Site icon Vistara News

Road Accident | ಅಂಕೋಲಾ ಬಳಿ ಬಸ್‌-ಕಾರು ನಡುವೆ ಭೀಕರ ಅಪಘಾತ; ನಾಲ್ವರ ಸಾವು, ಒಬ್ಬ ಗಂಭೀರ

ankola accident ನಾಲ್ವರ ಸಾವು ಬಸ್‌ ಕಾರು ಅಪಘಾತ

ಕಾರವಾರ: ಅಂಕೋಲಾದ ಬಾಳೆಗುಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಾನುವಾರ (ಜ.೧) ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ (Road Accident) ಸಂಭವಿಸಿದ್ದು, ತಮಿಳುನಾಡು ಮೂಲದ ನಾಲ್ವರು ಪ್ರವಾಸಿಗರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಬ್ಬನ ಸ್ಥಿತಿ ಗಂಭೀರವಾಗಿದೆ.

ಗಂಭೀರಗೊಂಡಿರುವ ಪ್ರಯಾಣಿಕನನ್ನು ಅಂಕೋಲಾ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರು ಅತಿ ವೇಗದಿಂದ ಬರುತ್ತಿದ್ದುದೇ ಅಪಘಾತ ಕಾರಣ ಎಂದು ಶಂಕಿಸಲಾಗಿದೆ. ಕಾರಿನ ನಿಯಂತ್ರಣ ತಪ್ಪಿದ್ದು, ಬಸ್‌ನ ಎಡಬದಿಗೆ ಗುದ್ದಿದೆ.

ಹುಬ್ಬಳ್ಳಿಯಿಂದ ಗೋಕರ್ಣಕ್ಕೆ ಬಸ್ ಸಂಚರಿಸುತ್ತಿದ್ದರೆ, ಅಂಕೋಲಾ ಕಡೆಯಿಂದ ಯಲ್ಲಾಪುರದತ್ತ ಕಾರು ಹೊರಟಿತ್ತು. ಕಾರಿನಲ್ಲಿ ಒಟ್ಟು ಐವರು ಪ್ರಯಾಣ ಮಾಡುತ್ತಿದ್ದರು. ಆದರೆ, ಅಪಘಾತದಿಂದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಗಾಯಗೊಂಡ ಇನ್ನೊಬ್ಬರಿಗೆ ಅಂಕೋಲಾ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಅಂಕೋಲಾ ಪೊಲೀಸರು ಭೇಟಿ ಪರಿಶೀಲನೆ‌ ನಡೆಸಿದ್ದಾರೆ. ಪೊಲೀಸರು ಮೃತರ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

ಇದನ್ನೂ ಓದಿ | Siddheshwar Swamiji | ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ? ಚೇತರಿಕೆಗೆ ಕೋಟ್ಯಂತರ ಭಕ್ತರ ಪ್ರಾರ್ಥನೆ

Exit mobile version