Site icon Vistara News

Road Accident | ಕಾರು-ಬೈಕ್‌ ನಡುವೆ ಅಪಘಾತ; ಸ್ಥಳದಲ್ಲೇ ಒಬ್ಬನ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

Road Accident

ಬೆಂಗಳೂರು ಗ್ರಾಮಾಂತರ: ಇಲ್ಲಿನ ದೊಡ್ಡಬಳ್ಳಾಪುರ ತಾಲೂಕಿನ ಕತ್ತಿಹೊಸಹಳ್ಳಿ ಬಳಿ ಕಾರು ಮತ್ತು ಬೈಕ್‌ ನಡುವೆ (Road Accident) ಅಪಘಾತವಾಗಿದೆ. ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತೊಬ್ಬನ ಸ್ಥಿತಿ ಚಿಂತಾಜನಕವಾಗಿದೆ.

ದ್ಯಾವಸಂದ್ರ ಗ್ರಾಮದ ರವಿ (25) ಮೃತ ದುರ್ದೈವಿ. ಚನ್ನಬಸಯ್ಯನಪಾಳ್ಯ ಗ್ರಾಮದ ಚರಣ್‌ (23) ಗಂಭೀರವಾಗಿ ಗಾಯಗೊಂಡಿದ್ದು, ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದೊಡ್ಡಬೆಳವಂಗಳದಿಂದ ದ್ಯಾವಸಂದ್ರಕ್ಕೆ ಹಿಂದಿರುಗುವಾಗ ಏಕಾಏಕಿ ಬಂದ ಕಾರು ಡಿಕ್ಕಿ ಹೊಡೆದಿದೆ.

ದೊಡ್ಡಬಳ್ಳಾಪುರದಿಂದ ತುಮಕೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 207ರಲ್ಲಿ ದುರ್ಘಟನೆ ನಡೆದಿದೆ. ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ | Accident in Delhi | ದೆಹಲಿಯ ಅಪಘಾತ ಪ್ರಕರಣಕ್ಕೆ ಟ್ವಿಸ್ಟ್, ಸ್ಕೂಟಿಯಲ್ಲಿ ಇದ್ದದ್ದು ಒಬ್ಬರಲ್ಲ ಇಬ್ಬರು!

Exit mobile version