Site icon Vistara News

Road Accident : ಟಿಪ್ಪರ್ ಲಾರಿ ಹರಿದು ಆಟೋ ಚಾಲಕ ಸಾವು; ತಲೆ, ದೇಹವೆಲ್ಲ ನಜ್ಜುಗುಜ್ಜು!

Lorry Hits Auto Driver

ಕೋಲಾರ : ಕೋಲಾರ ತಾಲೂಕಿನ ಮಡೇರಹಳ್ಳಿಯ ರಾ.ಹೆ 75ರ ಗೇಟ್ ಬಳಿ ಟಿಪ್ಪರ್ ಲಾರಿ (Lorry Accident) ಹರಿದು ಆಟೋ ಚಾಲಕ ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಸೂಲೂರು ಗ್ರಾಮದ ನಿವಾಸಿ ಶಶಿಕುಮಾರ್‌ (29) ಮೃತ ದುರ್ದೈವಿ.

ವೇಗವಾಗಿ ಬಂದ ಟಿಪ್ಪರ್‌ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಬಳಿಕ ಲಾರಿ ಟಯರ್‌ ಚಾಲಕ ತಲೆ ಹಾಗೂ ದೇಹದ ಮೇಲೆ ಹತ್ತಿದ್ದರಿಂದ ಎಲ್ಲವೂ ಛಿದ್ರವಾಗಿದೆ. ಅಪಘಾತ ನಡೆಯುತ್ತಿದ್ದಂತೆ ಟಿಪ್ಪರ್ ಲಾರಿ ಬಿಟ್ಟು ಚಾಲಕ ಪರಾರಿ ಆಗಿದ್ದಾನೆ.

ಕೋಲಾರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ರಸ್ತೆಯಲ್ಲಿ ನಜ್ಜುಗುಜ್ಜಾಗಿದ್ದ ಮೃತದೇಹವನ್ನು ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದರು.

ತಿರುವಿನಲ್ಲಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಸರ್ಕಾರಿ ಬಸ್‌ವೊಂದು (Bus Accident) ಡಿಕ್ಕಿಯಾದ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಸಮೀಪದ ಕುಂಬಾರಗಡಿಗೆ ಎಂಬಲ್ಲಿ (Road Accident) ನಡೆದಿದೆ.

ಕೆಎಸ್‌ಆರ್‌ಟಿಸಿ ಬಸ್ ಮಡಿಕೇರಿಯಿಂದ ಸೂರ್ಲಬ್ಬಿ ಮಾರ್ಗವಾಗಿ ಸೋಮವಾರಪೇಟೆಗೆ ತೆರಳುತ್ತಿತ್ತು. ಕುಂಬಾರಗಡಿ ಸಮೀಪ ಬರುತ್ತಿದ್ದಾಗ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾಗಿದೆ. ಮರಕ್ಕೆ ಡಿಕ್ಕಿಯಾಗದೆ ಮುಂದೆ ಚಲಿಸಿದ್ದರೆ 50 ಅಡಿ ಪ್ರಪಾತಕ್ಕೆ ಉರುಳಿ ಬೀಳುವ ಆತಂಕ ಎದುರಾಗಿತ್ತು.

ಈ ಬಸ್ ನಲ್ಲಿ ಹೆಚ್ಚಾಗಿ ಶಾಲಾ ಮಕ್ಕಳೆ ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಎಲ್ಲರು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೂರ್ಲಬ್ಬಿ ಈ ಒಂದು ರಸ್ತೆ ಹೆಚ್ಚು ಕಿರಿದಾಗಿದ್ದು ಹೆಚ್ಚು ತಿರುವುಗಳೆ ಈ ರಸ್ತೆಯಲ್ಲಿದೆ. ತಿರುವುಗಳಲ್ಲಿ ಯಾವುದೇ ನಾಮಫಲಕಗಳು ಇಲ್ಲದಿರುವುದು ಹೊಸದಾಗಿ ಬರುವ ಚಾಲಕರಿಗೆ ರಸ್ತೆಯ ಅರಿವಿಲ್ಲದೆ ಈ ರೀತಿಯ ಅಪಘಾತಗಳು ಸಂಭವಿಸುತ್ತಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version