Site icon Vistara News

Road Accident: ಟಿಪ್ಪರ್-ಇನ್ನೋವಾ‌ ಕಾರಿನ ಮಧ್ಯೆ ಅಪಘಾತ; ಸ್ಥಳದಲ್ಲೇ ಒಬ್ಬರ ಸಾವು, ಇಬ್ಬರು ಗಂಭೀರ

vijayanaga accident

ವಿಜಯನಗರ: ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಪಿಂಜಾರ ಹೆಗ್ಡಾಳ್ ಹಾಗೂ ಉಪನಾಯಕಹಳ್ಳಿ ಗ್ರಾಮದ ಮಾರ್ಗ ಮಧ್ಯೆ ಟಿಪ್ಪರ್ ಮತ್ತು ಇನ್ನೋವಾ ಕಾರಿಗೆ ಡಿಕ್ಕಿಯಾಗಿ (Road Accident) ಒಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಉಡುಪಿ ಮೂಲದ ಮೂವರು ಯುವಕರು ಬೆಳಗಾವಿಗೆ ತರಕಾರಿ ವ್ಯಾಪಾರಕ್ಕಾಗಿ ತೆರಳುತ್ತಿದ್ದರು ಎನ್ನಲಾಗಿದೆ. ಅಪಘಾತದಲ್ಲಿ ಪರಶುರಾಮ (38) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನಿಬ್ಬರಾದ ರಾಜಪ್ಪ, ಬಸವನಗೌಡ ಗಂಭೀರವಾಗಿ ಗಾಯಗೊಂಡಿರುವ ಹಿನ್ನಲೆಯಲ್ಲಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಸಿಪಿಐ ಮಂಜಣ್ಣ, ಪಿಎಸ್ಐ ಸರಳಾ ಭೇಟಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲುಗೊಂಡಿದ್ದು, ಅಪಘಾತಕ್ಕೊಳಗಾದವರ ಕುಟುಂಬದವರಿಗೆ ಮಾಹಿತಿ ರವಾನಿಸಲಾಗಿದೆ.

ಇದನ್ನೂ ಓದಿ | Actress Ramya | ರಮ್ಯಾ ನಿರ್ಮಾಣದ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರಕ್ಕೆ ಕಾನೂನು ಸಂಕಷ್ಟ: ರಾಜೇಂದ್ರ ಸಿಂಗ್ ಬಾಬು ಹೇಳಿದ್ದೇನು?

Exit mobile version