Site icon Vistara News

Road Accident : ಪ್ರತ್ಯೇಕ ಕಡೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರ ಸಾವು

accident

ತುಮಕೂರು/ರಾಮನಗರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 48ರ ಟಾಟಾ ಶೋ ರೂಂ ಮುಂಭಾಗ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ (Road Accident) ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪುನೀತ್ ಕುಮಾರ್ (28) ಸ್ಥಳದಲ್ಲೇ ಮೃತಪಟ್ಟ ಬೈಕ್‌ ಸವಾರ. ಇವರು ಬೇಗೂರು ಮೂಲದವರಾಗಿದ್ದಾರೆ ಎಂಬುದು ತಿಳಿದುಬಂದಿದೆ. ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ.

ಸ್ಥಳಕ್ಕೆ ಸಂಚಾರಿ ಪೊಲೀಸ್ ಠಾಣೆ ಸಿಪಿಐ ಗುರುನಾಥ್ ಭೇಟಿ ನೀಡಿದ್ದು, ಡಿಕ್ಕಿ ಹೊಡೆದ ವಾಹನದ ಬಗ್ಗೆ ಮಾಹಿತಿ ಕಲೆಹಾಕಲು ಮುಂದಾಗಿದ್ದಾರೆ. ಸ್ಥಳದಲ್ಲಿ ಮೃತನ ಸ್ನೇಹಿತರು ರೋಧಿಸುತ್ತಿದುದು ಕಂಡುಬಂತು.

ಚನ್ನಪಟ್ಟಣದಲ್ಲಿ ಸಾವು
ರಾಮನಗರ ಜಿಲ್ಲೆಯ ಚನ್ನಪಟ್ಟಣ ಗಡಿ ಭಾಗದ ಚಾಮುಂಡೇಶ್ವರಿ ಆಸ್ಪತ್ರೆ ಬಳಿ ಅಪರಿಚಿತ ವ್ಯಕ್ತಿಗೆ ವಾಹನವೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ದಾಟುವಾಗ ಘಟನೆ ನಡೆದಿದೆ.

ಮೃತದೇಹದ ಮೇಲೆ ವಾಹನಗಳು ಹರಿದು ಗುರುತು ಸಿಗದಂತೆ ಮಾಂಸದ ಮುದ್ದೆಯಂತಾಗಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಚನ್ನಪಟ್ಟಣ ತಾಲೂಕು ಆಸ್ಪತ್ರೆಗೆ ಮೃತದೇಹವನ್ನು ರವಾನೆ ಮಾಡಲಾಗಿದೆ. ಚನ್ನಪಟ್ಟಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ | Murder case : ಆರ್‌ಟಿಐ ಕಾರ್ಯಕರ್ತನ ಕೊಲೆ ಪ್ರಕರಣ; ನ್ಯಾಯಾಲಯಕ್ಕೆ ಶರಣಾದ ಪ್ರಮುಖ ಆರೋಪಿ

Exit mobile version