Site icon Vistara News

Road Accident : ಅಂಕೋಲಾ ಕೊಡ್ಲಗದ್ದೆ ಬಳಿ ಉರುಳಿದ ಹಣ್ಣಿನ ಲಾರಿ, ಚಾಲಕ ಸಾವು

road accident: lorry carrying fruits overturns and rams into road side tree, driver died on spot

road-accident: lorry carrying fruits overturns and rams into road side tree, driver died on spot

ಅಂಕೋಲಾ (ಉತ್ತರ ಕನ್ನಡ): ಹಣ್ಣುಗಳನ್ನು ತುಂಬಿಕೊಂಡು ಸಾಗುತ್ತಿದ್ದ ಈಚರ್ ವಾಹನವೊಂದು ರಾ.ಹೆ 63 ಕೊಡ್ಲಗದ್ದೆ ಬಳಿ ದಾರಿ ಮಧ್ಯೆ ಉರುಳಿ ಮರಕ್ಕೆ ಗುದ್ದಿದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದ ಸಾಂಗ್ಲಿಯಿಂದ ಕೇರಳದ ಕೊಚ್ಚಿಗೆ ಹಣ್ಣುಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿ ಇದಾಗಿದ್ದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಹೆದ್ದಾರಿ ಅಂಚಿನ ಮರಕ್ಕೆ ಬಡಿದಿದೆ. ಪರಿಣಾಮವಾಗಿ ಲಾರಿ ಸಂಪೂರ್ಣ ನುಜ್ಜು ಗುಜ್ಜಾಗಿದ್ದು, ವಾಹನದಲ್ಲಿದ್ದ ಹಣ್ಣಿನ ಪೆಟ್ಟಿಗೆಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ.

ರಸ್ತೆಯಂಚಿನ ಮರಕ್ಕೆ ಡಿಕ್ಕಿ ಹೊಡೆದ ಹಣ್ಣು ಸಾಗಾಟದ ಲಾರಿ

ಅಪಘಾತಗೊಂಡ ಲಾರಿ ಮತ್ತು ಮರದ ಮಧ್ಯೆ ಚಾಲಕ ಸಿಲುಕಿಕೊಂಡು ಸ್ಥಳದಲ್ಲೇ ಮೃತಪಟ್ಟಿದ್ದು ಚಾಲಕನ ಮೃತ ದೇಹ ಹೊರತೆಗೆಯಲು ಕ್ರೇನ್ ಬಳಸಿ ಹರಸಾಹಸ ಪಡುವಂತಾಯಿತು.

ಅಂಕೋಲಾ ಸಿಪಿಐ ಜಾಕ್ಸನ್ ಡಿಸೋಜ, ಪಿಎಸ್‌ಐ ಪ್ರೇಮನಗೌಡ ಪಾಟೀಲ್ ಸ್ಥಳ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಅಂಕೋಲಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಮತ್ತು ಲಾರಿ ನಡುವೆ ಅಪಘಾತ: ಕಾರಿನಲ್ಲಿದ್ದ ನಾಲ್ವರಿಗೆ ಗಾಯ

ಅಂಕೋಲಾ (ಉತ್ತರ ಕನ್ನಡ ಜಿಲ್ಲೆ) : ಕಾರು ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ಗಾಯಗಳಾದ ಘಟನೆ ತಾಲೂಕಿನ ಶಿರೂರು ರಾ.ಹೆ 66ರಲ್ಲಿ ನಡೆದಿದೆ.

ಕಾರವಾರ ತಾಲೂಕಿನ ಅಮದಳ್ಳಿ ಕಂತ್ರಿವಾಡಾ ನಿವಾಸಿಗಳಾದ ದಿನೇಶ ಅಶೋಕ ಕಂತ್ರಿಕರ(34), ನವೀನ ಅನಿಲ ಕಂತ್ರಿಕರ, (23), ರೋಹಿತ ಸುಭಾಷ ಕಂತ್ರಿಕರ (23), ರಾಜರಾಮ ಅಶೋಕ ಠಾಕರಕರ(23) ಎಂಬುವವರೆ ಗಾಯಾಳುಗಳು.

ಲಾರಿ ಚಾಲಕನಾದ ಬಾಬುಷಾ ಗುಂಡಪ್ಪ ಎಂಬಾತನು ಕುಮಟಾ ಕಡೆಯಿಂದ ಅಂಕೋಲಾ ಕಡೆ ತನ್ನ ಲಾರಿಯನ್ನು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿ ಎದುರಿನಿಂದ ಬರುತ್ತಿದ್ದ ಕಾರನ್ನು ನೋಡಿಯೂ ತನ್ನ ಮುಂದೆ ಹೊಗುತ್ತಿದ್ದ ರಿಕ್ಷಾ ಓವರಟೇಕ್ ಮಾಡುವ ಭರದಲ್ಲಿ ಅಂಕೋಲಾ ಕಡೆಯಿಂದ ಕುಮಟಾ ಕಡೆ ಹೊಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಪಡಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಅಂಕೋಲಾ ತಾಲೂಕಾಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : Road accident : ಶ್ರೀ ಕ್ಷೇತ್ರ ಸಿಗಂದೂರು ಬಳಿ ರಸ್ತೆಯಿಂದ ಕೆಳಗೆ ಉರುಳಿದ ಟೆಂಪೊ ಟ್ರಾವೆಲರ್‌, ಪ್ರವಾಸಿ ಮಹಿಳೆ ಸಾವು

Exit mobile version