Site icon Vistara News

Road Accident: ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಅಡ್ಡ ಬಂದ ಬೈಕ್‌ ಸವಾರರು; ಚಕ್ರದಡಿ ಸಿಲುಕಿ ಎಳೆದೊಯ್ದರು

#image_title

ಬಾಗಲಕೋಟೆ: ಇಲ್ಲಿನ ರಬಕವಿ ಪಟ್ಟಣದಲ್ಲಿ ಬೈಕ್‌ಗೆ ಕಬ್ಬು ತುಂಬಿದ (Road Accident) ಟ್ರ್ಯಾಕ್ಟರ್ ಡಿಕ್ಕಿಯಾದ ಘಟನೆ ನಡೆದಿದೆ. ಕಬ್ಬು ತುಂಬಿದ ಟ್ರ್ಯಾಕ್ಟರ್‌ ರಸ್ತೆಯಲ್ಲಿ ಬರುತ್ತಿರುವಾಗ ಬೈಕ್ ಸವಾರರು ಅಡ್ಡ ಬಂದಿದ್ದಾರೆ. ಹೀಗಾಗಿ ಟ್ರ್ಯಾಕ್ಟರ್‌ ನಿಯಂತ್ರಣ ತಪ್ಪಿದ್ದರಿಂದ ಬೈಕ್‌ಗೆ ಡಿಕ್ಕಿ ಹೊಡಿದಿದೆ. ಹೀಗಾಗಿ ಸವಾರರು ಚಕ್ರದಡಿ ಸಿಲುಕಿದ್ದಾರೆ.

ಟ್ರ್ಯಾಕ್ಟರ್‌ಗೆ ಅಡ್ಡ ಬಂದಿರುವ ಬೈಕ್‌ ಸವಾರರು

ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ ಆಗಿದ್ದು, ಟ್ರ್ಯಾಕ್ಟರ್ ಎಂಜಿನ್ ಹಾಗೂ ಚಕ್ರದಲ್ಲಿ ಸಿಲುಕಿದ ಸವಾರರು ೫ ಮೀಟರ್‌ ದೂರದವರೆಗೆ ಎಳೆದೊಯ್ದಿದ್ದಾರೆ. ಬಳಿಕ ರಸ್ತೆ ಪಕ್ಕ ನಿಲ್ಲಿಸಲಾಗಿದ್ದ ಬೈಕ್‌ಗಳಿಗೂ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಇಬ್ಬರು ಬೈಕ್ ಸವಾರರಿಗೆ ಗಂಭೀರ ಗಾಯಗೊಂಡಿದ್ದು, ಬೆಳಗಾವಿ ಜಿಲ್ಲೆ ಹಾರೋಗೇರಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Suicide Case: ಬೆಂಗಳೂರಿನಲ್ಲಿ ಗೃಹಿಣಿ ಆತ್ಮಹತ್ಯೆ; ದೂರು ದಾಖಲಿಸದ್ದಕ್ಕೆ ಪೊಲೀಸ್‌ ಠಾಣೆಯೊಳಗೆ ಶವವಿಟ್ಟು ಪ್ರತಿಭಟನೆ

ತೇರದಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಬೈಕ್ ಸವಾರರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

Exit mobile version