Site icon Vistara News

Road Accident : ಬೈಕ್‌- ಆಟೋ ಅಪಘಾತ; ಇಬ್ಬರು ಸಾವು; ಮತ್ತೊಬ್ಬ ಗಂಭೀರ

road Accident in Chitradurga

ಚಿತ್ರದುರ್ಗ: ಇಲ್ಲಿನ ದಂಡಿನ ಕುರುಬರ ಹಟ್ಟಿ ಬಳಿ ಭೀಕರ ಅಪಘಾತ (Road Accident) ಸಂಭವಿಸಿದೆ. ಆಟೋಗೆ ರಾಯಲ್ ಎನ್ಫೀಲ್ಡ್ ಬೈಕ್‌ ಡಿಕ್ಕಿ ಹೊಡೆದ ರಭಸಕ್ಕೆ ಪೂರ್ತಿ ಛಿದ್ರಗೊಂಡಿದೆ. ಅಪಘಾತದಲ್ಲಿ ಆಟೋ ಚಾಲಕ ಹಾಗೂ ಬೈಕ್‌ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಶಿಲ್ಪ ಎಂಬುವವರು ಪತಿ ಜತೆಗೆ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ಆಟೋ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಆಟೋ ಜಖಂಗೊಂಡಿದ್ದು, ಚಾಲಕ ಬರ್ಕತ್‌ ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಪಘಾತದಲ್ಲಿ ಶಿಲ್ಪ ಪತಿಗೆ ಕೈ-ಕಾಲಿಗೆ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಓವರ್‌ ಟೇಕ್‌ ಮಾಡಲು ಹೋಗಿದ್ದೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಇದನ್ನೂ ಓದಿ: Skeletons found : ಪಾಳು ಬಿದ್ದ ಮನೆ ಗೋಡೆ ಮೇಲೆ ಪತ್ತೆಯಾದ್ವು 5 ಕೈ ಗುರುತುಗಳು! ಅಸ್ಥಿಪಂಜರ ಕೇಸ್‌ಗೆ ಟ್ವಿಸ್ಟ್‌

ಬಂಟ್ವಾಳದಲ್ಲಿ ಬೈಕ್ ಅಪಘಾತ; ರಂಗಭೂಮಿ ಕಲಾವಿದ ಗೌತಮ್ ಸಾವು

ಬಂಟ್ವಾಳ: ಸಮೀಪದ ಪುಂಜಾಲಕಟ್ಟೆ ಬಳಿ ನಡೆದ ರಸ್ತೆ ಅಪಘಾತದಲ್ಲಿ (Road Accident) ರಂಗಭೂಮಿ ಕಲಾವಿದ ಗೌತಮ್ (26) (Theatre artiste Gautam) ಮೃತಪಟ್ಟಿದ್ದಾರೆ. ಇವರು ಬಂಟ್ವಾಳ ತಾಲೂಕಿನ ದೇವಶ್ಯಪಡೂರು ಗ್ರಾಮದ ಮರದೊಟ್ಟು ನಿವಾಸಿಯಾಗಿದ್ದಾರೆ.

ಮೂಡುಬಿದಿರೆ ಪಿಂಗಾರ ಕಲಾವಿದರ ತಂಡದ ಕಲಾವಿದರಾಗಿದ್ದ ಗೌತಮ್ ಅವರು ಡಿ.30ರಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬೆಳುವಾಯಿಯಲ್ಲಿ ನಾಟಕ ಮುಗಿಸಿ ಮನೆಗೆ ತೆರಳುತ್ತಿದ್ದರು. ಇನ್ನೇನು ಅವರ ಸ್ವಲ್ಪವೇ ದೂರದಲ್ಲಿ ಮನೆಯನ್ನು ತಲುಪುವವರಿದ್ದರು. ಆದರೆ, ವಿಧಿ ಆಟವೇ ಬೇರೆ ಇತ್ತು. ಅವರನ್ನು ಬಾರದ ಲೋಕಕ್ಕೆ ಕರೆದೊಯ್ದಿದೆ.

ಬೆಳುವಾಯಿಯಲ್ಲಿ ನಾಟಕ ಮುಗಿಸಿ ಮನೆಗೆ ಹಿಂದಿರುಗುವಾಗ ಅವರ ಮನೆ ಸಮೀಪದ ಮರಕ್ಕೆ ಬೈಕ್‌ ಡಿಕ್ಕಿ ಹೊಡೆದಿದೆ. ಈ ವೇಳೆ ಗೌತಮ್‌ ಅವರು ರಸ್ತೆಗೆ ಬಿದ್ದಿದ್ದು, ತಲೆಗೆ ಗಂಭೀರ ಗಾಯಗಳಾಗಿತ್ತು. ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಅವಿವಾಹಿತರಾಗಿದ್ದ ಗೌತಮ್ ಅವರು ಬಿ.ಸಿ.ರೋಡ್ ನ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಜತೆಗೆ ರಂಗಭೂಮಿಯಲ್ಲಿ ಆಸಕ್ತಿ ಹೊಂದಿದ್ದರು. ಹೀಗಾಗಿ ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ತಾಯಿ, ಸಹೋದರ ಮತ್ತು ಸಹೋದರಿ ಇದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version