Site icon Vistara News

Road Accident | ಬೈಕ್‌ಗೆ ಲಾರಿ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು; ಚಾಲಕ ವಶಕ್ಕೆ

ನೆಲಮಂಗಲ: ಇಲ್ಲಿನ ಟಿ.ಬೇಗೂರುವಿನ ತ್ಯಾಮಗೊಂಡ್ಲು ಕ್ರಾಸ್ ಬಳಿ ಬೈಕ್‌ಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಬೈಕ್‌ ಸವಾರ ಸ್ಥಳದಲ್ಲಿ ಮೃತಪಟ್ಟಿರುವ (Road Accident) ಘಟನೆ ನಡೆದಿದೆ. ಸಿದ್ದಪ್ಪ (54) ಮೃತ ದುರ್ದೈವಿ.

ಅರಳೆದಿಬ್ಬ ಗ್ರಾಮ ನಿವಾಸಿ ಆಗಿರುವ ಸಿದ್ದಪ್ಪನವರು ತ್ಯಾಮಗೊಂಡ್ಳುವಿನಿಂದ ಬಿತ್ತನೆ ಬೀಜ ತೆಗೆದುಕೊಂಡು ಮನೆಗೆ ಬರುತ್ತಿದ್ದರು. ಈ ವೇಳೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮನೆಯ ಯಜಮಾನನ್ನು ಕಳೆದುಕೊಂಡ ದುಃಖದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಇತ್ತ ಲಾರಿ ಚಾಲಕನನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ | Thieves arrested | ಬ್ಯಾಂಕ್‌ಗೆ ಕನ್ನ ಹಾಕಲು ರೆಡಿ ಇದ್ದವರನ್ನು ಹೆಡೆಮುರಿ ಕಟ್ಟಿದ ಖಾಕಿ ಪಡೆ

Exit mobile version