Site icon Vistara News

Road Accident: ಉಪ್ಪೂರಿನಲ್ಲಿ ಭೀಕರ ಸರಣಿ ಅಪಘಾತ; ಮಹಿಮಾಪುರದಲ್ಲಿ ಬೈಕ್‌ಗಳ ನಡುವೆ ಡಿಕ್ಕಿ, ಸವಾರ ಸಾವು

#image_title

ಉಡುಪಿ/ಬೆಂಗಳೂರು ಗ್ರಾಮಾಂತರ: ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್ ಸವಾರನನ್ನು ತಪ್ಪಿಸಲು ಹೋದ ಲಾರಿಗೆ, ಹಿಂದಿನಿಂದ ಬಂದ ಇನ್ನೊಂದು‌ ಲಾರಿ ಡಿಕ್ಕಿ (Road Accident) ಹೊಡೆದಿದೆ. ಪರಿಣಾಮ ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರ ಬಳಿ ನಡೆದಿದೆ.

ಬ್ರಹ್ಮಾವರದ ತಾಲೂಕಿನ ಉಪ್ಪೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತ ಸಂಭವಿಸಿದ್ದು, ಸ್ಕಿಡ್ ಆಗಿ ಬಿದ್ದ ಬೈಕ್ ಸವಾರ ಕೂಡ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ. ಗಾಯಗೊಂಡ ಲಾರಿ ಚಾಲಕನನ್ನು ಕುಮಟಾದ ಕದಗಲ್ ಮೂಲದ ಮಹೇಶ್ ಗೌಡ ಹಾಗೂ ಬೈಕ್ ಸವಾರನನ್ನು ಹರೀಶ್ ಎಂದು ಗುರುತಿಸಲಾಗಿದೆ.

ಹರೀಶ್‌ ಬೈಕ್‌ನಲ್ಲಿ ಬರುವಾಗ ಸ್ಕಿಡ್‌ ಆಗಿ ಕೆಳಗೆ ಬಿದ್ದಿದ್ದಾನೆ. ಅದೇ ರಸ್ತೆಯಲ್ಲಿ ಬರುತ್ತಿದ್ದ ಚಾಲಕ ಅಪಘಾತವನ್ನು ತಪ್ಪಿಸಲು ಹೋಗಿದ್ದು, ಈ ವೇಳೆ ಹಿಂದಿನಿಂದ ಬಂದ ಮತ್ತೊಂದು ಲಾರಿ ಡಿಕ್ಕಿ‌ ಹೊಡೆದಿದೆ. ಪರಿಣಾಮ ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿದೆ. ಇದರ ಪರಿಣಾಮ ಲಾರಿಯ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರ ಹಾಗೂ ಲಾರಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಪರಿಣಾಮ ಉಪ್ಪೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅರ್ಧ ತಾಸಿಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಯಿತು.

ಮೃತ ಶಶಿಕುಮಾರ್‌

ಬೈಕ್‌ಗಳ ನಡುವೆ ಡಿಕ್ಕಿ ಸವಾರ ಮೃತ್ಯು

ಬೆಂಗಳೂರು ಗ್ರಾಮಾಂತರದ ನೆಲಮಂಗಲ ಬಳಿ ಇರುವ ಮಹಿಮಾಪುರ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಎರಡು ಬೈಕ್‌ಗಳ ನಡುವೆ ಡಿಕ್ಕಿ ಆಗಿ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಶಶಿಕುಮಾರ್ (29) ಮೃತ ದುರ್ದೈವಿ.

ಮಾಗಡಿ ತಾಲೂಕಿನ ಮಾರಸಂದ್ರ ಗ್ರಾಮದ ನಿವಾಸಿ ಶಶಿಕುಮಾರ್‌ ಕುಲವನಹಳ್ಳಿಯ ಖಾಸಗಿ ಕಂಪನಿಯಲ್ಲಿ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್‌ ಆಗುತ್ತಿದ್ದಾಗ ಮಾರ್ಗ ಮಧ್ಯೆ ಅಪಘಾತವಾಗಿದ್ದು ಮೃತಪಟ್ಟಿದ್ದಾರೆ.

ಇದನ್ನೂ ಓದಿ: Road Accident: ಮಗಳನ್ನು ಕಾಲೇಜಿಗೆ ಬಿಟ್ಟು ವಾಪಸಾಗುವಾಗ ಬೈಕ್‌ ಸ್ಕಿಡ್‌; ತಲೆ ಮೇಲೆ ಲಾರಿ ಹರಿದು ಮಹಿಳೆ ಮೃತ್ಯು

ಮತ್ತೊಬ್ಬ ಸವಾರ ಸಾಗರ್‌ (23) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗುವಾಗ ಅಪಘಾತ ಸಂಭವಿಸಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version