Site icon Vistara News

Road accident | ಶಾಲಾ ವಾಹನ – ಬೈಕ್‌ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

Accident in KR Nagara

ಮೈಸೂರು: ಕೆ.ಆರ್.ನಗರ ಪಟ್ಟಣದಲ್ಲಿ ಶುಕ್ರವಾರ ಬೆಳಗ್ಗೆ ಶಾಲಾ ವಾಹನ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತಾಲೂಕಿನ ಹೊಸೂರು ನಿವಾಸಿ ಸಂತೋಷ್(34) ಮೃತರು. ಸಂತೋಷ್‌ ಅವರು ಮೈಸೂರು-ಹಾಸನ ಮುಖ್ಯ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ವಾಸವಿ ಕೇಂದ್ರೀಯ ವಿದ್ಯಾಸಂಸ್ಥೆಯ ವಾಹನ ಮತ್ತು ಬೈಕ್‌ ನಡುವೆ ಡಿಕ್ಕಿ ಸಂಭವಿಸಿದೆ.

ಗಂಭೀರವಾಗಿ ಗಾಯಗೊಂಡಿದ್ದ ಬೈಕ್‌ ಸವಾರನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಕೂಲ್ ಬಸ್ ಚಾಲಕನನ್ನು ಬಂಧಿಸಲಾಗಿದೆ.

ಚನ್ನಪಟ್ಟಣದ ಲಾಡ್ಜ್‌ನಲ್ಲಿ ವ್ಯಕ್ತಿ ಅನುಮಾನಾಸ್ಪದ ಸಾವು
ರಾಮನಗರ: ಚನ್ನಪಟ್ಟಣದ ಲಾಡ್ಜ್‌ನಲ್ಲಿ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಲಾಡ್ಜ್‌ನಲ್ಲಿ ಮ್ಯಾನೇಜರ್‌ ಆಗಿರುವ ರವಿ (44) ಅವರೇ ಮೃತಪಟ್ಟವರು. ಕಿವಿಯಲ್ಲಿ ತೀವ್ರ ರಕ್ತಸ್ರಾವವಾಗಿ ರವಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಚನ್ನಪಟ್ಟಣ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ | Road Accident | ತುಮಕೂರಿನಲ್ಲಿ ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

Exit mobile version