Site icon Vistara News

Road accident | ನಿಂತಿದ್ದ ಟೆಂಪೋಗೆ ಕಾರು ಡಿಕ್ಕಿ, ಚಾಲಕ ಸ್ಥಳದಲ್ಲೇ ಮೃತ್ಯುವಶ

ಹೊಸಪೇಟೆ ಬಳಿ ಅಪಘಾತ

ವಿಜಯನಗರ: ವಿಜಯನಗರ ಜಿಲ್ಲೆಯ ಹೊಸಪೇಟೆಯ ಹನುಮನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ.

ನಿಂತಿದ್ದ ಟೆಂಪೋಗೆ ಕಾರು ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮುರಳಿಕೃಷ್ಣ ರಾಜು ಮೃತಪಟ್ಟಿದ್ದಾರೆ. ಅವರು ಕುಳಿತ ಸ್ಥಿತಿಯಲ್ಲೇ ಪ್ರಾಣ ಕಳೆದುಕೊಂಡರು. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮರಿಯಮ್ಮನ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೈತ ವಿಷ ಸೇವಿಸಿ ಆತ್ಮಹತ್ಯೆ
ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಹಕ್ಕಂಡಿ ಗ್ರಾಮದಲ್ಲಿ ಸಾಲ ಭಾದೆ ತಾಳದೆ ವಿಷ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಕ್ಕಂಡಿ ಗ್ರಾಮದ ರೈತ ಹಲಗಿ ರಾಮಪ್ಪ ಆತ್ಮಹತ್ಯೆ ಮಾಡಿಕೊಂಡವರು. ಅವರು 4 ಲಕ್ಷ ರೂಪಾಯಿಗೂ ಅಧಿಕ ಸಾಲ ಮಾಡಿದ್ದರು. ನಿರಂತರ ಮಳೆ, ಬೆಳೆ ಹಾನಿಯ ಹಿನ್ನಲೆ ಫಸಲು ಕೈಗೆ ಬಂದಿರಲಿಲ್ಲ. ಇದರಿಂದ ಸಾಲ ಮರುಪಾವತಿಸಲಾಗದೆ ಅವರು ಹತಾಶರಾಗಿದ್ದರು. ಮನ ನೊಂದ ರೈತ ಈಗ ವಿಷ ಸೇವಿಸಿ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಹೂವಿನ ಹಡಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ | Accident News | ಕಾರು- ಟಿಪ್ಪರ್‌ ನಡುವೆ ಅಪಘಾತ: 13 ಕೂಲಿ ಕಾರ್ಮಿಕರಿಗೆ ಗಾಯ

Exit mobile version