Site icon Vistara News

Road Accident: ಅತಿ ವೇಗ ತಂದ ಆಪತ್ತು; ರಸ್ತೆಯಲ್ಲಿ ನಿಂತಿದ್ದ ವ್ಯಕ್ತಿಗೆ ವೇಗವಾಗಿ ಬಂದ ಕ್ಯಾಂಟರ್‌ ವಾಹನ ಡಿಕ್ಕಿ

Terrible accident between cruiser and lorry

ಆನೇಕಲ್: ರಸ್ತೆಯಲ್ಲಿ ನಿಂತಿದ್ದ ವ್ಯಕ್ತಿಗೆ ಕ್ಯಾಂಟರ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲಿಯೇ ವ್ಯಕ್ತಿ ದಾರುಣವಾಗಿ ಮೃತಪಟ್ಟಿರುವ ಘಟನೆ ಗುಡ್ನಹಳ್ಳಿ ಕೆರೆಯ ಬಳಿ (Road Accident) ನಡೆದಿದೆ. ತಿಮ್ಮಸಂದ್ರ ಗ್ರಾಮದ ವೆಂಕಟೇಶಪ್ಪ (55) ಮೃತ ದುರ್ದೈವಿ.

ಆನೇಕಲ್ (Anekal) ಮಾರ್ಗವಾಗಿ ಬೈಕ್‌ನಲ್ಲಿ ಬರುತ್ತಿದ್ದ ವೆಂಕಟೇಶಪ್ಪ, ಗುಡ್ನಹಳ್ಳಿ ಕೆರೆ ಬಳಿ ಮೂತ್ರ ವಿಸರ್ಜನೆಗೆಂದು ಗಾಡಿ ನಿಲ್ಲಿಸಿದ್ದಾರೆ. ಈ ವೇಳೆ ಅತಿ ವೇಗವಾಗಿ ಬಂದ ಕ್ಯಾಂಟರ್ ವಾಹನವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿದ್ದು, ವೆಂಕಟೇಶಪ್ಪ ಸ್ಥಳದಲ್ಲಿಯೇ ಉಸಿರು ಚೆಲ್ಲಿದ್ದಾರೆ.

ಇದನ್ನೂ ಓದಿ: Viral Video : ರಕ್ಷಿಸಿದವನ ತೋಳು ಬಿಡದ ಬೆಕ್ಕು; ವೈರಲ್ ಆಗ್ತಿದೆ ಈ ವಿಡಿಯೊ

ಅಪಘಾತವಾಗುತ್ತಿದ್ದಂತೆ, ಕ್ಯಾಂಟರ್‌ ಚಾಲಕ ಗಾಡಿ ನಿಲ್ಲಿಸದೆ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಆನೇಕಲ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಲಕನ ಪತ್ತೆಗೆ ಮುಂದಾಗಿದ್ದಾರೆ.

ಬೆಂಗಳೂರು ಗ್ರಾಮಾಂತರದ ಮತ್ತಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version