Rice Politics: ಇನ್ನೂ ಮುಗಿಯದ ಅಕ್ಕಿ ಬೇಟೆ, ಜುಲೈ ತಿಂಗಳಲ್ಲಂತೂ ಸಿಗೋದು ಡೌಟೆ - Vistara News

ಕರ್ನಾಟಕ

Rice Politics: ಇನ್ನೂ ಮುಗಿಯದ ಅಕ್ಕಿ ಬೇಟೆ, ಜುಲೈ ತಿಂಗಳಲ್ಲಂತೂ ಸಿಗೋದು ಡೌಟೆ

Rice Politics: ರಾಜ್ಯದಲ್ಲಿ ಪಡಿತರ ವ್ಯವಸ್ಥೆಗೆ ಹೆಚ್ಚುವರಿಯಾಗಿ ಬೇಕಾದ ಐದು ಕೆಜಿ ಅಕ್ಕಿಗಾಗಿ ರಾಜ್ಯ ಸರ್ಕಾರ ಭಾರಿ ಸರ್ಕಸ್‌ ಮಾಡುತ್ತಿದೆ. ಆದರೆ, ಯಾವುದೂ ಫೈನಲ್‌ ಅಗುತ್ತಿಲ್ಲ.

VISTARANEWS.COM


on

siddaramaiah Muniyappa
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಸರ್ಕಾರ (karnataka Government) ಅನ್ನ ಭಾಗ್ಯ ಯೋಜನೆಯಡಿ (Anna Bhagya scheme) ವಿತರಿಸಲು ಬೇಕಾದ ಅಕ್ಕಿಗಾಗಿ (Rice politics) ತೀವ್ರ ಹುಡುಕಾಟ ನಡೆಸುತ್ತಿದೆ. ಆದರೆ, ಇನ್ನೂ ಅದು ಸಿಕ್ಕಿಲ್ಲ. ಹೀಗಾಗಿ ಜುಲೈ ತಿಂಗಳಲ್ಲಿ ಪಡಿತರ ವ್ಯವಸ್ಥೆ ಮೂಲಕ ಹೆಚ್ಚುವರಿ ಐದು ಕೆಜಿ ಸಿಗುವ ಸಾಧ್ಯತೆಯಂತೂ ಇಲ್ಲವೇ ಇಲ್ಲ.

ಅಕ್ಕಿ ಹುಡುಕಾಟದ ಭಾಗವಾಗಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ನೇತೃತ್ವದಲ್ಲಿ ಮಹತ್ವದ ಸಭೆಯೊಂದನ್ನು ನಡೆಸಲಾಯಿತು. ಕೇಂದ್ರ ಮೂರು ಸಾಂಸ್ಥಿಕ ಸಂಸ್ಥೆಗಳಿಂದ ಬಂದಿರುವ ಕೊಟೇಷನ್‌ಗಳ ಪರಿಶೀಲನೆಯನ್ನು ಈ ಸಭೆಯಲ್ಲಿ ನಡೆಸಲಾಯಿತು. ಸಭೆಯಲ್ಲಿ ಈ ಸಂಸ್ಥೆಗಳಿಗೆ ಕೆಲವು ಸಲಹೆಗಳನ್ನು ನೀಡಿ ಅವುಗಳಿಂದ ಸಿಗಬಹುದಾದ ಅಕ್ಕಿ, ಅಂತಿಮ ದರದ ಮಾಹಿತಿಯನ್ನು ಪಡೆಯಲು ನಿರ್ಧರಿಸಲಾಯಿತು. ಈ ಮಾಹಿತಿ ಸಿಗುವಾಗ ಒಂದು ವಾರ ಕಳೆಯಬಹುದು ಎಂದು ಅಂದಾಜಿಸಲಾಗಿದೆ. ಹೀಗಾಗಿ ಈ ಪ್ರಕ್ರಿಯೆ ಸದ್ಯಕ್ಕೆ ಮುಗಿಯುವ ಸಾಧ್ಯತೆ ಕಾಣಿಸುತ್ತಿಲ್ಲ.

ಕೇಂದ್ರದ ಮೂರು ಆಹಾರ ದಾಸ್ತಾನು ಸಂಸ್ಥೆಗಳಾದ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (ಎನ್‌ಸಿಸಿಎಫ್‌), ರಾಷ್ಟ್ರೀಯ ಕೃಷಿ ಸಹಕಾರ ಮಾರ್ಕೆಟಿಂಗ್‌ ಫೆಡರೇಷನ್‌ (ನಾಫೆಡ್‌) ಮತ್ತು ಕೇಂದ್ರ ಭಂಡಾರಗಳಿಂದ ಕೋಟೆಷನ್ ಕೇಳಲಾಗಿತ್ತು.

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ (KH Muniyappa), ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಇಲಾಖೆಯ ಹಿರಿಯ ಅಧಿಕಾರಿಗಳು ಭಾರಿಯಾದ ಸಭೆಯಲ್ಲಿ ಆ ಏಜೆನ್ಸಿ ಗಳು ಕಳುಹಿಸಿರುವ ಕೊಟೇಷನ್‌ ಬಗ್ಗೆ ಚರ್ಚೆ ನಡೆಯಿತು.

ರಾಜ್ಯ ಸರ್ಕಾರದ ಬೇಡಿಕೆಗೆ ತಕ್ಕಂತೆ ದರ ಇದೆಯಾ? ಅಕ್ಕಿಯ ಪ್ರಮಾಣವೆಷ್ಟು, ಪೂರೈಕೆಯ ಅವಧಿಯ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌. ಮುನಿಯಪ್ಪ ಅವರು, ತಕ್ಷಣ ಟೆಂಡರ್ ಪ್ರಕ್ರಿಯೆ ಮಾಡಿ ಅಕ್ಕಿ ಸರಬಾರಜು ಮಾಡುವ ತೀರ್ಮಾನ ಮಾಡಬೇಕು ಎಂದು ಹೇಳಿದ್ದೇವೆ. ದರ ನಿಗದಿ ಮಾಡುವುದು ಅವರಿಗೆ ಬಿಟ್ಟಿದ್ದು. ಒಂದು ವಾರದಲ್ಲಿ ಅವರು ತೀರ್ಮಾನ ತಿಳಿಸುತ್ತಾರೆʼʼ ಎಂದು ಹೇಳಿದರು. ಅವರು ಟ್ರೇಡರ್ಸ್ ಜೊತೆ, ಮಿಲ್ಲರ್ಸ್ ಜೊತೆ ಮಾತನಾಡಿ ತೀರ್ಮಾನ ತಿಳಿಸುತ್ತಾರೆ ಎಂದರು.

ಇದನ್ನೂ ಓದಿ: BS Yediyurappa: ಅಧಿವೇಶನದ ಉದ್ದಕ್ಕೂ ವಿಧಾನಸೌಧದ ಹೊರಗೆ ಬಿಎಸ್‌ವೈ ಧರಣಿ; ಸರ್ಕಾರದ ವಿರುದ್ಧ ಗುಡುಗು

ಈಗ ಬೇಕಿರುವುದು ಮೂರು ಕೆಜಿ ಅಕ್ಕಿ

ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಐದು ಕೆಜಿ ಅಕ್ಕಿ ಕೊಡುತ್ತೇವೆ ಎಂದು ಪ್ರಕಟಿಸಿದ್ದರೂ ಸದ್ಯ ಮೂರು ಕೇಜಿ ಅಕ್ಕಿ ಮತ್ತು ಎರಡು ಕೇಜಿ ಧಾನ್ಯವನ್ನು ನೀಡಲು ನಿರ್ಧರಿಸಿದೆ. ಉತ್ತರ ಕರ್ನಾಟಕದಲ್ಲಿ ಎರಡು ಕೆಜಿ ಜೋಳ ಮತ್ತು ದಕ್ಷಿಣ ಕರ್ನಾಟಕದಲ್ಲಿ ರಾಗಿ ನೀಡಲಾಗುವುದು ಎಂದು ಕೆ.ಎಚ್‌. ಮುನಿಯಪ್ಪ ಶನಿವಾರ ಮುಂಜಾನೆ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಅವರು ಕೂಡಾ ಮೂರು ಕೆಜಿ ಅಕ್ಕಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ. ಬೇರೆ ರಾಜ್ಯಗಳು, ಕೇಂದ್ರದ ಏಜೆನ್ಸಿಗಳಿಂದ ಖರೀದಿಗೆ ವ್ಯವಸ್ಥೆ ಮಾಡಿದ್ದೇವೆ. ಕೆಲವು ದಿನ ತಡವಾಗಬಹುದು. ಆದರೆ, ಅಕ್ಕಿ ಕೊಟ್ಟೇ ಕೊಡುತ್ತೇವೆ ಎಂದು ಶನಿವಾರ ಮುಂಜಾನೆ ಹೇಳಿದರು.

ಕೇಂದ್ರ ಸರ್ಕಾರ ರಾಜಕೀಯ ದ್ವೇಷ ಸಾಧಿಸುತ್ತಿದೆ. ಅಕ್ಕಿ ನೀಡದೆ ದ್ರೋಹ ಮಾಡಿದೆ. ಅದು ಖಾಸಗಿಯವರಿಗೆ ಕೊಡುತ್ತದೆಯಂತೆ, ನಾವು ಹಣ ಕೊಟ್ಟರೂ ಕೊಡುವುದಿಲ್ಲವಂತೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿನ್ನದ ದರ

Gold Rate Today: ಚಿನ್ನ ಕೊಳ್ಳಲು ಇಂದೇ ಸುದಿನ, ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ!

Gold Rate Today: ಇಂದು ಬೆಂಗಳೂರಿನಲ್ಲಿ ಬಂಗಾರದ ಮಾರುಕಟ್ಟೆಯಲ್ಲಿ ದರಗಳು ಭಾರೀ ಪ್ರಮಾಣದ ಇಳಿಕೆ ಕಂಡಿವೆ. ಖಚಿತ ಬೆಲೆಗಳನ್ನು ಇಲ್ಲಿ ಕೊಡಲಾಗಿದೆ. ಬೆಳ್ಳಿಯ ದರವೂ ಬದಲಾಗಿದೆ.

VISTARANEWS.COM


on

gold rate today kiara
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಗುರುವಾರ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಭಾರೀ ಇಳಿಕೆ ಕಂಡಿದೆ. ಇಂದು 10 ಗ್ರಾಂ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ಬೆಲೆ ಕ್ರಮವಾಗಿ ₹1000 ಹಾಗೂ ₹1090 ಇಳಿಕೆಯಾಗಿವೆ. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,730ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,840 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹67,300 ಮತ್ತು ₹6,73,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,342 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,736 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹73,420 ಮತ್ತು ₹7,34,200 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹95.60, ಎಂಟು ಗ್ರಾಂ ₹764.80 ಮತ್ತು 10 ಗ್ರಾಂ ₹956ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹9,560 ಮತ್ತು 1 ಕಿಲೋಗ್ರಾಂಗೆ ₹95,600 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,45073,570
ಮುಂಬಯಿ67,300 73,420
ಬೆಂಗಳೂರು67,300 73,420
ಚೆನ್ನೈ67,50073,640

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಬಂಗಾರದ ಬೆಲೆ ಇನ್ನೂ ಇಳಿಕೆ; ಇಂದಿನ ಮಾರುಕಟ್ಟೆ ದರಗಳನ್ನು ಇಲ್ಲಿ ಗಮನಿಸಿಕೊಳ್ಳಿ

Continue Reading

ಕ್ರೈಂ

bomb Hoax: ಶಾಲೆ, ದೇವಸ್ಥಾನದ ಬಳಿಕ ರಾಜಧಾನಿಯ ಪ್ರತಿಷ್ಠಿತ ಹೋಟೆಲ್‌ಗೂ ಬಾಂಬ್‌ ಬೆದರಿಕೆ

bomb Hoax: ಎಲೆಕ್ಟ್ರಾನಿಕ್ ಸಿಟಿ ಬಳಿಯ ಒಟೇರಾ (Hotel Oterra) ಎಂಬ ಹೋಟೆಲ್‌ಗೆ ಬಾಂಬ್‌ ಬೆದರಿಕೆ ಮೇಲ್ ರವಾನೆಯಾಗಿದೆ. ತಡರಾತ್ರಿ 2 ಘಂಟೆಗೆ ಮೇಲ್ ಬಂದಿದ್ದು, ಇಂದು ಬೆಳಿಗ್ಗೆ ಹೋಟೆಲ್ ಸಿಬ್ಬಂದಿಗಳು ಮೇಲ್ ಚೆಕ್ ಮಾಡುವಾಗ ಕಂಡಿದೆ. ಆಗ ಗಾಬರಿಯಾಗಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

VISTARANEWS.COM


on

hotel oterra bomb hoax
Koo

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic city) ಪ್ರತಿಷ್ಠಿತ ಹೋಟೆಲ್‌ಗೆ ಇಂದು ಬಾಂಬ್ ಬೆದರಿಕೆ ಮೇಲ್ (Bomb Hoax) ಬಂದಿದೆ. ಈ ಹಿನ್ನೆಲೆಯಲ್ಲಿ ಹೋಟೆಲ್‌ (Hotel) ಆವರಣವನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಲಾಗಿದೆ. ಶಾಲೆ, ದೇವಸ್ಥಾನ ಬಳಿಕ ಇದೀಗ ಹೋಟೆಲ್‌ ಬಾಂಬ್‌ ಬೆದರಿಕೆಗೆ ತುತ್ತಾಗಿದೆ.

ಎಲೆಕ್ಟ್ರಾನಿಕ್ ಸಿಟಿ ಬಳಿಯ ಒಟೇರಾ (Hotel Oterra) ಎಂಬ ಹೋಟೆಲ್‌ಗೆ ಬಾಂಬ್‌ ಬೆದರಿಕೆ ಮೇಲ್ ರವಾನೆಯಾಗಿದೆ. ತಡರಾತ್ರಿ 2 ಘಂಟೆಗೆ ಮೇಲ್ ಬಂದಿದ್ದು, ಇಂದು ಬೆಳಿಗ್ಗೆ ಹೋಟೆಲ್ ಸಿಬ್ಬಂದಿಗಳು ಮೇಲ್ ಚೆಕ್ ಮಾಡುವಾಗ ಕಂಡಿದೆ. ಆಗ ಗಾಬರಿಯಾಗಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಒಟೇರಾ ಹೋಟೆಲ್‌ಗೆ ಎಲೆಕ್ಟ್ರಾನಿಕ್ ಸಿಟಿ ಪೋಲೀಸರು ಭೇಟಿ ನೀಡಿದ್ದು, ಬಾಂಬ್ ಸ್ಕ್ವಾಡ್ ಕರೆಸಿ ತಪಾಸಣೆ ನಡೆಸಿದ್ದಾರೆ. ಸದ್ಯ ಯಾವುದೇ ಬಾಂಬ್‌ ಕಂಡುಬಂದಿಲ್ಲ. ಮುನ್ನೆಚ್ಚರಿಕೆಯಾಗಿ ತಪಾಸಣೆ ಮುಗಿಯುವವರೆಗೂ ಹೋಟೆಲ್‌ ಆವರಣವನ್ನು ಗ್ರಾಹಕರಿಗೆ ಬಂದ್‌ ಮಾಡಲಾಗಿದೆ.

ಶಾಲೆ, ದೇವಸ್ಥಾನಗಳಿಗೆ ಬೆದರಿಕೆ

ಇತ್ತೀಚೆಗೆ ನಾಗವಾರದ ಸೇಂಟ್ ಫಿಲೋಮಿನಾ ಆಸ್ಪತ್ರೆ‌ಯಲ್ಲಿ ಬಾಂಬ್ ಇಡಲಾಗಿದೆ ಎಂದು ಪೊಲೀಸ್ ಇಲಾಖೆಯ ಸಿಟಿ ಎಸ್.ಬಿ.ಗೆ ಇ-ಮೇಲ್ ಬಂದಿದೆ. ಹೀಗಾಗಿ ತಕ್ಷಣ ಆಸ್ಪತ್ರೆಗೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕಳೆದ ವರ್ಷ ಹಲವು ಪ್ರತಿಷ್ಠಿತ ಶಾಲೆಗಳಿಗೆ ಇದೇ ರೀತಿಯ ಬಾಂಬ್‌ ಬೆದರಿಕೆ ಇಮೇಲ್‌ ಬಂದಿತ್ತು. ಇದು ಕೂಡ ಹುಸಿಯಾಗಿತ್ತು. ಇತ್ತೀಚೆಗೆ ಹೊಸದಿಲ್ಲಿಯ ಹತ್ತಾರು ಶಾಲೆಗಳಿಗೆ ಬಾಂಬ್‌ ಬೆದರಿಕೆ ಇಮೇಲ್‌ ಬಂದಿದ್ದು, ಆ ಎಲ್ಲ ಶಾಲೆಗಳ ಮಕ್ಕಳಿಗೂ ರಜೆ ನೀಡಿ ಆವರಣ ತಲಾಶ್‌ ಮಾಡಲಾಗಿತ್ತು. ಇದು ಕೂಡ ಹುಸಿ ಎಂದು ಕಂಡುಬಂದಿತ್ತು. ಹೀಗೆ ಬೆದರಿಕೆ ಇಮೇಲ್‌ ಮಾಡಿದ ವ್ಯಕ್ತಿ ಅಪ್ರಾಪ್ತ ವಯಸ್ಕ ಎಂದು ಪೊಲೀಸರು ಮಾಹಿತಿ ನೀಡಿದ್ದರು. ನಂತರ ದೆಹಲಿಯ ವಿಮಾನ ನಿಲ್ದಾಣ (delhi airport) ಮತ್ತು ಹಲವಾರು ಆಸ್ಪತ್ರೆಗಳಿಗೆ (hospital) ಇ-ಮೇಲ್ ಮೂಲಕ ಬಾಂಬ್ ಬೆದರಿಕೆ (Bomb Threat) ಸಂದೇಶಗಳು ಬಂದಿದ್ದವು.

ಇದು ಕಿಡಿಗೇಡಿಗಳ ಕೃತ್ಯ ಎಂದು ಶಂಕಿಸಲಾಗಿದೆ. ಹೀಗೆ ಬೆದರಿಕೆ ಮೇಲ್‌ ಮಾಡುತ್ತಿರುವವರ ತಂತ್ರಜ್ಞಾನದಲ್ಲಿ ಪರಿಣಿತರಾಗಿದ್ದು, ದೇಶದ ಸರ್ವರ್‌ ಕನೆಕ್ಷನ್‌ ತಪ್ಪಿಸಿ ವಿಪಿಎನ್‌ ಮೂಲಕ ಕಾರ್ಯಾಚರಿಸಿ ವಿದೇಶಗಳ ಸರ್ವರ್‌ನಿಂದ ಬಂದಂತೆ ತೋರಿಸುವ ಕಲೆಯಲ್ಲಿ ನಿಷ್ಣಾತರಾಗಿದ್ದಾರೆ. ಹೀಗಾಗಿ ಇದನ್ನು ಭೇದಿಸುವುದು ಪೊಲೀಸರಿಗೆ ಕಷ್ಟವಾಗುತ್ತಿದೆ.

ದೂರು ದಾಖಲು

ಇ-ಮೇಲ್‌ಗಳ ನಿಖರವಾದ ಮೂಲವನ್ನು ಪತ್ತೆ ಹಚ್ಚಲು ದೆಹಲಿ ಪೊಲೀಸರು ಇಂಟರ್‌ಪೋಲ್ ಮೂಲಕ ರಷ್ಯಾದ ಮೇಲಿಂಗ್ ಸೇವಾ ಕಂಪೆನಿ Mail.ru ಅನ್ನು ಸಂಪರ್ಕಿಸಿದರು. ಬಾಂಬ್ ಹುಸಿ ಇ-ಮೇಲ್‌ಗಳ ಉದ್ದೇಶವು ಸಾಮೂಹಿಕ ಭೀತಿಯನ್ನು ಸೃಷ್ಟಿಸುವುದು ಮತ್ತು ರಾಷ್ಟ್ರ ರಾಜಧಾನಿಯಲ್ಲಿ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವುದಾಗಿದೆ ಎಂದು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಸುಳ್ಳು ಬಾಂಬ್ ಬೆದರಿಕೆಗಳ ಸಂದರ್ಭಗಳನ್ನು ಎದುರಿಸಲು ವಿವರವಾದ ಪ್ರೋಟೋಕಾಲ್ ಮತ್ತು ಸ್ಟ್ಯಾಂಡರ್ಡ್ ಆಪರೇಷನ್ ಪ್ರೊಸೀಜರ್ಸ್ (SOP) ಗಾಗಿ ಕೇಂದ್ರ ಗೃಹ ಸಚಿವಾಲಯ ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ವಾರದ ಆರಂಭದಲ್ಲಿ, ಗೃಹ ಕಾರ್ಯದರ್ಶಿ ದೆಹಲಿ ಪೊಲೀಸರು ಮತ್ತು ಶಾಲೆಗಳಿಗೆ ತಪ್ಪು ಮಾಹಿತಿಯಿಂದಾಗಿ ಯಾವುದೇ ಅನಗತ್ಯ ಭಯವನ್ನುಉಂಟಾಗದಂತೆ ತಡೆಯಲು ವ್ಯವಸ್ಥೆಗೊಳಿಸುವಂತೆ ಕೇಳಿಕೊಂಡಿದ್ದರು.
ಭದ್ರತೆ ಹೆಚ್ಚಳಕ್ಕೆ ಸೂಚನೆ

ಹುಸಿ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಭದ್ರತೆ, ಸಿಸಿಟಿವಿ ಕೆಮರಾ ಮತ್ತು ಇಮೇಲ್‌ಗಳ ನಿಯಮಿತ ಮೇಲ್ವಿಚಾರಣೆಯನ್ನು ಹೆಚ್ಚಿಸುವ ಅಗತ್ಯವನ್ನು ಸಚಿವಾಲಯ ಒತ್ತಿಹೇಳಿದೆ. ತಪ್ಪು ಮಾಹಿತಿಯು ಯಾವುದೇ ಅನಗತ್ಯ ಭೀತಿಯನ್ನು ಸೃಷ್ಟಿಸದಂತೆ ಪರಿಣಾಮಕಾರಿ ಪ್ರತಿಕ್ರಿಯೆ ಕಾರ್ಯವಿಧಾನಕ್ಕಾಗಿ ನಿಕಟ ಸಮನ್ವಯವನ್ನು ಹೊಂದಲು ದೆಹಲಿ ಪೊಲೀಸರು ಮತ್ತು ಶಾಲೆಗಳಿಗೆ ಗೃಹ ಕಾರ್ಯದರ್ಶಿ ತಿಳಿಸಿದ್ದಾರೆ. 

ಇದನ್ನೂ ಓದಿ | Vijayapura News: ಮೀನುಗಳ ಮಾರಣ ಹೋಮ; ಬಿಸಿಲ ತಾಪಕ್ಕೆ 17 ಸಾವಿರ ಮತ್ಸ್ಯಗಳ ಸಾವು

Continue Reading

ತುಮಕೂರು

Cylinder Blast: ಗ್ಯಾಸ್‌ ಸಿಲಿಂಡರ್ ಸ್ಫೋಟ; 7 ದಿನ ನರಳಾಡಿ ಪ್ರಾಣಬಿಟ್ಟ ಇಬ್ಬರು ಗಾಯಾಳುಗಳು

Cylinder Blast : ಕಳೆದ ಮೇ 17 ರಂದು ಕುಣಿಗಲ್‌ನಲ್ಲಿ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡಿತ್ತು. ಈ ವೇಳೆ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. 7 ದಿನಗಳು ಹೋರಾಡಿ ನರಳಾಡಿ ಪ್ರಾಣಬಿಟ್ಟಿದ್ದಾರೆ.

VISTARANEWS.COM


on

By

cylinder blast in Tumkur
Koo

ತುಮಕೂರು: ಅಡುಗೆ ಮಾಡುವ ಸಂದರ್ಭದಲ್ಲಿ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡು (Cylinder Blast) ಆರು ಮಂದಿ ಗಂಭೀರ ಗಾಯಗೊಂಡಿದ್ದ ಘಟನೆ ತುಮಕೂರಿನ (Tum) ಕುಣಿಗಲ್‌ ಪಟ್ಟಣದ ಸಂತೆಬೀದಿಯಲ್ಲಿ ಮೇ 17ರ ಸಂಜೆ ನಡೆದಿತ್ತು. ಕುಣಿಗಲ್‌ನ ಕೋಟೆ ಪ್ರದೇಶದ ಸಿಂಗ್ ಬೀದಿಯ ಮನೆಯಲ್ಲಿ ಸಿಲಿಂಡರ್ ಸ್ಫೋಟದಿಂದಾಗಿ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಯಲ್ಲಿ ಮೇ 23ರಂದು ಮೃತಪಟ್ಟಿದ್ದಾರೆ. ಶಿವಣ್ಣ (45) ಮತ್ತು ಕುಶಾಲ್ ನಟರಾಜ್‌ (11) ಮೃತ ದುರ್ದೈವಿಗಳು.

ರವಿಕುಮಾರ್ ಎಂಬುವವರ ಮನೆಯಲ್ಲಿ ಅಡುಗೆ ಮಾಡುವಾಗ ಸಿಲಿಂಡರ್ ಸ್ಫೋಟಗೊಂಡಿತ್ತು. ಸ್ಫೋಟದ ತೀವ್ರತೆಗೆ ಮನೆಯಲ್ಲಿದ್ದ ದಿನಸಿ ಸಾಮಗ್ರಿ ಹಾಗೂ ಕಿಟಕಿ ಬಾಗಿಲುಗಳು ಛಿದ್ರಗೊಂಡು, ಗೋಡೆಗಳು ಬಿರುಕು ಬಿಟ್ಟಿದ್ದವು. ಘಟನೆಯಲ್ಲಿ ಮನೆಯಲ್ಲಿದ್ದ ರವಿಕುಮಾರ್ ಪತ್ನಿ ಶೃತಿ (45) ಮಕ್ಕಳಾದ ಕುಶಾಲ್ (11) ಹೇಮಲತಾ (16) ಅವರಿಗೆ ಗಂಭೀರ ಗಾಯವಾಗಿತ್ತು.

ಇನ್ನು ಸಿಲಿಂಡರ್ ಸ್ಫೋಟದ ಶಬ್ಧ ಕೇಳಿ ಮನೆಯೊಳಗೆ ಬಂದ ಪಕ್ಕದ ಮನೆಯ ಮಂಜಮ್ಮ(42), ಶಿವಣ್ಣ(45), ಸಮೀನಾ (46) ಎಂಬುವವರಿಗೂ ಬೆಂಕಿ ತಗುಲಿ ಗಂಭೀರ ಗಾಯಗಳಾಗಿತ್ತು. ಗಾಯಳುಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಜಿಡ್ಡಿಗೆರೆ ಗ್ರಾಮದ ಶಿವಣ್ಣ ಕುಣಿಗಲ್‌ನಲ್ಲಿ ನಟರಾಜ್ ಎಂಬುವರ ಬಾಡಿಗೆ ಮನೆಯಲ್ಲಿದ್ದರು. ತರಕಾರಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ಶಿವಣ್ಣ, ನಟರಾಜ್ ಮನೆಯಲ್ಲಿ ಸಿಲಿಂಡ‌ರ್ ಸ್ಫೋಟಗೊಂಡಾಗ ಬೆಂಕಿ ನಂದಿಸಲು ಹೋಗಿ ತೀವ್ರ ಸುಟ್ಟಗಾಯಗಳಾಗಿತ್ತು. ಈ ವೇಳೆ ನಟರಾಜ್ ಅವರ ಮಗ ಕುಶಾಲ್ ಕೂಡ ಗಾಯಗೊಂಡಿದ್ದ. ಇದೀಗ ಇವರಿಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇನ್ನುಳಿದ ಇಬ್ಬರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದತಿಗಾಗಿ ಪಿಎಂಗೆ ಸಿದ್ದರಾಮಯ್ಯ ಇನ್ನೊಂದು ಪತ್ರ; ಚುರುಕಾದ ವಿದೇಶಾಂಗ ಇಲಾಖೆ

ಭೀಕರ ದೋಣಿ ದುರಂತ; ಪುಟ್ಟ ಮಕ್ಕಳು ಸೇರಿ 6 ಜನ ನೀರುಪಾಲು

ಮಹಾರಾಷ್ಟ್ರ: ಭೀಕರ ಗಾಳಿಗೆ ದೋಣಿಯಿಂದು ಮಗುಚಿ(Boat Capsizes) ಬಿದ್ದಿದ್ದು, ದೋಣಿಯಲ್ಲಿದ್ದ ಆರು ಜನ ನೀರುಪಾಲಾಗಿರುವ ದಾರುಣ ಘಟನೆ ಮಹಾರಾಷ್ಟ್ರದ (Maharastra) ಪುಣೆಯಲ್ಲಿ ನಡೆದಿದೆ. ಜಿಲ್ಲೆಯ ಫಾಲಘರ್ ತಾಲೂಕಿನ ಕಲಾಶಿ ಬಳಿ ದುರ್ಘಟನೆ ಸಂಭವಿಸಿದ್ದು, ಇಬ್ಬರು ಪುಟ್ಟ ಮಕ್ಕಳು ಸೇರಿ ಆರು ಮಂದಿ ಕಣ್ಮರೆ ಆಗಿದ್ದಾರೆ. ನೀರು ಪಾಲಾಗಿರುವ ಆರು ಮಂದಿಗಾಗಿ ಶೋಧ ಕಾರ್ಯಾಚರಣೆ ಕೈಗೆತ್ತಿಕೊಳ್ಳಲಾಗಿದೆ.

ಘಟನೆ ವಿವರ:

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಫಾಲಘರ್ ತಾಲೂಕಿನ ಕಲಾಶಿ ಬಳಿ ದೋಣಿ (Boat) ಮುಗುಚಿ 6 ಮಂದಿ ನೀರು ಪಾಲಾಗಿದ್ದಾರೆ. ಉಜ್ಜನಿ ಜಲಾಶಯದ ಹಿನ್ನೀರಿನಲ್ಲಿ ಕುಟುಂಬಸ್ಥರು ದೋಣಿ ವಿಹಾರಕ್ಕೆ ತೆರಳಿದ್ದರು. ಭೀಮಾ ನದಿಗೆ ಅಡ್ಡಲಾಗಿ ಕಟ್ಟಿರುವ ಉಜ್ಜನಿ ಜಲಾಶಯದಲ್ಲಿ ಗೋಕುಳ ಜಾಧವ್(30) ಕೋಮಲ್ ಜಾಧವ್(26) ಶುಭ ಜಾಧವ್(1) ಮಾಹಿ ಜಾಧವ್(3) ನೀರು ಪಾಲಾಗಿದ್ದಾರೆ. ಇನ್ನೂ ಅದೇ ದೋಣಿಯಲ್ಲಿ ಮತ್ತಿಬ್ಬರು ವಿಹಾರಿಗಳು ಸಹ ಪಯಣಿಸುತ್ತಿದ್ದು, ಅವರೂ ನೀರು ಪಾಲಾಗಿದ್ದಾರೆ ಎನ್ನಲಾಗಿದೆ.

ಆ ಇಬ್ಬರು ದುರ್ದೈವಿಗಳನ್ನು ಕುಗ್ಗಾಂವ್ ಗ್ರಾಮದ ಅನುರಾಗ್ ಅವಘಡೆ, ಗೌರವ್ ಡೋಂಗರೆ ಎಂದು ಗುರುತಿಸಲಾಗಿದೆ. ನೀರುಪಾಲಾಗಿರುವವರ ಹುಡುಕಾಟಕ್ಕೆ ರಾಷ್ತ್ರೀಯ ವಿಪತ್ತು ನಿರ್ವಹಣಾ ದಳ (NDRF) ತಂಡದ ಸಿಬ್ಬಂದಿ ಆಗಮಿಸಿದ್ದಾರೆ. ಸ್ಥಳೀಯ ಪೊಲೀಸರ ಸಹಾಯದೊಂದಿಗೆ ಎನ್ ಡಿ ಆರ್ ಎಫ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಹುಡುಕಾಟ ಮುಂದುವರಿಸಿದ್ದಾರೆ.

ಇನ್ನು ನಿನ್ನೆ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ನೀರುಪಾಲಾಗಿರುವ ಆರು ಜನರು ಬದುಕಿರುವ ಸಾಧ್ಯತೆ ಬಹಳಷ್ಟು ಕಡಿಮೆ ಇದೆ. ಇದಾಗ್ಯೂ ಇದುವರೆಗೆ ಯಾರೊಬ್ಬರ ಶವ ಪತ್ತೆ ಆಗಿಲ್ಲ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಸಮೀಪ ಸಮುದ್ರದ ಹಿನ್ನೀರಿನಲ್ಲೂ ಮೂರು ದಿನಗಳ ಹಿಂದೆ ಪ್ರವಾಸಿಗರ ಬೋಟ್ ಮಗುಚಿದ್ದು, 40 ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ. ಅಳಿವೆ ಸಂಗಮ ಸ್ಥಳದಿಂದ ತುಸು ದೂರದಲ್ಲಿ ಘಟನೆ (Tourist Boat Capsizes) ನಡೆದಿದ್ದು, ಕರಾವಳಿ ಕಾವಲು ಪಡೆ ಮತ್ತು ಸ್ಥಳೀಯ ರಕ್ಷಣಾ ತಂಡದಿಂದ ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ.

ಮೂಡಂಗಿಯ ಗಣೇಶ, ರಮೇಶ ಎಂಬುವವರ ಪ್ರವಾಸಿ ಬೋಟ್ ಮಗುಚಿದ್ದು, ದೋಣಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ಹತ್ತಿಸಿಕೊಂಡಿದ್ದರಿಂದ ಬೋಟ್ ಮಗುಚಿದೆ. ಸಕಾಲಕ್ಕೆ ಕರಾವಳಿ ಕಾವಲು ಪಡೆ ಆಗಮಿಸಿ ರಕ್ಷಣೆ ಮಾಡಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದೆ.

ಮತ್ತೊಂದೆಡೆ ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲುವಿನ ಉಬ್ಬರಬೈಲಿನಲ್ಲಿ ನಡೆದಿದೆ. ಮುಡ್ಡಾಯಿಗುಡ್ಡೆ ಹರೀಶ್ ಪೂಜಾರಿ (48), ಹೃತೇಶ್ ಪೂಜಾರಿ (18) ಮೃತಪಟ್ಟವರು. ಮೀನು ಹಿಡಿಯಲೆಂದು ಉಬ್ಬರಬೈಲು ಕೆರೆಗೆ ಹೋಗಿದ್ದಾಗ ದುರ್ಘಟನೆ ನಡೆದಿದೆ. ಮೀನಿಗೆ ಬಲೆ‌ ಹಾಕುವಾಗ ಆಯತಪ್ಪಿ ಕೆರೆಗೆ ಬಿದ್ದು ಇಬ್ಬರೂ ನೀರುಪಾಲಾಗಿದ್ದಾರೆ. ಕಾರ್ಕಳ ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Prajwal Revanna Case: ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದತಿಗಾಗಿ ಪಿಎಂಗೆ ಸಿದ್ದರಾಮಯ್ಯ ಇನ್ನೊಂದು ಪತ್ರ; ಚುರುಕಾದ ವಿದೇಶಾಂಗ ಇಲಾಖೆ

Prajwal Revanna Case: ರಾಜ್ಯ ಸರ್ಕಾರದ ಪತ್ರ ಆಧರಿಸಿ ಕೆಲಸಕ್ಕೆ ಆರಂಬಿಸಿರುವ ಕೇಂದ್ರ ವಿದೇಶಾಂಗ ಇಲಾಖೆ, ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವ ಪ್ರಕ್ರಿಯೆ ಆರಂಭಿಸಿದೆ. ಪಾಸ್‌ಪೋರ್ಟ್ ಆಕ್ಟ್ 1967ರ ಸೆಕ್ಷನ್ 10(3)(h) ಅಡಿ ಪಾಸ್‌ಪೋರ್ಟ್ ರದ್ದು ಮಾಡಿ. ಭಾರತಕ್ಕೆ ವಾಪಸ್ ಕರೆ ತರಲು ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿ ಪತ್ರದ ಮೂಲಕ ಕೇಂದ್ರದ ಸಹಕಾರವನ್ನು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ.

VISTARANEWS.COM


on

Prajwal Revanna case Siddaramaiah writes to PM narendra Modi
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ (Prajwal Revanna Case) ಕೇಂದ್ರ ಸರಕಾರದ ವಿರುದ್ಧ ರಾಜತಾಂತ್ರಿಕ ಸಮರದ ಹಾದಿ ಹಿಡಿದಿರುವ ಕರ್ನಾಟಕ ಸರ್ಕಾರ, ಇನ್ನೊಂದು ಪತ್ರವನ್ನು ರವಾನಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರಿಗೆ ಮತ್ತೊಂದು ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ (CM Siddaramaiah), ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ (Diplomatic passport) ರದ್ದು ಮಾಡಿ ಎಂದು ಮನವಿ ಮಾಡಿದ್ದಾರೆ.

ರಾಜ್ಯ ಸರ್ಕಾರದ ಪತ್ರ ಆಧರಿಸಿ ಕೆಲಸಕ್ಕೆ ಆರಂಬಿಸಿರುವ ಕೇಂದ್ರ ವಿದೇಶಾಂಗ ಇಲಾಖೆ, ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವ ಪ್ರಕ್ರಿಯೆ ಆರಂಭಿಸಿದೆ. ಪಾಸ್‌ಪೋರ್ಟ್ ಆಕ್ಟ್ 1967ರ ಸೆಕ್ಷನ್ 10(3)(h) ಅಡಿ ಪಾಸ್‌ಪೋರ್ಟ್ ರದ್ದು ಮಾಡಿ. ಭಾರತಕ್ಕೆ ವಾಪಸ್ ಕರೆ ತರಲು ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿ ಪತ್ರದ ಮೂಲಕ ಕೇಂದ್ರದ ಸಹಕಾರವನ್ನು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ. ಎಸ್‌ಐಟಿ ಹೊರಡಿಸಿದ ಆರೆಸ್ಟ್‌ ವಾರೆಂಟ್‌ ಸಮೇತ ಪತ್ರದ ಜೊತೆಗೆ ಲಗತ್ತಿಸಲಾಗಿದೆ.

ಪ್ರಕರಣ ಪ್ರಧಾನ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಹಾಲಿ ಸಂಸದ ಹಾಗೂ ಮಾಜಿ ಪ್ರಧಾನಿಗಳ ಕುಟುಂಬದ ಸದಸ್ಯನಾಗಿದ್ದು, ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಪ್ರಯಾಣ ಮಾಡಿದ್ದಾರೆ. FIR ದಾಖಲಾಗುವ ಕೆಲ ಗಂಟೆಗಳಿಗೆ ಮುನ್ನ ದೇಶ ತೊರೆದಿದ್ದಾರೆ. ಅವರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಒತ್ತಾಯ ಪೂರ್ವಕವಾಗಿ ವಿಡಿಯೋ ಮಾಡಿರುವ ಆರೋಪಗಳಿವೆ. ಇಂತಹ ಆರೋಪಿ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಕಾನೂನು ಕ್ರಮಗಳಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಆರೋಪಿ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಿ. ಈ ವಿಚಾರವನ್ನು ಅತ್ಯಂತ ಗಂಭೀರ ಎಂದು ಪರಿಗಣಿಸಿ. ಸಾರ್ವಜನಿಕ ಹಿತಾಸಕ್ತಿ ಕಾರಣಕ್ಕಾಗಿ ಪಾಸ್‌ಪೋರ್ಟ್ ರದ್ದುಗೊಳಿಸಿ ಭಾರತಕ್ಕೆ ಬರುವಂತೆ ಮಾಡಿ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

ಇದು ಸಿಎಂ ಕೇಂದ್ರಕ್ಕೆ ಎರಡನೇ ಬಾರಿ ಬರೆಯುತ್ತಿರುವ ಪತ್ರವಾಗಿದೆ. ಈ ಹಿಂದೆಯೂ ಒಮ್ಮೆ ಅವರು ಪತ್ರ ಬರೆದಿದ್ದರು. ಪ್ರಕರಣದ ಪ್ರಮುಖ ಆರೋಪಿ ಜೆಡಿಎಸ್‌ ಸಂಸದರಾಗಿದ್ದು, ಜೆಡಿಎಸ್‌ ಜತೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಯನ್ನು ಮುಜುಗರ ಹಾಗೂ ಇಕ್ಕಟ್ಟಿಗೆ ಸಿಕ್ಕಿಸುವುದು ಈ ಪತ್ರಗಳ ಉದ್ದೇಶವಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಈ ಬಾರಿ ವಿದೇಶಾಂಗ ಇಲಾಖೆ ಪ್ರಕ್ರಿಯೆ ಚುರುಕುಗೊಳಿಸಿರುವುದರಿಂದ, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ಗೆ ನಿಜವಾಗಿಯೂ ಸಂಕಷ್ಟ ಎದುರಾಗಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದು ಮಾಡಿದರೆ ಪ್ರಜ್ವಲ್‌ ವಿದೇಶ ಯಾನ ಕಷ್ಟವಾಗಲಿದೆ. ಚಾಲ್ತಿಯಲ್ಲಿಲ್ಲದ ಪಾಸ್‌ಪೋರ್ಟ್‌ ಬಳಸಿದರೆ ಅಧಿಕಾರಿಗಳು ಅವರನ್ನು ಬಂಧಿಸಿ ಭಾರತಕ್ಕೆ ಹಸ್ತಾಂತರಿಸಲು ಸುಲಭವಾಗಲಿದೆ. ಇದರೊಂದಿಗೆ ಪ್ರಜ್ವಲ್‌ಗೆ ಪಲಾಯನದ ದಾರಿಗಳು ಬಂದ್‌ ಆಗಿವೆ.

ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ವಿದೇಶದಲ್ಲಿ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ನಗರದ 42ನೇ ಎಸಿಎಂಎಂ ಕೋರ್ಟ್‌, ಇತ್ತೀಚೆಗೆ ಸಂಸದನ ವಿರುದ್ಧ ಬಂಧನ ವಾರಂಟ್‌ ಹೊರಡಿಸಿ, ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಲು ಅನುಮತಿ ನೀಡಿತ್ತು. ಹೀಗಾಗಿ‌ ಪ್ರಜ್ವಲ್ ಪಾಸ್‌ ಪೋರ್ಟ್ ರದ್ದು ಮಾಡುವಂತೆ ಕೋರಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಎಸ್‌ಐಟಿ ಪತ್ರ ಬರೆದಿದೆ.

ಈ ಕೂಡಲೇ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪಾಸ್ ಪೋರ್ಟ್ ರದ್ದು ಮಾಡಬೇಕು ಎಂದು ಮನವಿ ಮಾಡಿರುವ ಎಸ್‌ಐಟಿ, ಲುಕ್ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ಎಲ್ಲವನ್ನೂ ಪತ್ರದ ಜತೆ ಟ್ಯಾಗ್ ಮಾಡಿದೆ. ಜತೆಗೆ ಪ್ರಜ್ವಲ್ ವಿರುದ್ಧದ ಪ್ರಕರಣಗಳ ಬಗ್ಗೆ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿದ್ದು, ಸಂಸದ ಯಾವ ದೇಶದಲ್ಲಿ ಇದ್ದಾನೆ ಎಂಬ ಮಾಹಿತಿ ನೀಡುವಂತೆ ಮನವಿ ಮಾಡಿದೆ.

ಇದನ್ನೂ ಓದಿ: Prajwal Revanna Case: 400 ಮಹಿಳೆಯರ ಮೇಲೆ ಪ್ರಜ್ವಲ್‌ ಮಾಸ್‌ ರೇಪ್‌ ಆರೋಪ; ರಾಹುಲ್ ಗಾಂಧಿ ವಿರುದ್ಧ ಡಿಜಿಗೆ ಜೆಡಿಎಸ್‌ ದೂರು

Continue Reading
Advertisement
gold rate today kiara
ಚಿನ್ನದ ದರ15 mins ago

Gold Rate Today: ಚಿನ್ನ ಕೊಳ್ಳಲು ಇಂದೇ ಸುದಿನ, ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ!

hotel oterra bomb hoax
ಕ್ರೈಂ33 mins ago

bomb Hoax: ಶಾಲೆ, ದೇವಸ್ಥಾನದ ಬಳಿಕ ರಾಜಧಾನಿಯ ಪ್ರತಿಷ್ಠಿತ ಹೋಟೆಲ್‌ಗೂ ಬಾಂಬ್‌ ಬೆದರಿಕೆ

T20 World Cup 2024
ಕ್ರೀಡೆ34 mins ago

T20 World Cup 2024: ಇನ್ನೆರಡು ದಿನದಲ್ಲಿ ಮಿನಿ ವಿಶ್ವಕಪ್​ ಸಮರಕ್ಕೆ ರೋಹಿತ್​, ಕೊಹ್ಲಿ ಸೇರಿ ಮೊದಲ ಬ್ಯಾಚ್​ ನ್ಯೂಯಾರ್ಕ್​ಗೆ ಪ್ರಯಾಣ

physical abuse & murder
ಕ್ರೈಂ48 mins ago

Physical Abuse & Murder: ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಬರ್ಬರವಾಗಿ ಕೊಲೆ; ದೃಶ್ಯಂ ಸಿನಿಮಾ ರೀತಿಯಲ್ಲಿ ಎಸ್ಕೇಪ್‌ಗೆ ಯತ್ನ

cylinder blast in Tumkur
ತುಮಕೂರು52 mins ago

Cylinder Blast: ಗ್ಯಾಸ್‌ ಸಿಲಿಂಡರ್ ಸ್ಫೋಟ; 7 ದಿನ ನರಳಾಡಿ ಪ್ರಾಣಬಿಟ್ಟ ಇಬ್ಬರು ಗಾಯಾಳುಗಳು

Kalki 2898 AD
ಸಿನಿಮಾ1 hour ago

Kalki 2898 AD: ʼಕಲ್ಕಿʼ ಚಿತ್ರದ ನಾಯಕ ಭೈರವನ ಆಪ್ತ ಗೆಳೆಯ ಬುಜ್ಜಿ ಯಾರು? ಈ ವಿಡಿಯೊ ನೋಡಿ

Prajwal Revanna case Siddaramaiah writes to PM narendra Modi
ಕ್ರೈಂ1 hour ago

Prajwal Revanna Case: ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದತಿಗಾಗಿ ಪಿಎಂಗೆ ಸಿದ್ದರಾಮಯ್ಯ ಇನ್ನೊಂದು ಪತ್ರ; ಚುರುಕಾದ ವಿದೇಶಾಂಗ ಇಲಾಖೆ

Physical Abuse
ಕ್ರೈಂ2 hours ago

Physical Abuse: ಹಿಂದು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಮುಸ್ಲಿಂ ಯುವಕರಿಗೆ ಜೀವಾವಧಿ ಶಿಕ್ಷೆ

India Head Coach
ಕ್ರೀಡೆ2 hours ago

India Head Coach: ರಿಕಿ ಪಾಂಟಿಂಗ್ ಟೀಮ್​ ಇಂಡಿಯಾದ ಮುಂದಿನ ಕೋಚ್​!

Viral Video
ವೈರಲ್ ನ್ಯೂಸ್2 hours ago

Viral Video: ಸುಡುವ ಮರಳಿನಲ್ಲಿ ಹಪ್ಪಳ ಸುಟ್ಟ ಬಿಎಸ್‌ಎಫ್‌ ಯೋಧ; ಎಲ್ಲೆಡೆ ಇದೇ ವಿಡಿಯೋ ವೈರಲ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ7 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌