Site icon Vistara News

Road Accident : ನಾಗೇಗೌಡನಪಾಳ್ಯದಲ್ಲಿ ಡಿವೈಡರ್‌ಗೆ ಬೈಕ್‌ ಡಿಕ್ಕಿ; ಯುವಕ ಸ್ಥಳದಲ್ಲೇ ಸಾವು

Road Accident

ತುಮಕೂರು: ನಾಗೇಗೌಡನಪಾಳ್ಯದ ಕಾಮತ್ ಹೋಟೆಲ್ ಮುಂಭಾಗ ಡಿವೈಡರ್‌ಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ (Road Accident) ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಹಾಸನದ ಚೌಡನಕುಪ್ಪೆ ಗ್ರಾಮದ ಯುವಕ ಅಭಿಷೇಕ್(23) ಮೃತ ದುರ್ದೈವಿ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ನಾಗೇಗೌಡನಪಾಳ್ಯದಲ್ಲಿ ಅಪಘಾತ ಸಂಭವಿಸಿದ್ದು, ಟಿವಿಎಸ್ ಎಕ್ಸೆಲ್ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ಯುವಕನಿಗೆ ನಿಯಂತ್ರಣ ತಪ್ಪಿದೆ. ಈ ಹಿನ್ನೆಲೆಯಲ್ಲಿ ಆತ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.

ಡಿಕ್ಕಿ ಹೊಡೆದು ಕೆಳಕ್ಕೆ ಬಿದ್ದಾಗ ಆತನಿಗೆ ತೀವ್ರ ಪೆಟ್ಟಾಗಿದ್ದರಿಂದ ಸ್ಥಳದಲ್ಲಿಯೇ ಅಸುನೀಗಿದ್ದಾನೆ ಎಂದು ಹೇಳಲಾಗಿದೆ. ಗುರುವಾರ ತಡರಾತ್ರಿ ಘಟನೆ ನಡೆದಿದ್ದು, ಸ್ಥಳಕ್ಕೆ ಅಮೃತ್ತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ | Road Accident : ಚಲಿಸುತ್ತಿದ್ದ ಲಾರಿ ಟಯರ್‌ ಬ್ಲಾಸ್ಟ್‌ ಆಗಿ ಇನ್ನೊಂದು ಲಾರಿಗೆ ಡಿಕ್ಕಿ; ಒಬ್ಬ ಚಾಲಕ ಸಾವು, ಇನ್ನೊಬ್ಬ ಗಂಭೀರ

Exit mobile version