Site icon Vistara News

Road accident | ಕಾರು ಮತ್ತು ಬಸ್‌ಗೆ ಬೈಕ್‌ ಡಿಕ್ಕಿ: ಇಬ್ಬರೂ ಸವಾರರು ಸ್ಥಳದಲ್ಲೇ ಮೃತ್ಯು

Accident near davanagere

ದಾವಣಗೆರೆ: ನಗರದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ (Road accident) ಇಬ್ಬರು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ಒಂದು ಕಡೆ ಕಾರು ಮತ್ತು ಬೈಕ್‌ ನಡುವೆ, ಇನ್ನೊಂದು ಕಡೆ ಬಸ್‌ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದೆ.

ದಾವಣಗೆರೆಯ ಪಿಬಿ ರಸ್ತೆಯ ಗೋಕುಲ್ ಹೋಟೆಲ್ ಬಳಿ ಕಾರು ಮತ್ತು ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹರಿಹರದ ಕಡೆಯಿಂದ ಬರುತ್ತಿದ್ದ ಕಾರು ಇದಾಗಿತ್ತು. ಜೀವನ ಕುಮಾರ್ (26), ದಯಾನಂದ(27) ಸಾವನ್ನಪ್ಪಿದ ಬೈಕ್ ಸವಾರರು. ಇವರಿಬ್ಬರೂ ಕೆಬಿ ಬಡಾವಣೆಯ ನಿವಾಸಿಗಳು.

ಈ ನಡುವೆ, ಪಿಬಿ ರಸ್ತೆಯ ಜಿಎಂಐಟಿ ಕಾಲೇಜ್ ಬಳಿ ಮತ್ತೊಂದು ಅಪಘಾತ ಸಂಭವಿಸಿದೆ. ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಅಂಜನೇಯ (21 ) ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಎಸ್ಆರ್ಟಿಸಿ ಚಾಲಕನ ನಿರ್ಲಕ್ಷ್ಯ ದಿಂದ ಅವಘಡ ಸಂಭವಿಸಿದೆ ಎಂದು ಆರೋಪಿಸಲಾಗಿದೆ.

ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Road accident | ಶಾಲಾ ವಾಹನ – ಬೈಕ್‌ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

Exit mobile version