Road Accident : ನೈಸ್‌ ರೋಡಲ್ಲಿ ಸ್ಪೀಡಾಗಿ ಬಂದು ಬೈಕ್‌ ಸವಾರನಿಗೆ ಗುದ್ದಿದ ಲಾರಿ - Vistara News

ಕರ್ನಾಟಕ

Road Accident : ನೈಸ್‌ ರೋಡಲ್ಲಿ ಸ್ಪೀಡಾಗಿ ಬಂದು ಬೈಕ್‌ ಸವಾರನಿಗೆ ಗುದ್ದಿದ ಲಾರಿ

Road Accident : ಪ್ರತ್ಯೇಕ ಕಡೆಗಳಲ್ಲಿ ಅಪಘಾತ ಪ್ರಕರಣಗಳು ವರದಿ ಆಗಿದ್ದು, ಸಾವು-ನೋವಿಗೆ ಕಾರಣವಾಗಿದೆ. ಬೆಂಗಳೂರಲ್ಲಿ ಬೈಕ್‌ ಸವಾರ ಮೃತಪಟ್ಟಿದ್ದರೆ, ಶಿವಮೊಗ್ಗದಲ್ಲಿ ಕಾರು ಪಲ್ಟಿಯಾಗಿ ಇಬ್ಬರು ಗಾಯಗೊಂಡಿದ್ದಾರೆ.

VISTARANEWS.COM


on

Lorry Hit bike in Bengaluru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು/ಶಿವಮೊಗ್ಗ: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ (Road Accident) ನಡೆದಿದೆ. ಬೈಕ್‌ ಸವಾರನಿಗೆ ಹಿಂಬದಿಯಿಂದ ಬಂದ ಲಾರಿಯು ಡಿಕ್ಕಿ ಹೊಡೆದಿದೆ. ಪರಿಣಾಮ ಸವಾರ ಎಗರಿ ಬಿದ್ದು ಮೃತಪಟ್ಟಿದ್ದಾರೆ. ರಮೇಶ್ ನಾಯ್ಕ್ (37) ಮೃತ ದುರ್ದೈವಿ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಕೋರಮಂಗಲ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕನನ್ನು ಬಂಧಿಸಲಾಗಿದೆ.

ಇದನ್ನೂ ಓದಿ: Car Accident : ಬ್ರೇಕ್‌ ಬದಲು ಎಕ್ಸಿಲೇಟರ್‌ ಒತ್ತಿದ ಪ್ರೊಫೆಸರ್‌! ಮಹಾರಾಣಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಬ್ಬರು ಗಂಭೀರ

ನಿಯಂತ್ರಣ ತಪ್ಪಿ ಕಾರು ಪಲ್ಟಿ

ಶಿವಮೊಗ್ಗದ ರಿಪ್ಪನ್‌ಪೇಟೆ ಬಳಿಯ ಜಂಬಳ್ಳಿ ತಿರುವಿನಲ್ಲಿ ಕಾರು ಪಲ್ಟಿಯಾಗಿ ಇಬ್ಬರು ಗಾಯಗೊಂಡಿದ್ದಾರೆ. ಹುಂಚ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದಿದೆ. ಕಾರಿನಲ್ಲಿದ್ದ ನಮನ್ (21) ಹಾಗೂ ಕುಮಾರ್ (21) ಎಂಬುವವರು ಗಂಭೀರ ಗಾಯಗೊಂಡಿದ್ದಾರೆ.

ಕಾರಲ್ಲಿ ನಾಲ್ವರು ಪ್ರಯಾಣಿಸುತಿದ್ದರು. ಈ ವೇಳೆ ಒಮ್ಮೆಲೆ ಇನ್ನೋವಾ ಕಾರು ಪಲ್ಟಿಯಾಗಿದೆ. ನಮನ್‌ ಹಾಗೂ ಕುಮಾರ್‌ ತಲೆಗೆ ಪೆಟ್ಟು ತಗುಲಿದ್ದು, ಇಬ್ಬರನ್ನೂ ಶಿವಮೊಗ್ಗಕ್ಕೆ ರವಾನೆ ಮಾಡಲಾಗಿದೆ. ಇನ್ನೊಬ್ಬ ಪ್ರಯಾಣಿಕ ಮದನ್ ಎಂಬುವವರಿಗೆ ಸಣ್ಣಪುಟ್ಟ ಗಾಯವಾಗಿವೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

CM’s Bengaluru City Rounds: ರಸ್ತೆಗಳ ದುರಸ್ತಿಗೆ ಶಾಶ್ವತ ನಿರ್ವಹಣಾ ವ್ಯವಸ್ಥೆ ರೂಪಿಸಲು ಸಿಎಂ ಸೂಚನೆ

CM’s Bengaluru City Rounds: ರಸ್ತೆಗಳಲ್ಲಿ ಗುಂಡಿಗಳು ಬಿದ್ದ ಕೂಡಲೇ ದುರಸ್ತಿ ಮಾಡಬೇಕು. ಪಾದಚಾರಿ ಮಾರ್ಗಗಳನ್ನು ಸರಿಪಡಿಸಬೇಕು. ರಾಜಕಾಲುವೆಗೆ ಕಸ ಹಾಕುವುದನ್ನು ತಡೆಗಟ್ಟಬೇಕು ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

VISTARANEWS.COM


on

CM's Bengaluru City Rounds
Koo

ಬೆಂಗಳೂರು: ನಗರದ ವಿವಿಧೆಡೆ ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಭೇಟಿ ನೀಡಿ, ಅಭಿವೃದ್ಧಿ ಕಾಮಗಾರಿ ಮತ್ತು ಮಳೆಯಿಂದ ಸಮಸ್ಯೆಗಳಿಗೆ ಒಳಗಾದ ಪ್ರದೇಶಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ಮಳೆಗಾಲ ನಿರ್ವಹಣೆಗೆ ಎಲ್ಲಾ ರೀತಿಯಲ್ಲಿಯೂ ಸಜ್ಜಾಗಬೇಕು ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದು, ಯಾವುದೇ ಕಾರಣಕ್ಕೂ ಮಳೆ ಬಂದಾಗ ಮನೆ, ಮಳಿಗೆಗಳಿಗೆ ನೀರು ನುಗ್ಗಿದರೆ ಎಂಜಿನಿಯರ್‌ಗಳನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (CM’s Bengaluru City Rounds) ಎಚ್ಚರಿಕೆ ನೀಡಿದ್ದಾರೆ.

ಇನ್ನು ರಸ್ತೆ ಹಾಗೂ ಗುಂಡಿಗಳನ್ನು ನಿರ್ವಹಿಸಲು ಒಂದು ಶಾಶ್ವತ ನಿರ್ವಹಣಾ ವ್ಯವಸ್ಥೆ ರೂಪಿಸಲು ಸೂಚನೆ ನೀಡಿರುವ ಸಿಎಂ ಅವರು, ಗುಂಡಿಗಳು ಬಿದ್ದ ಹಾಗೆಯೇ ಕೂಡಲೇ ದುರಸ್ತಿ ಮಾಡಬೇಕು, ಬಿಡಿಎನಲ್ಲಿಯೂ ಈ ರೀತಿ ವ್ಯವಸ್ಥೆ ರೂಪಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ವಿಳಂಬವಾಗಿರುವ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು, ಹೂಳೆತ್ತಬೇಕು ಹಾಗೂ ಒಣಗಿರುವ ಕೊಂಬೆಗಳನ್ನು ಕತ್ತರಿಸಬೇಕು. ಪಾದಚಾರಿ ಮಾರ್ಗಗಳನ್ನು ಸರಿಪಡಿಸಬೇಕು. ರಾಜಕಾಲುವೆಗೆ ಕಸ ಹಾಕುವುದನ್ನು ತಡೆಗಟ್ಟಬೇಕು. ಮುಂಗಾರು ಪ್ರಾರಂಭವಾಗುವ ಮುಂಚಿತವಾಗಿ ರಾಜಕಾಲುವೆಗಳ ಹೂಳು ತೆಗೆಯಬೇಕು ಎಂದು ತಿಳಿಸಿದರು.

ಇದನ್ನೂ ಓದಿ | CM City Rounds: ವಿಜಯನಗರ ರಾಜಕಾಲುವೆ; ಈ ವರ್ಷದೊಳಗೆ ಪರಿಹರಿಸದಿದ್ದರೆ ಮುಖ್ಯ ಎಂಜಿನಿಯರ್‌ ಸಸ್ಪೆಂಡ್‌: ಸಿಎಂ ವಾರ್ನಿಂಗ್

ಒಂದು ತಿಂಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿ

ಬೆಂಗಳೂರು ನಗರದಲ್ಲಿ ವಾರ್ಡ್ ರಸ್ತೆಗಳಲ್ಲಿ 5500 ಗುಂಡಿಗಳು ಬಿದ್ದಿದ್ದು, ಅವುಗಳನ್ನು ಮುಚ್ಚಬೇಕು, ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಲ್ಲಿ 557 ಗುಂಡಿಗಳಿವೆ. ಈ ತಿಂಗಳಲ್ಲಿ ಭರ್ತಿ ಮಾಡಬೇಕು. ಸಿಲ್ಕ್ ಬೋರ್ಡ್ ಬಳಿ ಮೆಟ್ರೋ ನಿರ್ಮಿಸಿರುವ ರಸ್ತೆ ಅಗಲೀಕರಣ ಮಾಡಬೇಕು, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮಡಿವಾಳ ಕೆರೆಯ ಬಳಿ ಇನ್ನೊಂದು ಚರಂಡಿ ನಿರ್ಮಿಸಬೇಕು ಎಂದು ಸೂಚಿಸಿದರು.

ಈಜಿಪುರದಲ್ಲಿ ಬಿಬಿಎಂಪಿ ವತಿಯಿಂದ ಮೇಲ್ಸೇತುವೆ ನಿರ್ಮಾಣ ನನೆಗುದಿಗೆ ಬಿದ್ದಿದ್ದು, ಗುತ್ತಿಗೆದಾರರು ವಿಳಂಬ ಮಾಡುತ್ತಿದ್ದಾರೆ. ಇವರ ಗುತ್ತಿಗೆ ರದ್ದು ಮಾಡಿ ಹೊಸಬರಿಗೆ ಕೊಡಲು ಸೂಚನೆ ನೀಡಲಾಗಿದೆ. ಮುಂಗಾರು ಮಳೆಗೂ ಮುನ್ನ ಪ್ರವಾಹ ಉಂಟಾಗಬಾರದೆಂದು ಚುನಾವಣಾ ಆಯೋಗದಿಂದ ಅನುಮತಿ ಪಡೆದು 7-8 ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗಿದೆ ಎಂದು ಸಿಎಂ ಹೇಳಿದರು.

ರಾಜಕಾಲುವೆ ಒತ್ತುವರಿ ತೆರವಿಗೆ ಸೂಚನೆ

ರಾಜಕಾಲುವೆ ಒತ್ತುವರಿಯಾಗಿದ್ದರೆ ಎಷ್ಟೇ ಪ್ರಭಾವಿಗಳಾಗಿದ್ದರೂ ತೆರವು ಗೊಳಿಸಬೇಕು. ಬೆಂಗಳೂರಿನಲ್ಲಿ 400 ಕೆರೆಗಳಿದ್ದವು. ಅನೇಕ ಕೆರೆಗಳು ಹೂಳಿನಿಂದ ತುಂಬಿದೆ ಹಾಗೂ ಒತ್ತುವರಿಯಾಗಿವೆ. ಒತ್ತುವರಿ ತೆರವು ಮಾಡಿ ನೀರು ಹರಿಯಲು ಕಾಲುವೆ ನಿರ್ಮಾಣ ಮಾಡಬೇಕು ಎಂದು ತಿಳಿಸಿದರು.

ಜೂನ್‌ಗೆ ಮುಂಚೆಯೇ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಪ್ರವಾಹ ಸಂಬಂಧಿ ಸ್ಥಳಗಳನ್ನು ಮಾತ್ರ ಪರಿಶೀಲಿಸಲು ಚುನಾವಣಾ ಆಯೋಗ ಅನುಮತಿ ನೀಡಿದೆ, ಅದರಂತೆ ಪರಿಶೀಲಿಸಲಾಗಿದೆ. ಕೆರೆಗಳಿಂದ ತೆಗೆಯಲಾಗುವ ಹೂಳನ್ನು ಗುರುತು ಮಾಡಿರುವ ಸ್ಥಳಗಳಲ್ಲಿ (ಕ್ವಾರಿಗಳಿಗೆ) ಹಾಕಲಾಗುತ್ತಿದೆ. ಇನ್ನು ಬಿಬಿಎಂಪಿ ಚುನಾವಣೆ ಬಗ್ಗೆ ಲೋಕಸಭೆ ಫಲಿತಾಂಶದ ನಂತರ ಚಿಂತಿಸಲಾಗುವುದು ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರೂ ಯಲಹಂಕಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ 20 ಮನೆಗಳಿಗೆ ನೀರು ನುಗ್ಗಿದೆ ಎಂದು ವರದಿಯಾಗಿತ್ತು. ಯಲಹಂಕ ಕೆರೆಗೆ ನೀರು ಹೋಗುವಂತೆ ಮಾಡಲು ಅರಣ್ಯ ಇಲಾಖೆಯ ಅಧಿಕಾರಿಗಳು ಬಿಬಿಎಂಪಿಗೆ ನೀರು ಹೋಗಲು ಅನುವು ಮಾಡಿಕೊಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಗಾಳಿ ಆಂಜನೇಯ ದೇವಾಲಯದ ಬಳಿ ಮಳೆ ಜಾಸ್ತಿಯಾದಾಗ ನೀರು ಹರಿಯಲು ಎತ್ತರ ಸಾಲಲ್ಲ, ಹೂಳು ತುಂಬಿತ್ತು. ಪರ್ಯಾಯವಾಗಿ ಇನ್ನೊಂದು ಮೋರಿ ನಿರ್ಮಿಸಲು. ಸೂಚನೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ 860 ಕಿಮೀ ರಾಜಕಾಲುವೆ ಇದೆ. ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ 491 ಕಿಮೀ ರಾಜಕಾಲುವೆಯನ್ನು ತೆರವು ಮಾಡಲಾಗಿತ್ತು ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ | CM’s Bengaluru City Rounds: ರಾಜಕಾಲುವೆ ಒತ್ತುವರಿ ಯಾರೇ ಮಾಡಿದ್ರೂ ಮುಲಾಜಿಲ್ಲದೆ ತೆರವು: ಸಿಎಂ ಎಚ್ಚರಿಕೆ

ಹಿಂದಿನ ಸರ್ಕಾರ ಜನವರಿ 2023 ರಲ್ಲಿ 193 ಕಿಮೀ ತೆರವು ಮಾಡಲು ಕ್ರಮ ತೆಗೆದುಕೊಂಡರು. ಮೊದಲೇ ಈ ಕೆಲಸ ಮಾಡಿದ್ದರೆ ಸಮಸ್ಯೆ ಇರುತ್ತಿರಲಿಲ್ಲ. 1800 ಕೋಟಿ ರೋ. ಇದಕ್ಕೆ ವೆಚ್ಚವಾಗುತ್ತಿದೆ. 174 ಕಿಮೀ ಉಳಿದಿದೆ. ವಿಶ್ವ ಬ್ಯಾಂಕ್ ಸುಮಾರು 2000 ಕೋಟಿ ರೂಪಾಯಿ ನೀಡಲಿದೆ. 12 ಪ್ರಕರಣ ಸಿವಿಲ್ ನ್ಯಾಯಾಲಯದಲ್ಲಿವೆ. ವಕೀಲರು ಇದಕ್ಕೆ ಹಾಜರಾಗುತ್ತಿದ್ದು, ಅಗತ್ಯ ಬಿದ್ದರೆ ವಿಶೇಷ ವಕೀಲರನ್ನು ನೇಮಿಸಿ ಪ್ರಕರಣ ಇತ್ಯರ್ಥ ಗೊಳಿಸಲಾಗುವುದು. 12.15 ಕಿಮೀ ನ್ಯಾಯಾಲಯದಲ್ಲಿ ಪ್ರಕರಣವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Continue Reading

ಕರ್ನಾಟಕ

CM’s Bengaluru City Rounds: ರಾಜಕಾಲುವೆ ಒತ್ತುವರಿ ಯಾರೇ ಮಾಡಿದ್ರೂ ಮುಲಾಜಿಲ್ಲದೆ ತೆರವು: ಸಿಎಂ ಎಚ್ಚರಿಕೆ

CM’s Bengaluru City Rounds: ಬೆಂಗಳೂರಿನ ವಿವಿಧೆಡೆ ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಭೇಟಿ ನೀಡಿ, ಅಭಿವೃದ್ಧಿ ಕಾಮಗಾರಿ ಮತ್ತು ಮಳೆಯಿಂದ ಸಮಸ್ಯೆಗಳಿಗೆ ಒಳಗಾದ ಪ್ರದೇಶಗಳನ್ನು ಪರಿಶೀಲನೆ ನಡೆಸಿದರು.

VISTARANEWS.COM


on

Koo

ಬೆಂಗಳೂರು: ರಾಜಧಾನಿಯಲ್ಲಿ ಈ ಹಿಂದೆ ಸುಮಾರು 400 ಕೆರೆಗಳು ಇದ್ದವು. ಆದರೆ, ಒತ್ತುವರಿಯಿಂದ ಅನೇಕ ಕೆರೆಗಳು ಕಣ್ಮರೆಯಾಗಿವೆ. ಅವುಗಳನ್ನು ತೆರವು ಮಾಡಲು ಸೂಚನೆ ಕೊಟ್ಟಿದ್ದೇವೆ. ರಾಜಕಾಲುವೆ ತೆರವುಗೊಳಿಸುವಲ್ಲಿ ಯಾವುದೇ ರಾಜಿ ಇಲ್ಲ. ಯಾವ ಪ್ರಬಲ ರಾಜಕಾರಣಿಯೇ ಇರಲಿ, ಬೇರೆ ಯಾರೇ ಇರಲಿ ಮುಲಾಜಿಲ್ಲದೆ ತೆರವುಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (CM’s Bengaluru City Rounds) ಖಡಕ್‌ ಎಚ್ಚರಿಕೆ ನೀಡಿದರು.

ನಗರದ ವಿವಿಧೆಡೆ ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಿ, ಅಭಿವೃದ್ಧಿ ಕಾಮಗಾರಿ ಮತ್ತು ಮಳೆಯಿಂದ ಸಮಸ್ಯೆಗಳಿಗೆ ಒಳಗಾದ ಪ್ರದೇಶಗಳನ್ನು ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ರಾಮಲಿಂಗಾರೆಡ್ಡಿ ಬಿಡಿಎ ಅಧ್ಯಕ್ಷರು, ಆಯುಕ್ತರು ಸೇರಿ ಅಧಿಕಾರಿಗಳ ತಂಡದ ಜೊತೆ ಅನೇಕ ಪ್ರದೇಶಗಳಿಗೆ ಭೇಟಿ ನೀಡಿದೆವು. ಜೂನ್ ತಿಂಗಳಿನಿಂದ ಮುಂಗಾರು ಪ್ರಾರಂಭವಾಗಲಿದೆ. ವಾಡಿಕೆ ಮಳೆಗಿಂತ ಹೆಚ್ಚು ಮಳೆಯಾಗಿ ಪ್ರವಾಹ ಉಂಟಾಗಿದೆ ಎಂದು ವರದಿಯಾಗಿರುವ ಹಿನ್ನೆಲೆಯಲ್ಲಿ ಸಿಟಿ ರೌಂಡ್ಸ್ ನಡೆಸಿ, ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದೇವೆ ಎಂದು ಹೇಳಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರೂ ಯಲಹಂಕಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ 20 ಮನೆಗಳಿಗೆ ನೀರು ನುಗ್ಗಿದೆ ಎಂದು ವರದಿಯಾಗಿತ್ತು. ಯಲಹಂಕ ಕೆರೆಗೆ ನೀರು ಹೋಗುವಂತೆ ಮಾಡಲು ಅರಣ್ಯ ಇಲಾಖೆಯ ಅಧಿಕಾರಿಗಳು ಬಿಬಿಎಂಪಿಗೆ ನೀರು ಹೋಗಲು ಅನುವು ಮಾಡಿಕೊಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಗಾಳಿ ಆಂಜನೇಯ ದೇವಾಲಯದ ಬಳಿ ಮಳೆ ಜಾಸ್ತಿಯಾದಾಗ ನೀರು ಹರಿಯಲು ಎತ್ತರ ಸಾಲಲ್ಲ, ಹೂಳು ತುಂಬಿತ್ತು. ಪರ್ಯಾಯವಾಗಿ ಇನ್ನೊಂದು ಮೋರಿ ನಿರ್ಮಿಸಲು. ಸೂಚನೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ 860 ಕಿಮೀ ರಾಜಕಾಲುವೆ ಇದೆ. ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ 491 ಕಿಮೀ ರಾಜಕಾಲುವೆಯನ್ನು ತೆರವು ಮಾಡಲಾಗಿತ್ತು ಎಂದು ಹೇಳಿದರು.

ಇದನ್ನೂ ಓದಿ | Phone tapping: ಗೃಹ ಸಚಿವರಿಗೆ ಅಶೋಕ್‌ ರೈಟಿಂಗ್‌ನಲ್ಲಿ ಕಂಪ್ಲೇಂಟ್‌ ಕೊಡಲಿ; ಫೋನ್‌ ಕದ್ದಾಲಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು

ಹಿಂದಿನ ಸರ್ಕಾರ ಜನವರಿ 2023 ರಲ್ಲಿ 193 ಕಿಮೀ ತೆರವು ಮಾಡಲು ಕ್ರಮ ತೆಗೆದುಕೊಂಡರು. ಮೊದಲೇ ಈ ಕೆಲಸ ಮಾಡಿದ್ದರೆ ಸಮಸ್ಯೆ ಇರುತ್ತಿರಲಿಲ್ಲ. 1800 ಕೋಟಿ ರೋ. ಇದಕ್ಕೆ ವೆಚ್ಚವಾಗುತ್ತಿದೆ. 174 ಕಿಮೀ ಉಳಿದಿದೆ. ವಿಶ್ವ ಬ್ಯಾಂಕ್ ಸುಮಾರು 2000 ಕೋಟಿ ರೂಪಾಯಿ ನೀಡಲಿದೆ. 12 ಪ್ರಕರಣ ಸಿವಿಲ್ ನ್ಯಾಯಾಲಯದಲ್ಲಿವೆ. ವಕೀಲರು ಇದಕ್ಕೆ ಹಾಜರಾಗುತ್ತಿದ್ದು, ಅಗತ್ಯ ಬಿದ್ದರೆ ವಿಶೇಷ ವಕೀಲರನ್ನು ನೇಮಿಸಿ ಪ್ರಕರಣ ಇತ್ಯರ್ಥ ಗೊಳಿಸಲಾಗುವುದು. 12.15 ಕಿಮೀ ನ್ಯಾಯಾಲಯದಲ್ಲಿ ಪ್ರಕರಣವಿದೆ ಎಂದು ತಿಳಿಸಿದರು.

ವಿಳಂಬವಾಗಿರುವ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು, ಹೂಳೆತ್ತಬೇಕು, ಒಣಗಿರುವ ಕೊಂಬೆಗಳನ್ನು ಕತ್ತರಿಸಲು ಸೂಚನೆ ನೀಡಲಾಗಿದೆ. ಪಾದಚಾರಿ ಮಾರ್ಗಗಳನ್ನು ಸರಿಪಡಿಸಬೇಕು. ರಾಜಕಾಲುವೆಗೆ ಕಸ ಹಾಕುವುದನ್ನು ತಡೆಗಟ್ಟಲು ಸೂಚನೆ ನೀಡಲಾಗಿದೆ. ಮುಂಗಾರು ಪ್ರಾರಂಭವಾಗುವ ಮುಂಚಿತವಾಗಿ ರಾಜಕಾಲುವೆಗಳ ಹೂಳು ತೆಗೆಯಬೇಕು ಎಂದು ತಿಳಿಸಿದರು.

ಒಂದು ತಿಂಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿ

ಬೆಂಗಳೂರು ನಗರದಲ್ಲಿ ವಾರ್ಡ್ ರಸ್ತೆಗಳಲ್ಲಿ 5500 ಗುಂಡಿಗಳು ಬಿದ್ದಿದ್ದು, ಅವುಗಳನ್ನು ಮುಚ್ಚಬೇಕು, ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಲ್ಲಿ 557 ಗುಂಡಿಗಳಿವೆ. ಈ ತಿಂಗಳಲ್ಲಿ ಭರ್ತಿ ಮಾಡಬೇಕು ಎಂದು ಸೂಚಿಸಲಾಗಿದೆ. ಸಿಲ್ಕ್ ಬೋರ್ಡ್ ಬಳಿ ಮೆಟ್ರೋ ನಿರ್ಮಿಸಿರುವ ರಸ್ತೆಯನ್ನು ಅಗಲೀಕರಿಸಲು ಸೂಚನೆ ನೀಡಲಾಗಿದೆ. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮಡಿವಾಳ ಕೆರೆಯ ಬಳಿ ಇನ್ನೊಂದು ಚರಂಡಿ ನಿರ್ಮಿಸಲು ಸೂಚಿಸಲಾಗಿದೆ ಎಂದು ಸಿಎಂ ತಿಳಿಸಿದರು.

ಈಜಿಪುರದಲ್ಲಿ ಬಿಬಿಎಂಪಿ ವತಿಯಿಂದ ಮೇಲ್ಸೇತುವೆ ನಿರ್ಮಾಣ ನನೆಗುದಿಗೆ ಬಿದ್ದಿದ್ದು, ಗುತ್ತಿಗೆದಾರರು ವಿಳಂಬ ಮಾಡುತ್ತಿದ್ದಾರೆ. ಇವರ ಗುತ್ತಿಗೆ ರದ್ದು ಮಾಡಿ ಹೊಸಬರಿಗೆ ಕೊಡಲು ಸೂಚನೆ ನೀಡಲಾಗಿದೆ. ಮುಂಗಾರು ಮಳೆಗೂ ಮುನ್ನ ಪ್ರವಾಹ ಉಂಟಾಗಬಾರದೆಂದು ಚುನಾವಣಾ ಆಯೋಗದಿಂದ ಅನುಮತಿ ಪಡೆದು 7-8 ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗಿದೆ.

ರಸ್ತೆ ಹಾಗೂ ಗುಂಡಿಗಳನ್ನು ನಿರ್ವಹಿಸಲು ಒಂದು ಶಾಶ್ವತ ನಿರ್ವಹಣಾ ವ್ಯವಸ್ಥೆ ರೂಪಿಸಲು ಸೂಚನೆ ನೀಡಲಾಗಿದೆ. ಗುಂಡಿಗಳು ಬಿದ್ದ ಹಾಗೆಯೇ ಕೂಡಲೇ ದುರಸ್ತಿ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಬಿಡಿಎನಲ್ಲಿಯೂ ಈ ರೀತಿ ವ್ಯವಸ್ಥೆ ರೂಪಿಸಲು ಸೂಚಿಸಲಾಗಿದೆ ಎಂದು ಸಿಎಂ ಹೇಳಿದರು.

ಮಳೆಗಾಲ ನಿರ್ವಹಣೆಗೆ ಸಜ್ಜಾಗಲು ಸೂಚನೆ

ಮಳೆಗಾಲ ನಿರ್ವಹಣೆಗೆ ಎಲ್ಲಾ ರೀತಿಯಲ್ಲಿಯೂ ಸಜ್ಜಾಗಬೇಕು ಎಂದು ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಮಳೆ ಬಂದಾಗ ನೀರು ನುಗ್ಗಿದರೆ ಎಂಜಿನಿಯರ್‌ಗಳನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದು ಸಿಎಂ ಎಚ್ಚರಿಕೆ ನೀಡಿದರು.

ರಾಜಕಾಲುವೆ ತೆರವು

ರಾಜಕಾಲುವೆ ಒತ್ತುವರಿಯಾಗಿದ್ದರೆ ಎಷ್ಟೇ ಪ್ರಭಾವಿಗಳಾಗಿದ್ದರೂ ತೆರವು ಗೊಳಿಸಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ 400 ಕೆರೆಗಳಿದ್ದವು. ಅನೇಕ ಕೆರೆಗಳು ಹೂಳಿನಿಂದ ತುಂಬಿದೆ ಹಾಗೂ ಒತ್ತುವರಿಯಾಗಿವೆ. ಒತ್ತುವರಿ ತೆರವು ಮಾಡಿ ನೀರು ಹರಿಯಲು ಕಾಲುವೆ ನಿರ್ಮಾಣ ಮಾಡಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಜೂನ್‌ಗೆ ಮುಂಚೆಯೇ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಪ್ರವಾಹ ಸಂಬಂಧಿ ಸ್ಥಳಗಳನ್ನು ಮಾತ್ರ ಪರಿಶೀಲಿಸಲು ಚುನಾವಣಾ ಆಯೋಗ ಅನುಮತಿ ನೀಡಿದೆ, ಅದರಂತೆ ಪರಿಶೀಲಿಸಲಾಗಿದೆ. ಕೆರೆಗಳಿಂದ ತೆಗೆಯಲಾಗುವ ಹೂಳನ್ನು ಗುರುತು ಮಾಡಿರುವ ಸ್ಥಳಗಳಲ್ಲಿ (ಕ್ವಾರಿಗಳಿಗೆ) ಹಾಕಲಾಗುತ್ತಿದೆ ಎಂದರು. ಇನ್ನು ಬಿಬಿಎಂಪಿ ಚುನಾವಣೆ ಬಗ್ಗೆ ಲೋಕಸಭೆ ಫಲಿತಾಂಶದ ನಂತರ ಚಿಂತಿಸಲಾಗುವುದು ಎಂದರು.

ಸುಳ್ಳು ಹೇಳುತ್ತಾರೆ

ಸಿಎಂ , ಡಿಸಿಎಂ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ ಎಂದು ಬಿಜೆಪಿಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಆರ್. ಅಶೋಕ್ ಕೇವಲ ಸುಳ್ಳು ಹೇಳುತ್ತಾರೆ ಎಂದರು.

ಇದನ್ನೂ ಓದಿ | CM City Rounds: ವಿಜಯನಗರ ರಾಜಕಾಲುವೆ; ಈ ವರ್ಷದೊಳಗೆ ಪರಿಹರಿಸದಿದ್ದರೆ ಮುಖ್ಯ ಎಂಜಿನಿಯರ್‌ ಸಸ್ಪೆಂಡ್‌: ಸಿಎಂ ವಾರ್ನಿಂಗ್

ಫೋನ್ ಟ್ಯಾಪಿಂಗ್ ಮಾಡಿಲ್ಲ, ಮಾಡುವುದೂ ಇಲ್ಲ

ನಮ್ಮ ರಾಜಕೀಯ ಜೀವನದಲ್ಲಿ ಫೋನ್ ಟ್ಯಾಪಿಂಗ್ ಮಾಡಿಲ್ಲ, ಮಾಡುವುದೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿದರು. ಪ್ರಜ್ವಲ್ ರೇವಣ್ಣ ಅವರ ಪ್ರಕರಣವನ್ನು ಮರೆಮಾಚಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದರು.

Continue Reading

ರಾಜಕೀಯ

Harish Poonja: ಶಾಸಕ ಹರೀಶ್‌ ಪೂಂಜಾರನ್ನು ಬಂಧಿಸಿದರೆ ಮುಂದಾಗುವ ಅನಾಹುತಕ್ಕೆ ಸರ್ಕಾರವೇ ಹೊಣೆ: ಗುಡುಗಿದ ವಿಜಯೇಂದ್ರ

Harish Poonja: ನಮ್ಮ ಶಾಸಕರಾದ ಹರೀಶ್‌ ಪೂಂಜಾ ಅವರು ಉದ್ವೇಗದಿಂದ ಮಾತನಾಡಿದ್ದಾರೆ. ಅದು ಸರಿಯಲ್ಲ ಅಂತ ಶಾಸಕರಿಗೂ ಅನ್ನಿಸಿದೆ. ಒಬ್ಬ ಜನಪ್ರತಿನಿಧಿಯನ್ನು ಅರೆಸ್ಟ್ ಮಾಡುತ್ತಾರೆಂದಾದರೆ ಮುಂದೆ ಆಗುವ ಅನಾಹುತಗಳಿಗೆ ಸರ್ಕಾರವೇ ಜವಾಬ್ದಾರಿ ಆಗಬೇಕಾಗುತ್ತದೆ. ದಕ್ಷಿಣ ಕನ್ನಡ ಈಗ ಶಾಂತಿಯುತವಾಗಿದೆ. ನಮ್ಮ ಶಾಸಕರ ಮೇಲೆ ಕ್ರಮ ಕೈಗೊಳ್ಳುವುದನ್ನು ಕೂಡಲೇ ಕೈಬಿಡಬೇಕು. ಒಂದು ವೇಳೆ ಅವರನ್ನು ಬಂಧಿಸಿದರೆ ಮುಂದಾಗುವ ಅನಾಹುತಗಳಿಗೆ ರಾಜ್ಯ ಸರ್ಕಾರವೇ ಹೊಣೆಯಾಗುತ್ತದೆ ಎಂದು ಬಿ.ವೈ. ವಿಜಯೇಂದ್ರ ಎಚ್ಚರಿಕೆಯನ್ನು ನೀಡಿದ್ದಾರೆ.

VISTARANEWS.COM


on

Harish Poonja Govt responsible for disaster if MLA Harish Poonja is arrested says BY Vijayendra
Koo

ಬೆಂಗಳೂರು: ಪ್ರತಿಭಟನೆ ವೇಳೆ ಪೊಲೀಸರಿಗೆ ಧಮ್ಕಿ ಹಾಕಿದ ಆರೋಪದಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿರುವ ಬೆನ್ನಲ್ಲೇ ಅವರನ್ನು ಬಂಧಿಸಲು ಪೊಲೀಸರು ಮುಂದಾಗಿರುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರವಾಗಿ ಖಂಡಿಸಿದ್ದಾರೆ. ಒಂದು ವೇಳೆ ಅವರನ್ನು ಬಂಧಿಸಿದರೆ ಮುಂದಾಗುವ ಅನಾಹುತಗಳಿಗೆ ರಾಜ್ಯ ಸರ್ಕಾರವೇ ಹೊಣೆಯಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಬಿ.ವೈ. ವಿಜಯೇಂದ್ರ, ಸತ್ಯ ಮರೆಮಾಚುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ. ಅಕ್ರಮ ಕಲ್ಲು ಗಣಿಗಾರಿಕೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಿ, ನಮ್ಮ ಆಕ್ಷೇಪ ಇಲ್ಲ. ಆದರೆ, ಅದರಲ್ಲಿ ಬಿಜೆಪಿ ಯುವ ಮೋರ್ಚಾ ಸದಸ್ಯ ಶಶಿರಾಜ್ ಹೆಸರನ್ನು ಸೇರಿಸಿರುವುದು ಸರಿಯಲ್ಲ. ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ಅವನ ಹೆಸರು ಸೇರಿಸಿದ್ದಕ್ಕೆ ನಮ್ಮ ಶಾಸಕರು ಠಾಣೆಗೆ ಹೋಗಿದ್ದಾರೆ. ನಮ್ಮ ಕಾರ್ಯಕರ್ತರ ಪರವಾಗಿ ಠಾಣೆಗೆ ಹೋಗಿ ಶಕ್ತಿ ತುಂಬುವ ಕೆಲಸವನ್ನು ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ಚುನಾವಣಾ ನೀತಿ ಸಂಹಿತೆ ಇದೆ ಎಂಬ ಕಾರಣಕ್ಕೆ ಪ್ರತಿಭಟನೆಗೆ ಅವಕಾಶ ಕೊಟ್ಟಿಲ್ಲ. ಆಡಳಿತ ಪಕ್ಷವು ಬಿಜೆಪಿ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉದ್ವೇಗದಿಂದ ಮಾತನಾಡಿದ್ದಾರೆ

ನಮ್ಮ ಶಾಸಕರಾದ ಹರೀಶ್‌ ಪೂಂಜಾ ಅವರು ಉದ್ವೇಗದಿಂದ ಮಾತನಾಡಿದ್ದಾರೆ. ಅದು ಸರಿಯಲ್ಲ ಅಂತ ಶಾಸಕರಿಗೂ ಅನ್ನಿಸಿದೆ. ಒಬ್ಬ ಜನಪ್ರತಿನಿಧಿಯನ್ನು ಅರೆಸ್ಟ್ ಮಾಡುತ್ತಾರೆಂದಾದರೆ ಮುಂದೆ ಆಗುವ ಅನಾಹುತಗಳಿಗೆ ಸರ್ಕಾರವೇ ಜವಾಬ್ದಾರಿ ಆಗಬೇಕಾಗುತ್ತದೆ. ದಕ್ಷಿಣ ಕನ್ನಡ ಈಗ ಶಾಂತಿಯುತವಾಗಿದೆ. ನಮ್ಮ ಶಾಸಕರ ಮೇಲೆ ಕ್ರಮ ಕೈಗೊಳ್ಳುವುದನ್ನು ಕೂಡಲೇ ಕೈಬಿಡಬೇಕು ಎಂದು ಬಿ.ವೈ. ವಿಜಯೇಂದ್ರ ಒತ್ತಾಯಿಸಿದರು.

ಇದನ್ನೂ ಓದಿ: Prajwal Revanna Case: ನಿಖಿಲ್ ಎಲ್ಲಿದ್ದೀಯಪ್ಪಾ ಎಂದಿದ್ದಾಯ್ತು, ಈಗ ಪ್ರಜ್ವಲ್ ಎಲ್ಲಿದ್ದೀಯಪ್ಪಾ ಎನ್ನುತ್ತಿದ್ದಾರೆ ಬ್ರದರ್ ಸ್ವಾಮಿಗಳು!

ಮುಂದಾಗುವ ಅನಾಹುತಕ್ಕೆ ಸರ್ಕಾರವೇ ಹೊಣೆ

ಸರ್ಕಾರ ಹಾಗೂ ಗೃಹ ಸಚಿವರಿಗೆ ಮಾಧ್ಯಮಗಳ ಮೂಲಕ ಒತ್ತಾಯ ಮಾಡುತ್ತೇನೆ. ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್ ಎಂದು ಕೂಗಿದವನನ್ನು ಬಂಧಿಸಲು ಹಿಂದೆ ಮುಂದೆ ನೋಡುತ್ತೀರಿ. ಆದರೆ, ಜನಪ್ರತಿನಿಧಿಯನ್ನು ಇಂತಹ ವಿಚಾರಗಳಲ್ಲಿ ಬಂಧನ ಮಾಡಲು ಮುಂದೆ ಬರುತ್ತೀರಿ. ಜನಪ್ರತಿನಿಧಿಯನ್ನು ಬಂಧಿಸುವ ಕ್ರಮ ಯಾವುದೇ ಕಾರಣಕ್ಕೂ ಸರಿಯಲ್ಲ. ರಾಜಕಾರಣಿಗಳ ಒತ್ತಡದಿಂದ ಬಂಧನ ಮಾಡೋದು ಸರಿಯಲ್ಲ. ಶಾಸಕರು ಉದ್ವೇಗದಲ್ಲಿ ಮಾತನಾಡಿದ್ದರಲ್ಲಿ ದುರುದ್ದೇಶ ಇಲ್ಲ. ನಾನು ಕೂಡ ಶಾಸಕರ ಜತೆ ಮಾತನಾಡಿದ್ದೇನೆ. ಈ ರೀತಿ ಮಾತನಾಡಿದ್ದು ಸರಿಯಲ್ಲ ಎಂದು ಹೇಳಿದ್ದೇನೆ. ಅದಕ್ಕವರು ತಾವು ಆಡಿದ ಮಾತುಗಳ ಹಿಂದೆ ಯಾವುದೇ ದುರುದ್ದೇಶ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಸರ್ಕಾರ ಈಗ ಏನು ಮಾಡುತ್ತದೆಯೋ ಎಂಬುದನ್ನು ನೋಡುತ್ತೇನೆ. ಸರ್ಕಾರ ತಪ್ಪು ತಿದ್ದಿಕೊಳ್ಳದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ. ಆಗುವ ಅನಾಹುತಗಳಿಗೆ ಸರ್ಕಾರವೇ ಕಾರಣವಾಗಬೇಕಾಗುತ್ತದೆ ಎಂದು ಬಿ.ವೈ. ವಿಜಯೇಂದ್ರ ಎಚ್ಚರಿಕೆ ನೀಡಿದರು.

ಪೊಲೀಸರಿಗೆ ಧಮ್ಕಿ ಕೇಸ್‌; ಶಾಸಕ ಹರೀಶ್ ಪೂಂಜಾ ಅರೆಸ್ಟ್‌ ಆಗ್ತಾರಾ? ಮನೆ ಮುಂದೆ ಹೈಡ್ರಾಮಾ!

ಮಂಗಳೂರು: ಪ್ರತಿಭಟನೆ ವೇಳೆ ಪೊಲೀಸರಿಗೆ ಧಮ್ಕಿ ಹಾಕಿದ ಆರೋಪದಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿರುವ ಬೆನ್ನಲ್ಲೇ ಅವರನ್ನು ಅರೆಸ್ಟ್‌ ಮಾಡಲು ಮನೆಗೆ ಪೊಲೀಸರು ಬಂದಿದ್ದಾರೆ. ಆದರೆ, ತಮ್ಮ ರೂಮಿನಲ್ಲೇ ಇರುವ ಹರೀಶ್‌ ಪೂಂಜಾ ಅವರು ಇನ್ನೂ ಹೊರಗೆ ಬಂದಿಲ್ಲ. ಈ ನಡುವೆ ಸ್ಥಳಕ್ಕೆ ಲಾಯರ್‌ಗಳು, ಬಿಜೆಪಿ ಕಾರ್ಯಕರ್ತರು ಬಂದಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಹೈಡ್ರಾಮಾಕ್ಕೆ ಕಾರಣವಾಯಿತು.

ಅಕ್ರಮ ಕಲ್ಲು ಗಣಿಗಾರಿಕೆ (Illegal quarrying) ಪ್ರಕರಣದಲ್ಲಿ ಬಿಜೆಪಿ ಯುವ ಮುಖಂಡನ ಬಂಧನ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಬೆಳ್ತಂಗಡಿ ಪಿಎಸ್‌ಐಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಕೇಸ್‌ ದಾಖಲಾಗಿತ್ತು. ಈ ಸಂಬಂಧ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮಿತ್ತಿಲದಲ್ಲಿರುವ ಶಾಸಕ ಹರೀಶ್ ಪೂಂಜಾ ಮನೆಗೆ ಬುಧವಾರ (ಮೇ 22) ಮಧ್ಯಾಹ್ನದ ವೇಳೆಗೆ ಪೊಲೀಸರು ಆಗಮಿಸಿದ್ದರು. ಸರ್ಕಲ್ ಇನ್ಸ್‌ಪೆಕ್ಟರ್‌ ಸುಬ್ಬಪೂರ್ ಮಠ್‌ ಮತ್ತು ಪಿಎಸ್ಐ ಚಂದ್ರಶೇಖರ್ ನೇತೃತ್ವದ ಪೊಲೀಸರ ತಂಡ ಆಗಮಿಸಿತ್ತು.

Harish Poonja case Belthangady BJP MLA Harish Poonja arrested for taunting police

ಶಾಸಕರ ಮನೆ ಮುಂದೆ ಸೇರಿದ ನೂರಾರು ಬಿಜೆಪಿ ಕಾರ್ಯಕರ್ತರು

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮನೆಗೆ ಪೊಲೀಸರು ಆಗಮಿಸಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಧಾವಿಸಿದ್ದಾರೆ. ಅಲ್ಲದೆ, ಇನ್ನೂ ಹಲವರು ಅತ್ತ ಆಗಮಿಸಿ ಆಕ್ರೋಶವನ್ನು ಹೊರಹಾಕಿದ್ದಾರೆ.

ಮನೆ ಮುಂದೆ ಹೈಡ್ರಾಮಾ

ಹರೀಶ್ ಪೂಂಜ ಬಂಧನಕ್ಕೆ ಪೊಲೀಸರು ಬಂದಿದ್ದರಿಂದ ಗರ್ಡಡಿ ಹರೀಶ್ ಪೂಂಜ ನಿವಾಸಕ್ಕೆ ವಕೀಲರ ತಂಡ ಭೇಟಿ ನೀಡಿದೆ. ಪೊಲೀಸರ ಜತೆ ವಕೀಲರ ತಂಡದಿಂದ ಮಾತುಕತೆ ನಡೆಸಲಾಯಿತು. ಈ ವೇಳೆ ನಿರಂತರವಾಗಿ ಚರ್ಚೆ ನಡೆಸಲಾಯಿತು. ಮನೆಯ ಹೊರಗಡೆ ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ್ದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗುತ್ತಿದ್ದರು. ಅಲ್ಲದೆ, ಪೊಲೀಸರು ಹಾಗು ಕಾರ್ಯಕರ್ತರ ನಡುವಿನ ಹೈ ಡ್ರಾಮಾಕ್ಕೆ ಪೂಂಜ ನಿವಾಸವು ಸಾಕ್ಷಿಯಾಯಿತು. ಇನ್ನು ಪೂಂಜಾ ನಿವಾಸದತ್ತ ಸಂಸದ ನಳಿನ್ ಕುಮಾರ್ ಕಟೀಲ್, ಬ್ರಿಜೇಶ್ ಚೌಟ ದೌಡಾಯಿಸಿದರು.

ನೋಟಿಸ್ ಇಲ್ಲದೇ ಅರೆಸ್ಟ್ ಮಾಡುವುದು ಅಪರಾಧ

ಈ ವೇಳೆ ಶಾಸಕ ಹರೀಶ್ ಪೂಂಜಾ ಪರ ವಕೀಲ ಶಂಭು ಶಂಕರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ವಿಚಾರಣೆಗೆ ಕರೆದುಕೊಂಡು ಹೋಗಲು ಬಂದಿದ್ದಾಗಿ ಪೊಲೀಸರು ಹೇಳಿದ್ದಾರೆ. ನಿಯಮ ಪ್ರಕಾರ ಆ ಕ್ರಮ ಇಲ್ಲ. ಪೊಲೀಸರು ಮನೆಗೆ ಒಳಗೆ ಕುಳಿತಿದ್ದಾರೆ. ನೋಟಿಸ್ ಈವರೆಗೆ ಕೊಟ್ಟಿಲ್ಲ. ಶಾಸಕರು ಅವರ ಕೆಲಸ ಮಾಡದ ಹಾಗೆ ಮಾಡಿದ್ದಾರೆ. ಮನೆಯಲ್ಲಿಯೇ ಕೂಡಿ ಹಾಕಿದ ಹಾಗೆ ಮಾಡಿದ್ದಾರೆ. ಒತ್ತಡಕ್ಕೆ ಮಣಿದು ಪೊಲೀಸರು ಇಲ್ಲಿಯೇ ಕುಳಿತಿದ್ದಾರೆ. ನೋಟಿಸ್ ಇಲ್ಲದೆ ಅರೆಸ್ಟ್ ಮಾಡುವುದು ಅಪರಾಧ ಎಂದು ಹೇಳಿದ್ದಾರೆ.

ಯಾವುದೇ ನೋಟಿಸ್ ನೀಡದೆ, ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಕರೆಯುವಂತಿಲ್ಲ. ಅದು ಕಾನೂನು ಬಾಹಿರವಾಗುತ್ತದೆ. ಅಲ್ಲದೆ, ಶಾಸಕ ಹರೀಶ್ ಪೂಂಜಾ ವಿರುದ್ಧ ಎರಡು ಎಫ್‌ಐಆರ್ ದಾಖಲಾಗಿವೆ. ಅದರಲ್ಲಿ ಕೆಲವು ಸೆಕ್ಷನ್ ನಾನ್ ಬೇಲಬಲ್ ಸೆಕ್ಷನ್‌ಗಳಿವೆ. ಸುಪ್ರೀಂ ಕೋರ್ಟ್‌ನ ಈ ಹಿಂದಿನ ಆದೇಶದ ಪ್ರಕಾರ 7 ವರ್ಷಕ್ಕಿಂತ ಕಡಿಮೆ ಶಿಕ್ಷೆಯಾಗುವ ಪ್ರಕರಣಗಳಲ್ಲಿ ಬಂಧನ ಅನಿವಾರ್ಯವಲ್ಲ. ಅತ್ಯಂತ ಅಪರೂಪದ ಪ್ರಕರಣಗಳಲ್ಲಿ ಬಂಧನ ಮಾಡಲು ಅವಕಾಶವಿರುತ್ತದೆ. ಆದರೆ, ಎಲ್ಲ ಪ್ರಕರಣಗಳಲ್ಲೂ ಬಂಧನ ಅಗತ್ಯವಿಲ್ಲ. ವಿಚಾರಣೆಗೆ ಕರೆಯಲು ಪೇದೆಯ ಮೂಲಕ ನೋಟಿಸ್ ನೀಡಬಹುದು. ಆದರೆ ಹಿರಿಯ ಅಧಿಕಾರಿಗಳು ಬರುವ ಅಗತ್ಯತೆ ಏನಿದೆ? ಇದು ಶಾಸಕ ಪೂಂಜಾ ವಿರುದ್ಧ ಟಾರ್ಗೆಟ್ ಮಾಡಿ ಬಂಧಿಸುವ ಹುನ್ನಾರ ಆಗಿದೆ. ನೋಟಿಸ್ ನೀಡಲು ಕೇಳಿದ್ದೇವೆ. ಈ ವರೆಗೂ ನೋಟಿಸ್ ನೀಡಿಲ್ಲ ಎಂದು ವಕೀಲ ಶಂಭು ಶಂಕರ್ ಆಪಾದಿಸಿದರು.

Harish Poonja case Belthangady BJP MLA Harish Poonja arrested for taunting police

ಏನಿದು ಕೇಸ್‌?

ಬೆಳ್ತಂಗಡಿಯ ಮೆಲಂತಬೆಟ್ಟುವಿನ ಕಲ್ಲು ಕ್ವಾರಿ ಮೇಲೆ ತಹಸೀಲ್ದಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಗುರುವಾಯನಕೆರೆಯ ಬಿಜೆಪಿಯ ಯುವ ಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಎಂಬುವವರನ್ನು ಬಂಧನ ಮಾಡಲಾಗಿತ್ತು. ಇದನ್ನು ಖಂಡಿಸಿ ರಾತ್ರೋರಾತ್ರಿ ಪೊಲೀಸ್ ಠಾಣೆ ಎದುರು ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ಕಾರ್ಯಕರ್ತರು ಧರಣಿ ನಡೆಸಿ, ಆಕ್ರೋಶ ಹೊರಹಾಕಿದ್ದರು.

ಇದನ್ನೂ ಓದಿ | Phone tapping: ಗೃಹ ಸಚಿವರಿಗೆ ಅಶೋಕ್‌ ರೈಟಿಂಗ್‌ನಲ್ಲಿ ಕಂಪ್ಲೇಂಟ್‌ ಕೊಡಲಿ; ಫೋನ್‌ ಕದ್ದಾಲಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು

ಪ್ರತಿಭಟನೆ ವೇಳೆ ‘ಪೊಲೀಸ್ ಠಾಣೆ ನಿಮ್ಮ‌ ಅಪ್ಪಂದಾʼ ಅಂತ ಬೆಳ್ತಂಗಡಿ ಪಿಎಸ್‌ಐ ಮುರುಳಿಧರ್ ನಾಯ್ಕ್‌ಗೆ ಶಾಸಕ ಹರೀಶ್‌ ಪೂಂಜಾ ಧಮ್ಕಿ ಹಾಕಿದ್ದರು. ಮನೆಯಲ್ಲಿದ್ದವರನ್ನು ಯಾವುದೇ ದಾಖಲೆಗಳಿಲ್ಲದೆ ಹೆಂಗಸರು, ಮಕ್ಕಳೆದುರು ಬಂಧನ ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ. ಅಮಾಯಕನ ಬಂಧನವಾಗಿದ್ದು, ಕೂಡಲೇ ಆತನನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದ್ದರು. ಹೀಗಾಗಿ ಶಾಸಕರ ವಿರುದ್ಧ ಪ್ರಕರಣ ದಾಖಲಾಗಿತ್ತು.

Continue Reading

ಕರ್ನಾಟಕ

Prajwal Revanna Case: ನಿಖಿಲ್ ಎಲ್ಲಿದ್ದೀಯಪ್ಪಾ ಎಂದಿದ್ದಾಯ್ತು, ಈಗ ಪ್ರಜ್ವಲ್ ಎಲ್ಲಿದ್ದೀಯಪ್ಪಾ ಎನ್ನುತ್ತಿದ್ದಾರೆ ಬ್ರದರ್ ಸ್ವಾಮಿಗಳು!

Prajwal Revanna Case: ಈ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌, ಪ್ರಜ್ವಲ್‌ ಇರುವಿಕೆ ಬಗ್ಗೆ ಎಚ್‌ಡಿಕೆಗೆ ಪ್ರಶ್ನೆ ಮಾಡಿದೆ. ಈ ಹಿಂದೆ ಸಿನಿಮಾ ಪ್ರಚಾರ ಕಾರ್ಯಕ್ರಮವೊಂದರಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು “ನಿಖಿಲ್ ಎಲ್ಲಿದ್ದೀಯಪ್ಪಾ“ ಎಂದು ಕೇಳಿದ್ದ ಮಾತು ಚುನಾವಣೆ ವೇಳೆ ಸಾಕಷ್ಟು ಟ್ರೋಲ್‌ಗೊಳಗಾಗಿತ್ತು. ಈಗ ಆ ಮಾತನ್ನೇ ಬದಲಿಸಿ ”ಪ್ರಜ್ವಲ್ ಎಲ್ಲಿದ್ದೀಯಪ್ಪಾ” ಎನ್ನುತ್ತಿದ್ದಾರೆ ಬ್ರದರ್ ಸ್ವಾಮಿಗಳು!” ಎಂದು ಕಾಂಗ್ರೆಸ್‌ ಕುಟುಕಿದೆ.

VISTARANEWS.COM


on

Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಕೇಸ್‌ನಡಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ವಿಚಾರವಾಗಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರನ್ನು ರಾಜ್ಯ ಕಾಂಗ್ರೆಸ್‌ ಕುಟುಕಿದೆ. “ನಿಖಿಲ್ ಎಲ್ಲಿದ್ದೀಯಪ್ಪಾ“ ಎಂದಿದ್ದಾಯ್ತು, ಈಗ ”ಪ್ರಜ್ವಲ್ ಎಲ್ಲಿದ್ದೀಯಪ್ಪಾ” ಎನ್ನುತ್ತಿದ್ದಾರೆ ಬ್ರದರ್ ಸ್ವಾಮಿಗಳು!” ಎಂದು ಕಾಂಗ್ರೆಸ್‌ ವ್ಯಂಗ್ಯವಾಡಿದೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌, ಪ್ರಜ್ವಲ್‌ ಇರುವಿಕೆ ಬಗ್ಗೆ ಎಚ್‌ಡಿಕೆಗೆ ಪ್ರಶ್ನೆ ಮಾಡಿದೆ. ಈ ಹಿಂದೆ ಸಿನಿಮಾ ಪ್ರಚಾರ ಕಾರ್ಯಕ್ರಮವೊಂದರಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು “ನಿಖಿಲ್ ಎಲ್ಲಿದ್ದೀಯಪ್ಪಾ“ ಎಂದು ಕೇಳಿದ್ದ ಮಾತು ಚುನಾವಣೆ ವೇಳೆ ಸಾಕಷ್ಟು ಟ್ರೋಲ್‌ಗೊಳಗಾಗಿತ್ತು. ಈಗ ಆ ಮಾತನ್ನೇ ಬದಲಿಸಿ ”ಪ್ರಜ್ವಲ್ ಎಲ್ಲಿದ್ದೀಯಪ್ಪಾ” ಎನ್ನುತ್ತಿದ್ದಾರೆ ಬ್ರದರ್ ಸ್ವಾಮಿಗಳು!” ಎಂದು ಕಾಂಗ್ರೆಸ್‌ ಕುಟುಕಿದೆ.

ಕಾಂಗ್ರೆಸ್‌ ಪೋಸ್ಟ್‌ನಲ್ಲೇನಿದೆ?

“ನಿಖಿಲ್ ಎಲ್ಲಿದ್ದೀಯಪ್ಪಾ “ ಎಂದಿದ್ದಾಯ್ತು, ಈಗ ”ಪ್ರಜ್ವಲ್ ಎಲ್ಲಿದ್ದೀಯಪ್ಪಾ” ಎನ್ನುತ್ತಿದ್ದಾರೆ ಬ್ರದರ್ ಸ್ವಾಮಿಗಳು!” ಮಾಧ್ಯಮಗಳ ಮುಂದೆ ನಾಟಕ ಆಡುವ ಬ್ರದರ್ ಸ್ವಾಮಿಗಳಿಗೆ ಪ್ರಜ್ವಲ್ ಎಲ್ಲಿದ್ದಾನೆ? ಯಾರ ಸಖ್ಯದಲ್ಲಿದ್ದಾನೆ ಎಂಬ ಮಾಹಿತಿ ತಿಳಿದಿಲ್ಲವೇ? ತಿಳಿದಿಲ್ಲ ಎನ್ನುವುದು ಶತಮಾನದ ಜೋಕ್! ಬ್ರದರ್ ಸ್ವಾಮಿಗಳಿಗೆ ನಿಜಕ್ಕೂ ಕಳಕಳಿ ಇದ್ದರೆ ಎಸ್ಐಟಿಗೆ ಮಾಹಿತಿ ನೀಡಲಿ. ಇಂತಹ ನಾಟಕ ಮಾಡುವುದನ್ನು ಬಿಡಲಿ” ಎಂದು ಕಾಂಗ್ರೆಸ್ ಕಿಡಿಕಾರಿದೆ.

400 ಮಹಿಳೆಯರ ಮೇಲೆ ಪ್ರಜ್ವಲ್‌ ಮಾಸ್‌ ರೇಪ್‌ ಆರೋಪ; ರಾಹುಲ್ ಗಾಂಧಿ ವಿರುದ್ಧ ಡಿಜಿಗೆ ಜೆಡಿಎಸ್‌ ದೂರು

ನಾನೂರು ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ (Prajwal Revanna Case) ಮಾಸ್ ರೇಪ್ ಮಾಡಿದ್ದಾರೆ ಎಂದು ಬಹಿರಂಗ ಸಭೆಗಳ ಭಾಷಣದಲ್ಲಿ ಹೇಳಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಜೆಡಿಎಸ್ (JDS Karnataka) ದೂರು ನೀಡಿದೆ. ಈ ಸಂಬಂಧ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಪಕ್ಷ ಒತ್ತಾಯ ಮಾಡಿದೆ.

ಜವಾಬ್ದಾರಿಯುತ ಸ್ಥಾನದಲ್ಲಿರುವ ರಾಹುಲ್ ಗಾಂಧಿ ಅವರು ಶಿವಮೊಗ್ಗ ಹಾಗೂ ರಾಯಚೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬಹಿರಂಗ ಸಭೆಗಳಲ್ಲಿ ಮಾಸ್ ರೇಪ್ ಬಗ್ಗೆ ಹೇಳಿದ್ದರು. ಇದೇ ಮಾಹಿತಿಯನ್ನು ಮಾಧ್ಯಮಗಳ ಮುಂದೆಯೂ ನೀಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ರಾಹುಲ್‌ ಗಾಂಧಿಗೆ ಎಸ್‌ಐಟಿ ಸಮನ್ಸ್ ಜಾರಿ ಮಾಡಬೇಕು ಎಂದು ಜೆಡಿಎಸ್ ಒತ್ತಾಯ ಮಾಡಿದೆ.

ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ. ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯ ಕೆ.ಎ. ತಿಪ್ಪೇಸ್ವಾಮಿ, ಮಂಜೇಗೌಡ, ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಪಿ. ರಂಗನಾಥ್, ಬೆಂಗಳೂರು ನಗರದ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ಎಸ್.ರಮೇಶ್ ಅವರಿದ್ದ ನಿಯೋಗ ಬುಧವಾರ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರನ್ನು ಭೇಟಿಯಾಗಿ ದೂರು ಸಲ್ಲಿಸಿದರು.

ದೂರಿನಲ್ಲಿ ಇನ್ನೇನು ಇದೆ?

ಎಚ್.ಎಂ. ರಮೇಶ್ ಗೌಡ ಸಹಿ ಹಾಕಿರುವ ದೂರಿನಲ್ಲಿ ರಾಹುಲ್ ಗಾಂಧಿ ವಿರುದ್ಧ ಅನೇಕ ಗಂಭೀರ, ಗುರುತರ ಆರೋಪಗಳನ್ನು ಮಾಡಲಾಗಿದೆ.

ಕಾಂಗ್ರೆಸ್ ನಾಯಕ, ವಯನಾಡು ಲೋಕಸಭಾ ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಅವರು, ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಮಾಸ್ ರೇಪ್ ಮಾಡಿ ಅದನ್ನು ವಿಡಿಯೊ ಚಿತ್ರೀಕರಣ ಮಾಡಿಕೊಂಡಿದ್ದಾರೆ. ಇದು ಕೇವಲ ಅತ್ಯಾಚಾರ ಅಷ್ಟೇ ಅಲ್ಲ, ಇದೊಂದು ಸಾಮೂಹಿಕ ಅತ್ಯಾಚಾರ. ಒಬ್ಬ ಮಾಸ್ ರೇಪಿಸ್ಟ್ ಪರ ಪ್ರಧಾನಿ ನರೇಂದ್ರ ಮೋದಿ ಅವರು ಮತ ಯಾಚಿಸಿರುವುದು ಇಡೀ ಜಗತ್ತಿಗೆ ಗೊತ್ತಾಗಿದೆ ಎಂದು ಇದೇ ಮೇ 2ರಂದು ಹೇಳಿಕೆ ನೀಡಿದ್ದರು.

ರಾಹುಲ್ ಗಾಂಧಿ ಅವರ ಹೇಳಿಕೆ, ಭಾಷಣ ಎಲ್ಲವೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಮುದ್ರಣ ಮಾಧ್ಯಮದಲ್ಲಿಯೂ ವರದಿಯಾಗಿದೆ ಎಂದು ಪೊಲೀಸ್ ಮಹಾ ನಿರ್ದೇಶಕರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದ್ದು, ಅದಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸಲ್ಲಿಸಿದೆ.

400 ಮಹಿಳೆಯರ ಮಾಹಿತಿ ರಾಹುಲ್‌ ಗಾಂಧಿಗೆ ಇದೆ!

ನೊಂದ ಮಹಿಳೆಯರ ನ್ಯಾಯ ಕೊಡಿಸುವುದನ್ನು ಕಡೆಗಣಿಸಿ ಒಬ್ಬ ಜನಪ್ರತಿನಿಧಿಯಾಗಿ ರಾಹುಲ್ ಗಾಂಧಿ ಅವರು ಇಂಥ ಹೇಳಿಕೆ ನೀಡಿರುವುದು ಕಾನೂನು ಉಲ್ಲಂಘನೆ ಆಗಿರುತ್ತದೆ. ನಾನೂರು ಮಹಿಳೆಯರ ಮೇಲೆ ಮಾಸ್ ರೇಪ್ ಆಗಿರುವ ಬಗ್ಗೆ ರಾಹುಲ್ ಗಾಂಧಿ ಅವರಿಗೆ ಎಲ್ಲ ಮಾಹಿತಿ ಇದೆ. ಜತೆಗೆ ಅತ್ಯಾಚಾರಕ್ಕೆ ತುತ್ತಾದ ಅಷ್ಟೂ ಮಹಿಳೆಯರ ಮಾಹಿತಿ ಅವರಲ್ಲಿ ಇದೆ ಎನ್ನುವುದು ಅವರದೇ ಹೇಳಿಕೆಯಿಂದ ಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 1860ರ ಅಡಿಯಲ್ಲಿ ಕೇಸ್ ದಾಖಲಿಸಬೇಕು ಎಂದು ಪೊಲೀಸ್ ಮಹಾ ನಿರ್ದೇಶಕರಲ್ಲಿ ಜೆಡಿಎಸ್ ಪಕ್ಷ ಒತ್ತಾಯ ಮಾಡಿದೆ.

ರಾಜ್ಯ ಸರ್ಕಾರವೂ ಈ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚನೆ ಮಾಡಿದ್ದು, ಕೂಡಲೇ ಈ ತಂಡವು ರಾಹುಲ್ ಗಾಂಧಿ ಅವರಿಗೆ ಸಮನ್ಸ್ ಜಾರಿ ಮಾಡಿ ಇಲ್ಲಿಗೆ ಕರೆಸಬೇಕು. ನಾನೂರು ಮಹಿಳೆಯರು ಎಂದು ತಪ್ಪು ಮಾಹಿತಿ ನೀಡಿ, ಸಮಾಜಕ್ಕೆ ಕೆಟ್ಟ ಸಂದೇಶ ಹೋಗುವಂತೆ ಮಾಡಿದ ಅವರ ವಿರುದ್ಧ ಕೂಡಲೇ ಸೆಕ್ಷನ್ 202, 1860ರ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಜೆಡಿಎಸ್ ಆಗ್ರಹಪಡಿಸಿದೆ.

ಇದನ್ನೂ ಓದಿ: Nandini Milk: ಹಾಲು ಉತ್ಪಾದಿಸಿದ ರೈತರಿಗಿಲ್ಲ ಹಣ; ವಿದೇಶಿ ಕ್ರಿಕೆಟ್‌ ಟೀಂಗೆ ಪ್ರಾಯೋಜಕತ್ವ: ಸರ್ಕಾರದ ವಿರುದ್ಧ ಅಶೋಕ್‌ ಗರಂ

ಅಲ್ಲದೆ, ಪೆನ್ ಡ್ರೈವ್ ಹಂಚಿಕೆಯ ಬಗ್ಗೆಯೂ ಜೆಡಿಎಸ್ ಡಿಜಿ ಅವರ ಜತೆ ಮಾತುಕತೆ ನಡೆಸಿತು. ಎಸ್‌ಐಟಿ ಏಕಪಕ್ಷೀಯವಾಗಿ ತನಿಖೆ ನಡೆಸುತ್ತಿದೆ. ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿ ನಮ್ಮ ಪಕ್ಷದ ಕಾರ್ಯಕರ್ತರಿಗೆ ವಿನಾಕಾರಣ ಕಿರುಕುಳ ನೀಡುತ್ತಿದೆ. ಆದರೆ, ಪೆನ್ ಡ್ರೈವ್ ಹಂಚಿಕೆ ಆರೋಪಿಗಳ ಬಗ್ಗೆ ಮೌನ ವಹಿಸಿದೆ. ನ್ಯಾಯಾಲಯ ಜಾಮೀನು ನಿರಾಕರಿಸಿದ್ದರೂ ಈವರೆಗೆ ಅವರನ್ನು ಎಸ್ ಐಟಿ ಬಂಧನ ಮಾಡಿಲ್ಲ ಎಂದು ನಿಯೋಗ ದೂರಿತು.

Continue Reading
Advertisement
LPL 2024
ಪ್ರಮುಖ ಸುದ್ದಿ5 mins ago

LPL 2024 : ಫ್ರಾಂಚೈಸಿ ಮಾಲೀಕನಿಂದಲೇ ಮ್ಯಾಚ್​ ಫಿಕ್ಸಿಂಗ್; ಬಂಧನ

CM's Bengaluru City Rounds
ಪ್ರಮುಖ ಸುದ್ದಿ25 mins ago

CM’s Bengaluru City Rounds: ರಸ್ತೆಗಳ ದುರಸ್ತಿಗೆ ಶಾಶ್ವತ ನಿರ್ವಹಣಾ ವ್ಯವಸ್ಥೆ ರೂಪಿಸಲು ಸಿಎಂ ಸೂಚನೆ

Back button saree blouse
ಫ್ಯಾಷನ್26 mins ago

Back Button Saree Blouse: ಮತ್ತೆ ಬಂದಿದೆ ರೆಟ್ರೊ ಸ್ಟೈಲ್‌ ಬ್ಯಾಕ್‌ ಬಟನ್‌ ಸೀರೆ ಬ್ಲೌಸ್‌!

Calcutta High Court
ಪ್ರಮುಖ ಸುದ್ದಿ38 mins ago

Other Backward Classes: 2011ರ ನಂತರ ನೀಡಿದ್ದ ಒಬಿಸಿ ಪ್ರಮಾಣಪತ್ರಗಳನ್ನು ರದ್ದು ಮಾಡಿದ ಕೋಲ್ಕೊತಾ ಹೈಕೋರ್ಟ್​​

Bomb Threat
ಪ್ರಮುಖ ಸುದ್ದಿ57 mins ago

Bomb Threat : ಗೃಹ ಸಚಿವಾಲಯಕ್ಕೆ ಬಾಂಬ್ ಬೆದರಿಕೆ; ದೆಹಲಿಯಲ್ಲಿ ಆತಂಕ

ಕರ್ನಾಟಕ1 hour ago

CM’s Bengaluru City Rounds: ರಾಜಕಾಲುವೆ ಒತ್ತುವರಿ ಯಾರೇ ಮಾಡಿದ್ರೂ ಮುಲಾಜಿಲ್ಲದೆ ತೆರವು: ಸಿಎಂ ಎಚ್ಚರಿಕೆ

IPL 2024
ಕ್ರಿಕೆಟ್1 hour ago

IPL 2024 : ಅಮ್ಮನನ್ನು ಆಸ್ಪತ್ರೆಯಲ್ಲಿ ಮಲಗಿಸಿ ಕೆಕೆಆರ್​ ಪರ ಕ್ವಾಲಿಫೈಯರ್ ಆಡಿದ ಆಫ್ಘನ್​ ಕ್ರಿಕೆಟಿಗ

Star Cricket Theam Fashion
ಫ್ಯಾಷನ್1 hour ago

Star Cricket Theme Fashion: ಕ್ರಿಕೆಟ್‌ ಥೀಮ್‌ನಲ್ಲಿ ಬೆರಗುಗೊಳಿಸಿದ ನಟಿ ಜಾಹ್ನವಿ ಕಪೂರ್ ಫ್ಯಾಷನ್‌!

Harish Poonja Govt responsible for disaster if MLA Harish Poonja is arrested says BY Vijayendra
ರಾಜಕೀಯ1 hour ago

Harish Poonja: ಶಾಸಕ ಹರೀಶ್‌ ಪೂಂಜಾರನ್ನು ಬಂಧಿಸಿದರೆ ಮುಂದಾಗುವ ಅನಾಹುತಕ್ಕೆ ಸರ್ಕಾರವೇ ಹೊಣೆ: ಗುಡುಗಿದ ವಿಜಯೇಂದ್ರ

Virat kohli
ಕ್ರೀಡೆ2 hours ago

IPL 2024 : ಕೊಹ್ಲಿಯನ್ನು ಹೊಗಳಿ ಆರ್​​ಸಿಬಿಗೆ ವಿದಾಯ ಹೇಳಿದ ವಿಜಯ್​ ಮಲ್ಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ12 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 day ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 day ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ6 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌