Site icon Vistara News

Road Accident: ಹುಬ್ಬಳ್ಳಿಯಲ್ಲಿ ಬಸ್‌ ಸ್ಟೇರಿಂಗ್‌ ರಾಡ್‌ ಕಟ್‌; ಕೊಪ್ಪಳದಲ್ಲಿ ಲಾರಿ ಹರಿದು ಬೈಕ್ ಸವಾರ ಸಾವು

Bus steering rod cut in Hubballi, Biker killed after lorry runs over him in Koppal

Bus steering rod cut in Hubballi, Biker killed after lorry runs over him in Koppal

ಹುಬ್ಬಳ್ಳಿ/ಕೊಪ್ಪಳ: ವಾಯವ್ಯ ಬಸ್‌ ಸ್ಟೇರಿಂಗ್ ರಾಡ್ ಕಟ್ಟಾಗಿ ರಸ್ತೆ ಬದಿಯ ಮಣ್ಣಿನ ದಿಬ್ಬಕ್ಕೆ ಡಿಕ್ಕಿ ಹೊಡೆದ (Road Accident) ಘಟನೆ ಹುಬ್ಬಳ್ಳಿಯ ಗದಗ ರಸ್ತೆಯಲ್ಲಿ ನಡೆದಿದೆ. ಬಸ್‌ ಅಪಘಾತದಲ್ಲಿ 15 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಅಪಘಾತಕ್ಕೀಡಾದ ವಾಯವ್ಯ ಬಸ್‌

ಬಸ್‌ವೊಳಗೆ ಸಿಲುಕಿ ನರಳಾಡುತ್ತಿದ್ದ ಗಾಯಾಳುಗಳನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಗದಗನಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಬಸ್‌ ಇದಾಗಿದೆ. ಪೂರ್ವ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೈಕ್ ಸವಾರನ ಮೇಲೆ ಹರಿದ ಲಾರಿ

ಕೊಪ್ಪಳ ಜಿಲ್ಲೆ ಕಾರಟಗಿ ಪಟ್ಟಣದಲ್ಲಿ ಲಾರಿ ಹರಿದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಗ್ಯಾರೇಜ್ ನಡೆಸುತ್ತಿದ್ದ ಪರಮೇಶಪ್ಪ ಸಜ್ಜನ್ ಎಂಬುವವರು (55) ಲಾರಿಗೆ ಸಿಲುಕಿ ಮೃತಪಟ್ಟ ದುರ್ದೈವಿ.

ಇದನ್ನೂ ಓದಿ: Bengaluru Road Accident: ಅಪಘಾತವಾಗಿ ಮೆದುಳು ನಿಷ್ಕ್ರಿಯಗೊಂಡಿದ್ದ ಎಎಸ್‌ಐ ಸಾವು; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬಸ್ಥರು

ಇಂಧನ ಸಾಗಿಸುತ್ತಿದ್ದ ಲಾರಿಯು ಏಕಾಏಕಿ ಬೈಕ್‌ ಸವಾರನ ಮೇಲೆ ಹರಿದು ಸ್ವಲ್ಪ ದೂರ ಎಳೆದೊಯ್ದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಪರಮೇಶಪ್ಪ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಕಣ್ಮುಂದೆ ನಡೆದ ಅಪಘಾತದ ದೃಶ್ಯವನ್ನು ಕಂಡ ಸ್ಥಳೀಯರು ಆಘಾತಕ್ಕೆ ಒಳಗಾದರು.

ಸ್ಥಳಕ್ಕೆ ಕಾರಟಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಇತ್ತ ಪರಮೇಶಪ್ಪರ ಸಾವಿನ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version