Site icon Vistara News

Road Accident: ಯಾದಗಿರಿಯಲ್ಲಿ ಲಾರಿ ಡಿಕ್ಕಿಯಾಗಿ ವ್ಯಕ್ತಿ ಸಾವು; ಆಗುಂಬೆ ಘಾಟಿಯಲ್ಲಿ ಕ್ಯಾಂಟರ್‌ನಿಂದ ಟ್ರಾಫಿಕ್ ಜಾಮ್

Road Accident Man killed after being hit by truck in Yadgir Traffic jam caused by tanker at Agumbe Ghat

ಯಾದಗಿರಿ/ಶಿವಮೊಗ್ಗ: ಜಿಲ್ಲೆಯ ಶಹಾಪೂರ ತಾಲೂಕಿನ ಇಬ್ರಾಹಿಂಪೂರ ಕ್ರಾಸ್ ಬಳಿ ಲಾರಿ ಡಿಕ್ಕಿಯಾಗಿ (Road Accident) ಸ್ಥಳದಲ್ಲಿಯೇ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಗುಂಡಹಳ್ಳಿ ತಾಂಡಾ ಹಾಗೂ ಇಬ್ರಾಹಿಂಪೂರ ಗ್ರಾಮದ ಮಧ್ಯೆ ಅಪಘಾತ ಸಂಭವಿಸಿದೆ.

ಗುಂಡಹಳ್ಳಿ ತಾಂಡಾ ನಿವಾಸಿ ಲಿಂಬಣ್ಣ ರಾಠೋಡ (45) ಸ್ಥಳದಲ್ಲಿಯೇ ಮೃತಪಟ್ಟವರು. ಅವರು ಬುಧವಾರ ರಾತ್ರಿ ಮಲ ವಿಸರ್ಜನೆಗೆಂದು ಹೊರಗಡೆ ತೆರಳಿದ್ದಾಗ ಅಪಘಾತ ಸಂಭವಿಸಿದೆ. ಚಾಲಕನ ನಿರ್ಲಕ್ಷದಿಂದಲೇ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.

ಸ್ಥಳಕ್ಕೆ ಶಹಾಪೂರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಸಂಭವಿಸಿದ ಸ್ಥಳದಿಂದ ಸ್ವಲ್ಪ ದೂರದಲ್ಲಿ ಲಾರಿ ಪಲ್ಟಿಯಾಗಿದೆ. ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ತಡೆಗೋಡೆಗೆ ಕ್ಯಾಂಟರ್‌ವೊಂದು ಡಿಕ್ಕಿ ಹೊಡೆದಿದ್ದೇ ಇದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಒಂದು ಗಂಟೆಗೂ ಹೆಚ್ಚು ಕಾಲ ಘಾಟಿಯಲ್ಲಿ ವಾಹನಗಳು ನಿಂತಿದ್ದು, ಪ್ರಯಾಣಿಕರು ಪರದಾಡುವಂತಾಗಿತ್ತು. ಘಾಟಿಯ 9ನೇ ತಿರುವಿನಲ್ಲಿ ಚಾಲಕನ ನಿಯಂತ್ರಣದ ತಪ್ಪಿದ ಟ್ಯಾಂಕರ್‌ ತಡೆಗೋಡೆಗೆ ಡಿಕ್ಕಿ ಹೊಡೆದು ನಿಂತಿತ್ತು. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

Exit mobile version