Site icon Vistara News

Road Accident | ಬೈಕ್‌-ಲಾರಿ ನಡುವೆ ಭೀಕರ ಅಪಘಾತ; ವ್ಯಕ್ತಿಯ ದೇಹ ಛಿದ್ರ ಛಿದ್ರ

ತಮಿಳುನಾಡು: ಇಲ್ಲಿನ ಬೆಂಗಳೂರು-ಚೆನೈ ಹೆದ್ದಾರಿಯ ಸೂಳಗಿರಿ ಬಳಿ ಭೀಕರ ರಸ್ತೆ ಅಪಘಾತದಲ್ಲಿ (Road Accident) ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ದ್ವಿಚಕ್ರ ವಾಹನಕ್ಕೆ ಲಾರಿ‌ ಡಿಕ್ಕಿ ಹೊಡೆದಿದ್ದು, ಬೈಕ್‌ ಸವಾರರೊಬ್ಬರ ದೇಹ ಛಿದ್ರ ಛಿದ್ರವಾಗಿ ರಸ್ತೆಯ ಮೇಲೆ ಬಿದ್ದಿದೆ. ಕರ್ನಪಲ್ಲಿ ಗ್ರಾಮದ ಗೋವಿಂದನ್ ಮೃತ ದುರ್ದೈವಿ.

ಗೋವಿಂದನ್‌ ತಮ್ಮ ಪತ್ನಿಯೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಗೋವಿಂದನ್‌ ಎಗರಿ ಕೆಳಗೆ ಬಿದ್ದಿದ್ದಾರೆ. ಅವರ ಮೇಲೆಯೇ ಲಾರಿ ಹರಿದಿದ್ದರಿಂದ ದೇಹ ಛಿದ್ರ ಛಿದ್ರವಾಗಿವೆ. ಇತ್ತ ಜತೆಯಲ್ಲಿದ್ದ ಪತ್ನಿ ಕ್ಷಣಾರ್ಧದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪತಿಯ ಮೃತದೇಹದ ಮುಂದೆ ಪತ್ನಿಯ ಆಕ್ರಂದನ ಮುಗಿಲು ಮುಟ್ಟಿತ್ತು.

ವಿಷಯ ತಿಳಿಯುತ್ತಿದ್ದಂತೆ ಸೂಳಿಗಿರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸೂಳಿಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Modi In Karnataka | ಅನ್ಯ ಸರ್ಕಾರಗಳಿಗೆ ವೋಟ್‌ ಬ್ಯಾಂಕ್‌ ಆದ್ಯತೆ; ನಮಗೆ ಅಭಿವೃದ್ಧಿಯೇ ಆದ್ಯತೆ: ಪ್ರಧಾನಿ ಮೋದಿ

Exit mobile version