Ripponpet News: ಶಿಕ್ಷಕರ ವಿರುದ್ಧ ಸುಳ್ಳು ದೂರು ವಿರೋಧಿಸಿ ವಿದ್ಯಾರ್ಥಿ, ಪೋಷಕರಿಂದ ಪ್ರತಿಭಟನೆ - Vistara News

ಕರ್ನಾಟಕ

Ripponpet News: ಶಿಕ್ಷಕರ ವಿರುದ್ಧ ಸುಳ್ಳು ದೂರು ವಿರೋಧಿಸಿ ವಿದ್ಯಾರ್ಥಿ, ಪೋಷಕರಿಂದ ಪ್ರತಿಭಟನೆ

Ripponpet News: ಬಿಲ್ಲೇಶ್ವರ ಶಾಲೆಯಲ್ಲಿನ ಶಿಕ್ಷಕರಿಬ್ಬರ ಮೇಲೆ ದುರುದ್ದೇಶದಿಂದ ಪೋಕ್ಸೊ ಕಾಯಿದೆಯ ಸುಳ್ಳು ಪ್ರಕರಣ ದಾಖಲಿಸಿರುವ ಕ್ರಮ ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟಿಸಿದರು.

VISTARANEWS.COM


on

students protest ripponpet
ಸುಳ್ಳು ದೂರು ದಾಖಲಿಸಿದವರ ವಿರುದ್ಧ ತರಗತಿ ಬಹಿಷ್ಕರಿಸಿ ಧರಣಿ ನಡೆಸಿದ ವಿದ್ಯಾರ್ಥಿಗಳು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಿಪ್ಪನ್‌ಪೇಟೆ: (Ripponpet News) ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಲ್ಲೇಶ್ವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಶಿಕ್ಷಕರಿಬ್ಬರ ಮೇಲೆ ದುರುದ್ದೇಶದಿಂದ ಪೋಕ್ಸೊ ಕಾಯಿದೆಯ ಸುಳ್ಳು ಪ್ರಕರಣ ದಾಖಲಿಸಿರುವ ಕ್ರಮ ವಿರೋಧಿಸಿ ಶಾಲಾಭಿವೃದ್ಧಿ ಸಮಿತಿಯವರು, ಪೋಷಕರು ಹಾಗೂ ಸಾರ್ವಜನಿಕರು ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಸೇರಿ ಸೋಮವಾರ (ಫೆ.೬) ಧರಣಿ ನಡೆಸಿದರು.

ನಮ್ಮ ಶಿಕ್ಷಕರು ಬರುವವರೆಗೂ ನಾವು ತರಗತಿಗೆ ಹೋಗುವುದಿಲ್ಲ ಎಂದು ಹಠ ಹಿಡಿದು ವಿದ್ಯಾರ್ಥಿಗಳು, ತಮ್ಮ ಪೋಷಕರೊಂದಿಗೆ ರಾಜ್ಯ ಹೆದ್ದಾರಿಯ ಶಾಲಾ ಮುಂಭಾಗ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ತೀರ್ಥಹಳ್ಳಿ ಡಿವೈಎಸ್‌ಪಿ ಗಜಾನನ ವಾಮನ ಸುತಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.‌ ಆರ್.ಕೃಷ್ಣಮೂರ್ತಿ ಭೇಟಿ ನೀಡಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಬಳಿ ಅಹವಾಲು ಅಲಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗೆ ತಬ್ಬಿಬ್ಬಾದ ಅಧಿಕಾರಿಗಳು ಇಂತಹ ವಿಚಾರವನ್ನು ಮಕ್ಕಳ ಎದುರು ಹೇಳಲು ಸಾಧ್ಯವಿಲ್ಲ. ಪೋಷಕರೊಂದಿಗೆ ಸಮಾಲೋಚನೆ ನಡೆಸಿ ನ್ಯಾಯ ಕೊಡಿಸುವ ಭರವಸೆಯನ್ನು ನೀಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಸಮಾಧಾನಚಿತ್ತರಾಗಿ ಪೋಷಕರ ಹಾಗೂ ಅಧಿಕಾರಿಗಳ ಸಮಲೋಚನೆಗೆ ಸಹಮತ ವ್ಯಕ್ತಪಡಿಸಿದರು. ಪಾರದರ್ಶಕ ತನಿಖೆಯಿಂದ ಶಾಲಾ ಶಿಕ್ಷಕರನ್ನು ಮತ್ತು ವಿದ್ಯಾರ್ಥಿ ಸಮೂಹದೊಂದಿಗೆ ಪ್ರತ್ಯೇಕ ಮಾಹಿತಿ ಪಡೆದು ನ್ಯಾಯಾಲಯಕ್ಕೆ ವರದಿ ಸಲ್ಲಿಸುವುದಾಗಿ ಹೇಳಿ ಪ್ರತಿಭಟನಾಕಾರರ ಮನವೊಲಿಸುವಲ್ಲಿ ಯಶಸ್ವಿಯಾದರು.

ಇದನ್ನೂ ಓದಿ: Modi In Karnataka: ವಿದ್ಯುತ್‌ ವಾಹನ ಉತ್ಪಾದನೆಯಲ್ಲಿ ಕರ್ನಾಟಕ ನಂ.1 ಆಗಲಿದೆ: ಸಿಎಂ ಬಸವರಾಜ ಬೊಮ್ಮಾಯಿ

ಪ್ರತಿಭಟನೆ ನೇತೃತ್ವವನ್ನು ಎಸ್.ಡಿ.ಎಂ.ಸಿ.ಅಧ್ಯಕ್ಷ ಮಂಜುನಾಥ, ನಾಗಭೂಷಣ, ಗಣೇಶ್ ಬಿಲ್ಲೇಶ್ವರ, ಸತೀಶ್ ಎಸ್, ರಾಜು ಗರ್ತಿಕೆರೆ, ಅಭಿಷೇಕ, ಕಿರಣಕುಮಾರ್, ರಾಮಪ್ಪ, ಎಚ್.ಎನ್. ಗುರುರಾಜ ಭಂಡಾರಿ, ಸಚಿನ್, ಎನ್.ರಾಘವೇಂದ್ರ, ಸತೀಶ್ ಈರನಬೈಲು, ಕೆ.ವೈ.ಮಂಜುನಾಥ, ಕೆ.ಇ.ಗಣೇಶ್, ಕಿರಣ ಮತ್ತಿತರ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಂಡರು. ನಂತರ ಹುಂಚ ನಾಡ ಕಚೇರಿಯವರೆಗೆ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗೆ ಉಪ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದರು. ಇದೇ ವೇಳೆ ತೀರ್ಥಹಳ್ಳಿ ಡಿವೈಎಸ್‌ಪಿ ಅವರಿಗೂ ಮನವಿ ಸಲ್ಲಿಸಲಾಯಿತು.

ಇದನ್ನೂ ಓದಿ: Modi In Karnataka: ರಾಗಿ ಮುದ್ದೆ, ರಾಗಿ ರೊಟ್ಟಿ ಸ್ವಾದಕ್ಕೆ ಮನಸೋತ ನರೇಂದ್ರ ಮೋದಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Self Harming: ಲಿವಿಂಗ್ ಟುಗೆದರ್‌ನಲ್ಲಿದ್ದ ಜೋಡಿ ವಿಷ ಸೇವಿಸಿ ಆತ್ಮಹತ್ಯೆ

Self Harming: ಬೆಂಗಳೂರು ಹೊರವಲಯ ಬನ್ನೇರುಘಟ್ಟದ ಜನತಾ ಕಾಲೋನಿಯಲ್ಲಿ ಜೋಡಿಯೊಂದು ಆತ್ಮಹತ್ಯೆ ಮಾಡಿಕೊಂಡಿದೆ. ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

VISTARANEWS.COM


on

self harming
Koo

ಆನೇಕಲ್: ಸಹಜೀವನ ನಡೆಸುತ್ತಿದ್ದ ಜೋಡಿ ವಿಷ ಸೇವಿಸಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯ ಬನ್ನೇರುಘಟ್ಟದ ಜನತಾ ಕಾಲೋನಿಯಲ್ಲಿ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ಜೋಡಿ, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಪ್ರಭು(38), ಲಕ್ಕಮ್ಮ(30) ಮೃತರು. ಪ್ರಭು ಡ್ರೈವರ್ ಕೆಲಸ ಮಾಡುತ್ತಿದ್ದ. ಲಕ್ಕಮ್ಮ ಗಾರ್ಮೆಂಟ್ಸ್ ಕೆಲಸ ಮಾಡುತ್ತಿದ್ದರು. ಕಳೆದ ಕೆಲ ವರ್ಷಗಳ ಹಿಂದೆ ಒಬ್ಬರಿಗೊಬ್ಬರು ಪರಿಚಿಯವಾಗಿತ್ತು. ಹೀಗಾಗಿ ಇಬ್ಬರು ಒಂದೇ ಮನೆಯಲ್ಲಿ ಸಹಜೀವನ ನಡೆಸುತ್ತಿದ್ದರು. ಇವರು ವಿಶ್ವನಾಥ್ ಎಂಬುವರ ಮನೆಯಲ್ಲಿ ಬಾಡಿಗೆಗೆ ಇದ್ದರು.

ಮನೆಯಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿ ಸ್ಥಳೀಯರು ತೆರಳಿ ನೋಡಿದಾಗ, ಜೋಡಿ ಆತ್ಮಹತ್ಯೆಗೆ ಶರಣಾಗಿರುವುದು ತಿಳಿದುಬಂದಿದೆ. ಇಬ್ಬರು ಮೃತಪಟ್ಟು ಮೂರ್ನಾಲ್ಕು ದಿನ ಕಳೆದಿದ್ದರಿಂದ ಕೊಳೆತ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ | Uttarkashi Trekking Tragedy: ಉತ್ತರಕಾಶಿಯಲ್ಲಿ ಪ್ರತಿಕೂಲ ಹವಾಮಾನ; ಚಾರಣಕ್ಕೆ ತೆರಳಿದ್ದ ಕರ್ನಾಟಕದ ನಾಲ್ವರ ಸಾವು

ಅಪ್ಪ-ಅಮ್ಮನ ಜಗಳ ಬಿಡಿಸಲು ಹೋದ ಇನ್‌ಫೋಸಿಸ್‌ ಎಂಜಿನಿಯರ್ ತಂದೆಯ ಇರಿತಕ್ಕೆ ಬಲಿ

murder case infosys engineer

ಬೆಂಗಳೂರು: ಗಂಡ- ಹೆಂಡತಿ ಜಗಳ (couple fight) ಆಕಸ್ಮಿಕವಾಗಿ ಮಗನ ಕೊಲೆಯಲ್ಲಿ (Murder Case) ಅಂತ್ಯವಾದ ದಾರುಣ ಘಟನೆ ಜರಗನಹಳ್ಳಿಯಲ್ಲಿ ನಡೆದಿದೆ. ಇನ್‌ಫೋಸಿಸ್‌ (Infosys) ಕಂಪನಿಯಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ (Software engineer) ಮಗ, ತಂದೆ- ತಾಯಿಯ ಜಗಳ ಬಿಡಿಸಲು ಹೋಗಿ ಕೊಲೆಯಾಗಿದ್ದಾನೆ.

ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಜರಗನಹಳ್ಳಿಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ದುರ್ಘಟನೆ ನಡೆದಿದೆ. ಯಶವಂತ್ (23) ತಂದೆಯಿಂದಲೇ ಕೊಲೆಯಾದ ಪುತ್ರ. ಸರ್ಜಾಪುರ ಸಮೀಪದ ಮ್ಯಾಟ್ರಿಕ್ಸ್ ಎಂಬ ಕಂಪನಿಯಲ್ಲಿ ಯಶವಂತ್‌ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ.

ಮೃತನ ಅಜ್ಜಿ ಕಾಯಿಲೆ ಬಿದ್ದು ಹಾಸಿಗೆ ಹಿಡಿದಿದ್ದು, ಆಕೆಯನ್ನು ನೋಡಿಕೊಳ್ಳುವ ವಿಚಾರಕ್ಕೆ ಆಗಾಗ ಜಗಳ ಆಗುತ್ತಿತ್ತು. ಬೆಳಗ್ಗೆಯೂ ಇದೇ ವಿಚಾರಕ್ಕಾಗಿ ಅಪ್ಪ ಅಮ್ಮನ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಜಗಳ ಬಿಡಿಸಲು ಹೋದ ಮಗನನ್ನು ಹೆದರಿಸಲು ತಂದೆ ಅಡುಗೆ ಮನೆಯಿಂದ ಚಾಕು ತಂದು ಇರಿಯಲು ಹೋಗಿದ್ದಾನೆ. ಚಾಕು ಯುವಕನ ಎದೆಗೆ ಆಳವಾಗಿ ನಾಟಿ ಪ್ರಾಣ ಹೋಗಿದೆ ಎಂದು ತಿಳಿದುಬಂದಿದೆ.

“ಯಶವಂತ ಉತ್ತಮ ವ್ಯಕ್ತಿತ್ವ ಹೊಂದಿದ್ದ ಹುಡುಗ. ಇನ್ಫೋಸಿಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಎಂಜಿನಿಯರ್ ವೃತ್ತಿ ಮಾಡುತ್ತ, ತಂದೆ ಮಾಡಿದ್ದ ಸಾಲ ಸಹ ತೀರಿಸುತ್ತಿದ್ದ. ನೇತ್ರದಾನ ಸಹ ಮಾಡಿದ್ದ. ಆತನ ಆಸೆಯಂತೆ ಕುಟುಂಬಸ್ಥರು‌ ಯಶವಂತನ ಕಣ್ಣುಗಳನ್ನು ದಾನ ಮಾಡಿದ್ದಾರೆ” ಎಂದು ಸಂಬಂಧಿ ರಾಕೇಶ್ ಮಾಹಿತಿ ನೀಡಿದ್ದಾರೆ.

ಸದ್ಯ ಆರೋಪಿ ತಂದೆ ಬಸವರಾಜುವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. “ಪುಟ್ಟೇನಹಹಳ್ಳಿ ಠಾಣಾ ವ್ಯಾಪ್ತಿಯ ಜರಗನಹಳ್ಳಿಯಲ್ಲಿ 23 ವರ್ಷದ ಯುವಕನ ಕೊಲೆಯಾಗಿದೆ. ಗಂಡ ಹೆಂಡತಿ ಹೊಡೆದಾಡುತ್ತಿದ್ದಾಗ ಬಿಡಿಸಲು ಹೋಗಿದ್ದಾನೆ. ಈ ವೇಳೆ ತಂದೆ ಚಾಕು ತಂದು ಹೆದರಿಸಲು ಹೋಗಿದ್ದ. ಯುವಕ ಆಸ್ಪತ್ರೆ ಮಾರ್ಗ‌ಮಧ್ಯೆ ಸಾವನ್ನಪ್ಪಿದ್ದಾನೆ” ಎಂದು ದಕ್ಷಿಣ ವಿಭಾಗ ಡಿಸಿಪಿ ಲೊಕೇಶ್ ಜಗಲಾಸರ್ ಹೇಳಿಕೆ ನೀಡಿದ್ದಾರೆ.

Continue Reading

Lok Sabha Election 2024

J Shantha: ಅಣ್ಣ-ತಂಗಿಗೆ ಕಹಿ; ಕರ್ನಾಟಕದಲ್ಲಿ ಶ್ರೀರಾಮುಲು, ಆಂಧ್ರದಲ್ಲಿ ಜೆ. ಶಾಂತಾಗೆ ಸೋಲು!

J Shantha: ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಮೊದಲು ಜೆ. ಶಾಂತಾ ಅವರು ಜಗನ್‌ ಮೋಹನ್‌ ರೆಡ್ಡಿ ನೇತೃತ್ವದಲ್ಲಿ ವೈಎಸ್‌ಆರ್‌ಸಿಪಿ ಸೇರಿದ್ದರು. ಹಿಂದುಪುರದಲ್ಲಿ ಜೆ. ಶಾಂತಾ ಅವರು ಸೋಲುಂಡರೂ ಅವರು 5.78 ಲಕ್ಷ ಮತಗಳನ್ನು ಸೆಳೆದಿರುವುದು ಪ್ರಮುಖವಾಗಿದೆ. 2009ರ ಲೋಕಸಭೆ ಚುನಾವಣೆಯಲ್ಲಿ ಬಳ್ಳಾರಿಯಿಂದ ಸ್ಪರ್ಧಿಸಿದ್ದ ಜೆ. ಶಾಂತಾ ಅವರು ಕಾಂಗ್ರೆಸ್‌ನ ಎನ್‌.ವೈ.ಹನುಮಂತಪ್ಪ ಅವರ ವಿರುದ್ಧ ಗೆಲುವು ಸಾಧಿಸಿ, 5 ವರ್ಷ ಸಂಸದೆಯಾಗಿದ್ದರು.

VISTARANEWS.COM


on

J Shantha
Koo

ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶವು (Election Results 2024) ಅಣ್ಣ ಹಾಗೂ ತಂಗಿಗೆ ಕಹಿ ತಂದಿದೆ. ಕರ್ನಾಟಕದ ಬಳ್ಳಾರಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಬಿ. ಶ್ರೀರಾಮುಲು (B Sriramulu) ಅವರು ಸೋಲನುಭವಿಸಿದ್ದರೆ, ಆಂಧ್ರಪ್ರದೇಶದ ಹಿಂದುಪುರ (Hindupur) ಲೋಕಸಭೆ ಕ್ಷೇತ್ರದಲ್ಲಿ ವೈಎಸ್‌ಆರ್‌ಸಿಪಿಯಿಂದ ಸ್ಪರ್ಧಿಸಿದ್ದ ಜೆ. ಶಾಂತಾ (J Shantha) ಅವರು ಕೂಡ ಸೋಲನುಭವಿಸಿದ್ದಾರೆ. ಆ ಮೂಲಕ ಅಣ್ಣ-ತಂಗಿಯು ಚುನಾವಣೆಯಲ್ಲಿ ಪರಾಜಯ ಕಂಡಂತಾಗಿದೆ.

ಬಳ್ಳಾರಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಇ. ತುಕಾರಾಮ್‌ ಅವರ ವಿರುದ್ಧ ಶ್ರೀರಾಮುಲು ಅವರು 98,992 ಮತಗಳ ಅಂತರದಿಂದ ಸೋಲನುಭವಿಸಿದ್ದಾರೆ. ಇ. ತುಕಾರಾಮ್‌ ಅವರು 7,30,845 ಮತಗಳನ್ನು ಪಡೆದರೆ, ಶ್ರೀರಾಮುಲು ಅವರು 6,31,853 ಮತಗಳನ್ನು ಪಡೆದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿಯೂ ಶ್ರೀರಾಮುಲು ಅವರು ಸೋಲುಂಡಿದ್ದರು. ಈಗ ಲೋಕಸಭೆ ಚುನಾವಣೆಯಲ್ಲೂ ಅವರು ಪರಾಜಯಗೊಂಡಿದ್ದಾರೆ.

ಹಿಂದುಪುರದಲ್ಲಿ ಏನಾಯ್ತು?

ಹಿಂದುಪುರ ಲೋಕಸಭೆ ಕ್ಷೇತ್ರದಲ್ಲಿ ಟಿಡಿಪಿಯ ಬಿ.ಕೆ. ಪಾರ್ಥಸಾರಥಿ ಅವರು ಜೆ. ಶಾಂತಾ ಅವರ ವಿರುದ್ಧ 1,32,427 ಮತಗಳ ಅಂತರದಿಂಧ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಜೆ. ಶಾಂತಾ ಅವರು ಹಿಂದುಪುರದಲ್ಲಿ ಸೋಲನುಭವಿಸಿದಂತಾಗಿದೆ. ಕರ್ನಾಟಕದಲ್ಲಿ 2023ರಲ್ಲಿ ನಡೆದ ವಿಧಾನಸಭೆ ಚುನಾವಣೆ ವೇಳೆ ಜೆ. ಶಾಂತಾ ಅವರು ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ, ಅವರಿಗೆ ಟಿಕೆಟ್‌ ಸಿಗದ ಕಾರಣ ಆಂಧ್ರಪ್ರದೇಶದತ್ತ ಮುಖ ಮಾಡಿ, ಹಿಂದುಪುರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು.

ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಮೊದಲು ಜೆ. ಶಾಂತಾ ಅವರು ಜಗನ್‌ ಮೋಹನ್‌ ರೆಡ್ಡಿ ನೇತೃತ್ವದಲ್ಲಿ ವೈಎಸ್‌ಆರ್‌ಸಿಪಿ ಸೇರಿದ್ದರು. ಹಿಂದುಪುರದಲ್ಲಿ ಜೆ. ಶಾಂತಾ ಅವರು ಸೋಲುಂಡರೂ ಅವರು 5.78 ಲಕ್ಷ ಮತಗಳನ್ನು ಸೆಳೆದಿರುವುದು ಪ್ರಮುಖವಾಗಿದೆ. 2009ರ ಲೋಕಸಭೆ ಚುನಾವಣೆಯಲ್ಲಿ ಬಳ್ಳಾರಿಯಿಂದ ಸ್ಪರ್ಧಿಸಿದ್ದ ಜೆ. ಶಾಂತಾ ಅವರು ಕಾಂಗ್ರೆಸ್‌ನ ಎನ್‌.ವೈ.ಹನುಮಂತಪ್ಪ ಅವರ ವಿರುದ್ಧ ಗೆಲುವು ಸಾಧಿಸಿ, 5 ವರ್ಷ ಸಂಸದೆಯಾಗಿದ್ದರು.

2014, 2019ರಲ್ಲಿ ಬಳ್ಳಾರಿಯಲ್ಲಿ ಏನಾಗಿತ್ತು?

2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ದೇವೇಂದ್ರಪ್ಪ ಅವರು ಕಾಂಗ್ರೆಸ್‌ನ ವಿ.ಎಸ್.ಉಗ್ರಪ್ಪ ಅವರ ವಿರುದ್ಧ ಗೆಲುವು ಸಾಧಿಸಿದ್ದರು. ಇನ್ನು 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಎನ್‌.ವೈ. ಹನುಮಂತಪ್ಪ ಅವರ ವಿರುದ್ಧ ಬಿಜೆಪಿಯ ಬಿ. ಶ್ರೀರಾಮುಲು ಅವರು ಭರ್ಜರಿ ಗೆಲುವು ಸಾಧಿಸಿದ್ದರು. 2009ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಜೆ. ಶಾಂತಾ ಅವರು ಗೆಲುವು ಸಾಧಿಸಿದ್ದರು.

ಇದನ್ನೂ ಓದಿ: Udupi Chikmagalur Election Result 2024 : ಉಡುಪಿಯಲ್ಲಿ ಬಿಜೆಪಿಯ ಕೋಟಾ ಶ್ರೀನಿವಾಸ್​ ಪೂಜಾರಿಗೆ ವಿಜಯ

Continue Reading

ಪ್ರಮುಖ ಸುದ್ದಿ

Kumar Bangarappa: ಶಿವರಾಜ್ ಕುಮಾರ್ ನಮ್ಮೂರಿನ ಜಾತ್ರೆಯಲ್ಲಿ ಕುಣಿಯಲು ಅರ್ಜಿ ಹಾಕಲಿ! ಗೀತಾ ಸೋತ ಹಿನ್ನೆಲೆಯಲ್ಲಿ ಕುಮಾರ್ ಬಂಗಾರಪ್ಪ ಗೇಲಿ

Kumar Bangarappa: ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಸೋತ ಹಿನ್ನೆಲೆಯಲ್ಲಿ ಸಹೋದರಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್, ಬಾವ ಶಿವರಾಜ್ ಕುಮಾರ್, ಸಹೋದರ ಮಧುಬಂಗಾರಪ್ಪ ಅವರ ಬಗ್ಗೆ ಮಾಜಿ ಶಾಸಕ ಕುಮಾರ್‌ ಬಂಗಾರಪ್ಪ ವ್ಯಂಗ್ಯವಾಡಿದ್ದಾರೆ.

VISTARANEWS.COM


on

Kumar Bangarappa
Koo

ಶಿವಮೊಗ್ಗ: ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ (Karnataka election results 2024) ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಸ್ಪರ್ಧಿಸಿ ಸೋತ ಸಹೋದರಿ ಗೀತಾ ಶಿವರಾಜ್‌ಕುಮಾರ್‌ಗೆ ಮಾಜಿ ಶಾಸಕ ಕುಮಾರ್ ಬಂಗಾರಪ್ಪ (Kumar Bangarappa) ಟಕ್ಕರ್ ಕೊಟ್ಟಿದ್ದಾರೆ. ಬಂಗಾರಪ್ಪ ಹಾಗೂ ರಾಜ್ ಕುಮಾರ್ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದೆ ಸೋಲಿಗೆ ಕಾರಣ. ನಟ ಶಿವರಾಜ್ ಕುಮಾರ್ ನಿರುದ್ಯೋಗಿ ಆಗಬೇಕಿಲ್ಲ, ನಮ್ಮ ಊರಿನ ಜಾತ್ರೆಯಲ್ಲಿ ಕುಣಿಯೋಕೆ ಅರ್ಜಿ ಹಾಕಲಿ ಎಂದು ಕುಮಾರ್ ಬಂಗಾರಪ್ಪ ಗೇಲಿ ಮಾಡಿದ್ದಾರೆ.

ಶಿವಮೊಗ್ಗ ಲೋಕಸಭಾ ಚುನಾವಣೆ ಫಲಿತಾಂಶದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ನನ್ನ ತಂಗಿ ಸಿನಿಮಾ ಡಾನ್ ಆಗಿರುವುದರಿಂದ ಬೇಸರ ಪಡುವುದು ಬೇಕಿಲ್ಲ. ದೊಡ್ಮನೆ ವ್ಯವಹಾರ ಸಾಕಷ್ಟಿದೆ, ಅದು ಬೇರೆಯವರಿಗೆ ಅವಕಾಶ ಸಿಗಲ್ಲ. ಹೆದರಿಸುವ, ಬೆದರಿಸುವ, ಹುಷಾರ್ ಎನ್ನುವ ಮಾತುಗಳು ಏನಿದ್ದರೂ ತಮ್ಮ ಪಟಾಲಂ ಮುಂದೆ ಮಾತ್ರ ಇರಲಿ. ದಿಕ್ಕು ಗೆಟ್ಟು ದಿಕ್ಕಾ ಪಾಲಾಗಿ ಬೆಂಗಳೂರು ಸೇರಿದವರಿಗೆ ಇದು ಕೊನೆಯ ಎಚ್ಚರಿಕೆ. ನೀವು ಹಿಂತುಗಿರುಗಿ ಬರುವುದು ನಿಮ್ಮ ಕನಸಿನ ಮಾತು. ಹೋಗಿ ಬನ್ನಿ ಟಾಟಾ ಬೈ ಬೈ ಎಂದು ತಿರುಗೇಟು ನೀಡಿದ್ದಾರೆ.

ಬಂಗಾರಪ್ಪನವರನ್ನು ಪ್ರಚಾರ ಸಾಮಗ್ರಿಯಾಗಿ ಬಳಸಿಕೊಂಡವರಿಗೆ ತಕ್ಕ ಶಾಸ್ತಿ

ಬಂಗಾರಪ್ಪನವರನ್ನು ಕೇವಲ ಪ್ರಚಾರ ಸಾಮಗ್ರಿಯನ್ನಾಗಿ ಬಳಸಿಕೊಂಡವರಿಗೆ ತಕ್ಕ ಶಾಸ್ತಿಯಾಗಿದೆ ಎಂದು ಗೀತಾ ಶಿವರಾಜ್‌ಕುಮಾರ್‌, ಬಾವ ಶಿವರಾಜ್‌ ಕುಮಾರ್‌ ಹಾಗೂ ಸಹೋದರ ಮಧು ಬಂಗಾರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಶಾಸಕ ಕುಮಾರ್‌ ಬಂಗಾರಪ್ಪ, ಕರ್ನಾಟಕ ಕಂಡ ಧೀಮಂತ ರಾಜಕಾರಣಿ, ಬಡವರ ಬಂಧು ಎಂಬ ಸಾರ್ಥಕ ಬಿರುದಾವಳಿಯನ್ನು ತಮ್ಮ ಹೆಸರಿನೊಡನೆ ನಡೆಸಿಕೊಂಡು ಬದುಕಿದವರು ಸಾರೆಕೊಪ್ಪ ಬಂಗಾರಪ್ಪ. ಹಿಂದುಳಿದ ವರ್ಗಗಳಿಗೆ ಆಶಾಕಿರಣವಾಗಿದ್ದ, ರೈತಬಂದುವೂ, ಗೇಣಿದಾರರ ಜೀವಜಲವೆನಿಸಿದ್ದ ಹೋರಾಟಗಾರ, ನಾಡು ನುಡಿ ಸಂಸ್ಕೃತಿಗಳ ರಕ್ಷಾ ದೀಕ್ಷೆಯನ್ನು ತೊಟ್ಟಿದ್ದ ವೀರಯೋಧನೆನಿಸಿದ್ದ ಕರ್ನಾಟಕದ ಈ ಮಾಜಿ ಮುಖ್ಯಮಂತ್ರಿ, ಲಿಂಗಾಯತ, ಬ್ರಾಹ್ಮಣ, ಒಕ್ಕಲಿಗರೆಲ್ಲರಲ್ಲಿಯೂ ಸಮ ಭಾವ, ಸಮಚಿತ್ತದಿಂದ ಬೆರೆತಿದ್ದವರು. ಇವರ ಆಡಳಿತ ವೈಖರಿಯು ಅನುಕರಣೀಯ ಮಾತ್ರವಲ್ಲದೆ ಆದರ್ಶರೂಪದ್ದಾಗಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ | Shivamogga Election Result 2024: ಶಿವಮೊಗ್ಗದಲ್ಲಿ ಬಿಜೆಪಿಯ ಬಿ.ವೈ.ರಾಘವೇಂದ್ರಗೆ ವಿಜಯಮಾಲೆ

ಇವರು ಜಾರಿಗೆ ತಂದಿದ್ದ ಪಂಚಮುಖಿ ಕಾರ್ಯಕ್ರಮಗಳಾದ ವಿಶ್ವ, ಸುಶ್ರತ, ಆರಾಧನ, ಆಶ್ರಯ, ಅಕ್ಷಯ ಮುಂತಾದವನ್ನು ಇಡೀ ರಾಜ್ಯ ನೆನೆಯುತ್ತಾ ಆರಾಧಿಸುತ್ತಿದೆ, ಬೇರೆ ರಾಜ್ಯಗಳೂ ಅನುಕರಿಸುತ್ತಿವೆ. ಇಂತಹ ಒಬ್ಬ ಧಿರೋದ್ಧಾತ ನಾಯಕನನ್ನು ನನ್ನ ತಮ್ಮ ಹಾಗೂ ತಂಗಿ ತಮ್ಮ ಸ್ವಾರ್ಥಸಾಧನೆಗಾಗಿ, ಕೇವಲ ಒಂದು ಲೋಕಸಭಾ ಕ್ಷೇತ್ರಕ್ಕೆ ಅಂದರೆ ಶಿವಮೊಗ್ಗ ಕ್ಷೇತ್ರಕ್ಕೆ ಸೀಮಿತಗೊಳಿಸಿದ್ದು ಇವರ ಸಂಕುಚಿತ ಸ್ವಭಾವದಿಂದ ಬಂಗಾರಪ್ಪನವರನ್ನು ಕೇವಲ ಪ್ರಚಾರ ಸಾಮಗ್ರಿಯನ್ನಾಗಿ ಬಳಸಿಕೊಂಡ ಇವರಿಗೆ ತಕ್ಕ ಶಾಸ್ತಿಯಾಯಿತು. ಈ ಮಹಾಪರಾಧಕ್ಕಾಗಿ ಜಿಲ್ಲೆಯ, ಕ್ಷೇತ್ರದ ಜನರ ಕ್ಷಮಾಪಣೆ ಕೇಳಿ ಹೋಗಿಬರಲಿ, ಟಾಟಾ! ಎಂದು ತಿಳಿಸಿದ್ದಾರೆ.

ಮೇಲಾಗಿ, ಕನ್ನಡದ ಕಣ್ಮಣಿ Dr. ರಾಜಕುಮಾರ್ ರವರ ಹೆಸರನ್ನು ದುರುಪಯೋಗ ಪಡಿಸಿಕೊಂಡಿದ್ದಲ್ಲದೆ ಅವರಿಗಿಲ್ಲದಿದ್ದ ಇಂಗಿತವನ್ನು ಇತ್ತೆಂದು ಪ್ರಚುರಪಡಿಸಿ ಲಾಭ ಮಾಡಿಕೊಳ್ಳಬಯಸಿದ ಇವರಿಗೆ ಮಾಡಿದ್ದುಣೋ ಮಹಾರಾಯ ಎಂಬಂತ ಸ್ಥಿತಿಯಾಗಿದೆ. ಉತ್ತಮ ಉದ್ದೇಶ ಇವರದ್ದಾಗಿದ್ದರೆ ಖಂಡಿತ ವಿಜಯಲಕ್ಷ್ಮಿ ಒಲಿಯುತ್ತಿದ್ದಳು, ಸ್ವಂತ ಸಹೋದರನ ಭವಿಷ್ಯಕ್ಕೆ ತೊಡರುಗಾಲು ಹಾಕಲೆಂದೇ ಬೆಂಗಳೂರಿನಿಂದ ಧಾವಿಸಿಬಂದು ತಿಳಿಯಾಗಿಸಬೇಕಿದ್ದ ವಾತಾವರಣವನ್ನು ಕಲುಷಿತಗೊಳಿಸಿ, ದಿಕ್ಕು ದೆಸೆ ಇಲ್ಲದಂತಾಗಿ ಹೋಗಿ ಗೂಡು ಸೇರಿಕೊಂಡಿದ್ದಾರೆ ಬೆಂಗಳೂರಿಗೆ, ಹಿಂತಿರುಗಿ ಬರುವುದು ಕನಸಿನ ಮಾತು. ಅವರ ಕ್ಷೇತ್ರ, ಸಿನಿಮಾ ಅದನ್ನು ನಿಭಾಯಿಸಿಕೊಂಡಿರುವುದು ಆರೋಗ್ಯಕರ ಎಂದು ಸಲಹೆ ನೀಡಿದ್ದಾರೆ.

ಈ ವಿಜಯೋತ್ಸವದ ಕೊಡುಗೆ ಜಿಲ್ಲೆಯ ಹಾಗೂ ಲೋಕ ಸಭಾ ಕ್ಷೇತ್ರದ ಮತದಾರರಿಂದ ಲಭಿಸಿದ್ದು ಅವರಿಗೆ ನಾವು ಚಿರಋಣಿಗಳಾಗಿರುತ್ತೇವೆ ಅವರ ಆಶಯಗಳನ್ನು ಸಾಕಾರಗೊಳಿಸುತ್ತೇವೆ ಅವರ ನಂಬಿಕೆಗೆ ಚ್ಯುತಿಬಾರದಂತೆ ನಡೆದುಕೊಳ್ಳುತ್ತೇವೆ. ನಮ್ಮ ಪಕ್ಷದ ಕಾರ್ಯಕರ್ತರು, ಹಿರಿಯ ಕಿರಿಯ ಪದಾಧಿಕಾರಿಗಳು, ಸಂಘಟನೆಯಲ್ಲಿ ತೊಡಗಿಸಿಕೊಂಡ ಬ್ರಿಗೇಡ್/ಶಿಸ್ತಿನ ಸಿಪಾಯಿಗಳು ಹಗಲಿರುಲೆನ್ನದೆ ದುಡಿದು, B Y ರಾಘವೇಂದ್ರರಿಗೆ ಅತ್ಯಧಿಕ ಬಹುಮತದಿಂದ ವಿಜಯಶಾಲಿಯನ್ನಾಗಿಸಿದ್ದಾರೆ ಅವರೆಲ್ಲರಿಗೂ ನನ್ನ ನಮನಗಳು. ರಾಜ್ಯಮಟ್ಟದಲ್ಲಿ, ರಾಷ್ಟ್ರ ಮಟ್ಟದಲ್ಲಿ ಮಾರ್ಗದರ್ಶನ ನೀಡಿದ ನಾಯಕರೆಲ್ಲರಿಗೂ ಧನ್ಯವಾದಗಳು.

War is over but battle remains ZP, TP ಚುನಾವಣೆಗಳು, ಇದೇ ಓಟ ನಿರಂತರವಾಗಿ ನಡೆಯಬೇಕು, ಗೆಲುವನ್ನು ನಮ್ಮದಾಗಿಸಿಕೊಳ್ಳಬೇಕು ಪಣತೋಡೋಣ, ಗುರಿ ಮುಟ್ಟೋಣ. ಜೊತೆ ಜೊತೆಗೆ ಅಭಿವೃದ್ಧಿ ಕಾರ್ಯಗಳು ಶರವೇಗದಲ್ಲಿ ಚಾಲನೆಯಗಬೇಕು. ಪಶ್ಚಿಮ ಘಟ್ಟದ ಈ ತಪ್ಪಲು ಸರ್ವ ಜನಾಂಗದ ಶಾಂತಿಯ ತೋಟವಾಗಿ ಕಂಗೊಳಿಸಬೇಕು. ಇನ್ನು ನನ್ನ ತಮ್ಮ ಮಧು ತಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು, ಇಲ್ಲ CM ಅವನನ್ನು ಸಂಪುಟ ದಿಂದ ವಜಾ ಮಾಡಬೇಕು. ಕನ್ನಡಕ್ಕೆ, ಕನ್ನಡನಾಡಿಗೆ ಅವಮಾನಪಡಿಸಿದಾತ, ಟ್ರೊಲ್ ಮಾಡಿದವರಿಗೆ, ಮಾಧ್ಯಮದವರಿಗೆ ಶಾಪ ಹಾಕಿ ತಾನೇ ಶಾಪಗ್ರಸ್ತನಾದ. ಅವನ bAವ, ನನ್ನ ತಂಗಿಯ ಗಂಡ Dr. ಶಿವರಾಜಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಿಕೊಳ್ಳಬಹುದು.

ನನ್ನ ತಂಗಿ ಸಿನಿಮಾ ಡಾನ್ ಆಗಿರುವುದರಿಂದ ಬೇಸರಕ್ಕೆ ಕಾರಣವಿಲ್ಲ ದೊಡ್ಡಮನೆಯ ವ್ಯವಹಾರ ಸಾಕಷ್ಟಿರುತ್ತದೆ, ಬೇರೆಯವರಿಗೆ ಅವಕಾಶ ಸಿಗಲಾರದು. ಹೆದರಿಸುವ, ಬೆದರಿಸುವ, ಹುಷಾ‌ರ್ ಅನ್ನುವ ಮಾತುಗಳೇನಿದ್ದರೂ ಗಂಟಲೋಳಗೇ, ನಾಲ್ಕು ಗೋಡೆಗಳೊಳಗೆ, ತಮ್ಮ ಪಟಾಲಂ ಮುಂದೆ ಮಾತ್ರ ಚಾಲ್ತಿಯಲ್ಲಿರಬೇಕು ಎಂದು ತಾಕೀತು ಮಾಡಿದ್ದಾರೆ.

ಇದನ್ನೂ ಓದಿ | Udupi Chikmagalur Election Result 2024 : ಉಡುಪಿಯಲ್ಲಿ ಬಿಜೆಪಿಯ ಕೋಟಾ ಶ್ರೀನಿವಾಸ್​ ಪೂಜಾರಿಗೆ ವಿಜಯ

ದಿಕ್ಕು ಗೆಟ್ಟು ದಿಕ್ಕಾಪಾಲಾಗಿ ಹೋಗಿ ಬೆಂಗಳೂರು ಸೇರಿಕೊಂಡವರಿಗೆ ಕೊನೆಯ ಎಚ್ಚರಿಕೆ, ನೀವು ಹಿಂತಿರುಗಿ ಬರುವುದು ಕನಸಿನ ಮಾತು. ಜೈಹಿಂದ್, ಜೈ ಕರ್ನಾಟಕ! ಎಂದು ತಿಳಿಸಿದ್ದಾರೆ. ಇದೇ ವೇಳೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಮತ್ತೊಮ್ಮೆ ಸಂಸದರಾಗಿ ವಿಜಯಶಾಲಿಯಾಗಿದ್ದಾರೆ ಎಂದು ಬಿ. ವೈ ರಾಘವೇಂದ್ರ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.

Continue Reading

ಕ್ರೈಂ

Murder Case: ಅಪ್ಪ-ಅಮ್ಮನ ಜಗಳ ಬಿಡಿಸಲು ಹೋದ ಇನ್‌ಫೋಸಿಸ್‌ ಎಂಜಿನಿಯರ್ ತಂದೆಯ ಇರಿತಕ್ಕೆ ಬಲಿ

Murder Case: ಮೃತನ ಅಜ್ಜಿ ಕಾಯಿಲೆ ಬಿದ್ದು ಹಾಸಿಗೆ ಹಿಡಿದಿದ್ದು, ಆಕೆಯನ್ನು ನೋಡಿಕೊಳ್ಳುವ ವಿಚಾರಕ್ಕೆ ಆಗಾಗ ಜಗಳ ಆಗುತ್ತಿತ್ತು. ಬೆಳಗ್ಗೆಯೂ ಇದೇ ವಿಚಾರಕ್ಕಾಗಿ ಅಪ್ಪ ಅಮ್ಮನ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಜಗಳ ಬಿಡಿಸಲು ಹೋದ ಮಗನನ್ನು ಹೆದರಿಸಲು ತಂದೆ ಅಡುಗೆ ಮನೆಯಿಂದ ಚಾಕು ತಂದು ಇರಿಯಲು ಹೋಗಿದ್ದಾನೆ.

VISTARANEWS.COM


on

murder case infosys engineer
Koo

ಬೆಂಗಳೂರು: ಗಂಡ- ಹೆಂಡತಿ ಜಗಳ (couple fight) ಆಕಸ್ಮಿಕವಾಗಿ ಮಗನ ಕೊಲೆಯಲ್ಲಿ (Murder Case) ಅಂತ್ಯವಾದ ದಾರುಣ ಘಟನೆ ಜರಗನಹಳ್ಳಿಯಲ್ಲಿ ನಡೆದಿದೆ. ಇನ್‌ಫೋಸಿಸ್‌ (Infosys) ಕಂಪನಿಯಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ (Software engineer) ಮಗ, ತಂದೆ- ತಾಯಿಯ ಜಗಳ ಬಿಡಿಸಲು ಹೋಗಿ ಕೊಲೆಯಾಗಿದ್ದಾನೆ.

ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಜರಗನಹಳ್ಳಿಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ದುರ್ಘಟನೆ ನಡೆದಿದೆ. ಯಶವಂತ್ (23) ತಂದೆಯಿಂದಲೇ ಕೊಲೆಯಾದ ಪುತ್ರ. ಸರ್ಜಾಪುರ ಸಮೀಪದ ಮ್ಯಾಟ್ರಿಕ್ಸ್ ಎಂಬ ಕಂಪನಿಯಲ್ಲಿ ಯಶವಂತ್‌ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ.

ಮೃತನ ಅಜ್ಜಿ ಕಾಯಿಲೆ ಬಿದ್ದು ಹಾಸಿಗೆ ಹಿಡಿದಿದ್ದು, ಆಕೆಯನ್ನು ನೋಡಿಕೊಳ್ಳುವ ವಿಚಾರಕ್ಕೆ ಆಗಾಗ ಜಗಳ ಆಗುತ್ತಿತ್ತು. ಬೆಳಗ್ಗೆಯೂ ಇದೇ ವಿಚಾರಕ್ಕಾಗಿ ಅಪ್ಪ ಅಮ್ಮನ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಜಗಳ ಬಿಡಿಸಲು ಹೋದ ಮಗನನ್ನು ಹೆದರಿಸಲು ತಂದೆ ಅಡುಗೆ ಮನೆಯಿಂದ ಚಾಕು ತಂದು ಇರಿಯಲು ಹೋಗಿದ್ದಾನೆ. ಚಾಕು ಯುವಕನ ಎದೆಗೆ ಆಳವಾಗಿ ನಾಟಿ ಪ್ರಾಣ ಹೋಗಿದೆ ಎಂದು ತಿಳಿದುಬಂದಿದೆ.

“ಯಶವಂತ ಉತ್ತಮ ವ್ಯಕ್ತಿತ್ವ ಹೊಂದಿದ್ದ ಹುಡುಗ. ಇನ್ಫೋಸಿಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಎಂಜಿನಿಯರ್ ವೃತ್ತಿ ಮಾಡುತ್ತ, ತಂದೆ ಮಾಡಿದ್ದ ಸಾಲ ಸಹ ತೀರಿಸುತ್ತಿದ್ದ. ನೇತ್ರದಾನ ಸಹ ಮಾಡಿದ್ದ. ಆತನ ಆಸೆಯಂತೆ ಕುಟುಂಬಸ್ಥರು‌ ಯಶವಂತನ ಕಣ್ಣುಗಳನ್ನು ದಾನ ಮಾಡಿದ್ದಾರೆ” ಎಂದು ಸಂಬಂಧಿ ರಾಕೇಶ್ ಮಾಹಿತಿ ನೀಡಿದ್ದಾರೆ.

ಸದ್ಯ ಆರೋಪಿ ತಂದೆ ಬಸವರಾಜುವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. “ಪುಟ್ಟೇನಹಹಳ್ಳಿ ಠಾಣಾ ವ್ಯಾಪ್ತಿಯ ಜರಗನಹಳ್ಳಿಯಲ್ಲಿ 23 ವರ್ಷದ ಯುವಕನ ಕೊಲೆಯಾಗಿದೆ. ಗಂಡ ಹೆಂಡತಿ ಹೊಡೆದಾಡುತ್ತಿದ್ದಾಗ ಬಿಡಿಸಲು ಹೋಗಿದ್ದಾನೆ. ಈ ವೇಳೆ ತಂದೆ ಚಾಕು ತಂದು ಹೆದರಿಸಲು ಹೋಗಿದ್ದ. ಯುವಕ ಆಸ್ಪತ್ರೆ ಮಾರ್ಗ‌ಮಧ್ಯೆ ಸಾವನ್ನಪ್ಪಿದ್ದಾನೆ” ಎಂದು ದಕ್ಷಿಣ ವಿಭಾಗ ಡಿಸಿಪಿ ಲೊಕೇಶ್ ಜಗಲಾಸರ್ ಹೇಳಿಕೆ ನೀಡಿದ್ದಾರೆ.

ಹಾಸನದಲ್ಲಿ ರೌಡಿ ಚೈಲ್ಡ್‌ ರವಿ ಕೊಲೆ

ಹಾಸನ: ಹಾಸನ ನಗರದಲ್ಲಿ ಗುರುವಾರ ಬೆಳಗ್ಗೆ ಬರ್ಬರ ಕೊಲೆಯೊಂದು ನಡೆದಿದೆ. ನಟೋರಿಯಸ್ ರೌಡಿ ರವಿ ಅಲಿಯಾಸ್ ಚೈಲ್ಡ್ ರವಿ (45) ಎಂಬಾತನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಹಾಸನದ ಹೇಮಾವತಿನಗರದಲ್ಲಿ ಘಟನೆ ನಡೆದಿದೆ. ಮಾರಕಾಸ್ತ್ರಗಳೊಂದಿಗೆ ದಾಳಿ ನಡೆಸಿದ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ರೌಡಿ ರವಿ ಕುಡಿಯುವ ನೀರು ತೆಗೆದುಕೊಂಡು ಬೈಕ್‌ನಲ್ಲಿ ತೆರಳುತ್ತಿದ್ದಾಗ ಏಕಾಏಕಿ ದಾಳಿ ಮಾಡಿದ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ರಕ್ತ ಸ್ರಾವದಿಂದಾಗಿ ಆತ ಅಲ್ಲೇ ಕೊಲೆಯಾಗಿದ್ದಾನೆ. ಕೊಲೆಯಾದ ರವಿಯ ವಿರುದ್ಧ ಕೊಲೆ, ದರೋಡೆ ಸೇರಿದಂತೆ ಹಲವು ಪ್ರಕರಣಗಳಿದ್ದವು. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ. ಪೆನ್‌ಷನ್ ಮೊಹಲ್ಲಾ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದೂರು ದಾಖಲಿಸುತ್ತಿದ್ದಾರೆ.

ಬಿಜೆಪಿ ಮುಖಂಡನ ಮೇಲೆ ತಲ್ವಾರ್‌ನಿಂದ ಹಲ್ಲೆ

ಮಂಗಳೂರು/ಯಾದಗಿರಿ: ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ (Assault Case) ಬಿಜೆಪಿ ಕಾರ್ಯಕರ್ತ ಮತ್ತು ಬಿಜೆಪಿ ಮುಖಂಡನ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ದಾಳಿ ನಡೆಸಿರುವುದು ಮಂಗಳವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯತಡ್ಕದ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ತಲ್ವಾರ್‌ನಿಂದ ಹಲ್ಲೆ ಮಾಡಲಾಗಿದ್ದು, ಸುರಪುರದಲ್ಲಿ ಉಪಚುನಾವಣೆಯ ಬಿಜೆಪಿ ಪರಾಜಿತ ಅಭ್ಯರ್ಥಿ ರಾಜುಗೌಡ ಅಳಿಯನ ಕಾರಿನ ಮೇಲೆ ಕೈ ಕಾರ್ಯಕರ್ತರಿಂದ ಕಲ್ಲು ತೂರಾಟ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: Murder Case : ಶಿವಮೊಗ್ಗದಲ್ಲಿ ವೃದ್ಧೆ ಬರ್ಬರ ಕೊಲೆ; ಅನ್ಯಕೋಮಿನ ಹುಡುಗನಿಂದ ಮಾರಣಾಂತಿಕ ಹಲ್ಲೆ

Continue Reading
Advertisement
self harming
ಕರ್ನಾಟಕ8 mins ago

Self Harming: ಲಿವಿಂಗ್ ಟುಗೆದರ್‌ನಲ್ಲಿದ್ದ ಜೋಡಿ ವಿಷ ಸೇವಿಸಿ ಆತ್ಮಹತ್ಯೆ

R Ashwin
ಕ್ರೀಡೆ14 mins ago

R Ashwin: ಮೆಗಾ ಹರಾಜಿಗೂ ಮುನ್ನ ಚೆನ್ನೈ ಫ್ರಾಂಚೈಸಿ ಸೇರಿದ ಆರ್​. ಅಶ್ವಿನ್; ಹೊಸ ಜವಾಬ್ದಾರಿ

Arvind Kejriwal
ದೇಶ38 mins ago

Arvind Kejriwal: ಕೇಜ್ರಿವಾಲ್‌ಗೆ ಮತ್ತೆ ಹಿನ್ನಡೆ; ಮಧ್ಯಂತರ ಜಾಮೀನು ಅರ್ಜಿ ವಜಾ-ನ್ಯಾಯಾಂಗ ಬಂಧನ ವಿಸ್ತರಣೆ

Election Results 2024
ಪ್ರಮುಖ ಸುದ್ದಿ51 mins ago

Bangalore Central Election Result 2024 : ಪಿ.ಸಿ ಮೋಹನ್​ ಮರ್ಯಾದೆ ಉಳಿಸಿದ ಮಹದೇವರಪುರ ಕ್ಷೇತ್ರ!

India vs Ireland
ಕ್ರೀಡೆ51 mins ago

India vs Ireland: ರೋಹಿತ್​ ಜತೆ ವಿರಾಟ್​ ಕೊಹ್ಲಿ ಇನಿಂಗ್ಸ್​ ಆರಂಭ?

J Shantha
Lok Sabha Election 202455 mins ago

J Shantha: ಅಣ್ಣ-ತಂಗಿಗೆ ಕಹಿ; ಕರ್ನಾಟಕದಲ್ಲಿ ಶ್ರೀರಾಮುಲು, ಆಂಧ್ರದಲ್ಲಿ ಜೆ. ಶಾಂತಾಗೆ ಸೋಲು!

Nitish Kumar
Lok Sabha Election 20241 hour ago

Nitish Kumar: ಎನ್‌ಡಿಎ ಸರ್ಕಾರಕ್ಕೆ ಜೆಡಿಯು, ಟಿಡಿಪಿ ಬೆಂಬಲ; ಸ್ಪೀಕರ್‌ ಹುದ್ದೆಗೆ ಎರಡೂ ಪಕ್ಷಗಳಿಂದ ಬೇಡಿಕೆ?

Kumar Bangarappa
ಪ್ರಮುಖ ಸುದ್ದಿ1 hour ago

Kumar Bangarappa: ಶಿವರಾಜ್ ಕುಮಾರ್ ನಮ್ಮೂರಿನ ಜಾತ್ರೆಯಲ್ಲಿ ಕುಣಿಯಲು ಅರ್ಜಿ ಹಾಕಲಿ! ಗೀತಾ ಸೋತ ಹಿನ್ನೆಲೆಯಲ್ಲಿ ಕುಮಾರ್ ಬಂಗಾರಪ್ಪ ಗೇಲಿ

Devendra Fadnavis
ದೇಶ2 hours ago

Devendra Fadnavis: ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಸಾಧನೆ; ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಫಡ್ನವೀಸ್

SCO vs ENG
ಕ್ರೀಡೆ2 hours ago

SCO vs ENG: ಮಳೆಯಿಂದ ಇಂಗ್ಲೆಂಡ್​-ಸ್ಕಾಟ್ಲೆಂಡ್​ ಪಂದ್ಯ ರದ್ದು; ನೇಪಾಳ ವಿರುದ್ಧ ಗೆದ್ದ ನೆದರ್ಲೆಂಡ್ಸ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ1 day ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ2 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು4 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ6 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌