Site icon Vistara News

Road Accident: ಚಳ್ಳಕೆರೆಯಲ್ಲಿ ಲಾರಿ-ಬೈಕ್‌ ನಡುವೆ ಭೀಕರ ಅಪಘಾತ; ಚಕ್ರಕ್ಕೆ ಸಿಲುಕಿ ಯುವಕನ ದೇಹ ಛಿದ್ರ

Road Accident: Fatal accident between lorry and bike at Challakere; Young man's body shattered after being hit by wheel

ಚಳ್ಳಕೆರೆ: ಚಳ್ಳಕೆರೆ ನಗರದ ಜೈನ ಕಲ್ಯಾಣ ಮಂಟಪದ ಮುಂಭಾಗದಲ್ಲಿ ಲಾರಿ ಹಾಗೂ ಬೈಕ್‌ ನಡುವೆ ಸೋಮವಾರ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ಬೈಕ್‌ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಈತ ಕ್ರಿಕೆಟ್‌ ಟೂರ್ನ್‌ಮೆಂಟ್‌ಗಾಗಿ ಹೊರಟಿದ್ದ ಎಂದು ತಿಳಿದು ಬಂದಿದೆ.

ತಾಲೂಕಿನ ಗೊರ್ಲತ್ತು ಗ್ರಾಮದ ಮಂಜುನಾಥ (22) ಮೃತ ದುರ್ದೈವಿ. ಚಳ್ಳಕೆರೆಯಿಂದ ಸ್ವಗ್ರಾಮವಾದ ಗೊರ್ಲತ್ತು ಕಡೆಗೆ ಯುವಕ ಹೊರಟಿದ್ದ. ವೇಗವಾಗಿ ಬರುತ್ತಿದ್ದ ಬೈಕ್‌ ನಿಯಂತ್ರಣ ತಪ್ಪಿದ್ದು ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆಯಲಾಗಿದೆ. ಆಗ ಮಂಜುನಾಥ ಲಾರಿ ಚಕ್ರಕ್ಕೆ ಸಿಲುಕಿದ್ದಾನೆ. ಸುಮಾರು 50 ಅಡಿಗಳಷ್ಟು ದೂರದವರೆಗೆ ಲಾರಿಯು ಎಳೆದುಕೊಂಡು ಹೋಗಿದ್ದರಿಂದ ತೀವ್ರ ರಕ್ತಸ್ರಾವವಾಗಿ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಚಳ್ಳಕೆರೆ ನಗರ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಜೈನ್ ಕಲ್ಯಾಣ ಮಂಟಪದ ಮುಂಭಾಗದ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಲಾರಿಐು ಬೆಂಗಳೂರು ಕಡೆಗೆ ಹೋಗುತ್ತಿತ್ತು ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಪಿಎಸ್‌ಐ ಸತೀಶ್ ನಾಯ್ಕ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. ಅಪಘಾತವಾಗುತ್ತಿದ್ದಂತೆ ಭಯಗೊಂಡ ಲಾರಿ ಚಾಲಕನು ಲಾರಿಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ.

ಇದನ್ನೂ ಓದಿ: Corruption case: ಮಧ್ಯಂತರ ಜಾಮೀನು ಸಂಬಂಧ ಬಿಜೆಪಿ ಶಾಸಕ ಮಾಡಾಳುಗೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್

ಯುವತಿಯ ಫೋಟೊ ಕ್ಲಿಕ್‌; ಪ್ರಶ್ನಿಸಲು ಹೋದ ತಾಯಿಗೆ ಬೆದರಿಕೆ ಹಾಕಿದ ಮಹಿಳೆ

ಬೆಂಗಳೂರು: ಮಹಿಳೆಯೊಬ್ಬಳು ಯುವತಿಯೊಬ್ಬಳ ಫೋಟೊ‌ (Photo Blackmail case) ಕ್ಲಿಕ್ಕಿಸಿದ್ದು ಇದನ್ನು ಪ್ರಶ್ನಿಸಲು ಮುಂದಾದ ಯುವತಿಯ ತಾಯಿಗೆ ಅವಾಚ್ಯ ಪದಗಳಿಂದ ನಿಂದಿಸಿರುವ ಘಟನೆ ಯಶವಂತಪುರ (Yashwanthpura police) ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸುನಂದ ಎಂಬಾಕೆ ರೇಷ್ಮ ಎಂಬುವವರ ಮಗಳ ಫೋಟೊ ತೆಗೆದು ಬಳಿಕ ಅದನ್ನೂ ಅಶ್ಲೀಲ ವೆಬ್‌ಸೈಟ್‌ಗೆ ಅಪ್‌ಲೋಡ್‌ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಇನ್ನು ಇದನ್ನೂ ಪ್ರಶ್ನಿಸಲು ಮುಂದಾದ ನಡುರಸ್ತೆಯಲ್ಲೇ ಹಲ್ಲೆ ನಡೆಸಿದ್ದು, ಮಾತ್ರವಲ್ಲದೆ ಮುಸ್ಲಿಂ ಸಮುದಾಯಕ್ಕೆ ಸೇರಿದ್ದರಿಂದ ಧರ್ಮ ನಿಂದನೆ ಮಾಡಿದ್ದಾರೆ ಎಂದು ರೇಷ್ಮ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಾನು ಮತ್ತು ನನ್ನ ಮಗಳು ಮನೆಯ ಹೊರಗೆ ನಿಂತಿದ್ದಾಗ ಸುನಂದ ಎಂಬಾಕೆ ಫೋಟೊಗಳನ್ನು ತೆಗೆದು ಅದನ್ನು ಅಶ್ಲೀಲ ವೆಬ್‌ಸೈಟ್‌ಗಳಿಗೆ ಹಾಕುತ್ತೇನೆ ಎಂದು ಬೆದರಿಸಿದ್ದಾಳೆ. ಇದನ್ನು ಪ್ರಶ್ನಸಿದ್ದಕ್ಕೆ ರೌಡಿಗಳನ್ನು ಕಳುಹಿಸಿ ಹಲ್ಲೆ ನಡೆಸಿದ್ದಾಳೆ. ಮಾತ್ರವಲ್ಲದೆ ಇಬ್ಬರನ್ನೂ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ರೇಷ್ಮ ಉಲ್ಲೇಖಿಸಿದ್ದಾರೆ. ರೇಷ್ಮಳ ಮೇಲೆ ಸುನಂದ ಹಾಗೂ ಅವರ ಸಂಗಡಿಗರು ಹಲ್ಲೆ ನಡೆಸಿರುವ ವಿಡಿಯೊ ಸಮೇತ ಪೊಲೀಸರಿಗೆ ದೂರು ನೀಡಿದ್ದು, ಯಶವಂತಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆಯನ್ನು ಮುಂದುವರಿಸಿದ್ದಾರೆ.

ಕಿಡ್ನಾಪರ್‌ ಕೈಯಿಂದ ಚಾಣಾಕ್ಷತೆಯಿಂದ ಪಾರಾದ ಪೋರ!

ಚಿಕ್ಕಮಗಳೂರು: ಇದ್ದಕ್ಕಿದ್ದಂತೆ ಬಂದು ಎತ್ತಿಕೊಂಡು ಓಡಿದ ಕಿಡ್ನಾಪರ್‌ಗೆ ಅಷ್ಟೇ ಚಾಣಾಕ್ಷತನದಿಂದ ಒಬ್ಬ ಪೋರ ಚಳ್ಳೆಹಣ್ಣು ತಿನ್ನಿಸಿ ಪಾರಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಇದು ಸಿಸಿಟಿವಿಯಲ್ಲಿ ದಾಖಲಾಗಿದೆ. ಚಿಕ್ಕಮಗಳೂರು ನಗರದ ಎಂಜಿ ರಸ್ತೆಯಲ್ಲಿ ಭಾನುವಾರ ಸಂಜೆ 6.38ರ ವೇಳೆಗೆ ಬಾಲಕನ ಅಪಹರಣಕ್ಕೆ ಈ ಯತ್ನ ನಡೆದಿದೆ. ಫುಟ್‌ಪಾತ್‌ನಲ್ಲಿ ಗೆಳೆಯರ ಜತೆಗೆ ಆಟವಾಡುತ್ತಿದ್ದ ಮಗುವನ್ನು ಅಪಹರಿಸಲು ಒಬ್ಬ ವ್ಯಕ್ತಿ ಯತ್ನಿಸಿದ್ದಾನೆ. ಅಪಹರಿಸಿ ಹೆಗಲ ಮೇಲೆ ಎತ್ತಿಕೊಂಡು ವ್ಯಕ್ತಿ ವೇಗವಾಗಿ ಮುನ್ನಡೆದಿದ್ದು, ಬಾಲಕ ನುಸುಳಿಕೊಂಡು ಹೆಗಲಿನಿಂದ ಕೆಳಗೆ ಹಾರಿ ಚಾಣಾಕ್ಷತೆಯಿಂದ ಎಸ್ಕೇಪ್‌ ಆಗಿದ್ದಾನೆ.

ಇದನ್ನೂ ಓದಿ: SC ST Reservation: ಬೋವಿ, ಲಂಬಾಣಿ, ಕೊರಮ, ಕೊರಚ ಜನಾಂಗದವರೂ ಎಸ್‌ಸಿ ಪಟ್ಟಿಯಲ್ಲೇ ಇರುತ್ತಾರೆ: ಸಿಎಂ ಬೊಮ್ಮಾಯಿ

ಸಾಹಸ ಮೆರೆದು ಧೈರ್ಯ ಪ್ರದರ್ಶಿಸಿದ ಬಾಲಕ ಯುಕೆಜಿ ವಿದ್ಯಾರ್ಥಿಯಾಗಿದ್ದು, ಬಾಲಕನ ಸಮಯಸ್ಫೂರ್ತಿಗೆ ಜನರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಸಿನಿಮೀಯ ರೀತಿಯಲ್ಲಿ ನಡೆದಿರುವ ಈ ಘಟನೆ ಜನನಿಬಿಡ ಪ್ರದೇಶದಲ್ಲೇ ನಡೆದಿದ್ದರೂ ತಕ್ಷಣ ಯಾರ ಗಮನಕ್ಕೂ ಬಂದಿಲ್ಲ. ಅಪಹರಣಕ್ಕೆ ಯತ್ನಿಸಿದ ವ್ಯಕ್ತಿಯ ಚಹರೆ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಇದೀಗ ಶಾಲೆಗಳಿಗೆ ಬೇಸಿಗೆ ರಜೆ ನೀಡಲಾಗಿದ್ದು, ಮಕ್ಕಳು ಮನೆಯ ಹೊರಗೆ ಆಡುತ್ತಿರುತ್ತಾರೆ. ಮಕ್ಕಳನ್ನು ಹೊರಗೆ ಬಿಡುವ ಮುನ್ನ ಪೋಷಕರು ಹುಷಾರಾಗಿರುವಂತೆ ಈ ಘಟನೆ ಎಚ್ಚರಿಸಿದೆ.

ಇದನ್ನೂ ಓದಿ: SC ST Reservation: ಶಿಕಾರಿಪುರದಲ್ಲಿ ಭುಗಿಲೆದ್ದ ಎಸ್‌ಸಿ-ಎಸ್‌ಟಿ ಮೀಸಲಾತಿ ಹೋರಾಟ: ಬಿಎಸ್‌ವೈ ಮನೆ ಮೇಲೆ ಕಲ್ಲು, ಚಪ್ಪಲಿ ತೂರಾಟ

ಸರಣಿ ಅಪಘಾತದಲ್ಲಿ ಬೈಕ್‌ ಸವಾರ ಮೃತ್ಯು

ಉಡುಪಿಯ ಕುಂಭಾಶಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸರಣಿ ರಸ್ತೆ ಅಪಘಾತ (Road Accident) ಸಂಭವಿಸಿದೆ. ಕುಂಭಾಶಿ ಪಾಕಶಾಲಾ ಹೋಟೆಲ್‌ ಸಮೀಪ ಹೋಂಡಾ ಡಿಯೋ ದ್ವಿಚಕ್ರ ವಾಹನ, ಹ್ಯುಂಡೈ ಗ್ಯಾಂಡ್ ಐ10 ಕಾರು ಹಾಗೂ ಬಸ್‌ನ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಒಬ್ಬ ಸಾವಿಗೀಡಾಗಿ ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ. ದ್ವಿಚಕ್ರ ವಾಹನದಲ್ಲಿದ್ದ ಕೊರವಡಿ ಮಾಣಿಮನೆ ಬೆಟ್ಟು ನಿವಾಸಿ ಪ್ರಶಾಂತ್ ಪೂಜಾರಿ (28) ಹಾಗೂ ವಿಶ್ಲೇಶ್ ಪೂಜಾರಿ (27) ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಪ್ರಶಾಂತ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Exit mobile version