Site icon Vistara News

Road Accident: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಡೆಲಿವರಿ ಬಾಯ್‌ ಸಾವು

accident delivery boy death

ಬೆಂಗಳೂರು: ಬೈಕ್‌ ಚಲಾಯಿಸುತ್ತಿದ್ದ ಸ್ವಿಗ್ಗಿ ಡೆಲಿವರಿ ಬಾಯ್‌ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೆ ಸಾವಿಗೀಡಾಗಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾತ್ರಿ 12.30 ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿದೆ. ಸ್ವಿಗ್ಗಿ ಡೆಲಿವರಿ ಬಾಯ್ ನಾಗಪ್ಪ‌ (31) ಸಾವನ್ನಪ್ಪಿರುವ ಬೈಕ್‌ ಸವಾರ. ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್‌ನಲ್ಲಿರುವ ತಮ್ಮ ಮಾವನ ಮನೆಯಲ್ಲಿ ವಾಸವಿದ್ದ ನಾಗಪ್ಪ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ನಿನ್ನೆ ರಾತ್ರಿ ಫುಡ್ ಡೆಲಿವರಿ ಕೊಡಲು ಹೋಗುತ್ತಿದ್ದಾಗ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ.

ಡಿಕ್ಕಿ ಹೊಡೆದ ರಭಸಕ್ಕೆ ಮೃತದೇಹ ಲಾರಿಯ ಹಿಂಭಾಗದಲ್ಲಿ ನೇತಾಡುತ್ತಿತ್ತು. ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉರುಳಿದ ವಿದ್ಯುತ್‌ ಕಂಬಗಳು

ಆನೇಕಲ್:‌ ಆನೇಕಲ್‌ನಲ್ಲಿ ರಾತ್ರಿ ಸುರಿದ ಮಳೆಗೆ ವಿದ್ಯುತ್ ಕಂಬಗಳು ಧರೆಗುರುಳಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಆನೇಕಲ್ ತಾಲ್ಲೂಕಿನ ಮುತ್ತಾನಲ್ಲೂರು ಬಳಿ ಘಟನೆ ನಡೆದಿದೆ. ಮುತ್ತಾನಲ್ಲೂರು ಗ್ರಾಮದ ವೃತ್ತದಿಂದ ಸಪ್ಪಲಮ್ಮ ದೇವಾಲಯದ ವರೆಗೆ ವಿದ್ಯುತ್ ಕಂಬಗಳು ಧರೆಗುರುಳಿವೆ. ರಾಜಕಾಲುವೆಗಳಲ್ಲಿ ನೀರು ಹೊರಹೋಗದೆ ನಿಂತ ಪರಿಣಾಮ ಕಂಬಗಲ ಕೆಳಗಿನ ಮಣ್ಣು ಕುಸಿದುಹೋಗಿ ಕಂಬಗಳು ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದಿವೆ. ರಾತ್ರಿ ಸಮಯ ಆಗಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಸ್ಥಳಕ್ಕೆ ಬೆಸ್ಕಾಂ ಅಧಿಕಾರಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ: Road Accident: ಕಾರು-ಬೈಕ್‌ ನಡುವೆ ಭೀಕರ ಅಪಘಾತ: ಮದುವೆಗೆಂದು ಹೋಗುತ್ತಿದ್ದ ಸಹೋದರರಿಬ್ಬರ ದುರ್ಮರಣ

Exit mobile version