಕ್‌ ವಂಚನೆ (Deepfake Fraud) ಎಂದು ಹೇಳಲಾಗುತ್ತಿದೆ.

ಹೌದು, ಹಾಂಕಾಂಗ್‌ ಮೂಲದ ಬಹುರಾಷ್ಟ್ರೀಯ ಕಂಪನಿಯ ಉದ್ಯೋಗಿಯೊಬ್ಬರಿಗೆ ಡೀಪ್‌ಫೇಕ್‌ ಮೂಲಕ ವಂಚಿಸಿದ ದುಷ್ಕರ್ಮಿಗಳು, ಸುಮಾರು 207 ಕೋಟಿ ರೂಪಾಯಿಯನ್ನು ವಂಚಿಸಿದ್ದಾರೆ. ನೂರಾರು ಕೋಟಿ ರೂ. ವಂಚನೆ ಪ್ರಕರಣ ವಿಶ್ವಾದ್ಯಂತ ಸುದ್ದಿಯಾದರೂ ಇದುವರೆಗೆ ಡೀಪ್‌ಫೇಕ್‌ ತಂತ್ರಜ್ಞಾನದ ಮೂಲಕ ವಂಚಿಸಿದ ದುರುಳರ ಕುರಿತು ಪೊಲೀಸರಿಗೆ ಸ್ವಲ್ಪವೂ ಮಾಹಿತಿ ಲಭ್ಯವಾಗಿಲ್ಲ. ಇದುವರೆಗೆ ಒಬ್ಬನನ್ನೂ ಬಂಧಿಸಲು ಸಾಧ್ಯವಾಗಿಲ್ಲ ಎಂಬುದು ಅಚ್ಚರಿಯ ಸಂಗತಿಯಾಗಿದೆ. ಕಳೆದ ಜನವರಿಯಲ್ಲಿಯೇ ಹಗರಣ ಬೆಳಕಿಗೆ ಬಂದರೂ ಇದುವರೆಗೆ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ.

ಇದನ್ನೂ ಓದಿ: Rashmika Mandanna: ಡೀಪ್‌ಫೇಕ್‌ ವಿಡಿಯೊ ಆರೋಪಿ ಬಂಧನ; ಪ್ರತಿಕ್ರಿಯಿಸಿದ ರಶ್ಮಿಕಾ!

ವಂಚನೆ ಮಾಡಿದ್ದು ಹೇಗೆ?

ಹಾಂಕಾಂಗ್‌ ಮೂಲದ ಕಂಪನಿಯ ಹಣಕಾಸು ವಿಭಾಗದ ಉದ್ಯೋಗಿಯೊಬ್ಬರ ಮೊಬೈಲ್‌ಗೆ ಮೆಸೇಜ್‌ ರವಾನೆಯಾಗಿದೆ. ಆ ಮೆಸೇಜ್‌ನಲ್ಲಿ ಉದ್ಯೋಗಿಗೆ ಬ್ರಿಟನ್‌ ಮೂಲದ, ತಾನು ಕೆಲಸ ಮಾಡುವ ಕಂಪನಿಯದ್ದೇ ಮುಖ್ಯ ಹಣಕಾಸು ಅಧಿಕಾರಿ (CFO) ಎಂಬುದಾಗಿ ನಂಬಿಸಲಾಗಿದೆ. ಹಾಂಕಾಂಗ್‌ ಕಂಪನಿಯ ಉದ್ಯೋಗಿಯು ಇದನ್ನು ನಂಬಿದ ಉದ್ಯೋಗಿಯು ಮೆಸೇಜ್‌ನಲ್ಲಿ ಬಂದ ಲಿಂಕ್‌ ಮೇಲೆ ಕ್ಲಿಕ್‌ ಮಾಡಿದ್ದಾನೆ. ಆಗ ಕಂಪನಿಯ ಸಿಎಫ್‌ಒ ಎಂದು ಹೇಳಲಾದ ವ್ಯಕ್ತಿ ಜತೆ ವಿಡಿಯೊ ಕಾಲ್‌ ಡಯಲ್‌ ಆಗಿದೆ. ಆಗ ಕಂಪನಿಯ ಉದ್ಯೋಗಿ ಮತ್ತು ಬ್ರಿಟನ್‌ ಮೂಲದ ಸಿಎಫ್‌ಒ ಮಾತುಕತೆ ನಡೆಸಿದ್ದಾರೆ.

ವಿಡಿಯೊ ಕಾಲ್‌ ವೇಳೆ ಕಾನ್ಫರೆನ್ಸ್‌ ಮೂಲಕ ಹಲವು ಉದ್ಯೋಗಿಗಳ ಜತೆ ಮಾತುಕತೆ ನಡೆಸಿದಂತೆ ಸಿಎಫ್‌ಒ ಎಂದು ಹೇಳಿಕೊಂಡವನು ನಾಟಕ ಮಾಡಿದ್ದಾನೆ. ಅಷ್ಟೇ ಅಲ್ಲ, ಸಿಎಫ್‌ಒ ಆದೇಶದಂತೆ ಹಾಂಕಾಂಗ್‌ನ ಸುಮಾರು 15 ಬ್ಯಾಂಕ್‌ ಖಾತೆಗಳಿಗೆ ಉದ್ಯೋಗಿಯು 207 ಕೋಟಿ ರೂ. ವರ್ಗಾಯಿಸಿದ್ದಾನೆ. ಇಷ್ಟೆಲ್ಲ ನಡೆದ ಬಳಿಕವೇ ವಂಚನೆಯ ಜಾಲ ಬಯಲಾಗಿದೆ. ಡೀಪ್‌ಫೇಕ್‌ ತಂತ್ರಜ್ಞಾನ ಬಳಸಿ ಹಾಂಕಾಂಗ್‌ ಕಂಪನಿಯ ಉದ್ಯೋಗಿ ಜತೆ ವಿಡಿಯೊ ಕಾಲ್‌ನಲ್ಲಿ ನಕಲಿ ವ್ಯಕ್ತಿಗಳು ಮಾತನಾಡಿದ ಹಾಗೆ ಚಿತ್ರಿಸಲಾಗಿದೆ. ಇದನ್ನು ನಂಬಿದ ವ್ಯಕ್ತಿಯು ಸಿಎಫ್‌ಒ ಎಂದು ಭಾವಿಸಿ ನೂರಾರು ಕೋಟಿ ರೂ. ವರ್ಗಾಯಿಸಿದ್ದಾನೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿನ್ನದ ದರ

Gold Rate Today: 22K ಚಿನ್ನದ ಬೆಲೆ ಗ್ರಾಂಗೆ ₹25 ಏರಿಕೆ; 24K ಬಂಗಾರದ ಬೆಲೆ ಎಷ್ಟು ಏರಿದೆ ಗಮನಿಸಿ

Gold Rate Today: ಇಂದು (ಸೋಮವಾರ) 10 ಗ್ರಾಂ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ಬೆಲೆ ಕ್ರಮವಾಗಿ ₹250 ಹಾಗೂ ₹270 ಏರಿಕೆಯಾಗಿವೆ. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

VISTARANEWS.COM


on

gold rate today 27
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಶುಕ್ರವಾರ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಸ್ವಲ್ಪ ಮಟ್ಟಿಗೆ ಏರಿದೆ. ನಿನ್ನೆ ಹಾಗೂ ಮೊನ್ನೆ ದರಗಳು ಯಥಾಸ್ಥಿತಿ ಕಾಪಾಡಿಕೊಂಡಿದ್ದವು. ಇಂದು (ಸೋಮವಾರ) 10 ಗ್ರಾಂ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ಬೆಲೆ ಕ್ರಮವಾಗಿ ₹250 ಹಾಗೂ ₹270 ಏರಿಕೆಯಾಗಿವೆ. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,665ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,320 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,650 ಮತ್ತು ₹6,66,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,271 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,168 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,710 ಮತ್ತು ₹7,27,100 ವೆಚ್ಚವಾಗಲಿದೆ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ66,80072,860
ಮುಂಬಯಿ66,650 72,710
ಬೆಂಗಳೂರು66,650 72,710
ಚೆನ್ನೈ67,20073,310

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹92, ಎಂಟು ಗ್ರಾಂ ₹736 ಮತ್ತು 10 ಗ್ರಾಂ ₹920ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹9,200 ಮತ್ತು 1 ಕಿಲೋಗ್ರಾಂಗೆ ₹92,000 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Gold Rate : ಏರುಗತಿಯಲ್ಲಿದೆ ಬಂಗಾರದ ಬೆಲೆ; ಇನ್ನೂ ಏರುವ ಮೊದಲು ಖರೀದಿ ಸೂಕ್ತ

Continue Reading
Advertisement
Viral Video
ವೈರಲ್ ನ್ಯೂಸ್53 seconds ago

Viral Video: ರೈಫಲ್‌ ಜೊತೆ ಬಾರ್‌ಗೆ ನುಗ್ಗಿದ ಕಿಡಿಗೇಡಿ..ಡಿಜೆ ಮೇಲೆ ಗುಂಡಿನ ದಾಳಿ-ಶಾಕಿಂಗ್‌ ವಿಡಿಯೋ ನೋಡಿ

Mitchell Starc
ಕ್ರೀಡೆ3 mins ago

Mitchell Starc : ಐಪಿಎಲ್ ಯಶಸ್ಸಿನ ಶ್ರೇಯಸ್ಸನ್ನು ಪತ್ನಿಗೆ ಅರ್ಪಿಸಿದ ಸ್ಟಾರ್ಕ್​; ಅವರ ಪತ್ನಿಯೂ ಕ್ರಿಕೆಟರ್​

Love Propose
ಬಾಗಲಕೋಟೆ25 mins ago

Love Propose : I Love You ಮೆಸೇಜ್‌ ಕಳಿಸಿದ ಮುಸ್ಲಿಂ ಯುವಕನಿಗೆ ವಿವಾಹಿತೆಯಿಂದ ಚಪ್ಪಲಿ ಏಟು!

Dhruva Sarja Trainer Prashanth Was Attacked First Reaction
ಸ್ಯಾಂಡಲ್ ವುಡ್29 mins ago

Dhruva Sarja: ಜಿಮ್ ಟ್ರೈನರ್ ಮೇಲೆ ಹಲ್ಲೆ; ಧ್ರುವ ಸರ್ಜಾ ನೀಡಿದ ಸ್ಪಷ್ಟನೆ ಏನು?

Asaduddin Owaisi Party Leader
ದೇಶ42 mins ago

Asaduddin Owaisi: ಓವೈಸಿ ಪಕ್ಷದ ನಾಯಕನ ಮೇಲೆ ಗುಂಡಿನ ದಾಳಿ

BS Yediyurappa
ಪ್ರಮುಖ ಸುದ್ದಿ44 mins ago

BS Yediyurappa: ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು

Fire accident
ದೇಶ46 mins ago

Fire Accident: 4 ವರ್ಷ ನೀವು ನಿದ್ದೆಯಲ್ಲಿದ್ರಾ? ನಿಮಗೆ ಕಣ್ಣು ಕಾಣೋದಿಲ್ವಾ?-ಗುಜರಾತ್‌ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

Sunil Narine
ಪ್ರಮುಖ ಸುದ್ದಿ53 mins ago

Sunil Narine : ಐಪಿಎಲ್​ 2024ರ ‘ಮೌಲ್ಯಯುತ ಆಟಗಾರ ಪ್ರಶಸ್ತಿ’ ಗೆದ್ದು ಹೊಸ ದಾಖಲೆ ಬರೆದ ಸುನಿಲ್ ನರೈನ್​​

deep fake
ಬೆಂಗಳೂರು1 hour ago

Deep fake Scam : ಸೆಲೆಬ್ರಿಟಿಗಳ ಬಳಿಕ ಈಗ ಬೆಂಗಳೂರು ಶಾಲಾ ವಿದ್ಯಾರ್ಥಿನಿಯರಿಗೆ ಡೀಪ್‌ಫೇಕ್‌ ಕಾಟ; ನಗ್ನ ಫೋಟೋ ವೈರಲ್

Dhruva Sarja Gym trainer prashanth attacked
ಸ್ಯಾಂಡಲ್ ವುಡ್1 hour ago

Dhruva Sarja:  ಧ್ರುವ ಸರ್ಜಾ ಜತೆಗಿದ್ದ ಜಿಮ್ ಟ್ರೈನರ್ ಮೇಲೆ ಮಚ್ಚಿನಿಂದ‌ ಹಲ್ಲೆ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ20 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು21 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌