Site icon Vistara News

Road Accident : ಬೆಂಗಳೂರಲ್ಲಿ ಸರಣಿ ಅಪಘಾತ; ಬೈಕ್‌ ಸವಾರ ದಾರುಣ ಸಾವು

Road Accident in Bengaluru car and bike trashed

ಬೆಂಗಳೂರು: ಇಲ್ಲಿನ ಔಟರ್ ರಿಂಗ್ ರೋಡ್‌ನ ಕಲ್ಯಾಣನಗರ ಬ್ರಿಡ್ಜ್‌ ಬಳಿ ಸರಣಿ ಅಪಘಾತ (Road Accident) ಸಂಭವಿಸಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್‌ ಸವಾರ ಮೃತಪಟ್ಟಿದ್ದಾರೆ. ಹಾಸನ ಮೂಲದ ನೇಮರಾಜು (35) ಮೃತ ದುರ್ದೈವಿ.

ವೇಗವಾಗಿ ಬಂದ ಟ್ರಕ್‌ವೊಂದು ಮುಂದಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಐದಾರು ವಾಹನಗಳು ಜಖಂಗೊಂಡಿವೆ. ನಾಲ್ಕು ಕಾರು ಹಾಗೂ ದ್ವಿಚಕ್ರ ವಾಹನ ಪುಡಿ ಪುಡಿ ಆಗಿದೆ. ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ನೇಮರಾಜು ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಬಾಣಸವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ಬಾಣಸವಾಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Drowned in Lake : ನಶೆ ಏರಿಸಿಕೊಂಡು ಈಜಲು ಕೆರೆಗಿಳಿದ ಗೆಳೆಯರಿಬ್ಬರು ಸಾವು

ಆನೇಕಲ್‌ನಲ್ಲಿ ಡೆಡ್ಲಿ ಆಕ್ಸಿಡೆಂಟ್

ಬೆಂಗಳೂರು ಹೊರವಲಯ ಆನೇಕಲ್‌ ತಾಲೂಕಿನ ರಾಮಕೃಷ್ಣಾಪುರದ ಬಳಿ ತಿರುವು ಪಡೆಯುತ್ತಿದ್ದ ಟಾಟಾಏಸ್‌ ವಾಹನಕ್ಕೆ ಬೈಕ್‌ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸೂರ್ಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಕೃಷ್ಣಾಪುರದಲ್ಲಿ ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ಅಪಘಾತದ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಟಾಟಾ ಏಸ್ ವಾಹನ ಚಾಲಕ ಇಂಡಿಕೆಟರ್‌ ಹಾಕಿ ರಸ್ತೆ ತಿರುವು ಪಡೆಯುತ್ತಿದ್ದ. ಈ ವೇಳೆ ಅತಿವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದು, ಸವಾರ ದೂರಕ್ಕೆ ಹಾರಿದ್ದಾನೆ. ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳನ್ನು ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version