Site icon Vistara News

Road Accident : ಸಾಗರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿ; ಪ್ರಯಾಣಿಕರು ಗಂಭೀರ

ksrtc bus accident

ಶಿವಮೊಗ್ಗ/ಬೀದರ್‌ : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಉಳ್ಳೂರು ಸಮೀಪದ ಸಂಪಿಗೆಸರ ಬಳಿ ಕೆಎಸ್ಆರ್‌ಟಿಸಿ ಬಸ್ ಪಲ್ಟಿ (Road Accident) ಆಗಿದೆ. ದ್ವಿಚಕ್ರ ವಾಹನ ಸವಾರನನ್ನು ತಪ್ಪಿಸಲು ಹೋಗಿ ಹೆದ್ದಾರಿ ಪಕ್ಕದ ಹಳ್ಳಕ್ಕೆ ಬಸ್ (Ksrtc bus) ಪಲ್ಟಿ ಆಗಿದೆ.

ತೀವ್ರ ಮಳೆಗೆ ಹೆದ್ದಾರಿ ರಸ್ತೆಯು ಜಾರುತ್ತಿದ್ದು, ಶಿವಮೊಗ್ಗದಿಂದ ಸಾಗರದ ಕಡೆಗೆ ಪ್ರಯಾಣಿಕರನ್ನು ಹೊತ್ತು ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಹತ್ತಕ್ಕೂ ಹೆಚ್ಚು ಪ್ರಯಾಣಿಕರಿದ್ದ ಬಸ್‌ನಲ್ಲಿ ಹಲವರಿಗೆ ಗಾಯಾಳಾಗಿದ್ದು, ಸಾಗರದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಶಾಲಾ ಮಕ್ಕಳಿಂದ ಆಟೋ ಪಲ್ಟಿ

ಮಕ್ಕಳಿಂದ ಆಟೋ ಪಲ್ಟಿ

ಶಾಲಾ ಮಕ್ಕಳನ್ನು ಹೊತ್ತು ಸಾಗುತ್ತಿದ್ದ ಆಟೋ ಪಲ್ಟಿ ಆಗಿದೆ. ಬೀದರ್‌ನ ಭಾಲ್ಕಿ ಪಟ್ಟಣದ ಉದ್ಗಿರ್ ರಸ್ತೆಯ ದಾದರಾ ಹತ್ತಿರ ಆಟೋ ಪಲ್ಟಿ ಆಗಿದ್ದು, ಅನಾಹುತವೊಂದು ತಪ್ಪಿದೆ. ಆಟೋದಲ್ಲಿ ಹತ್ತಕ್ಕೂ ಹೆಚ್ಚು ಮಕ್ಕಳನ್ನು ಕೂರಿಸಿಕೊಂಡು ಹೋಗುತ್ತಿದ್ದಾಗ, ಆಯಾ ತಪ್ಪಿ ಆಟೋ ರಸ್ತೆ ಪಕ್ಕದಲ್ಲಿದ್ದ ಹಳ್ಳಕ್ಕೆ ಪಲ್ಟಿಯಾಗಿದೆ. ಮೌನೇಶ್ವರ ಶಾಲೆ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುವಾಗ ಈ ದುರ್ಘಟನೆ ನಡೆದಿದೆ. ಮಕ್ಕಳಿಗೆ ಗಾಯಗಳಾಗಿದ್ದು, ಎಲ್ಲರನ್ನೂ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆಯನ್ನು ಕೊಡಿಸಲಾಗಿದೆ.

ಬೈಕ್‌ಗೆ ಲಾರಿ ಡಿಕ್ಕಿ; ಸವಾರನ ದೇಹ ಛಿದ್ರ ಛಿದ್ರ

ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಯೋಗಿಕೊಪ್ಪ ಕ್ರಾಸ್ ಬಳಿ ಯಮಸ್ವರೂಪಿಯಾಗಿ ಬಂದ ಲಾರಿ ಹಾಗೂ ಟಿಪ್ಪರ್‌ ಬೈಕ್‌ ಸವಾರನ (Road Accident) ಜೀವ ತೆಗೆದಿದೆ. ಲಾರಿ ಹಾಗೂ ಟಿಪ್ಪರ್ ನಡುವೆ ಡಿಕ್ಕಿಯಾಗಿದ್ದು, ಇದರ ಮಧ್ಯೆ ಸಿಲುಕಿದ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೈಕ್ ಸವಾರ ನಾಗರಾಜ ಮಳವಳ್ಳಿ ಎಂದು ತಿಳಿದು ಬಂದಿದೆ. ನಾಗರಾಜನ ಮೇಲೆಯೇ ಲಾರಿ ಹರಿದ ಪರಿಣಾಮ ದೇಹವೆಲ್ಲವೂ ಛಿದ್ರ ಛಿದ್ರಗೊಂಡಿದೆ. ಸ್ಥಳಕ್ಕೆ ಹಂಸಭಾವಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version