Site icon Vistara News

Road Accident : ತಿರುಪತಿ ದರ್ಶನ ಮುಗಿಸಿ ಬರುತ್ತಿದ್ದಾಗ ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಕೆಜಿಎಫ್‌ನ ದಂಪತಿ ಸ್ಥಳದಲ್ಲೇ ಸಾವು

Road accident

#image_title

ಕೋಲಾರ: ಆಂಧ್ರ ಪ್ರದೇಶದ ತಿರುಪತಿ ಜಿಲ್ಲೆ ಚಂದ್ರಗಿರಿ-ಕಾಸಿಪಂಟ್ಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road accident) ಕೆಜಿಎಫ್‌ ಮೂಲದ ದಂಪತಿ ಮೃತಪಟ್ಟಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಕಾರು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಡಿಕ್ಕಿಯ ಹೊಡೆತಕ್ಕೆ ಕಾರು ನುಚ್ಚುನೂರಾಗಿದೆ.

ಅಪಘಾತದ ದೃಶ್ಯ

ಕೋಲಾರ ಜಿಲ್ಲೆಯ ಕೆಜಿಎಫ್‌ನ ದಂಪತಿಗಳಾದ ಗೋಪಿನಾಥ್ ಮತ್ತು ಶ್ಯಾಮಲಾ ಅವರು ತಿರುಪತಿಗೆ ಹೋಗಿದ್ದರು. ತಿರುಪತಿಯಲ್ಲಿ ದೇವರ ದರ್ಶ ಮುಗಿಸಿ ಹಿಂದಿರುಗುವಾಗ ಅಪಘಾತ ನಡೆದಿದೆ. ಚಂದ್ರಗಿರಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಾಗಿದೆ.

ಚಿಕ್ಕಬಳ್ಳಾಪುರ: ಲಾರಿ ಕೆಳಗೆ ಬಿದ್ದು ಸಾವನ್ನಪ್ಪಿದ ಭಗ್ನಪ್ರೇಮಿ ಬಾಲಕ!

ಚಿಕ್ಕಬಳ್ಳಾಪುರ: ಇದು ಅಪ್ರಾಪ್ತರಿಬ್ಬರ ಪ್ರೇಮ ಕಥೆಯ ದುರಂತ ಕಥೆ. ಬಾಲಕಿಯೊಬ್ಬಳನ್ನು ಪ್ರೀತಿಸುತ್ತಿದ್ದ ಬಾಲಕ ಹೆದ್ದಾರಿಯಲ್ಲಿ ಲಾರಿಯಡಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾನೆ. ರಾಷ್ಟ್ರೀಯ ಹೆದ್ದಾರಿ 44ರ ಯರ್ರಲಕ್ಕೇನಹಳ್ಳಿ ಕ್ರಾಸ್ ಬಳಿ ಲಾರಿಯಡಿ ಬಿದ್ದು ಪ್ರಾಣ ಕಳೆದುಕೊಂಡಿರುವ ಬಾಲಕನನ್ನು ಬೀಚಗಾನಹಳ್ಳಿ ಗ್ರಾಮದ ಮನೋಹರ್ (17) ಎಂದು ಗುರುತಿಸಲಾಗಿದೆ. ಈತ ಬಾಲಕಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ.

ಮನೋಹರ್‌ ಪಿಯುಸಿ ಓದುತ್ತಿದ್ದು, ಆರ್.ಎಂ.ಎಸ್.ಎ ವಸತಿ ಶಾಲೆಯ ವಿದ್ಯಾರ್ಥಿನಿ‌ಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆಕೆ ಹತ್ತನೇ ತರಗತಿಯಲ್ಲಿ ಓದುತ್ತಿದ್ದು, ಈತನ ಪ್ರೀತಿಗೆ ಆಕೆ ಒಪ್ಪಿದ್ದಳೇ, ಆತನ ಪ್ರೀತಿ ಏಕಮುಖವಾಗಿತ್ತೇ ಎನ್ನುವುದೆಲ್ಲ ಸ್ಪಷ್ಟವಿಲ್ಲ.

ಬಾಲಕನ ಕುಟುಂಬದ ಕಣ್ಣೀರು

ಆದರೆ ಆಕೆಯ ನೆನಪಿನಲ್ಲೇ ಇದ್ದ ಆತನ ಶವ ಲಾರಿಯಡಿಗೆ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತನ ಕೈಯನ್ನು ಬ್ಲೇಡಿನಿಂದ ಕೊಯ್ಯಲಾಗಿದ್ದು, ಆತ ಬ್ಲೇಡ್‌ನಿಂದ ಕೈ ಕೊಯ್ದುಕೊಂಡು ಲಾರಿಯಡಿಗೆ ಜಿಗಿದನೇ ಎನ್ನುವ ಸಂಶಯವಿದೆ. ಆದರೆ, ಆತನ ಪೋಷಕರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ತನಿಖೆಗೆ ಒತ್ತಾಯಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಯರ್ರಲಕ್ಕೇನಹಳ್ಳಿ ಕ್ರಾಸ್‌ನಲ್ಲಿ ನಡೆದ ಈ ಘಟನೆಯ ಬಗ್ಗೆ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ಪಾಲು

ಬೆಂ.ಗ್ರಾಮಾಂತರ: ತಮಿಳುನಾಡಿನ ಹೊಸೂರು ಸಮೀಪದ ಬಾಗಲೂರಿನ ಕೆರೆಯಲ್ಲಿ ಮುಳುಗಿ (Drown in lake) ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಕೆರೆಯಲ್ಲಿ ಈಜಲು ತೆರಳಿದ್ದ ಐವರ ಪೈಕಿ ಇಬ್ಬರು ವಿದ್ಯಾರ್ಥಿಗಳು ಈಜು ಬಾರದೆ ನೀರಿನಲ್ಲಿ ಮುಳುಗಿದ್ದಾರೆ.

ಬಾಗಲೂರು ಗ್ರಾಮದ ವಿನೋದ್ ಸಿಂಗ್, ಶಶಾಂಕ್ ಮೃತ ಬಾಲಕರು. ವಿಷಯ ತಿಳಿದು ಬಾಗಲೂರು ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ, ಮೃತ ದೇಹಗಳನ್ನು ಹೊರತೆಗೆದಿದ್ದಾರೆ. ಬಾಗಲೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : Road Accident: ವಿಜಯಪುರದಲ್ಲಿ ಲಾರಿ-ಬೈಕ್‌ ನಡುವೆ ಅಪಘಾತ; ಬೈಕ್‌ ಸವಾರ ಸ್ಥಳದಲ್ಲೇ ಮೃತ್ಯು

Exit mobile version