Site icon Vistara News

Ripponpet News: ಹುಲ್ಲಿನ ಬಣವೆಗೆ ಬೆಂಕಿ; ಐವತ್ತು ಸಾವಿರ ರೂಪಾಯಿ ನಷ್ಟ

banavege benki rippanpete

#image_title

ರಿಪ್ಪನ್‌ಪೇಟೆ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ (Ripponpet News) ಸಮೀಪದ ಕೆಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಸರೂರು ಮಣಿಕೆರೆ ನಾಗೇಂದ್ರಪ್ಪ ಗೌಡ ಅವರಿಗೆ ಸೇರಿದ ಹುಲ್ಲಿನ ಬಣವೆಗೆ ಬೆಂಕಿ ಬಿದ್ದು ಸಂಪೂರ್ಣ ಸುಟ್ಟು ಹೋದ ಘಟನೆ ಶುಕ್ರವಾರ (ಫೆ.೩) ನಡೆದಿದೆ.

ಸುಮಾರು ಐವತ್ತು ಸಾವಿರ ರೂಪಾಯಿ ಮೌಲ್ಯದ ಹುಲ್ಲು ಸಂಪೂರ್ಣ ಬೆಂಕಿಗೆ ಆಹುತಿಯಾಗಿದ್ದು, ಸ್ಥಳಕ್ಕೆ ಗ್ರಾಮಸ್ಥರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ಆರಿಸಲು ಪ್ರಯತ್ನಿಸಿದರೂ ಫಲಕಾರಿಯಾಗಲಿಲ್ಲ.

ಇದನ್ನೂ ಓದಿ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ಈ ಬಜೆಟ್‌ನಲ್ಲಿ 25 ಕೋಟಿ ಮೀಸಲಿಡಿ: ಸಿಎಂಗೆ ನಾಡೋಜ ಡಾ. ಮಹೇಶ ಜೋಶಿ ಮನವಿ

ಇದರಿಂದ ರೈತ ನಾಗೇಂದ್ರ ಅವರಿಗೆ ಅಪಾರ ಪ್ರಮಾಣದ ನಷ್ಟವಾಗಿದೆ. ಆದರೆ, ಯಾರು ಈ ಕೃತ್ಯ ಎಸೆಗಿದ್ದಾರೆ ಎಂಬುದು ತಿಳಿದುಬಂದಿಲ್ಲ.

Exit mobile version